Tag: naxals

  • 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    – ವಿಶ್ವದ ಮುಂದೆ ನನ್ನ ನೋವು ಹೇಳಿಕೊಳ್ತಿರೋದು ಇದೇ ಮೊದಲು; ಭಾವುಕ

    ಬೆಂಗಳೂರು: 24 ಗಂಟೆಯಲ್ಲಿ 300 ಮಾವೋವಾದಿಗಳು (Maoists Surrendered) ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್‌ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್‌ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನಕ್ಸಲರ ಶರಣಾಗತಿ ಬಗ್ಗೆ ಹೇಳಿದರು.

    ಖಾಸಗಿ ಸುದ್ದಿವಾಹಿನಿಯ ಜಾಗತಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 24 ಗಂಟೆಗಳಲ್ಲಿ 300 ಮಾವೋವಾದಿಗಳು ಸೇರಿ 75 ಗಂಟೆಗಳಲ್ಲಿ ಒಟ್ಟು 303 ನಕ್ಷಲರು ಶರಣಾಗಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ನಕ್ಸಲ್‌ (Naxals) ಕಾರ್ಯಾಚರಣೆ ವಿರುದ್ಧ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

    ಇದೇ ಮೊದಲು ನನ್ನ ನೋವು ಹೇಳಿಕೊಳ್ತಿದ್ದೇನೆ
    ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಅಲ್ಲದೇ ಶಾಲೆಗಳನ್ನಾಗಲಿ, ಆಸ್ಪತ್ರೆಗಳನ್ನಾಗಲಿ ನಿರ್ಮಿಸಲು ಬಿಡಲಿಲ್ಲ. ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡ್ತಿದ್ದರು. ಮಾವೋವಾದಿಗಳ ಭಯೋತ್ಪಾದನೆಯಿಂದ ಯುವಜನರಿಗೆ ಅನ್ಯಾಯವಾಗಿತ್ತು. ಇದೆಲ್ಲದರಿಂದ ನಾನು ಬಹಳ ಕೋಪಗೊಂಡಿದ್ದೆ ಎನ್ನುತ್ತಾ. ಇದೇ ಮೊದಲಬಾರಿಗೆ ಜಗತ್ತಿನ ಮುಂದೆ ನನ್ನ ನೋವನ್ನ ಹೇಳಿಕೊಳ್ಳುತ್ತಿದ್ದೇನೆ ಎಂದು ಭಾವುಕರಾದರು.

    303 ಮಂದಿ ಶರಣಾಗತಿ
    ನಮ್ಮ ಸರ್ಕಾರ ಅನ್ಯಾಯಕ್ಕೆ ಒಳಗಾದ ಹಾಗೂ ದಾರಿ ತಪ್ಪಿದ ಯುವಜನರನ್ನ ತಲುಪಿ, ಮತ್ತೆ ಅವರನ್ನ ಮುಖ್ಯವಾಹಿನಿಗೆ ತರಲು ವಿಶೇಷ ಪ್ರಯತ್ನಗಳನ್ನ ನಡೆಸಿದೆ. ಇಡೀ ದೇಶ ಇಂದು ಈ ಪ್ರಯತ್ನಗಳ ಫಲಿತಾಂಶ ನೋಡುತ್ತಿದೆ. ಈಗ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು. ಈಗ ಅವರೇ ಮುಕ್ತವಾಗಿ ಶರಣಾಗಿದ್ದು, ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

    ಸಾಮೂಹಿಕ ಶರಣಾಗತಿಯ ಪರಿಣಾಮವಾಗಿ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದೆ 125 ಇದ್ದ ನಕ್ಸಲ್‌ ಪೀಡಿತ ಜಿಲ್ಲೆಗಳು ಈಗ 11ಕ್ಕೆ ಇಳಿಕೆಯಾಗಿದೆ. ನಕ್ಸಲ್‌ ಚಟುವಟಿಕೆಗಳನ್ನ ತಡೆಯುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ. ಈ ಹಿಂದೆ ಬಸ್ತಾರ್‌ನಲ್ಲಿ (ತೀವ್ರವಾಗಿ ಬಾಧಿತವಾದ ಜಿಲ್ಲೆ) ಮಾವೋಗಳು ವಾಹನಗಳನ್ನ ಸ್ಫೋಟಿಸಿ ಭದ್ರತಾ ಸಿಬ್ಬಂದಿಗಳನ್ನ ಹತ್ಯೆಗೈದಿದ್ದರು. ಇಂದು ಅಲ್ಲಿನ ಯುವಕರು ʻಬಸ್ತಾರ್‌ ಒಲಿಂಪಿಕ್ಸ್‌ʼ ಆಯೋಜಿಸುತ್ತಿದ್ದಾರೆ. ಇದು ಅತಿದೊಡ್ಡ ಬದಲಾವಣೆ. ಈಗ ಶಾಂತಿಯ ದೀಪಾವಳಿ ಆಚರಿಸಲು ಸಾಧ್ಯವಾಗುತ್ತದೆ ಎಂದು ಹರ್ಷವ್ಯಕ್ತಪಡಿಸಿದರು ಮೋದಿ.

    ಕಾಂಗ್ರೆಸ್‌ ಅವರನ್ನ ಗಮನಿಸಲಿಲ್ಲ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ, ಈ ಪರಿಸರ ವ್ಯವಸ್ಥೆಯ ಕುರಿತು ಚರ್ಚೆಸೋದನ್ನೇ ಸಂಪೂರ್ಣವಾಗಿ ನಿಗ್ರಹಿಸಲಾಗಿತ್ತು ಎಂದು ವಾಗ್ದಾಳಿ ನಡೆಸಿದರು.

  • ಭದ್ರತಾ ಪಡೆಗಳ ಮುಂದೆ 208 ನಕ್ಸಲರು ಶರಣು – ಕೆಂಪು ಉಗ್ರರಿಂದ ಉತ್ತರ ಬಸ್ತಾರ್‌ ಮುಕ್ತ

    ಭದ್ರತಾ ಪಡೆಗಳ ಮುಂದೆ 208 ನಕ್ಸಲರು ಶರಣು – ಕೆಂಪು ಉಗ್ರರಿಂದ ಉತ್ತರ ಬಸ್ತಾರ್‌ ಮುಕ್ತ

    ರಾಯ್ಪುರ್: 110 ಮಹಿಳೆಯರು ಮತ್ತು 98 ಪುರುಷರು ಸೇರಿದಂತೆ 208 ನಕ್ಸಲರು ಛತ್ತೀಸ್‌ಗಢದ (Chhattisgarh) ದಂಡಕಾರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಮುಂದೆ (Naxals Surrender) ಶರಣಾಗಿದ್ದಾರೆ. ಶರಣಾದ ನಕ್ಸಲರಿಗೆ ಸಂವಿಧಾನದ ಪ್ರತಿ ಮತ್ತು ಗುಲಾಬಿಯನ್ನು ನೀಡಿ ಮುಖ್ಯವಾಹಿನಿಗೆ ಸ್ವಾಗತಿಸಲಾಯಿತು.

    ಶರಣಾದ ನಕ್ಸಲರು ಸರ್ಕಾರದ ಪುನರ್ವಸತಿ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಮಹತ್ವದ ಬೆಳವಣಿಗೆಯೊಂದಿಗೆ ಅಬುಜ್ಮದ್‌ನ ಹೆಚ್ಚಿನ ಭಾಗ ನಕ್ಸಲರ ಪ್ರಭಾವದಿಂದ ಮುಕ್ತವಾಗಲಿದೆ‌. ಭಾರೀ ಸಂಖ್ಯೆಯ ನಕ್ಸಲರು ಶರಣಾಗಿರುವುದರಿಂದ ಉತ್ತರ ಬಸ್ತಾರ್‌ನಲ್ಲಿ ಕೆಂಪು ಭಯೋತ್ಪಾದನೆ ಕೊನೆಗೊಂಡಿದೆ. ಇದನ್ನೂ ಓದಿ: ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌

    ಶರಣಾಗತಿಯ ಸಮಯದಲ್ಲಿ ಒಟ್ಟು 153 ಶಸ್ತ್ರಾಸ್ತ್ರಗಳನ್ನು ನಕ್ಸಲರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಶಸ್ತ್ರಾಸ್ತ್ರಗಳಲ್ಲಿ 19 AK-47 ರೈಫಲ್‌ಗಳು, 17 SLR ರೈಫಲ್‌ಗಳು, 23 INSAS ರೈಫಲ್‌ಗಳು, 1 INSAS LMG, 36.303 ರೈಫಲ್‌ಗಳು, 4 ಕಾರ್ಬೈನ್‌ಗಳು, 11 BGL ಲಾಂಚರ್‌ಗಳು, 41 12-ಬೋರ್/ಸಿಂಗಲ್-ಶಾಟ್ ಗನ್‌ಗಳು ಮತ್ತು 1 ಪಿಸ್ತೂಲ್ ಸೇರಿವೆ.

    ಶರಣಾದ 208 ನಕ್ಸಲರಲ್ಲಿ ಒಬ್ಬ ಕೇಂದ್ರ ಸಮಿತಿ ಸದಸ್ಯರು (CCM), ನಾಲ್ವರು ದಂಡಕಾರಣ್ಯ ವಿಶೇಷ ಪ್ರಾದೇಶಿಕ ಸಮಿತಿ (DKSZC) ಸದಸ್ಯರು, ಒಬ್ಬ ಪ್ರಾದೇಶಿಕ ಸಮಿತಿ ಸದಸ್ಯರು, 21 ವಿಭಾಗೀಯ ಸಮಿತಿ ಸದಸ್ಯರು (DVCM), 61 ಪ್ರದೇಶ ಸಮಿತಿ ಸದಸ್ಯರು (ACM), 98 ಪಕ್ಷದ ಸದಸ್ಯರು ಮತ್ತು 22 PLGA/RPC/ಇತರ ಕಾರ್ಯಕರ್ತರು ಸೇರಿದ್ದಾರೆ.

    ಈ ಶರಣಾಗತಿಯೊಂದಿಗೆ, ಉತ್ತರ ಬಸ್ತಾರ್‌ನಲ್ಲಿ ನಕ್ಸಲೀಯರ ಚಟುವಟಿಕೆ ಬಹುತೇಕ ಕೊನೆಗೊಂಡಿದೆ ಎಂದು ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಹೇಳಿವೆ. ಮುಂದಿನ ಹಂತದ ಕಾರ್ಯಾಚರಣೆ ದಕ್ಷಿಣ ಬಸ್ತಾರ್‌ನ ಗುರಿಯಾಗಿಸಿಕೊಂಡು ನಡೆಯಲಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಇಡೀ ದೇಶಕ್ಕೆ ಇಂದು ಐತಿಹಾಸಿಕ ದಿನ. ಸಂವಿಧಾನವನ್ನು ನಂಬುವ ಹೆಚ್ಚಿನ ಸಂಖ್ಯೆಯ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಸೇರಲಿದ್ದಾರೆ. ಅವರಿಗೆ ಸ್ವಾಗತ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌| ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲ್‌ ನಾಯಕರ ಎನ್‌ಕೌಂಟರ್‌

  • ಛತ್ತೀಸ್‌ಗಢ | ಸೂಕ್ಮಾದಲ್ಲಿ ನಕ್ಸಲರಿಂದ ಐಇಡಿ ಬ್ಲಾಸ್ಟ್‌ – ಎಎಸ್ಪಿ ಆಕಾಶ್ ರಾವ್ ಸಾವು, ಹಲವರಿಗೆ ಗಾಯ

    ಛತ್ತೀಸ್‌ಗಢ | ಸೂಕ್ಮಾದಲ್ಲಿ ನಕ್ಸಲರಿಂದ ಐಇಡಿ ಬ್ಲಾಸ್ಟ್‌ – ಎಎಸ್ಪಿ ಆಕಾಶ್ ರಾವ್ ಸಾವು, ಹಲವರಿಗೆ ಗಾಯ

    ರಾಯ್ಪರ್‌: ಛತ್ತಿಸ್‌ಗಢದ (Chhattisgarh) ಸೂಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ (ಸುಧಾರಿತ ಸ್ಪೋಟಕ ಸಾಧನ) ಸ್ಫೋಟದಲ್ಲಿ (IED Blast) ಸ್ಥಳೀಯ ಎಎಸ್ಪಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ಮೃತ ಎಎಸ್‌ಪಿಯನ್ನು (ASP) ಆಕಾಶ್ ರಾವ್ ಗಿರಿಪುಂಜೆ ಎಂದು ಗುರುತಿಸಲಾಗಿದೆ. ಕೊಂಟಾ-ಎರಾಬೋರ್ ರಸ್ತೆಯ ದೋಂಡ್ರಾ ಬಳಿ ನಡೆದ ಘಟನೆಯಲ್ಲಿ ಡಿಎಸ್‌ಪಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹೆಂಡತಿ ಮಾತು ಕೇಳಿ ನನ್ನ ಮಗ ಹನಿಮೂನ್‌ಗೆ 10 ಲಕ್ಷ ಮೌಲ್ಯ‌ದ ಆಭರಣ ಹಾಕ್ಕೊಂಡು ಹೋಗಿದ್ದ: ಸೊಸೆಯ ಪ್ಲ್ಯಾನ್‌ ಬಗ್ಗೆ ಬಿಚ್ಚಿಟ್ಟ ಅತ್ತೆ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಕೊಂಟಾದಲ್ಲಿ ನಕ್ಸಲರೇ ಪೊಲೀಸರನ್ನ ಟ್ರ್ಯಾಪ್‌ ಮಾಡಿದ್ದಾರೆ. ಮೊದಲು ಸುಳ್ಳು ಸುದ್ದಿಯೊಂದನ್ನ ಹಬ್ಬಿಸಿದ್ದಾರೆ, ಇದನ್ನ ನಂಬಿ ಪೊಲೀಸರ ತಂಡ ಹೊರಕೆ ಬರ್ತಿದ್ದಂತೆ ಐಇಡಿ ಸ್ಫೋಟಗೊಂಡಿದೆ. ಈ ವೇಳೆ ಗಿರಿಪುಂಜೆ ಜೊತೆಗೆ ಇತರ ಸಿಬ್ಬಂದಿ ಸಹ ಗಾಯಗೊಂಡಿದ್ದರು. ಎಲ್ಲರನ್ನು ಚಿಕಿತ್ಸೆಗಾಗಿ ಕೊಂಟಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದ್ದ ಎಎಸ್ಪಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

    ಜೂನ್‌ 10ರಂದು ಸಿಪಿಐ ಕರೆ ನೀಡಿದ್ದ ಭಾರತ್‌ ಬಂದ್‌ಗೆ ಮುಂಚಿತವಾಗಿ ಸಂಭಾವ್ಯ ನಕ್ಸಲ್‌ ಚಟುವಟಿಕೆ ತಡೆಗಟ್ಟುವ ಕರ್ತವ್ಯದಲ್ಲಿ ಗಿರಿಪುಂಜೆ ನಿರತರಾಗಿದ್ದರು. ಎಎಸ್ಪಿ ಸಾವಿಗೆ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಹನಿಮೂನ್‌ ಮರ್ಡರ್‌ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್‌ ತಂದೆ

    ಈ ತಿಂಗಳ ಆರಂಭದಲ್ಲಿ ಪಿಎಲ್‌ಜಿಎ ಬೆಟಾಲಿಯನ್‌ನ ಇಬ್ಬರು ಸದಸ್ಯರು ಸೇರಿದಂತೆ 16 ನಕ್ಸಲರು ಸೂಕ್ಮಾದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದರು. ಈ ಪೈಕಿ 6 ಜನರ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಮತ್ತೊಬ್ಬರು ಮಹಿಳೆ ಮತ್ತು ಒಬ್ಬ ಪುರುಷ ಕೇಡರ್‌ಗೆ ತಲಾ 8 ಲಕ್ಷ ರೂ. ಬಹುಮಾನವಿತ್ತು. ಇದನ್ನೂ ಓದಿ: Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!

  • ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

    ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 26 ನಕ್ಸಲರು ಬಲಿ, ಯೋಧ ಹುತಾತ್ಮ

    ರಾಯ್ಪರ್‌: ಛತ್ತೀಸ್‌ಗಢದ (Chhattisgarh) ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) 26 ನಕ್ಸಲರು (Naxals) ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಗೃಹ ಸಚಿವ ವಿಜಯ್ ಶರ್ಮಾ ತಿಳಿಸಿದ್ದಾರೆ.

    ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಏ.21 ರಿಂದ ಮೇ 11 ರ ನಡುವೆ ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು 214 ನಕ್ಸಲ್ ಅಡಗುತಾಣಗಳನ್ನು ನಾಶಮಾಡಲಾಗಿತ್ತು.

    ಈ ಕಾರ್ಯಾಚರಣೆಯಲ್ಲಿ ಒಟ್ಟು 450 ಐಇಡಿಗಳು, 818 ಬಿಜಿಎಲ್ ಶೆಲ್‌ಗಳು, 899 ಬಂಡಲ್ ಕೋಡೆಕ್ಸ್, ಡಿಟೋನೇಟರ್‌ಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಲ್ಲದೆ, ಸುಮಾರು 12 ಟನ್ ಆಹಾರ ಸಾಮಾಗ್ರಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – 15ಕ್ಕೂ ಹೆಚ್ಚು ನಕ್ಸಲರನ್ನು ಬಲಿ ಪಡೆದ ಭದ್ರತಾ ಪಡೆ

  • Chhattisgarh| ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟ – ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

    Chhattisgarh| ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟ – ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

    ರಾಯ್ಪುರ: ನಕ್ಸಲರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ (Security Personnel) ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

    ನಕ್ಸಲ್ ಕೇಂದ್ರಿತ ಪ್ರದೇಶವಾದ ನಾರಾಯಣಪುರ (Narayanpur) ಜಿಲ್ಲೆಯ ಅಬುಜ್‌ಮಾರ್‌ನಲ್ಲಿ ಘಟನೆ ನಡೆದಿದೆ. ಗಾರ್ಪಾ ಗ್ರಾಮದ ಬಳಿ ಭದ್ರತಾ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ. ಇದನ್ನೂ ಓದಿ: Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್‌ ಸಿಲಿಂಡರ್‌ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ

    ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೊದಲು ನೆರೆಯ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟದಲ್ಲಿ ಕೋಬ್ರಾದ ಇಬ್ಬರು ಕಮಾಂಡೋಗಳು ಗಾಯಗೊಂಡಿದ್ದರು. ಇದನ್ನೂ ಓದಿ: ಸಂಸದ ಡಾ.ಮಂಜುನಾಥ್ ನೇತೃತ್ವದಲ್ಲಿ ದಿಶಾ ಸಭೆ – ಅಧಿಕಾರಿಗಳಿಗೆ ಶಿಸ್ತಿನ ಪಾಠ

    ಜನವರಿ 6 ರಂದು ಬಿಜಾಪುರದಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟಗೊಂಡು ಎಂಟು ಪೊಲೀಸರು ಮತ್ತು ಚಾಲಕ ಸಾವನ್ನಪ್ಪಿದ್ದರು. ಇದನ್ನೂ ಓದಿ: 2027ರ ವೇಳೆಗೆ ಮೈಸೂರು-ಕುಶಾಲನಗರ 4 ಪಥದ ರಸ್ತೆ ಕಾಮಗಾರಿ ಪೂರ್ಣ – ಯದುವೀರ್

  • ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

    ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

    ಚಿತ್ರದುರ್ಗ: ನಕ್ಸಲರು (Naxals) ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪ್ರಶ್ನಿಸಿದ್ದಾರೆ.

    ಚಿತ್ರದುರ್ಗದ (Chitradurga) ಮಾದಾರಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ. ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

    ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು. ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

    ಮುಡಾದಲ್ಲಿ ಸುಳ್ಳು ದಾಖಲೆ ನೀಡಿ ಜಿಟಿಡಿ ಫ್ಯಾಮಿಲಿ ಸೈಟ್ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು 14 ಸೈಟ್‌ಗಳ ವಿಚಾರವಲ್ಲ, ಸಾವಿರಾರು ಸೈಟ್‌ಗಳ ವಿಚಾರ. ಅವರನ್ನು ರಕ್ಷಣೆ ಮಾಡಲು ಎಲ್ಲಾ ಕೇಸ್ ಮುಚ್ಚಿ ಹಾಕುವ ಪ್ರಯತ್ನ. ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿ ರಾತ್ರೋರಾತ್ರಿ ಹೋಗಿ ಸೈಟ್ ವಾಪಾಸ್ ಕೊಟ್ಟಿದ್ದು ಯಾಕೆ? ತಪ್ಪು ಮಾಡಿದ್ದು ಅರಿವಾದ ಮೇಲೆ ಸಿಎಂ ಸೈಟ್ ವಾಪಸ್ ಕೊಟ್ಟಿದ್ದಾರೆ. ನಿಮಗೂ ಭ್ರಷ್ಟಾಚಾರಕ್ಕೂ ಹತ್ತಿರದ ನಂಟಿದೆ. ಈ ಕೇಸ್ ಕೂಡ ಸಿಬಿಐಗೆ ಕೊಟ್ಟರೆ ಎಲ್ಲರ ಬಂಡವಾಳ ಹೊರಗಡೆ ಬರುತ್ತದೆ. ಇದರಲ್ಲಿ ಯಾರಿದ್ದಾರೆ, ಯಾರಿಲ್ಲ ಎಂಬುದು ಪ್ರಶ್ನೆಯಲ್ಲ. ನನ್ನ ಸಂಬಂಧಿಗಳು ಇದ್ದರೂ ನಾನು ಇದನ್ನೇ ಮಾತನಾಡೋದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಸಂಬಂಧಿಕರು, ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಮೇಲೆ ಫೈರಿಂಗ್‌!

  • AK-47, ಐದು 303 ಕೋವಿ, 100ಕ್ಕೂ ಹೆಚ್ಚು ಗುಂಡು – ನಕ್ಸಲರದ್ದು ಎನ್ನಲಾದ ಶಸ್ತ್ರಾಸ್ತ್ರ ಪತ್ತೆ

    AK-47, ಐದು 303 ಕೋವಿ, 100ಕ್ಕೂ ಹೆಚ್ಚು ಗುಂಡು – ನಕ್ಸಲರದ್ದು ಎನ್ನಲಾದ ಶಸ್ತ್ರಾಸ್ತ್ರ ಪತ್ತೆ

    ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು (Naxalite weapons) ಪತ್ತೆಯಾಗಿವೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ ಗೊತ್ತಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ದನ್ನೂ ಓದಿ: ಚಿಕ್ಕಮಗಳೂರು | ಎಸ್ಟೇಟ್ ಮ್ಯಾನೇಜರ್ ಮೇಲೆ ಅಕ್ರಮ ಬಾಂಗ್ಲಾ ವಲಸಿಗರಿಂದ ಕಲ್ಲು ತೂರಾಟ

    1 ಎಕೆ-47, 303 ಕೋವಿ 5, ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿವೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಅಪರಿಚಿತರ ಆಯುಧಗಳು ಎಂದು ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದನ್ನೂ ಓದಿ: ನಕ್ಸಲರು ಚೀನಾ, ಪಾಕ್‌ನಿಂದ ಸಹಾಯ ಪಡೆದಿದ್ದಾರೆ: ಸಿ.ಟಿ ರವಿ ಗಂಭೀರ ಆರೋಪ

    ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಕೆಲವರು ಅರಣ್ಯದ (Forest) ರಹಸ್ಯ ಸ್ಥಳದಲ್ಲಿ ಅಡಗಿಸಿ ಇಟ್ಟಿರುವುದಾಗಿ ತಿಳಿದುಬಂದಿತ್ತು. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇರಲಿಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್‌ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿತ್ತು.

    ಪರಪ್ಪನ ಅಗ್ರಹಾರದಲ್ಲಿ ನಕ್ಸಲರು
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್‌. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಅವರನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದನ್ನೂ ಓದಿ: ಶರಣಾದ ನಕ್ಸಲರಿಗೆ ಎಷ್ಟು ಹಣ ಸಿಗುತ್ತೆ? ಸರ್ಕಾರದ ಪ್ಯಾಕೇಜ್ ಏನು?

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತ್ವತ್ವದಲ್ಲಿ ಗುರುವಾರ ನಗರದದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರು ಮಂದಿಯನ್ನು ಜನವರಿ 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ನಂತರ ಪೊಲೀಸರು 6 ಮಂದಿ ನಕ್ಸಲರನ್ನು ಬಿಗಿ ಭದ್ರತೆ ನಡುವೆ ಗುರುವಾರ ರಾತ್ರಿ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹಕ್ಕೆ ಬಿಟ್ಟು ಬಂದಿದ್ದಾರೆ.

    ಆರು ಮಂದಿ ನಕ್ಸಲರ ವಿರುದ್ಧವೂ ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ’(ಯುಎಪಿಎ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

  • ಶರಣಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

    ಶರಣಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

    ಬೆಂಗಳೂರು: ಶಸ್ತ್ರ ತ್ಯಾಗ ಮಾಡಿ ಸಿಎಂ ಮುಂದೆ ಶರಣಾಗತರಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

    ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರು ಶಿಫ್ಟ್‌ ಆಗಿದ್ದಾರೆ. ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಪೊಲೀಸರು ಕರೆತಂದರು.

    ಮೂರು ಕೆಎಸ್‌ಆರ್‌ಪಿ, ಐದಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ಇತ್ತು. ಬಿಗಿ ಭದ್ರತೆಯೊಂದಿಗೆ ಆರು ಮಂದಿ ಶರಣಾಗತ ನಕ್ಸಲರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

    ಶರಣಾಗತರಾದ ನಕ್ಸಲರನ್ನು ಗುರುವಾರ ಮಧ್ಯಾಹ್ನ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. 6 ಮಂದಿಗೂ ಜ.30 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ.

  • ಶರಣಾದ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ

    ಶರಣಾದ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ

    – ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಗಳು

    ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ (Naxals) ಜ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ (NIA Court) ಆದೇಶ ಹೊರಡಿಸಿದೆ.

    ಬುಧವಾರ ಸಿಎಂ ಮುಂದೆ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಯಿತು. ಮಹಿಳಾ ಸಾಂತ್ವನ ಕೇಂದ್ರದಿಂದ ಶರಣಾದ ನಕ್ಸಲರನ್ನು ಮಡಿವಾಳ ಎಫ್‌ಎಸ್‌ಎಲ್‌ಗೆ ಗುರುವಾರ ಪೊಲೀಸರು ಕರೆತಂದರು. ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ನಾಲ್ವರು ಮಹಿಳೆಯರು ಮತ್ತು ಮತ್ತಿಬ್ಬರು ಪುರುಷರನ್ನ ಮಡಿವಾಳದ ಎಫ್‌ಎಸ್‌ಎಲ್ ಸ್ಪೆಷಲ್ ಸೆಲ್‌ನಲ್ಲಿ ಇರಿಸಲಾಗಿತ್ತು. ಬಳಿಕ ಎಲ್ಲರನ್ನೂ ಅಲ್ಲಿಂದ ಮೆಡಿಕಲ್ ಪರೀಕ್ಷೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ನಕ್ಸಲರ ಶರಣಾಗತಿ ಬಗ್ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

    ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ ಟಿ.ಎನ್, ಜಿಶಾ ಎಲ್ಲರನ್ನೂ ಎನ್‌ಐಎ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಕೋರ್ಟ್‌ಗೆ ಹಾಜರು ಪಡಿಸುವ ಮೊದಲು ನಕ್ಸಲ್ ನಿಗ್ರಹ ದಳ ಆರೋಪಿಗಳಿಂದ ಹೇಳಿಕೆ ದಾಖಲಿಸಿಕೊಂಡಿತು. ಶಸ್ತ್ರಾಸ್ತ್ರಗಳ ಬಗ್ಗೆಯೂ ಸಾಕ್ಷ್ಯ ಕಲೆ ಹಾಕಿತು.

    ಕೊನೆಗೆ ನಕ್ಸಲರನ್ನು ಕೋರ್ಟ್‌ಗೆ ಚಿಕ್ಕಮಗಳೂರು ಪೊಲೀಸರು ಹಾಜರುಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ನ ನ್ಯಾಯಾಧೀಶ ಗಂಗಾಧರ್ ಅವರ ಮುಂದೆ ಎಲ್ಲರನ್ನೂ ಹಾಜರುಪಡಿಸಲಾಯಿತು. ಇದನ್ನೂ ಓದಿ: ನಕ್ಸಲ್ ಶರಣಾಗತಿ – ಮುಂಡಗಾರು ಲತಾ ಟೀಂನ ರವೀಂದ್ರ ಮಿಸ್ಸಿಂಗ್?

    ನ್ಯಾಯಾಧೀಶರ ಮುಂದೆ ಒಬ್ಬೊಬ್ಬರಾಗಿ ತಮ್ಮ ಕುರಿತು ನಕ್ಸಲರು ಮಾಹಿತಿ ನೀಡಿದರು. ಕೋರ್ಟ್ನಲ್ಲಿ ನಕ್ಸಲರಿಂದ ವಕಾಲತು ಪ್ರತಿಗೆ ವಕೀಲರು ಸಹಿ ಪಡೆದರು. ತಮ್ಮ ಕೇಸ್ ನಡೆಸಲು ನಕ್ಸಲರು ವಕೀಲರನ್ನು ನೇಮಕ ಮಾಡಿಕೊಂಡರು. ಅಂತಿಮವಾಗಿ ಕೋರ್ಟ್ ಎಲ್ಲ ನಕ್ಸಲರಿಗೂ ಜ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.