Tag: nayandalli

  • ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ

    ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ

    ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಈಡೇರಿದೆ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಇಂದು ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ.

    ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ ‘ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ ಆದ್ರೆ ನಮ್ಮೆಲ್ಲರೊಳಗೆ ಆಳವಾಗಿ ನೆಲೆಸಿದ್ದಾರೆ. ಪುನೀತ್ ಹೃದಯವಂತ ಮನುಷ್ಯ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ಬಹಳ ವಿಶಾಲವಾದದ್ದು. ಅವರ ನೆನಪು ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದೃಷ್ಟಿಯಿಂದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡುತ್ತಿದ್ದೇವೆ’ ಎಂದು ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

    ಇಂದು ಸಂಜೆ ಆರು ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ರಸ್ತೆ ನಾಮಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಗಳು ರಸ್ತೆ ನಾಮಕರಣ ಉದ್ಘಾಟನೆಯನ್ನು ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ, ಸಚಿವರು, ಇಡೀ ಚಿತ್ರರಂಗದ ತಾರೆಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ನಿರ್ದೇಶಕರ ಸಂಘದ ಖಜಾಂಚಿ ಉಮೇಶ್ ನಾಯ್ಕ್, ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್, ಸುಂದರ್ ರಾಜ್, ಸಿದ್ಧರಾಜು, ಜೈ ಜಗದೀಶ್, ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಯಮ ಗುಂಡಿಯಾಯ್ತು, ರಾಜಕಾಲುವೆ ಆಯ್ತು, ಸಿಲಿಕಾನ್ ಸಿಟಿಯಲ್ಲಿವೆ ಡೆಡ್ಲಿ ಅಂಡರ್‍ಪಾಸ್‍ಗಳು!

    ಯಮ ಗುಂಡಿಯಾಯ್ತು, ರಾಜಕಾಲುವೆ ಆಯ್ತು, ಸಿಲಿಕಾನ್ ಸಿಟಿಯಲ್ಲಿವೆ ಡೆಡ್ಲಿ ಅಂಡರ್‍ಪಾಸ್‍ಗಳು!

    ಬೆಂಗಳೂರು: ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಎಚ್ಚರಕೆಯಿಂದ ಸಂಚರಿಸಬೇಕಾಗಿದೆ. ಯಾಕಂದ್ರೆ ಸರ್ಕಾರ ಕಟ್ಟಿರೋ ಹೈಟೆಕ್ ಅಂಡರ್ ಪಾಸ್‍ಗಳು ಮೈಮೇಲೆ ಬೀಳುವ ಸಂಭವಗಳಿವೆ.

    ಹೌದು. ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿಮೆ ಮಾಡಲು ನಿರ್ಮಾಣಗೊಂಡಿರೋ ಅಂಡರ್‍ಪಾಸ್‍ಗಳು ಮೃತ್ಯುಕೂಪವಾಗಿ ಪರಿಣಮಿಸಿವೆ. ಬೆಂಗಳೂರು ಅಭಿವೃದ್ಧಿ ಮಾಡುತ್ತೇವೆ ಅನ್ನೋ ಜಾರ್ಜ್ ಸಾಹೇಬ್ರು ಸ್ವಲ್ಪ ಅಂಡರ್‍ಪಾಸ್‍ಗಳತ್ತ ಗಮನಹರಿಸಬೇಕಾಗಿದೆ. ಕಾವೇರಿ ಜಂಕ್ಷನ್ ಅಂಡರ್‍ಪಾಸ್, ಲೀ ಮೆರೆಡಿಯನ್ ಅಂಡರ್‍ಪಾಸ್, ಹೌಸಿಂಗ್ ಬೋಡ್ ಅಂಡರ್‍ಪಾಸ್, ನಾಯಂಡಹಳ್ಳಿ ಅಂಡರ್‍ಪಾಸ್ ಸೇರಿದಂತೆ ಇತರೆ ಅಂಡರ್‍ಪಾಸ್‍ಗಳು ಕಳಪೆ ಕಾಮಗಾರಿಯಿಂದಾಗಿ ಬೀಳುವ ಹಂತಕ್ಕೆ ತಲುಪಿದೆ. ಈ ಎಲ್ಲಾ ಅಂಡರ್‍ಪಾಸ್‍ಗಳ ಗೋಡೆ ಗೋಡೆಗಳಲ್ಲೂ ನೀರು ಸೋರುತ್ತಿದ್ದು ಯಾವುದೇ ಕ್ಷಣದಲ್ಲಾದ್ರು ಕುಸಿದು ಬೀಳುವ ಆತಂಕ ಕಾಡುತ್ತಿದೆ.

    ಕಾವೇರಿ ಜಂಕ್ಷನ್ ಅಂಡರ್‍ ಪಾಸ್: ಬೆಂಗಳೂರಲ್ಲಿ ಯಾವಾಗ ಮಳೆ ಬಂದ್ರೂ ಮೊದಲು ನೀರು ನಿಲ್ಲೋದು ಇದೇ ಅಂಡರ್‍ಪಾಸ್‍ನಲ್ಲಿ. ಹತ್ತಾರು ಅಲ್ಲ ನೂರಾರು ವಾಹನಗಳು ಈ ಅಂಡರ್‍ಪಾಸ್‍ನಲ್ಲಿ ಸಿಲುಕಿ ಪ್ರಾಣ ಉಳಿಸಿಕೊಳ್ಳೋಕೆ ಒದ್ದಾಡಿದ್ದಾರೆ. ಇದನ್ನ ಬರೀ 48 ಗಂಟೆಯಲ್ಲಿ ಕಟ್ಟಿ ಮೀಸೆ ತಿರುವಿದ್ದವರು ಈ ಕಡೆ ತಲೆ ಹಾಕಿಲ್ಲ. ಅಂಡರ್‍ಪಾಸ್ ಸೋರ್ತಿದ್ದು ಯಾವಾಗ ಬೀಳುತ್ತೋ ಗೊತ್ತಿಲ್ಲ. ಕಾವೇರಿ ಜಂಕ್ಷನ್ ಅಂಡರ್ ಪಾಸ್ ತಪ್ಪಿಸಿಕೊಂಡು ಸ್ಯಾಂಕಿ ಕೆರೆ ಹತ್ತಿರದಲ್ಲಿರೋ ಲೀ ಮೆರಿಡಿಯನ್ ಅಂಡರ್‍ಪಾಸ್ ಹತ್ರ ಅಪ್ಪಿತಪ್ಪಿನೂ ಹೋಗ್ಬೇಡಿ. ಈ ಅಂಡರ್‍ಪಾಸ್ ಕೂಡ ಸೋರುತ್ತಿದ್ದು ಈಗಾಗ್ಲೇ ಬಿರುಕು ಬಿಟ್ಟಿವೆ.

    ಹೌಸಿಂಗ್‍ ಬೋರ್ಡ್ ಅಂಡರ್‍ ಪಾಸ್: ಇದನ್ನ ಕಟ್ಟಿ 6 ತಿಂಗಳು ಕಳೆದಿಲ್ಲ. ಅದಾಗ್ಲೇ ಗೋಡೆಗಳೆಲ್ಲಾ ಬಿರುಕುಬಿಟ್ಟಿವೆ. ನೀರು ಸೋರುತ್ತಿದ್ದು ಅಂಡರ್‍ಪಾಸ್ ಕೆಳಗೆ ನಿಲ್ತಿದೆ. ಸಿದ್ದರಾಮಯ್ಯನವರೇ ಉದ್ಘಾಟಿಸಿದ್ದ ಈ ಅಂಡರ್‍ಪಾಸ್ ಈಗ ಡೆಡ್ಲಿ ಅಂಡರ್‍ಪಾಸ್ ಆಗಿದೆ.

    ನಾಯಂಡಹಳ್ಳಿ ಅಂಡರ್‍ ಪಾಸ್ ಜೊತೆ ಫ್ಲೈ ಓವರ್ ಕೆಳಗೆ ಹೋದ್ರೆ ನಿಮ್ಮ ಪ್ರಾಣ ಹಾರಿಹೋಗೋದು ನಿಶ್ಚಿತ. ಇಷ್ಟೆಲ್ಲಾ ತೂತುಗಳಿದ್ರೂ ಬಿಬಿಎಂಪಿಯವರು ತಲೆಕೆಡಿಸಿಕೊಳ್ಳುತ್ತಿಲ್ಲ. ಅಂಡರ್ ಪಾಸ್ ಬಿದ್ದು ಅದರೊಳಗೆ ಸಿಲುಕಿ ಮೃತಪಟ್ಟರೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ತಾರೆ. ಹೀಗಾಗಿ ವಾಹನ ಸವಾರರು ಎಚ್ಚರಿಕೆಯಂದ ಇರಬೇಕಾಗಿದೆ.

    ಈಗಾಗಲೇ ರಾಜಾಕಾಲುವೆಯ ಕಳಪೆ ಕಾಮಗಾರಿಯಿಂದ 5 ಜನರ ಬಲಿಯಾಗಿದೆ. ಈ ಅಂಡರ್‍ಪಾಸ್‍ಗಳಿಂದಾಗಿ ಇನ್ನಷ್ಟು ಬಲಿಯಾಗೋ ಪ್ರಸಂಗ ಬಂದಿದೆ. ವಿವಿಐಪಿಗಳು ಓಡಾಡೋ ಅಂಡರ್‍ಪಾಸ್‍ಗಳ ಕಥೆಯೇ ಹೀಗಾದ್ರೆ ಇನ್ನು ಜನಸಮಾನ್ಯರು ಓಡಾಡೋ ಅಂಡರ್‍ ಪಾಸ್‍ಗಳ ಸ್ಥಿತಿ ಏನು ಎಂಬುದು ಜನರ ಪ್ರಶ್ನೆ.

  • ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾರ್ ಪಲ್ಟಿ – ಚಾಲಕ ಪಾರು

    ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾರ್ ಪಲ್ಟಿ – ಚಾಲಕ ಪಾರು

    ಬೆಂಗಳೂರು: ಚಲಿಸುತ್ತಿದ್ದ ಕಾರ್‍ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ನಾಯಂಡಳ್ಳಿ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಮೈಸೂರು ರಸ್ತೆ ಕಡೆಗೆ ತೆರಳುತಿದ್ದ ಕಾರ್ ಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್ ಸಿನಿಮೀಯ ಶೈಲಿಯಲ್ಲಿ ಪಲ್ಟಿ ಹೊಡೆದಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಕಾರ್ ಚಾಲಕ ಕೀರ್ತಿ ಪಾರಾಗಿದ್ದಾರೆ.

    ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.