Tag: Nayantara

  • ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

    ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

    ಮಿಳು ಸಿನಿಮಾ ರಂಗದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ (Nayantara) ಮೇಲೆ ಅಲ್ಲಿನ ನಿರ್ಮಾಪಕರು ಕೋಪಗೊಂಡಿದ್ದಾರೆ. ತಮಗೊಂದು ಬೇರೆಯವರಿಗೊಂದು ರೂಲ್ಸ್ ಮಾಡಿಕೊಳ್ಳುವ ನಯನತಾರಾ ಅವರ ಇಬ್ಬಂದಿತನವನ್ನು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕೋಪ ಎಲ್ಲಿಗೆ ತಿರುಗುತ್ತದೆಯೋ ಕಾದು ನೋಡಬೇಕಿದೆ. ಅಷ್ಟಕ್ಕೂ ನಯನತಾರಾ ಮೇಲೆ ನಿರ್ಮಾಪಕರು ಮುನಿಸಿಕೊಳ್ಳುವುದಕ್ಕೆ ಕಾರಣವಿದೆ.  ಆ ಕಾರಣವನ್ನು ಕೆಲವರು ಬಹಿರಂಗವಾಗಿಯೇ ಪ್ರಶ್ನೆ ಮಾಡಿದ್ದಾರೆ.

    ನಯನತಾರಾ ತಮ್ಮ ಬದುಕಿನಲ್ಲಿ ಒಂದು ಬದ್ಧತೆಯನ್ನು ಮಾಡಿಕೊಂಡಿದ್ದರು. ಅದನ್ನು ಈಗ ಅವರು ತಮ್ಮ ಗಂಡನಿಗಾಗಿ ಮುರಿದಿದ್ದಾರೆ. ಇದೇ ನಿರ್ಮಾಪಕರ ಕೋಪಕ್ಕೆ ಕಾರಣವಾಗಿದೆ. ನಯನತಾರಾ ಸಿನಿಮಾಗಳನ್ನು ಒಪ್ಪಿಕೊಂಡರೆ, ಅಲ್ಲೊಂದು ನಿಬಂಧನೆ ಹಾಕುತ್ತಿದ್ದರು. ತಮ್ಮ ಕೆಲಸ ಕೇವಲ ನಟಿಸುವುದು ಮಾತ್ರ. ಯಾವುದೇ ಕಾರಣಕ್ಕೂ ಸಿನಿಮಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಅಗ್ರಿಮೆಂಟ್ ಹಾಕಿಕೊಳ್ಳುತ್ತಿದ್ದರು. ಈವರೆಗೂ ಅದನ್ನು ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಈ ಬಾರಿ ಅವರು ಅದನ್ನು ಮುರಿದಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Sivan) ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಕನೆಕ್ಟ್’ (Connect) ಸಿನಿಮಾ ಇದೇ ತಿಂಗಳು 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ನಯನತಾರಾ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ತೊಡಗಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತಿದ್ದಾರೆ. ಈ ಕೆಲಸವೇ ನಿರ್ಮಾಪಕರನ್ನು ಕೆಣಕಿದೆ. ತಮಗೊಂದು ರೂಲ್ಸ್ ಬೇರೆಯವರಿಗೊಂದು ರೂಲ್ಸ್ ನಯನತಾರಾ ಮಾಡುವುದು ಯಾಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

    ತಮಿಳು ಸಿನಿಮಾ ರಂಗದಲ್ಲಿ ಈ ರೀತಿ ರೂಲ್ಸ್ (Rules) ಮಾಡಿಕೊಳ್ಳುವುದು ಹೊಸದೇನೂ ಅಲ್ಲ. ಅಜಿತ್ ಅವರು ಇದನ್ನು ಪಾಲಿಸಿಕೊಂಡು ಬಂದಿದ್ದಾರೆ. ಅಜಿತ್ ಯಾವುದೇ ಸಿನಿಮಾದ ಪ್ರಮೋಷನ್ ಮಾಡುವುದಿಲ್ಲ. ನಟಿಸಿ ಹಿಂದಕ್ಕೆ ಸರಿದು ಬಿಡುತ್ತಾರೆ. ನಯನತಾರಾ ಇದನ್ನೇ ಪಾಲಿಸಿಕೊಂಡು ಬಂದಿದ್ದರು. ಆದರೆ, ಇದೀಗ ಗಂಡನ ಸಿನಿಮಾಗಾಗಿ ಆ ರೂಲ್ಸ್ ಅನ್ನು ಬ್ರೇಕ್ ಮಾಡಿದ್ದಾರೆ. ಈ ನಡೆಯೇ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?

    ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?

    ಮಿಳಿನ ಸೂಪರ್ ಸ್ಟಾರ್ ನಟಿ ನಯನತಾರಾ (Nayantara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan) ದಂಪತಿ ಬಾಡಿಗೆ ತಾಯಿ ಪ್ರಕರಣ ಸಖತ್ ಸದ್ದು ಮಾಡಿತ್ತು. ಸರಕಾರ ರೂಪಿಸಿರುವ ನಿಯಮಗಳಂತೆ ಅವರು ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆದಿಲ್ಲ ಎಂದು ಆರೋಪಿಸಿ, ಸರಕಾರವು ತನಿಖೆಗೆ ಆದೇಶಿಸಿತ್ತು. ಇದೀಗ ತನಿಖಾ ತಂಡ ವರದಿ ನೀಡಿದ್ದು, ವರದಿ ನೋಡಿದ ಸ್ಟಾರ್ ದಂಪತಿಯು ನಿಟ್ಟುಸಿರಿಟ್ಟಿದ್ದಾರೆ.

    ಬಾಡಿಗೆ ತಾಯಿಯಿಂದ (surrogate mother) ಮಗುವನ್ನು ಪಡೆಯಲು ತಮಿಳು ನಾಡು ಸರಕಾರವು ನಿಯಮಗಳನ್ನು ರೂಪಿಸಿದೆ. ಅದನ್ನು ನಯನತಾರ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿಯೇ ಸರಕಾರವು ತನಿಖೆಗೆ ಆದೇಶಿಸಿತ್ತು. ಮದುವೆಯಾದ ನಾಲ್ಕೇ ತಿಂಗಳಿಗೆ ಮಗುವನ್ನು ಪಡೆದ ಕಾರಣಕ್ಕಾಗಿ ಅನುಮಾನ ಕೂಡ ಮೂಡಿತ್ತು. ಈಗ ಎಲ್ಲದಕ್ಕೂ ಉತ್ತರ ಸಿಕ್ಕಿದ್ದು, ಕುತೂಹಲ ಮೂಡಿಸುವಂತ ವರದಿಯನ್ನೇ ಕೊಟ್ಟಿದೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಚೆನ್ನೈನ ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವರನ್ನು ತನಿಖಾ ತಂಡ ವಿಚಾರಣೆ ನಡೆಸಿದೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಂದಷ್ಟು ಅಚ್ಚರಿಯ ಮಾಹಿತಿಯನ್ನೂ ಸರಕಾರಕ್ಕೆ ನೀಡಿದ್ದಾರೆ. ಬಾಡಿಗೆ ತಾಯಿಗೂ ಕೂಡ ಮದುವೆ ಆಗಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೇ, 2021ರ ಆಗಸ್ಟ್ ನಲ್ಲಿ ಸರೋಗಸಿ ಪ್ರಕ್ರಿಯೆ ಒಪ್ಪಂದ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ನಯನತಾರಾ ಅವರ ಫ್ಯಾಮಿಲಿ ಡಾಕ್ಟರ್ ವಿದೇಶದಲ್ಲಿ ಇರುವುದರಿಂದ ಅವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ತಿಳಿಸಿದೆ.

    ಮತ್ತೊಂದು ಅಚ್ಚರಿಯ ಸಂಗತಿ ಎಂದರೆ, ನಯನತಾರಾ ಮತ್ತು ವಿಘ್ನೇಶ್ ಶಿವನ್ 2016 ಮಾರ್ಚ್ 11 ರಂದು ಮದುವೆ ಆಗಿರುವುದಾಗಿ ಅಫಿಡವಿಟ್ ನಲ್ಲಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. 2022 ಜೂನ್ 9 ರಂದು ಸಾರ್ವಜನಿಕವಾಗಿ ಈ ಜೋಡಿ ಮದುವೆ ಆಗಿತ್ತು. ಮದುವೆ ವಿಚಾರ ಕೂಡ ಇದೀಗ ಭಾರೀ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಯನತಾರಾಗೆ ಬಾಡಿಗೆ ತಾಯಿ ಸಂಕಷ್ಟ: ಕೊನೆಗೂ ಮೌನ ಮುರಿದ ವಿಘ್ನೇಶ್ ಶಿವನ್

    ನಯನತಾರಾಗೆ ಬಾಡಿಗೆ ತಾಯಿ ಸಂಕಷ್ಟ: ಕೊನೆಗೂ ಮೌನ ಮುರಿದ ವಿಘ್ನೇಶ್ ಶಿವನ್

    ಬಾಡಿಗೆ ತಾಯಿ (Surrogate Mother) ಮೂಲಕ ಅವಳಿ ಮಕ್ಕಳ ಪೋಷಕರಾಗಿರುವ  ನಟಿ ನಯನತಾರಾ (Nayantara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್, ಮಕ್ಕಳೊಂದಿಗೆ ನೆಮ್ಮದಿಯಾಗಿ ಇರಬೇಕು ಎನ್ನುವ ಹೊತ್ತಿನಲ್ಲಿ ಸಂಕಟವೊಂದು ಎದುರಾಗಿದೆ. ಬಾಡಿಗೆ ತಾಯಿಯ ಮೂಲಕ ಮಗುವನ್ನು ಪಡೆದುಕೊಳ್ಳಲು ಕೆಲ ನಿಯಮಗಳಿಗೆ. ಅವುಗಳನ್ನು ಪಾಲಿಸದೇ ಮಕ್ಕಳನ್ನು ಪಡೆದಿದ್ದಾರೆ ಎನ್ನುವ ಆರೋಪ (Allegation) ಇವರ ಮೇಲಿದೆ.

    ನಯನತಾರಾ ಮತ್ತು ವಿಘ್ನೇಶ್ ಶಿವನ್ (Vignesh Sivan) ಬಾಡಿಗೆ ತಾಯಿಯ ಮೂಲಕ ಮಕ್ಕಳನ್ನು ಪಡೆಯುವಾಗ ನಿಯಮಗಳನ್ನು ಪಾಲಿಸಿಲ್ಲ ಎನ್ನುವ ಕಾರಣದಿಂದಾಗಿ ತಮಿಳು ನಾಡು ಸರಕಾರ ನೋಟಿಸ್ ನೀಡಿದೆ ಮತ್ತು ವಿಚಾರಣೆ ನಡೆಸುತ್ತಿದೆ. ಈ ಹೊತ್ತಿನಲ್ಲಿ ನಯನತಾರಾ ಅಥವಾ ವಿಘ್ನೇಶ್ ಪ್ರಕರಣದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಪ್ರಥಮ ಬಾರಿಗೆ ಮೌನ ಮುರಿದಿರುವ ವಿಘ್ನೇಶ್ ತಮ್ಮ ಇನ್ಸ್ಟಾದಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಇನ್ಸ್ಟಾದ ಸ್ಟೋರಿಯಲ್ಲಿ ಕೆಲವು ಸಾಲುಗಳನ್ನು ಬರೆದಿರುವ ವಿಘ್ನೇಶ್ ಶಿವನ್, ‘ನಿನ್ನ ಸುತ್ತಮುತ್ತಲಿನವರನ್ನು ಗಮನಿಸು. ನಿನಗೆ ಒಳ್ಳೆಯದನ್ನು ಬಯಸುವವರು ಮಾತ್ರ ನಿನ್ನವರು. ನಿನ್ನ ಜೊತೆಗಿದ್ದು, ನಿನ್ನ ಕ್ಷೇಮ ಬಯಸುವವರನ್ನು ನಂಬು. ಇದೇ ವಾಸ್ತವ’ ಎಂದು ಬರೆದುಕೊಂಡಿದ್ದಾರೆ. ಹಾಗಾದರೆ, ಇವರ ಜೊತೆಗಿದ್ದು ಇವರ ಕ್ಷೇಮ ಬಯಸದಂತಹ ವ್ಯಕ್ತಿಗಳು ಇದ್ದಾರಾ ಎನ್ನುವ ಅನುಮಾನವನ್ನು ಇದು ಹುಟ್ಟು ಹಾಕಿದೆ.

    ಮತ್ತೊಂದು ಸ್ಟೋರಿಯಲ್ಲಿ ‘ಸಮಯವು ಎಲ್ಲವನ್ನೂ ಹೇಳುತ್ತದೆ. ಅಲ್ಲಿವರೆಗೂ ಸಹನೆಯಿಂದ ಕಾಯಬೇಕು’ ಎಂದು ಬರೆದಿದ್ದಾರೆ. ಅಂದರೆ, ಈ ಘಟನೆಯು ಪರೋಕ್ಷವಾಗಿ  ತಮ್ಮನ್ನು ಬಾಧಿಸುತ್ತದೆ ಎನ್ನುವುದನ್ನು ಸೂಕ್ಷ್ಮವಾಗಿಯೇ ಹೇಳಿಕೊಂಡಿದ್ದಾರೆ. ತಾವು ನಿಯಮದಂತೆಯೇ ಮಕ್ಕಳನ್ನು ಪಡೆದಿರುವ ಕುರಿತಾಗಿಯೂ ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು (Tamil Nadu) ಸರಕಾರ ಶಾಕ್ ಮೂಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಕೇಳಿದೆ.

    ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ (Vignesh Sivan) ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ (Government) ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.

    ಬಾಡಿಗೆ ತಾಯಿಯಿಂದ (Surrogate Mother) ಮಗು ಪಡೆಯಲು ಇವೆಲ್ಲ ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ, ನಯನ ದಂಪತಿ ಇವುಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ (Investigation) ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಶಾಕ್ ಮೂಡಿಸಿದೆ. ಇದನ್ನೂ ಓದಿ:ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು.

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮದುವೆಯಾಗಿ 4 ತಿಂಗ್ಳು: ಅವಳಿ ಮಕ್ಕಳ ತಾಯಿಯಾದ ನಯನತಾರಾ ಟ್ರೋಲ್

    ಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ (Nayantara) ಮೂರ್ನಾಲ್ಕು ತಿಂಗಳ ಹಿದೆಯಷ್ಟೇ ಮದುವೆ ಆಗಿದ್ದಾರೆ. ಮದುವೆ ಆಗಿ ನಾಲ್ಕೇ ತಿಂಗಳಿಗೆ ತಾವು ಜವಳಿ ಮಕ್ಕಳ ಪಾಲಕರಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎರಡೂ ಮಕ್ಕಳ ಕಾಲುಗಳ ಫೋಟೋವನ್ನು ಅಪ್ ಲೋಡ್ ಮಾಡಿ, ಟ್ರೋಲ್ ಗೆ ಗುರಿಯಾಗಿದ್ದಾರೆ.

    ಬಾಡಿಗೆ ತಾಯಿ (Surrogate mother) ಮೂಲಕ ಜವಳಿ (twins) ಮಕ್ಕಳಿಗೆ ತಾವು ತಾಯಿ ಆಗಿದ್ದೇನೆ ಎಂದು ನಯನತಾರಾ ಘೋಷಿಸುತ್ತಿದ್ದಂತೆಯೇ ಶುಭ ಹಾರೈಸಿದ್ದವರಿಗಿಂತ ನೆಗೆಟಿವ್ ಕಾಮೆಂಟ್ ಮಾಡಿದವರೇ ಹೆಚ್ಚಾಗಿದ್ದಾರೆ. ಕೆಲವರು ತಾಯ್ತನದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ಅನೇಕರು ಮನೆಗೆ ಬರುತ್ತಿರುವ ಹೊಸ ಅತಿಥಿಗೆ ಶುಭ ಹಾರೈಸಿದ್ದಾರೆ. ಎರಡೂ ಮಕ್ಕಳು ನಿಮ್ಮಂತೆಯೇ ಸಿನಿಮಾ ರಂಗದಲ್ಲೇ ಮುಂದುವರೆಯಲಿ ಎಂದು ಕಾಮೆಂಟ್ ಮಾಡಿದ್ದಾರೆ.

    ಮದುವೆಯಾದ 4 ತಿಂಗಳಿಗೆ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan), ನಟಿ ನಯನತಾರಾ ದಂಪತಿ ಅಭಿಮಾನಿಗಳಿಗಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಯನತಾರ ಅವಳಿ ಮಕ್ಕಳ ತಾಯಿ ಎಂದು ಇನ್ಸ್ಟಾದಲ್ಲಿ ದಂಪತಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರೇ, ಮದುವೆಯಾದ 4 ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವವರಿಗೆ ಉತ್ತರವನ್ನೂ ಕೊಟ್ಟಿರುವ ದಂಪತಿ, ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪಾಲಕರಾಗಿದ್ದಾರೆ ಈ ಜೋಡಿ.

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    ಇತ್ತೀಚೆಗಷ್ಟೇ ಈ ದಂಪತಿ ಹನಿಮೂನ್ ಗೆ ಹೋದಾಗಲೂ ಮಗುವಿನ ಪಾದಗಳಿರುವ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆಗಲೂ ಕೂಡ ಅಷ್ಟೇ ಕುತೂಹಲಕ್ಕೆ ಕಾರಣವಾಗಿತ್ತು ಆ ಪೋಸ್ಟ್. ಇದೀಗ ಅದು ಕೂಡ ನಿಜವಾಗಿದೆ. ಅಭಿಮಾನಿಗಳು ಮತ್ತು ಆಪ್ತರು ಈ ಜೋಡಿಗೆ ಶುಭಾಶಯ ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಯನತಾರಾ ಮದುವೆ ವಿಡಿಯೋ ನೋಡ್ಬೇಕಾ, ಹಾಗಾದರೆ ದುಡ್ಡು ಕೊಡಲೇಬೇಕು

    ನಯನತಾರಾ ಮದುವೆ ವಿಡಿಯೋ ನೋಡ್ಬೇಕಾ, ಹಾಗಾದರೆ ದುಡ್ಡು ಕೊಡಲೇಬೇಕು

    ಕೆಲ ತಿಂಗಳ ಹಿಂದೆಯಷ್ಟೇ ಮದುವೆಯಾಗಿರುವ ತಮಿಳಿನ ಖ್ಯಾತ ನಟಿ ನಯನತಾರಾ (Nayantara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಮದುವೆ ವಿಡಿಯೋ ನೋಡಬೇಕಾದರೆ, ಓಟಿಟಿಗೆ ಸಬ್ ಸ್ಕ್ರೈಬ್ ಆಗಿರಲೇಬೇಕು. ಇಲ್ಲದಿದ್ದರೆ ಆ ವಿಡಿಯೋವನ್ನು ಖಂಡಿತಾ ನೋಡಲು ಸಾಧ್ಯವಿಲ್ಲ. ಈ ಜೋಡಿಯ ಮದುವೆ ವಿಡಿಯೋವನ್ನು ಎಕ್ಸ್ ಕ್ಲೂಸಿವ್ ಆಗಿ ನೆಟ್ ‍ಫ್ಲಿಕ್ಸ್ ಖರೀದಿಸಿದ್ದು, ಹಾಗಾಗಿ ಆಚೆ ನೋಡುವುದಕ್ಕೆ ವಿಡಿಯೋ ಲಭ್ಯವಿರುವುದಿಲ್ಲ.

    ತಮಿಳಿನ ಖ್ಯಾತ ಜೋಡಿಯ ಮದುವೆ (Wedding) ಇದಾಗಿದ್ದರಿಂದ ನೆಟ್ ಫ್ಲಿಕ್ಸ್ ಭಾರೀ ಮೊತ್ತ ಕೊಟ್ಟು ಮದುವೆ ವಿಡಿಯೋವನ್ನು ಖರೀದಿಸಿತ್ತು. ಈ ಮದುವೆ ವಿಡಿಯೋವನ್ನು ಶೂಟ್ ಮಾಡುವುದಕ್ಕಾಗಿಯೇ ತಂಡವನ್ನು ರಚನೆ ಮಾಡಿತ್ತು. ಫೋಟೋ ಹೊರತಾಗಿ ಒಂದೇ ಒಂದು ವಿಡಿಯೋ ತುಣುಕು ಆಚೆ ಬರಕೂಡದು ಎಂದು ತಾಕೀತು ಮಾಡಿತ್ತು. ಹಾಗಾಗಿ ಫೋಟೋ ಹೊರತಾಗಿ ಯಾವುದೇ ವಿಡಿಯೋ (Video) ನೋಡುವುದಕ್ಕೆ ಸಿಕ್ಕಿರಲಿಲ್ಲ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ?

    ಸದ್ಯ ಓಟಿಟಿಯಲ್ಲಿ ಮದುವೆ ಟೀಸರ್ ರಿಲೀಸ್ ಮಾಡಿದ್ದು, ಸದ್ಯದಲ್ಲೇ ವಿಡಿಯೋ ಕಂತುಗಳನ್ನು ರಿಲೀಸ್ ಮಾಡುವುದಾಗಿ ಓಟಿಟಿ ಹೇಳಿಕೊಂಡಿದೆ. ಮದುವೆ ಮುನ್ನ ಕ್ಷಣಗಳು ಮತ್ತು ಮದುವೆಯ ಅಷ್ಟೂ ಕ್ಷಣಗಳನ್ನು ಸೆರೆ ಹಿಡಿಯಲಾಗಿದೆ ಅಂತೆ. ಅಲ್ಲದೇ, ತಮ್ಮ ಮದುವೆಯ ಕುರಿತು ನಯನಾ ತಾರಾ ಮತ್ತು ವಿಘ್ನೇಶ್ ಶಿವನ್ (Vignesh Shivan) ಅಪರೂಪದ ಕ್ಷಣಗಳನ್ನೂ ಹಂಚಿಕೊಂಡಿದ್ದಾರಂತೆ. ಅವು ಕೂಡ ಓಟಿಟಿಯಲ್ಲಿ ಮಾತ್ರ ನೋಡಬಹುದಂತೆ.

    Live Tv
    [brid partner=56869869 player=32851 video=960834 autoplay=true]

  • ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ

    ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ

    ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ಸ್ಪೇನ್‌ನ ಬಾರ್ಸಿಲೋನಗೆ ಹಾರಿದ್ದಾರೆ. ಬಾರ್ಸಿಲೋನದ ಬೀದಿ ಬೀದಿಗಳಲ್ಲಿ ನಯನತಾರಾ ದಂಪತಿ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

     

    View this post on Instagram

     

    A post shared by Vignesh Shivan (@wikkiofficial)

    ನಯನತಾರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 2 ತಿಂಗಳು ಕಳೆದಿದೆ. ಸಿನಿಮಾಗಳ ಜೊತೆಗೆ ವೈಯಕ್ತಿಕ ಜೀವನದತ್ತ ಗಮನ ನೀಡುತ್ತಿರುವ ನಯನತಾರಾ ಸದ್ಯ ಪತಿಯ ಜತೆ ಸ್ಪೇನ್‌ಗೆ ಹಾರಿದ್ದಾರೆ. ಬಾರ್ಸಿಲೋನದ ಸುಂದರ ಪ್ರದೇಶಗಳಿಗೆ ನಯನತಾರಾ ದಂಪತಿ ಸುತ್ತಾಡುತ್ತಿದ್ದಾರೆ. ಇದನ್ನೂ ಓದಿ:ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

     

    View this post on Instagram

     

    A post shared by Vignesh Shivan (@wikkiofficial)

    ಈ ವರ್ಷ ಜೂನ್ 9ರಂದು ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಹನಿಮೂನ್‌ಗಾಗಿ ಥೈಲ್ಯಾಂಡ್‌ಗೆ ಹಾರಿದ್ದರು. ಬಳಿಕ ಶಾರುಖ್ ಖಾನ್ ನಟನೆಯ `ಜವಾನ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈಗ ಬಾರ್ಸಿಲೋನದಲ್ಲಿ ನಯನತಾರಾ ದಂಪತಿ ಪ್ರವಾಸವನ್ನ ಏಂಜಾಯ್ ಮಾಡ್ತಿದ್ದಾರೆ.

    Live Tv

  • ನಯನತಾರಾ ಹೆಸರು ನನ್ನ ಟಾಪ್ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಚ್ಚರಿ ಮೂಡಿಸಿದ ಕರಣ್ ಜೋಹರ್

    ನಯನತಾರಾ ಹೆಸರು ನನ್ನ ಟಾಪ್ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಚ್ಚರಿ ಮೂಡಿಸಿದ ಕರಣ್ ಜೋಹರ್

    ರಣ್ ಜೋಹಾರ್ ವಿರುದ್ಧ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿಮಾನಿಗಳು ಗರಂ ಆಗಿದ್ದರು. ಕರಣ್ ಕುರಿತು ಅಭಿಮಾನಿಗಳು ಕೆಟ್ಟದ್ದಾಗಿಯೇ ಕಾಮೆಂಟ್ ಮಾಡುತ್ತಿದ್ದರು. ಕರಣ್ ಜೋಹರ್ ವ್ಯಕ್ತಿತ್ವದ ಬಗ್ಗೆಯೂ ಅವಹೇಳನ ಮಾಡುವಂತಹ ಕೆಲಸಗಳು ನಡೆದವು. ಕಾರಣ, ಕರಣ್ ಜೋಹರ್ ತನ್ನ ಶೋನಲ್ಲಿ ನಯನತಾರಾ ಅವರಿಗೆ ಅವಮಾನ ಮಾಡಿದ್ದಾರೆ ಎನ್ನುವುದಾಗಿತ್ತು.

    ಕರಣ್ ಜೋಹರ್ ಶೋನಲ್ಲಿ ನಯನತಾರಾ ಅವರ ಹೃದಯದ ಗೆಳತಿ ಸಮಂತಾ ಭಾಗಿಯಾಗಿದ್ದರು. ಆಗ ಕರಣ್, ‘ದಕ್ಷಿಣದ ಟಾಪ್ ತಾರೆ ಯಾರು?’ ಎನ್ನುವ ಪ್ರಶ್ನೆಯನ್ನು ಸಮಂತಾಗೆ ಕೇಳುತ್ತಾರೆ. ಕ್ಷಣವೂ ಯೋಚಿಸದೇ ನಯನತಾರಾ ಹೆಸರು ಹೇಳುತ್ತಾರೆ ಸಮಂತಾ. ಆಗ ಕರಣ್, ಇವರ ಹೆಸರು ನನ್ನ ಪಟ್ಟಿಯಲ್ಲಿ ಇಲ್ಲ ಎಂದು ಹೇಳುತ್ತಾರೆ. ಈ ಮಾತೇ ನಯನತಾರಾ ಅಭಿಮಾನಿಗಳನ್ನು ಕೆರಳಿಸಿತ್ತು. ಹಾಗಾಗಿ ಕರಣ್ ಮತ್ತು ಅವರ ಶೋಗಳನ್ನು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದರು. ಇದನ್ನೂ ಓದಿ:ಟೈಗರ್ ಶ್ರಾಫ್ ಪ್ರೀತಿಯ ಬಗ್ಗೆ ಮೌನ ಮುರಿದ ಜಾಕಿ ಶ್ರಾಫ್

    ಈ ವಿವಾದಕ್ಕೆ ಸಂಬಂಧಪಟ್ಟಂತೆ ಕರಣ್ ಸ್ಪಷ್ಟನೆ ನೀಡಿದ್ದು, ನಾನು ನಯನತಾರಾ ಅವರಿಗೆ ಅವಮಾನ ಮಾಡಿಲ್ಲ. ನಾನು ಕೇಳಿದ ಪ್ರಶ್ನೆಗೆ ನನ್ನ ಪಟ್ಟಿಯಲ್ಲಿ ಆ ಉತ್ತರವಿರಲಿಲ್ಲ. ಅಲ್ಲದೇ, ಅವರು ಟಾಪ್ ಅನ್ನುವುದನ್ನು ಯಾವುದೇ ಸಂಸ್ಥೆ ಕೂಡ ಅಧಿಕೃತ ಮಾಡಿರಲಿಲ್ಲ. ಹೀಗಾಗಿ ನಾನು ಹಾಗೆ ಮಾತನಾಡಬೇಕಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೂ, ನಯನತಾರಾ ಅಭಿಮಾನಿಗಳು ಮಾತ್ರ ಟ್ರೋಲ್ ಮಾಡುವುದನ್ನು ನಿಲ್ಲಿಸಿಲ್ಲ.

    Live Tv
    [brid partner=56869869 player=32851 video=960834 autoplay=true]

  • ನಯನತಾರಾ ದಂಪತಿಯನ್ನು ಭೇಟಿಯಾದ ಮಲೈಕಾ ಅರೋರಾ: ಫೋಟೋ ವೈರಲ್

    ನಯನತಾರಾ ದಂಪತಿಯನ್ನು ಭೇಟಿಯಾದ ಮಲೈಕಾ ಅರೋರಾ: ಫೋಟೋ ವೈರಲ್

    ಕಾಲಿವುಡ್ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಸದ್ಯ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ. `ಜವಾನ್’ ಸಿನಿಮಾದ ಚಿತ್ರೀಕರಣದಲ್ಲಿ ನಯನತಾರಾ ಬ್ಯುಸಿಯಾಗಿದ್ದಾರೆ. ಮುಂಬೈನ ಖಾಸಗಿ ರೆಸ್ಟೋರೆಂಟ್‌ವೊಂದರಲ್ಲಿ ಮಲೈಕಾ ಅರೋರಾ ಅವರನ್ನ ಭೇಟಿಯಾಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಬಾಲಿವುಡ್ ಬ್ಯೂಟಿ ಮಲೈಕಾ ಅರೋರಾ ಅಚಾನಕ್ ಆಗಿ ಮುಂಬೈನ ರೆಸ್ಟೋರೆಂಟ್‌ವೊಂದರಲ್ಲಿ ನವದಂಪತಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರನ್ನ ಭೇಟಿಯಾಗಿದ್ದಾರೆ. ಈ ವೇಳೆ ನವದಂಪತಿಗೆ ಹೊಸ ಬಾಳಿಗೆ ಮಲೈಕಾ ಶುಭಹಾರೈಸಿದ್ದಾರೆ. ಈ ಕ್ಷಣದ ಫೋಟೋವನ್ನ ಕ್ಲಿಕ್ಕಿಸಿಕೊಂಡು ಮಲೈಕಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ಶುಭಹಾರೈಸಿದ್ದಾರೆ. ಈ ಭೇಟಿ ಖುಷಿ ಕೊಟ್ಟಿದೆ ಎಂದು ಬರೆದುಕೊಂಡಿದ್ದಾರೆ. ಫೋಟೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ತೆಲುಗು ನಟ ತ್ರಿಗುಣ್ ಪಾದಾರ್ಪಣೆ

    ಸದ್ಯ ನಯನತಾರಾ, `ಜವಾನ್’ ಚಿತ್ರದಲ್ಲಿ ಶಾರುಖ್ ಖಾನ್‌ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಅಟ್ಲಿ ನಿರ್ದೇಶನದಲ್ಲಿ ಸಿನಿಮಾ ಭರದಿಂದ ಚಿತ್ರೀಕರಣ ಸಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮೊದಲ ತಿಂಗಳ ವಿವಾಹ ಸಂಭ್ರಮ ಆಚರಿಸಿಕೊಂಡ ನಯನತಾರಾ ಮತ್ತು ವಿಘ್ನೇಶ್ ಶಿವನ್

    ಮೊದಲ ತಿಂಗಳ ವಿವಾಹ ಸಂಭ್ರಮ ಆಚರಿಸಿಕೊಂಡ ನಯನತಾರಾ ಮತ್ತು ವಿಘ್ನೇಶ್ ಶಿವನ್

    ಮಿಳು ಸಿನಿಮಾ ರಂಗ ಖ್ಯಾತ ಜೋಡಿ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯಾಗಿ ಇಂದಿಗೆ ಒಂದು ತಿಂಗಳ ಕಳೆಯಿತು. ಹಾಗಾಗಿ ನಯನತಾರಾ ಆ ದಿನವನ್ನು ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ. ಇನ್ಸ್ಟಾದಲ್ಲಿ ರಜನಿಕಾಂತ್ ಮತ್ತು ಶಾರುಖ್ ಖಾನ್ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿರುವ ನಯನತಾರಾ ಮೊದಲ ತಿಂಗಳ ವಿವಾಹ ಸಂಭ್ರಮವನ್ನು ನೆನಪಿಸಿಕೊಂಡಿದ್ದಾರೆ.

    ನಯನತಾರಾ ಮತ್ತು ವಿಘೇಶ್ ಶಿವನ್ ಮದುವೆಗೆ ದಕ್ಷಿಣದ ಹಲವು ತಾರೆಯರು ಮತ್ತು ಬಾಲಿವುಡ್ ನ ಶಾರುಖ್ ಖಾನ್ ಹಲವು ಗಣ್ಯರು ಆಗಮಿಸಿದ್ದರು. ಅದರಲ್ಲೂ ನಯನತಾರಾ ತುಂಬಾ ಇಷ್ಟ ಪಡುವಂತಹ ರಜನಿಕಾಂತ್ ಮದುವೆಗೆ ಬಂದಿದ್ದು, ಅವರಿಗೆ ಎಲ್ಲಿಲ್ಲದ ಸಂಭ್ರಮಕ್ಕೆ ಕಾರಣವಾಗಿತ್ತು. ಹಾಗಾಗಿ ಈ ಫೋಟೋವನ್ನೇ ಪ್ರಮುಖವಾಗಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ ನಯನತಾರಾ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆಗೂ ಮುನ್ನ ಜೊತೆಯಲ್ಲೇ ವಾಸವಿದ್ದರು ಎನ್ನಲಾಗುತ್ತಿದೆ. ಹಾಗಾಗಿ ಈ ಜೋಡಿಯ ಮದುವೆ ಯಾವಾಗ ನಡೆಯಲಿದೆ ಎನ್ನುವ ಪ್ರಶ್ನೆ ಸದಾ ಕೇಳಿ ಬರುತ್ತಿತ್ತು. ಅದಕ್ಕೆ ಉತ್ತರ ಎನ್ನುವಂತೆ ಜೂನ್ 09ರಂದು ಈ ಜೋಡಿ ಚೆನ್ನೈನಲ್ಲಿ ಸಪ್ತಪದಿ ತುಳಿದಿದ್ದರು. ಈಗ  ಆ ದಿನವನ್ನು ನೆನಪಿಸಿಕೊಂಡಿದೆ ಜೋಡಿ.

    Live Tv
    [brid partner=56869869 player=32851 video=960834 autoplay=true]