Tag: Nayantara

  • ಹನಿಮೂನ್ ಗಿಂತ ಶೂಟಿಂಗ್ ಮುಖ್ಯ ಅಂದ ನಯನತಾರಾ: ಜವಾನ್ ಶೂಟಿಂಗ್ ನಲ್ಲಿ ಭಾಗಿ

    ಹನಿಮೂನ್ ಗಿಂತ ಶೂಟಿಂಗ್ ಮುಖ್ಯ ಅಂದ ನಯನತಾರಾ: ಜವಾನ್ ಶೂಟಿಂಗ್ ನಲ್ಲಿ ಭಾಗಿ

    ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಮೊನ್ನೆಯಷ್ಟೇ ಸಪ್ತಪದಿ ತುಳಿದಿರುವ ಲೇಡಿ ಸೂಪರ್ ಸ್ಟಾರ್ ನಯನತಾರಾ ಹನಿಮೂನ್ ಗಿಂತಲೂ ನಂಬಿಕೊಂಡಿರುವ ಕೆಲಸವೇ ಮುಖ್ಯ ಎಂದುಕೊಂಡು ಮದುವೆಯಾದ ಒಂದೇ ವಾರಕ್ಕೆ ಶೂಟಿಂಗ್ ಗೆ ಮರಳಿದ್ದಾರೆ. ಸದ್ಯ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರಂತೆ. ಇದನ್ನೂ ಓದಿ: ವಿಕ್ರಾಂತ್ ರೋಣ ಸಿನಿಮಾದ ಟ್ರೈಲರ್, ಯಾವ ಭಾಷೆಯಲ್ಲಿ ಯಾರು ರಿಲೀಸ್?

    ಮದುವೆಯ ನಂತರ ತಿರುಪತಿ ಸೇರಿದಂತೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಆಶೀರ್ವಾದ ಪಡೆದುಕೊಂಡಿದ್ದ ದಂಪತಿಗಳು, ಆ ನಂತರ ಹನಿಮೂನ್ಗೆ ಹೋಗಲಿದ್ದಾರೆ ಎನ್ನಲಾಗಿತ್ತು. ಆದರೆ, ಮದುವೆ ಕಾರಣದಿಂದಾಗಿ ಶೂಟಿಂಗ್ ಸ್ಥಗಿತಗೊಂಡಿದ್ದರಿಂದ ಜವಾನ್ ಸಿನಿಮಾದ ಚಿತ್ರೀಕರಣದಲ್ಲಿ ನಯನತಾರಾ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಸಿನಿಮಾದ ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

    ಶಾರುಖ್ ಖಾನ್ ಮತ್ತು ನಯನತಾರಾ ಕಾಂಬಿನೇಷನ್ ನ ಜವಾನ್ ಸಿನಿಮಾದಲ್ಲಿ ವಿಶೇಷ ಕಥೆಯೊಂದನ್ನು ಹೆಣೆದಿದ್ದಾರಂತೆ ನಿರ್ದೇಶಕ ಅಟ್ಲಿ. ಈಗಾಗಲೇ ಒಂದು ಹಂತದ ಶೂಟಿಂಗ್ ಕೂಡ ಮುಗಿದಿದ್ದು, ನಯನತಾರಾ ಮದುವೆಗಾಗಿ ತಾತ್ಕಾಲಿಕವಾಗಿ ಶೂಟಿಂಗ್ ನಿಲ್ಲಿಸಿದ್ದರಂತೆ. ಇದೀಗ ಮತ್ತೊಂದು ಹಂತದ ಚಿತ್ರೀಕರಣವನ್ನು ಶುರು ಮಾಡಿದ್ದಾರಂತೆ. ಮದುವೆಯ ನಂತರ ತಾವು ಒಪ್ಪಿಕೊಳ್ಳಲಿರುವ ಸಿನಿಮಾಗಳಲ್ಲಿ ಕೆಲವು ಮಾರ್ಪಾಟು ಮಾಡಿಕೊಂಡಿರುವ ನಯನತಾರಾ, ಈ ಸಿನಿಮಾದಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರಂತೆ. ಇದನ್ನೂ ಓದಿ:ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?

    ಮದುವೆಯ ನಂತರ ಅರೆಬರೆ ಬಟ್ಟೆ ಹಾಕುವಂತಹ ಪಾತ್ರಗಳನ್ನು ಮತ್ತು ಡಬಲ್ ಮೀನಿಂಗ್ ಹೇಳುವಂತಹ ಡೈಲಾಗ್ ಗಳನ್ನು ಹೇಳುವುದಿಲ್ಲ ಎಂದು ಈಗಾಗಲೇ ನಯನತಾರಾ ಡಿಸೈಡ್ ಮಾಡಿಕೊಂಡಿದ್ದಾರಂತೆ. ಅಲ್ಲದೇ,. ಕುಟುಂಬ ಸಮೇತ ನೋಡುವಂತಹ ಸಿನಿಮಾ ಅಥವಾ ಪಾತ್ರಗಳು ಇದ್ದರೆ ಮಾತ್ರ ತಾವು ಅಂತಹ ಸಿನಿಮಾಗಳಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ. ಹಾಗಾಗಿ ರಿಯಲ್ ನಯನತಾರಾ ಅವರನ್ನು ಜವಾನ್ ಸಿನಿಮಾದಲ್ಲಿ ನೋಡಬಹುದಾಗಿದೆ.

    Live Tv

  • ಇಂದಿನಿಂದ ಕಾನ್ ಚಿತ್ರೋತ್ಸವ : ರಂಗಾಗಿದೆ ರೆಟ್ ಕಾರ್ಪೆಟ್

    ಇಂದಿನಿಂದ ಕಾನ್ ಚಿತ್ರೋತ್ಸವ : ರಂಗಾಗಿದೆ ರೆಟ್ ಕಾರ್ಪೆಟ್

    ಇಂದಿನಿಂದ ವಿಶ್ವದ ಪ್ರತಿಷ್ಠಿತ ಸಿನಿಮೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ ಶುರುವಾಗಲಿದೆ. ಇಂದು ಸಂಜೆ 7 ಗಂಟೆಯಿಂದ ಶುರುವಾಗುವ ಕ್ಯಾನ್ ಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್ ಮೇಲೆ ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆಯರು ಹೆಜ್ಜೆ ಹಾಕಲಿದ್ದು, ಈಗಾಗಲೇ ಫ್ರಾನ್ಸ್ ನ ಕಾನ್ ನಗರದ ಫ್ರೆಂಚ್ ರಿವೇರಿಯಾಗೆ ಈ ತಾರೆಯರು ಬಂದಿಳಿದಿದ್ದಾರೆ.

    ಮೇ 17 ರಿಂದ ಮೇ 28ರವರೆಗೆ ನಡೆಯಲಿರುವ ಕಾನ್ ಸಿನಿಮೋತ್ಸವವು ವಿಶ್ವದ ನಾನಾ ಸಿನಿಮಾ ರಂಗವನ್ನು ಒಟ್ಟಾಗಿಸುವುದು ಫೆಸ್ಟಿವೆಲ್ ನ ವಿಶೇಷ. ಒಟ್ಟು 12 ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಸಿನಿ ಜಗತ್ತಿನ ಅನೇ ಗಣ್ಯರು ಭಾಗಿಯಾಗಲಿದ್ದು, ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರು ಉಪಸ್ಥಿತರಿರಲಿದ್ದಾರೆ. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

    ಕಳೆದ ಎರಡು ವರ್ಷಗಳಿಂದ ಕೊರೋನಾ ಕರಿನೆರಳಿನಿಂದಾಗಿ ಚಿತ್ರೋತ್ಸವ ಅಷ್ಟೇನೂ ಅದ್ಧೂರಿಯಾಗಿ ನಡೆದಿರಲಿಲ್ಲ. 2020ರಲ್ಲಿ ಚಿತ್ರೋತ್ಸವವನ್ನೇ ರದ್ದುಗೊಳಿಸಿದ್ದರೆ, 2021ರಲ್ಲಿ ಸೀಮಿತ ಮಾದರಿಯಲ್ಲಿ ಮಾತ್ರ ಚಿತ್ರೋತ್ಸವ ನಡೆಸಿದ್ದರು. ಈ ವರ್ಷ ಪ್ರತಿ ಸಲದಂತೆ ರಂಗುರಂಗಾಗಿ ಆಯೋಜಿಸಲಾಗಿದೆ. ರೆಡ್ ಕಾರ್ಪೆಟ್ ಸೇರಿದಂತೆ ಸಿನಿಮಾ ಪ್ರದರ್ಶನ, ಸೆಮಿನಾರ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಸಾಕಷ್ಟು ಸಲ ಕೇವಲ ಬಾಲಿವುಡ್ ಸಿಲೆಬ್ರಿಟಿಗಳಿಗೆ ಮಾತ್ರ ಕಾನ್ ನಲ್ಲಿ ಅವಕಾಶ ಸಿಗುತ್ತಿತ್ತು. ಈ ಬಾರಿ ದಕ್ಷಿಣದ ಅನೇಕ ತಾರೆಯರು ಈ ಚಿತ್ರೋತ್ಸವದಲ್ಲಿ ಭಾಗಿ ಆಗುತ್ತಿರುವುದು ವಿಶೇಷ. ಪೂಜಾ ಹೆಗ್ಡೆ, ನಯನತಾರಾ, ತಮನ್ನಾ ಭಾಟಿಯಾ, ಮಾಧವನ್, ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್, ನವಾಜುದ್ದೀನ್ ಸಿದ್ಧಿಖಿ, ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಹೀಗೆ ಅನೇಕ ಕಲಾವಿದರು ಭಾಗಿಯಾಗಲು ಈಗಾಗಲೇ ಫ್ರಾನ್ಸ್ ಗೆ ಹೋಗಿದ್ದಾರೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    ಅದರಲ್ಲೂ ಈ ಬಾರಿಯ ಕಾನ್ಸ್ ಫೆಸ್ಟಿವೆಲ್ ನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಾನ್ ಚಿತ್ರೋತ್ಸವದ ಜ್ಯೂರಿಯಾಗಿ ಆಯ್ಕೆಯಾಗಿದ್ದಾರೆ. ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಯ ಚಿತ್ರಗಳು ಈ ಬಾರಿ ಫೆಸ್ಟಿವೆಲ್ ನಲ್ಲಿ ಪ್ರದರ್ಶನಗೊಳ್ಳಲಿವೆ.

  • ಶಾರೂಖ್, ನಯನ ತಾರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ರಾಣಾ ದಗ್ಗುಬಾಟಿ

    ಶಾರೂಖ್, ನಯನ ತಾರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ರಾಣಾ ದಗ್ಗುಬಾಟಿ

    ಮುಂಬೈ: ಬಾಲಿವುಡ್ ಬಾದ್ ಷಾ ನಟ ಶಾರೂಖ್ ಖಾನ್ ಹಾಗೂ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಹೊಸ ಸಿನಿಮಾ ಸೆಟ್ಟೇರಿದ್ದು, ಈ ಸಿನಿಮಾಕ್ಕೆ ನಟ ರಾಣಾ ದಗುಬಾಟಿ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

    ಪಠಾಣ್ ಸಿನಿಮಾದದಲ್ಲಿ ಶಾರೂಖ್ ಬ್ಯುಸಿಯಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ನಿರ್ದೇಶಕ ಆಟ್ಲಿ ಆ್ಯಕ್ಷನ್ ಕಟ್ ಹೇಳುತ್ತಿರುವ ಇನ್ನೂ ಹೆಸರಿಡದ ಸಿನಿಮಾದ ಚಿತ್ರೀಕರಣದಲ್ಲಿ ಶಾರೂಖ್ ನಿರತರಾಗಿದ್ದು, ಈ ಸಿನಿಮಾದಲ್ಲಿ ಶಾರೂಖ್‍ಗೆ ಜೋಡಿಯಾಗಿ ನಯನತಾರಾ ಕಾಣಿಸಿಕೊಂಡಿಸಿದ್ದಾರೆ. ಈಗಾಗಲೇ ಕಳೆದ 10 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇದೀಗ ಈ ಸಿನಿಮಾದ ಎರಡನೇ ಶೆಡ್ಯೂಲ್‍ಗಾಗಿ ಚಿತ್ರತಂಡ ಮುಂಬೈಗೆ ಹಾರಿದೆ. ಇದನ್ನೂ ಓದಿ: ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್

    ಈ ಎಲ್ಲದರ ಮಧ್ಯೆ ಈ ಸಿನಿಮಾದಲ್ಲಿ ಶಾರೂಕ್‍ಗೆ ಖಳ ನಾಯಕನಾಗಿ ರಾಣಾ ದಗ್ಗುಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಬಹುಬಾಷಾ ನಟಿ ಪ್ರಿಯಮಣಿ, ಸಾನ್ಯಾ ಮಲ್ಹೋತ್ರಾ ಕೂಡ ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಇತ್ತೀಚೆಗಷ್ಟೇ ಪುಣೆಯಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಪ್ರಿಯಾಮಣಿ ಸೆಟ್‍ಗೆ ಭೇಟಿ ನೀಡಿದ್ದು, ಮತ್ತಷ್ಟು ಕೂತುಹಲ ಕೆರಳಿಸಿದೆ. ಇದನ್ನೂ ಓದಿ:ಹಾಸನದಲ್ಲೊಂದು ತ್ರಿಕೋನ ಪ್ರೇಮ ಕಥೆ – ವಿಷ ಸೇವಿಸಿದವಳ ಆಯ್ಕೆ ಬಳಿಕ ಮತ್ತೊಬ್ಬಳು ಕೊಟ್ಟಿದ್ದೇಕೆ ಎಚ್ಚರಿಕೆ.?

    ಒಟ್ಟಾರೆ ಬಾಹುಬಲಿಯಲ್ಲಿ ನೆಗೆಟಿವ್ ರೋಲ್‍ನಲ್ಲಿ ಮಿಂಚಿದ್ದ ರಾಣಾ ದಗ್ಗುಬಾಟಿ ಈ ಸಿನಿಮಾದಲ್ಲಿಯೂ ಶಾರೂಖ್‍ಗೆ ಖಳನಾಯನಾಗಿ ಕಾಣಿಸಿಕೊಳ್ಳಲಿದ್ದಾರಾ ಎಂದು ಕಾದು ನೋಡಬೇಕಾಗಿದೆ.

  • ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

    ನಟೋರಿಯಸ್ ಗ್ಯಾಂಗ್‍ಸ್ಟಾರ್ ಸೆರೆ ಹಿಡಿದ ನಯನತಾರಾ!

    ಪಾಟ್ನಾ: ಪೊಲೀಸರು ತುಂಬಾ ಬುದ್ಧಿವಂತಿಕೆಯಿಂದ ದಕ್ಷಿಣ ಭಾರತದ ಪ್ರಸಿದ್ಧ ನಟಿ ನಯನತಾರಾ ಫೋಟೋ ಬಳಸಿ ನಟೋರಿಯಸ್ ಗ್ಯಾಂಗ್‍ಸ್ಟಾರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿ ಮಹಮ್ಮದ್ ಹಸ್‍ನೈನ್ ನಯನತಾರಾ ಫೋಟೋ ನೋಡಿ ಬಲೆಗೆ ಬಿದ್ದ ಕಳ್ಳ. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ ನಯನತಾರಾ ಅವರಂತೆ ಫೋಸ್ ಕೊಟ್ಟು ಗ್ಯಾಂಗ್‍ಸ್ಟರ್ ನನ್ನು ಚಾಣಾಕ್ಷತೆಯಿಂದ ಬಂಧಿಸಿದ್ದಾರೆ.

    ಬಿಹಾರದ ದರ್ಬಾಂಗ್ ಜಿಲ್ಲೆಯ ಬಿಜೆಪಿ ನಾಯಕ ಸಂಜಯ್ ಕುಮಾರ್ ಮಹಾಟೋ ಮೊಬೈಲ್ ಅನ್ನು ಮೊಹಮ್ಮದ್ ಹಸ್‍ನೈನ್ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಬಿಜೆಪಿ ನಾಯಕ ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ಮಧುಬಾಲಾ ದೇವಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮೊಬೈಲ್‍ನ ಡೇಟಾ ರೆಕಾರ್ಡ್ ಮಾಡಿ ಟ್ರೇಸ್ ಮಾಡಿದಾಗ ಆತ ಇನ್ನೂ ಫೋನ್ ಬಳಸುತ್ತಿರುವ ಸಂಗತಿ ತಿಳಿಯಿತು.

    ಪ್ರೀತಿಸಿ ಬಂಧಿಸಿದ್ರು: ಪೊಲೀಸರು ಆತನನ್ನು ಬಂಧಿಸಲು ಹೋದಾಗ ಹಲವು ಬಾರಿ ಆತ ತಪ್ಪಿಸಿಕೊಂಡ ಹೋಗಿದ್ದ. ಆದ್ದರಿಂದ ಮಧುಬಾಲಾ ಆರೋಪಿ ಬಂಧನಕ್ಕೆ ಹೊಸ ಪ್ಲ್ಯಾನ್ ಮಾಡಿದ್ದರು. ಅಂತೆಯೇ ಅವರು ಯುವತಿಯಂತೆ ಆತನನ್ನು ಪ್ರೀತಿಸುವ ನಾಟಕವಾಡಿದರು. ಆದರೆ ಕಳ್ಳ ಮೊದಲು ನಂಬಿರಲಿಲ್ಲ. ಬಳಿಕ ಫೋಟೋ ಕಳಿಸುವಂತೆ ಹೇಳಿದ್ದಾನೆ. ಅದಕ್ಕೆ ಮಧುಬಾಲಾ ಅವರು ಬುದ್ಧಿವಂತಿಕೆಯಿಂದ ನಯನತಾರಾ ಫೋಟೋವನ್ನು ಕಳುಹಿಸಿದ್ದಾರೆ.

    ಮೊಹಮ್ಮದ್ ನಟಿಯ ಫೋಟೋ ನೋಡಿ ಮರುಳಾಗಿ ಭೇಟಿ ಮಾಡಲು ಒಪ್ಪಿಕೊಂಡು ಸ್ಥಳವನ್ನು ತಾನೇ ಹೇಳಿದ್ದಾನೆ. ಈತ ಹೇಳಿದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಾಮಾನ್ಯ ವ್ಯಕ್ತಿಗಳಂತೆ ಆತ ಬರುವುದಕ್ಕೂ ಮೊದಲೇ ಹೋಗಿದ್ದರು. ಮಧುಬಾಲಾ ಅವರು ಮುಖಕ್ಕೆ ಮುಸುಕು ಹಾಕಿಕೊಂಡು ಆತನ ಬಳಿಗೆ ಹೋಗಿದ್ದಾರೆ. ಕೂಡಲೇ ಬಂದಿರುವ ಯುವತಿ ನನ್ನ ಸ್ನೇಹಿತೆ ಎಂದು ಮಾತನಾಡಿಸಲು ಹೋದಾಗ ಅಲ್ಲೇ ಇದ್ದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ತಮ್ಮ ವಶಕ್ಕೆ ಪಡೆದು ಬಿಜೆಪಿ ನಾಯಕರಿಗೆ ಒಪ್ಪಿಸಿದ್ದಾರೆ. ಬುದ್ಧಿವಂತಿಕೆಯಿಂದ ಕಳ್ಳನನ್ನು ಬಂಧಿಸಿದ್ದಕ್ಕೆ ಮಧುಬಾಲಾ ದೇವಿಗೆ ಬಿಹಾರ ಪೊಲೀಸ್ ಇಲಾಖೆ ಬಹುಮಾನವನ್ನು ನೀಡಿ ಗೌರವಿಸಿದೆ.