Tag: NC

  • ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಹೊಸ ಸರ್ಕಾರ ರಚನೆಗೆ ಅಸ್ತು

    ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಹೊಸ ಸರ್ಕಾರ ರಚನೆಗೆ ಅಸ್ತು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು (President’s Rule) ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

    ಜಮ್ಮು ಮತ್ತು ಕಾಶ್ಮೀರ (Jammu and Kashmir) ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾಗಿದೆ. 31ನೇ ಅಕ್ಟೋಬರ್ 2019ರ ಆದೇಶವು ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಲು ಸಕಲ ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಪ್ರತಿಷ್ಠೆಯ ಫೈಟ್‌ಗೆ ಅಖಾಡವಾದ ಚನ್ನಪಟ್ಟಣ – ನಾನೇ ಅಭ್ಯರ್ಥಿ ಅಂತಾರೆ ಡಿಕೆ, ಹೆಚ್‌ಡಿಕೆ

    ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ 2019ರ ಅ.31ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಯಿತು. ನಂತರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಯಿತು.

    2019ರ ಅ.31ಕ್ಕೂ ಮುನ್ನ ಬಿಜೆಪಿಯು ಪಿಡಿಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ 2017ರ ರಿಂದ ಕೇಂದ್ರ ಆಡಳಿತವು ಮುಂದುವರಿದಿತ್ತು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ | ಆರೋಪಿ ಧರ್ಮರಾಜ್ ಕಶ್ಯಪ್‌ ಅಪ್ರಾಪ್ತನಲ್ಲ – ಮೂಳೆ ಪರೀಕ್ಷೆಯಲ್ಲಿ ಸಾಬೀತು

  • Haryana Result | 2 ಲಕ್ಷ ಸರ್ಕಾರಿ ಉದ್ಯೋಗ ಭರವಸೆ, 100 ಚದರ ಅಡಿ ಸೈಟು ಫ್ರೀ ಗ್ಯಾರಂಟಿ: ಯಾರ ʻಕೈʼ ಮೇಲಾಗುತ್ತೆ?

    Haryana Result | 2 ಲಕ್ಷ ಸರ್ಕಾರಿ ಉದ್ಯೋಗ ಭರವಸೆ, 100 ಚದರ ಅಡಿ ಸೈಟು ಫ್ರೀ ಗ್ಯಾರಂಟಿ: ಯಾರ ʻಕೈʼ ಮೇಲಾಗುತ್ತೆ?

    ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶವೂ (Haryana Election Result) ಇಂದೇ (ಅಕ್ಟೋಬರ್ 8) ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಅಧಿಕಾರದ ಗದ್ದುಗೆ ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

    2019ರ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದ 90 ಸ್ಥಾನಗಳಲ್ಲಿ ಬಿಜೆಪಿ 40, ಕಾಂಗ್ರೆಸ್ (Congress) 31 ಮತ್ತು ಜನನಾಯಕ ಜನತಾ ಪಕ್ಷ (BJP) 10 ಸ್ಥಾನಗಳನ್ನು ಗೆದ್ದಿದ್ದವು. ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿತ್ತು. ದುಶ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾದರು. ಮಾರ್ಚ್‌ನಲ್ಲಿ ಬಿಜೆಪಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ನಂತರ ಮೈತ್ರಿ ಕೊನೆಗೊಂಡಿತ್ತು. ಇದೀಗ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್‌ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಈ ಗೆಲುವಿಗೆ ಪಕ್ಷದ ಪ್ರಣಾಳಿಕೆಗಳೂ ಮಹತ್ವದ ಪಾತ್ರ ವಹಿಸುತ್ತವೆಯೇ ಎಂಬುದನ್ನು ಕಾದುನೋಡಬೇಕಿದೆ. ಯಾವ ಪಕ್ಷದ ಪ್ರಣಾಳಿಕೆ ಹೇಗಿದೆ? ಎಂಬುದನ್ನು ನೋಡುವುದಾದರೆ…

    ಹರಿಯಾಣಕ್ಕೆ ಕಾಂಗ್ರೆಸ್‌ ಸಪ್ತ ಗ್ಯಾರಂಟಿ!
    1. 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಮತ್ತು 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು.
    2. 18 ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡುವ ಜೊತೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು.
    3. 2 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಡ್ರಗ್ ಮುಕ್ತ ಹರಿಯಾಣ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು
    4. ವೃದ್ಧಾಪ್ಯ, ಅಂಗವಿಕಲ ಮತ್ತು ವಿಧವಾ ಪಿಂಚಣಿ 6,000 ರೂ. ಹಾಗೂ ಹಳೆಯ ಪಿಂಚಣಿ ಯೋಜನೆ (OPS) ಮರುಸ್ಥಾಪಿಸಲಾಗುವುದು.
    5. ಜಾತಿ ಗಣತಿ ನಡೆಸಲಾಗುವುದು, ಕೆನೆ ಪದರದ ಮಿತಿಯನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು.
    6. ಕನಿಷ್ಠ ಬೆಂಬಲ ಬೆಲೆ (MSP) ಕಾನೂನುಬದ್ಧವಾಗಿ ಖಾತರಿಪಡಿಸುತ್ತದೆ. ಬೆಳೆ ಪರಿಹಾರ ತಕ್ಷಣ ದೊರೆಯಲಿದೆ.
    7. ಬಡ ಕುಟುಂಬಗಳಿಗೆ 100 ಚದರ ಅಡಿಯ ನಿವೇಶನ, 3.5 ಲಕ್ಷ ವೆಚ್ಚದ 2 ಕೋಣೆಗಳ ಮನೆ

    ಬಿಜೆಪಿ ಗ್ಯಾರಂಟಿಗಳೇನು?
    * ಲಡೋ ಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮಾಸಿಕ 2,100 ರೂಪಾಯಿ ಭತ್ಯೆ ನೀಡುವುದಾಗಿ ಬಿಜೆಪಿ ಭರವಸೆ
    * 10 ಕೈಗಾರಿಕಾ ನಗರಗಳನ್ನು ನಿರ್ಮಿಸಲು ಯೋಜನೆ ಈ ಮೂಲಕ ಸ್ಥಳೀಯ ಯುವಕರಿಗೆ 50,000 ಉದ್ಯೋಗಗಳನ್ನು ಸೃಷ್ಟಿ
    * ಚಿರಾಯು-ಆಯುಷ್ಮಾನ್ ಯೋಜನೆಯು ಪ್ರತಿ ಕುಟುಂಬಕ್ಕೆ ರೂ 10 ಲಕ್ಷದವರೆಗೆ ಉಚಿತ ಚಿಕಿತ್ಸೆ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಹೆಚ್ಚುವರಿ ರೂ 5 ಲಕ್ಷವನ್ನು ನೀಡುತ್ತದೆ
    * ಕನಿಷ್ಠ ಬೆಂಬಲ ಬೆಲೆಯಲ್ಲಿ 24 ಬೆಳೆಗಳ ಖರೀದಿಯನ್ನು ಖಾತರಿಪಡಿಸಲಾಗಿದೆ
    * 200,000 ಸರ್ಕಾರಿ ಉದ್ಯೋಗ ಭರವಸೆ ನೀಡಲಾಗಿದೆ
    * ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500,000 ಮನೆಗಳನ್ನು ನಿರ್ಮಾಣ
    * ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್, ಜೊತೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ರೋಗನಿರ್ಣಯ ಸೇವೆಗಳು
    * ಪ್ರತಿ ಜಿಲ್ಲೆಗೂ ಒಲಂಪಿಕ್ ಗೇಮ್ಸ್ ನರ್ಸರಿ
    * ಹರ್ ಘರ್ ಗೃಹನಿ ಯೋಜನೆ ಅಡಿಯಲ್ಲಿ ಸಿಲಿಂಡರ್‌ಗಳನ್ನು ರೂ 500 ಕ್ಕೆ ನೀಡಲಾಗುತ್ತದೆ
    * ಆವಲ್ ಬಾಲಿಕಾ ಯೋಜನೆಯು ಗ್ರಾಮೀಣ ಪ್ರದೇಶದ ಪ್ರತಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗೆ ಸ್ಕೂಟರ್ ಅನ್ನು ಖಾತರಿಪಡಿಸುತ್ತದೆ
    * ಪ್ರತಿಯೊಬ್ಬ ಹರ್ಯಾನ್ವಿ ಅಗ್ನಿವೀರ್‌ಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಲಾಗುವುದು

  • ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

    ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

    ನವದೆಹಲಿ: ಜಮ್ಮು- ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಅಕ್ಟೋಬರ್ 8) ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಶುರುವಾಗಲಿದೆ. ಲೋಕಸಭೆ ಚುನಾವಣೆ ನಡೆದ ಬಳಿಕ ನಡೆದ ಹೈವೋಲ್ಟೇಜ್ ಚುನಾವಣೆ ಇದಾಗಿದ್ದು, ಜಮ್ಮು-ಕಾಶ್ಮೀರದ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ.

    ಅದೇ ರೀತಿ ಹರಿಯಾಣದಲ್ಲೂ ಹ್ಯಾಟ್ರಿಕ್‌ ಕನಸು ಕಂಡಿರುವ ಬಿಜೆಪಿಗೆ ಸೆಡ್ಡು ಹೊಡೆದು, ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಲು ಪ್ರಯತ್ನಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತಕ್ಕೆ ಒಳಪಟ್ಟ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿರುವ ಕಾರಣ ದೇಶದ ಗಮನಸೆಳೆದಿದೆ. ಈ ಫಲಿತಾಂಶವು ಈ ವರ್ಷ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ರಾಜಕೀಯದ ಮೇಲೂ ಪರಿಣಾಮ ಬೀರಬಹುದು ಎಂಬುದು ರಾಜಕೀಯ ಪರಿಣತರ ಲೆಕ್ಕಾಚಾರ.

    ಈ ಚುನಾವಣೆ ಗದ್ದುಗೆ ಹಿಡಿಯಲು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿ ಕೂಟ ಹಾಗೂ ಬಿಜೆಪಿ ಪಕ್ಷಗಳ ಪ್ರಣಾಳಿಕೆ ಪರಿಣಾಮಕಾರಿಯಾಗಲಿದೆಯೇ ಹಾಗಿದ್ದರೆ, ಪಕ್ಷಗಳ ಪ್ರಣಾಳಿಕೆಯಲ್ಲಿ ಏನಿದೆ ಎಂಬುದನ್ನು ತಿಳಿಯಲು ಮುಂದೆ ಓದಿ…

    ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೇಸ್ ಪ್ರಣಾಳಿಕೆ:
    * ಜಮ್ಮು ಮತ್ತು ಕಾಶ್ಮೀರದ ಅರ್ಹ ನಿರುದ್ಯೋಗಿ ಯುವಕರಿಗೆ 1 ವರ್ಷದವರೆಗೆ ಪ್ರತಿ ತಿಂಗಳು 3,500 ರೂ.ವರೆಗೆ ನಿರುದ್ಯೋಗ ಭತ್ಯೆ ನೀಡುವ ಭರವಸೆ
    * 30 ದಿನಗಳಲ್ಲಿ ಉದ್ಯೋಗ ಕ್ಯಾಲೆಂಡರ್ ನೀಡುವ ಮೂಲಕ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ
    * ಪೊಲೀಸ್, ಅಗ್ನಿಶಾಮಕ ದಳ ಮತ್ತು ಅರಣ್ಯ ಸಂರಕ್ಷಣಾ ಪಡೆಗಳಿಗೆ ವಿಶೇಷ ಗಡಿ ನೇಮಕಾತಿಯನ್ನು ಪುನರುಜ್ಜೀವನಗೊಳಿಸುವ ಭರವಸೆ
    * ಭೂರಹಿತರು, ಹಿಡುವಳಿದಾರರು ಮತ್ತು ಜಮೀನು ಹೊಂದಿರುವ ಕೃಷಿಕ ಕುಟುಂಬಗಳಿಗೆ ರೂ 4,000 ಹೆಚ್ಚುವರಿ ಆರ್ಥಿಕ ಬೆಂಬಲ
    * ನಿರುದ್ಯೋಗಿ ಇಂಜಿನಿಯರುಗಳ ಗುಂಪುಗಳಿಗೆ ಶೇ.30 ರಷ್ಟು ನಿರ್ಮಾಣ ಕಾಮಗಾರಿ ಸಂಬಂಧಿತ ಗುತ್ತಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯನ್ನು ಪುನಶ್ಚೇತನಗೊಳಿಸುವುದಾಗಿ ಭರವಸೆ
    * ಮಹಿಳಾ ಸಮ್ಮಾನ್ ಕಾರ್ಯಕ್ರಮದಡಿ ಕುಟುಂಬದ ಮಹಿಳೆಗೆ ಮಾಸಿಕ 3000 ರೂ.ಗಳ ನೆರವು ನೀಡುವುದಾಗಿ ಭರವಸೆ

    ನ್ಯಾಷನಲ್‌ ಕಾನ್ಫರೆನ್ಸ್‌ (NC)
    * ಎನ್‌ಸಿ ಪ್ರಣಾಳಿಕೆಯು ವಿಶೇಷ ಸ್ಥಾನಮಾನ ಕುರಿತಾದ 370ನೇ ವಿಧಿಯನ್ನು ಮರಳಿ ಸ್ಥಾಪಿಸುವುದಾಗಿ ಭರವಸೆ
    * ಎನ್ ಸಿ ಅಧಿಕಾರಕ್ಕೆ ಬಂದರೆ ಎಲ್ಲಾ ರಾಜಕೀಯ ಕೈದಿಗಳಿಗೆ ಕ್ಷಮಾದಾನ
    * ಕಾಶ್ಮೀರಿ ಪಂಡಿತರನ್ನು ಕಣಿವೆಗೆ ಘನತೆಯಿಂದ ಹಿಂದಿರುಗಿಸುವುದಾಗಿ ಭರವಸೆ
    * 200 ಯೂನಿಟ್ ಉಚಿತ ವಿದ್ಯುತ್, ವಿದ್ಯುತ್ ಮತ್ತು ನೀರಿನ ಬಿಕ್ಕಟ್ಟಿಗೆ ಪರಿಹಾರ
    * ಜಮ್ಮು ಮತ್ತು ಕಾಶ್ಮೀರಕ್ಕೆ ಜಲ-ವಿದ್ಯುತ್ ವಿದ್ಯುತ್ ಯೋಜನೆಗಳ ವರ್ಗಾವಣೆ
    * ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರತಿ ವರ್ಷ 12 ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತ

    ಪಿಡಿಪಿ
    * ಮಸೀದಿ, ಮಂದಿರಾ ಗುರುದ್ವಾರಗಳಿಗೆ ಉಚಿತ ವಿದ್ಯುತ್
    * ಗುತ್ತಿಗೆ ಶಿಕ್ಷಕರ ಗೌರವ ಧನ ಹೆಚ್ಚಳ
    * ಜೈಲು ಖೈದಿಗಳಿಗೆ ಉಚಿತ ಕಾನೂನು ಸಲಹೆ
    * ರಾಜ್ಯದ ವಿಶೇಷ ಸ್ಥಾನಮಾನ ಮರು ಸ್ಥಾಪನೆ
    * ಆರ್ಥಿಕ ಸ್ಥಿತಿ ಮರುಸ್ಥಾಪನೆ
    * 60,000 ದಿನಗೂಲಿಗಳನ್ನು ಕ್ರಮಬದ್ಧಗೊಳಿಸುವುದು
    * ಹಳೆಯ ಪಿಂಚಣಿ ಯೋಜನೆ ಜಾರಿ
    * J&K ಪೊಲೀಸರಿಗೆ ತೊಂದರೆಗೊಳಗಾಗದ ಪ್ರದೇಶ ಭತ್ಯೆ

    ಬಿಜೆಪಿ
    * ಯುವಕರಿಗೆ 5 ಲಕ್ಷ ಉದ್ಯೋಗಾವಕಾಶ ಕಲ್ಪಿಸಿ, ನ್ಯಾಯಯುತ ಮತ್ತು ಪಾರದರ್ಶಕ ನೇಮಕಾತಿ ಪ್ರಕ್ರಿಯೆ ಖಚಿತಪಡಿಸಿಕೊಳ್ಳಿ
    * ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 10,000 ರೂ.
    * ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ದರದಲ್ಲಿ 50% ಕಡಿತ
    * ಮಾ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಹಿರಿಯ ಮಹಿಳೆಗೆ ವಾರ್ಷಿಕ 18,000 ರೂ.
    * ಉಜ್ವಲ ಫಲಾನುಭವಿಗಳಿಗೆ ವರ್ಷಕ್ಕೆ 2 ಉಚಿತ ಸಿಲಿಂಡರ್
    * ಅಟಲ್ ವಸತಿ ಯೋಜನೆಯಡಿ ಭೂರಹಿತ ಫಲಾನುಭವಿಗಳಿಗೆ ಉಚಿತ ಭೂಮಿ ಹಂಚಿಕೆ.
    * ವೃದ್ಧಾಪ್ಯ, ವಿಧವೆ ಮತ್ತು ಅಂಗವಿಕಲರಿಗೆ ಪಿಂಚಣಿ ಮೂರು ಪಟ್ಟು ಹೆಚ್ಚಳ
    * ಪ್ರಗತಿ ಶಿಕ್ಷಾ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ 3,000 ರೂ. ಪ್ರಯಾಣ ಭತ್ಯೆ.
    * 1,000 ಹೊಸ ವೈದ್ಯಕೀಯ ಕಾಲೇಜು ಸೀಟುಗಳನ್ನು ಸೇರಿಸಿ
    * ಶ್ರೀನಗರದಲ್ಲಿ ಮೆಟ್ರೋ ಆರಂಭ, ಭಯೋತ್ಪಾದನೆ ನಿಗ್ರಹ

  • ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ – ಕದನ ಕುತೂಹಲ

    ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ – ಕದನ ಕುತೂಹಲ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ (Election Results Haryana 2024) ಮಂಗಳವಾರ (ಅ.8) ಹೊರಬೀಳಲಿದೆ. 10 ವರ್ಷಗಳ ಬಳಿಕ, ಆರ್ಟಿಕಲ್ 370 ರದ್ದಾದ ಬಳಿಕ ಕಣಿವೆನಾಡಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲೋದು ಯಾರು? ಬಿಜೆಪಿನಾ? ಎನ್‌ಸಿ-ಕಾಂಗ್ರೆಸ್ (Congress-NC) ಮೈತ್ರಿಕೂಟನಾ? ಅಥ್ವಾ ಪಿಡಿಪಿನಾ ಎಂಬ ಪ್ರಶ್ನೆಗೆ ಇಂದು ನಿಖರ ಉತ್ತರ ಸಿಗಲಿದೆ.

    ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಮತ ಎಣಿಕೆ ಹಿನ್ನೆಲೆ ಚುನಾವಣೆ ಕೇಂದ್ರಗಳ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಇಂದು ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಯಾವುದೇ ಪಕ್ಷಕ್ಕೆ ಬಹುಮತ ಬರಲ್ಲ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ರೂ, ಇಂಡಿಯಾ ಮೈತ್ರಿ ಕೂಟ ಮತ್ತು ಬಿಜೆಪಿ ಮಾತ್ರ ತಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿವೆ. ಮತ್ತೊಂದು ಕಡೆ, ಇಂಡಿಯಾ ಕೂಟ, ಮೆಹಬೂಬಾ ಮುಫ್ತಿ ಬೆಂಬಲದ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

    ಇನ್ನೂ ಹರಿಯಾಣ ಫಲಿತಾಂಶವೂ ಸಾಕಷ್ಟು ಕುತೂಹಲ ಕೆರಳಿಸಿದೆ. 10 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳುತ್ತಾ? ವಿಪಕ್ಷ ಕಾಂಗ್ರೆಸ್ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯುತ್ತಾ ಎಂಬುದು ಕುತೂಹಲಕಾರಿ ಅಂಶ. ಇದ್ರ ಮಧ್ಯೆ ಎಕ್ಸಿಟ್ ಪೋಲ್‌ಗಳೆಲ್ಲಾ ಕಾಂಗ್ರೆಸ್ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದು, ಇದು ನಿಜವಾಗುತ್ತಾ ಅನ್ನೋದು ಗೊತ್ತಾಗಲಿದೆ. ಇದನ್ನೂ ಓದಿ: ಮಂಗಳೂರು ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ – 6 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌

    ಹರಿಯಾಣ ಚುನಾವಣೋತ್ತರ ಸಮೀಕ್ಷೆ ಹೇಗಿದೆ?
    ಮ್ಯಾಟ್ರಿಜ್‌ ಸಮೀಕ್ಷೆ: ಕಾಂಗ್ರೆಸ್‌ 55-62, ಬಿಜೆಪಿ 18-24, ಐಎನ್ಎಲ್‌ಡಿ 3-6, ಜೆಜೆಪಿ 03, ಇತರರು 2-5
    ಎಬಿಪಿ ಸಮೀಕ್ಷೆ: ಕಾಂಗ್ರೆಸ್ – 57, ಬಿಜೆಪಿ – 27, ಇತರೆ – 06
    ದೈನಿಕ್‌ ಭಾಸ್ಕರ್‌: ಕಾಂಗ್ರೆಸ್ 44-54, ಬಿಜೆಪಿ 19-29, ಐಎನ್‌ಎಲ್‌ಡಿ 1-5, ಜೆಜೆಪಿ- 1, ಇತರರು 4-10

    ಜಮ್ಮು ಮತ್ತು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ ಹೇಗಿದೆ?
    ಸಿ ವೋಟರ್ – ಆಜ್ ತಕ್
    ಕಾಂಗ್ರೆಸ್ + ಎನ್‌ಸಿ – 11-15
    ಬಿಜೆಪಿ – 27-31
    ಪಿಡಿಪಿ – 02
    ಇತರೆ – 01

    ದೈನಿಕ್‌ ಬಾಸ್ಕರ್‌
    ಕಾಂಗ್ರೆಸ್ + ಎನ್‌ಸಿ – 35-40
    ಬಿಜೆಪಿ – 20-25
    ಪಿಡಿಪಿ – 4-7
    ಇತರೆ – 12-16

    ಪೀಪಲ್‌ ಪ್ಲಸ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 7-11
    ಇತರೆ – 4-6

    ಇಂಡಿಯಾ ಟುಡೆ- ಸಿ ವೋಟರ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 6-12
    ಇತರೆ – 6-11

  • ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಗದ್ದುಗೆ?

    ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ಗದ್ದುಗೆ?

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಚುನಾವಣಾ ಫಲಿತಾಂಶ (Election Results Haryana 2024) ಮಂಗಳವಾರ (ಅ.8) ಹೊರಬೀಳಲಿದೆ. 10 ವರ್ಷಗಳ ಬಳಿಕ, ಆರ್ಟಿಕಲ್ 370 ರದ್ದಾ ಬಳಿಕ ಕಣಿವೆನಾಡಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲೋದು ಯಾರು? ಬಿಜೆಪಿನಾ? ಎನ್‌ಸಿ-ಕಾಂಗ್ರೆಸ್ (Congress-NC) ಮೈತ್ರಿಕೂಟನಾ? ಅಥ್ವಾ ಪಿಡಿಪಿನಾ ಎಂಬ ಪ್ರಶ್ನೆಗೆ ಮಂಗಳವಾರ ನಿಖರ ಉತ್ತರ ಸಿಗಲಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಯಾವುದೇ ಪಕ್ಷಕ್ಕೆ ಬಹುಮತ ಬರಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ರೂ, ಇಂಡಿಯಾ ಮೈತ್ರಿ ಕೂಟ ಮತ್ತು ಬಿಜೆಪಿ ಮಾತ್ರ ತಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿವೆ. ಮತ್ತೊಂದು ಕಡೆ, ಇಂಡಿಯಾ ಕೂಟ, ಮೆಹಬೂಬಾ ಮುಫ್ತಿ ಬೆಂಬಲದ ನಿರೀಕ್ಷೆಯಲ್ಲಿದೆ. ಆದ್ರೆ, ಯಾರೇ ಗೆದ್ರೂ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗೋವರೆಗೂ ಸರ್ಕಾರ ರಚಿಸಬಾರದು ಎಂದು ಸಂಸದ ಎಂಜಿನಿಯರ್ ರಶೀದ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

    ಇನ್ನೂ ಹರಿಯಾಣ ಫಲಿತಾಂಶವೂ ಸಾಕಷ್ಟು ಕುತೂಹಲ ಕೆರಳಿಸಿದೆ. 10 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳುತ್ತಾ? ವಿಪಕ್ಷ ಕಾಂಗ್ರೆಸ್ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯುತ್ತಾ ಎಂಬುದು ಕುತೂಹಲಕಾರಿ ಅಂಶ. ಇದ್ರ ಮಧ್ಯೆ ಎಕ್ಸಿಟ್ ಪೋಲ್‌ಗಳೆಲ್ಲಾ ಕಾಂಗ್ರೆಸ್ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದು, ಇದು ನಿಜವಾಗುತ್ತಾ ಅನ್ನೋದು ಗೊತ್ತಾಗಲಿದೆ. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

    ಹರಿಯಾಣ ಚುನಾವಣೋತ್ತರ ಸಮೀಕ್ಷೆ ಹೇಗಿದೆ?
    ಮ್ಯಾಟ್ರಿಜ್‌ ಸಮೀಕ್ಷೆ: ಕಾಂಗ್ರೆಸ್‌ 55-62, ಬಿಜೆಪಿ 18-24, ಐಎನ್ಎಲ್‌ಡಿ 3-6, ಜೆಜೆಪಿ 03, ಇತರರು 2-5
    ಎಬಿಪಿ ಸಮೀಕ್ಷೆ: ಕಾಂಗ್ರೆಸ್ – 57, ಬಿಜೆಪಿ – 27, ಇತರೆ – 06
    ದೈನಿಕ್‌ ಭಾಸ್ಕರ್‌: ಕಾಂಗ್ರೆಸ್ 44-54, ಬಿಜೆಪಿ 19-29, ಐಎನ್‌ಎಲ್‌ಡಿ 1-5, ಜೆಜೆಪಿ- 1, ಇತರರು 4-10

    ಜಮ್ಮು ಮತ್ತು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ ಹೇಗಿದೆ?
    ಸಿ ವೋಟರ್ – ಆಜ್ ತಕ್
    ಕಾಂಗ್ರೆಸ್ + ಎನ್‌ಸಿ – 11-15
    ಬಿಜೆಪಿ – 27-31
    ಪಿಡಿಪಿ – 02
    ಇತರೆ – 01

    ದೈನಿಕ್‌ ಬಾಸ್ಕರ್‌
    ಕಾಂಗ್ರೆಸ್ + ಎನ್‌ಸಿ – 35-40
    ಬಿಜೆಪಿ – 20-25
    ಪಿಡಿಪಿ – 4-7
    ಇತರೆ – 12-16

    ಪೀಪಲ್‌ ಪ್ಲಸ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 7-11
    ಇತರೆ – 4-6

    ಇಂಡಿಯಾ ಟುಡೆ- ಸಿ ವೋಟರ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 6-12
    ಇತರೆ – 6-11

  • Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

    Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

    ನವದೆಹಲಿ:  ಆರ್ಟಿಕಲ್‌ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ (Congress-NC) ನೇತೃತ್ವದ ಮೈತ್ರಿಕೂಟ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು (J&K Exit Poll Result) ಹೇಳಿವೆ.

    ಇಂಡಿಯಾ ಒಕ್ಕೂಟ ಅಧಿಕಾರ ಹಿಡಿದರೂ ಬಿಜೆಪಿ ಕಳೆದ ಬಾರಿ ಚುನಾವಣಾ ಫಲಿತಾಂಶಕ್ಕಿಂತ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ. 2014ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಿಸಿತ್ತು. ಕಾಂಗ್ರೆಸ್‌ 12 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿತ್ತು. ಮೆಹಬುಬಾ ಮುಫ್ತಿ ನೇತೃತ್ವದ ಪಿಡಿಪಿ 28 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಆಜ್‌ ತಕ್‌ ಸಿ ವೋಟರ್‌ ಸಮೀಕ್ಷೆಯಲ್ಲಿ ಬಿಜೆಪಿಗೆ ಮುನ್ನಡೆ ಬಂದಿದೆ. ಉಳಿದೆಲ್ಲ ಸಮೀಕ್ಷೆಗಳು ಕಾಂಗ್ರೆಸ್‌-ಎನ್‌ಸಿ ಮೈತ್ರಿ ಕೂಟಕ್ಕೆ ಮುನ್ನಡೆ ತೋರಿಸಿವೆ. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

    ಪ್ರತ್ಯೇಕ ರಾಜ್ಯ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಇದೇ ಅಕ್ಟೋಬರ್‌ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

    ಯಾವ ಸಮೀಕ್ಷೆ ಏನು ಹೇಳುತ್ತೆ?
    ಸಿ ವೋಟರ್ – ಆಜ್ ತಕ್ 
    ಕಾಂಗ್ರೆಸ್ + ಎನ್‌ಸಿ – 11-15
    ಬಿಜೆಪಿ – 27-31
    ಪಿಡಿಪಿ – 02
    ಇತರೆ – 01

    ದೈನಿಕ್‌ ಬಾಸ್ಕರ್‌
    ಕಾಂಗ್ರೆಸ್ + ಎನ್‌ಸಿ – 35-40
    ಬಿಜೆಪಿ – 20-25
    ಪಿಡಿಪಿ – 4-7
    ಇತರೆ – 12-16

    ಪೀಪಲ್‌ ಪ್ಲಸ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 7-11
    ಇತರೆ – 4-6

    ಇಂಡಿಯಾ ಟುಡೆ- ಸಿ ವೋಟರ್‌
    ಕಾಂಗ್ರೆಸ್ + ಎನ್‌ಸಿ – 40-48
    ಬಿಜೆಪಿ – 27-32
    ಪಿಡಿಪಿ – 6-12
    ಇತರೆ – 6-11

  • ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‍ಸಿ ಮೈತ್ರಿ

    ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‍ಸಿ ಮೈತ್ರಿ

    – ಶ್ರೀನಗರದಿಂದ ಎನ್‍ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸ್ಪರ್ಧೆ
    – ಕಾಂಗ್ರೆಸ್ ಜೊತೆಗೆ ಮೈತ್ರಿಯಿಲ್ಲ: ಮೆಹಬೂಬಾ ಮುಫ್ತಿ

    ಶ್ರೀನಗರ: ಲೋಕಸಭಾ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ಮೈತ್ರಿ ಮಾಡಿಕೊಂಡಿವೆ. ಈ ಮೂಲಕ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕಟ್ಟಿಹಾಕಲು ಕಾಂಗ್ರೆಸ್-ಎನ್‍ಸಿ ಭರ್ಜರಿ ರಣತಂತ್ರ ರೂಪಿಸಿವೆ.

    ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜದ್ ಮತ್ತು ನ್ಯಾಷನಲ್ ಕಾನ್ಫರೆನ್ಸಿನ ಫಾರೂಕ್ ಅಬ್ದುಲ್ಲಾ ಜಂಟಿಯಾಗಿ ಮೈತ್ರಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಶ್ರೀನಗರದಿಂದ ಮೈತ್ರಿ ಅಭ್ಯರ್ಥಿಯಾಗಿ ಎನ್‍ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸ್ಪರ್ಧೆ ಮಾಡಲಿದ್ದಾರೆ. ಇದರಿಂದಾಗಿ ಜಮ್ಮು ಮತ್ತು ಉದಮ್‍ಪುರ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಆದರೆ ಉಳಿದ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಎನ್‍ಸಿ ಫ್ರೆಂಡ್ಲಿ ಫೈಟ್ ನೀಡಲು ನಿರ್ಧರಿಸಿವೆ ಎನ್ನಲಾಗಿದೆ.

    ಇತ್ತ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಮೆಹಬೂಬಾ ಮುಫ್ತಿ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ಹೀಗಾಗಿ ಜಮ್ಮು-ಕಾಶ್ಮೀರ ಆರು ಲೋಕಸಭಾ ಕ್ಷೇತ್ರಗಳಿಂದ ಪಿಡಿಪಿ ಅಭ್ಯರ್ಥಿ ಕಣಕ್ಕೆ ಇಳಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಆರು ಕ್ಷೇತ್ರಗಳ ಪೈಕಿ ಪಿಡಿಪಿ 3 ಸ್ಥಾನ ಹಾಗೂ ಬಿಜೆಪಿ 3 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಮತ್ತು ಎನ್‍ಸಿ ತಮ್ಮ ಅಸ್ಥಿತ್ವವನ್ನೇ ಕಳೆದುಕೊಂಡಿತ್ತು. ಹೀಗಾಗಿ ಈ ಬಾರಿ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಗೆಲ್ಲಲು ಕಾಂಗ್ರೆಸ್-ಎನ್‍ಸಿ ಮೈತ್ರಿ ಮಾಡಿಕೊಂಡಿವೆ.

  • ಪಿಡಿಪಿ ಮೈತ್ರಿ ಕಳೆದುಕೊಂಡ ಬಿಜೆಪಿ: ಜಮ್ಮು ಕಾಶ್ಮೀರದಲ್ಲಿ ಮುಂದೇನು?

    ಪಿಡಿಪಿ ಮೈತ್ರಿ ಕಳೆದುಕೊಂಡ ಬಿಜೆಪಿ: ಜಮ್ಮು ಕಾಶ್ಮೀರದಲ್ಲಿ ಮುಂದೇನು?

    ನವದೆಹಲಿ: ಪಿಡಿಪಿ ಮೈತ್ರಿಯಿಂದ ಹಿಂದೆ ಸರಿದ ಬಿಜೆಪಿಯ ನಿರ್ಧಾರದಿಂದ ಜಮ್ಮು ಕಾಶ್ಮೀರದಲ್ಲಿ ಮುಂದೆ ಏನಾಗುತ್ತದೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ.

    2014ರ ಚುನಾವಣೆಯಲ್ಲಿ ಯಾರಿಗೂ ಬಹುಮತ ಸಿಗದ ಕಾರಣ ಪಿಡಿಪಿ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡಿದ್ದವು. ಕಳೆದ ಮೂರು ವರ್ಷಗಳಲ್ಲಿ ಆದ ರಾಜಕೀಯ ಬದಲಾವಣೆಗಳಿಂದಾಗಿ ಇಂದು ಬಿಜೆಪಿ ದಿಢೀರನೆ ಬೆಂಬಲ ವಾಪಸ್ ತೆಗೆದುಕೊಂಡ ಪರಿಣಾಮ ಮೆಹಬೂಬ ಮುಫ್ತಿ ನೇತೃತ್ವದ ಸರ್ಕಾರ ಪತನಗೊಂಡಿದೆ.

    ಮುಂದಿನ ರಾಜಕೀಯ ನಡೆ ಏನಾಗಬಹುದು?
    2014ರ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ25, ಎನ್‍ಸಿ(ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್)15, ಕಾಂಗ್ರೆಸ್12 ಹಾಗೂ ಇತರೆ 7 ಸ್ಥಾನಗಳನ್ನು ಗಳಿಸಿದ್ದವು. ಬಹುಮತ ಸಾಬೀತಿಗೆ ಸರ್ಕಾರಕ್ಕೆ ಕನಿಷ್ಟ 44 ಸ್ಥಾನ ಬೆಂಬಲ ಅಗತ್ಯ.

    1. ಪಿಡಿಪಿಯು ತನ್ನಲ್ಲಿರುವ ಶಾಸಕರ ಜೊತೆ ಎನ್‍ಸಿ ಹಾಗೂ ಕಾಂಗ್ರೆಸ್‍ನ ಜೊತೆ ಸೇರಿ ಸರ್ಕಾರ ರಚಿಸಬಹುದು.

    2. ಕಾಂಗ್ರೆಸ್ ಹೊರತು ಪಡಿಸಿ ಎನ್‍ಸಿ ಹಾಗೂ ಇತರೆ ಪಕ್ಷಗಳ ಅಭ್ಯರ್ಥಿಗಳ ಜೊತೆ ಪಿಡಿಪಿ ಸರ್ಕಾರ ರಚನೆಗೆ ಮುಂದಾಗಬಹುದು.

    3. ವಿಶ್ವಾಸಮತಯಾಚನೆ ವೇಳೆ ಎನ್‍ಸಿ, ಕಾಂಗ್ರೆಸ್ ಹಾಗೂ ಇತರೆ ಪಕ್ಷದವರು ಗೈರಾಗುವಂತೆ ನೋಡಿಕೊಳ್ಳಬಹುದು. ಒಂದು ವೇಳೆ ಈ ಪಕ್ಷಗಳು ಗೈರಾದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯೆ ಕಡಿಮೆಯಾಗುತ್ತದೆ. ಒಂದು ಬಾರಿ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರ ಪಾಸ್ ಆದರೆ 6 ತಿಂಗಳ ಕಾಲ ರಾಜ್ಯವನ್ನು ಅಳಬಹುದು.

    4. ಯಾವುದೇ ಪಕ್ಷಗಳು ಪಿಡಿಪಿಯೊಂದಿಗೆ ಕೈಜೋಡಿಸಲು ಮುಂದೆ ಬಾರದೇ ಇದ್ದಾಗ ಅನಿವಾರ್ಯವಾಗಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲ ಆಳ್ವಿಕೆ ನಿರ್ಮಾಣವಾಗುತ್ತದೆ.

    ಕಾಂಗ್ರೆಸ್ ಬೆಂಬಲ ಕೊಡಲ್ಲ:
    ಕಾಂಗ್ರೆಸ್ ನ ಮುಖಂಡರಾದ ಗುಲಾಂ ನಬಿ ಆಜಾದ್‍ರವರು, ಈಗಾಗಲೇ ಬಿಜೆಪಿ ಪಿಡಿಪಿಯ ಜೊತೆ ಸೇರಿಕೊಂಡು ದೊಡ್ಡ ತಪ್ಪು ಎಸಗಿದೆ. ಇಂತಹ ಪಕ್ಷದೊಂದಿಗೆ ಪುನಃ ತಪ್ಪು ಮಾಡಲು ಕಾಂಗ್ರೆಸ್ ಸಿದ್ದವಿಲ್ಲ. ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರಗಳು ಕೋಮುಗಲಭೆಯನ್ನು ಹತ್ತಿಕ್ಕಲು ವಿಫಲವಾಗಿವೆ. ಜಮ್ಮು ಕಾಶ್ಮೀರದಲ್ಲಿ ನಮ್ಮ ಆಡಳಿತದಲ್ಲಿದ್ದಾಗ ಯಾವುದೇ ಕೊಮುಗಲಭೆಗಳು ಸೃಷ್ಟಿಯಾಗಿರಲಿಲ್ಲ. ಆದ್ದರಿಂದ ನಾವು ಯಾವುದೇ ಕಾರಣಕ್ಕೂ ಪಿಡಿಪಿ ಜೊತೆ ಕೈ ಜೋಡಿಸುವುದಿಲ್ಲ ಹೇಳಿಕೆ ನೀಡಿದ್ದಾರೆ.