ಲಕ್ನೋ: ಭಾರೀ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು (Meerut Building Collapses) ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮೀರತ್ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.
ಮಳೆಯಿಂದಾಗಿ ಬಿಲ್ಡಿಂಗ್ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರೀ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಅಕ್ಕಪಕ್ಕದ ಮನೆಗಳಿಗೆ ಚಿಲಕ ಹಾಕಿ, ಪ್ರೀ ಪ್ಲ್ಯಾನ್ಡ್ ದರೋಡೆ – ಬೆಚ್ಚಿಬಿದ್ದ ರಾಯಚೂರು ಜನ
ಸುಮಾರು 35 ವರ್ಷಗಳಷ್ಟು ಹಳೆಯದಾದ ಕಟ್ಟಡವೂ ಶಿಥಿಲಾವಸ್ಥೆಯಲ್ಲಿತ್ತು ಎಂದು ಹೇಳಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಘಟನೆಯ ದೃಶ್ಯಗಳನ್ನು ಗಮನಿಸಿದ್ದು, ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarai vijayan) ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.
ದೂರವಾಣಿ ಮೂಲಕ ಪಿಣರಾಯಿ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಪ್ರವಾಹ ಪೀಡಿತ ಪ್ರದೇಶದಲ್ಲಿ (Wayanad Landslides) ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ರಕ್ಷಣೆಗೆ ಕನ್ನಡಿಗರ ತಂಡ ಮುಂದು:
ಕೇರಳದಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಬೆಂಗಳೂರಿನಿಂದ ಎರಡು ತಂಡ ಹೊರಟಿದೆ. ಅಲ್ಲದೇ ಮಡಿಕೇರಿಯಿಂದ 20 ಜನರ ತಂಡ ಸ್ವಯಂಪ್ರೇರಿತವಾಗಿ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದೆ. ಈ ನಡುವೆ ಸಚಿವ ಸಂತೋಷ್ ಲಾಡ್ ಅವರೂ ಸಹ ಹೊರಟಿದ್ದಾರೆ. ಅಲ್ಲದೇ ತಮಿಳುನಾಡು ಸರ್ಕಾರದಿಂದಲೂ ರಕ್ಷಣಾ ಕಾರ್ಯಕ್ಕೆ 5 ಕೋಟಿ ರೂ. ತುರ್ತು ನೆರವು ಘೋಷಿಸಲಾಗಿದೆ.
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ (Wayanad Landslides) ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಕೇರಳದಲ್ಲಿ ಕನ್ನಡಿಗರ ರಕ್ಷಣೆಗೆ ಈಗಾಗಲೇ ಬೆಂಗಳೂರಿನಿಂದ ಎರಡು ತಂಡ ಹೊರಟಿದೆ. ಅಲ್ಲದೇ ಮಡಿಕೇರಿಯಿಂದ 20 ಜನರ ತಂಡ ಸ್ವಯಂಪ್ರೇರಿತವಾಗಿ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದೆ. ಈ ನಡುವೆ ಸಚಿವ ಸಂತೋಷ್ ಲಾಡ್ ಅವರೂ ಸಹ ಹೊರಟಿದ್ದಾರೆ. ಅಲ್ಲದೇ ತಮಿಳುನಾಡು ಸರ್ಕಾರದಿಂದಲೂ ರಕ್ಷಣಾ ಕಾರ್ಯಕ್ಕೆ 5 ಕೋಟಿ ರೂ. ತುರ್ತು ನೆರವು ಘೋಷಿಸಲಾಗಿದೆ.
ಕನ್ನಡಿಗರ ಸಾವಿನ ಸಂಖ್ಯೆ 7ಕ್ಕೆ ಏರಿಕೆ:
ವಯನಾಡಿನಲ್ಲಿ ಸಂಭವಿಸಿದ ಘೋರ ದುರಂತಕ್ಕೆ ಸಿಕ್ಕಿ ಮೃತಪಟ್ಟಿರುವ ಕನ್ನಡಿಗರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಸುಮಾರು 8 ಮಂದಿ ಕಣ್ಮರೆಯಾಗಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?
– ಸಾವಿನ ಸಂಖ್ಯೆ 143ಕ್ಕೆ ಏರಿಕೆ; ರಕ್ಷಣಾ ಕಾರ್ಯದಲ್ಲಿ ಕನ್ನಡಿಗ ಯುವಕರ ತಂಡ
ವಯನಾಡ್/ಬೆಂಗಳೂರು: ಕೇರಳದ ವಯನಾಡಿನಲ್ಲಿ ಮಹಾಮಳೆಗೆ ಸಂಭವಿಸಿರುವ ಭೂಕುಸಿತದಿಂದ (Wayanad Landslides) ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 143ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆಯಾಗಿದೆ. ನೂರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ.
ಈವೆರೆಗೆ 143 ಮಂದಿ ಮೃತಪಟ್ಟಿದ್ದು, 3 ಸಾವಿರ ಜನರನ್ನ ನಿರಾತ್ರಿತ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 480ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದ್ದು, ಇನ್ನೂ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ, ಈ ಪೈಕಿ ಕನ್ನಡಿಗರೂ ಇದ್ದಾರೆ ಎಂದು ರಕ್ಷಣಾ ತಂಡಗಳು ತಿಳಿಸಿವೆ.
ಚಾಮರಾಜನಗರದ ನಾಲ್ವರ ದುರ್ಮರಣ:
ದೇವರನಾಡಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಚಾಮರಾಜನಗರ (Chamarajanagara) ಮೂಲದ ಪುಟ್ಟಸಿದ್ದಶೆಟ್ಟಿ (62), ರಾಣಿ ಮದರ್ (50), ರಾಜನ್, ರಜಿನಿ ಎಂಬವರು ಸಾವನ್ನಪ್ಪಿದ್ದಾರೆ. ರಾಜನ್ ಮತ್ತು ರಜನಿ ದಂಪತಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಮಂಡ್ಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮ ಲೀಲಾವತಿ, ನಿಹಾಲ್ ಎಂಬವರೂ ನಾಪತ್ತೆಯಾಗಿದ್ದಾರೆ. ಮೂವರು (ಅನಿಲ್, ಪತ್ನಿ ಝಾನ್ಸಿ, ತಂದೆ ದೇವರಾಜು) ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಲಸ್ಫೋಟದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ:
ದುರಂತದಲ್ಲಿ ಬದುಕುಳಿದ ದೇವರಾಜು ಎಂಬವರು ಭೂಕುಸಿತ ಸಂಭವಿಸಿದ ಭೀಕರತೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಬ್ಬಬ್ಬಾ, ಮಣ್ಣು, ನೀರು ಒಟ್ಟಿಗೇ ರಭಸವಾಗಿ ಬರುತ್ತಿತ್ತು. ಬಂಡೆಗಳು ಉರುಳಿಬಂದು ಅಪ್ಪಳಿಸಿತ್ತಿದ್ದವು, ಉಸಿರು ಹಿಡಿದು ಕುಳಿತುಕೊಂಡಿದ್ದೆ. 500ಕ್ಕೂ ಹೆಚ್ಚು ಜನ ನಾಪತ್ತೆಯಾಗಿರಬಹುದು ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ
ಬೆಂಗ್ಳೂರಿಂದ ಹೋಗಿದ್ದ ಇಬ್ಬರು ಕಣ್ಮರೆ:
ಉತ್ತರ ಭಾರತದಿಂದ ಬೆಂಗಳೂರಿಗೆ ಬಂದು, ವಯನಾಡ್ಗೆ ತೆರಳಿದ್ದ 4 ಪ್ರವಾಸಿಗರು ಹಾಗೂ ಬೆಂಗಳೂರಿನ ಒಬ್ಬ ಚಾಲಕ ಪ್ರವಾಹದಲ್ಲಿ ಸಿಲುಕಿದ್ದರೂ ಈ ಪೈಕಿ ಇಬ್ಬರು ಪ್ರವಾಸಿಗರು ಹಾಗೂ ಬೆಂಗಳೂರಿನ (Bengaluru Tourists) ಚಾಲಕ ಸುರಕ್ಷಿತವಾಗಿದ್ದಾರೆ. ಮತ್ತಿಬ್ಬರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳ್ಳಾರಿ: ಜಿಲ್ಲೆಯ 36,944 ರೈತರ ಖಾತೆಗೆ (Farmers Account) ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಬರ ಪರಿಹಾರ (Drought Relief) ಹಣವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು (Bellary DC Office) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2023-24 ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲಾ 05 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ನಾಯಕರು ಬಿಜೆಪಿ ಕಚೇರಿಗೆ ಬರ್ತೀವಿ.. ಎಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಕೇಜ್ರಿವಾಲ್ ಕಿಡಿ
ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ನಿಖರ ದಾಖಲೆ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿ ಮೂಲಕ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ 9 ಕಂತುಗಳಲ್ಲಿ ಒಟ್ಟು 36,944 ರೈತರಿಗೆ ರೂ.7.26 ಕೊಟಿ ರೂ. ಬೆಳೆ ಹಾನಿ ಪರಿಹಾರ ವಿತರಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
– ಮೃತ ಕುಟುಂಬಕ್ಕೆ 4 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ ಯುಪಿ ಸಿಎಂ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಬುಲಂದ್ಶಹರ್ (Bulandshahr) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕಾರು ಕಾಲುವೆಗೆ (Canal) ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.
ಜಹಾಂಗೀರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ (Car) ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದೆ. ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ
ಘಟನೆಯಲ್ಲಿ ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ಸದ್ಯ ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್
ಈ ಕುರಿತು ಪ್ರತಿಕ್ರಿಯಿಸಿರುವ ಬುಲಂದ್ಶಹರ್ ಎಸ್ಎಸ್ಪಿ ಶ್ಲೋಕ್ ಕುಮಾರ್, ಕಾರು ಜಹಾಂಗೀರ್ಪುರ ಪೊಲೀಸ್ ಠಾಣೆಯ ಕಪ್ನಾ ಕಾಲುವೆಗೆ ಬಿದ್ದಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎನ್ಡಿಆರ್ಎಫ್ ತಂಡ ಸೇರಿದಂತೆ ಎಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ
ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕುಟುಂಬಗಳಿಗೆ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ತಾಯಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಮಗ
ಡೆಹ್ರಾಡೂನ್: ನಾವು ಸಂತೋಷವಾಗಿದ್ದು, ಈಗ ದೀಪಾವಳಿಯನ್ನು (Deepavali) ಆಚರಿಸುತ್ತೇವೆ ಎಂದು ಉತ್ತರಕಾಶಿ (Uttarakshi) ಸುರಂಗದಿಂದ (Tunnel) ರಕ್ಷಿಸಲ್ಪಟ್ಟ ಕಾರ್ಮಿಕರು (Workers) ಸಂತಸವನ್ನು ಹಂಚಿಕೊಂಡಿದ್ದಾರೆ.
ಸತತ 17 ದಿನಗಳ ನಿರಂತರ ಕಾರ್ಯಾಚರಣೆಯಿಂದ ಉತ್ತರಕಾಶಿಯ ಸಿಲ್ಕ್ಯಾರ ಸುರಂಗದಲ್ಲಿ (Silkyara Tunnel) ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಎನ್ಡಿಆರ್ಎಫ್ (NDRF) ತಂಡ ರಕ್ಷಣೆ ಮಾಡಿದೆ. ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವಜೀತ್, ಅವಶೇಷಗಳು ಬಿದ್ದಾಗ ನಾವು ಸಿಲುಕಿಕೊಂಡಿದ್ದೇವೆ ಎಂದು ನಮಗೆ ತಿಳಿದಿತ್ತು. ಮೊದಲ 10-15 ಗಂಟೆಗಳ ಕಾಲ ನಾವು ಕಷ್ಟವನ್ನು ಎದುರಿಸಿದೆವು. ಆದರೆ ನಂತರ ಅಕ್ಕಿ, ದಾಲ್ ಮತ್ತು, ಡ್ರೈಫ್ರೂಟ್ಸ್ ಒದಗಿಸಲು ಪೈಪ್ ಹಾಕಲಾಯಿತು. ನಂತರ ಮೈಕ್ ಅನ್ನು ಸ್ಥಾಪಿಸಲಾಯಿತು. ಇದರಿಂದ ನಾನು ನನ್ನ ಕುಟುಂಬದ ಸದಸ್ಯರೊಂದಿಗೆ ಮಾತನಾಡಲು ಸಾಧ್ಯವಾಯಿತು ಎಂದರು. ಇದನ್ನೂ ಓದಿ: ಧೈರ್ಯ ಮೆಚ್ಚುವಂತದ್ದು: ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರ ಜೊತೆ ಮೋದಿ ಮಾತುಕತೆ
ಮತ್ತೊಬ್ಬ ಕಾರ್ಮಿಕ ಸುಬೋಧ್ ಕುಮಾರ್ ಈ ಕುರಿತು ಮಾತನಾಡಿದ್ದು, ಎಲ್ಲಾ 41 ಜರ್ನು ಸುರಕ್ಷಿತವಾಗಿ ಹೊರತರುವ ಪ್ರಯತ್ನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸಕಾರಗಳಿಗೆ ಧನ್ಯವಾದಗಳು. ಮೊದಲ 24 ಗಂಟೆಗಳು ಕಠಿಣವಾಗಿದ್ದವು. ಆದರೆ ನಂತರ ನಮಗೆ ಪೈಪ್ ಮೂಲಕ ಆಹಾರವನ್ನು ಒದಗಿಸಲಾಯಿತು. ನಾನು ಸಂಪೂರ್ಣವಾಗಿ ಉತ್ತಮನಾಗಿದ್ದೇನೆ ಮತ್ತು ಈಗ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಾನವೀಯತೆ, ಟೀಮ್ವರ್ಕ್ಗೆ ಅದ್ಭುತ ಉದಾಹರಣೆ – ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ ನಮಸ್ಕರಿಸುತ್ತೇನೆ: ಮೋದಿ
ಇತ್ತ ರಕ್ಷಣಾ ಕಾರ್ಯಚರಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ದೂರವಾಣಿ ಮೂಲಕ ಕಾರ್ಮಿಕರೊಂದಿಗೆ ಮಾತನಾಡಿರುವ ಮೋದಿ, ನೀವು ಸುರಕ್ಷಿತವಾಗಿ ಹೊರಬಂದಿರುವುದು ಖುಷಿಯ ಸಂಗತಿ. ಅದನ್ನು ಶಬ್ದದಲ್ಲಿ ವರ್ಣನೆ ಮಾಡಲು ಸಾಧ್ಯವಿಲ್ಲ. ಕೇದಾರನಾಥ, ಬದರಿನಾಥನ ಆಶೀರ್ವಾದ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮಂಗಳವಾರ 41 ಕಾರ್ಮಿಕರನ್ನು ಸುರಂಗದಿಂದ ರಕ್ಷಣೆ ಮಾಡುತ್ತಿದ್ದಂತೆಯೇ ಮೋದಿ ಈ ಕುರಿತು ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದು, ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆಜ್ಜೆ ಹೆಜ್ಜೆಗೂ ಅಡೆತಡೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
ಡೆಹ್ರಾಡೂನ್: ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse) ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್ಲೈನ್ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಅಡಚಣೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ವಿಳಂಬ
#WATCH | | Uttarkashi (Uttarakhand) tunnel rescue: NDRF demonstrates the movement of wheeled stretchers through the pipeline, for the rescue of 41 workers trapped inside the Silkyara Tunnel once the horizontal pipe reaches the other side. pic.twitter.com/mQcvtmYjnk
ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್ ಮಾಡಿರುವ ಪೈಪ್ಲೈನ್. ಎನ್ಡಿಆರ್ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್ ಭಾಗದ ಪೈಪ್ಲೈನ್ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ
ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.
ಬೆಂಗಳೂರು: ಇನ್ನೊಂದು ವಾರದಲ್ಲಿ ಬರದ (Drought) ಕುರಿತು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎನ್ಡಿಆರ್ಎಫ್ ನಿಯಮದ ಪ್ರಕಾರ ವರದಿ ರೆಡಿ ಮಾಡಿ ಕೇಂದ್ರಕ್ಕೆ ವರದಿ ಕೊಡುತ್ತೇವೆ. ಈಗಾಗಲೇ 70% ವರದಿ ಸಿದ್ಧವಾಗಿದೆ. 3-4 ದಿನಗಳಲ್ಲಿ ವರದಿ ರೆಡಿ ಮಾಡಿ ಸಚಿವ ಸಂಪುಟದ ಒಪ್ಪಿಗೆ ಪಡೆದು ವರದಿಯನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ ಎಂದರು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂನಲ್ಲಿ ವಾದ ಮಾಡಲು ಏನಿದೆ?: ಬೊಮ್ಮಾಯಿ
ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ತೋಟಗಾರಿಕೆ ಬೆಳೆ 2 ಲಕ್ಷ ಹೆಕ್ಟೇರ್ ಹಾನಿಯಾಗಿದೆ. ಕೃಷಿ ಬೆಳೆ ಹಾನಿ ಅಂದಾಜಿನ ಪ್ರಕಾರ 4 ಸಾವಿರ ಕೋಟಿ ರೂ. ಪರಿಹಾರ ಅಂದಾಜು ಮಾಡಲಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ 200 ಕೋಟಿ ರೂ. ನಷ್ಟ ಪರಿಹಾರ ಕೇಳಲು ಅವಕಾಶ ಇದೆ. ಜಾನುವಾರು ಮೇವಿಗೆ, ಕುಡಿಯುವ ನೀರು ತುರ್ತು ವ್ಯವಸ್ಥೆಗೆ ಪರಿಹಾರ ಕೇಳುತ್ತೇವೆ. ಒಟ್ಟಾರೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಐದೂವರೆ ಸಾವಿರ ಕೋಟಿಯಿಂದ 6 ಸಾವಿರ ಕೋಟಿ ರೂ. ನಷ್ಟ ಪರಿಹಾರವನ್ನು ಕೇಳಲು ಅವಕಾಶವಿದ್ದು, ಇದನ್ನು ಕೇಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಕ್ರಾಂತಿಕಾರಿ ನಿರ್ಧಾರ: ಬೊಮ್ಮಾಯಿ
ಸದ್ಯ 195 ತಾಲೂಕು ಬರ ಘೋಷಣೆ ಆಗಿದೆ. ಇನ್ನೂ 41 ತಾಲೂಕುಗಳು ಉಳಿದಿವೆ. ಇದರಲ್ಲೂ ಮಳೆಯಿಂದ ಅಭಾವ ಆಗಿರುವ 10-12 ತಾಲೂಕು ಇವೆ. ಈ ತಾಲೂಕು ಬರ ಘೋಷಣೆಗೆ ಜನ ಪ್ರತಿನಿಧಿಗಳು ಒತ್ತಡ ಹಾಕುತ್ತಿದ್ದಾರೆ. ಈ ತಿಂಗಳ ಕೊನೆಯಲ್ಲಿ ಮಾಡುತ್ತೇವೆ. ಆ ಸಭೆಯಲ್ಲಿ ಉಳಿದ ತಾಲೂಕು ಬರ ಘೋಷಣೆ ಮಾಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಆಸ್ತಿ ನೋಂದಣಿ ಮಾರ್ಗಸೂಚಿ ದರ ಹೆಚ್ಚಳ – ಅಕ್ಟೋಬರ್ 1 ರಿಂದ ಜಾರಿ: ಕೃಷ್ಣಭೈರೇಗೌಡ
ಬೇರೆ ಬೇರೆ ರಾಜ್ಯಗಳಲ್ಲೂ ಬರ ಬಂದಿದೆ. ಆದರೆ ಯಾವುದೇ ರಾಜ್ಯಗಳು ಬರ ಎಂದು ಘೋಷಣೆ ಮಾಡಿಲ್ಲ. ನಾವು ಎಚ್ಚರಿಕೆವಹಿಸಿ ಬರ ಘೋಷಣೆ ಮಾಡಿದ್ದೇವೆ. ಕೇಂದ್ರದ ಅಧಿಕಾರಗಳ ಜೊತೆ ನಮ್ಮ ಅಧಿಕಾರಗಳು ಸಂಪರ್ಕದಲ್ಲಿ ಇದ್ದಾರೆ. ನಮ್ಮಲ್ಲಿ ಈ ಬಾರಿ ಬೆಳೆಯಲ್ಲಿ ಸ್ವಲ್ಪ ವ್ಯತ್ಯಾಸಗಳು ಆಗಿವೆ. ಬೆಳೆ ಬಂದಿದೆ. ಬೆಳೆ ಹಸಿರಾಗಿದೆ, ಆದರೆ ಇಳುವರಿ ಬರುತ್ತಿಲ್ಲ. ಹೀಗಾಗಿ 4 ಕೃಷಿ ವಿವಿಗಳಿಗೆ ಈ ಬೆಳೆಗಳ ಬಗ್ಗೆ ಅಧ್ಯಯನ ಮಾಡಿ 3-4 ದಿನಗಳಲ್ಲಿ ವರದಿ ನೀಡಲು ತಿಳಿಸಲಾಗಿದೆ. ಇಂತಹ ಬೆಳೆಯನ್ನು ಗ್ರೀನಿ ಡ್ರೌಟ್ ಅಂತ ಈಗಾಗಲೇ ವರದಿಯಲ್ಲಿ ಸೇರಿಸಲಾಗಿದೆ. ಬೆಳೆ ಹಸಿರಾಗಿ ಇದ್ದರೂ ಇಳುವರಿ ಬರುವುದಿಲ್ಲ. ಇದಕ್ಕೆ ಕೇಂದ್ರ ಆಕ್ಷೇಪ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೃಷಿ ವಿವಿಗಳಿಗೆ ಅಧ್ಯಯನ ಮಾಡಲು ತಿಳಿಸಲಾಗಿದೆ. ವೈಜ್ಞಾನಿಕ ಅಧ್ಯಯನ ಮಾಡಿ ಇದನ್ನು ಕೇಂದ್ರಕ್ಕೆ ವರದಿ ಕೊಡುತ್ತೇವೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್
ಬರಕ್ಕೆ ಸಂಪೂರ್ಣ ಪರಿಹಾರ ಕೊಡಲು ಸಾಧ್ಯವಿಲ್ಲ. ಆದರೆ ಆದಷ್ಟು ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಇನ್ನು ಬಿಜೆಪಿಯವರಿಂದ ಬರ ಪರಿಹಾರಕ್ಕೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಕೊಡಲ್ಲ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ
ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ (Rain) ಸುರಿಯುತ್ತಿರುವ ಪರಿಣಾಮ ರಾಯಗಢ (Raigad) ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಭೂಕುಸಿತ (Land Slide) ಉಂಟಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಭೂಕುಸಿತದಿಂದಾಗಿ ಗುಡ್ಡದಿಂದ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಮನೆಗಳ ಮೇಲೆ ಬಿದ್ದಿದ್ದು, ಸುಮಾರು 30 ಮನೆಗಳು ಮಣ್ಣಿನ ಅಡಿಯಲ್ಲಿ ಹೂತುಹೋಗಿವೆ. ಘಟನೆ ನಡೆದ ಸ್ಥಳವಾದ ಇರ್ಸಾಲವಾಡಿ (Irsalwadi) ಬೆಟ್ಟದ ಮೇಲಿರುವ ಒಂದು ಹಳ್ಳಿಯಾಗಿದ್ದು, ಅಲ್ಲಿಗೆ ಸಂಚರಿಸಲು ಸರಿಯಾದ ಮಾರ್ಗವಿಲ್ಲ. ಆ ಹಳ್ಳಿಯನ್ನು ತಲುಪಬೇಕಾದರೆ ಸುಮಾರು 1 ಕಿಲೋ ಮೀಟರ್ನಷ್ಟು ದೂರ ಚಾರಣ ಮಾಡಬೇಕು. ಇದನ್ನೂ ಓದಿ: ಚೀತಾಗಳ ಸಾವು ಉತ್ತಮ ಬೆಳವಣಿಗೆಯಲ್ಲ: ಸುಪ್ರೀಂ
ಘಟನೆಯ ಬಗ್ಗೆ ಅರಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಗುರುವಾರ ಬೆಳಗ್ಗೆ ಭೂಕುಸಿತ ಉಂಟಾದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವ ಬಗ್ಗೆ, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ – ಸುಪ್ರೀಂಕೋರ್ಟ್ ಅಸಮಾಧಾನ, ಸ್ವಯಂ ದೂರು ದಾಖಲು
ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧಕಾರ್ಯವನ್ನು ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುತ್ತಿದೆ. ಎನ್ಡಿಆರ್ಎಫ್, ಅಗ್ನಿ ಶಾಮಕದಳ ಮತ್ತು ಪೊಲೀಸರು ಕಾಲ್ನಡಿಗೆಯಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದು, ಹತ್ತಿಕೊಂಡು ಹೋಗುವ ಸಂದರ್ಭ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ – ಓರ್ವ ಆರೋಪಿ ಅರೆಸ್ಟ್
ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುವ ಸಲುವಾಗಿ ಮುಂಬೈನ ಸಾಂತಾಕ್ರೂಜ್ ವಿಮಾನ ನಿಲ್ದಾಣದಲ್ಲಿ ಎರಡು ಹೆಲಿಕಾಪ್ಟರ್ಗಳು ಸಿದ್ಧವಾಗಿದೆ. ಆದರೆ ಹವಾಮಾನ ಪರಿಸ್ಥಿತಿ ಸರಿಯಿಲ್ಲದ ಕಾರಣದಿಂದಾಗಿ ವಿಮಾನ ಹಾರಾಟ ಕಷ್ಟಕರವಾಗಿದ್ದು, ಅಪಾಯಕಾರಿಯಾಗಿದೆ. ಸದ್ಯ 150 ಎನ್ಡಿಆರ್ಎಫ್ (NDRF) ಸಿಬ್ಬಂದಿ ಮತ್ತು 500 ಸಿಐಡಿಸಿಒ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದು, ಘಟನೆ ನಡೆದ ಸ್ಥಳವನ್ನು ತಲುಪಲು ಸುಮಾರು 60-90 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ – ತಪ್ಪಿಸ್ಥರನ್ನ ಬಿಡೋದಿಲ್ಲ ; ಮಣಿಪುರ ಘಟನೆ ಸಂಬಂಧ ಮೋದಿ ಫಸ್ಟ್ ರಿಯಾಕ್ಷನ್
ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ರಾಯಗಢದ ಆರು ಪ್ರಮುಖ ನದಿಗಳ ಪೈಕಿ ಸಾವಿತ್ರಿ ಮತ್ತು ಪಾತಾಳಗಂಗಾ ಎಂಬ ಎರಡು ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಅಲ್ಲದೇ ಕುಂಡಲಿಕಾ ಮತ್ತು ಅಂಬಾ ನದಿಗಳು ಎಚ್ಚರಿಕಾ ಘಟ್ಟವನ್ನು ತಲುಪಿದ್ದು, ಗಧಿ ಮತ್ತು ಉಲ್ಲಾಸ್ ಎಂಬ ನದಿಗಳು ಅಲರ್ಟ್ ಮಾರ್ಕ್ನ ಸಮೀಪ ತಲುಪಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: Hit and Run – ಕಾರು ಚಾಲಕನ ಹುಚ್ಚಾಟಕ್ಕೆ 9 ಬಲಿ, 13 ಮಂದಿಗೆ ಗಾಯ