Tag: Neelamani Raju

  • ಪೊಲೀಸ್ ಮಹಾನಿರ್ದೇಶಕರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ?

    ಪೊಲೀಸ್ ಮಹಾನಿರ್ದೇಶಕರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ?

    ಬೆಂಗಳೂರು: ಅದು ಅಂತಿಂತ ಸಾಮಾನ್ಯ ಹುದ್ದೆಯಲ್ಲ. ಐಎಎಸ್‍ನಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೇಗೋ ಐಪಿಎಸ್‍ನಲ್ಲಿ ಡಿಜಿ ಅಂಡ್ ಐಜಿಪಿ ಹುದ್ದೆಗಿರುವ ಮಹತ್ವ ಅಂತದ್ದು. ಐಪಿಎಸ್ ಆಗುವ ಪ್ರತಿಯೊಬ್ಬ ಅಧಿಕಾರಿಯ ಆಸೆ ಕೂಡ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಬೇಕು ಎನ್ನುವುದು.

    ಡಿಜಿ ಅಂಡ್ ಐಜಿಪಿ ಪೋಸ್ಟ್ ನಲ್ಲಿದ್ದವರ ನಿವೃತ್ತಿಯ ದಿನ ಹೇಗಿರುತ್ತೆ ಗೊತ್ತಾ? ನಿಜಕ್ಕೂ ಇದು ಕುತೂಹಲವೇ ಸರಿ. ನಿವೃತ್ತಿಯ ದಿನದಂದು ಇಡೀ ಐಪಿಎಸ್ ಅಧಿಕಾರಿಗಳು ಡಿಜಿ ಕಚೇರಿಗೆ ಕ್ರಾಸ್ ಬೆಲ್ಟ್‌ನಲ್ಲಿ ಬಂದು ಗೌರವ ಸಲ್ಲಿಸುತ್ತಾರೆ. ಕೆಎಸ್‌ಆರ್‌ಪಿ ವತಿಯಿಂದ ಗಾರ್ಡ್ ಆಫ್ ಹಾನರ್ ಸಲ್ಲಿಸಲಾಗುತ್ತದೆ. ಅಷ್ಟೇ ಅಲ್ಲದೆ ಹಿರಿಯ ಅಧಿಕಾರಿಗಳ ಜೊತೆ ಅವತ್ತು ಟೀ ಕುಡಿಯುತ್ತಾರೆ. ಇದನ್ನೂ ಓದಿ: ಡಿಜಿ-ಐಜಿಪಿ ನೀಲಮಣಿ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ನಿವೃತ್ತಿ

    ಡಿಜಿ ಕಚೇರಿಯನ್ನು ತಳಿರು ತೋರಣಗಳಿಂದ ಅಲಂಕೃತಗೊಳಿಸಿ, ಒಂದು ಜೀಪ್ ಅನ್ನು ಸಹ ಹೂಗಳಿಂದ ಅಲಂಕೃತಗೊಳಿಸುತ್ತಾರೆ. ಆ ಜೀಪ್‍ನ ಮುಂಭಾಗದಲ್ಲಿ ಎರಡೂ ಕಡೆ ಉದ್ದದ ಹಗ್ಗ ಕಟ್ಟುತ್ತಾರೆ. ಸಂಜೆ ವೇಳೆಗೆ ಅಲಂಕೃತ ಜೀಪ್‍ನಲ್ಲಿ ನಿರ್ಗಮಿತ ಡಿಜಿ ಅಂಡ್ ಐಜಿಪಿಯವರನ್ನ ನಿಲ್ಲಿಸಲಾಗುತ್ತದೆ. ಐಪಿಎಸ್ ಅಧಿಕಾರಿ ವರ್ಗ ತೇರು ಎಳೆದಂತೆ ಜೀಪನ್ನು ಎಳೆದುಕೊಂಡು ಹೋಗಿ ಡಿಜಿಯವರನ್ನು ಅವರ ಮನೆಗೆ ಬಿಡುತ್ತಾರೆ. ಇದೊಂಥಾರ ನೋಡಲು ರೋಮಾಂಚಕ ಅನುಭವ ಕೊಡುತ್ತದೆ. ಹೀಗೆ ನಿರ್ಗಮಿತ ಡಿಜಿ ಅಂಡ್ ಐಜಿಪಿಯವರ ಕೊನೆಯ ಸೇವಾ ದಿನವನ್ನ ಅವಿಸ್ಮರಣೀಯವಾಗಿ ನೋಡಿಕೊಳ್ಳಲಾಗುತ್ತದೆ. ಇದನ್ನೂ ಓದಿ: ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

  • ಡಿಜಿ-ಐಜಿಪಿ ನೀಲಮಣಿ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ನಿವೃತ್ತಿ

    ಡಿಜಿ-ಐಜಿಪಿ ನೀಲಮಣಿ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ನಿವೃತ್ತಿ

    ಬೆಂಗಳೂರು: ರಾಜ್ಯದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕರಾಗಿ ಎರಡುವರೆ ವರ್ಷ ಮೂರು ತಿಂಗಳ ಕಾಲ ಅಧಿಕಾರ ನಡೆಸಿದ ನೀಲಮಣಿ ಎನ್.ರಾಜು ಇಂದು ಸೇವೆಯಿಂದ ನಿವೃತ್ತಿಹೊಂದಿದರು.

    ಡಿಜಿ, ಐಜಿಪಿ ಜೊತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳು ನಿವೃತ್ತಿ ಪಡೆದರು. ಅಗ್ನಿಶಾಮಕ ದಳದ ಡಿಜಿಪಿ ಎಂ.ಎನ್.ರೆಡ್ಡಿ, ವಸತಿ ಮೂಲ ಸೌಕರ್ಯ ನಿಗಮದ ಡಿಜಿಪಿ ನಿವೃತ್ತಿಯಾದರು. ನಿವೃತ್ತಿಯಾದ ಮೂವರು ಅಧಿಕಾರಿಗಳಿಗೆ ಕೋರಮಂಗಲ ಕೆಎಸ್‌ಆರ್‌ಪಿ ಮೈದಾನದಲ್ಲಿ ಬಿಳ್ಕೋಡೆಗೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು.

    ಕಾರ್ಯಕ್ರಮದಲ್ಲಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಹಿರಿಯ ಅಧಿಕಾರಿಗಳ ಬಿಳ್ಕೋಡೆಗೆ ಕಾರ್ಯಕ್ರಮಕ್ಕೆ ಗೃಹ ಇಲಾಖೆ ಅಪರ ಕಾರ್ಯದರ್ಶಿ ರಜನೀಶ್ ಗೊಯಲ್, ಇಲಾಖೆಯ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

    ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸಾರಥಿಯಾಗಿ ಕೆಲಸ ಮಾಡುವುದಕ್ಕೆ ಸಹಕಾರ ನೀಡಿದ ಸರ್ಕಾರಕ್ಕೆ ಹಾಗೂ ಸಹೋದ್ಯೋಗಿಗಳಿಗೆ ಧನ್ಯವಾದಗಳು. ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ಭದ್ರತೆಗೆ ಕೇಂದ್ರ ಚುನಾವಣಾ ಆಯೋಗ ಪ್ರಶಂಸೆಯ ಪತ್ರಕೊಟ್ಟಿದೆ. ಇದು ಕರ್ನಾಟಕ ಪೊಲೀಸರಿಗೆ ಸಿಕ್ಕ ದೊಡ್ಡಗೌರವ. ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ ಇಲಾಖೆಯಲ್ಲಿ ಜನಸ್ನೇಹಿ ಪೊಲೀಸ್ ಸೇರಿ ಹಲವು ರೀತಿಯ ಬದಲಾವಣೆಗಳನ್ನ ಮಾಡಿದ್ದೇನೆ. ಇಲಾಖೆಯಲ್ಲಿ 100 ಪರ್ಸೆಂಟ್ ಯಶಸ್ಸು ಖಂಡಿರುವ ಹೆಮ್ಮೆ ಇದೆ ಎಂದು ತನ್ನ ಅಧಿಕಾರದ ಅವಧಿಯಲ್ಲಾದ ಕೆಲಸಗಳು ಹಾಗೂ ಘಟನೆಗಳ ಬಗ್ಗೆ ನೀಲಮಣಿ ಅವರು ಮೇಲಕು ಹಾಕಿದರು.

  • ಕೊಲ್ಲೂರಿನಲ್ಲಿ ಡಿಜಿಪಿ ನೀಲಮಣಿ ರಾಜು ಕುಟುಂಬದಿಂದ ಚಂಡಿಕಾಹೋಮ

    ಕೊಲ್ಲೂರಿನಲ್ಲಿ ಡಿಜಿಪಿ ನೀಲಮಣಿ ರಾಜು ಕುಟುಂಬದಿಂದ ಚಂಡಿಕಾಹೋಮ

    ಉಡುಪಿ: ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಆಗಮಿಸಿ ಚಂಡಿಕಾಹೋಮ ನಡೆಸಿದ್ದಾರೆ. ಪತಿ ನಿವೃತ್ತ ಐಎಎಸ್ ಅಧಿಕಾರಿ ನರಸಿಂಹ ರಾಜು ಜೊತೆಗಿದ್ದರು.

    ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಪತಿ ಡಿ.ಎನ್ ನರಸಿಂಹರಾಜು ಅವರೊಂದಿಗೆ ಸೋಮವಾರ ಸಂಜೆಯೇ ಬಂದು ತಂಗಿದ್ದರು. ಇಂದು ಮುಂಜಾನೆ ಕೊಲ್ಲೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ, ಪೂಜೆ ಮಾಡಿಸಿದ್ದಾರೆ.

    ಬೆಳಗ್ಗೆ ಏಳು ಗಂಟೆಗೆ ಚಂಡಿಕಾ ಹೋಮದ ಸಂಕಲ್ಪದಲ್ಲಿ ಸ್ವತಃ ಡಿಜಿಪಿ ಪಾಲ್ಗೊಂಡರು. ಸಂಪೂರ್ಣ ಚಂಡಿಕಾ ಹೋಮ ನಡೆಯುವವರೆಗೆ ಪತಿ ಪತ್ನಿ ಯಜ್ಞಶಾಲೆಯಲ್ಲೇ ಎಲ್ಲಾ ವಿಧಿ ವಿಧಾನಗಳಲ್ಲಿ ಭಾಗಿಯಾದರು.

    ಡಿಜಿಪಿ ನೀಲಮಣಿ ರಾಜು ದಂಪತಿಗೆ ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಕಡೆಯಿಂದ ಗೌರವ ಸಮರದಪಿಸಲಾಯ್ತು. ನೀಲಮಣಿ ರಾಜು ಈ ಹಿಂದೆಯೇ ಕೊಲ್ಲೂರಿನಲ್ಲಿ ಚಂಡಿಕಾಹೋಮ ನಡೆಸುವ ಹರಕೆ ಹೊತ್ತಿದ್ದರು ಎಂದು ಆಡಳಿತ ಮಂಡಳಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದೆ.

  • ಆರ್ಡರ್ ಮಾಡಿದ ಮೂರೇ ಗಂಟೆಯಲ್ಲಿ 21 ಡಿವೈಎಸ್‌ಪಿ, 110 ಮಂದಿ ಇನ್‌ಸ್ಪೆಕ್ಟರ್‌ ವರ್ಗಕ್ಕೆ ತಡೆ

    ಆರ್ಡರ್ ಮಾಡಿದ ಮೂರೇ ಗಂಟೆಯಲ್ಲಿ 21 ಡಿವೈಎಸ್‌ಪಿ, 110 ಮಂದಿ ಇನ್‌ಸ್ಪೆಕ್ಟರ್‌ ವರ್ಗಕ್ಕೆ ತಡೆ

    – ಡಿಜಿಪಿ ನೀಲಮಣಿ ರಾಜು ಆದೇಶ

    ಬೆಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆದಿದ್ದು, ಸಂಕಷ್ಟದಲ್ಲೂ ಡಿವೈಎಸ್‍ಪಿ ಮತ್ತು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ವರ್ಗಾವಣೆ ಆದೇಶಕ್ಕೆ ಡಿಜಿಪಿ ನೀಲಮಣಿ ರಾಜು ತಡೆ ನೀಡಿದ್ದಾರೆ.

    110 ಮಂದಿ ಇನ್‌ಸ್ಪೆಕ್ಟರ್‌ ಮತ್ತು 21 ಜನ ಡಿವೈಎಸ್‍ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಡಿವೈಎಸ್‍ಪಿ ಮತ್ತು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಅವರು ವರ್ಗಾವಣೆ ಆದೇಶಕ್ಕೆ ತಡೆ ಹಿಡಿದಿದ್ದಾರೆ.

    ಸಂಜೆ ಸುಮಾರು 7 ಗಂಟೆಗೆ ಡಿವೈಎಸ್‍ಪಿ ಮತ್ತು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ರಾತ್ರಿ 10 ಗಂಟೆಗೆ ಸರ್ಕಾರದ ವರ್ಗಾವಣೆ ಆದೇಶವನ್ನು ನೀಲಮಣಿ ಅವರು ಕ್ಯಾನ್ಸಲ್ ಮಾಡಿದ್ದಾರೆ.

    ಉಲ್ಲೇಖಿತ ಈ ಕಚೇರಿಯ ಆದೇಶಗಳಲ್ಲಿ ವರ್ಗಾಯಿಸಿರುವ ಡಿವೈಎಸ್‍ಪಿ ಮತ್ತು ಪೊಲೀಸ್ ಇನ್‌ಸ್ಪೆಕ್ಟರ್‌ ಅವರುಗಳ ವರ್ಗಾವಣೆಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ. ಸಂಬಂಧಪಟ್ಟ ಘಟಕಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ಎಂದು ನೀಲಮಣಿಯವರು ಪತ್ರ ಬರೆದಿದ್ದಾರೆ.

  • ನಿಷೇಧಿತ ಒಂಟೆ ಮಾಂಸ ಮಾರಾಟಕ್ಕೆ ಪೊಲೀಸರೇ ಬೆಂಗಾವಲು

    ನಿಷೇಧಿತ ಒಂಟೆ ಮಾಂಸ ಮಾರಾಟಕ್ಕೆ ಪೊಲೀಸರೇ ಬೆಂಗಾವಲು

    – ಸಾಕ್ಷಿ ನಾಶ ಮಾಡಿದ ಸಿಪಿಐ ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

    ಕಲಬುರಗಿ: ನಿಷೇಧಿತ ಒಂಟೆ ಮಾಂಸ ಮಾರಾಟದ ಸಾಕ್ಷಿ ನಾಶ ಮಾಡಿದ ಕಲಬುರಗಿಯ ಎಂಬಿ ನಗರ ಠಾಣೆಯ ಸಿಪಿಐ ಸೇರಿದಂತೆ ಐವರು ಪೊಲೀಸರ ಅಮಾನತುಗೊಳಿಸಿ ಈಶಾನ್ಯ ವಲಯ ಐಜಿಪಿ ಮನೀಶ್ ಖರ್ಬಿಕರ್ ಆದೇಶ ಹೊರಡಿಸಿದ್ದಾರೆ.

    ಎಂಬಿ ನಗರ ಠಾಣೆಯ ಸಿಪಿಐ ವಾಜಿದ್ ಪಟೇಲ್, ಪಿಎಸ್‍ಐ ದೊಡ್ಡಮನಿ, ಪೇದೆಗಳಾದ ಶ್ರೀಶೈಲ್, ಮಲ್ಲಿಕಾರ್ಜುನ್ ಸೇರಿದಂತೆ ಒಟ್ಟು ಐದು ಜನರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಈ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

    ಏನಿದು ಪ್ರಕರಣ?:
    ಲಾರಿಗಳ ಮೂಲಕ ರಾಜಸ್ಥಾನದಿಂದ ಕಲಬುರಗಿಗೆ ಒಂಟೆಗಳನ್ನು ತರಲಾಗುತ್ತಿದೆ. ಅಷ್ಟೇ ಅಲ್ಲದೆ ಅವುಗಳನ್ನು ನಗರದ ಹೊರ ವಲಯದಲ್ಲಿ ಹತ್ಯೆ ಮಾಡಿ, ಮಾಂಸವನ್ನು ಮಾರಾಟ ಮಾಡಲಾಗುತ್ತದೆ ಎಂದು ಆಂಧ್ರಪ್ರದೇಶದ ಪ್ರಾಣಿ ದಯಾ ಸಂಘದ ಕೆಲ ಸದಸ್ಯರು ಕಲಬುರಗಿ ಶಾಸಕ ದತ್ತಾತ್ರೇಯ ಅವರಿಗೆ ಮಾಹಿತಿ ನೀಡಿದ್ದರು. ಅಷ್ಟೇ ಅಲ್ಲದೇ ಒಂಟೆ ಮಾಂಸ ಮಾರಾಟದ ದಂಧೆಯ ಹಿಂದೆ ದೊಡ್ಡ ಗುಂಪಿದೆ. ಈಗಾಗಲೇ 100ಕ್ಕೂ ಹೆಚ್ಚು ಒಂಟೆಗಳನ್ನು ಕೊಯ್ದು ಮಾಂಸ ಮಾರಾಟ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

    ಆಂಧ್ರಪ್ರದೇಶದ ಪ್ರಾಣಿ ದಯಾ ಸಂಘದ ಸದಸ್ಯರಿಂದ ಮಾಹಿತಿ ಪಡೆದ ಶಾಸಕ ದತ್ತಾತ್ರೇಯ ಅವರು ಪೊಲೀಸರ ಗಮನಕ್ಕೆ ತಂದಿದ್ದರು. ಈ ಸಂಬಂಧ ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಳ್ಳಲಿಲ್ಲ. ಇದರಿಂದಾಗಿ ಆಂಧ್ರಪ್ರದೇಶದ ಪ್ರಾಣಿ ದಯಾ ಸಂಘದ ಸದಸ್ಯರು ಕೇಂದ್ರ ಸಚಿವೆ, ಪ್ರಾಣಿ ಹಕ್ಕು ಕಾರ್ಯಕರ್ತೆ ಮನೇಕಾ ಗಾಂಧಿ ಅವರಿಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮನೇಕಾ ಗಾಂಧಿ ಅವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ (ಡಿಜಿಪಿ) ನೀಲಮಣಿ ಅವರಿಗೆ ಪತ್ರ ಬರೆದಿದ್ದರು.

    ಮನೇಕಾ ಗಾಂಧಿ ಅವರು ಸೂಚನೆ ಹಿನ್ನೆಲೆಯಲ್ಲಿ ಡಿಜಿಪಿ ನೀಲಮಣಿ ಅವರು ಐಜಿಪಿ ಮನೀಷ್ ಖರ್ಬಿಕರ್ ಅವರಿಗೆ ಸ್ಥಳ ಪರಿಶೀಲನೆ ನಡೆಸುವಂತೆ ತಿಳಿದ್ದರು. ಆದರೆ ಮನೀಷ್ ಅವರು ಸ್ಥಳಕ್ಕೆ ಬರುವ ಮುನ್ನವೇ ಸಿಪಿಐ ವಾಜಿದ್ ಪಟೇಲ್ ಸಾಕ್ಷಿ ನಾಶಪಡಿಸಿದ್ದರು. ಹೀಗಾಗಿ ಒಂಟೆ ಮಾರಾಟ ದಂಧೆಗೆ ಎಂಬಿ ನಗರ ಠಾಣೆಯ ಸಿಪಿಐ ವಾಜಿದ್ ಪಟೇಲ್ ಬೆಂಗಾವಲಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಒಟ್ಟು ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಮನೀಷ್ ಅವರು ಆದೇಶ ಹೊರಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರತ್ ಬಂದ್ – ಖಡಕ್ ಸೂಚನೆ ನೀಡಿದ ಡಿಜಿಪಿ ನೀಲಮಣಿ ರಾಜು

    ಭಾರತ್ ಬಂದ್ – ಖಡಕ್ ಸೂಚನೆ ನೀಡಿದ ಡಿಜಿಪಿ ನೀಲಮಣಿ ರಾಜು

    ಬೆಂಗಳೂರು: ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಅವರು ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸರಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ.

    ಕಾರ್ಮಿಕ ಸಂಘಟನೆಗಳು 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎರಡು ದಿನ ಭಾರತ್ ಬಂದ್ ಮಾಡಿದ್ದಾರೆ. ಆದ್ದರಿಂದ ಎರಡು ದಿನ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಗೆ ಡಿಜಿಪಿ ನೀಲಮಣಿ ರಾಜು ಅವರು ಸೂಚನೆ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳು ಮತ್ತು ಪಟ್ಟಣಗಳಲ್ಲಿ ಹೆಚ್ಚಿನ ಬಂದೋಬಸ್ತ್ ಒದಗಿಸಲಾಗಿದೆ. ರಾಜ್ಯಾದ್ಯಂತ ಬಂದೋಬಸ್ತ್ ಗಾಗಿ ಬರೋಬ್ಬರಿ 54 ಸಾವಿರ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

    ಜಿಲ್ಲೆಗಳಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಬಲವಂತವಾಗಿ ಬಂದ್ ಮಾಡುವುದು, ತೊಂದರೆ ಕೊಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆಯನ್ನು ಕೊಟ್ಟಿದ್ದಾರೆ. ಒಟ್ಟಿನಲ್ಲಿ ಈ ಬಂದ್ ನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೇಚ್ಛರಿಕೆಗೆ ವಹಿಸುವಂತೆ ಎಲ್ಲ ಜಿಲ್ಲೆಗಳ ಎಸ್‍ಪಿ, ಐಜಿಪಿಗಳು ಮತ್ತು ಕಮೀಷನರೇಟ್ ಗಳಿಗೆ ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಮತಾ ಬ್ಯಾನರ್ಜಿ ಕನ್ನಡಿಗರಲ್ಲಿ ಕ್ಷಮೆ ಕೋರಬೇಕು: ಸಿಟಿ ರವಿ

    ಮಮತಾ ಬ್ಯಾನರ್ಜಿ ಕನ್ನಡಿಗರಲ್ಲಿ ಕ್ಷಮೆ ಕೋರಬೇಕು: ಸಿಟಿ ರವಿ

    ಬೆಂಗಳೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರ್ತವ್ಯ ನಿರತ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಅಗೌರವ ಸೂಚಿಸಿದ್ದಕ್ಕೆ ಸಾರ್ವಜನಿಕವಾಗಿ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಎಂದು ಟ್ವಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.

    ಸರ್ವಾಧಿಕಾರತ್ವವನ್ನು ಪಶ್ಚಿಮ ಬಂಗಾಳದ ನಿಮ್ಮ ಪಕ್ಷದಲ್ಲಿ ತೋರಿಸಿ, ಕರ್ನಾಟಕದಲ್ಲಿ ಅಲ್ಲ. ನಿಮ್ಮ ಕೈಯಲ್ಲಿ ಕೆಲಸ ಮಾಡುವರಿಗೆ ತಾವು ದೆವ್ವದ ಅಡಿಯಲ್ಲಿದ್ದೇವೆ ಎಂಬುವುದು ಗೊತ್ತಿಲ್ಲ ಎಂದು ಸಿ.ಟಿ.ರವಿ ವ್ಯಂಗ್ಯ ಮಾಡಿದ್ದಾರೆ.

    ಆಗಿದ್ದೇನು?
    ಬುಧವಾರ ಪದಗ್ರಹಣಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ಅವರಿಗೆ ಬೆಂಗಳೂರಿನ ಟ್ರಾಫಿಕ್ ಬಿಸಿ ತಟ್ಟಿತ್ತು. ಟ್ರಾಫಿಕ್ ನಲ್ಲಿ ಸಿಲುಕಿದ್ದ ಸಿಎಂ ಸಮಾರಂಭಕ್ಕೆ ತಡವಾಗುತ್ತೆಂದು ಅರಿತು ಕಾರಿನಿಂದ ಇಳಿದು ಕೆಲವು ಮೀಟರ್ ಗಳಷ್ಟು ನಡೆದುಕೊಂಡು ಬಂದ್ರು. ವೇದಿಕೆಯತ್ತ ಆಗಮಿಸುತ್ತಿದ್ದಂತೆ ಎದುರಾದ ಡಿಐಜಿ ನೀಲಮಣಿ ರಾಜು ಮೇಲೆ ಹರಿಹಾಯ್ದರು. ಹಾಗೇ ಮುಂದೆ ನಿಂತಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ನೂತನ ಸಿಎಂ ಕುಮಾರಸ್ವಾಮಿ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

  • ರಾಜ್ಯದ ಮೊದಲ ಮಹಿಳಾ ಡಿಜಿಯಾಗಿ ನೀಲಮಣಿ ರಾಜು ಆಯ್ಕೆ

    ರಾಜ್ಯದ ಮೊದಲ ಮಹಿಳಾ ಡಿಜಿಯಾಗಿ ನೀಲಮಣಿ ರಾಜು ಆಯ್ಕೆ

    ಬೆಂಗಳೂರು: ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ರಾಜು ಆಯ್ಕೆ ಆಗಿದ್ದು, ಈ ಮೂಲಕ ಈ ಹುದ್ದೆ ಏರಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಪೊಲೀಸ್ ಮಹಾನಿರ್ದೇಶಕ ದತ್ತಾ ಅವರ ಅಧಿಕಾರಾವಧಿ ಇಂದಿಗೆ(ಅಕ್ಟೋಬರ್ 31) ಮುಕ್ತಾಯವಾಗಲಿದ್ದು, ಈ ಹುದ್ದೆಗೆ ಹುದ್ದೆಗೆ ಹಿರಿತನದ ಆಧಾರದಲ್ಲಿ ನೀಲಮಣಿ ರಾಜು ಅವರ ಹೆಸರು ಮುಂದಿದ್ದ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನೇ ಆಯ್ಕೆ ಮಾಡಿದೆ.

    ಉತ್ತರಾಖಂಡ್ ಮೂಲದ ನೀಲಮಣಿ ರಾಜು ನೀಲಮಣಿ ರಾಜು ಅವರು 1983ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು. ಎಂಎ, ಎಂಬಿಎ, ಎಂ.ಫಿಲ್ ಪದವೀಧರೆಯಾಗಿರುವ ಇವರ ಸೇವಾವಧಿಯು 2020ರ ಜನವರಿ ತಿಂಗಳವರೆಗೆ ಇರಲಿದೆ.

    ಸಂಜೆ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಗಮಿಸುತ್ತಿರುವ ಪೊಲೀಸ್ ಮಹಾ ನಿರ್ದೇಶಕ ರೂಪಕ್ ಕುಮಾರ್ ದತ್ತ ಅವರು ನೀಲಮಣಿ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

    ರಾಜ್ಯ ಪೊಲೀಸ್ ಮುಖ್ಯಸ್ಥ ಹುದ್ದೆಗೆ ಹಿರಿಯ ಐಪಿಎಸ್ ಅಧಿಕಾರಿ, ಕನ್ನಡಿಗ ಮೈಸೂರು ಮೂಲದ ಕಿಶೋರ್ ಚಂದ್ರ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಮುಖ್ಯಸ್ಥ ಎಂ.ಎನ್ ರೆಡ್ಡಿ ರೇಸ್‍ನಲ್ಲಿದ್ದರು.