Tag: Neelamaniraju

  • ಯಾರಾಗ್ತಾರೆ ಮುಂದಿನ ರಾಜ್ಯ ಪೊಲೀಸ್ ಮಹಾನಿರ್ದೇಶಕ?

    ಯಾರಾಗ್ತಾರೆ ಮುಂದಿನ ರಾಜ್ಯ ಪೊಲೀಸ್ ಮಹಾನಿರ್ದೇಶಕ?

    ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಸಮರ್ಥ ಅಧಿಕಾರಿ ಆಯ್ಕೆಗೆ ಸರ್ಕಾರ ಕಸರತ್ತು ಆರಂಭಿಸಿದೆ. ಹಾಲಿ ಡಿಜಿ-ಐಜಿಪಿ ನೀಲಮಣಿ ಎನ್ ರಾಜು ಅವರು ಇದೇ ತಿಂಗಳ 31ಕ್ಕೆ ನಿವೃತ್ತಿ ಹೊಂದಲಿದ್ದಾರೆ. ನೀಲಮಣಿ ಎನ್ ರಾಜು 2017ರ ಅಕ್ಟೋಬರ್‍ನಲ್ಲಿ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ನೇಮಕವಾಗಿದ್ದರು. ಇದೀಗ ನೀಲಮಣಿ ರಾಜು ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಡಿಜಿ ಐಜಿಪಿ ಆಯ್ಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

    ಡಿಜಿ-ಐಜಿಪಿ ಹುದ್ದೆಯ ರೇಸ್‍ನಲ್ಲಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ. ಸೇವಾ ಹಿರಿತನ ಹೊಂದಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎಎಂ ಪ್ರಸಾದ್, ಸಿಐಡಿ, ಡಿಜಿಪಿ ಪ್ರವೀಣ್ ಸೂದ್, ನೇಮಕಾತಿ ವಿಭಾಗದ ಡಿಜಿಪಿ ಪಿ.ಕೆ ಗರ್ಗ್ ಹೆಸರುಗಳು ಡಿಜಿ-ಐಜಿಪಿ ರೇಸ್‍ನಲ್ಲಿ ಕೇಳಿಬಂದಿದೆ.

    ಡಿಜಿ- ಐಜಿಪಿ ಹುದ್ದೆಗೆ ಸೇವಾ ಹಿರಿತನ ಹೊಂದಿರುವ ಈ ಮೂವರು ಹಿರಿಯ ಅಧಿಕಾರಿಗಳ ಹೆಸರುಗಳನ್ನೂ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳಿಸಿಕೊಟ್ಟಿದೆ. ಈ ಅಧಿಕಾರಿಗಳ ವೃತ್ತಿ ಬದುಕಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ ಸರ್ಕಾರ ರವಾನೆ ಮಾಡಿದೆ.

    ಸದ್ಯದಲ್ಲೇ ಕೇಂದ್ರ ಲೋಕಸೇವಾ ಆಯೋಗವು ಲಕೋಟೆ ಮೂಲಕ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಹೆಸರುಗಳನ್ನು ಆಯ್ಕೆ ಮಾಡಿ ಕಳಿಸಿಕೊಡಲಿದೆ. ಯುಪಿಎಸ್‍ಸಿ ಲಕೋಟೆ ಬಂದ ಬಳಿಕ ರಾಜ್ಯ ಸರ್ಕಾರ ಹೊಸ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಲಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಕೇಂದ್ರ ಲೋಕಸೇವಾ ಆಯೋಗಕ್ಕೆ ಡಿಜಿ-ಐಜಿಪಿ ಹುದ್ದೆಗೆ ಆಯ್ಕೆ ಮಾಡಬೇಕಾದ ಸಂಭಾವ್ಯರ ಹೆಸರುಗಳನ್ನು ಆಯ್ಕೆ ಮಾಡಿತ್ತು.

    ಸದ್ಯ ಡಿಜಿ-ಐಜಿಪಿ ಹುದ್ದೆಯ ರೇಸ್‍ನಲ್ಲಿ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಪ್ರಬಲವಾಗಿ ಕೇಳಿಬರ್ತಿದೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ ಪ್ರಸಾದ್ ಮತ್ತು ಸಿಐಡಿ ಡಿಜಿಪಿ ಪ್ರವೀಣ್ ಸೂದ್ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿದೆ.

    ಈ ಪೈಕಿ 1985 ಕೇಡರ್‍ನ ಅಧಿಕಾರಿ ಎ.ಎಂ ಪ್ರಸಾದ್ ಅವರಿಗೆ ಇನ್ನೂ 9 ತಿಂಗಳ ಸೇವಾವಧಿ ಇದೆ. 1986ನೇ ಕೇಡರ್‍ನ ಅಧಿಕಾರಿಗಳಾದ ಪ್ರವೀಣ್ ಸೂದ್ ಅವರಿಗೆ ಇನ್ನೂ 2 ವರ್ಷ ಸೇವಾವಧಿ ಉಳಿದಿದ್ರೆ, ಪಿ ಕೆ ಗರ್ಗ್ ಅವರಿಗೆ 1.5 ವರ್ಷ ಸೇವಾವಧಿ ಇದೆ.

  • ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

    ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

    ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಡಿಜಿ ನೀಲಮಣಿರಾಜು ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

    ಕುಮಾರಸ್ವಾಮಿ ಮನೆಗೆ ಡಿಜಿ ನೀಲಮಣಿರಾಜು ಭೇಟಿ ನೀಡಿ ಚರ್ಚೆ ನಡೆಸಿದ್ದು, ಭದ್ರತೆಯ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಿಎಂ ಅವರು, ಯಾವುದೇ ಕಾರಣಕ್ಕೂ ಬಹುಮತ ಸಾಬೀತುಪಡಿಸುವ ಸಮಯದಲ್ಲಿ ಗೊಂದಲ, ಗಲಾಟೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಶಾಸಕರು ವಿಧಾನಸೌಧಕ್ಕೆ ಬರುವ ಸಮಯದಲ್ಲಿ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ ಡಿಜಿ ನೀಲಮಣಿ ರಾಜು ಹೊರಟ ಬಳಿಕ ಇಂಟಲಿಜೆನ್ಸ್ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರ ಬಳಿಯೂ ಸಿಎಂ ಮಾಹಿತಿ ಪಡೆದಿದ್ದಾರೆ.

    ಸದ್ಯ ವಿಧಾನಸೌಧದ ಸುತ್ತಾಮುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.