Tag: Neene Rajkumar

  • ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ಬೆಂಗಳೂರು ವಿಶ್ವವಿದ್ಯಾಲಯ ಬಿಕಾಂ ಪಠ್ಯದಲ್ಲಿ ಪುನೀತ್ ರಾಜಕುಮಾರ್

    ವಾರದ ಹಿಂದೆಯಷ್ಟೇ ಪುನೀತ್ ರಾಜಕುಮಾರ್ (Puneeth Rajkumar) ಬಯೋಗ್ರಫಿ ‘ನೀನೇ ರಾಜಕುಮಾರ’ ನಾಲ್ಕನೇ ಆವೃತ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಅಭಿಮಾನಿಗಳು ಕೂಡ ಸಂಭ್ರಮಿಸಿದ್ದರು. ಈ ಸಂಭ್ರಮದ ಬೆನ್ನಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯವ (Bangalore University) ಪುನೀತ್ ಅವರ ಬದುಕನ್ನು ಹಿಡಿದಿಟ್ಟ ಕೃತಿ ‘ನೀನೇ ರಾಜಕುಮಾರ’ ಪುಸ್ತಕದ ಒಂದು ಅಧ್ಯಾಯವನ್ನು ಪಠ್ಯವಾಗಿಸಿದೆ.

    ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಪತ್ರಕರ್ತ ಡಾ.ಶರಣು ಹುಲ್ಲೂರು (Sharanu Hullur) ಬರೆದ, ಸಾವಣ್ಣ ಪ್ರಕಾಶನ ಹೊರ ತಂದಿರುವ ‘ನೀನೇ ರಾಜಕುಮಾರ್’ (Neene Rajkumar) ಕೃತಿಯ ಒಂದು ಅಧ್ಯಾಯವಾದ ‘ಲೋಹಿತ್ ಎಂಬ ಮರಿಮುದ್ದ’ ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ ಬೆಂಗಳೂರು ವಿಶ್ವವಿದ್ಯಾಲಯ. ಡಾ.ಮುನಿಯಪ್ಪ ಈ ಪಠ್ಯಪುಸ್ತಕದ (Textbook) ಪ್ರಧಾನ ಸಂಪಾದಕರಾಗಿದ್ದು, ಡಾ.ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ.ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಈ ವರ್ಷದ ಬಿ.ಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ಅಳವಡಿಸಲಾಗಿದೆ.

    ಮೊನ್ನೆಯಷ್ಟೇ ‘ನೀನೇ ರಾಜಕುಮಾರ’ ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷದಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿತ್ತು. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೂ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಕೃತಿಯನ್ನು ಹೆಸರಾಂತ ನಟ ಕಿಚ್ಚ ಸುದೀಪ್ ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದೆ.

    ಕೃತಿಯ ಬಿಡುಗಡೆ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ’ ಎಂದರು. ಅಲ್ಲದೇ ‘ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು. ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು ಮತ್ತು ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.

    ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ. ಪುನೀತ್ ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆಯಾಗಿದೆ. ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.