Tag: Negative

  • ರಶ್ಮಿಕಾ ಮಂದಣ್ಣ ‘ಥ್ಯಾಂಕ್ಯೂ ಮೈ ಲವ್ಸ್’ ಅಂತ ಹೇಳಿದ್ದು ಯಾರಿಗೆ?

    ರಶ್ಮಿಕಾ ಮಂದಣ್ಣ ‘ಥ್ಯಾಂಕ್ಯೂ ಮೈ ಲವ್ಸ್’ ಅಂತ ಹೇಳಿದ್ದು ಯಾರಿಗೆ?

    ಮ್ಮ ಬಗ್ಗೆ ಟ್ರೋಲ್ ಮಾಡುವವರ ವಿರುದ್ಧ ಇದೇ ಮೊದಲ ಬಾರಿಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು ನಟಿ ರಶ್ಮಿಕಾ ಮಂದಣ್ಣ. ನೆಗೆಟಿವ್ ಕಾಮೆಂಟ್ ಮಾಡುವುದಲ್ಲದೇ, ತಮ್ಮ ವಿರುದ್ಧ ಅಪಮಾನ ಮಾಡುವಂತಹ ಪಿತೂರಿ ನಡೆಯುತ್ತಲೇ ಇದೆ ಎಂದು ಹೇಳಿಕೊಂಡಿದ್ದರು. ರಶ್ಮಿಕಾ ಮಾತಿಗೆ ರಮ್ಯಾ ಕೂಡ ಧ್ವನಿಗೂಡಿಸಿದ್ದರು. ಯಾರೂ ಯಾರ ಬಗ್ಗೆಯೂ ಜಡ್ಜ್ ಮಾಡುವಂತಹ ಅಧಿಕಾರ ಇಲ್ಲವೆಂದು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದರು. ಅಲ್ಲದೇ, ರಶ್ಮಿಕಾ ಮಂದಣ್ಣಗೆ ಈ ವಿಷಯದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿತ್ತು. ಹಾಗಾಗಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ ರಶ್ಮಿಕಾ. ‘ಥ್ಯಾಂಕ್ಯೂ ಮೈ ಲವ್ಸ್’ ಎಂದು ಬೆಂಬಲಿಸಿದವರಿಗೆ ಹೇಳಿದ್ದಾರೆ.

    ತಮ್ಮ ಮೇಲೆ ಎಂತಹ ಆರೋಪ ಕೇಳಿ ಬಂದರೂ, ಈವರೆಗೂ ರಶ್ಮಿಕಾ ಮಂದಣ್ಣ ಆ ಕುರಿತು ಪ್ರತಿಕ್ರಿಯೆ ನೀಡಿರಲಿಲ್ಲ. ಗಾಸಿಪ್, ಟ್ರೋಲ್ ಪೇಜ್ ಸೇರಿದಂತೆ ಅನೇಕರು ರಶ್ಮಿಕಾ ಮಂದಣ್ಣ ಬಗ್ಗೆ ಸಲ್ಲದ ಆರೋಪಗಳನ್ನು ಮಾಡಿದ್ದರು. ರಕ್ಷಿತ್ ಶೆಟ್ಟಿ ಅವರಿಂದ ದೂರವಾದ ನಂತರ ಒಂದಿಲ್ಲೊಂದು ವಿಷಯ ಹಿಡಿದುಕೊಂಡು ರಶ್ಮಿಕಾ ಅವರನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿದರು. ಆದರೂ, ಈವರೆಗೂ ರಶ್ಮಿಕಾ ಒಂದೇ ಒಂದು ಮಾತು ಕೂಡ ಆಡಿರಲಿಲ್ಲ. ಇದೇ ಮೊದಲ ಬಾರಿಗೆ ಬಹಿರಂಗವಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ಕಳೆದ ಕೆಲ ವರ್ಷಗಳಿಂದ ಅನೇಕ ವಿಷಯಗಳು ಇವರನ್ನು ತೊಂದರೆ ಮಾಡಿವೆಯಂತೆ. ಅಷ್ಟೊಂದು ತೊಂದರೆ ಮಾಡಿದರೂ, ಅವರು ಸುಮ್ಮನಿದ್ದರಂತೆ. ಹಾಗೆ ಸುಮ್ಮನಿದ್ದ ಕಾರಣಕ್ಕಾಗಿ ಇದೀಗ ಅವರು ಪಶ್ಚಾತಾಪ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಸುಮ್ಮನಿರಬಾರದಿತ್ತು. ಮಾತನಾಡಲೇಬೇಕಿತ್ತು ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಸಿನಿಮಾ ರಂಗಕ್ಕೆ ಬಂದ ದಿನದಿಂದಲೂ ರಶ್ಮಿಕಾ ಅವರನ್ನು ದ್ವೇಷಿಸಲಾಗುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

    ಸಿನಿಮಾ ಕ್ಷೇತ್ರವಾಗಿ ಹಾಗಿದೆ. ಅದನ್ನು ನಾನು ಆಯ್ಕೆ ಮಾಡಿಕೊಂಡಿದ್ದು. ಹಾಗಾಗಿ ನಾನು ಒಂದು ರೀತಿಯಲ್ಲಿ ಪಂಚಿಂಗ್ ಬ್ಯಾಗ್ ಆಗಿ ಬಿಟ್ಟಿದ್ದೇನೆ ಎಂದು ಅವರು ನೊಂದುಕೊಂಡಿದ್ದಾರೆ. ನಾನು ಸುಮ್ಮನಿದ್ದೇನೆ ಅಂದರೆ, ಅದರ ಅರ್ಥ ನೆಗೆಟಿವಿವ್ ಹರಡಬಹುದು ಎನ್ನುವುದು ಅರ್ಥವಲ್ಲ ಎಂದು ಅವರು ತಿರುಗೇಟು ಕೂಡ ನೀಡಿದ್ದಾರೆ. ಸಂದರ್ಶನವೊಂದರ ಕುರಿತೂ ಮಾತನಾಡಿರುವ ಅವರು, ನನ್ನ ಸಂದರ್ಶನವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ದ್ವೇಷದಿಂದ ಏನೂ ಸಿಗುವುದಿಲ್ಲ. ಒಳ್ಳೆಯದನ್ನು ನಾನು ಯಾವತ್ತಿಗೂ ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಈವರೆಗೂ ನಾನು ಯಾರನ್ನೂ ದ್ವೇಷಿಸಿಲ್ಲ. ನನ್ನೊಂದಿಗೆ ಕೆಲಸ ಮಾಡಿದವರ ಜೊತೆ ಗೌರವದಿಂದ ಇದ್ದೇನೆ. ಎಲ್ಲರನ್ನೂ ನಾನು ಮೆಚ್ಚಿಕೊಂಡಿದ್ದೇನೆ. ಅಭಿಮಾನಿಗಳನ್ನು ರಂಜಿಸುವುದಕ್ಕಾಗಿ ಸತತವಾಗಿ ಪ್ರಯತ್ನಿಸುತ್ತಲೇ ಇದ್ದೇನೆ. ಆದರೂ, ನನ್ನ ಬಗ್ಗೆ ನೆಗೆಟಿವ್ ಕಾಮೆಂಟ್ ಹರಡುತ್ತಲೇ ಇದ್ದರು. ಅದರಿಂದ ಯಾರಿಗೂ ಸಂತೋಷ ಸಿಗುವುದಿಲ್ಲ. ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಶ್ಮಿಕಾ ಮಂದಣ್ಣ ಟ್ರೋಲ್: ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ರಶ್ಮಿಕಾ ಮಂದಣ್ಣ ಟ್ರೋಲ್: ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna)  ಕುರಿತಾದ ಟ್ರೋಲ್ ವಿಚಾರ ಎರಡು ದಿನಗಳಿಂದ ವಿಪರೀತ ಸುದ್ದಿಯಲ್ಲಿದೆ. ತಾವು ಸಿನಿಮಾ ರಂಗಕ್ಕೆ ಬಂದ ದಿನದಿಂದಲೂ ಈವರೆಗೂ ರಶ್ಮಿಕಾ ಕುರಿತು ನೆಗೆಟಿವ್ ಟ್ರೋಲ್ ಮಾಡಲಾಗುತ್ತಿದೆ. ಅಲ್ಲದೇ, ಸಲ್ಲದ ಆರೋಪಗಳನ್ನೂ ಹೊರಿಸಲಾಗುತ್ತಿದೆ ಎಂದು ರಶ್ಮಿಕಾ ಹೇಳಿಕೊಂಡಿದ್ದರು. ಇದೀಗ ರಶ್ಮಿಕಾ ಪರ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ಬ್ಯಾಟಿಂಗ್ ಮಾಡಿದ್ದಾರೆ. ಯಾರನ್ನೂ ಯಾರೂ ಜಡ್ಜ್ ಮಾಡಬಾರದು ಎಂದು ರಮ್ಯಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

    ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು ಬದುಕುವುದಕ್ಕೆ ಬಿಡಿ ಎಂದು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ರಶ್ಮಿಕಾ ಪರವಾಗಿ ರಮ್ಯಾ ನಿಂತಿದ್ದಾರೆ.

    ತಮ್ಮ ಮೇಲೆ ಎಂತಹ ಆರೋಪ ಕೇಳಿ ಬಂದರೂ, ಈವರೆಗೂ ರಶ್ಮಿಕಾ ಮಂದಣ್ಣ ಆ ಕುರಿತು ಪ್ರತಿಕ್ರಿಯೆ ನೀಡಿರಲಿಲ್ಲ. ಗಾಸಿಪ್, ಟ್ರೋಲ್ ಪೇಜ್ ಸೇರಿದಂತೆ ಅನೇಕರು ರಶ್ಮಿಕಾ ಮಂದಣ್ಣ ಬಗ್ಗೆ ಸಲ್ಲದ ಆರೋಪಗಳನ್ನು ಮಾಡಿದ್ದರು. ರಕ್ಷಿತ್ ಶೆಟ್ಟಿ ಅವರಿಂದ ದೂರವಾದ ನಂತರ ಒಂದಿಲ್ಲೊಂದು ವಿಷಯ ಹಿಡಿದುಕೊಂಡು ರಶ್ಮಿಕಾ ಅವರನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿದರು. ಆದರೂ, ಈವರೆಗೂ ರಶ್ಮಿಕಾ ಒಂದೇ ಒಂದು ಮಾತು ಕೂಡ ಆಡಿರಲಿಲ್ಲ. ಇದೇ ಮೊದಲ ಬಾರಿಗೆ ಬಹಿರಂಗವಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

    ಕಳೆದ ಕೆಲ ವರ್ಷಗಳಿಂದ ಅನೇಕ ವಿಷಯಗಳು ಇವರನ್ನು ತೊಂದರೆ ಮಾಡಿವೆಯಂತೆ. ಅಷ್ಟೊಂದು ತೊಂದರೆ ಮಾಡಿದರೂ, ಅವರು ಸುಮ್ಮನಿದ್ದರಂತೆ. ಹಾಗೆ ಸುಮ್ಮನಿದ್ದ ಕಾರಣಕ್ಕಾಗಿ ಇದೀಗ ಅವರು ಪಶ್ಚಾತಾಪ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಸುಮ್ಮನಿರಬಾರದಿತ್ತು. ಮಾತನಾಡಲೇಬೇಕಿತ್ತು ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಸಿನಿಮಾ ರಂಗಕ್ಕೆ ಬಂದ ದಿನದಿಂದಲೂ ರಶ್ಮಿಕಾ ಅವರನ್ನು ದ್ವೇಷಿಸಲಾಗುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

    ಸಿನಿಮಾ ಕ್ಷೇತ್ರವಾಗಿ ಹಾಗಿದೆ. ಅದನ್ನು ನಾನು ಆಯ್ಕೆ ಮಾಡಿಕೊಂಡಿದ್ದು. ಹಾಗಾಗಿ ನಾನು ಒಂದು ರೀತಿಯಲ್ಲಿ ಪಂಚಿಂಗ್ ಬ್ಯಾಗ್ ಆಗಿ ಬಿಟ್ಟಿದ್ದೇನೆ ಎಂದು ಅವರು ನೊಂದುಕೊಂಡಿದ್ದಾರೆ. ನಾನು ಸುಮ್ಮನಿದ್ದೇನೆ ಅಂದರೆ, ಅದರ ಅರ್ಥ ನೆಗೆಟಿವಿವ್ ಹರಡಬಹುದು ಎನ್ನುವುದು ಅರ್ಥವಲ್ಲ ಎಂದು ಅವರು ತಿರುಗೇಟು ಕೂಡ ನೀಡಿದ್ದಾರೆ. ಸಂದರ್ಶನವೊಂದರ ಕುರಿತೂ ಮಾತನಾಡಿರುವ ಅವರು, ನನ್ನ ಸಂದರ್ಶನವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ದ್ವೇಷದಿಂದ ಏನೂ ಸಿಗುವುದಿಲ್ಲ. ಒಳ್ಳೆಯದನ್ನು ನಾನು ಯಾವತ್ತಿಗೂ ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಈವರೆಗೂ ನಾನು ಯಾರನ್ನೂ ದ್ವೇಷಿಸಿಲ್ಲ. ನನ್ನೊಂದಿಗೆ ಕೆಲಸ ಮಾಡಿದವರ ಜೊತೆ ಗೌರವದಿಂದ ಇದ್ದೇನೆ. ಎಲ್ಲರನ್ನೂ ನಾನು ಮೆಚ್ಚಿಕೊಂಡಿದ್ದೇನೆ. ಅಭಿಮಾನಿಗಳನ್ನು ರಂಜಿಸುವುದಕ್ಕಾಗಿ ಸತತವಾಗಿ ಪ್ರಯತ್ನಿಸುತ್ತಲೇ ಇದ್ದೇನೆ. ಆದರೂ, ನನ್ನ ಬಗ್ಗೆ ನೆಗೆಟಿವ್ ಕಾಮೆಂಟ್ ಹರಡುತ್ತಲೇ ಇದ್ದರು. ಅದರಿಂದ ಯಾರಿಗೂ ಸಂತೋಷ ಸಿಗುವುದಿಲ್ಲ. ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಹಿರಂಗವಾಗಿ ನೋವು ಹಂಚಿಕೊಂಡ ರಶ್ಮಿಕಾ: ನೋವು ಕೊಟ್ಟೋರು ಉದ್ದಾರಾಗ್ತಾರಾ ಎಂದ ಫ್ಯಾನ್ಸ್

    ಬಹಿರಂಗವಾಗಿ ನೋವು ಹಂಚಿಕೊಂಡ ರಶ್ಮಿಕಾ: ನೋವು ಕೊಟ್ಟೋರು ಉದ್ದಾರಾಗ್ತಾರಾ ಎಂದ ಫ್ಯಾನ್ಸ್

    ಮ್ಮ ಮೇಲೆ ಎಂತಹ ಆರೋಪ ಕೇಳಿ ಬಂದರೂ, ಈವರೆಗೂ ರಶ್ಮಿಕಾ ಮಂದಣ್ಣ (Rashmika Mandanna) ಆ ಕುರಿತು ಪ್ರತಿಕ್ರಿಯೆ ನೀಡಿರಲಿಲ್ಲ. ಗಾಸಿಪ್, ಟ್ರೋಲ್ ಪೇಜ್ ಸೇರಿದಂತೆ ಅನೇಕರು ರಶ್ಮಿಕಾ ಮಂದಣ್ಣ ಬಗ್ಗೆ ಸಲ್ಲದ ಆರೋಪಗಳನ್ನು ಮಾಡಿದ್ದರು. ರಕ್ಷಿತ್ ಶೆಟ್ಟಿ ಅವರಿಂದ ದೂರವಾದ ನಂತರ ಒಂದಿಲ್ಲೊಂದು ವಿಷಯ ಹಿಡಿದುಕೊಂಡು ರಶ್ಮಿಕಾ ಅವರನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಿದರು. ಆದರೂ, ಈವರೆಗೂ ರಶ್ಮಿಕಾ ಒಂದೇ ಒಂದು ಮಾತು ಕೂಡ ಆಡಿರಲಿಲ್ಲ. ಇದೇ ಮೊದಲ ಬಾರಿಗೆ ಬಹಿರಂಗವಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಅನೇಕ ವಿಷಯಗಳು ಇವರನ್ನು ತೊಂದರೆ ಮಾಡಿವೆಯಂತೆ. ಅಷ್ಟೊಂದು ತೊಂದರೆ ಮಾಡಿದರೂ, ಅವರು ಸುಮ್ಮನಿದ್ದರಂತೆ. ಹಾಗೆ ಸುಮ್ಮನಿದ್ದ ಕಾರಣಕ್ಕಾಗಿ ಇದೀಗ ಅವರು ಪಶ್ಚಾತಾಪ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಸುಮ್ಮನಿರಬಾರದಿತ್ತು. ಮಾತನಾಡಲೇಬೇಕಿತ್ತು ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಸಿನಿಮಾ ರಂಗಕ್ಕೆ ಬಂದ ದಿನದಿಂದಲೂ ರಶ್ಮಿಕಾ ಅವರನ್ನು ದ್ವೇಷಿಸಲಾಗುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

    ಸಿನಿಮಾ ಕ್ಷೇತ್ರವಾಗಿ ಹಾಗಿದೆ. ಅದನ್ನು ನಾನು ಆಯ್ಕೆ ಮಾಡಿಕೊಂಡಿದ್ದು. ಹಾಗಾಗಿ ನಾನು ಒಂದು ರೀತಿಯಲ್ಲಿ ಪಂಚಿಂಗ್ ಬ್ಯಾಗ್ ಆಗಿ ಬಿಟ್ಟಿದ್ದೇನೆ ಎಂದು ಅವರು ನೊಂದುಕೊಂಡಿದ್ದಾರೆ. ನಾನು ಸುಮ್ಮನಿದ್ದೇನೆ ಅಂದರೆ, ಅದರ ಅರ್ಥ ನೆಗೆಟಿವಿವ್ ಹರಡಬಹುದು ಎನ್ನುವುದು ಅರ್ಥವಲ್ಲ ಎಂದು ಅವರು ತಿರುಗೇಟು ಕೂಡ ನೀಡಿದ್ದಾರೆ. ಸಂದರ್ಶನವೊಂದರ ಕುರಿತೂ ಮಾತನಾಡಿರುವ ಅವರು, ನನ್ನ ಸಂದರ್ಶನವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ದ್ವೇಷದಿಂದ ಏನೂ ಸಿಗುವುದಿಲ್ಲ. ಒಳ್ಳೆಯದನ್ನು ನಾನು ಯಾವತ್ತಿಗೂ ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಈವರೆಗೂ ನಾನು ಯಾರನ್ನೂ ದ್ವೇಷಿಸಿಲ್ಲ. ನನ್ನೊಂದಿಗೆ ಕೆಲಸ ಮಾಡಿದವರ ಜೊತೆ ಗೌರವದಿಂದ ಇದ್ದೇನೆ. ಎಲ್ಲರನ್ನೂ ನಾನು ಮೆಚ್ಚಿಕೊಂಡಿದ್ದೇನೆ. ಅಭಿಮಾನಿಗಳನ್ನು ರಂಜಿಸುವುದಕ್ಕಾಗಿ ಸತತವಾಗಿ ಪ್ರಯತ್ನಿಸುತ್ತಲೇ ಇದ್ದೇನೆ. ಆದರೂ, ನನ್ನ ಬಗ್ಗೆ ನೆಗೆಟಿವ್ ಕಾಮೆಂಟ್ ಹರಡುತ್ತಲೇ ಇದ್ದರು. ಅದರಿಂದ ಯಾರಿಗೂ ಸಂತೋಷ ಸಿಗುವುದಿಲ್ಲ. ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು

    ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾವನ್ನು ಜಗತ್ತೇ ಹಾಡಿ ಹೊಗಳುತ್ತಿರುವ ಸಂದರ್ಭದಲ್ಲಿ ಬಂಗಾಲಿ (Bengali) ಸಿನಿಮಾ ನಿರ್ದೇಶಕ ಅಭಿರೂಪ್ ಬಸು (Abhiroop Basu) ಹಾಸ್ಯಾಸ್ಪದವಾಗಿ ಟೀಕೆ ಮಾಡಿದ್ದಾರೆ. ಇದೊಂದು ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅವರು ಬರೆದಿದ್ದಾರೆ.

    ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ ಈ ಸಿನಿಮಾ ಅನುಮಾನಿಸುತ್ತದೆ ಮತ್ತು ಅಣಕಿಸುತ್ತದೆ ಎಂದಿರುವ ಅವರು, ಕಥೆಯಲ್ಲಿ ಪ್ರಾಮಾಣಿಕತೆಗಿಂತ ಗಿಮಿಕ್ ಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಲ್ಲೂ ಎಲ್ಲರೂ ಸಿನಿಮಾದ ಕ್ಲೈಮ್ಯಾಕ್ಸ್ ಬಗ್ಗೆ ಮಾತನಾಡುತ್ತಾರೆ. ನನಗೆ ಕ್ಲೈಮ್ಯಾಕ್ಸ್ ಬಗ್ಗೆ ಕುತೂಹಲ ಅಥವಾ ಆಸಕ್ತಿ ಉಳಿಯಲೇ ಇಲ್ಲವೆಂದು ಅವರು ದೀರ್ಘವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಅಭಿರೂಪ್ ಬಸು ಅವರ ಪೋಸ್ಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಸಾಕಷ್ಟು ಜನರು ವಿರೋಧ ವ್ಯಕ್ತ ಪಡಿಸಿದ್ದಾರೆ. ಅತ್ಯಂತ ಪ್ರತಿಭಾವಂತ ಹಿರಿಯ ನಟರು, ನಿರ್ದೇಶಕರು ಸಿನಿಮಾದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿರುವಾಗ ನಿಮ್ಮ ಕೊಳಕು ಮನಸ್ಸಿನಿಂದ ಆಚೆ ಬನ್ನಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಲ್ಲದೇ ಸಿನಿಮಾ ಗೆಲುವನ್ನು ನಿಮ್ಮಿಂದ ಅರಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲವೆಂದು ಕಾಮೆಂಟ್ ಮಾಡಿದ್ದಾರೆ.

    ರಜನಿಕಾಂತ್, ಕಂಗನಾ ರಣಾವತ್ ಸೇರಿದಂತೆ ಭಾರತೀಯ ಸಿನಿಮಾ ರಂಗದ ಅನೇಕರು ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಇದೊಂದು ಅದ್ಭುತ ಸಿನಿಮಾ ಎಂದು ಬಣ್ಣಿಸಿದ್ದಾರೆ. ಅಲ್ಲದೇ, ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡು ಗೌರವಿಸಿದ್ದಾರೆ ರಜನಿಕಾಂತ್ ಈ ಹೊತ್ತಿನಲ್ಲಿ ಬಂಗಾಲದ ಸಿನಿಮಾ ನಿರ್ದೇಶಕ ಅಭಿರೂಪ್ ಬಸು, ನೆಗೆಟಿವ್ ಕಾಮೆಂಟ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮ್ಮ ‘ಕೊನೆ ಆಸೆ’ ತಿಳಿಸಿದ ಸೋನು ಶ್ರೀನಿವಾಸ್ ಗೌಡ: ಅವನಿಗೆ ಹೃದಯ ಪೂರ್ವಕ ಹಾರೈಕೆ

    ತಮ್ಮ ‘ಕೊನೆ ಆಸೆ’ ತಿಳಿಸಿದ ಸೋನು ಶ್ರೀನಿವಾಸ್ ಗೌಡ: ಅವನಿಗೆ ಹೃದಯ ಪೂರ್ವಕ ಹಾರೈಕೆ

    ಬಿಗ್ ಬಾಸ್ ಮನೆ ಅಂದಾಕ್ಷಣ ಥಟ್ಟನೆ ನೆನಪಾಗುವ ಹೆಸರು ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರದ್ದು. ಮೊದಲ ದಿನದಿಂದ ಕೊನೆಯ ದಿನದವರೆಗೂ ಜಗಳ, ಕೋಪ, ಪ್ರೀತಿ ಮಾಡಿಕೊಂಡೇ ಎಲ್ಲರ ಗಮನ ಸೆಳೆದವರು. ಅದರಲ್ಲೂ ಜಯಶ್ರೀ (Jayashree), ರಾಕೇಶ್ ಅಡಿಗ ಮತ್ತು ಸೋನು ಶ್ರೀನಿವಾಸ್ ಗೌಡ ಅವರ ತ್ರಿಕೋನ ಗೆಳೆತನ ನೋಡುಗರಿಗೆ ಸಾಕಷ್ಟು ಮನರಂಜನೆ ನೀಡಿತು. ಮನೆಯಿಂದ ಆಚೆ ಬರುತ್ತಿದ್ದಂತೆಯೇ ಅವರು ರಾಕೇಶ್ ಅಡಿಗನನ್ನು (Rakesh Adiga) ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ. ಇದನ್ನೂ ಓದಿ:ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಈ ಕುರಿತು ಮಾತನಾಡಿರುವ ಸೋನು, ‘ನಾನು ರಾಕೇಶ್ ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಅವನು ಮುಂದಿನ ಹಂತ ತಲುಪಿದ್ದಾನೆ ಎಂದು ಕೇಳಿ ಸಂಭ್ರಮಿಸಿದೆ. ಮತ್ತೆ ಅವನು ಬಿಗ್ ಬಾಸ್ ಗೆದ್ದು ಬರಲಿ. ನನ್ನ ಕೊನೆ ಆಸೆ ಏನು ಅಂತ ಸದ್ಯ ಕೇಳಿದರೆ, ಅದು ರಾಕೇಶ್ ಬಿಗ್ ಬಾಸ್ (Bigg Boss OTT) ಮನೆಯಲ್ಲಿ ವಿನ್ ಆಗಬೇಕು’ ಎಂದಿದ್ದಾರೆ ಸೋನು. ತಮ್ಮಿಬ್ಬರ ಸ್ನೇಹ, ಪ್ರೀತಿ ಮತ್ತು ಪ್ರೇಮಕ್ಕಿಂತಲೂ ಮಿಗಿಲಾಗಿದ್ದು ಎನ್ನುವುದು ಸೋನು ಮಾತು.

    ಸೋಷಿಯಲ್ ಮೀಡಿಯಾದಲ್ಲಿ ಅಪಾರ ಸಂಖ್ಯೆಯಲ್ಲಿ ಫಾಲೋವರ್ಸ್ ಹೊಂದಿರುವ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಹಲವು ರೀತಿಯಲ್ಲಿ ಬದಲಾಗಿದ್ದಾರಂತೆ. ಮೊದ ಮೊದಲು ಇವರು ಸೋಷಿಯಲ್ ಮೀಡಿಯಾದಲ್ಲಿ ಏನೇ ಹಾಕಿದರೂ ಟ್ರೋಲ್ ಆಗುತ್ತಿದ್ದರು. ನೆಗೆಟಿವ್ (Negative) ಕಾಮೆಂಟ್ ಮಾಡಲಾಗುತ್ತಿತ್ತು. ಆದರೆ, ಇದೀಗ ನೆಗೆಟಿವ್ ಕಾಮೆಂಟ್ ಮಾಡುವವರ ಸಂಖ್ಯೆ ಸಾಕಷ್ಟು ಇಳಿಮುಖ ಆಗಿದೆಯಂತೆ.

    ಈ ಕುರಿತು ಮಾತನಾಡಿರುವ ಅವರು, ಬಿಗ್ ಬಾಸ್ ಮನೆಯಿಂದ ಆಚೆ ಬಂದ ನಂತರ, ಪೋಸ್ಟ್ ಹಾಕಿದ್ದೆ. ನನ್ನನ್ನು ಜನರು ಎಷ್ಟು ಪ್ರೀತಿಸುತ್ತಿದ್ದಾರೆ ಎಂದು ಗೊತ್ತಾಯಿತು. ನೆಗೆಟಿವ್ ಕಾಮೆಂಟ್ ಒಂದೆರಡು ಬಂದಿರಬಹುದು. ಆದರೆ, ಪಾಸಿಟಿವ್ (Positive) ಆಗಿ ವಿಶ್ ಮಾಡಿದವರೇ ಹೆಚ್ಚು. ನೆಗೆಟಿವ್ ಕಾಮೆಂಟ್ ಗೆ ನಾನು ಮೊದಲಿನಿಂದಲೂ ಕೇರ್ ಮಾಡಿಲ್ಲ. ಈಗಲೂ ಮಾಡಿಲ್ಲ. ನಾನು ಹೇಗೆ ಎನ್ನುವುದು ನನ್ನನ್ನು ಪ್ರೀತಿಸುವವರಿಗೆ ಗೊತ್ತಿದೆ’ ಎಂದಿದ್ದಾರೆ ಸೋನು.

    Live Tv
    [brid partner=56869869 player=32851 video=960834 autoplay=true]

  • ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಸೋಷಿಯಲ್ ಮೀಡಿಯಾದಲ್ಲಿ ಅಪಾರ ಸಂಖ್ಯೆಯಲ್ಲಿ ಫಾಲೋವರ್ಸ್ ಹೊಂದಿರುವ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಹಲವು ರೀತಿಯಲ್ಲಿ ಬದಲಾಗಿದ್ದಾರಂತೆ. ಮೊದ ಮೊದಲು ಇವರು ಸೋಷಿಯಲ್ ಮೀಡಿಯಾದಲ್ಲಿ ಏನೇ ಹಾಕಿದರೂ ಟ್ರೋಲ್ ಆಗುತ್ತಿದ್ದರು. ನೆಗೆಟಿವ್ ಕಾಮೆಂಟ್ (Comment) ಮಾಡಲಾಗುತ್ತಿತ್ತು. ಆದರೆ, ಇದೀಗ ನೆಗೆಟಿವ್ ಕಾಮೆಂಟ್ ಮಾಡುವವರ ಸಂಖ್ಯೆ ಸಾಕಷ್ಟು ಇಳಿಮುಖ ಆಗಿದೆಯಂತೆ.

    ಈ ಕುರಿತು ಮಾತನಾಡಿರುವ ಅವರು, ಬಿಗ್ ಬಾಸ್ (Bigg Boss OTT) ಮನೆಯಿಂದ ಆಚೆ ಬಂದ ನಂತರ, ಪೋಸ್ಟ್ ಹಾಕಿದ್ದೆ. ನನ್ನನ್ನು ಜನರು ಎಷ್ಟು ಪ್ರೀತಿಸುತ್ತಿದ್ದಾರೆ ಎಂದು ಗೊತ್ತಾಯಿತು. ನೆಗೆಟಿವ್ (Negative) ಕಾಮೆಂಟ್ ಒಂದೆರಡು ಬಂದಿರಬಹುದು. ಆದರೆ, ಪಾಸಿಟಿವ್ ಆಗಿ ವಿಶ್ ಮಾಡಿದವರೇ ಹೆಚ್ಚು. ನೆಗೆಟಿವ್ ಕಾಮೆಂಟ್ ಗೆ ನಾನು ಮೊದಲಿನಿಂದಲೂ ಕೇರ್ ಮಾಡಿಲ್ಲ. ಈಗಲೂ ಮಾಡಿಲ್ಲ. ನಾನು ಹೇಗೆ ಎನ್ನುವುದು ನನ್ನನ್ನು ಪ್ರೀತಿಸುವವರಿಗೆ ಗೊತ್ತಿದೆ’ ಎಂದಿದ್ದಾರೆ ಸೋನು. ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

    ಬಿಗ್ ಬಾಸ್ ಓಟಿಟಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ (Video) ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಯಿತು. ಅವರು ಬಿಗ್ ಬಾಸ್ ಮನೆಗೆ ಹೋದಾಗ ಆ ಕುರಿತು ಬಹಿರಂಗವಾಗಿಯೇ ಹೇಳಿಕೊಂಡರು. ಅಲ್ಲದೇ, ಆ ಹುಡುಗನ ಬಳಿ ಮತ್ತೊಂದು ವಿಡಿಯೋ ಇರುವುದಾಗಿಯೂ ತಿಳಿಸಿದ್ದರು. ಈ ವಿಷಯ ಕೇಳಿದ ಬಿಗ್ ಬಾಸ್ ಮನೆಯೇ ಶಾಕ್ ಗೆ ಒಳಗಾಗಿತ್ತು. ಈ ಕುರಿತು ಸೋನು ಮತ್ತೆ ಮಾತನಾಡಿದ್ದಾರೆ.

    ಖಾಸಗಿ ಸಂಗತಿಗಳು ಅಂದರೆ, ಇಬ್ಬರಲ್ಲೇ ಇರಬೇಕಾದದ್ದು. ಆದರೆ, ಆ ಹುಡುಗ ನಂಬಿಕೆ ದ್ರೋಹ ಮಾಡಿದ್ದಾನೆ ಎನ್ನುತ್ತಾರೆ ಸೋನು. ‘ನಾನು ಆ ಹುಡುಗನನ್ನು ನಂಬಿದ್ದೆ. ತುಂಬಾ ಇಷ್ಟ ಪಡುತ್ತಿದ್ದೆ. ಆದರೆ, ಅವನು ಆ ರೀತಿ ನಡೆದುಕೊಳ್ಳುತ್ತಾನೆ ಅಂತ ಅಂದುಕೊಂಡಿರಲಿಲ್ಲ. ಮೊದಲು ಆ ವಿಡಿಯೋವನ್ನು ಮಾಡಿಕೊಂಡಿದ್ದು ತಪ್ಪು. ಎರಡನೆಯದ್ದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ತಪ್ಪು. ಅದರಿಂದಾಗಿ ನನ್ನ ಮರ್ಯಾದೆ ಹೋಯಿತು ಅನ್ನುತ್ತಾರೆ.

    ಆ ವಿಡಿಯೋವನ್ನು ಅವನು ಹಾಕಿದ್ದಾನೋ ಅಥವಾ ಬೇರೆ ಯಾರಾದರೂ ಹಾಕಿದ್ದಾರೋ ಅದು ಬೇರೆ ವಿಚಾರ. ಆದರೆ, ಆ ಹುಡುಗ ವಿಡಿಯೋವನ್ನು ಶೂಟ್ ಮಾಡಿದ ಮೇಲೆ ಅಲ್ಲವೆ ಅಷ್ಟೊಂದು ಆಗಿದ್ದು? ಈ ರೀತಿ ಯಾವ ಹುಡುಗಿಗೂ ಮೋಸ ಆಗಬಾರದು. ಆ ಕಾರಣಕ್ಕಾಗಿಯೇ ನಾನು ಬಹಿರಂಗವಾಗಿಯೇ ಅದನ್ನು ಹೇಳಿದೆ. ಇಂತಹ ತಪ್ಪು ನಡೆಯಬಾರದು ಎನ್ನುವ ಕಾರಣಕ್ಕಾಗಿಯೇ ಎರಡನೇ ವಿಡಿಯೋ ಬಗ್ಗೆಯೂ ನಾನು ಮಾತನಾಡಿದೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಮನೆಯಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ: ಹರಿದು ಬಂತು ನೆಗೆಟಿವ್ ಕಾಮೆಂಟ್

    ‘ಬಿಗ್ ಬಾಸ್’ ಮನೆಯಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ: ಹರಿದು ಬಂತು ನೆಗೆಟಿವ್ ಕಾಮೆಂಟ್

    ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಇಂದಿನಿಂದ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಶೋ ಗ್ರ್ಯಾಂಡ್ ಎಂಟ್ರಿ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಓಟಿಟಿ ವೇದಿಕೆಯು ದೊಡ್ಮನೆ ಪ್ರವೇಶ ಮಾಡಿರುವ ಸ್ಪರ್ಧಿಗಳ ಹೆಸರನ್ನು ಒಂದೊಂದೇ ಬಹಿರಂಗ ಪಡಿಸುತ್ತಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಾಲಿಟ್ಟವರು ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಸೋನು ಗೌಡ.

    ಟಿಕ್ ಟಾಕ್ ಮೂಲಕವೇ ಅಸಂಖ್ಯಾತ ಫಾಲೋವರ್ಸ್ ಹೊಂದಿದ್ದ ಸೋನು ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇವರ ಹೆಸರು ಘೋಷಣೆ ಆಗುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ನೆಗೆಟಿವ್ ಕಾಮೆಂಟ್ ಗಳು ಹರಿದು ಬಂದಿವೆ. ಕಾರಣ, ಕನ್ನಡದಲ್ಲಿ ಅತೀ ಹೆಚ್ಚು ಟ್ರೋಲ್ ಆದ ಟಿಕ್ ಟಾಕ್ ಸ್ಟಾರ್ ಕೂಡ ಇವರಾಗಿದ್ದಾರೆ. ಈ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಲೀಕ್ ಆಗಿ ವೈರಲ್ ಆಗಿತ್ತು. ಇದು ಕೂಡ ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು.

    ಇಷ್ಟೇ ಅಲ್ಲ, ಇದೇ ಸೋನು ಈ ಹಿಂದೆ ಕನ್ನಡ ಮತ್ತು ತೆಲುಗು ಸಿನಿಮಾ ರಂಗವನ್ನು ಹೋಲಿಕೆ ಮಾಡಿ, ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ಮೆಚ್ಚುವುದಕ್ಕಿಂತ ತುಳಿಯುವವರೇ ಹೆಚ್ಚು. ಹಾಗಾಗಿ ತೆಲುಗು ಸಿನಿಮಾ ರಂಗದಿಂದ ಚಿತ್ರರಂಗಕ್ಕೆ ಎಂಟ್ರಿ ಕೊಡುವುದಾಗಿ ಸಂದರ್ಶನದಲ್ಲಿ ಹೇಳಿದ್ದರು. ಆಗಲೂ ಕೂಡ ಅವರನ್ನು ಸಖತ್ ಟ್ರೋಲ್ ಮಾಡಲಾಗಿತ್ತು. ಇದು ವಿವಾದ ಕೂಡ ಆಗಿತ್ತು. ಇದನ್ನೂ ಓದಿ:ಮತ್ತೆ ಟಾಪ್‌ಲೆಸ್ ಅವತಾರದಲ್ಲಿ ಬಂದ ಉರ್ಫಿ ಜಾವೇದ್: ನೆಟ್ಟಿಗರಿಂದ ನಟಿಗೆ ಕ್ಲಾಸ್

    ತೆಲುಗು ಸಿನಿಮಾ ರಂಗದಿಂದಲೇ ಚಿತ್ರರಂಗಕ್ಕೆ ಪ್ರವೇಶ ಮಾಡುತ್ತೇನೆ ಎಂದು ಸೋನು ಹೇಳಿದ್ದರೂ, ಸೋಷಿಯಲ್ ಮೀಡಿಯಾದಲ್ಲಿ ಇವರಿಗೆ ಅಸಂಖ್ಯಾತ ಹಿಂಬಾಲಕರು ಇರುವುದರಿಂದ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಕ್ಯಾಡ್ಬರೀಸ್ ಹೆಸರಿನ ಕನ್ನಡ ಸಿನಿಮಾದಲ್ಲಿ ಅವಕಾಶ ನೀಡಲಾಯಿತು. ನಟಿಸುವುದಕ್ಕಿಂತ ಟಿಕ್ ಟಾಕ್ ಬೆಸ್ಟ್ ಎಂದು ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡರು. ಬಿಗ್ ಬಾಸ್ ವಿನ್ನರ್ ‍ಪ್ರಥಮ ಕೂಡ ಇವರನ್ನು ಕರೆದು ತಮ್ಮ ಸಿನಿಮಾದಲ್ಲಿ ಅವಕಾಶ ಕೊಟ್ಟರು.

    ತಮ್ಮ ಮಾತು ಮತ್ತು ಟಿಕ್ ಟಾಕ್ ಮೂಲಕ ಸದಾ ವಿವಾದಗಳನ್ನೇ ಮೈಮೇಲೆ ಎಳೆದುಕೊಂಡಿರುವ ಸೋನು ಗೌಡ,  ಇವತ್ತು ಕನ್ನಡದ ಖ್ಯಾತ ನಟ ಸುದೀಪ್ ಅವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರು ಮನೆಯಲ್ಲಿ ಹೇಗಿರುತ್ತಾರೋ ಅದು ಬೇರೆ ಮಾತು, ಈಗಲೇ ಸೋಷಿಯಲ್ ಮೀಡಿಯಾದಲ್ಲಿ ಸೋನು ಗೌಡ ಕುರಿತು ಅನೇಕರು ನೆಗೆಟಿವ್ ಕಾಮೆಂಟ್ ಬರೆಯುವ ಮೂಲಕ ಸೋನುವನ್ನು ಹೀಗೆ ನೆನಪಿಸಿಕೊಳ್ಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

    ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

    ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿನ್ನೆಯಷ್ಟೇ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನದ ಕಲೆಕ್ಷನ್ 35 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಸಹಿಸಲಾಗದ ಕೆಲವರು ಸಿನಿಮಾದ ಬಗ್ಗೆ ಅಪಪ್ರಚಾರ ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಕಾಮೆಂಟ್ ಮಾಡುತ್ತಿದ್ದಾರೆ. ಹಾಗಾಗಿ ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ.

    ಸುದೀಪ್ ಸಿನಿಮಾಗಳು ರಿಲೀಸ್ ಆದಾಗ ಇಂತಹ ಅಪಪ್ರಚಾರ ನಡೆಯುತ್ತಲೇ ಬಂದಿದೆ. ಪೈಲ್ವಾನ್ ಸಿನಿಮಾ ರಿಲೀಸ್ ಆದಾಗ ಅದನ್ನು ಪೈರಸಿ ಕೂಡ ಮಾಡಲಾಗಿತ್ತು. ಪೈರಸಿ ಮಾಡಿ, ಹಂಚಿದವನನ್ನು ಅರೆಸ್ಟ್ ಮಾಡಿದಾಗ, ಆತ ಕನ್ನಡದ ಮತ್ತೋರ್ವ ನಟನ ಅಭಿಮಾನಿ ಎಂದು ಗುರುತಿಸಲಾಗಿತ್ತು. ಇದೇ ವಿಚಾರವಾಗಿ ಆ ನಟನ ಅಭಿಮಾನಿಗಳು ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ಜಗಳ ಶುರುವಾಗಿತ್ತು. ಈಗ ಮತ್ತದೇ ವಾತಾವರಣ ಉಂಟಾಗಿದೆ. ಇದನ್ನೂ ಓದಿ:ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿಗೆ ಸೀರೆ ಉಡೋದು ಕಷ್ಟವಂತೆ

    ಕೆಲ ಕಿಡಿಗೇಡಿಗಳು ವಿಕ್ರಾಂತ್ ರೋಣ ಚೆನ್ನಾಗಿಲ್ಲ, ಅದೊಂದು ಡಬ್ಬಾ ಸಿನಿಮಾ ಹೀಗೆ ನಾನಾ ರೀತಿಯ ಗಾಸಿಪ್ ಕ್ರಿಯೇಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ವಿಮರ್ಶೆಯ ಹೆಸರಿನಲ್ಲಿ ಸಿನಿಮಾ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡಿ, ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ ಶುರುವಾಗಿದೆ. ಅಂತಹ ನೆಗೆಟಿವ್ ಮಾಡುವವರ ವಿರುದ್ಧ ಕಿಚ್ಚನ ಅಭಿಮಾನಿಗಳು ಕೂಡ ಗರಂ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೃತ್ತಿ ಮತ್ತು ಖಾಸಗಿ ಬದುಕು ಎರಡೂ ಬೇರೆ ಬೇರೆ: ಆಲಿಯಾ ಭಟ್

    ವೃತ್ತಿ ಮತ್ತು ಖಾಸಗಿ ಬದುಕು ಎರಡೂ ಬೇರೆ ಬೇರೆ: ಆಲಿಯಾ ಭಟ್

    ಬಾಲಿವುಡ್ ನಟಿ ಆಲಿಯಾ ಭಟ್ ಮದುವೆಯಾದ ಮೂರೇ ತಿಂಗಳಲ್ಲಿ ತಾವು ತಾಯಿ ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದರು. ಈ ಸಂಭ್ರಮವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಸಂತಸ ಪಡಬೇಕಾಗಿದ್ದ ಗಳಿಗೆಯಲ್ಲಿ ನಟಿ ಆಲಿಯಾ ಭಟ್ ನೊಂದುಕೊಂಡರು. ಕಾರಣ ಅವರಿಗೆ ಮಾಡಿದ ಕಾಮೆಂಟ್. ಮದುವೆಗೂ ಮುನ್ನ ಆಲಿಯಾ ಭಟ್ ಪ್ರಗ್ನಂಟ್ ಆಗಿದ್ದರು ಎಂದು ಹಲವರು ಕಾಮೆಂಟ್ ಮಾಡಿದ್ದರು. ಮತ್ತಷ್ಟು ಜನರು ಪಗ್ನೆಂಟ್ ಆಗಿದ್ದರು ಎನ್ನುವ ಕಾರಣಕ್ಕಾಗಿಯೇ ಮದುವೆಯಾಗಿದ್ದಾರೆ ಎಂದು ಮಾತನಾಡಿಕೊಂಡಿದ್ದರು.

    ಪಗ್ನಂಟ್ ನಂತರವೂ ಆಲಿಯಾ ಭಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಪ್ರಮೋಷನ್ ಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಅದಕ್ಕೂ ಕೆಲವರು ನೆಗೆಟಿವ್ ಆಗಿ ಮಾತನಾಡುತ್ತಿದ್ದಾರೆ. ಪ್ರಚಾರ ಪಡೆಯಲೆಂದೇ ಅವರು ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ನಿಜವಾಗಿಯೂ ಪಗ್ನೆಂಟ್ ಆಗಿದ್ದೀರಾ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಆಲಿಯಾ ಭಟ್ ಗರಂ ಆಗಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್ ಅವರನ್ನು ವಿಶ್ವದ ಬಾಕ್ಸ್ ಆಫೀಸಿಗೆ ಹೋಲಿಸಿದ ಉಪೇಂದ್ರ

    ವೃತ್ತಿ ಮತ್ತು ವೈಯಕ್ತಿಕ ಜೀವನ ಬೇರೆ ಬೇರೆ. ಒಂದಕ್ಕೊಂದು ಹೋಲಿಸಬೇಡಿ. ನಾನು ಎರಡನ್ನೂ ಪ್ರೀತಿಸುವವಳು. ಮತ್ತಷ್ಟು ದಿನ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ. ನನ್ನ ವೈಯಕ್ತಿಕ ಜೀವನದ ಬಗ್ಗೆ ಕಾಮೆಂಟ್ ಮಾಡಲು ಯಾರಿಗೂ ಹಕ್ಕಿಲ್ಲ ಎಂದು ಹೇಳಿದ್ದಾರೆ. ಇದೇ ಮುಂದುವರೆದರೆ ಖಾರವಾಗಿಯೇ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಆಲಿಯಾ ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಟ್ರೇಲಿಯಾ ಪ್ರವಾಸ – ಟೀಂ ಇಂಡಿಯಾ ಆಟಗಾರರ ಕೊರೊನಾ ವರದಿ ನೆಗೆಟಿವ್

    ಆಸ್ಟ್ರೇಲಿಯಾ ಪ್ರವಾಸ – ಟೀಂ ಇಂಡಿಯಾ ಆಟಗಾರರ ಕೊರೊನಾ ವರದಿ ನೆಗೆಟಿವ್

    ಸಿಡ್ನಿ: ಮೂರು ಮಾದರಿಯ ಸರಣಿಗಳಿಗಾಗಿ ಆಸ್ಟ್ರೇಲಿಯಾ ಪ್ರವಾಸ ತೆರಳಿರುವ ಟೀಂ ಇಂಡಿಯಾ ಆಟಗಾರರ ಕೊರೊನಾ ವರದಿ ಬಂದಿದ್ದು, ಎಲ್ಲ ಆಟಗಾರರ ರಿಪೋರ್ಟ್ ನೆಗೆಟಿವ್ ಬಂದಿದೆ.

    ಕಳೆದ ಎರಡು ತಿಂಗಳಿಂದ ಯುಎಇಯಲ್ಲಿ ನಡೆದ ಐಪಿಎಎಲ್-2020ಯಲ್ಲಿ ನಿರತರಾಗಿದ್ದ ಭಾರತದ ಆಟಗಾರರು, ವಾಪಸ್ ತವರಿಗೂ ಬಾರದೇ ಯುಎಇಯಿಂದಲೇ ಆಸ್ಟ್ರೇಲಿಯಾಕ್ಕೆ ಹಾರಿದ್ದರು. ಆಸ್ಟ್ರೇಲಿಯಾ ತಲುಪಿದ ಬಳಿಕ ಪ್ರತ್ಯೇಕ ರೂಮಿನಲ್ಲಿ ಕ್ವಾರಂಟೈನ್ ಕೂಡ ಆಗಿದ್ದರು. ಈಗ ಆಟಗಾರರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರ ವರದಿಯೂ ನೆಗೆಟಿವ್ ಎಂದು ಬಂದಿದೆ.

    ಈ ವಿಚಾರವಾಗಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ಟೀಂ ಇಂಡಿಯಾ ಆಟಗಾರರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ತಿಳಿಸಿದೆ. ಜೊತೆಗೆ ಎರಡು ದಿನದ ಬಳಿಕ ಟೀಂ ಇಂಡಿಯಾ ಮೊದಲ ಹೊರಾಂಗಣ ಅಭ್ಯಾಸವನ್ನು ಆರಂಭ ಮಾಡಿದೆ ಎಂದು ಟ್ವೀಟ್ ಮಾಡಿ, ಆಟಗಾರರು ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದೆ. ಜೊತೆಗೆ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಟ್ವೀಟ್ ಮಾಡಿ ಬ್ಯಾಕ್ ಟೂ ನ್ಯಾಷನಲ್ ಡ್ಯೂಟಿ ಎಂದು ಬರೆದುಕೊಂಡಿದ್ದಾರೆ.

    ಭಾರತ-ಆಸ್ಟ್ರೇಲಿಯಾ ಸರಣಿಯು ನವೆಂಬರ್ 27ರಂದು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏಕದಿನ ಪಂದ್ಯದ ನಂತರ ಉಭಯ ತಂಡಗಳು ಮೂರು ಪಂದ್ಯಗಳ ಟಿ-20 ಸರಣಿ ಆಡಲಿವೆ. ನಂತರ ಡಿಸೆಂಬರ್ 17ರಿಂದ ಇಂಡಿಯಾ ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಾರಂಭವಾಗಲಿದೆ. ಐಪಿಎಲ್ ಮುಗಿಯುವ ಮುನ್ನವೇ ಬಿಸಿಸಿಐ ಮೂರು ಮಾದರಿ ಕ್ರಿಕೆಟ್‍ಗೆ ತಂಡಗಳನ್ನು ಘೋಷಣೆ ಮಾಡಿತ್ತು.