Tag: Negligence

  • ಕಾಟಾಚಾರಕ್ಕೆ ಕೊರೊನಾ ಸ್ಕ್ಯಾನಿಂಗ್ ಮಾಡ್ತಿದ್ದ ಅಧಿಕಾರಿ ಅಮಾನತು

    ಕಾಟಾಚಾರಕ್ಕೆ ಕೊರೊನಾ ಸ್ಕ್ಯಾನಿಂಗ್ ಮಾಡ್ತಿದ್ದ ಅಧಿಕಾರಿ ಅಮಾನತು

    ತುಮಕೂರು: ಕೊರೊನಾ ವೈರಸ್ ಪತ್ತೆಹಚ್ಚುವ ಥರ್ಮಲ್ ಸ್ಕ್ಯಾನಿಂಗ್‍ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಸಡ್ಡೆ ತೋರಿರುವ ಘಟನೆ ತುಮಕೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

    ತುಮಕೂರು ಆರೋಗ್ಯ ಇಲಾಖೆಯ ಜ್ಯೂನಿಯರ್ ಹೆಲ್ತ್ ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ ನಿರ್ಲಕ್ಷ್ಯ ತೋರಿದ ಅಧಿಕಾರಿ. ಈತ ತುಮಕೂರು ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕಾದರೆ ಬೇಜವಾಬ್ದಾರಿ ವರ್ತನೆ ತೋರಿದ್ದಾನೆ.

    ಒಂದು ಕೈಯಲ್ಲಿ ಮೊಬೈಲ್ ಹಿಡಿದು ಇನ್ನೊಂದು ಕೈಯಲ್ಲಿ ಸ್ಕ್ರೀನಿಂಗ್ ಮೆಷಿನ್ ಹಿಡಿದು ಅಸಡ್ಡೆಯಾಗಿ ತಪಾಸಣೆ ನಡೆಸಿದ್ದಾನೆ. ಈತನ ನಿರ್ಲಕ್ಷ್ಯದ ಕೆಲಸವನ್ನು ಸಾರ್ವಜನಿಕರು ಮೊಬೈಲಿನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಛೀಮಾರಿ ಹಾಕಿದ್ದಾರೆ.

    ಕಳೆದ ಎರಡು ದಿನಗಳಿಂದ ತುಮಕೂರಿನ ಸಿದ್ದಗಂಗಾ ಮಠ ಹಾಗೂ ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿತ್ತು. ಇಡೀ ದೇಶವೇ ಕೊರೊನಾ ವೈರಸ್ ವಿರುದ್ಧ ಸಮರ ಸಾರಿದರೆ, ಈತ ಮಾತ್ರ ನಿರ್ಲಕ್ಷ್ಯ ತೋರಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

    ಇದೀಗ ಮೊಬೈಲಿನಲ್ಲಿ ಮಾತನಾಡುತ್ತಾ ಕಾಟಾಚಾರಕ್ಕೆ ತಪಾಸಣೆ ಮಾಡುತ್ತಿದ್ದ ನರಸಿಂಹಮೂರ್ತಿಯನ್ನು ಅಮಾನತು ಮಾಡಲಾಗಿದೆ. ನರಸಿಂಹಮೂರ್ತಿಯ ಬೇಜವಾಬ್ದಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಆಧಾರದ ಮೇಲೆ ಡಿಎಚ್‍ಒ ಡಾ.ಚಂದ್ರಿಕಾ ಬೇಕಾಬಿಟ್ಟಿ ತಪಾಸಣೆ ಮಾಡುತ್ತಿದ್ದ ನರಸಿಂಹಮೂರ್ತಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.

  • ನಮ್ಮೂರಿಗೆ ಬನ್ನಿ ಆಗ ಗೊತ್ತಾಗುತ್ತೆ: ಪ್ರವಾಹದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಯ ಅಳಲು

    ನಮ್ಮೂರಿಗೆ ಬನ್ನಿ ಆಗ ಗೊತ್ತಾಗುತ್ತೆ: ಪ್ರವಾಹದಲ್ಲಿ ಮನೆ ಕಳೆದುಕೊಂಡ ವ್ಯಕ್ತಿಯ ಅಳಲು

    ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಗ್ರಾಮಸ್ಥರು ರೋಧಿಸುತ್ತಿದ್ದಾರೆ.

    ಇಷ್ಟು ಪ್ರಮಾಣದಲ್ಲಿ ಮನೆಗಳನ್ನು ಕಳೆದುಕೊಂಡರು ಅಧಿಕಾರಿಗಳು ತಿರುಗಿ ನೋಡದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ನಿವಾಸಿಯೊಬ್ಬರು ಮನೆಯನ್ನು ನೋಡಿ ಗೋಳಾಡುತ್ತಾ ಕಣ್ಣೀರಿಡುತ್ತಿರುವ ದೃಶ್ಯ ಮನಕಲುಕುವಂತಿದೆ. ಪರಿಹಾರ ಕೇಂದ್ರಕ್ಕೆ ಬಂದು ಭರವಸೆ ಕೊಡುವ ಬದಲು ಮನೆಗಳು ಯಾವ ಪ್ರಮಾಣದಲ್ಲಿ ಬಿದ್ದು ಹೋಗಿದೆ ಯಾವ ರೀತಿಯಲ್ಲಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ಸ್ಥಳಕ್ಕೆ ಬಂದು ನೋಡಬೇಕು ಎಂದು ಅಳಲನ್ನು ವ್ಯಕ್ತಪಡಿಸುತ್ತಾರೆ.

    ಇದು ನನ್ನ ಮನೆ. ಇದುವರೆಗೂ ಅಧಿಕಾರಿಗಳು ಇಲ್ಲಿ ಬಂದು ನೋಡಿಲ್ಲ. ಮನೆ ಸಂಪೂರ್ಣ ನೆಲಸಮವಾಗಿದೆ. ಸಹಾಯ ಮಾಡುವುದಕ್ಕೆ ಯಾರು ಬರುತ್ತಿಲ್ಲ. ಯಾವ ಅಧಿಕಾರಿಗಳು ಇದೂವರೆಗೂ ಬಂದು ನೋಡಿಲ್ಲ. ದಯವಿಟ್ಟು ನನಗೆ ಸಹಾಯ ಮಾಡಿ. ನಾನು ಈಗ ಪರಿಹಾರ ಕೇಂದ್ರದಲ್ಲಿ ಇದ್ದೇನೆ. ಪರಿಹಾರ ಕೇಂದ್ರದಲ್ಲಿ ಎಲ್ಲ ಸೌಕರ್ಯವನ್ನು ಕೊಡುತ್ತಿದ್ದಾರೆ. ಆದರೆ ಇಲ್ಲಿ ಮನೆ ನೆಲಸಮವಾಗಿದೆ. ಸಾಲ ಮಾಡಿ ನಾನು ಮನೆ ಕಟ್ಟಿದ್ದೇನೆ. ಮಕ್ಕಳು ಎಲ್ಲರೂ ಇಲ್ಲಿ ಇದ್ದೇವೆ ಎಂದರು.

    ಪರಿಹಾರ ಕೇಂದ್ರಕ್ಕೆ ಬಂದು ನಮ್ಮನ್ನು ನೋಡುತ್ತಾರೆ. ಮತ್ತೆ ಅಲ್ಲಿಂದ ಹೋಗುತ್ತಾರೆ. ಆದರೆ ನಮ್ಮನ್ನು ಕೇಳಲು ಇಲ್ಲಿ ಯಾರೂ ಇಲ್ಲ. ನಾನು ಎಲ್ಲರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರು ಬಂದು ಎಷ್ಟು ಜನ ಇದ್ದೀರ. ಎಷ್ಟು ಮಕ್ಕಳಿದ್ದಾರೆ ಎಂಬುದನ್ನು ಕೇಳಿ ಬರೆದುಕೊಂಡು ಹೋಗುತ್ತಾರೆ ಅಷ್ಟೇ. ಯಾರೇ ಆದರೂ ಸರಿ ನಮಗೆ ಸಹಾಯ ಮಾಡಿ ಎಂದು ವ್ಯಕ್ತಿಯೊಬ್ಬರು ತಮ್ಮ ನಿವಾಸದ ಮುಂದೆ ನಿಂತು ಕಣ್ಣೀರು ಹಾಕಿದ್ದಾರೆ.

  • ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

    ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

    ಲಕ್ನೋ: ಉತ್ತರಪ್ರದೇಶ ರಾಜ್ಯದ ಬರೇಲಿಯ ಆಸ್ಪತ್ರೆಯೊಂದರಲ್ಲಿ ವೈದ್ಯರು ಚಿಕಿತ್ಸೆ ನೀಡದೇ ವಿನಾಕಾರಣ ಸುತ್ತಾಡಿಸಿದ ಪರಿಣಾಮ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ಕು ದಿನದ ಹಸುಗೂಸು ಸಾವನ್ನಪ್ಪಿದೆ.

    ಜೂನ್ 15 ರಂದು ಜನಿಸಿದ್ದ ಊರ್ವಶಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಇದರಿಂದ ಗಾಬರಿಗೊಂಡ ಪೋಷಕರು ಮಗುವನ್ನು ಅಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆ ಮಗುವನ್ನು ಮಹಿಳಾ ವಿಭಾಗದಿಂದ ಪುರುಷರ ವಿಭಾಗಕ್ಕೆ, ಮತ್ತೆ ಪುರುಷರ ವಿಭಾಗದಿಂದ ಮಹಿಳಾ ವಿಭಾಗಕ್ಕೆ ಚಿಕಿತ್ಸೆ ನೀಡದೆ ಮೂರು ಗಂಟೆಗಳವರೆಗೆ ಅಲೆದಾಡಿಸಿದ್ದಾರೆ. ದುರಾದೃಷ್ಟವಶಾತ್ ಮಗು ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಪ್ರಾಣ ಬಿಟ್ಟಿದೆ.

    ಮಹಾರಣ ಪ್ರತಾಪ್ ಜಂಟಿ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಗುವನ್ನು ಮೊದಲು ಪುರುಷರ ವಿಭಾಗದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿ, ಮಹಿಳಾ ವಿಭಾಗಕ್ಕೆ ಕಳುಹಿಸಿದ್ದಾರೆ. ಆದರೆ ಮಹಿಳಾ ವಿಭಾಗದಲ್ಲಿ ಹಾಸಿಗೆ ಕೊರತೆಯ ಕಾರಣವೊಡ್ಡಿ ಮಗುವನ್ನು ಮತ್ತೆ ಪುರುಷರ ವಿಭಾಗಕ್ಕೆ ಕರೆದುಕೊಂಡು ಹೋಗಲು ವೈದ್ಯರು ಸೂಚಿಸಿದ್ದಾರೆ. ಈ ರವಾನೆಯ ಮಾರ್ಗ ಮಧ್ಯೆಯಲ್ಲಿ ಮಗು ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಓರ್ವ ವೈದ್ಯನನ್ನು ಅಮಾನತು ಮಾಡಲಾಗಿದೆ. ಘಟನೆಗೆ ಕಾರಣಕರ್ತರಾದ ಉಳಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

    ಮಗುವಿಗೆ ಚಿಕಿತ್ಸೆ ನೀಡದೆ ವಿನಾಕಾರಣ ಮೂರು ಗಂಟೆಗಳ ಕಾಲ ಸುತ್ತಾಡಿಸಿದರು. ಕೊನೆಗೆ ಮಗುವನ್ನು ಮನೆಗೆ ಕರೆದೊಯ್ಯಲು ತೀರ್ಮಾನಿಸಿದೆವು. ಆದರೆ ಮಗು ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಅಸುನೀಗಿತು ಎಂದು ಮಗುವಿನ ಅಜ್ಜಿ ಕುಸುಮಾದೇವಿ ಕಣ್ಣೀರು ಹಾಕಿದರು.

    ಮಗುವಿನ ಸಾವಿನ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ ಎರಡು ವಿಭಾಗದ ವೈದ್ಯರ ನಡುವೆ ವಾಗ್ವಾದ ನಡೆಯಿತು. ಅಮಾನತುಗೊಂಡ ವೈದ್ಯ ಕಲ್ಮೆಂದ್ರ ಸ್ವರೂಪ್ ಗುಪ್ತ, ಮೊದಲು ಮಗುವನ್ನು ಹೊರರೋಗಿಗಳ ವಿಭಾಗಕ್ಕೆ ಕರೆದೊಯ್ಯಲಾಗಿದೆ. ಅಲ್ಲಿಂದ ಮಗುವನ್ನು ಮಹಿಳಾ ವಿಭಾಗದ ಮಕ್ಕಳ ವಿಶೇಷ ನಿಗಾ ಘಟಕಕ್ಕೆ ರವಾನಿಸಲಾಗಿದೆ. ಅಲ್ಲಿ ವೈದ್ಯರು ಏನು ಹೇಳಿದರೋ ಪೋಷಕರು ಸುತ್ತಾಡುತ್ತಲೇ ಇದ್ದರು. ಅವರು ತುರ್ತು ಪರಿಸ್ಥಿತಿಗೆ ತಲುಪಿದಾಗ ದಾಖಲಾತಿಗಾಗಿ ಕೆಳಗಡೆ ಕಳುಹಿಸಲಾಯಿತು ಎಂದಿದ್ದಾರೆ.

    ಮಹಿಳಾ ವಿಭಾಗದಲ್ಲಿ ಮಗುವಿನ ಉಷ್ಣತೆ ಕಾಪಾಡುವ ನಾಲ್ಕು ಹಾಸಿಗೆಗಳು ಮಾತ್ರ ಇದ್ದು, ಈಗಾಗಲೇ ನಾಲ್ಕು ಹಾಸಿಗೆಗಳಲ್ಲಿ 8 ಮಕ್ಕಳಿದ್ದಾರೆ. ಅದಕ್ಕಾಗಿ ನಾವು ಈ ಮಗುವನ್ನು ಪುರುಷರ ವಿಭಾಗಕ್ಕೆ ಕಳುಹಿಸಿದೆವು. ಯಾವಾಗಲೂ ಪುರುಷರ ವಿಭಾಗದ ವೈದ್ಯರು ಕುರುಡರಂತೆ ಎಲ್ಲರನ್ನೂ ಇಲ್ಲಿಗೆ ಕಳುಹಿಸುತ್ತಾರೆ. ನಮ್ಮಲಿದ್ದ ವಾರ್ಮರ್(ಉಷ್ಣತೆ ಕಾಪಾಡುವ ಬೆಡ್)ಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲಾಗಿದೆ. ಒಂದು ವೇಳೆ ಹೆಚ್ಚಿನ ವಾರ್ಮರ್ ಇದ್ದಿದ್ದರೆ ಮಗುವಿಗೆ ಚಿಕಿತ್ಸೆ ನೀಡಬಹುದಿತ್ತು ಎಂದು ಮಹಿಳಾ ವಿಭಾಗದ ವೈದ್ಯೆ ಅಲ್ಕಾ ಶರ್ಮ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯತನ ತೋರಿದ ಕಲ್ಮೇಂದ್ರ ಸ್ವರೂಪರನ್ನು ಅಮಾನತು ಮಾಡಲು ಆದೇಶಿಸಿದ್ದು, ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ನಾವು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

    ದೇಶದಲ್ಲಿ ಅತೀ ಹೆಚ್ಚು ಜನಸಂಖ್ಯೆಯಿರುವ ಉತ್ತರಪ್ರದೇಶ ಸರ್ಕಾರಿ ವೈದ್ಯರು ಮತ್ತು ಆಸ್ಪತ್ರೆ ಹಾಸಿಗೆಗಳ ಕೊರತೆಯನ್ನು ಎದುರಿಸುತ್ತಿದೆ. ಕೇಂದ್ರದ ಪ್ರಕಾರ ರಾಜ್ಯದಲ್ಲಿ ಪ್ರತಿ ವೈದ್ಯರಿಂಂದ ಸರಾಸರಿ 19,962 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಲೆಕ್ಕಾಚಾರದಲ್ಲಿ ಬಿಹಾರ ಮೊದಲ ಸ್ಥಾನದಲ್ಲಿದ್ದು ಅಲ್ಲಿ ಪ್ರತಿ ವೈದ್ಯರು 28,391 ಜನರಿಗೆ ಚಿಕಿತ್ಸೆ ನೀಡುತ್ತಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪೋಷಕರ ನಿರ್ಲಕ್ಷ್ಯಕ್ಕೆ 13 ವರ್ಷದ ಬಾಲಕ ಸಾವು

    ಪೋಷಕರ ನಿರ್ಲಕ್ಷ್ಯಕ್ಕೆ 13 ವರ್ಷದ ಬಾಲಕ ಸಾವು

    ಬೆಂಗಳೂರು: ಪೋಷಕರ ನಿರ್ಲಕ್ಷ್ಯಕ್ಕೆ 13 ವರ್ಷದ ಬಾಲಕ ಬಲಿ ಆಗಿರುವ ಘಟನೆ ಬೆಂಗಳೂರಿನ ಎಚ್‍ಎಎಲ್ ಠಾಣಾ ವ್ಯಾಪ್ತಿಯಲ್ಲಿ ನೆಡೆದಿದೆ.

    13 ವರ್ಷದ ಸಮೀರ್ ಮೃತ ಬಾಲಕ. ಸಮೀರ್ ಹಾಗೂ ಆತನ ಕುಟುಂಬದವರು ಮೂಲತಃ ನೇಪಾಳದವರು. ಇಂದು ಬೆಳಗ್ಗೆ 5 ಗಂಟೆಗೆ ಸಮೀರ್ ತಾಯಿ ಕಲಾವತಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ.

    ಗ್ಯಾಸ್ ಲೀಕ್ ಆದ ಪರಿಣಾಮ ಮನೆಯಲ್ಲಿದ್ದ ಎರಡು ಮಕ್ಕಳ ಪೈಕಿ ಬಾಲಕ ಸಮೀರ್ ಗ್ಯಾಸ್ ಕುಡಿದು ಉಸಿರುಗಟ್ಟು ಮೃತಪಟ್ಟಿದ್ದಾನೆ. ಇನ್ನೊಬ್ಬ ಬಾಲಕ ಶಶೀರ್ (11) ತೀವ್ರ ಅಸ್ವಸ್ಥವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಹೆಚ್ಚಿನ ಚಿಕೆತ್ಸೆಗೆ ಶಶೀರ್‍ನನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಗೆ ಪೋಷಕರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲದೇ ಗ್ಯಾಸ್ ಸಿಲಿಂಡರ್ ಲೀಕ್ ಆಗುವ ವೇಳೆ ಮನೆಯಲ್ಲಿ ಮಕ್ಕಳು ಹೊರತುಪಡಿಸಿ ಪೋಷಕರು ಯಾರೂ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರಿ ಅಧಿಕಾರಿಗಳಿಂದ ನಿವೃತ್ತ ಸೈನಿಕನ ಕುಟುಂಬಕ್ಕೆ ಅನ್ಯಾಯ!

    ಸರ್ಕಾರಿ ಅಧಿಕಾರಿಗಳಿಂದ ನಿವೃತ್ತ ಸೈನಿಕನ ಕುಟುಂಬಕ್ಕೆ ಅನ್ಯಾಯ!

    ತುಮಕೂರು: ಸೈನಿಕರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶವನ್ನು ಕಾಯುತ್ತಾರೆ. ಇದಕ್ಕೆ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯೇ ಸಾಕ್ಷಿ. ಹೀಗಿರುವಾಗ ಸರ್ಕಾರ ಇಂತಹ ಯೋಧರ ಕುಟಂಬದ ಸಹಾಯಕ್ಕೆ ಎಷ್ಟರ ಮಟ್ಟಿಗೆ ಬರುತ್ತೆ ಎನ್ನುವ ಪ್ರಶ್ನೆ ಎದುರಾಗಿದೆ. ಜಿಲ್ಲೆಯ ಸೈನಿಕರಿಗೆ ಸರ್ಕಾರಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳದಿಂದ ಈ ಪ್ರಶ್ನೆ ಎದ್ದಿದೆ.

    ಕುಣಿಗಲ್ ತಾಲೂಕಿನ ಸೂಳೆಕೊಪ್ಪದ ನಿವೃತ್ತ ಸೈನಿಕ ಆರ್. ಸಿದ್ದಲಿಂಗಯ್ಯರ ಕುಟುಂಬವನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಸರ್ಕಾರದಿಂದ ನೀಡುವ ಭೂಮಿಗೆ ಕಳೆದ 20 ವರ್ಷಗಳಿಂದ ನಿವೃತ್ತ ಯೋಧನ ಕುಟುಂಬ ಅಲೆದಾಡುತ್ತಿದೆ. ಆದರೂ ಕೂಡ ತಾಲೂಕಿನ ಕಂದಾಯ ಅಧಿಕಾರಿಗಳು ಭೂಮಿ ಮಂಜೂರು ಮಾಡಲು ಮೀನ-ಮೇಷ ಎಣಿಸುತ್ತಿದ್ದಾರೆ.

    ಆರ್. ಸಿದ್ದಲಿಂಗಯ್ಯ ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ 1993ರಲ್ಲಿ ನಿವೃತ್ತಿಯಾಗಿದ್ದರು. ಸರ್ಕಾರಿ ಭೂಮಿಗಾಗಿ 1996ರಲ್ಲಿ ಅರ್ಜಿ ಹಾಕಿದ್ದರು. ಬಳಿಕ 1998ರಲ್ಲಿ ಅನಾರೋಗ್ಯದಿಂದ ತೀರಿಹೋಗಿದ್ದರು. ಸಿದ್ದಲಿಂಗಯ್ಯ ಮೃತಪಟ್ಟ ನಂತರ ಕುಟುಂಬಕ್ಕೆ ಜಮೀನು ನೀಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ ಇದೂವರೆಗೆ ಜಮೀನು ಮಂಜೂರು ಮಾಡಿಲ್ಲ.

    ತೆರೆದಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ವೆ ನಂಬರ್ 12 ರಲ್ಲಿ 4 ಎಕರೆ ಜಮೀನನ್ನು ಯೋಧನ ಕುಟುಂಬವೇ ಗುರುತಿಸಿಕೊಟ್ಟಿದೆ. ಸತತ 20 ವರ್ಷಗಳಿಂದ ಯೋಧನ ಪತ್ನಿ ಸ್ವರೂಪರಾಣಿ ಕಚೇರಿಗಳಿಗೆ ಅಲೆದು ಅಲೆದು ಹೈರಾಣಾಗಿದ್ದಾರೆ.

    ಯೋಧರು ಹುತಾತ್ಮರಾದಾಗ ಸರ್ಕಾರಗಳು ದಿಢೀರ್ ಅನುಕಂಪ ತೋರಿಸಿ ಸೈನಿಕನ ಕುಟುಂಬದ ಜೊತೆ ನಾವಿದ್ದೇವೆ. ಯಾವೊಬ್ಬ ಸೈನಿಕರಿಗೆ ಕಷ್ಟವಾಗದಂತೆ ನಾವು ನೋಡಿಳ್ಳುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಈ ಎಲ್ಲ ಹೇಳಿಕೆಗಳು ಕೆಲ ದಿನಗಳಲ್ಲಿ ಮೂಲೆಗೆ ಸೇರುತ್ತವೆ. 20 ವರ್ಷದಿಂದ ನಾವು ಮನವಿ ಮಾಡುತ್ತಿದ್ದರೂ ಅಧಿಕಾರಿಗಳು ನಮಗೆ ಜಾಗವನ್ನು ಮಂಜೂರು ಮಾಡಿಲ್ಲ ಎಂದು ಸ್ವರೂಪರಾಣಿ ದು:ಖ ವ್ಯಕ್ತ ವ್ಯಕ್ತಪಡಿಸಿ ಅಕ್ರೋಶ ಹೊರ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೀಮ್ಸ್ ವೈದ್ಯರ ನಿರ್ಲಕ್ಷ್ಯ- ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಸಾವು

    ಬೀಮ್ಸ್ ವೈದ್ಯರ ನಿರ್ಲಕ್ಷ್ಯ- ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಸಾವು

    ಬೀದರ್: ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದಾಗಿ ಹೊಟ್ಟೆಯಲ್ಲೇ ಮಗು ಸಮೇತ ಗರ್ಭಿಣಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು.

    ಕಮಲಮ್ಮ (32) ಮೃತ ಗರ್ಭಿಣಿ. ಮೂಲತಃ ಹುಮನಾಬಾದ್ ತಾಲೂಕಿನ ಸಿಂದನಕೇರಾ ಗ್ರಾಮದರಾಗಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಕಮಲಮ್ಮರನ್ನು ಕುಟುಂಬದವರು ಬೀಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ವೈದ್ಯರು ಹೆರಿಗೆ ಬಂದಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ್ದರಿಂದ, ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಗರ್ಭಿಣಿ ಸಾವಿಗೆ ಬೀಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಸ್ಪತ್ರೆಯ ಬಳಿ ಮೃತ ಕಮಲಮ್ಮರ ಶವವನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಶವದ ಮುಂದೆ ಪತಿ ಹಾಗೂ ಕುಟುಂಬಸ್ಥರು ಕಣ್ಣೀರಿಡುತ್ತಿರುವ ದೃಶ್ಯ ಮನಕಲಕುವಂತಿದೆ. ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದಾರೆ.

    ಸ್ಥಳಕ್ಕೆ ಕೂಡಲೇ ಜಿಲ್ಲಾಧಿಕಾರಿಗಳು ಬರುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಹರಸಾಹಸ ಪಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಡಿದ ಮತ್ತಿನಲ್ಲೇ ಶಸ್ತ್ರಚಿಕಿತ್ಸೆ- ವೈದ್ಯನ ಎಡವಟ್ಟಿಗೆ ತಾಯಿ, ಮಗು ಬಲಿ

    ಕುಡಿದ ಮತ್ತಿನಲ್ಲೇ ಶಸ್ತ್ರಚಿಕಿತ್ಸೆ- ವೈದ್ಯನ ಎಡವಟ್ಟಿಗೆ ತಾಯಿ, ಮಗು ಬಲಿ

    ಗಾಂಧಿನಗರ: ಕುಡಿತ ಮತ್ತಿನಲ್ಲೇ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ರಾಜ್‍ಕೋಟ್ ಜಿಲ್ಲೆಯಲ್ಲಿ ನಡೆದಿದೆ.

    ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿ ತಾಯಿ ಹಾಗೂ ಮಗುವಿನ ಸಾವಿಗೆ ಕಾರಣವಾಗಿದ್ದ ಸೋನಾವಾಲಾ ಆಸ್ಪತ್ರೆಯ ಆರ್‍ಎಂಓ(ರೆಸಿಡೆಂಟ್ ಮೆಡಿಕಲ್ ಆಫೀಸರ್) ಡಾ.ಪರೇಶ್ ಲಖಾನಿ (50)ಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ವೈದ್ಯ ಕಳೆದ 15 ವರ್ಷಗಳಿಂದ ಸೋನಾವಾಲಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದನು. ಸದ್ಯ ತನಿಖೆಯನ್ನು ಆರಂಭಿಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿ ಬಳಿಕ ತಾಯಿ-ಮಗು ವೈದ್ಯಕೀಯ ಕಾರಣಕ್ಕೆ ಮೃತ ಪಟ್ಟಿದ್ದಾರಾ ಅಥವಾ ವೈದ್ಯನ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆಂಬುದು ಸಾಬೀತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

    ಏನಿದು ಘಟನೆ?
    ಸೋಮವಾರ ಸಂಜೆ ಹೆರಿಗೆ ನೋವಿನಿಂದ ಬಳಲುತ್ತಿದ್ದ 22 ವರ್ಷದ ಮಹಿಳೆಯನ್ನು ರಾಜ್‍ಕೋಟ್ ನ ಸೋನಾವಾಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಭಿಣಿಯ ಪರಿಸ್ಥಿತಿಯನ್ನು ಅರಿತ ಡಾ. ಲಖಾನಿ ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಹೇಳಿದ್ದನು. ನಂತರ ಸಿಸೇರಿಯನ್ ಮಾಡಿ ಮಗುವನ್ನು ಹೊರತೆಗೆಯಲಾಯಿತು.

    ಮಗು ಹುಟ್ಟುವಾಗಲೇ ಸಾವನ್ನಪ್ಪಿತ್ತು. ಇತ್ತ ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಗೆ ವಿಪರೀತ ರಕ್ತಸ್ರಾವವಾಗುತ್ತಿತ್ತು. ಇದನ್ನು ಗಮನಿಸಿದ ಕುಟುಂಬಸ್ಥರು ಆಕೆಯನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಯತ್ನಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮಹಿಳೆ ಮೃತಪಟ್ಟಿದ್ದಾರೆ.

    ಶಸ್ತ್ರಚಿಕಿತ್ಸೆ ಮಾಡುವಾಗ ವೈದ್ಯ ಕುಡಿದ ಅಮಲಿನಲ್ಲಿದ್ದು, ಆತನ ನಿರ್ಲಕ್ಷ್ಯದಿಂದಲೇ ತಾಯಿ-ಮಗು ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರಿಗೆ ಬಿದ್ದು ಬಾಲಕಿ ಸಾವು!

    ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರಿಗೆ ಬಿದ್ದು ಬಾಲಕಿ ಸಾವು!

    ಮಂಗಳೂರು: ಸ್ನಾನ ಮಾಡಲೆಂದು ಸಿದ್ಧಪಡಿಸಿದ್ದ ಬಿಸಿ ನೀರು ಮೈಮೇಲೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

    ಪುತ್ತೂರಿನ ಬೆದ್ರಾಳದ ರಮೇಶ್ ಗೌಡ ಎಂಬವರ ಪುತ್ರಿ ತನ್ವಿ(5) ಮೃತಪಟ್ಟ ಬಾಲಕಿ. ಎರಡು ದಿನಗಳ ಹಿಂದೆ ಮನೆಯಲ್ಲಿ ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರು ಆಕಸ್ಮಿಕವಾಗಿ ಬಾಲಕಿಯ ಮೇಲೆ ಬಿದ್ದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ತನ್ವಿಯನ್ನು ಪೋಷಕರು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಸೇರಿಸಿದ್ದರು. ಒಂದು ದಿನ ಚಿಕಿತ್ಸೆ ನೀಡಿದ ಅಲ್ಲಿನ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಂತೆ ಸೂಚಿಸಿದ್ದರು.

    ವೈದ್ಯರ ಸೂಚನೆ ಮೇರೆಗೆ ಪೋಷಕರು ಬಾಲಕಿಯನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಗೆ ಕರೆತರುವಾಗಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮಗಳು ಸಾವಿಗೀಡಾಗಿದ್ದಾಳೆಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ: ದಯಾಮರಣಕ್ಕಾಗಿ ಧರಣಿ ನಡೆಸಿದ ರೈತ ಕುಟುಂಬ

    ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ: ದಯಾಮರಣಕ್ಕಾಗಿ ಧರಣಿ ನಡೆಸಿದ ರೈತ ಕುಟುಂಬ

    ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡ ರೈತ ಕುಟುಂಬವೊಂದು ದಯಾಮರಣ ಕೋರಿ ಧರಣಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

    ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ನಿವಾಸಿ ಲಕ್ಷ್ಮಮ್ಮ ಎಂಬುವವರಿಗೆ ತಂದೆಯಿಂದ ವಿಲ್ ಮುಖಾಂತರ 1.15 ಎಕರೆ ಜಮೀನು ಬಂದಿತ್ತು. ಆದರೆ ಈ ಜಮೀನಿನ ಮೇಲೆ ಸಂಬಂಧಿಗಳು ಕಣ್ಣು ಹಾಕಿ ಸಿವಿಲ್ ಕೋರ್ಟ್, ತಹಸೀಲ್ದಾರ್ ಹಾಗೂ ಡಿಸಿ, ಎಸಿ ಕೋರ್ಟ್ ಗಳಲ್ಲಿ ಪ್ರಕರಣ ದಾಖಲು ಮಾಡಿದ್ದರು. ಕೊನೆಗೆ ಲಕ್ಷ್ಮಮ್ಮನವರಿಗೆ ಖಾತೆ ಮಾಡುವಂತೆ ಎರಡು ವರ್ಷದ ಹಿಂದೆಯೇ ನ್ಯಾಯಾಲಯ ನಿರ್ದೇಶನ ಮಾಡಿತ್ತು.

    ಅಧಿಕಾರಿಗಳ ಎಡವಟ್ಟಿನಿಂದ ಲಕ್ಷ್ಮಮ್ಮನ ಹೆಸರಿಗೆ ಸರಿಯಾಗಿ ಖಾತೆಯಾಗಿರಲಿಲ್ಲ. ಈ ಬಗ್ಗೆ ಕಳೆದ ಎರಡು ವರ್ಷದಿಂದ ಲಕ್ಷ್ಮಮ್ಮ ಮತ್ತು ಆಕೆಯ ಕುಟುಂಬದವರು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದರೂ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ರೈತ ಕುಟುಂಬ ದಯಾಮರಣ ಕೋರಿ ದೇವನಹಳ್ಳಿ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರೀಗೌಡಗೆ ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ ಎಂದು ಪ್ರತಿಭಟನೆ ನಡೆಸಿ ತಮ್ಮ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದಯಾಮರಣಕ್ಕೆ ಸುಪ್ರೀಂ ಅನುಮತಿ: ಏನಿದು ಲಿವಿಂಗ್ ವಿಲ್? ತೀರ್ಪಿನಲ್ಲಿ ಏನಿದೆ? ತಪ್ಪು ಮಾಡಿದ್ರೆ ಶಿಕ್ಷೆ ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವೈದ್ಯನ ಚುಚ್ಚುಮದ್ದಿಗೆ ಬಾಲಕ ಬಲಿ!

    ವೈದ್ಯನ ಚುಚ್ಚುಮದ್ದಿಗೆ ಬಾಲಕ ಬಲಿ!

    ಹಾವೇರಿ: ವೈದ್ಯನೊಬ್ಬ ನೀಡಿದ್ದ ಚುಚ್ಚುಮದ್ದಿನಿಂದ ಆರೋಗ್ಯದಲ್ಲಿ ಏರುಪೇರಾಗಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

    ಹೊಸಳ್ಳಿ ಗ್ರಾಮದ ಹರೀಶ್ ದುರುಗಣ್ಣನವರ್ (13) ಮೃತ ಬಾಲಕ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹರೀಶ್‍ನನ್ನು ಪೋಷಕರು ಅದೇ ಗ್ರಾಮದ ಪರಮೇಶ್ ಎಂಬ ವೈದ್ಯನ ಬಳಿ ಸೆಪ್ಟೆಂಬರ್ 8 ರಂದು ಚಿಕಿತ್ಸೆ ಕೊಡಿಸಿದ್ದರು. ಚಿಕಿತ್ಸೆಯ ಬಳಿಕವು ಬಾಲಕ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ. ಅಲ್ಲದೇ ಇಂಜೆಕ್ಷನ್ ನೀಡಿದ ಜಾಗದಲ್ಲಿ ಗಡ್ಡೆಯಾಗಿತ್ತು. ಇದನ್ನು ಗಮನಿಸಿದ ಪೋಷಕರು ಮತ್ತೊಮ್ಮೆ ವೈದ್ಯನ ಬಳಿ ತೋರಿಸಿದ್ದರು. ಈ ವೇಳೆ ಗಡ್ಡೆಯನ್ನು ಪರೀಕ್ಷಿಸಿದ ವೈದ್ಯ ಮತ್ತೊಂದು ಇಂಜೆಕ್ಷನ್ ನೀಡಿದ್ದ. ಇದಾದ ಬಳಿಕ ಸೋಮವಾರ ರಾತ್ರಿ ಬಾಲಕ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ.

    ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಸಾವಿಗೆ ವೈದ್ಯನ ನಿರ್ಲಕ್ಷವೇ ಕಾರಣ ಎಂದು ಪೋಷಕರು ಆರೋಪ ಮಾಡಿದ್ದಾರೆ. ಬಾಲಕ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ವೈದ್ಯ ಪರಮೇಶ್ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv