Tag: neharu

  • ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಬೋಸ್‍ರ ಆಜಾದ್ ಹಿಂದ್ ಫೌಜ್‍ನಿಂದ ಸ್ವಾತಂತ್ರ್ಯ: ಅರ್ಧೇಂದು ಬೋಸ್

    ಕೊಲ್ಕತ್ತಾ: ಮಹಾತ್ಮ ಗಾಂಧೀಜಿ ಅವರ ಶಾಂತಿ ಚಳುವಳಿಯೊಂದರಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತಿಲ್ಲ. ಬದಲಾಗಿ ಸುಭಾಷ್ ಚಂದ್ರ ಬೋಸ್‍ರ ಆಜಾದ್ ಹಿಂದ್ ಫೌಜ್ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ನೇತಾಜಿಯವರ ಸೋದರಳಿಯ ಅರ್ಧೇಂದು ಬೋಸ್ ತಿಳಿಸಿದರು.

    ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರನ್ನು ಬದಿಗಿಟ್ಟಿದ್ದಾರೆ. ಬೋಸ್‍ರ ಕಥೆಯನ್ನು ಇತಿಹಾಸ ಪುಸ್ತಕಗಳಲ್ಲಿ ಪ್ರಕಟವಾಗದಂತೆ ನಿರ್ಬಂಧ ಹೇರಿದ್ದರು ಎಂದು ಆರೋಪಿಸಿದರು.

    ನೇತಾಜಿ ಹಾಗೂ ಜವಾಹರಲಾಲ್ ನೆಹರು ಅವರ ನಡುವೆ ಸಾಕಷ್ಟು ಪೈಪೋಟಿ ಇತ್ತು. ಇದರಿಂದಾಗಿ ನೇತಾಜಿಯನ್ನು ಇತಿಹಾಸದ ಪುಟದಿಂದ ತೆಗೆದು ಹಾಕಲು ನಿರ್ಧರಿಸಲಾಯಿತು. ಅದಕ್ಕೆ ಇತಿಹಾಸ ಪುಸ್ತಕಗಳಲ್ಲಿ ಸುಭಾಷ್ ಚಂದ್ರ ಬೋಸ್ ಬಗ್ಗೆ ಹೆಚ್ಚು ಬರೆದಿಲ್ಲ. ಇದರಿಂದಾಗಿ ಯುವಕರಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಅವರ ಆಜಾದ್ ಹಿಂದ್ ಫೌಜ್ ಬಗ್ಗೆ ಅರಿವಿಲ್ಲ ಎಂದು ವಿಷಾದಿಸಿದರು.

    ಜನವರಿ 23, 1897 ರಂದು ಜನಿಸಿದ ನೇತಾಜಿ ಅವರು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಅವರು ಸ್ವಾತಂತ್ರ್ಯಕ್ಕಾಗಿ ಆಜಾದ್ ಹಿಂದ್ ಫೌಜ್ ಅನ್ನು ಸ್ಥಾಪಿಸಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರ ಜ.23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದೆ. ಜೊತೆಗೆ ಈ ವರ್ಷದಿಂದ ಭಾರತ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನೆನಪಿಗಾಗಿ ಗಣರಾಜ್ಯೋತ್ಸವವನ್ನು ಜ.23ರಿಂದಲೇ ಆಚರಿಸುತ್ತಿದೆ. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ

  • ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ರವಿಗೆ ನೆಹರು ಬಗ್ಗೆ ಏನು ಗೊತ್ತು, ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಆಡಳಿತ ಗೊತ್ತಾ : ವಿಶ್ವನಾಥ್ ಕಿಡಿ

    ಮೈಸೂರು: ಮಾಜಿ ಪ್ರಧಾನಿಗಳಾದ ನೆಹರು ಮತ್ತು ವಾಜಪೇಯಿ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಟ್ಟ ಬಿಜೆಪಿ, ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹರಿಹಾಯ್ದಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನೆಹರು ಅಧಿಕಾರದ ಅವಧಿಗಿಂತ ಹೆಚ್ಚಿನ ಅವಧಿ ಜೈಲಿನಲ್ಲಿ ಕಳೆದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರು ಅವಹೇಳನಕಾರಿ ಮಾತು ಯಾರು ಮೆಚ್ಚುವಂಥದಲ್ಲ. ಸಿ.ಟಿ. ರವಿಗೂ ಮತ್ತು ಬಿಜೆಪಿಗೂ ಈ ಮಾತು ಶೋಭೆ ತರುವುದಿಲ್ಲ ಎಂದಿದ್ದಾರೆ.

    ಸಿ.ಟಿ.ರವಿ ಅವರು ನೆಹರು ಬಗ್ಗೆ ಓದಿಕೊಳ್ಳಬೇಕು. ವಾಜಪೇಯಿ ಅವರು ನೆಹರು ನಿಧಾನರಾದಾಗ ಏನೂ ಭಾಷಣ ಮಾಡಿದ್ದರು ಎಂಬುದನ್ನು ಸಿ.ಟಿ. ರವಿ ಓದಿಕೊಳ್ಳಬೇಕು. ನೆಹರು ಅವರ ಬಗ್ಗೆ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನೂ ಗೊತ್ತಿದೆ? ಏನೂ ತಿಳಿದು ಕೊಂಡಿದ್ದೀರಿ? ಭಾರತದ ಆಸ್ಮಿತೆ ನೆಹರು. ಭಾರತದ ಗರ್ವದ ಸಂಕೇತ ನೆಹರು. ಇಂತಹ ನೆಹರು ಬಗ್ಗೆ ನೀವು ಕೀಳಾಗಿ ಮಾತಾಡುವುದು ತಪ್ಪು. ಪ್ರಚಾರಕ್ಕಾಗಿ, ಯಾರನ್ನೋ ಓಲೈಸಲು ನೀವು ರೀತಿ ಮಾತಾಡಬೇಡಿ ಎಂದು ತಿಳಿ ಹೇಳಿದ್ದಾರೆ.

    ವಾಜಪೇಯಿ ಅವರನ್ನು ಕಾಂಗ್ರೆಸ್ ನಾಯಕರು ಕುಡುಕ ಎಂದಿದ್ದಾರೆ. ಇದು ಖಂಡನೀಯ. ನೆಹರು, ವಾಜಪೇಯಿ ಇಬ್ಬರು ಈ ದೇಶದ ಶ್ರೇಷ್ಠ ಆಡಳಿಗಾರರು. ಪ್ರಿಯಾಂಕ್ ಖರ್ಗೆ ತಮ್ಮ ತಂದೆ ನೋಡಿ ಮಾತಾಡುವುದು ಕಲಿಯಲಿ ಎಂದಿದ್ದಾರೆ. ಕರ್ನಾಟಕದಲ್ಲಿ ಐದು ಜನ ಮಾಜಿ ಸಿಎಂಗಳಿದ್ದಾರೆ. ನೀವು ಯಾಕೆ ಇದನ್ನು ಖಂಡಿಸುತ್ತಿಲ್ಲ? ನಿಮ್ಮ ಪಕ್ಷದ ನಾಯಕರಿಗೆ ಬಾಯಿ ಮುಚ್ಚಿಕೊಂಡಿರಿ ಎಂದು ಹೇಳುವಷ್ಟು ನೈತಿಕತೆ ಕಳೆದು ಕೊಂಡಿದ್ದೀರಾ. ರಾಜಕಾರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ

    ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನೂ ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

  • ನೆಹರೂಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ: ಗೋವಿಂದ ಕಾರಜೋಳ

    ನೆಹರೂಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ: ಗೋವಿಂದ ಕಾರಜೋಳ

    ಬೆಂಗಳೂರು: ನೆಹರೂ ಮನೆತನ 37 ವರ್ಷ ದೇಶವನ್ನು ಆಳಿದ್ದು, ಇವರ ಆಡಳಿತ ದೇಶಕ್ಕೆ ಶಾಪ ಆಯ್ತು. ನೆಹರು ಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

    ಮೋದಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಡುಗೋಡಿ ಮುನಿಚಿನ್ನಪ್ಪ ಕ್ರೀಡಾಂಗಣದಲ್ಲಿ ಮೋದಿ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರೈತರ ಬೆನ್ನು ಮುರಿದವರು. ದಲಿತರ ಉದ್ದಾರ ಮಾಡದೇ ಅವರನ್ನ ಹೆಸರಿಗೆ ಬಳಸಿಕೊಂಡಿದ್ದಾರೆ. ದಲಿತ ಅಭಿವೃದ್ದಿ ಮಾಡಿಲ್ಲ ಅಂತಾ ಕಾಂಗ್ರೆಸ್ ವಿರುದ್ಧ ಸಿಡಿಮಿಡಿಗೊಂಡರು.

    ಮೋದಿಯವರಿಗೆ ದೇಶದ ಬಡವರ ಕಷ್ಟ-ಸುಖ ಗೊತ್ತು. ಹೀಗಾಗಿ ದೇಶಕ್ಕೆ ಅನೇಕ ಅಭಿವೃದ್ಧಿ ಕಾರ್ಯಕ್ರಮ ಕೊಟ್ಟಿದ್ದಾರೆ. ಹಿಂದೆ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ಕಾರ್ಯಕ್ರಮ ಜಾರಿಗೆ ತಂದ್ರು. ಆದ್ರೆ ಅದನ್ನ ಅನುಷ್ಠಾನ ಮಾಡಿಲ್ಲ. ಮೋದಿ ಸೈಲೈಂಟ್ ಆಗಿ ಎಲ್ಲ ಯೋಜನೆಗಳಿಗೆ ಅನುಷ್ಠಾನ ಮಾಡ್ತಿದ್ದಾರೆ. ಕಾಂಗ್ರೆಸ್ ಮಾಡದ ಕೆಲಸವನ್ನ ಬಿಜೆಪಿಯ ಮೋದಿ ಸರ್ಕಾರ ಮಾಡ್ತಿದೆ ಅಂತಾ ಹೇಳಿದ್ರು.

    ಬಳಿಕ ಮಾಜಿ ಡಿಸಿಎಂ ಆರ್ ಅಶೋಕ್ ಮಾತನಾಡಿ, 10 ವರ್ಷ ಕಾಂಗ್ರೆಸ್ ಮನಮೋಹನ್ ಸಿಂಗ್ ಸರ್ಕಾರ ಇತ್ತು ಅಂತ ಯಾರಿಗೂ ಅನ್ನಿಸಿರಲಿಲ್ಲ. ಸೋನಿಯಾ ಗಾಂಧಿ ಸರ್ಕಾರ ಅಂತ ಎಲ್ಲರಿಗೂ ಅನ್ನಿಸಿತ್ತು. ಇವತ್ತು ಮೋದಿ ಸರ್ಕಾರ ಜನರ ಸರ್ಕಾರವಾಗಿದೆ. ಮೋದಿ ವಿಶ್ವಮಟ್ಟದಲ್ಲಿ ದೇಶದ ಕೀರ್ತಿ ಹಾರಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬಳು ಮೋದಿಗೆ ಪತ್ರ ಬರೆದು ಫ್ಲೈ ಓವರ್ ಬೇಕು ಅಂತಾ ಕೇಳಿದ್ದಾಳೆ. ಪ್ರಧಾನಿ ಮೋದಿ ಅದಕ್ಕೆ ಸ್ಪಂದನೆಯನ್ನೂ ನೀಡಿದ್ದಾರೆ. ಮನಮೋಹನ್ ಸಿಂಗ್ ಸೀನಿಯರ್ ಸಿಟಿಜನ್ ಹೋದ್ರು ಏನು ಮಾಡ್ತಿರಲಿಲ್ಲ ಅಂತಾ ಹೇಳಿದ್ರು.

    ಕಾಳಧನಿಕರಿಗೆ ಮೋದಿ ತಕ್ಕ ಪಾಠ ಕಲಿಸಿದ್ದಾರೆ. ದೇಶಕ್ಕೆ ಮೋದಿ ಏನಾದ್ರು ಮಾಡ್ತಾರೆ ಅಂತಾ ಬಡವರು, ರೈತರಿಗೆ ಗೊತ್ತು. ಕಾಂಗ್ರೆಸ್, ಜೆಡಿಎಸ್ ಅವ್ರನ್ನ ಆಫ್ ದ ರೆಕಾರ್ಡ್ ಕೇಳಿ ಅವರೇ ಮೋದಿ ಜನರ ಮನಸ್ಸಿಗೆ ಹೋಗಿದ್ದಾರೆ ಅಂತಾರೆ. ರಾಜ್ಯದಲ್ಲಿ ನಿದ್ರೆ ಮಾಡೋ ಸಿದ್ರಾಮಯ್ಯ ಸರ್ಕಾರ ಇದೆ. 4 ವರ್ಷದಿಂದ ನಿದ್ರೆಯಿಂದ ಎದ್ದೇಳಿ ಅಂದ್ರು ಇನ್ನೂ ಸಿದ್ದರಾಮಯ್ಯ ಎದ್ದಿಲ್ಲ. ಕಾಂಗ್ರೆಸ್ ಉಸ್ತುವಾರಿ ಪಕ್ಕದಲ್ಲೇ ಸಿದ್ದರಾಮಯ್ಯ ನಿದ್ರೆ ಮಾಡ್ತಾರೆ. ಎಲ್ಲಿ ಮೋದಿ, ಎಲ್ಲಿ ಸಿದ್ದರಾಮಯ್ಯ. ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಅಂತಾ ಅಶೋಕ್ ತಿಳಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಶಾಸಕರಾದ ರಘು, ಬಿ.ಎನ್.ವಿಜಯಕುಮಾರ್, ವಿಧಾನಪರಿಷತ್ ಸದಸ್ಯರಾದ ವಿ.ಸೋಮಣ್ಣ, ತಾರಾ, ಲೆಹರ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.