Tag: Nehru

  • ನೆಹರೂ-ಗಾಂಧಿ ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಶೂನ್ಯ: ದಿಗ್ವಿಜಯ್‌ ಸಿಂಗ್

    ನೆಹರೂ-ಗಾಂಧಿ ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಶೂನ್ಯ: ದಿಗ್ವಿಜಯ್‌ ಸಿಂಗ್

    ನವದೆಹಲಿ: ನೆಹರೂ-ಗಾಂಧಿ (Nehru-Gandhi) ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಪಕ್ಷ (Congress party) ಏನೂ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್ (Digvijiaya Singh) ಹೇಳಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನಕ್ಕೂ ಮುಂಚಿತವಾಗಿಯೇ ಮಾಧ್ಯಮದವರೊಂದಿಗೆ ಮಾತನಾಡಿದ ದಿಗ್ವಿಜಯ್‌ ಸಿಂಗ್ ಅವರು ನೆಹರೂ-ಗಾಂಧಿ ಕುಟುಂಬ ಇಲ್ಲದೇ ಹೋಗಿದ್ದರೆ ಕಾಂಗ್ರೆಸ್ ಶೂನ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ಕಾಂಗ್ರೆಸ್ ರಾಜ್ಯ ಘಟಕಗಳಲ್ಲಿನ ಇತ್ತೀಚಿನ ಬಿಕ್ಕಟ್ಟು ಕುರಿತಂತೆ ದಿಗ್ವಿಜಯ ಸಿಂಗ್ ಅವರು, ಈ ಪಕ್ಷದಲ್ಲಿ ಹಲವಾರು ಬಾರಿ ವಿಭಜನೆಗಳಾಗಿವೆ. ಆದರೂ ಶೇ.99ರಷ್ಟು ಕಾಂಗ್ರೆಸ್ಸಿಗರು ಸ್ವಾತಂತ್ರ್ಯಕ್ಕೂ ಮುನ್ನ ಮತ್ತು ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬವನ್ನು ಬೆಂಬಲಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಚಹರೆ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದಿಗ್ವಿಜಯ ಸಿಂಗ್, ನೆಹರೂ-ಗಾಂಧಿ ಕುಟುಂಬ ಇಲ್ಲದಿದ್ದರೆ ಕಾಂಗ್ರೆಸ್‍ಗೆ ಯಾವುದೇ ಗುರುತಿರುತ್ತಿರಲಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: RSSನ ಕೂದಲನ್ನು ಸಹ ಮುಟ್ಟಲು ಸಾಧ್ಯವಿಲ್ಲ – ಸಿದ್ದರಾಮಯ್ಯಗೆ ಬಿ.ವೈ.ರಾಘವೇಂದ್ರ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ನೆಹರೂ ದೇಶ ವಿಭಜನೆ ಮಾಡಿದ ಉದಾರವಾದಿ, ದೇಶ ವಿಭಜನೆ ತಡೆಯಲು ಮಹಾತ್ಮಗಾಂಧಿ ಏನ್ ಮಾಡಿದ್ರು: ಸಿ.ಟಿ ರವಿ ಪ್ರಶ್ನೆ

    ನೆಹರೂ ದೇಶ ವಿಭಜನೆ ಮಾಡಿದ ಉದಾರವಾದಿ, ದೇಶ ವಿಭಜನೆ ತಡೆಯಲು ಮಹಾತ್ಮಗಾಂಧಿ ಏನ್ ಮಾಡಿದ್ರು: ಸಿ.ಟಿ ರವಿ ಪ್ರಶ್ನೆ

    ನವದೆಹಲಿ: ಜವಹರಲಾಲ್ ನೆಹರೂ ದೇಶ ವಿಭಜನೆ ಮಾಡಿದ ಉದಾರವಾದಿ, ಅದನ್ನು ತಡೆಯಲು ರಾಷ್ಟ್ರಪಿತ ಮಹಾತ್ಮಗಾಂಧಿ ಏನೂ ಮಾಡಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಿದ್ದರಾಮಯ್ಯ ಅವರ ಆರ್ಯ – ದ್ರಾವಿಡ, ಆರ್‌ಎಸ್‌ಎಸ್ ಹೇಳಿಕೆ ವಿಚಾರವಾಗಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾತ್ಮಗಾಂಧಿ ಮತ್ತು ಮಾಜಿ ಪ್ರಧಾನಿ ಜವಹರಲಾಲ್ ನೆಹರು ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ : ರಾಜಭವನದಲ್ಲಿ ಡಾ.ಅಂಬೇಡ್ಕರ ಪುತ್ಥಳಿ ಅನಾವರಣ – ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

    Siddaramaiah

    ಎರಡನೇ ಮಹಾಯುದ್ಧದ ಪರಿಣಾಮ ಬ್ರಿಟಿಷರು ಸಾಮರ್ಥ್ಯ ಕಳೆದುಕೊಂಡಿದ್ದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ದೇಶಗಳಿಗೂ ಬ್ರಿಟಿಷರು ಸ್ವಾತಂತ್ರ್ಯ ನೀಡಿದ್ದಾರೆ. ಗಾಂಧಿ ಜನಸಮೂಹ ಜೋಡಿಸಿದರು, ಕ್ರಾಂತಿಕಾರಿಗಳು ಬ್ರಿಟಿಷರ ಎದೆ ನಡುಗಿಸಿದರು. ಗಾಂಧಿ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು ಎನ್ನುವುದು ಪೂರ್ಣ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಭಾರತ ಸ್ವಾತಂತ್ರ್ಯವಾದ ಬಳಿಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ಏನು ಸಿಕ್ತು? ದೇಶ ಇಬ್ಘಾಗವಾಯಿತು. ನೆಹರೂ – ಜಿನ್ನಾ ಸೇರಿ ದೇಶ ಒಡೆದರು, ಅದನ್ನು ನೋಡಿಕೊಂಡು ಗಾಂಧಿ ಸುಮ್ಮನೆ ಕೂತಿದ್ದರು. ದೇಶ ಒಡೆದ ಪರಿಣಾಮ ಸ್ವಾತಂತ್ರ್ಯ ಹೋರಾಟಗಾರಿಗೆ ಅತ್ಯಾಚಾರ, ಮತಾಂತರ ನೋಡುವುದು ಬಿಟ್ಟು ಬೇರೆನು ಸಿಗಲಿಲ್ಲ, ಗಾಂಧಿಯಲ್ಲೂ ದೌರ್ಬಲ್ಯಗಳು ಇದ್ದವು ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ದೇಶ ಒಡೆಯುವುದನ್ನು ಅರ್ಥ ಮಾಡಿಕೊಂಡಿದ್ದ ವೀರ ಸಾರ್ವರಕರ್, ಹಿಂದೂಗಳಿಗೆ ಸೇನೆಯಲ್ಲಿ ಹೆಚ್ಚು ಸೇರಲು ಕರೆ ನೀಡಿದರು. ಒಂದು ವೇಳೆ ಸೇನೆಯಲ್ಲಿ ಮುಸ್ಲಿಂ ಸಂಖ್ಯೆ ಹೆಚ್ಚಾಗಿದ್ದರೆ, ಇಂದು ಕಾಶ್ಮೀರ, ದೆಹಲಿ ಇರಲಿ ಭಾರತವೂ ಉಳಿಯುತ್ತಿರಲಿಲ್ಲ, ಎಲ್ಲವೂ ಒಡೆದು ಚೂರಾಗುತ್ತಿತ್ತು ಎನ್ನುವ ಮೂಲಕ ಮತ್ತೊಂದು ಹೊಸ ವಿವಾದ ಹುಟ್ಟು ಹಾಕಿದ್ದಾರೆ.

  • ಆರ್‌ಎಸ್‌ಎಸ್‌ ರಾಷ್ಟ್ರಪ್ರೇಮಿ ಸಂಘಟನೆ ಎಂದು ನೆಹರೂ ಹೊಗಳಿದ್ದರು: ಕೋಟಾ ಶ್ರೀನಿವಾಸ ಪೂಜಾರಿ

    ಆರ್‌ಎಸ್‌ಎಸ್‌ ರಾಷ್ಟ್ರಪ್ರೇಮಿ ಸಂಘಟನೆ ಎಂದು ನೆಹರೂ ಹೊಗಳಿದ್ದರು: ಕೋಟಾ ಶ್ರೀನಿವಾಸ ಪೂಜಾರಿ

    ಉಡುಪಿ: ಕಾಂಗ್ರೆಸ್ ಅನ್ನೇ ಆರಾಧಿಸಿದ್ದ ಜವಾಹರಲಾಲ್ ನೆಹರೂ ಅವರು ಆರ್‌ಎಸ್‌ಎಸ್‌ ಸಂಘಟನೆಯನ್ನು ಹೊಗಳಿದ್ದರು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ರಾಷ್ಟ್ರಪ್ರೇಮಿ ಸಂಘಟನೆ ಎಂದು ನೆಹರೂ ಅವರು ಬಣ್ಣಿಸಿದ್ದರು. ಅಲ್ಲದೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆರ್‌ಎಸ್‌ಎಸ್‌ಗೆ ಅವಕಾಶ ಕೊಟ್ಟಿದ್ದರು. ಆರ್‌ಎಸ್‌ಎಸ್‌ ಅನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೆಹರೂಗಿಂತ ಮೇಲಿನವರಾ ಎಂದು ಸಚಿವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಗೆ ಬದುಕ್ಬೇಕು, ಹೇಗೆ ಸಾಮಾಜಿಕ ಕಾರ್ಯಗಳನ್ನು ಮಾಡ್ಬೇಕು ಅನ್ನೋದಕ್ಕೆ ಪುನೀತ್ ಮಾದರಿ: ರಾಜಮೌಳಿ

    ಸಂವಿಧಾನ ದಿನಾಚರಣೆ ಬಹಿಷ್ಕರಿಸಿರುವ ಕಾಂಗ್ರೆಸ್ ನಡೆ ಬಗ್ಗೆ ಟೀಕಿಸಿದ ಸಚಿವರು, ಕಾಂಗ್ರೆಸ್ಸಿನವರು ನಮ್ಮನ್ನು ಹೊಗಳಬೇಕು ಎಂದು ಆಸೆ ಪಡೋದಕ್ಕಾಗುತ್ತಾ? ಬಿಜೆಪಿಯನ್ನು ಬೈಯ್ಯೋದೆ ಕಾಂಗ್ರೆಸ್ ಅಜೆಂಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ನಮಗೆ ಭಾವುಕತೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬದಿಂದಲೇ ಪಕ್ಷ, ಕುಟುಂಬಕ್ಕಾಗಿಯೇ ಪಕ್ಷ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

    ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಪಟ್ಟಿ ಸಿದ್ಧಪಡಿಸಿದೆ. ಅಸ್ಪೃಶ್ಯತೆ ತೊಡೆದು ಹಾಕುವ ಸವಾಲು ನಮ್ಮ ಮುಂದೆ ಇದೆ. ಪ್ರತಿಯೊಬ್ಬರನ್ನೂ ಅಸ್ಪೃಶ್ಯತೆ ನಿವಾರಣೆಗೆ ಸಿದ್ಧಪಡಿಸುತ್ತೇವೆ. ಚುನಾವಣೆಯ ಬಳಿಕ ಈ ಕುರಿತು ಸರ್ಕಾರಿ ಕಾರ್ಯಕ್ರಮ ರೂಪಿಸುತ್ತೇವೆ. ಪೇಜಾವರ ಶ್ರೀಗಳನ್ನು ಕೂಡಿಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

  • ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    ವಾಜಪೇಯಿ ಹೆವೀ ಡ್ರಿಂಕರ್ – ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    – ಸಿ.ಟಿ ರವಿ ವಿರುದ್ಧ ಪ್ರಿಯಾಂಕ್ ಕಿಡಿ

    ಕಲಬುರಗಿ: ವಾಜಪೇಯಿವರು ಹೇವಿ ಡ್ರಿಂಕರ್ ಅಂತೆ, ಸಂಜೆಗೆ ಅವರಿಗೆ ಎರಡು ಪೆಗ್ ಡ್ರಿಂಕ್ ಬೇಕಾಗಿತ್ತಂತೆ. ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಬಾರ್ ಅಂತಾ ಹಾಕ್ತೀರಾ ಎಂದು ಪ್ರಶ್ನಿಸುವ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿಟಿ ರವಿಯವರ ಹುಕ್ಕಾ ಬಾರ್ ಹೇಳಿಕೆ ವಿಚಾರವಾಗಿ ಕಲಬುರಿಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗರೇಟ್ ಸೇದುವುದು ಅಕ್ರಮನಾ? 2007ರಲ್ಲಿ ಒಂದು ಮ್ಯಾಗಜಿನ್‍ನಲ್ಲಿ ಸ್ಲೀಪಿಂಗ್ ಆನ್ ದಿ ವಿಲ್ ಎಂಬ ಆರ್ಟಿಕವೊಂದನ್ನು ಓದಿದ್ದೆ. ಅದರಲ್ಲಿ ವಾಜಪೇಯಿಯವರ ನಾಯಕತ್ವದಲ್ಲಿ ದೇಶ ಯಾಕೆ ಸರಿಯಾದ ರೀತಿಯಲ್ಲಿ ಹೋಗುತ್ತಿಲ್ಲ ಎಂಬುದರ ಬಗ್ಗೆ ಅವರ ವೈಯಕ್ತಿಕ ಜೀವನದ ವಿಚಾರಗಳಿತ್ತು. ವಾಜಪೇಯವರು ಹೆಚ್ಚು ಮದ್ಯಪಾನ ಮಾಡುತ್ತಿದ್ದರಂತೆ, ಅವರಿಗೆ ಸಂಜೆ ಹೊತ್ತು 2 ಗ್ಲಾಸ್ ವಿಸ್ಕಿ ಇರಲೇಬೇಕಾಗುತ್ತಂತೆ, ಸಿಗರೇಟ್ ಹಾಗೂ ಮದ್ಯಪಾನ ಮಾಡುವುದು ತಪ್ಪಲ್ಲ. ಹಾಗಂತ ನೀವು ಎಲ್ಲಾ ಬಾರ್‍ಗಳಿಗೂ ವಾಜಪೇಯಿ ಬಾರ್ ಎಂದು ಹೆಸರಿಡುತ್ತೀರಾ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಹೆಸ್ರು ಬದಲಾಯಿಸಿ ಅನ್ನೋದು ಬಿಜೆಪಿಯ ಚಿಲ್ಲರೆ ವಿಚಾರ: ಎಸ್.ಆರ್.ಪಾಟೀಲ್

    ಸಾಮಾನ್ಯವಾಗಿ ಆರ್‍ಎಸ್‍ಎಸ್‍ನಲ್ಲಿ ಇರುವವರು ಸಸ್ಯಾಹಾರಿಗಳು ಎಂದು ನಾವು ಭಾವಿಸುತ್ತೇವೆ. ಆದರೆ ವಾಜಪೇಯಿಯವರು ಮಾಂಸಹಾರಿ ಪ್ರಿಯರು. ಆದರೆ ಮಾಂಸ ಸೇವಿಸುವುದರಿಂದ ಗೌರವ ಕಡಿಮೆಯಾಗುತ್ತಾ? ಹಾಗಂತ ನೀವು ಎಲ್ಲಾ ಕಸಾಯಿಖಾನೆಗಳಿಗೆ ವಾಜಪೇಯಿ ಹೆಸರಿಡಲು ಆಗುತ್ತಾ? ಎಂದು ಹರಿಹಾಯ್ದಿದ್ದಾರೆ.

    ಬಿಜೆಪಿಯಲ್ಲಿರುವವರೆಲ್ಲಾ ಬಹಳ ಸಾಚಗಳು ಎಂದು ನಾವು ಭಾವಿಸುತ್ತೇವೆ. ಆದರೆ ಇತ್ತೀಚೆಗೆ ಸಿಡಿ ಪ್ರಕರಣದಿಂದ ದೇಶದ ಮರ್ರ್ಯಾದೆ ಹೋಗಿದೆ. ಕರ್ನಾಟಕ ಸಂಸದರು ಇಡೀ ದೇಶದಲ್ಲಿಯೇ ತಲೆ ತಗ್ಗಿಸುವಂತಹ ಕೆಲಸವನ್ನು ಮಾಡಿದ್ದಾರೆ. ಇವರು ಮಾತನಾಡುವುದರಿಂದ, ನಾವು ಮಾತನಾಡುವುದರಿಂದ ನೆಹರೂ ಘನತೆಯಾಗಲಿ, ವಾಜಪೇಯಿ ಘನತೆಯಾಗಲಿ ಕಡಿಮೆಯಾಗುವುದಿಲ್ಲ. ಯಾವಾಗ ಏನು ಮಾತನಾಡಬೇಕೆಂದು ತಿಳಿದುಕೊಂಡು ಮಾತನಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಮೊದಲನೇಯದಾಗಿ ಇವರಿಗೆ ಇವರ ನಾಯಕರ ಇತಿಹಾಸವೇ ಗೊತ್ತಿಲ್ಲ. ಸಾವರ್ಕರ್ ಅವರ ಏನು ಕೊಡುಗೆ ಇದೆ ಅಂತ ಅವರ ಹೆಸರನ್ನು ಪ್ಲೈ ಓವರ್‍ಗೆ ಇಡುತ್ತಾರೆ..? ಗೋಡ್ಸೆಯನ್ನು ನಂಬುತ್ತಾರೆ. ಗಾಂಧಿಯವರನ್ನು ನಂಬಲ್ಲ. ಇತಿಹಾಸ ಗೊತ್ತಿಲ್ಲದವರು ಮಂತ್ರಿಯಾದರೆ ಹಿಂಗೆ ಮಾತಾನಾಡುವುದು. ಇವರು ಅವಿವೇಕಿಗಳು, ಅವಿವೇಕಿತನದ ಪರಮಾವಧಿ ಇದು ಎಂದು ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹುಕ್ಕಾ ಬಾರ್ ಹೇಳಿಕೆ ನೀಡಿದ್ದ ಸಿ.ಟಿ ರವಿ..! 
    ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.ಇದನ್ನೂ ಓದಿ: ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

  • ನೆಹರುಗೆ ಪ್ರಧಾನಿ ಆಗೋ ಅರ್ಜೆಂಟ್ ಇತ್ತು, ಅದಕ್ಕೆ ಭಾರತವನ್ನ ತುಂಡು ಮಾಡಿದ್ರು: ಮಾಜಿ ಎಂಎಲ್‍ಸಿ ಭಾಂಡಗೆ

    ನೆಹರುಗೆ ಪ್ರಧಾನಿ ಆಗೋ ಅರ್ಜೆಂಟ್ ಇತ್ತು, ಅದಕ್ಕೆ ಭಾರತವನ್ನ ತುಂಡು ಮಾಡಿದ್ರು: ಮಾಜಿ ಎಂಎಲ್‍ಸಿ ಭಾಂಡಗೆ

    ಬಾಗಲಕೋಟೆ:ನೆಹರುಗೆ ದೇಶದ ಪ್ರಧಾನಿ ಆಗೋದು ಭಯಂಕರ ಅರ್ಜೆಂಟ್ ಇತ್ತು. ಅದಕ್ಕಾಗಿ ಭಾರತವನ್ನು ತುಂಡು ಮಾಡಿದರು ಎಂದು ಮಾಜಿ ಎಂಎಲ್‍ಸಿ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಸಿಎಎ ಪರ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಂಡಗೆ, ಆ ಹೊತ್ತಿನಿಂದ ಹತ್ತಿದ ಪೀಡಾ ಇವತ್ತಿಗೂ ಹೋಗುತ್ತಿಲ್ಲ. ಹಿಂದುಸ್ತಾನ ಪಾಕಿಸ್ತಾನ ಮಾಡಿದರು. ಅದನ್ನಾದರೂ ಸರಿಯಾಗಿ ಮಾಡಿದ್ರಾ ಅದನ್ನು ಮಾಡಲಿಲ್ಲ. ಅಲ್ಲಿಯವರು ಅಲ್ಲಿ ಇಲ್ಲಿಯವರು ಇಲ್ಲಿ ಅಂತ ಸರಿಯಾಗಿ ಗೆರೆ ಕೊರೆದರಾ ಅದು ಮಾಡಲಿಲ್ಲ ಅಂತ ಟೀಕಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವೇನೂ ಇಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಕಟ್ಟಿದ ಸಂಘಟನೆ ಕಾಂಗ್ರೆಸ್ ಪಕ್ಷ. ಅದು ರಾಜಕೀಯ ಪಕ್ಷ ಆಗಿರಲಿಲ್ಲ. ಆಗ ಏನು ಜೆಡಿಎಸ್ ಇತ್ತಾ? ಆರ್‌ಎಸ್‌ಎಸ್ ಇರಲಿಲ್ಲ, ಜನಸಂಘ ಇರಲಿಲ್ಲ ಎಂದು ಟಾಂಗ್ ಕೊಟ್ಟರು.

    ಇದು ಮಹಾತ್ಮಾ ಗಾಂಧಿಯ ಕಾಂಗ್ರೆಸ್ ಅಲ್ಲ. ಆ ಕಾಂಗ್ರೆಸ್ ಅವರ ಜೊತೆಗೇನೆ ಸತ್ತು ಹೋಯ್ತು ಅಂತ ಕುಟುಕಿದರು. ಇದು ಗೋಪಾಲಕೃಷ್ಣ ಗೋಖಲೆ ಕಾಂಗ್ರೆಸ್ ಅಲ್ಲ. ಬಾಲಗಂಗಾಧರ ತಿಲಕ್ ಅವರ ಕಾಂಗ್ರೆಸ್ ಅಲ್ಲ. ಸುಭಾಸ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ ಕಾಂಗ್ರೆಸ್ ಅಲ್ಲ ಅಂತ ಕೈ ಪಕ್ಷದ ಮೇಲೆ ವಾಗ್ದಾಳಿ ನಡೆಸಿದರು.

    ದೇಶದ್ರೋಹಿಗಳನ್ನ ಜೈಲಿಗೆ ಕಳಿಸಿ ಅಂದ್ರೆ ಕಾಶಪ್ಪನವರಗೆ ಯಾಕೆ ಸಿಟ್ಟು ಅಂತ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶ್ಪನವರ ವಿರುದ್ಧ ಹರಿಹಾಯ್ದರು. ಕಾಶಪ್ಪನವರೆ ನನ್ನ ಮೇಲೆ ಕೇಸು ಹಾಕು ಅಂತಿದ್ದೀರಿ. ಆದರೆ ನನ್ನ ಮೇಲೆ ಯಾಕೆ ಕೇಸು ಹಾಕಬೇಕು? ನಾನೇನಾದ್ರೂ ಬೆಂಗಳೂರಲ್ಲಿ ಬಾರ್ ನೊಳಗೆ ಜಗಳ ಮಾಡಿ ಕೇಸ್ ಹಾಕ್ಕೊಂಡಿಲ್ಲ ಎನ್ನುವ ಮೂಲಕ ಕಾಶಪ್ಪನವರ ಸ್ಕೈಬಾರ್ ಪ್ರಕರಣ ನೆನಪಿಸಿ ಟಾಂಗ್ ಕೊಟ್ಟರು. ಕಾಶಪ್ಪನವರೆ ನಾವು ಮುಸ್ಲಿಂ ವಿರೋಧಿಗಳು ಅಲ್ಲ. ಈ ದೇಶದ ಎಲ್ಲ ಮುಸಲ್ಮಾರು ಭಾರತದವರು. ನಾವು ದೇಶದ್ರೋಹಿಗಳನ್ನ ಜೈಲಿಗೆ ಹಾಕಿ ಅಂದ್ರೆ ನಿಮಗೇಕೆ ಸಿಟ್ಟು ಅಂತ ಭಾಂಡಗೆ ಹರಿಹಾಯ್ದರು.

  • ‘ಗಾಂಧೀಜಿ ತಪ್ಪಿನಿಂದ ಅಯೋಗ್ಯ ನೆಹರು ಪ್ರಧಾನಿಯಾದ’- ಮತ್ತೆ ವಿವಾದದಲ್ಲಿ ಯತ್ನಾಳ್

    ‘ಗಾಂಧೀಜಿ ತಪ್ಪಿನಿಂದ ಅಯೋಗ್ಯ ನೆಹರು ಪ್ರಧಾನಿಯಾದ’- ಮತ್ತೆ ವಿವಾದದಲ್ಲಿ ಯತ್ನಾಳ್

    ಬಾಗಲಕೋಟೆ: ವಲ್ಲಬಾಯಿ ಪಟೇಲ್ ಅವರಿಗೆ ಅಂದು ಬಹುಮತವಿತ್ತು. ಆದರೂ ಮಹಾತ್ಮ ಗಾಂಧಿ ನೆಹರು ಅವರನ್ನು ಪ್ರಧಾನಿಯನ್ನಾಗಿ ಮಾಡಿದರು. ಮಹಾತ್ಮ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಒಬ್ಬ ಅಯೋಗ್ಯ ಪ್ರಧಾನಿಯಾದ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇಂದು ಬಾಗಲಕೋಟೆ ಜಿಲ್ಲೆ ತೇರದಾಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ತಪ್ಪಿನಿಂದ ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ. ಅವನಿಗೆ ಸಿಗರೇಟ್ ಲಂಡನ್‍ನಿಂದ ಬರುತ್ತಿತ್ತು. ಬಟ್ಟೆ ದೋಬಿಗೆ (ಕ್ಲೀನಿಂಗ್) ಲಂಡನ್‍ಗೆ ಹೋಗುತ್ತಿದ್ದವು. ಇವರು ಬಡವರ ಬಗ್ಗೆ ಮಾತನಾಡುತ್ತಾರೆ. ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್ ಹೇಗೆ ಸತ್ತರು ಇಂದಿಗೂ ಯಾರೂ ಹೇಳುತ್ತಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ಮಾಡಿದರು.

    ಸದ್ಯ ಎಲ್ಲಿಯಾದರೂ ಕಾಶ್ಮೀರದಲ್ಲಿ ಗುಂಡು, ಬಾಂಬ್ ಹಾರಿದ್ದು ಕೇಳಿದ್ದೀರಾ? ಭಯೋತ್ಪಾದಕರ ಕಾಟ ಎಲ್ಲ ಬಂದ್ ಆಗಿದೆ. ನಮ್ಮ ರಾಜಕಾರಣಿಗಳೇ ಸೈನಿಕರ ಬಗ್ಗೆ ಪೊಲೀಸರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ತಿನ್ನೋಕೆ ಕೂಳಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಒಬ್ಬ ನಮ್ಮ ಅಯೋಗ್ಯ ರಾಜಕಾರಣಿ ಹೇಳುತ್ತಾನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಯತ್ನಾಳ್, ಸಿಎಎಯಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ತೊಂದರೆಯಿಲ್ಲ. ಖುರ್ಚಿಗಾಗಿ ರಾಜಕಾರಣ ಮಾಡುವವರಿಗೆ ಇದು ತೊಂದರೆಯಾಗಿದೆ ಎಂದು ಹೇಳಿದರು.

    ರೋಹಿಂಗ್ಯಾ ಜನಾಂಗ ನಮ್ಮ ದೇಶದಲ್ಲೇನಿದೆ ಅದು ಬಹಳ ಮಾರಕ. ರೋಹಿಂಗ್ಯಾ ಪರವಾಗಿ ಕಪಿಲ್ ಸಿಬಲ್‍ನಂತವರು ವಾದ ಮಾಡುತ್ತಾರೆ. ಮಂಗಳೂರಿನಲ್ಲಿ ಸತ್ತವರಿಗೆ ಮಮತಾ ಬ್ಯಾನರ್ಜಿ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾಳೆ. ಅಕೆಗೂ ನಮ್ಮ ಕರ್ನಾಟಕದ ಹುಡುಗನಿಗೂ ಏನು ಸಂಬಂಧ. ಕೋಲ್ಕತ್ತಾ ಜನರ ವೋಟ್‍ಗಾಗಿ ನಮ್ಮ ರಾಜ್ಯದವರಿಗೆ ಪರಿಹಾರ ಘೋಷಣೆ ಮಾಡಿದ್ದಾಳೆ ಎಂದು ಮಮತಾ ಬ್ಯಾನರ್ಜಿ ಮೇಲೆಯೂ ಏಕವಚನದಲ್ಲೇ ದಾಳಿ ಮಾಡಿದರು.

    ಇದೇ ಸಮಯದಲ್ಲಿ ಸಿದ್ದರಾಮಯ್ಯನ ವಿರುದ್ಧ ಗುಡುಗಿದ ಯತ್ನಾಳ್, ಸಿದ್ದರಾಮಯ್ಯ ಪ್ರಾಣ ಹೋದರೂ ಪರವಾಗಿಲ್ಲ ಮಂಗಳೂರಿಗೆ ಹೋಗುತ್ತೇನೆ ಅಂದ. ಪ್ರವಾಹ ಬಂದಾಗ ಬಾದಾಮಿಗೆ ಬರಬೇಕಿತ್ತು ಎಲ್ಲಿ ಮಲಗಿದ್ದೆ ಎಂದು ಮಾಜಿ ಸಿಎಂ ಸಿದ್ದುಗೆ ಏಕವಚನದಲ್ಲಿ ಪ್ರಹಾರ ಮಾಡಿದರು. ಪ್ರವಾಹವಾದಾಗ ಕಣ್ಣು ಆಪರೇಷನ್ ಆಗಿದೆ ಅಂದ ಎಂದು ಅಣಕ ಮಾಡಿ ತೋರಿಸಿದ ಯತ್ನಾಳ್, ಮಂಗಳೂರಿಗೆ ಹೋಗುವಾಗ ಎದೆ ಆಪರೇಷನ್ ಆಗಿತ್ತಲ್ಲ ಎಂದು ವ್ಯಂಗ್ಯವಾಡಿದರು.

  • ಬ್ರಿಟಿಷರಂತೆ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸಿದೆ: ಎಸ್.ಎಲ್.ಭೈರಪ್ಪ

    ಬ್ರಿಟಿಷರಂತೆ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸಿದೆ: ಎಸ್.ಎಲ್.ಭೈರಪ್ಪ

    ಧಾರವಾಡ: ಬ್ರಿಟಿಷರಂತೆಯೇ ಕಾಂಗ್ರೆಸ್ ಕೂಡ ಮುಸ್ಲಿಂ ತುಷ್ಟೀಕರಣ ಮಾಡುತ್ತ ಒಡೆದು ಆಳುವ ನೀತಿ ಅನುಸರಿಸಿದೆ ಎಂದು ಸಂಶೋಧಕ, ಸಾಹಿತಿ ಎಸ್.ಎಲ್.ಭೈರಪ್ಪ ಅವರು ಕಾಂಗ್ರೆಸ್ ಹಾಗೂ ನೆಹರು ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಧಾರವಾಡದಲ್ಲಿ ನಡೆದ ಆವರಣ ಕೃತಿಯ 40ನೇ ಮುದ್ರಣದ ಸಂಭ್ರಮದಲ್ಲಿ ಮಾತನಾಡಿದ ಅವರು, ನೆಹರು ನೇರವಾಗಿಯೇ ಮುಸ್ಲಿಮರಿಗೆ ಧಮ್ಕಿ ಹಾಕಿ ನೀವು ನಮಗೆ ಮತ ಹಾಕಬೇಕು ಅಂದಿದ್ದರು. ಅದನ್ನೇ ಮಾದರಿಯಾಗಿ ಕಾಂಗ್ರೆಸ್ ಅನುಸರಿಸಿಕೊಂಡು ಬಂದಿದೆ. ಅದೇ ಕಾರಣಕ್ಕೆ ಇಂದು ರಾಹುಲ್‍ಗಾಂಧಿ 370ನೇ ವಿಧಿ ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಇದನ್ನು ವಿರೋಧಿಸದೇ ಹೋದರೆ ನನ್ನ ಮುತ್ತಜ್ಜ ನೆಹರೂ ಮಾಡಿದ್ದೆಲ್ಲ ತಪ್ಪಾಗಿ ಬಿಡುತ್ತದೆ ಎನ್ನುವುದು ರಾಹುಲ್‍ಗೆ ಗೊತ್ತಿದೆ, ಹೀಗಾಗಿಯೇ ವಿರೋಧಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನೆಹರು ಕುಟಂಬಕ್ಕೆ ತುಂಬಾ ಸೊಕ್ಕು ಇತ್ತು. ಡಿಸ್ಕವರಿ ಆಫ್ ಇಂಡಿಯಾದಲ್ಲಿ ನೆಹರು ಔರಂಗಜೇಬನ ಇತಿಹಾಸ ಮರೆಮಾಚಿದ್ದಾರೆ. ಔರಂಗಜೇಬ್ ಖುರಾನ್ ಪ್ರತಿಗಳನ್ನು ನಕಲು ಮಾಡಿ ಮಾರಿ ಆ ದುಡ್ಡಿನಲ್ಲಿ ಮಾತ್ರ ಊಟ ಮಾಡುತಿದ್ದ ಎಂದು ಬರೆದಿದ್ದಾರೆ. ಇಷ್ಟು ದೇವಸ್ಥಾನ ಒಡೆದ, ಇಷ್ಟು ಜನರನ್ನು ಮತಾಂತರ ಮಾಡಿಸಿದ ಎಂದು ಎಲ್ಲಿಯೂ ಬರೆದಿಲ್ಲ ಎಂದು ನೆಹರು ವಿರುದ್ಧ ಕಿಡಿಕಾರಿದರು.

    ಬ್ರಿಟಿಷರು ದೇಶ ಬಿಟ್ಟು ಹೋಗುವಾಗ ದೇಶವನ್ನು ಯಾರ ಕೈಗೆ ಕೊಡಬೇಕೆಂದು ಕಾಂಗ್ರೆಸ್‍ಗೆ ಕೇಳಿದರು. ಆಗ ಕಾಂಗ್ರೆಸ್‍ನ 15 ಪ್ರಾದೇಶಿಕ ಕಮೀಟಿಗಳ ಪೈಕಿ ನೆಹರು ಹೆಸರನ್ನು ಒಬ್ಬರೂ ಹೇಳಿರಲಿಲ್ಲ. ಆದರೆ ಸರ್ದಾರ ವಲ್ಲಭಾಯ್ ಪಟೇಲ್‍ರ ಹೆಸರನ್ನು 12 ಕಮೀಟಿ ಹೇಳಿದ್ದವು. ನೆಹರು ನಾನು ಆದರೆ ಪ್ರಧಾನಿಯೇ ಆಗುತ್ತೇನೆ ಇಲ್ಲದಿದ್ದರೆ ಇಲ್ಲ ಎಂದು ಪಟ್ಟು ಹಿಡಿದಿದ್ದರು. ಆಗ ಗಾಂಧೀಜಿ ಸರ್ದಾರ್ ವಲ್ಲಭಾಯ್ ಪಟೇಲರಿಗೆ ಹಿಂದೆ ಸರಿಯುವಂತೆ ಸೂಚಿಸಿದರು ಎಂದು ವಿವರಿಸಿದರು.

    ಇದಕ್ಕೂ ಮೊದಲು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರು ಭೂಗತರಾಗಬೇಕಾದಲ್ಲಿ ಗಾಂಧೀಜಿಯೆ ಕಾರಣವಾಗಿದ್ದರು. ಹಾಗೆಯೇ ನನ್ನ ಸ್ಥಿತಿಯೂ ಆಗದಿರಲಿ ಎಂದು ಸರ್ದಾರ್ ವಲ್ಲಭಾಯ್ ಪಟೇಲರು ಹಿಂದೆ ಸರಿದಿದ್ದರು ಎಂದು ತಿಳಿಸಿದರು.

  • ಭಾರತ ಮಾತಾ ಕೀ ಜೈ ಅನ್ಬೇಕು ಇಲ್ಲ, ನೆಹರು ಕಟ್ಟಿದ ಪಾಕ್‍ಗೆ ಹೋಗ್ಬೇಕು: ಯತ್ನಾಳ್

    ಭಾರತ ಮಾತಾ ಕೀ ಜೈ ಅನ್ಬೇಕು ಇಲ್ಲ, ನೆಹರು ಕಟ್ಟಿದ ಪಾಕ್‍ಗೆ ಹೋಗ್ಬೇಕು: ಯತ್ನಾಳ್

    – ಇನ್ನೇನಿದ್ದರೂ ಒಂದೇ ಮದ್ವೆ, ಎರಡೇ ಮಕ್ಕಳು

    ವಿಜಯಪುರ: ಭಾರತ ಮಾತಾ ಕೀ ಜೈ ಅನ್ನಬೇಕು ಇಲ್ಲ ನೆಹರು ಕಟ್ಟಿದ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ.

    ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಯತ್ನಾಳ ನೇತೃತ್ವದಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನದ ಎದುರು ಸಂಭ್ರಮಾಚರಣೆ ನಡೆಸಲಾಯಿತು. ಇದೇ ವೇಳೆ ಮಾತನಾಡಿದ ಶಾಸಕ ಯತ್ನಾಳ್, ಹಮ್ ಪಾಂಚ್ ಹಮ್ ಪಚ್ಚಿಸ್ ಚಲಾಗಯ್. ಇನ್ನೇನು ಇದ್ದರೂ ಒಂದೇ ಮದುವೆ ಎರಡೇ ಮಕ್ಕಳು ಅಷ್ಟೇ ಎಂದರು.

    ಅಲ್ಲದೆ ಭಾರತ ದೇಶದಲ್ಲಿ ಇರಬೇಕು ಅಂದರೆ ಭಾರತ್ ಮಾತಾ ಕೀ ಜೈ ಹಾಗೂ ವಂದೇ ಮಾತರಂ ಅನ್ನಬೇಕು. ಇಲ್ಲದೇ ಇದ್ದರೆ ನೀವು ನೆಹರು ಮಾಡಿಕೊಟ್ಟಿರುವ ಪಾಕಿಸ್ತಾನಕ್ಕೆ ಹೋಗಬೇಕು ಮಕ್ಕಳ್ರೇ ಎಂದು ತಮ್ಮ ನಾಲಗೆ ಹರಿಬಿಟ್ಟಿದ್ದಾರೆ.

    ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಇದು ಭಾರತ ಇತಿಹಾಸದಲ್ಲಿ ಕರಾಳ ದಿನ ಎಂದು ಹೇಳಿದ್ದರು. ಇದಕ್ಕೆ ತೀರುಗೇಟು ಕೊಟ್ಟ ಯತ್ನಾಳ್ ಏ ಬದ್ಮಾಶ್.. ನಿನ್ನ ಕುಟುಂಬಕ್ಕೆ ಇದು ಕರಾಳ ದಿನ. ನಮಗೆ ಇದು ಸುವರ್ಣ ಯುಗ ಎಂದು ಹರಿಹಾಯ್ದರು.

  • ಪುಕ್ಕಟೆ ಉಪವಾಸ ಕೂತಿದ್ದಕ್ಕೆ ನಮಗೆ ಸ್ವಾತಂತ್ರ್ಯ ಬಂದಿಲ್ಲ: ಅನಂತಕುಮಾರ್ ಹೆಗಡೆ

    ಪುಕ್ಕಟೆ ಉಪವಾಸ ಕೂತಿದ್ದಕ್ಕೆ ನಮಗೆ ಸ್ವಾತಂತ್ರ್ಯ ಬಂದಿಲ್ಲ: ಅನಂತಕುಮಾರ್ ಹೆಗಡೆ

    ದಾವಣಗೆರೆ: ಪುಕ್ಕಟೆ ಉಪವಾಸ ಕೂತಿದ್ದಕ್ಕೆ ನಮಗೆ ಸ್ವಾತಂತ್ರ್ಯ ಬಂದಿಲ್ಲ. ಅಸಂಖ್ಯಾತ ಜನರ ರಕ್ತ ಚೆಲ್ಲಿ ಹೋರಾಟ ಮಾಡಿದ ಫಲದಿಂದ ಸಿಕ್ಕಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದ ನಡೆದ ಎಸ್.ಎಸ್. ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಭೆ ನಮೋ ಭಾರತ-ಮಿಷನ್ 365+ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕೇವಲ ಸರ್ಕಾರಿ ಕಚೇರಿಯಲ್ಲಿನ ಮೂರು ಫೋಟೋಗಳಿಂದ ಸ್ವಾತಂತ್ರ್ಯ ದೊರೆತಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಏಕೀಕೃತ ರೂಪ ಕೊಟ್ಟಿದ್ದು ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಎಂದು ತಿಳಿಸಿದರು.

    ರಾಜಕಾರಣ ಬಗ್ಗೆ ಹೇಳಲು ಹೇಸಿಗೆಯಾಗುವಂತೆ ಮಾಡಿದ್ದು ಒಂದು ರಾಜಕಾರಣದ ಕುಟುಂಬ. ದೇಶ ರಾಜಕೀಯದಲ್ಲಿ ಅವರು 70 ವರ್ಷಗಳ ಕಾಲ ಹೊಲಸು ಆಳ್ವಿಕೆಯನ್ನು ತೋರಿಸಿದರು. ಅವರು ದೇಶ ಕಾಯುವ ಸೈನಿಕರ ಕೈಯಲ್ಲಿ ಬಂದೂಕು ಕೊಡದೆ, ವೈರಿಗಳ ಮಧ್ಯೆ ಬಿಟ್ಟರು. ನಾವು ಹೊರದೇಶದಲ್ಲಿ ಮೋಜು, ಮಸ್ತಿ ಮಾಡಿದ ಪ್ರಧಾನಿಯನ್ನು ನೋಡಿದ್ದೇವೆ. ಅದು ಮನೆ ಮುರುಕ ಹಾಗೂ ಇಚ್ಛಾಶಕ್ತಿ ಇಲ್ಲದಿರುವ ಸರ್ಕಾರ ಎಂದು ನೆಹರು ಕುಟುಂಬದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಂತರದಲ್ಲಿ ಮನೆ ಮುರುಕ ಸರ್ಕಾರ ಆಡಳಿತಕ್ಕೆ ಬಂತು. ಈಗ ಬಿಜೆಪಿ ಅಧಿಕಾರದಲ್ಲಿದೇ ಮತ್ತೇ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕು ಎನ್ನುವುದು ದೇಶದ ಜನರ ಅಭಿಪ್ರಾಯವಾಗಿದೆ. ಒಂದು ಕಡೆ ಅಪ್ರಭುದ್ಧತೆಯ ಪ್ರತೀಕ, ಮತ್ತೊಂದು ಕಡೆ ಪ್ರಭುತ್ವದ ಮೇರು ಪರ್ವತ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಲೆಳೆದು ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದರು.

    ಸತ್ಯ ಹೇಳಿದರೆ ಕೆಲವರು ಮೂಗು ಮುರಿಯುತ್ತಾರೆ. ಮತ್ತೊಂದು ಕಡೆ ಶಬ್ಧಗಳ ಅರ್ಥ ತಿಳಿಯದೇ ಬುದ್ಧಿ ಜೀವಿಗಳ ವ್ಯಭಿಚಾರವನ್ನು ಮಾಧ್ಯಮಗಳು ಮಾಡುತ್ತಿವೆ ಎಂದು ಮಾಧ್ಯಮವದರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

    ಕುರ್ಚಿ ಖಾಲಿ ಖಾಲಿ:
    ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವ ಅನಂತಕುಮಾರ್ ಹೆಗಡೆ ಬರಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಒಂದು ಸಾವಿರ ಕುರ್ಚಿಗಳಲ್ಲಿ ಅರ್ಧಕ್ಕೂ ಹೆಚ್ಚು ಖಾಲಿ ಉಳಿದಿದ್ದವು. ಆದರೆ ಸಭಾಂಗಣದ ಒಳಗೆ ಹೊರಗೆ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನೇಮಿಸಲಾಗಿತ್ತು.

    ಹೆಗಡೆ ವಿರುದ್ಧ ಪ್ರತಿಭಟನೆ:
    ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಕಾರ್ಯಕ್ರಮಕ್ಕೆ ಬರುವುದನ್ನು ವಿರೋಧಿಸಿ ದಲಿತ ಸಂಘಟನೆಗಳು ನಗರದ ಜಿಲ್ಲಾ ಪಂಚಾಯಿತ್ ಕಚೇರಿ ಬಳಿ ಇರುವ ಸರ್ಕೀಟ್ ಹೌಸ್ ಬಳಿ ಪ್ರತಿಭಟನೆ ನಡೆಸಿದ್ದವು. ಹೀಗಾಗಿ 20ಕ್ಕೂ ಹೆಚ್ಚು ಜನ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

  • ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು: ರಮಾನಾಥ್ ರೈ

    ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು: ರಮಾನಾಥ್ ರೈ

    ಬಾಗಲಕೋಟೆ: ರಾಷ್ಟ್ರಭಕ್ತರು ಸ್ವಾತಂತ್ರ್ಯ ಹೋರಾಟಗಾರರನ್ನು ನಾನು ಹಿಯಾಳಿಸೋದಿಲ್ಲ. ಮೋತಿಲಾಲ್ ನೆಹರು ಒಬ್ಬ ಸ್ವಾತಂತ್ರ್ಯ ಹೋರಾಟಗಾರರು. ಹತ್ತು ವರ್ಷಗಳ ಕಾಲ ಅವರು ಜೈಲು ವಾಸ ಅನುಭವಿಸಿದ್ದಾರೆ. ನೆಹರು ಕುಟುಂಬದ ಬಗ್ಗೆ ಅಪಹಾಸ್ಯ ಮಾಡೋರು ದೇಶ ದ್ರೋಹಿಗಳು ಎಂದು ಅರಣ್ಯ ಖಾತೆ ಸಚಿವ ರಮಾನಾಥ್ ರೈ ಹೇಳಿದ್ದಾರೆ.

    ಜಮಖಂಡಿ ಪಟ್ಟಣಕ್ಕೆ ಭೇಟಿ ನೀಡಿದ್ದ ರಮಾನಾಥ್ ರೈ, ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳು. ಕಾಂಗ್ರೆಸ್ ಈಸ್ ಮೈ ರಿಲಿಜಿಯನ್ ಎಂದು ಪಕ್ಷಾಭಿಮಾನ ಮೆರೆದರು. ನಮ್ಮ ಜಿಲ್ಲೆಯಲ್ಲಿ ಸಾಮರಸ್ಯ ಹಾಳು ಮಾಡ್ತಿರೋರು ಬಿಜೆಪಿಯವರು. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದು ವ್ಯಂಗ್ಯವಾಡಿದರು.

    ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಎಸ್‍ಟಿಪಿ ಕಾರ್ಯಕರ್ತರು ಮತೀಯ ಭಾವನೆ ಇಟ್ಟುಕೊಂಡು ಸಾಮರಸ್ಯ ಹಾಳು ಮಾಡ್ತಿದ್ದಾರೆ. ಒಬ್ಬ ಅಲ್ಪಸಂಖ್ಯಾತ ಮತೀಯವಾದಿಯಾಗಿದ್ದರೆ ಸಮುದಾಯಕ್ಕೆ ಅಪಾಯ, ಬಹುಸಂಖ್ಯಾತ ಮತೀಯವಾದಿಯಾದರೆ ದೇಶಕ್ಕೆ ಅಪಾಯ ಅಂದ್ರು.

    ಕಲ್ಲಡ್ಕ ಪ್ರಭಾಕರ್ ಕುರಿತು ಮಾತನಾಡಿದ ರಮಾನಾಥ್ ರೈ, ಅವರ ಶಾಲೆಗೆ ಅನ್ನ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಅದು ಒಂದು ಅನುದಾನ ಸಹಿತ ಶಾಲೆ. ಎಲ್ಲ ಅನುದಾನ ಸಹಿತ ಶಾಲೆಗಳಿಗೂ ನಾವೂ ಅನ್ನ ಕೊಡ್ತೇವೆ. ಆದರೆ ಅವರಿಗೆ ಅನ್ನ ಬೇಕಿಲ್ಲ, ದುಡ್ಡು ಬೇಕು. ಅವರಿಗೆ ಕೊಲ್ಲೂರು ದೇವಸ್ಥಾನದಿಂದ ಆಹಾರದ ಬದಲಾಗಿ ದುಡ್ಡಿನ ರೂಪದಲ್ಲಿ ಸಂದಾಯವಾಗ್ತಿದೆ ಎಂದು ಪ್ರಭಾಕರ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.