Tag: Nehru Olekar

  • ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

    ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

    ಹಾವೇರಿ: ಬಿಜೆಪಿ (BJP) ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ 2ನೇ ಪಟ್ಟಿಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರೂ ಓಲೇಕಾರ್‌ಗೆ ಟಿಕೆಟ್ ಮಿಸ್ ಆಗಿದೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿ 2 ನೇ ಪಟ್ಟಿ ರಿಲೀಸ್-‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ

    ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತ್ತಾನೆ ಎಂಬುದನ್ನ ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

    ರಾಷ್ಟ್ರೀಯ ನಾಯಕರಿಗೆ ಸ್ವಲ್ಪ ದಿನದಲ್ಲಿ ಗೊತ್ತಾಗುತ್ತೆ. ಉದ್ದೇಶಪೂರ್ವಕವಾಗಿ ಟಿಕೆಟ್‌ ತಪ್ಪಿಸಿದ್ದಾರೆ. ರಾಜಕಾರಣದಲ್ಲಿ ನನ್ನ ಬೆಳವಣಿಗೆ ಸಹಿಸಲಾರದೆ ತಪ್ಪಿಸಿದ್ದಾರೆ. ಮುಖ್ಯಮಂತ್ರಿ ಮಾಡಿದ ಹಗರಣವನ್ನ ಬಯಲಿಗೆ ಎಳೆಯುತ್ತೇನೆ.‌ ಆತ ಮಾಡಿದ ಘನಕಾರ್ಯವನ್ನ ಜನರ ಮುಂದೆ ಬಿಚ್ಚಿಡುತ್ತೇನೆ. ಸೂಕ್ತ ತನಿಖೆ‌ ಮಾಡಿಸುತ್ತೇನೆ. ಹಿಂದಿನ ಭಾರಿ ಸಹ ಟಿಕೆಟ್ ತಪ್ಪಿಸಲು ಓಡಾಡಿದ್ದರು. ಸೇಡಿನ ರಾಜಕಾರಣಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಎ.ಟಿ.ರಾಮಸ್ವಾಮಿ ಮನವಿ

  • ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

    ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

    – ಎಲ್ಲ ಸ್ಥಾನ ಲಿಂಗಾಯತರಿಗೆ ಸಿಕ್ರೆ ನಾವ್ ಏನ್ ಮಾಡೋದು?
    – ಜಾತಿ ರಾಜಕಾರಣದಿಂದ ಮುಖ್ಯಮಂತ್ರಿಗಳಿಂದಲೇ ಮೋಸ ಆಯ್ತು
    – ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

    ಬೆಂಗಳೂರು: ಮೋಸ, ವಂಚನೆ ಮತ್ತು ವಸೂಲಿಯಿಂದಾಗಿ ನನಗೆ ಸಚಿವ ಸ್ಥಾನ ತಪ್ಪಿದೆ. ನಮ್ಮ ಜಿಲ್ಲೆಯವರಾದ ಮುಖ್ಯಮಂತ್ರಿಗಳಿಂದಲೇ ನನಗೆ ಮೋಸವಾಯ್ತು ಎಂದು ಶಾಸಕ ನೆಹರು ಓಲೇಕಾರ್ ಸಿಎಂ ಬೊಮ್ಮಾಯಿ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ನೆಹರು ಓಲೇಕಾರ್, ಪಟ್ಟಿಯಲ್ಲಿಯೂ ನನ್ನ ಹೆಸರಿಲ್ಲ ಮತ್ತು ಸಿಎಂ ಸಹ ನನಗೆ ಕರೆ ಮಾಡಿಲ್ಲ. ನಮ್ಮ ಪಕ್ಷದಲ್ಲಿಯೂ ಮೋಸ, ವಂಚನೆ ಮಾಡೋರು ಇರೋದರಿಂದ ಸಚಿವ ಸ್ಥಾನ ತಪ್ಪಿದೆ. ಹಿಂದುಳಿದ ವರ್ಗದ ನಾಯಕನಾದ ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಸಚಿವ ಸ್ಥಾನಕ್ಕೆ ಅರ್ಹ ವ್ಯಕ್ತಿ. ಆದ್ರೂ ಯಾರ್ ಯಾರಿಗೂ ಸಚಿವ ಸ್ಥಾನ ನೀಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಹೈಕಮಾಂಡ್‍ನಿಂದ ಅಗೌರವ:
    ನೂತನ ಸಚಿವರ ಪಟ್ಟಿ ನೋಡಿದ್ರೆ ಇದು ವಸೂಲಿ ಮೇಲೆ ಆಯ್ಕೆಯಾಗಿದೆ ಅನ್ನೋದು ಗೊತ್ತಾಗುತ್ತೆ. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಬಲಗೈ ಸಮುದಾಯಕ್ಕೆ ಸೇರಿದ ನಾಯಕ ಮೂರು ಬಾರಿ ಆಯ್ಕೆಯಾದ್ರೂ ಹೈಕಮಾಂಡ್ ನಮಗೆ ಅಗೌರವ ತೋರಿಸಿದೆ. ಸದ್ಯ ಹೈಕಮಾಂಡ್ ಮಾಡಿದ ಪಟ್ಟಿಯ ಬಗ್ಗೆ ಅಸಮಾಧಾನವಿದ್ದು, ಇನ್ನುಳಿದ ಸ್ಥಾನಗಳಲ್ಲಿ ಅವಕಾಶ ಮಾಡಿಕೊಡಬೇಕು. ಇಲ್ಲವಾದ್ರೆ ಅನಿವಾರ್ಯವಾಗಿ ಪಕ್ಷದಲ್ಲಿ ಇರುತ್ತೇವೆ.

    ನಾವು ಏನು ಮಾಡಬೇಕು?
    ಪಕ್ಷದಲ್ಲಿ ಜಾತಿ ರಾಜಕಾರಣ ಮಾಡಲಾಗುತ್ತಿದ್ದು, ಪ.ಪಂಗಡದವರನ್ನ ಕಡೆಗಣನೆ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಮುಂದುವರಿದ ಕೋಮಿನವರೆಗೆ ಅವಕಾಶಗಳು ಸಿಗುತ್ತಿವೆ. ಎಲ್ಲ ಲಿಂಗಾಯತರಿಗೆ ನೀಡಿದ್ರೆ, ಪ.ಜಾತಿ ಮತ್ತು ಪ.ಪಂಗಡದವರು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದರು. ಸಿಎಂ ಮತ್ತು ಬಿ.ಸಿ.ಪಾಟೀಲ್ ಮುಂದುವರಿದ ಕೋಮಿನವರು. ಅವರಿಗೆ ಸ್ಥಾನ ಕೊಟ್ರೆ, ಅವರೇನು ಹಿಂದುಳಿದ ವರ್ಗಕ್ಕೆ ಸಂಬಂಧಿಸಿದವರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾತ್ರಿಯಾಗ್ತಿದ್ದಂತೆ ನಾಪತ್ತೆಯಾಗುವ ಸಿಎಂ, ಹೋಗ್ತಿರುವುದು ಎಲ್ಲಿಗೆ? – ದೆಹಲಿಯಲ್ಲಿ ಬೊಮ್ಮಾಯಿ ನಿಗೂಢ ಹೆಜ್ಜೆ

    ಕಾದು ನೋಡಿ, ಎಚ್ಚರಿಕೆ ಕೊಟ್ರಾ?:
    ನಮ್ಮ ಜಿಲ್ಲೆಯವರಾದ ಮುಖ್ಯಮಂತ್ರಿಗಳಿಂದಲೇ ನನಗೆ ಸಚಿವ ಸ್ಥಾನ ತಪ್ಪಿದೆ. ಈ ಮೊದಲು ಮಾತನಾಡಿದಾಗ ದೆಹಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದು ಹೇಳಿದ್ದರು. ಇತ್ತ ಯಡಿಯೂರಪ್ಪ ಅವರ ಜೊತೆ ಸಹ ಚರ್ಚೆ ನಡೆಸಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸುತ್ತೇನೆ. ಬಿಜೆಪಿಯಲ್ಲಿ ಹಿಂದಿನಿಂದಲೂ ಇದ್ದೇನೆ, ಮುಂದೆಯೂ ಇರುತ್ತೇನೆ. ಆದ್ರೆ ಪಕ್ಷದಲ್ಲಿ ಸದ್ಯದ ವ್ಯವಸ್ಥೆ ಮುಂದಿನ ದಿನಗಳಲ್ಲಿ ದೊಡ್ಡ ಹೊಡೆತ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣ ವಚನ- ಯಾರಿಗೆ ಮಂತ್ರಿಗಿರಿ?

  • “ಗ್ರಾಮಗಳಲ್ಲಿ ಮನೆ ಮನೆ ತಪಾಸಣೆ ನಡೆಸಿ ಲಕ್ಷಣವುಳ್ಳವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ”

    “ಗ್ರಾಮಗಳಲ್ಲಿ ಮನೆ ಮನೆ ತಪಾಸಣೆ ನಡೆಸಿ ಲಕ್ಷಣವುಳ್ಳವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ”

    ಹಾವೇರಿ: ಹಾವೇರಿ ತಾಲೂಕಿನ ಎಲ್ಲ ಗ್ರಾಮಗಳ ಪ್ರತಿ ಮನೆ ಮನೆಗೆ ಭೇಟಿ ನೀಡಿ ಕೋವಿಡ್-19 ಸೋಂಕಿನ ಕುರಿತು ಸಮೀಕ್ಷೆ ನಡೆಸಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಶಾಸಕರು ಹಾಗೂ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ ಸೂಚನೆ ನೀಡಿದರು.

    ನಗರದ ತಾಲೂಕು ಪಂಚಾಂಯತ ಸಭಾಂಗಣದಲ್ಲಿ ಮಂಗಳವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮವಾರು ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ಪಡೆದರು. ಮನೆ ಮನೆಯ ತಪಾಸಣೆಯ ಸಂದರ್ಭದಲ್ಲಿ ಲಕ್ಷಣ ರಹಿತರಿಗೆ ಸೌಮ್ಯ ರೋಗದ ಲಕ್ಷಣ ಕಂಡುಬಂದರೂ ಗೃಹ ಪ್ರತ್ಯೇಕತೆಯಲ್ಲಿ ಇರಿಸದೇ ಕಡ್ಡಾಯವಾಗಿ ಹತ್ತಿರದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗುವ ಕುರಿತಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

    ಪಾಸಿಟಿವ್ ಪತ್ತೆಯಾದವರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ತ್ವರಿತ ಪರೀಕ್ಷೆ ಮಾಡಬೇಕು. ಸಂಪರ್ಕಿತರ ಬೀದಿಯಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸುವಂತೆ ಸೂಚನೆ ನೀಡಿದರು. ಸೋಂಕಿತ ಮೃತಪಟ್ಟಲ್ಲಿ ಅಥವಾ ಸೋಂಕು ದೃಢವಾದಲ್ಲಿ ಸೋಂಕಿನ ಮೂಲವನ್ನು ಕಂಡುಹಿಡಿದು ಆ ಸೋಂಕಿನ ಸರಪಳಿಯನ್ನು ಕತ್ತರಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಮನಬಂದಂತೆ ಓಡಾಡುತ್ತಿದ್ದಾರೆ. ಇದರಿಂದ ಸೋಂಕು ಹೆಚ್ಚಾಗಿ ಹರಡುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಬೇಕಾಬಿಟ್ಟಿ ಓಡಾಡುವವರಿಗೆ ದಂಡವಿಧಿಸಿ. ಅಗತ್ಯಬಿದ್ದರೆ ಪೋಲೀಸ್ ಅಧಿಕಾರಿಗಳಿಗೆ ನಿಯಮ ಉಲ್ಲಂಘಿಸಿವದರ ಹೆಸರು ನೀಡಿ. ಇಂತವರ ಮೇಲೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ತಹಶೀಲ್ದಾರ್ ಗಿರೀಶ ಸ್ವಾದಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ್ ಕುಂದೂರ, ಪೌರಾಯುಕ್ತ ಚಲವಾದಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

  • ನಾನು ಹಿರಿಯ, ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ನೆಹರು ಓಲೇಕಾರ್

    ನಾನು ಹಿರಿಯ, ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ನೆಹರು ಓಲೇಕಾರ್

    -ಆಂತರಿಕವಾಗಿ ಮಾತಾಡ್ತಾರೆ, ಬಹಿರಂಗವಾಗಿ ಯಾರೂ ಹೇಳ್ತಿಲ್ಲ

    ಹಾವೇರಿ: ನಾನು ಸಹ ಪಕ್ಷದಲ್ಲಿಯ ಹಿರಿಯ ನಾಯಕರಲ್ಲಿ ಒಬ್ಬ. ಹಾಗಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಪಕ್ಷದಲ್ಲಿಯ ಹಿರಿಯರು ಶಮನ ಮಾಡುತ್ತಾರೆ. ನಾನು ಪರಿಶಿಷ್ಠ ಜಾತಿಯ ಬಲಗೈ ಮುಖಂಡ. ರಾಜ್ಯದಲ್ಲಿ ಬಲಗೈ ಸಮುದಾಯಕ್ಕೆ ಇದುವರೆಗೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳು ನಮ್ಮ ಸಮುದಾಯಕ್ಕೆ ಅವಕಾಶ ನೀಡುತ್ತೇನೆ ಎಂದು ಹೇಳಿದ್ದಾರೆ. ಎಲ್ಲರೂ ಸಚಿವರಾಗಲು ನಾನಾ ತಂತ್ರಗಳನ್ನು ಮಾಡುತ್ತಿದ್ದು, ಅದು ಹೊರಗಡೆ ಭಿನ್ನಾಭಿಪ್ರಾಯದ ರೀತಿಯಲ್ಲಿ ಕಾಣಿಸುತ್ತಿದೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಶಮನವಾಗಲಿದೆ ಎಂದು ಹೇಳಿದರು.

    ಅಧಿಕಾರ ಬೇಕೆಂದಾಗ ಭಿನ್ನಾಭಿಪ್ರಾಯ ಉಂಟಾಗೋದು ಸಹಜ. ತಮಗೆ ಸಚಿವ ಸ್ಥಾನ ನೀಡಲಿಲ್ಲ ಅಂದ್ರೆ ಯಡಿಯೂರಪ್ಪನವರನ್ನು ಕೆಳಗೆ ಇಳಿಸ್ತೀವಿ ಅಂತಾ ಕೆಲವರು ಆಂತರಿಕವಾಗಿ ಹೇಳ್ತಾರೆ. ಆದ್ರೆ ಯಾರು ಅದನ್ನು ಬಹಿರಂಗವಾಗಿ ಹೇಳುತ್ತಿಲ್ಲ. ಹಿರಿಯ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡಿ, ಅಸಮರ್ಥರನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಉಮೇಶ್ ಕತ್ತಿಯವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಸಚಿವ ಸಂಪುಟದಲ್ಲಿ ಕುಮಟಳ್ಳಿ ಸೇರಿಸಿಕೊಂಡಿದ್ರೆ ಇನ್ನಷ್ಟು ಗೌರವ ಬರ್ತಿತ್ತು: ನೆಹರು ಓಲೇಕಾರ

    ಸಚಿವ ಸಂಪುಟದಲ್ಲಿ ಕುಮಟಳ್ಳಿ ಸೇರಿಸಿಕೊಂಡಿದ್ರೆ ಇನ್ನಷ್ಟು ಗೌರವ ಬರ್ತಿತ್ತು: ನೆಹರು ಓಲೇಕಾರ

    ಹಾವೇರಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹೇಶ್ ಕುಮಟಳ್ಳಿ ಅವರನ್ನ ಸೇರಿಸಿಕೊಂಡಿದ್ದರೆ ಇನ್ನಷ್ಟು ಗೌರವ ಬರುತ್ತಿತ್ತು ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಗುರುವಾರ ಸಚಿವ ಸಂಪುಟದ ವಿಸ್ತರಣೆಯಲ್ಲಿ ಮಹೇಶ್ ಕುಮಟಳ್ಳಿ ಅವರನ್ನ ಸೇರಿಸಿಕೊಂಡಿದ್ದರೆ ಇನ್ನಷ್ಟು ಗೌರವ ಬರುತ್ತಿತ್ತು. ಅವರನ್ನ ಯಾಕೆ ಕೈಬಿಟ್ಟಿದ್ದಾರೋ ಗೊತ್ತಿಲ್ಲ. ಯಾರಿಂದ ಸರ್ಕಾರ ಬಂದಿದೆಯೋ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ, ಅದು ಒಳ್ಳೆಯದು. ಉತ್ತಮ ಕೆಲಸ ಮಾಡಲು ಹಾರೈಕೆ ಮಾಡಿದ್ದೇವೆ. ಬಿಜೆಪಿ ಸರ್ಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡಿ. ಹತ್ತು ಜನ ಸಚಿವರಿಗೂ ಶುಭ ಹಾರೈಸಿದ್ದೇವೆ ಎಂದು ನೆಹರು ಓಲೇಕಾರ ಹೇಳಿದರು.

    ನಾನು ಸಿಎಂ ಯಡಿಯೂರಪ್ಪ ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ನಾವು ಮನವಿ ಮಾಡಿದ್ದೇವೆ, ಅವರು ಮುಂದೆ ನಮಗೆ ಅವಕಾಶ ಕೊಡುತ್ತೇನೆ ಎಂದಿದ್ದಾರೆ. ನಿಗಮ ಮಂಡಳಿ ಕೊಡುತ್ತಾರೋ ಅಥವಾ ಸಚಿವ ಸ್ಥಾನ ಕೊಡುತ್ತಾರೋ ಅದು ಸಿಎಂಗೆ ಬಿಟ್ಟಿದ್ದು ಎಂದರು.

  • ನಾನೂ ಸೀನಿಯರ್, ನನಗೆ ಸಚಿವಸ್ಥಾನ ನೀಡಿ: ನೆಹರು ಓಲೇಕಾರ

    ನಾನೂ ಸೀನಿಯರ್, ನನಗೆ ಸಚಿವಸ್ಥಾನ ನೀಡಿ: ನೆಹರು ಓಲೇಕಾರ

    ಹಾವೇರಿ: ನಾನೂ ಸೀನಿಯರ್ ಇದ್ದೇನೆ, ಮೂರು ಬಾರಿ ಶಾಸಕನಾಗಿದ್ದೇನೆ. ನನಗೆ ಸಚಿವಸ್ಥಾನ ನೀಡಿ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ.

    ಜನವರಿ 29ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡೋದಾಗಿ ಸಿಎಂ ಹೇಳಿದ್ದಾರೆ ಎಂದು ಓಲೇಕಾರ ಅವರು ತಿಳಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಗೌರವ ಇರುತ್ತೆ. ಸಚಿವ ಸ್ಥಾನಕ್ಕೆ ಮಠಾದೀಶರು ಸೇರಿದಂತೆ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಮಸ್ಯೆ ಇದೆ. ಹದಿನೇಳು ಜನರಿಂದಲೇ ಬಿಜೆಪಿ ಸರ್ಕಾರ ಬಂದಿದೆ. ಅವರ ತ್ಯಾಗದಿಂದಲೇ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ ಎಂದು ಓಲೇಕಾರ ಹೇಳಿದರು.

    ಸೋತವರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟು ತೃಪ್ತಿ ಮಾಡಬೇಕು. ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ತಾರೆ. ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಡುವ ಬಗ್ಗೆ ಪಕ್ಷದ ನಾಯಕರು ಚರ್ಚಿಸಿದ್ದಾರೆ. ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಕೊಡೋ ವಿಚಾರವಿದೆ ಎಂದು ನೆಹರು ಓಲೇಕಾರ ತಿಳಿಸಿದರು.

  • ಪೌರತ್ವ ಕಾಯ್ದೆ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನೆಹರು ಓಲೇಕಾರ

    ಪೌರತ್ವ ಕಾಯ್ದೆ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ನೆಹರು ಓಲೇಕಾರ

    ಹಾವೇರಿ: ಹಾವೇರಿ ನಗರದ ಬಸ್ ನಿಲ್ದಾಣದ ಮುಂದೆ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವ ಮೂಲಕ ಶಾಸಕ ನೆಹರು ಓಲೇಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನೆಹರು ಓಲೇಕಾರ, ಪೌರತ್ವ ಕಾಯ್ದೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಪೂರಕವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪೌರತ್ವ ಕಾಯ್ದೆಯನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವದು ದುರದೃಷ್ಟಕರ ಸಂಗತಿಯಾಗಿದೆ ಎಂದರು.

    ಈ ಸಂದರ್ಭದಲ್ಲಿ ನಗರಾಭಿದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್ ಸಂಗೂರ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾದ ನಜೀರ್ ಹುಸೇನ್ ನದಾಫ, ಬಾಬುಸಾಬ್ ಮೋಮಿನಗಾರ, ಮುಖಂಡರಾದ ಜಗದೀಶ್ ಮಲಗೊಡ, ಗಿರೀಶ್ ತುಪ್ಪದ, ಮಂಜುನಾಥ್ ಇಟಗಿ, ನಂಜುಂಡೇಶ್ವರ್ ಕಳ್ಳೆರ, ಅಶೋಕ್ ಬಣಕಾರ, ಶ್ರೀಕಾಂತ್ ಪೂಜಾರ, ಎನ್ ಪಿ ಚಾವಡಿ, ಶಿವರಾಜ್ ಮತ್ತಿಹಳ್ಳಿ, ನಾಗರಾಜ್ ಹಿರೇಮಠ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

  • ನನಗೂ ಸಚಿವ ಸ್ಥಾನ ನೀಡುವಂತೆ ಕೇಳುತ್ತೇನೆ – ಹಾವೇರಿ ಶಾಸಕ ನೆಹರು ಓಲೇಕಾರ

    ನನಗೂ ಸಚಿವ ಸ್ಥಾನ ನೀಡುವಂತೆ ಕೇಳುತ್ತೇನೆ – ಹಾವೇರಿ ಶಾಸಕ ನೆಹರು ಓಲೇಕಾರ

    ಹಾವೇರಿ: ಕಳೆದ ಬಾರಿ ಸಚಿವ ಸ್ಥಾನದ ಅವಕಾಶ ಸಿಕ್ಕಿಲ್ಲ. ಈ ಬಾರಿ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ ಹೇಳಿದ್ದಾರೆ.

    ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ನಾಲ್ಕನೇ ಬಾರಿಗೆ ಸಿಎಂ ಆಗ್ತಿರೋದು ಸಂತಸ ತಂದಿದೆ. ಕಳೆದ ಬಾರಿ ಸಚಿವನಾಗುವ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

    ವಿಶ್ವಾಸ ಮತಯಾಚನೆ ನಂತರ ಸಚಿವರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ರಾಷ್ಟ್ರೀಯ ನಾಯಕರ ಸೂಚನೆಯಂತೆ ಯಡಿಯೂರಪ್ಪನವರ ಮಂತ್ರಿಮಂಡಲ ರಚನೆಯಾಗಲಿದೆ. ಪರಿಶಿಷ್ಟ ಜಾತಿಯ ಬಲಗೈ ಸಮುದಾಯದನಾದ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಕಳೆದ ಬಾರಿ ಸಚಿವ ಸ್ಥಾನದ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಅವಕಾಶ ನೀಡುತ್ತಾರೆ ಎಂಬ ವಿಶ್ವಾಸವಿದೆ. ನನಗೆ ಸಚಿವಸ್ಥಾನ ನೀಡುವಂತೆ ಸಮುದಾಯದ ಅನೇಕರು ಈಗಾಗಲೇ ಒತ್ತಡ ತಂದಿದ್ದಾರೆ ಎಂದು ತಿಳಿಸಿದರು.

    ವಿಶ್ವಾಸ ಮತಯಾಚನೆ ನಂತರ ಯಡಿಯೂರಪ್ಪನವರನ್ನು ಭೇಟಿ ಮಾಡಿ ಸಚಿವಸ್ಥಾನ ನೀಡುವಂತೆ ಕೇಳುತ್ತೇನೆ. ಆದರೆ ಸಚಿವಸ್ಥಾನ ಸಿಕ್ಕರು, ಸಿಗದಿದ್ದರೂ ಬಿಎಸ್‍ವೈ ಜೊತೆಗಿರುತ್ತೇನೆ. ಜಿಲ್ಲೆಯಲ್ಲಿ ಶಾಸಕರಾದ ಬಿ.ಸಿ.ಪಾಟೀಲ, ಆರ್.ಶಂಕರ, ಬಸವರಾಜ ಬೊಮ್ಮಾಯಿ ಹಾಗೂ ಸಂಸದ ಸಿ.ಎಂ.ಉದಾಸಿ ಇದ್ದಾರೆ. ಹೆಚ್ಚು ಪ್ರಭಾವಿ ಶಾಸಕರಿರುವುದರಿಂದ ಸಚಿವಸ್ಥಾನ ಹಂಚಿಕೆ ಬಹಳ ಜಟಿಲವಾಗಿದೆ. ಆದರೂ ಸಮುದಾಯಕ್ಕೆ ಮಂತ್ರಿಸ್ಥಾನ ಕೊಡಿ ಎಂಬ ಬೇಡಿಕೆಯನ್ನಷ್ಟೇ ಇಡುತ್ತೇನೆ ಎಂದರು.