Tag: Nelamanagala

  • ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ನೆಲಮಂಗಲ: ಸಿಲಿಕಾನ್ ಸಿಟಿಯಲ್ಲಿ ವಾಹನ ಚಾಲಕರಿಗೆ ಯಾವಾಗಲೂ ಟ್ರಾಫಿಕ್ ಸಮಸ್ಯೆ, ಮಳೆಯ ಸಂದರ್ಭದಲ್ಲಿ ಗುಂಡಿಯ ಸಮಸ್ಯೆ. ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ.

    ಕೆಲ ವರ್ಷಗಳ ಹಿಂದೆ ದಾಸರಹಳ್ಳಿಯ (Dasarahalli) ಎಂಟನೇ ಮೈಲಿ ಬಳಿ ಫ್ಲೈಓವರ್‌ ರಸ್ತೆಯ ಪಿಲ್ಲರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಾಹನಗಳಿಗೆ ನಿಷೇಧ ಹೇರಲಾಯಿತು. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿ ಪ್ರತಿನಿತ್ಯ ಟ್ರಾಫಿಕ್ ಜಾಮ್‌ನಿಂದಾಗಿ ಸವಾರರು ಪರಿತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿ ಸುದ್ದಿಗೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ನೆಲಮಂಗಲ (Nelamangala) ಹಾಗೂ ಗೊರಗುಂಟೆಪಾಳ್ಯ (Gorguntepalya) ನಡುವಿನ ರಾಷ್ಟ್ರೀಯ ಹೆದ್ದಾರಿಯು ಈ ಟ್ರಾಫಿಕ್ ಸಮಸ್ಯೆಗಳಿನ್ನು ತೆರವುಗೊಳಿಸಿ, ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.ಇದನ್ನೂ ಓದಿ: ಪಶ್ಚಿಮ ಬಂಗಾಳದ ʼಅಪರಾಜಿತ ಬಿಲ್‌ʼ ಪೋಕ್ಸೊಗಿಂತ ಭಿನ್ನ ಹೇಗೆ?

    ಇಗೀಗ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಮತ್ತೊಂದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್, ಮಾಕಳಿ, ಮಾದನಾಯಕನಹಳ್ಳಿ, ಮಾದಾವಾರ ರಸ್ತೆಯ ಬಳಿ ಬೃಹತ್ ಗುಂಡಿಗಳಿಂದ ಸವಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ರಸ್ತೆಯ ಪಕ್ಕದ ಬೃಹತ್ ಸ್ಲಾಬ್‌ಗಳು ಕುಸಿದು ವಾಹನ ಸವಾರರ ಜೀವಕ್ಕೆ ಮೃತ್ಯು ಕೂಪವಾಗಿ ಪರಿಣಮಿಸಿವೆ.

    ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ರಾಜ್ಯದ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿಗಳ ಗಂಡಾಂತರದಿಂದ ಪರಿಸ್ಥಿತಿ ಹದಗೆಟ್ಟಿದೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಜೀವಕ್ಕೆ ಸಂಚಕಾರ ತರಲಿದೆ.ಇದನ್ನೂ ಓದಿ: Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಟೋಲ್ ಹಣ ಸಂಗ್ರಹಿಸುವ ಟೋಲ್ ಕಂಪನಿ ನಿರ್ವಹಣೆ ಮಾಡಬೇಕಿದ್ದು, ಸವಾರರ ಜೀವದ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಮಸ್ಯೆಗಳ ಆಗರವಾಗಿರುವ ನೆಲಮಂಗಲ ಗೊರಗುಂಟೆಪಾಳ್ಯ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಒಂದಲ್ಲ ಒಂದು ಸಮಸ್ಯೆ ಸವಾರರ ಜೀವಕ್ಕೆ ಯಮಸ್ವರೂಪಿಯಾಗಿದೆ.

  • ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ಹೆಂಡತಿಯ ಹತ್ಯೆಗೈದು ಮನೆಯ ಬಾತ್‌ರೂಂನಲ್ಲಿ ಪೆಟ್ರೋಲ್ ಸುರಿದು ಸುಟ್ಟ ಪತಿ

    ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ (Husband) ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ (Wife) ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆಯಲ್ಲಿ (Dabaspet) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ಎರಡು ಮೂರು ದಿನಗಳ ಹಿಂದೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾವ್ಯ (27) ಮೃತ ಗೃಹಿಣಿ. ಈಕೆಯ ಶವ ಮನೆಯ ಬಾತ್‌ರೂಂನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಮೊಘಲ್‌ ದೊರೆ ಹುಮಾಯೂನ್-ರಾಣಿ ಕರ್ಣಾವತಿಯಿಂದ ಬಂತಾ ‘ರಾಖಿ ಹಬ್ಬ’; ಚರ್ಚೆ ಹುಟ್ಟುಹಾಕಿದ ಸಂಸದೆ ಸುಧಾಮೂರ್ತಿ ಪೋಸ್ಟ್‌

    ಪತಿ ಶಿವಾನಂದ್ ಅಲಿಯಾಸ್ ದಿಲೀಪ್ ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಣಿಪುರ ಗ್ರಾಮದವನಾಗಿದ್ದು, ಕೊಲೆಯಾದ ಕಾವ್ಯ ಹೊಳೆನರಸೀಪುರ ತಾಲೂಕು ಮಾವಿನಕೆರೆ ಗ್ರಾಮದವರಾಗಿದ್ದಳು. ಇವರಿಬ್ಬರು ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಮನೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹೆತ್ತ ಮಗನ ಮುಂದೆಯೇ ತಾಯಿಯ ಗುಪ್ತಾಂಗಕ್ಕೆ ಖಾರದಪುಡಿ ಹಾಕಿದ ದುರುಳರು!

    ಪತಿ ವಿಪರೀತವಾಗಿ ಮದ್ಯಪಾನ ಮಾಡುತ್ತಿದ್ದ. ಇದರಿಂದ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಮನೆಯ ಬಾತ್ ರೂಮ್‌ನಲ್ಲಿ ಪತ್ನಿಯನ್ನು ಕೊಲೆ ಮಾಡಿ ನಂತರ ಪೆಟ್ರೋಲ್ ಸುರಿದು ಸುಟ್ಟಿರುವ ಆರೋಪಿ ಪತಿಯನ್ನು ದಾಬಸ್ ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕಾವ್ಯ ಫೋನ್ ತೆಗೆಯದ ಹಿನ್ನೆಲೆ ಮನೆಯವರು ಬಂದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಂದೆ ಮಾಡದ ತಪ್ಪಿಗೆ ಈ ರೀತಿ ಆರೋಪಕ್ಕೆ ಗುರಿಯಾಗಿದ್ದು ಬೇಸರ ತರಿಸಿದೆ: ಯತೀಂದ್ರ ಭಾವುಕ

  • ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿದವರು ದೇಶದ್ರೋಹಿಗಳು: ವಿನೋದ್ ರಾಜ್

    ನೆಲಮಂಗಲ: ಸಂಗೊಳ್ಳಿ ರಾಯಣ್ಣ ಕನ್ನಡಿಗ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಪ್ರತಿಮೆ ಧ್ವಂಸ ಮಾಡುವುದು ದೇಶದ್ರೋಹ ಮಾಡಿದಂತೆ ಆಗುತ್ತದೆ. ಪ್ರತಿಮೆ ಧ್ವಂಸ ಮಾಡುವವರನ್ನು ದೇಶದ್ರೋಹಿಗಳೆಂದು ಕರೆದು ಕ್ರಮಕೈಗೊಳ್ಳಿ ಎಂದು ನಟ ವಿನೋದ್ ರಾಜ್ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಹೋರಾಟಗಾರರಿಗೆ ಬೆಂಬಲವನ್ನು ಸೂಚಿಸಿದರು. ಕನ್ನಡಿಗರು ದಂಗೆಗೆ ಮುಂದಾದರೆ ಏನಾಗುತ್ತದೆ ಎಂದು ಹಿರಿಯರು ಗೋಕಾಕ್ ಚಳುವಳಿಯಿಂದ ತೋರಿಸಿದ್ದಾರೆ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲವು ಕೆಲಸ ಆಗುತ್ತಿದೆ. ಅದನ್ನು ಎಂದಿಗೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

    ಎಂಇಎಸ್ ಪುಂಡಾಟಿಕೆಯಿಂದ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ಜನರನ್ನು ಬಲಿಪಶು ಮಾಡಿ ಹೋರಾಟ ಮಾಡುವ ಸಂಕಷ್ಟಕ್ಕೆ ಸರ್ಕಾರ ದೂಡುತ್ತಿದೆ. ಪ್ರತಿಮೆ ಧ್ವಂಸ, ಸರ್ಕಾರಿ ವಾಹನಗಳಿಗೆ ದಾಳಿ ಮಾಡುವ ಮಟ್ಟಕ್ಕೆ ಬಿಟ್ಟುಕೊಂಡಿರುವುದು ತಪ್ಪು. ಈ ಘಟನೆ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಿರುವುದು ತಿಳಿಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಕೆಲಸವಾಗುತ್ತಿದೆ ಎಂದಾಗ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಿವಣ್ಣನವರ ಹೋರಾಟದ ಹಿಂದೆ ನಾವೆಲ್ಲ ಇರುತ್ತೇವೆ. ನಮ್ಮ ತಾಯಿ ಕೂಡ ಹೋರಾಟಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

  • ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್

    ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್

    ಬೆಂಗಳೂರು: ಇಂದು ನೆಲಮಂಗಲ ತಹಶೀಲ್ದಾರ್ ಮಂಜುನಾಥ್ ಆರೋಗ್ಯಾಧಿಕಾರಿಗಳ ಜೊತೆಗೆ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದರು.

    ಎರಡನೇ ಅಲೆಯ ಮಹಾಮಾರಿ ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ನಡುವೆ ಜನಸಾಮಾನ್ಯರ ಚಿಕಿತ್ಸೆಗೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಟಿಬೆಟಿಯನ್ ವಸತಿ ಗೃಹದಲ್ಲಿ 120 ಹಾಸಿಗೆಯ ವ್ಯವಸ್ಥೆಯನ್ನ ನೆಲಮಂಗಲ ತಾಲೂಕು ಆಡಳಿತದಿಂದ ಕೊವೀಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಈಗಾಗಲೇ ಕೊವೀಡ್ ಕೇರ್ ಸೆಂಟರ್ ನಲ್ಲಿ ಪ್ರತ್ಯೇಕವಾಗಿ ಪುರುಷ ಹಾಗೂ ಮಹಿಳೆಯರಿಗೆ ಕೊಠಡಿ ವ್ಯವಸ್ಥೆಯನ್ನ ಮಾಡಲಾಗಿದೆ.

    ಹಳ್ಳಿಗಾಡಿನ ಕೊರೊನ ಸೋಂಕಿತರ ಆರೋಗ್ಯ ವಿಚಾರಿಸಿದ ತಹಶೀಲ್ದಾರ್ ಮಂಜುನಾಥ್, ಕೇರ್ ಸೆಂಟರ್ ನಲ್ಲಿನ ಚಿಕಿತ್ಸೆ, ಶೌಚಾಲಯ, ಸ್ವಚ್ಛತೆ ಹಾಗೂ ಉತ್ತಮ ಗುಣಮಟ್ಟದ ಊಟ ಉಪಚಾರದ ಬಗ್ಗೆ ಸೋಂಕಿತರಿಂದಲೇ ಮಾಹಿತಿ ಪಡೆದರು. ಜೊತೆಗೆ ಸೋಂಕಿತರಿಗೆ ಕೊರೋನ ಜಾಗೃತಿ ಮೂಡಿಸಿ ಆತಂಕ ಪಡದಂತೆ ಧೈರ್ಯ ತುಂಬಿದ್ದಾರೆ.

  • ಮರ್ಮಾಂಗಕ್ಕೆ ಒದ್ದು ಯುವಕನ ಕೊಲೆ

    ಮರ್ಮಾಂಗಕ್ಕೆ ಒದ್ದು ಯುವಕನ ಕೊಲೆ

    -ಸಿಸಿಟಿವಿಯಲ್ಲಿ ದೃಶ್ಯ ಸರೆ

    ಬೆಂಗಳೂರು: ಎರಡು ದಿನಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮರ್ಮಾಂಗಕ್ಕೆ ಒದ್ದು ಯುವಕನನ್ನು ಕೊಂದಿರುವ ಸಿಸಿಟಿವಿ ದೃಶ್ಯ ನೆಲಮಂಗಲ ಟೌನ್ ಪೊಲೀಸರಿಗೆ ಲಭ್ಯವಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲದ ಜಯನಗರದಲ್ಲಿ ಎರಡು ದಿನದ ಹಿಂದೆ ನಡೆದ ಗಲಾಟೆಯಲ್ಲಿ ಯುವಕನ ಕೊಲೆ ನಡೆದಿತ್ತು. ಈ ಗಲಾಟೆಯಲ್ಲಿ 26 ವರ್ಷದ ಅರುಣ್ ಎಂಬ ಯುವಕ ಮೃತನಾಗಿದ್ದನು. ಗಲಾಟೆ ನಡೆದ ದೃಶ್ಯಗಳು ಸ್ಥಳೀಯ ಬೇಕರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾತಿನ ಚಕಮಕಿಯಿಂದ ಶುರುವಾದ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಮೂವರು ಆರೋಪಿಗಳ ಗುಂಪು ಅರುಣ್ ಮರ್ಮಾಂಗಕ್ಕೆ ಕಾಲಿನಲ್ಲಿ ಒದ್ದು ಕೊಲೆಗೈದು ಪರಾರಿಯಾಗಿದ್ದರು.

    ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ಟೌನ್ ಪೊಲೀಸರು ಪಿಎಸ್‍ಐ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳಾದ ಬೆಂಗಳೂರು ನಗರದ ಇಮ್ರಾನ್, ಸಲ್ಮಾನ್ ಹಾಗೂ ಸುಜೈನ್ ನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

     

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ನ್ಯಾಯಬೆಲೆ ಅಂಗಡಿಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ

    ನೆಲಮಂಗಲ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಇಂದು ಬೆಂಗಳೂರು ಹೊರವಲಯ ನೆಲಮಂಗಲ ನಗರಕ್ಕೆ ದಿಢೀರ್ ಭೇಟಿ ನೀಡಿದರು.

    ನಾಲ್ಕು ದಿನದ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪಡಿತರ ಅಂಗಡಿಯ ದಿನಸಿಯಲ್ಲಿ ದೂಳು ಮತ್ತು ಹುಳ ಇದ್ದ ಪ್ರಕರಣದ ಹಿನ್ನಲೆ ಸುದ್ದಿ ಪ್ರಸಾರವಾಗಿತ್ತು. ಈ ಸಂಬಂಧ ಇಂದು ಸಚಿವರು ಭೇಟಿ ನೀಡಿದರು. ನೆಲಮಂಗಲ ನಗರದ ನ್ಯಾಯ ಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿ ಅಕ್ಕಿ ಗೋಧಿಯನ್ನು ವೀಕ್ಷಿಸಿದರು. ತೂಕ ಹಾಗೂ ಗುಣಮಟ್ಟ ಪರಿಶೀಲನೆ ನಡೆಸಿದ ಸಚಿವ ಗೋಪಾಲಯ್ಯ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ, ಇದು ದಿಢೀರ್ ಭೇಟಿಯಲ್ಲ. ರಾಜ್ಯದ ಹಲವು ಕಡೆ ಪಡಿತರ ವಿತರಣಾ ಮಳಿಗೆಗಳಿಗೆ ತೆರಳುತ್ತೇನೆ. ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಸಹ ಮೂರು ತಿಂಗಳ ಪಡಿತರ ಜೊತೆಗೆ ತೊಗರಿ ಬೇಳೆ ಸಹ ನೀಡಲಿದೆ. ಇದೀಗ ಬಿಪಿಎಲ್ ಕಾರ್ಡ್ ಕೇಳಿರುವ ಕುಟಂಬಗಳಿಗೂ ಕಾರ್ಡ್ ವಿತರಿಸಲಿದ್ದೇವೆ ಎಂದರು.

    ಬಯೋಮೆಟ್ರಿಕ್ ಇಲ್ಲದ ಕುಟುಂಬಗಳಿಗೂ ಆಹಾರ ವಿತರಿಸಲು ಚಿಂತನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುತ್ತೇನೆ ಎಂದು ತಿಳಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಆಯುಕ್ತರು, ಹಿರಿಯ ಅಧಿಕಾರಿಗಳು ಸೇರಿದಂತೆ ನೆಲಮಂಗಲ ಶಾಸಕ ಡಾ.ಶ್ರೀನಿವಾಸ ಮೂರ್ತಿ, ತಹಶೀಲ್ದಾರ್ ಶ್ರೀನಿವಾಸಯ್ಯ ಮತ್ತು ಪೊಲೀಸ್ ಅಧಿಕಾರಿಗಳು ಜೊತೆಯಲ್ಲಿ ಇದ್ದರು.

  • ಕೊರೊನಾ ಆತಂಕ: ಬೆಂಗ್ಳೂರು ತೊರೆಯುತ್ತಿರುವ ಜನತೆ

    ಕೊರೊನಾ ಆತಂಕ: ಬೆಂಗ್ಳೂರು ತೊರೆಯುತ್ತಿರುವ ಜನತೆ

    ಬೆಂಗಳೂರು: ಕೊರೊನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ ಏಳು ಪ್ರಕರಣಗಳು ಸಹ ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಬೆಂಗಳೂರು ತೊರೆಯುತ್ತಿದ್ದಾರೆ. ಏಕಕಾಲದಲ್ಲಿ ಜನರು ನಗರದಿಂದ ಹೊರ ಹೋಗುತ್ತಿರುವದರಿಂದ ಸಿಟಿ ಹೊರ ವಲಯದ ಟೋಲ್ ಗೇಟ್ ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

    ಇಂದು ಸಾರಿಗೆ ಮತ್ತು ಖಾಸಗಿ ವಾಹನಗಳು ಬಂದ್ ಆದರೂ ಜನರು ತಮ್ಮ ಸ್ವಂತ ವೆಹಿಕಲ್ ಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಸಂಭವಿಸಿದೆ. ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಬಂದ್ ಮಾಡಿದೆ ಹಿನ್ನೆಲೆಯಲ್ಲಿ ತಮ್ಮ ತಮ್ಮ ಕಾರು, ಬೈಕ್ ಗಳಲ್ಲಿ ತಮ್ಮ ಊರುಗಳನ್ನು ತಲುಪುತ್ತಿದ್ದಾರೆ.

    ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರು ಲಾಕ್‍ಡೌನ್ ಆಗಿದೆ. ಹಾಗಾಗಿ ಜನರು ಇಂದು ಮಧ್ಯಾಹ್ನದಿಂದಲೇ ಬೆಂಗಳೂರಿಗೆ ಬೈ ಹೇಳುತ್ತಿದ್ದಾರೆ.