Tag: nelamnagala

  • ಆಸ್ಪತ್ರೆ ಸಿಬ್ಬಂದಿಯಿಂದ ಪ್ರಥಮ ಚಿಕಿತ್ಸೆಯ ಎಡವಟ್ಟು- ರಟ್ಟು ಇಟ್ಟು ಬ್ಯಾಂಡೇಜ್!

    ಆಸ್ಪತ್ರೆ ಸಿಬ್ಬಂದಿಯಿಂದ ಪ್ರಥಮ ಚಿಕಿತ್ಸೆಯ ಎಡವಟ್ಟು- ರಟ್ಟು ಇಟ್ಟು ಬ್ಯಾಂಡೇಜ್!

    ನೆಲಮಂಗಲ: ಅಪಘಾತವಾದ ಬಳಿಕ ಆಸ್ಪತ್ರೆ ಸಿಬ್ಬಂದಿ ಪ್ರಥಮ ಚಿಕಿತ್ಸೆಯ ವೇಳೆ ಎಡವಟ್ಟು ಮಾಡಿದ ಪ್ರಸಂಗವೊಂದು ನಡೆದಿದೆ.

    ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪ್ರಥಮ ಚಿಕಿತ್ಸೆ ಸಂದರ್ಭದಲ್ಲಿ ಸಿಬ್ಬಂದಿ ಪೇಪರ್ ರಟ್ಟು ಇಟ್ಟು ಡ್ರೆಸ್ಸಿಂಗ್ ಮಾಡಿದ್ದಾರೆ.

    ಬೈಕ್ ಅಪಘಾತಕ್ಕೀಡಾಗಿ ಬಿಹಾರ (Bihar) ಮೂಲದ ಪ್ರಭು ಎಂಬ ಕಾರ್ಮಿಕ ಕಾಲು ಮುರಿದುಕೊಂಡಿದ್ದಾರೆ. ಕೂಡಲೇ ಅವರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿ ವೈದ್ಯರಿರಲಿಲ್ಲ. ಹೀಗಾಗಿ ಸಿಬ್ಬಂದಿ ಗಾಯಾಳು ಕಾಲಿಕೆ ಪೇಪರ್ ರಟ್ಟಿನಿಂದ ಬ್ಯಾಂಡೇಜ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಂದು ವಾರ ಯುರೋಪ್ ಪ್ರವಾಸ

    ವೈದ್ಯರು ಇಲ್ಲದೆ ಆಸ್ಪತ್ರೆಯ ಸಿಬ್ಬಂದಿ ಮಾಡಿರುವ ಎಡವಟ್ಟಿಗೆ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಸ್ತೆ ಗುಂಡಿ ಆಯ್ತು, ಈಗ ಪಾರ್ಕ್ ಹೊಂಡಕ್ಕೆ ಬಾಲಕ ಬಲಿ..!

    ರಸ್ತೆ ಗುಂಡಿ ಆಯ್ತು, ಈಗ ಪಾರ್ಕ್ ಹೊಂಡಕ್ಕೆ ಬಾಲಕ ಬಲಿ..!

    – ಶೋಕಸಾಗರದಲ್ಲಿ ಕುಟುಂಬ
    – ಶಾಸಕರಿಂದ 50 ಸಾವಿರ ರೂ. ಧನಸಹಾಯ

    ಬೆಂಗಳೂರು/ನೆಲಮಂಗಲ: ರಸ್ತೆ ಗುಂಡಿ ಆಯ್ತು, ಇದೀಗ ಪಾರ್ಕ್ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ಮಲ್ಲಸಂದ್ರ ವಾರ್ಡಿನ ಪಾರ್ಕ್‍ನಲ್ಲಿ ಶುಕ್ರವಾರ ದುರ್ಘಟನೆ ನಡೆದಿದೆ.

    ಪ್ರತಾಪ್(8) ಮೃತ ದುರ್ದೈವಿ ಬಾಲಕ. ಈತ ರುದ್ರಮುನಿ ಹಾಗೂ ಕಾಂತಮ್ಮರ ಎರಡನೇ ಮಗ. ಆಟವಾಡುವ ವೇಳೆ ಬಿಬಿಎಂಪಿ ವತಿಯಿಂದ ನಿರ್ಮಾಣವಾಗಿದ್ದ ಕೆಂಪೇಗೌಡ ಉದ್ಯಾನವನದ ಪಾರ್ಕ್‍ನಲ್ಲಿರುವ ಹೊಂಡಕ್ಕೆ ಬಿದ್ದಿದ್ದಾನೆ. ಇದನ್ನೂ ಓದಿ:  ಡ್ರೋನ್ ದಾಳಿ- 10 ಜನರಿಗೆ ತೀವ್ರ ಗಾಯ

    ಮೂಲತಃ ಹಾಸನ ಜಿಲ್ಲೆಯವರಾದ ರುದ್ರಮುನಿ ಕುಟುಂಬ ಕಳೆದ 25 ವರ್ಷಗಳಿಂದ ಮಲ್ಲಸಂದ್ರದಲ್ಲಿ ವಾಸವಾಗಿದೆ. ನಿನ್ನೆ ಆಟವಾಡಲು ಹೋಗಿದ್ದ ಮಗ ಮಧ್ಯಾಹ್ನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ತಮ್ಮನನ್ನು ರಕ್ಷಣೆ ಮಾಡಲು ಅಣ್ಣ ರವಿತೇಜಾ ಮುಂದಾಗಿದ್ದು, ಆತ ಕೂಡ ಹೊಂಡಕ್ಕೆ ಬಿದ್ದಿದ್ದಾನೆ. ಇದನ್ನು ಗಮನಸಿದ ಸ್ಥಳೀಯರು ಕೂಡಲೇ ರವಿತೇಜಾನನ್ನ ಕಾಪಾಡಿದ್ದಾರೆ. ಆದರೆ ತಮ್ಮ ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಬಾಲಕನ ಮೃತದಲ್ಲಿ ಸಪ್ತಗಿರಿ ಆಸ್ಪತ್ರೆಯಲ್ಲಿದ್ದು, ಹಾಸ್ಪಿಟಲ್ ಮುಂದೆ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

    ಶಾಸಕರಾದ ಶ್ರೀ ಆರ್ ಮಂಜುನಾಥ್ ಅವರು ಮಗುವಿನ ಕುಟುಂಬಕ್ಕೆ 50 ಸಾವಿರ ರೂಗಳ ಧನಸಹಾಯ ಮಾಡಿದರು. ಕುಟುಂಬಕ್ಕೆ ಸರ್ಕಾರದಿಂದ ಮನೆ ಮಂಜೂರು ಮಾಡಿಸುವುದಾಗಿಯು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 627 ಗ್ರಾಂ ಚಿನ್ನ, 24.71 ಲಕ್ಷ ರೂ. ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳರು ಅರೆಸ್ಟ್

  • ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ  ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ.

    ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್ (19)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

    ತಾಲೂಕಿನ ಟಿ.ಬೇಗೂರು ಬಳಿಯ ಅಂಬಿಕಾ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಡಿಪ್ಲೋಮಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ  ಈಕೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಭಾನುವಾರ ಫೋನ್ ಕರೆಯನ್ನು ರಿಸೀವ್ ಮಾಡದಿದ್ದಕ್ಕೆ ಮನನೊಂದು ಪ್ರಿಯತಮನ ಜೊತೆ ತಂಗಲು ಬಾಡಿಗೆ ಪಡೆದಿದ್ದ ತೋಟದ ಮನೆಯಲ್ಲಿ ರಿಜೀಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಿಯಕರ ಹಾಗೂ ಕಾಲೇಜು ಆಡಳಿತ ಮಂಡಳಿಯವರ ವಿಚಾರಣೆ ನಡೆಸುತ್ತಿದ್ದಾರೆ.