Tag: nelmangala

  • ನನ್ನ ಪುಟಾಣಿ ಮಕ್ಕಳ ಬಳಿ ಹೋಗಲು ಆಗ್ತಿಲ್ಲ: ಮಹಿಳಾ ಪಿಡಿಒ ಕಣ್ಣೀರು

    ನನ್ನ ಪುಟಾಣಿ ಮಕ್ಕಳ ಬಳಿ ಹೋಗಲು ಆಗ್ತಿಲ್ಲ: ಮಹಿಳಾ ಪಿಡಿಒ ಕಣ್ಣೀರು

    ನೆಲಮಂಗಲ: ಮಾರಾಣಾಂತಿಕ ಕೋವಿಡ್-19 ನಲ್ಲಿ ದಿನನಿತ್ಯ ಪಾಲ್ಗೊಳ್ಳುವ ಕೊರೊನಾ ವಾರಿಯರ್ಸ್ ರದ್ದು ಹಲವಾರು ಮಾನಸಿಕ ಮುಖಗಳು ಅನಾವರಣಗೊಳ್ಳುತ್ತಿದೆ. ಮತ್ತೊಂದು ಕೊರೊನಾ ವಾರಿಯರ್ಸ್ ಕಥೆ ವ್ಯಥೆ ಇದೀಗ ಅಭಿನಂದನಾ ಸಮಾರಂಭದಲ್ಲಿ ಕಂಡು ಬಂದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಖಾಸಗಿ ಸಂಭಾಗಣದಲ್ಲಿ, ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನಾ ಮತ್ತು ಪುಷ್ಪವೃಷ್ಟಿ ಹಾಕುವ ಕಾರ್ಯಕ್ರಮವನ್ನು ಸ್ಥಳೀಯ ಜಿಲ್ಲಾ ಪಂಚಾಯತಿ ಸದಸ್ಯ ನಂಜುಂಡಯ್ಯ ಆಯೋಜಿಸಿದ್ದರು. ಈ ವೇಳೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ನೆಲಮಂಗಲ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ಪಿಡಿಒ ಶೀಲಾ ಗದ್ಗದಿತರಾಗಿದ್ದಾರೆ.

    ವೇದಿಕೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನರಸೀಪುರ ಗ್ರಾಮ ಪಂಚಾಯತಿ ಪಿಡಿಒ, ಪುಟಾಣಿ ನನ್ನ ಮಕ್ಕಳ ಬಳಿ ಹೋಗಲು ಆಗುತ್ತಿಲ್ಲ ಎಂದು ಭಾವುಕರಾಗಿದ್ದಾರೆ. ಮಾರಣಾಂತಿಕ ಕೊರೊನಾ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಕೊರೊನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ಪೊಲೀಸರು, ಇನ್ನೀತರ ಇಲಾಖೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ವೈದ್ಯರು ರೋಗಿಯ ಬಳಿಯೇ ಇರುತ್ತಾರೆ. ಕೊರೊನಾ ಆತಂಕವಿದ್ದರೂ ವ್ಯಕ್ತಪಡಿಸಲಾಗದ ಸನ್ನಿವೇಶದಲ್ಲಿದ್ದೇವೆ. ಯಾರದ್ದೋ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸುತ್ತಾರೆ ಎಂದು ಕೊರೊನಾ ರೋಗಿಗಳಿಗೆ ತಮ್ಮ ನೋವನ್ನು ಪರೋಕ್ಷವಾಗಿ ತಿಳಿಸಿದರು. ಮಹಿಳಾ ಪಿಡಿಒ ಕಣ್ಣೀರಿನೊಂದಿಗೆ ಸಮಾರಂಭದಲ್ಲಿ ಮಾತನಾಡಿದ ರೀತಿ ಹಲವರಿಗೆ ಸ್ಫೂರ್ತಿಯಾಗಿತ್ತು.

  • ಕಾರ್ಮಿಕ ದಿನಾಚರಣೆ – ಪೌರಕಾರ್ಮಿಕರು, ಬೆಸ್ಕಾಂ ಸಿಬ್ಬಂದಿಗೆ ಪುಷ್ಪವೃಷ್ಟಿ

    ಕಾರ್ಮಿಕ ದಿನಾಚರಣೆ – ಪೌರಕಾರ್ಮಿಕರು, ಬೆಸ್ಕಾಂ ಸಿಬ್ಬಂದಿಗೆ ಪುಷ್ಪವೃಷ್ಟಿ

    ನೆಲಮಂಗಲ: ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ಲಾಕ್‍ಡೌನ್‍ನಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಸಮಸ್ಯೆ ಎದುರಾಗುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

    ನೆಲಮಂಗಲ ನಗರದ ಬಸವಣ್ಣ ದೇವರಮಠದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಾಮೀಜಿಗಳ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಆಹಾರಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಲಾಕ್‍ಡೌನ್‍ನಿಂದ ಭಾರತದ ಆರ್ಥಿಕತೆ ಕುಸಿತವಾಗಿದೆ. ಆರ್ಥಿಕತೆಗಿಂತ ಜನರ ಪ್ರಾಣ ಉಳಿಸುವುದು ಮುಖ್ಯವಾಗಿದ್ದು ಮುಂದೆ ಆರ್ಥಿಕತೆ ಚೇತರಿಗೆ ಪಡೆಯಲಿದೆ. ಕೊರೊನಾ ವಾರಿಯರ್ಸ್ ಕಾಯಕದಿಂದ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ ಎಂದರು.

    ಇದೇ ವೇಳೆ ನಗರಸಭೆ ವ್ಯಾಪ್ತಿಯ ಕೂಲಿ ಕಾರ್ಮಿಕರು ಹಾಗೂ ತಾಲೂಕಿನ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು, ಸಂಸದೆ ಶೋಭಾ ಕರಂದ್ಲಾಜೆ ಹೂವಿನ ಹಾರವಾಕುವ ಮೂಲಕ ಪುಷ್ಪವೃಷ್ಟಿ ಮಾಡಿ ಕಾರ್ಮಿಕ ದಿನಾಚರಣೆ ಶುಭಾಶಯ ಕೋರುವ ಮೂಲಕ ಕೃತಜ್ಞತೆ ಸಲ್ಲಿಸಿದರು.

    ಬಸವಣ್ಣ ದೇವರ ಮಠದವತಿಯಿಂದ ಪೌರಕಾರ್ಮಿಕರಿಗೆ ಅಹಾರಕಿಟ್ ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗಸ್ವಾಮೀಜಿ, ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮೀಜಿ, ಶ್ರೀ ಚಂದ್ರಶೇಖರ ಸ್ವಾಮೀಜಿ, ಶ್ರೀ ಬಸವಲಿಂಗಸ್ವಾಮೀಜಿ, ಎನ್‍ಡಿಎ ಅಧ್ಯಕ್ಷ ಮಲ್ಲಯ್ಯ, ನಗರಸಭೆ ಆರೋಗ್ಯ ನಿರೀಕ್ಷಕ ಬಸವರಾಜು, ಸದಸ್ಯ ಪೂರ್ಣಿಮಾ, ರಾಜಮ್ಮ ಮುಖಂಡರಾದ ಶಾಂತಕುಮಾರ್, ಹಂಚಿಪುರ ಮಂಜುನಾಥ್ ಮತ್ತಿತರರಿದ್ದರು.

  • ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವುಗಳು

    ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವುಗಳು

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ.

    ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ ಕಂಗಾಲಾಗಿದ್ದಾರೆ. ಗುತ್ತಿಗೆ ಪಡೆದ 2 ಎಕ್ರೆ ಜಮೀನಿನಲ್ಲಿ 1 ಎಕ್ರೆ ಟೊಮೆಟೊ ಹಾಗೂ ಮತ್ತೊಂದು ಎಕ್ರೆಯಲ್ಲಿ ಚೆಂಡು ಹೂವುಗಳನ್ನು ಬೆಳೆದಿದ್ದಾರೆ. ಪ್ರತಿ ವರ್ಷ ಬಸವ ಜಯಂತಿ ಸೀಸನ್ ವೇಳೆಯಲ್ಲಿ ಚೆಂಡು ಹೂವು ಬೆಳೆದು ಮಾರುಕಟ್ಟೆಗೆ ನೀಡುತ್ತಿದ್ದ ರೈತ ಕೆಂಪರಾಜು ಅವರಿಗೆ ಈ ವರ್ಷ ಮಾರುಕಟ್ಟೆಯೇ ಇಲ್ಲದಂತಾಗಿದೆ.

    ರೈತ ತಮ್ಮ 1 ಎಕ್ರೆ ಜಮೀನಿನಲ್ಲಿ ಚೆಂಡು ಹೂವು ಬೆಳೆಸಲು ಸುಮಾರು 70 ಸಾವಿರದಿಂದ 80 ಸಾವಿರದವರೆಗೆ ಖರ್ಚು ಮಾಡಿದ್ದಾರೆ. ಸಸಿ ಒಂದಕ್ಕೆ 3 ರೂ. ಬೆಲೆಯಿದ್ದು ಒಂದು ಎಕ್ರೆಯಲ್ಲಿ 10 ಸಾವಿರ ಸಸಿಗಳನ್ನು ನೆಟ್ಟಿದ್ದಾರೆ. ಆದರೆ ದೇಶದಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದ ಸೂಕ್ತ ಮಾರುಕಟ್ಟೆ ಇಲ್ಲದೇ ರೈತ ಕಂಗಾಲಾಗಿದ್ದಾರೆ.

    ಈಗಾಗಲೇ ರೈತ ಸಂಪರ್ಕ ಕೇಂದ್ರಕ್ಕೆ ಹಾಗೂ ಸಹಾಯವಾಣಿ ಕೇಂದ್ರಕ್ಕೆ ಕೆಂಪರಾಜು ಅವರು ಕರೆ ಮಾಡಿದ್ದು, ಇವರು ಮಾಡಿದ ಕೆರೆಗಳಿಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ. ಸಂಬಂಧಪಟ್ಟ ಇಲಾಖೆಗಳಿಂದಾಗಲಿ ಅಥವಾ ಸರಕಾರದಿಂದಾಗಲಿ ಸೂಕ್ತ ಪರಿಹಾರ ದೊರಕಿಸಿಕೊಡಿ ಎಂದು ರೈತ ಮನವಿ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಕೆಂಪರಾಜು ಅವರು, ನಮ್ಮಂತಹ ಅದೆಷ್ಟೋ ರೈತರಿಗೆ ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ರೈತ ದೇಶದ ಬೆನ್ನೆಲುಬು ಎನ್ನುವ ಸಮಾಜ ಹಾಗೂ ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ವಹಿಸದೆ ತಟಸ್ಥವಾಗಿರುವುದು ಸರಿಯಲ್ಲ. ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನೆರವು ನೀಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

    ಸಮಾಜಕ್ಕೆ ಅನ್ನ ನೀಡುವ ರೈತನ ಬದುಕೇ ಹೀಗಾದ್ರೆ ಗತಿಯೇನು ಎಂಬ ಆತಂಕ ಸೃಷ್ಟಿಯಾಗಿದ್ದು, ಇನ್ನಾದರೂ ಸರ್ಕಾರ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಸಾಲ ಸೋಲ ಮಾಡಿ, ಬೆಳೆ ಬೆಳೆದು, ಸಮಾಜಕ್ಕೆ ಅನ್ನ ನೀಡುವ ರೈತನ ಬದುಕಿಗೆ ಬೆಳಕಾಗುವ ಮೂಲಕ ಬೆಳೆಗೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕಿದೆ.

  • ಎನ್‍ಪಿಎಲ್ ಕ್ರಿಕೆಟ್ ಟೂರ್ನಿ ಕಿರೀಟ ನೆಲಮಂಗಲ ಇಂಡಿಯನ್ಸ್ ತಂಡಕ್ಕೆ

    ಎನ್‍ಪಿಎಲ್ ಕ್ರಿಕೆಟ್ ಟೂರ್ನಿ ಕಿರೀಟ ನೆಲಮಂಗಲ ಇಂಡಿಯನ್ಸ್ ತಂಡಕ್ಕೆ

    ನೆಲಮಂಗಲ: ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಕ್ರಿಕೆಟ್ ಪ್ರೇಮಿಗಳಿಗೆ ದಿನವೂ ಹಬ್ಬವೋ ಹಬ್ಬ. ಆದರೆ ನೆಲಮಂಗಲ ಕ್ರಿಕೆಟ್ ಪ್ರೇಮಿಗಳಿಗೆ ಈಗಾಗಲೇ ಎನ್‍ಪಿಎಲ್ ಶುರುವಾಗಿ ಐದು ತಂಡಗಳ ಸೆಣಸಾಟಕ್ಕೆ ಇದು ತೆರೆಬಿದ್ದಿದೆ.

    ಆದರೆ ನೆಲಮಂಗಲ ಕ್ರಿಕೆಟ್ ಪ್ರೇಮಿಗಳಿಗೆ ಕ್ರಿಕೆಟ್ ಜ್ವರ ಈಗಾಗಲೇ ಶುರುವಾಗಿ ತೆರೆಬಿದ್ದಿದ್ದು, ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಕ್ರಿಕೆಟ್ ಪ್ರೇಮಿಗಳಿಗಾಗಿ ಬಿ.ಎಂ ಬಾಬು ಎನ್ನುವವರು ಟಿ20 ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದರು. ಇಂದು ಟೂರ್ನಿ ಫೈನಲ್ ಮ್ಯಾಚ್ ನಡೆಯಿತು. ಹೀಗಾಗಿ ಕ್ರಿಕೆಟ್ ಪ್ರೇಮಿಗಳು ಮ್ಯಾಚ್ ನೋಡಿ ಸಖತ್ ಎಂಜಾಯ್ ಮಾಡಿದ್ದಾರೆ.

    ಇನ್ನೂ ಇಂದಿನ ಹೈವೋಲ್ಟೇಜ್ ಮ್ಯಾಚ್ ಆಗಿ ಮಾರ್ಪಾಡಾಗಿದ್ದ ಫೈನಲ್ ಕದನ ನೆಲಮಂಗಲ ಇಂಡಿಯನ್ಸ್ ಮತ್ತು ನೆಲಮಂಗಲ ಫೈಟರ್ಸ್ ಮಧ್ಯೆ ನಡೆಯಿತು. ಅತ್ಯಂತ ರೋಚಕತೆಯಿಂದ ನಡೆದ ಪಂದ್ಯದಲ್ಲಿ ಕೊನೆಯ ಓವರ್ ವರೆಗೂ ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ನೆಲಮಂಗಲ ಇಂಡಿಯನ್ಸ್ ತಂಡ ನೆಲಮಂಗಲ ಪ್ರೀಮಿಯರ್ ಕಪ್ ಕೀರಿಟವನ್ನು ಮುಡಿಗೇರಿಸಿಕೊಂಡಿತು.

    ತುಮಕೂರು ವಿಧಾನ ಪರಿಷತ್ ಸದಸ್ಯ ಬಿಎಂಎಲ್ ಕಾಂತರಾಜು ಬಹುಮಾನವನ್ನ ವಿತರಿಸಿದರು. ಗೆದ್ದ ತಂಡ ಸೋತ ತಂಡವನ್ನು ಜೊತೆಯಲ್ಲಿಯೇ ಕರೆದುಕೊಂಡು ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿದ್ದು ಕ್ರೀಡಾ ಸ್ಪೂರ್ತಿಗೆ ಸಾಕ್ಷಿಯಾಗಿ ತೆರೆಕಂಡಿದೆ.

  • ಸರ್ಕಾರಿ ಬಸ್ಸುಗಳ ಅವಾಂತರ- ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ

    ಸರ್ಕಾರಿ ಬಸ್ಸುಗಳ ಅವಾಂತರ- ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ

    ಬೆಂಗಳೂರು: ಸಾರಿಗೆ ವ್ಯವಸ್ಥೆ ಒಂದು ಗ್ರಾಮದ ಅಭಿವೃದ್ಧಿ ಸೂಚಕ ಅಂತಾರೇ, ಆದರೆ ಗ್ರಾಮಾಂತರ ಸರ್ಕಾರಿ ಬಸ್ಸುಗಳ ಕಥೆ ದೇವರೇ ಗತಿ ಎನ್ನುವಂತಿದೆ.

    ಹೌದು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಹಳೆಯ ಕೆಎಸ್ಆರ್‌ಟಿಸಿ ಬಸ್ಸುಗಳ ಸಂಚಾರ ಹೆಚ್ಚಾಗಿದ್ದು, ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ ಸಾಮಾನ್ಯವಾಗಿ ಬಿಟ್ಟಿದೆ. ದಿನನಿತ್ಯವೂ ಕೆಟ್ಟು ನಿಲ್ಲುವ ಸರ್ಕಾರಿ ಕೆಎಸ್ಆರ್‌ಟಿಸಿ ಬಸ್ಸುಗಳಿಂದ ಚಾಲಕ ನಿರ್ವಾಹಕರು ಹೈರಾಣಾಗಿದ್ದಾರೆ.

    ಇದನ್ನೆಲ್ಲಾ ನೋಡಿದರೆ ಸಾರಿಗೆ ಇಲಾಖೆಯಲ್ಲಿ ಬಸ್ಸುಗಳ ನಿರ್ವಹಣೆಗೆ ಹಣವಿಲ್ಲವಾ ಎಂಬ ಪ್ರಶ್ನೆ ಮೂಡುವುದು ಸಹಜವಾಗಿದೆ. ನೆಲಮಂಗಲ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗಳ ಪರದಾಟ ಹೇಳತೀರದಾಗಿದ್ದು, ಹಿಂದೆ ಮುಂದೆ ತಳ್ಳಿದರೂ ಸ್ಟಾರ್ಟ್ ಆಗದ ಬಸ್ಸುಗಳು ಇಲಾಖೆಗೆ ಹಾಗೂ ಪ್ರಯಾಣಿಕರಿಗೆ ಕಿರಿ ಕಿರಿ ಉಂಟುಮಾಡುತ್ತಿದೆ.

    ಕೆಟ್ಟು ನಿಲ್ಲುವ ಬಸ್ಸುಗಳನ್ನು ಮತ್ತೊಂದು ಬಸ್ಸಿನ ಸಹಾಯ ಪಡೆದು ಸ್ಟಾರ್ಟ್ ಮಾಡಿ ಸಿಬ್ಬಂದಿ ಕೊಂಡಯ್ಯುತ್ತಿದ್ದಾರೆ. ಕೆಲವು ಬಸ್ಸುಗಳಂತೂ ಟ್ರಾಫಿಕ್‍ನಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು, ಸಾರಿಗೆ ಸಿಬ್ಬಂದಿ ಪರದಾಟವಂತಾಗಿದೆ.

  • ನಟಿ ಶೃತಿ ಮಾಜಿ ಕಾರು ಡ್ರೈವರ್ ಮಂಜುನಾಥ್ ಸಿಂಗ್ ಆತ್ಮಹತ್ಯೆ

    ನಟಿ ಶೃತಿ ಮಾಜಿ ಕಾರು ಡ್ರೈವರ್ ಮಂಜುನಾಥ್ ಸಿಂಗ್ ಆತ್ಮಹತ್ಯೆ

    – ಟವಲ್‍ನಲ್ಲಿ ನೇಣು ಹಾಕಿಕೊಂಡು ಸಾವು

    ನೆಲಮಂಗಲ: ಕಳೆದ ಎರಡುವರೆ ವರ್ಷಗಳ ಕಾಲ ನಟಿ ಶೃತಿ ಕಾರು ಡ್ರೈವರ್ ಆಗಿ ಕಾರ್ಯನಿರ್ವಹಿಸಿ, ಆರು ತಿಂಗಳ ಹಿಂದೆ ಕೆಲಸ ಬಿಟ್ಟ ಕಾರು ಚಾಲಕ ಮಂಜುನಾಥ್ ಸಿಂಗ್ ಇಂದು ಅನುಮಾನಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಬೆಂಗಳೂರು ಹೊರವಲಯ ಮಾಗಡಿ ರಸ್ತೆಯ ಫಾರೆಸ್ಟ್ ಗೇಟ್ ನಲ್ಲಿ ನೇಣಿಗೆ ಶರಣಾಗಿರುವ ಮಂಜುನಾಥ್ ಸಿಂಗ್, ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿ ಗ್ರಾಮದ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಮಾಗಡಿ ರಸ್ತೆಯ ಮಾಚೋಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

    ಕಳೆದ ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ಶರಣ್ ಕಾರ್ ಡ್ರೈವರ್ ಆಗಿದ್ದು ಮಂಜುನಾಥ್, ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಕಡಬಗೆರೆಯಲ್ಲಿ ಪಾರ್ಟಿಗೆ ಹೋಗಿದ್ದ ಎನ್ನಲಾಗಿದೆ. ನಂತರ ಟವಲ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಂಜುನಾಥ್ ಪತ್ತೆಯಾಗಿದ್ದಾನೆ.

    ಮಂಜುನಾಥ್ ಸಾವಿನ ಬಗ್ಗೆ ಹಲವು ಅನುಮಾನವನ್ನು ಸಂಬಂಧಿಗಳು ವ್ಯಕ್ತಪಡಿಸುತ್ತಿದ್ದಾರೆ. ಮಂಜುನಾಥ್ ಸಿಂಗ್ ಬಾವ ದೀಪಕ್ ಸಿಂಗ್ ಮಾತನಾಡಿ, ಮಂಜುನಾಥ್ ಸಾಯುವ ವ್ಯಕ್ತಿಯಲ್ಲ. ಪೊಲೀಸರಿಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಲೋಕ ಕಲ್ಯಾಣರ್ಥವಾಗಿ ದೇವಿಯ ಮೆರವಣಿಗೆ – ತ್ಯಾಮಗೊಂಡ್ಲು ಗ್ರಾಮಸ್ಥರ ಸಂಭ್ರಮ

    ಲೋಕ ಕಲ್ಯಾಣರ್ಥವಾಗಿ ದೇವಿಯ ಮೆರವಣಿಗೆ – ತ್ಯಾಮಗೊಂಡ್ಲು ಗ್ರಾಮಸ್ಥರ ಸಂಭ್ರಮ

    ನೆಲಮಂಗಲ: ಬೆಂಗಳೂರು ನಗರದಲ್ಲಿ ಪ್ರಾರಂಭವಾದ ವಾಸವಿ ಪ್ರಚಾರ ರಥ ಹಾಗೂ ಅಮ್ಮನವರ ರಜತ ವಿಗ್ರಹದ ಪೂಜೆ, ಭಜನೆ, ಉತ್ಸವವನ್ನು ತ್ಯಾಮಗೊಂಡ್ಲು ಆರ್ಯವೈಶ್ಯ ಮಂಡಳಿಯವರು ವಾಸವಾಂಬ ತಾಯಿ ಹಾಗೂ ಮನೆ ಮನೆಗೆ ವಾಸವಿ ಟ್ಯಾಬ್ಲೋವನ್ನು ಆತ್ಮೀಯವಾಗಿ ಬರಮಾಡಿಕೊಂಡರು.

    ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಪ್ರಮುಖ ಬೀದಿಗಳಲ್ಲಿ ಬೆಂಗಳೂರಿನಿಂದ ಆಗಮಿಸಿದ ಕನ್ನೀಕಾ ಪರಮೇಶ್ವರಿ ತಾಯಿಯನ್ನು ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾತಂಡಗಳಾದ ಕಂಸಾಳೆ, ವೀರಗಾಸೆ, ವೀಣಾ ಮಕ್ಕಳ ಮಂದಿರ ಶಾಲೆಯ ಮಕ್ಕಳಿಂದ ಚಂಡೆವಾದನ ಹಾಗೂ ವಾಸವಿ ಮಹಿಳಾ ಮಣಿಗಳಿಂದ ಕೋಲಾಟ ಕಾರ್ಯಕ್ರಮದ ಮುಖಾಂತರ ಮನೆ ಮನೆಗೆ ವಾಸವಿ ಮಾತೆಯನ್ನು ಆತ್ಮೀಯವಾಗಿ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಮನೆ ಮನೆಗೆ ಹೋಗಿ ವಾಸವಿ ಟ್ರಸ್ಟ್ ನ ಅಧ್ಯಕ್ಷ ಕುಮಾರ ಗುಪ್ತಾ ಮಾತನಾಡಿ, ರಾಜಧಾನಿ ಬೆಂಗಳೂರನ್ನು ಬಿಟ್ಟು ಮೊದಲ ಬಾರಿಗೆ ವಾಸವಿ ತಾಯಿ ಗ್ರಾಮಾಂತರ ಪ್ರದೇಶವಾದ ತ್ಯಾಮಗೊಂಡ್ಲುವಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ 96 ಮನೆಗಳಿಗೆ ದೇವಿಯನ್ನು ಕರೆತಂದಿದ್ದೇವೆ. ನಮ್ಮ ಸಮುದಾಯದವರಲ್ಲಿ ತಾಯಿಯ ಮಹಿಮೆ ತಿಳಿಸುವ ಅರಿವಿನ ಕಾರ್ಯ ಇದ್ದಾಗಿದ್ದು, ನಮ್ಮ ಸಮುದಾಯದವರಲ್ಲಿ ವಿವಾಹದಲ್ಲಿ ಯಾವುದೇ ವರ-ವಧು ಮಧ್ಯೆ ವಿಚ್ಛೇದನ ಬಾರದಂತೆ ತಾಯಿಯ ಸಮ್ಮಖದಲ್ಲೇ ವಿವಾಹ ಎಂಬ ಕಾರ್ಯವನ್ನು ಏರ್ಪಡಿಸಿ ವಿಚ್ಛೇದನವನ್ನು ಕಡಿಮೆಮಾಡಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿದ್ದೇವೆ. ಈ ಮನೆ ಮನೆಗೆ ವಾಸವಿಯಿಂದ ಸಮುದಾಯದವರಲ್ಲಿ ಒಗ್ಗಟ್ಟು ಸಾಧಿಸಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ಆರ್.ಎಸ್. ಅನಿಲ್ ಕುಮಾರ್, ವಾಸವಿ ಜನಸಂಘದ ಕಾರ್ತೀಕ್, ಗಣಪತಿ ಕಾಫಿ ವಕ್ರ್ಸ್ ನ ಆರ್.ಎಸ್. ಮೋಹನ್ ಕುಮಾರ್, ಎಸ್.ಪಿ. ಮೆಡಿಕಲ್ಸ್ ನ ಹರೀಶ್ ಬಾಬು, ಮಂಡಳಿಯ ಶ್ರೀನಿವಾಸ್ ಬಾಬು, ನಟೇಶ್, ಟಿ.ವಿ. ನರೇಂದ್ರ, ನಾಗರ್ಜುನ್, ಈಶ್ವರ್, ಬದ್ರಿನಾಥ್, ವಾಸವಿ ಮಹಿಳಾ ಸಂಘದ ಸುಮ, ರಮ್ಯಾ, ರಶ್ಮಿ, ಸರಸ್ವತೀ, ಜ್ಯೋತಿ, ಇನ್ನೀತರರು ಹಾಜರಿದ್ದರು.

  • ನೆಲಮಂಗಲಕ್ಕೆ ಬಂದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ

    ನೆಲಮಂಗಲಕ್ಕೆ ಬಂದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ

    ನೆಲಮಂಗಲ: ದಕ್ಷಿಣ ಏಷ್ಯಾ ಹಾಗೂ ದಕ್ಷಿಣ ಭಾರತದ ಅತೀ ದೊಡ್ಡ ಕಟ್ಟಡ ನಿರ್ಮಾಣ ಹಾಗೂ ಯಂತ್ರೋಪಕರಣಗಳ ವಸ್ತು ಪ್ರದರ್ಶನಕ್ಕೆ ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಇಂದು ಭೇಟಿ ನೀಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದಾವಾರ ಬಳಿಯ ಬಿಐಇಸಿಯಲ್ಲಿ ಕ್ರಿಕೆಟಿಗ ಎಂ.ಎಸ್ ಧೋನಿ ಇಂದು ಉದ್ಯಮಶೀಲತೆ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ. ಎಕ್ಸಾನ್ 10 ನೇ ಆವೃತ್ತಿಯ ವಸ್ತು ಪ್ರದರ್ಶನ ಇದ್ದಾಗಿದ್ದು, ಐದು ದಿನಗಳ ಕಾಲ ನಡೆದ ವಸ್ತು ಪ್ರದರ್ಶನಕ್ಕೆ ನಾಳೆ ತೆರೆಬೀಳಲಿದೆ.

    ಈ ಹಿನ್ನೆಲೆಯಲ್ಲಿ ಇಂದು ಆಗಮಿಸಿದ್ದ ಮಹೇಂದ್ರ ಸಿಂಗ್ ಧೋನಿ ಹಲವಾರು ಮಾಹಿತಿ ಪಡೆದರು. ವಸ್ತು ಪ್ರದರ್ಶನದಲ್ಲಿ ಉದ್ಯಮಿಗಳ ಹಾಗೂ ಗ್ರಾಹಕರ ಜೊತೆ ಭಾಗಿಯಾಗಿದ್ದ ಧೋನಿ, ಗಲ್ಫ್ ಕಂಪನಿಯಲ್ಲಿ ಕೆಲಹೊತ್ತು ಕಾಲ ಕಳೆದಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗ ಧೋನಿಯನ್ನು ನೋಡಲು ಅಭಿಮಾನಿಗಳ ಮುಗಿಬಿದ್ದ ಪ್ರಸಂಗ ನಡೆಯಿತು.

  • ಸ್ಟೆತೋಸ್ಕೋಪ್ ಹಿಡಿದು ಶಾಸಕ ಶ್ರೀನಿವಾಸಮೂರ್ತಿಯಿಂದ ರೋಗಿಗಳ ಪರೀಕ್ಷೆ

    ಸ್ಟೆತೋಸ್ಕೋಪ್ ಹಿಡಿದು ಶಾಸಕ ಶ್ರೀನಿವಾಸಮೂರ್ತಿಯಿಂದ ರೋಗಿಗಳ ಪರೀಕ್ಷೆ

    ಬೆಂಗಳೂರು: ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಜೆಡಿಎಸ್ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರು ಸ್ವತಃ ತಾವೇ ಸ್ಟೆತೋಸ್ಕೋಪ್ ಹಿಡಿದು ರೋಗಿಗಳ ಪರೀಕ್ಷೆ ಮಾಡಿದ್ದಾರೆ.

    ಇಂದು ಶ್ರೀನಿವಾಸಮೂರ್ತಿ ಅವರು ನೆಲಮಂಗಲ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಶಾಸಕರಾಗಿ ಆಯ್ಕೆ ಆಗುವ ಮೊದಲು ಈ ಆಸ್ಪತ್ರೆಯಲ್ಲಿ ಶ್ರೀನಿವಾಸಮೂರ್ತಿ ಅವರು ವೈದ್ಯರಾಗಿ ಕಾರ್ಯನಿರ್ವಹಿಸಿದ್ದರು. ಆದ್ದರಿಂದ ಆಸ್ಪತ್ರೆ ಸ್ಥಿತಿ ಹೇಗಿದೆ? ವೈದ್ಯರು, ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿದ್ದಾರಾ? ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆಯಾ ಎಂದು ಪರಿಶೀಲಿಸಲು ಶಾಸಕರು ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದರು.

    ಈ ವೇಳೆ ವೈದ್ಯರು ಆಸ್ಪತ್ರೆಯಲ್ಲಿ ಇಲ್ಲದ್ದನ್ನು ಕಂಡು ಶಾಸಕರು ಕೆಂಡಾಮಂಡಲರಾಗಿದ್ದಾರೆ. ಸಮಯವಾಗಿದ್ದರೂ ಕೆಲಸಕ್ಕೆ ಬಾರದ ಸಿಬ್ಬಂದಿ ವಿರುದ್ಧ ಸಿಡಿದಿದ್ದಾರೆ. ಅಲ್ಲದೆ ವಾರ್ಡ್‍ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ, ಅವರ ಸಮಸ್ಯೆ ಆಲಿಸಿದ್ದಾರೆ. ಜೊತೆಗೆ ಸ್ವತಃ ತಾವೇ ಸ್ಟೆತೋಸ್ಕೋಪ್ ಹಿಡಿದು ರೋಗಿಗಳ ಪರೀಕ್ಷೆ ಕೂಡ ಮಾಡಿದ್ದು, ಶಾಸಕರ ಈ ನಡೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮಗ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗ್ರಾಮಸ್ಥರಿಂದ ನಿಂದನೆ – ತಂದೆ ಆತ್ಮಹತ್ಯೆಗೆ ಯತ್ನ

    ಮಗ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗ್ರಾಮಸ್ಥರಿಂದ ನಿಂದನೆ – ತಂದೆ ಆತ್ಮಹತ್ಯೆಗೆ ಯತ್ನ

    ಬೆಂಗಳೂರು: ತನ್ನ ಮಗ ಅಂತರ್ಜಾತಿ ವಿವಾಹವಾಗಿರುವುದ್ದಕ್ಕೆ ಗ್ರಾಮಸ್ಥರು ನಿಂದನೆ ಮಾಡುತ್ತಿದ್ದರಿಂದ ಮನನೊಂದ ತಂದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿರುವ ತಂದೆಯನ್ನು ನೆಲಮಂಗಲ ತಾಲೂಕಿನ ಆನಂದ್ ನಗರದ ನಿವಾಸಿ 53 ವರ್ಷದ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಮಗ ಶಿವಕುಮಾರ್, ಬೇರೆ ಜಾತಿಯ ಕಿರಣ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮದುವೆಗೆ ವಿರೋಧ ಮಾಡಿದ್ದ ಗ್ರಾಮಸ್ಥರು ಕೃಷ್ಣಪ್ಪನನ್ನು ನಿಂದಿಸಿದ್ದಾರೆ.

    ಗ್ರಾಮಸ್ಥರ ನಿಂದನೆಯಿಂದ ಬೇಸತ್ತಿದ್ದ ಕೃಷ್ಣಪ್ಪ ಗ್ರಾಮಸ್ಥರ ವಿರುದ್ಧ ನೊಂದು ಡೆತ್ ನೋಟ್ ಬರೆದು ವಿಷ ಸೇವನೆ ಮಾಡಿದ್ದಾರೆ. ತೀವ್ರ ಅಸ್ವಸ್ಥ ಆಗಿದ್ದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.