Tag: nepala

  • ರಾಮನ ಅತ್ತೆ ಮನೆ ಜನಕಪುರದಲ್ಲಿಯೂ ಹಬ್ಬದ ವಾತಾವರಣ

    ರಾಮನ ಅತ್ತೆ ಮನೆ ಜನಕಪುರದಲ್ಲಿಯೂ ಹಬ್ಬದ ವಾತಾವರಣ

    – ವಿದ್ಯುದ್ದೀಪಗಳಿಂದ ಕಂಗೊಳಿಸ್ತಿದೆ ಜಾನಕಿ ಮಂದಿರ

    ಕಠ್ಮಂಡು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ (Pran Prathistha ceremony) ಕ್ಷಣಗಣನೆ ನಡೆಯುತ್ತಿದ್ದರೆ, ಇತ್ತ ರಾಮನ ಅತ್ತೆ ಮನೆ ನೇಪಾಳದಲ್ಲಿಯೂ ಹಬ್ಬದ ಸಡಗರ ಜೋರಾಗಿದೆ.

    ಹೌದು. ನೇಪಾಳದ ಜನಕಪುರದಲ್ಲಿರುವ (Janakpur) ಜಾನಕಿ ದೇವಾಲಯದಲ್ಲಿ ಸಕಲ ತಯಾರಿಗಳು ನಡೆದಿದೆ. ಇನ್ನೂ ದೇಗುಲವು ವಿದ್ಯುದ್ದೀಪಗಳಿಂದ ಕಣ್ಮನ ಸೆಳೆಯುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ, ಜನಕ್‌ಪುರದಲ್ಲಿ ಸಂತೋಷ ಮತ್ತು ಹಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತದೆ. ಇದು ಎರಡು ಸ್ಥಳಗಳ ನಡುವೆ ಹಂಚಿಕೊಂಡಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಪರ್ಕವನ್ನು ಒತ್ತಿಹೇಳುತ್ತದೆ.

    ಈ ಸಂಬಂಧ ಶ್ರೀರಾಮ ಯುವ ಸಮಿತಿಯ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ಚೌಧರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತ್ರೇತಾಯುಗದ ವನವಾಸದ ಸಂದರ್ಭದಲ್ಲಿ ರಾಮಚಂದ್ರ ಅನುಭವಿಸಿದ ನೋವು ಕಲಿಯುಗದಲ್ಲಿಯೂ ಮುಂದುವರಿದಿದೆ. ಬರೋಬ್ಬರಿ 500 ವರ್ಷಗಳ ಹೋರಾಟವನ್ನು ಮಾಡಬೇಕಾಯಿತು. ಈ ಸಮಯದಲ್ಲಿ ಅವರು ಟಾರ್ಪಾಲಿನ ಅಡಿಯಲ್ಲಿ ಆಶ್ರಯ ಪಡೆಯಬೇಕಾಗಿತ್ತು. ಅವರ ನೋವು ನಿಜಕ್ಕೂ ಎಲ್ಲಾ ಹಿಂದೂಗಳ ನೋವಾಗಿದೆ. ನಮ್ಮ ಪೂರ್ವಜರು ಕಷ್ಟಪಟ್ಟು ಹೋರಾಡಿದರು. ಇದೀಗ ಅಂತಿಮ ಫಲಿತಾಂಶವು ಇಂದು ಇಲ್ಲಿ ಮರ್ಯಾದಾಪುರುಷ ಭಗವಾನ್ ರಾಮನ ದೇವಾಲಯದ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಭಾರತೀಯರನ್ನು ಅಭಿನಂದಿಸುತ್ತೇನೆ ಮತ್ತು ಜನಕಪುರದ ಜನ ಕೂಡ ಸಂತೋಷದಿಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Ram Mandir: ಭಗವಾನ್‌ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್‌ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ

    ನೇಪಾಳದಿಂದ ಯಾರಿಗೆಲ್ಲ ಆಹ್ವಾನ?: ನೇಪಾಳದ (Nepala) ಜನಕ್‌ಪುರದಿಂದ ಚೋಟ್ಟೆ ಮಹಾಂತರೊಂದಿಗೆ ಮುಖ್ಯ ಮಹಂತರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದ್ದು, ಈಗಾಗಲೇ ಅಯೋಧ್ಯೆಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಜನಕಪುರ್ ಸ್ಥಳೀಯವಾಗಿ ಭರ್ ಎಂಬ ಅರ್ಪಣೆಗಳನ್ನು ಅಯೋಧ್ಯೆಗೆ ಆಚರಣೆಯ ಭಾಗವಾಗಿ ಕಳುಹಿಸಲಾಗಿದೆ. ಇದರಲ್ಲಿ ಆಭರಣಗಳು, ಪಾಕಪದ್ಧತಿಗಳು, ಬಟ್ಟೆಗಳು ಮತ್ತು ಇತರ ದೈನಂದಿನ ಅಗತ್ಯತೆಗಳಿದ್ದವು. ಸೀತಾ ದೇವಿಯ ತಾಯಿಯ ಮನೆಯಾದ ಜನಕಪುರ ಕೂಡ ಪ್ರಾಣ ಪ್ರತಿಷ್ಠೆಯ ದಿನದಂದು ಹಲವಾರು ಕಾರ್ಯಕ್ರಮಗಳನ್ನು ನಡೆಸಲು ಸಿದ್ಧವಾಗಿದೆ.

    ಸೋಮವಾರ ಸಂಜೆ ದೀಪಾವಳಿ ಆಚರಿಸಲು ಉದ್ದೇಶಿಸಿರುವುದರಿಂದ ಕಲಾವಿದರು ಬಣ್ಣಗಳ ಜೊತೆಗೆ ಹೂವುಗಳನ್ನು ಬಳಸಿ ರಂಗೋಲಿ ಮಾಡುತ್ತಾರೆ. ಸೋಮವಾರ ಸಂಜೆ ಹಬ್ಬದ ರೀತಿ ಆಚರಿಸಲು ಈಗಾಗಲೇ ಸಂಗ್ರಹಿಸಲಾದ 2500 ಲೀಟರ್ ಸಾಸಿವೆ ಎಣ್ಣೆಯಿಂದ ಸುಮಾರು 2,50,000 ಎಣ್ಣೆ-ಪೂರಿತ ದೀಪಗಳನ್ನು ಬೆಳಗಿಸುವ ಸಂಗ್ರಹ ಅಭಿಯಾನ ನಡೆಯುತ್ತಿದೆ.

  • ವಿಶಾಲ ಗಾಣಿಗಳಿಗೆ ದುಬೈನಿಂದ ಪತಿ ಸ್ಕೆಚ್ – ನೇಪಾಳ ಗಡಿಯಲ್ಲಿ ಸುಪಾರಿ ಕಿಲ್ಲರ್ ಅರೆಸ್ಟ್

    ವಿಶಾಲ ಗಾಣಿಗಳಿಗೆ ದುಬೈನಿಂದ ಪತಿ ಸ್ಕೆಚ್ – ನೇಪಾಳ ಗಡಿಯಲ್ಲಿ ಸುಪಾರಿ ಕಿಲ್ಲರ್ ಅರೆಸ್ಟ್

    ಉಡುಪಿ: ಇಲ್ಲಿನ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಪೊಲೀಸರು 10 ದಿನದೊಳಗೆ ಬೇಧಿಸಿದ್ದಾರೆ. ನೇಪಾಳ ದೇಶದ ಗಡಿ ಪ್ರದೇಶದಲ್ಲಿ ಸುಪಾರಿ ಹಂತಕ ಅರೆಸ್ಟ್ ಆಗಿದ್ದಾನೆ. ಪತಿಯೇ ಪತ್ನಿಯ ಕೊಲೆಗೆ ಎರಡು ಲಕ್ಷ ರೂಪಾಯಿ ಅಡ್ವಾನ್ಸ್ ಕೊಟ್ಟಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

    ಜುಲೈ 12 ರಂದು ಸಂಜೆ ಉಡುಪಿ ಜಿಲ್ಲೆ ಬ್ರಹ್ಮಾವರದ ಮಿಲನ್ ಅಪಾರ್ಟ್ ಮೆಂಟ್ ನಲ್ಲಿ ವಿಶಾಲ ಕೊಲೆಯಾಗಿತ್ತು. ಮೈಮೇಲಿದ್ದ ಚಿನ್ನಾಭರಣವನ್ನು ಕದ್ದು ಆರೋಪಿ ಪ್ರಕರಣದ ದಿಕ್ಕು ತಪ್ಪಿಸಿ ಪರಾರಿಯಾಗಿದ್ದ. ಒಂದು ವಾರಗಳ ಕಾಲ ತನಿಖೆ ನಡೆಸಿದ ಪೊಲೀಸರು, ಉತ್ತರಪ್ರದೇಶ ರಾಜ್ಯದ ಗೋರಖಪುರ ಜಿಲ್ಲೆಯ ಚಾರ್ಪನ್ ಬಹುರಾಗ್ ಗ್ರಾಮದ ಶ್ರೀ ಸ್ವಾಮಿನಾಥ ನಿಶಾದ (38) ನನ್ನು ಬಂಧಿಸಲಾಗಿದೆ. ಆರೋಪಿ ಕೊಲೆಗೈದು ಉತ್ತರ ಪ್ರದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ.

    ಪೊಲೀಸ್ ತನಿಖೆ ತೀವ್ರವಾಗುತ್ತಿದ್ದಂತೆ ನೇಪಾಳ ದೇಶಕ್ಕೆ ನುಸುಳಲು ಯತ್ನಿಸಿದ್ದ. ಕೊಲೆಯ ಹಿಂದಿನ ಸಂಚು ಗಂಡನದ್ದೆಂದು ಪೊಲೀಸರು ಫೋನ್ ಕರೆಯೊಂದರಿಂದ ಕಂಡು ಹುಡುಕಿದ್ದಾರೆ. ಸಾಕ್ಷಿಗಳೇ ಇಲ್ಲದ ಸವಾಲಿನ ಪ್ರಕರಣವನ್ನು ತಾಂತ್ರಿಕ ಸಾಕ್ಷಿಗಳ ಮೂಲಕ ಪತ್ತೆ ಮಾಡಿದ್ದಾರೆ. ಗಂಡ-ಹೆಂಡತಿಯ ನಡುವೆ ಅನ್ಯೋನ್ಯತೆ ಸಮಸ್ಯೆಯಿತ್ತು. ಇದೇ ಕಾರಣಕ್ಕೆ ಕೊಲೆ ಮಾಡಿಸಿರುವುದಾಗಿ ಗಂಡ ರಾಮಕೃಷ್ಣ ಗಾಣಿಗ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿ: ಸಿದ್ದಗಂಗಾ ಶ್ರೀ

    ತನ್ನ ಹೇಳಿಕೆಗಳನ್ನು ಆಗಾಗ ಬದಲಿಸುತ್ತಿರುವ ರಾಮಕೃಷ್ಣರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೌಟುಂಬಿಕ ಸಮಸ್ಯೆಗೆ ಕೊಲೆ ನಡೆದಿರಲಿಕ್ಕಿಲ್ಲ. ಕೊಲೆಗೆ ಇನ್ನೇನೋ ಮಹತ್ವದ ಕಾರಣ ಇದೆ ಎಂಬ ಗುಮಾನಿ ಪೊಲೀಸರಿಗೆ ಇದೆ. ಆಸ್ತಿ ವಿಚಾರದ ದೃಷ್ಟಿಯಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಕೊಲೆಗೆ ಡೀಲ್ ಕುದುರಿಸಿದ ಓರ್ವ ಆರೋಪಿ ಮತ್ತು ಕೊಲೆಗೈದಿರುವ ಇನ್ನೋರ್ವ ಆರೋಪಿಯ ಬಂಧನ ಇನ್ನಷ್ಟೇ ಆಗಬೇಕಾಗಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಪೊಲೀಸರಿಗೆ ಆರಂಭಿಕ ಹಂತದಲ್ಲಿ ಯಾವುದೇ ಸಾಕ್ಷ್ಯಗಳು ಲಭ್ಯವಾಗಿರಲಿಲ್ಲ. ಪಡುಬಿದ್ರೆಯಿಂದ ಬೈಂದೂರುವರೆಗೆ ನೂರಾರು ಕಿಲೋಮೀಟರ ಸಿಸಿಟಿವಿ ಜಾಲಾಡಿದ್ದರು.

    ವಿಮಾನ ನಿಲ್ದಾಣ ರೈಲು ನಿಲ್ದಾಣದಲ್ಲಿ ಪೊಲೀಸರು ಮಾಹಿತಿ ಕಲೆಹಾಕಲು ಶ್ರಮಿಸಿದ್ದರು. ಪ್ರಕರಣ ತನಿಖೆ ಮಾಡಿದ ಪೊಲೀಸರ ನಾಲ್ಕು ತಂಡಗಳಿಗೆ ಪೊಲೀಸರಿಗೆ ಎಸ್ಪಿ ವಿಷ್ಣುವರ್ಧನ್ ಧನ್ಯವಾದ ಹೇಳಿದ್ದಾರೆ. ರಾಜ್ಯದ ಗಮನ ಸೆಳೆದಿದ್ದ ಜಟಿಲ ಪ್ರಕರಣವನ್ನು ಬೇಧಿಸಿರುವ ಸಹೋದ್ಯೋಗಿಗಳಿಗೆ ಡಿಜಿಪಿ ಪ್ರವೀಣ್ ಸೂದ್ 50 ಸಾವಿರ ರುಪಾಯಿ ಬಹುಮಾನ ನೀಡಿದ್ದಾರೆ.