Tag: Nepalese

  • ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್‌ ಬರುವಾಗ ಅಪಘಾತ – ಐವರು ನೇಪಾಳಿ ಪ್ರಜೆಗಳು ದುರ್ಮರಣ

    ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್‌ ಬರುವಾಗ ಅಪಘಾತ – ಐವರು ನೇಪಾಳಿ ಪ್ರಜೆಗಳು ದುರ್ಮರಣ

    ಪಾಟ್ನಾ: ಕುಂಭಮೇಳದಲ್ಲಿ (Kumbh Mela) ಪಾಲ್ಗೊಂಡು ವಾಪಸ್‌ ಆಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ (Nepalese) ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.

    ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಂಡುಕೋರರ ಜೊತೆ ಗುಂಡಿನ ದಾಳಿ; 18 ಪಾಕ್‌ ಸೈನಿಕರು ಸಾವು – 23 ಉಗ್ರರ ಹತ್ಯೆ

    ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ. ಎಲ್ಲರೂ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಮಧುಬನಿ ಚತುಷ್ಪಥ ಬೈಪಾಸ್‌ನಲ್ಲಿ ವೇಗವಾಗಿ ಬಂದ ಎಸ್‌ಯುವಿ, ಬೈಕರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅವಗಢ ಸಂಭವಿಸಿದೆ.

    ವಾಹನದ ಏರ್‌ಬ್ಯಾಗ್‌ಗಳು ತೆರೆದಿಲ್ಲ. ಇದರಿಂದಾಗಿ ಸ್ಥಳದಲ್ಲೇ ಐವರು ಮೃತಪದ್ದಾರೆ. ನಾವು ಇತರ ನಾಲ್ವರನ್ನು ವಾಹನದಿಂದ ರಕ್ಷಿಸಿದ್ದೇವೆ. ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಕಳುಹಿಸುವಲ್ಲಿ ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ಕಾರ್ ಡೋರ್‌ಗೆ ಬೈಕ್ ಡಿಕ್ಕಿ – ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್!

  • ಬೆಂಗ್ಳೂರಲ್ಲಿ ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ – ಪೊಲೀಸರ ಸಲಹೆ

    ಬೆಂಗ್ಳೂರಲ್ಲಿ ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ – ಪೊಲೀಸರ ಸಲಹೆ

    ಬೆಂಗಳೂರು: ಮನೆ ಕೆಲಸಕ್ಕೆ ನೇಪಾಳ ಮೂಲದ ಜನರನ್ನ (Nepalese) ನೇಮಿಸಿಕೊಂಡಿದ್ದೀರಾ, ಹಾಗಾದ್ರೆ ಹುಷಾರಾಗಿರಿ. ಬೆಂಗಳೂರು ಪೊಲೀಸರೇ (Bengaluru Police) ಈ ಮಾತು ಹೇಳ್ತಿದ್ದಾರೆ.

    ಹೌದು. ಕಡಿಮೆ ಸಂಬಳ, ಹೇಳಿದಷ್ಟು ಕೆಲಸ ಮಾಡ್ತಾರೆ. ಯಾವುದೇ ಕಿರಿಕ್ ಇರಲ್ಲ, ಅವರ ಪಾಡಿಗೆ ಕೆಲಸ ಮಾಡ್ಕೊಂಡು ಹೋಗ್ತಾರೆ. ಇದು ನೇಪಾಳ ಮೂಲದ ಕೆಲಸಗಾರರ ಮೇಲೆ ಜನರಿಗೆ ಇರುವ ಅಭಿಪ್ರಾಯ. ಆದ್ರೆ ಪೊಲೀಸರ ಅಂಕಿ ಅಂಶ, ಕ್ರೈಂ ಸ್ಟೋರಿಗಳು, ಹೇಳೋದೆ ಬೇರೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

    ಈ ವರ್ಷದ 11 ತಿಂಗಳಲ್ಲಿ ಬರೋಬ್ಬರಿ 30ಕ್ಕೂ ಹೆಚ್ಚು ಶ್ರೀಮಂತರ ಮನೆಗಳಲ್ಲಿ ಕಳ್ಳತನವಾಗಿದೆ. ಅವುಗಳಲ್ಲಿ ಬಹುತೇಕ ಮನೆಗಳಲ್ಲಿ ಕಳ್ಳತನ ಮಾಡಿರೋದು ನೇಪಾಳಿ (Nepalese) ಮೂಲದವರೇ ಅನ್ನೋದು ಒಪ್ಪಿಕೊಳ್ಳಲೇಬೇಕಾದ ಸತ್ಯ ಸಂಗತಿ. ತುಂಬಾ ನಂಬಿಕಸ್ಥರಂತೆ ವರ್ತಿಸೋ ನೇಪಾಳಿ ಮೂಲದ ಕೆಲವರು, ಬೆಳಗಾಗೊ ಹೊತ್ತಿಗೆ ಮನೆಯನ್ನೆಲ್ಲಾ ಗುಡಿಸಿ ಗುಂಡಾತರ ಮಾಡಿ ಎಸ್ಕೇಪ್ ಆಗಿರ್ತಾರೆ. ದರೋಡೆ ವಿಚಾರ ಪೊಲೀಸರ ಕಿವಿ ತಲುಪೋ ಹೊತ್ತಿಗೆ ಆರೋಪಿಗಳು ಅರಾಮಾಗಿ ನೇಪಾಳ ಬಾರ್ಡರ್ ಕ್ರಾಸ್ ಆಗಿರ್ತಾರೆ. ಹಾಗಾಗಿ ನೇಪಾಳಕ್ಕೆ ಹೋದ ಕಳ್ಳರು, ಕದ್ದ ಐಟಂ ವಾಪಸ್ ಸಿಗೋದು ಬಹುತೇಕ ಡೌಟು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ

    ಆಶ್ಚರ್ಯ ಅನ್ನಿಸಿದ್ರು ಇದು ನಿಜ. ಬೆಂಗಳೂರಿನ ಹನುಮಂತ ನಗರದಲ್ಲಿ (Hanumantha Nagar Police) ಇಂತಹದ್ದೊಂದು ಘಟನೆ ನಡೆದಿದೆ. ಇಲ್ಲಿನ ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ನೇಪಾಳ ಮೂಲದ ಲಲಿತ್ ಮತ್ತು ಬಹದ್ದೂರ್ ಅನ್ನೋರು ಕೆಲಸಕ್ಕಿದ್ರು. ತುಂಬಾ ನಂಬಿಕಸ್ಥರಾಗಿದ್ದ ಕಾರಣ ಮನೆಯವರಿಗೆ ಯಾವುದೇ ಡೌಟ್ ಬಂದಿರಲಿಲ್ಲ. ಕಳೆದ ವಾರ ಉದ್ಯಮಿ ಕುಟುಂಬ ಸಮೇತ ಸಿಂಗಾಪುರ್ ಟ್ರಿಪ್ ಹೋಗಿದ್ರು. ಅವರು ವಿದೇಶಕ್ಕೆ ಹಾರುತ್ತಿದ್ದಂತೆ, ದಂಪತಿ ಮನೆಯಲ್ಲಿಟ್ಟಿದ್ದ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು, ಡೈಮಂಡ್ ರಿಂಗ್, ವಜ್ರದ ವಸ್ತುಗಳು ಸೇರಿ ಬರೋಬ್ಬರಿ ಎರಡೂವರೆ ಕೋಟಿಯಷ್ಟು ಮೌಲ್ಯದ ವಸ್ತುಗಳನ್ನು ದೋಚಿ ಸೈಲೆಂಟ್ ಆಗಿ ನೇಪಾಳ ಸೇರ್ಕೊಂಡಿದ್ದಾರೆ. ವಾಪಸು ಮನೆಗೆ ಬಂದು ನೋಡುವಷ್ಟರಲ್ಲಿ ಕೆಲಸಗಾರರ ಕೈಚಳಕ ಗೊತ್ತಾಗಿ ಸಿಸಿಟಿವಿ ಚೆಕ್ ಮಾಡಿದ್ದಾರೆ. ಎರಡು ಬ್ಯಾಗ್‌ಗಳಲ್ಲಿ ಲೆಗೇಜ್ ರೀತಿಯಲ್ಲಿ ಹಣ, ಚಿನ್ನಾಭರಣ ತುಂಬಿಕೊಂಂಡು ಎಸ್ಕೇಪ್ ಆಗಿರೋದು ಪತ್ತೆಯಾಗಿದೆ.

    CRIME

    ಈ ಸಂಬಂಧ ಹನುಮಂತನಗರದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹಾಗಾಗಿ ದೂರದ ನೇಪಾಳಿಗಳು, ಸೇರಿದಂತೆ ಅಪರಿಚಿತರನ್ನು ಮನೆ ಕೆಲಸಕ್ಕೆ ನೇಮಿಸುವ ಮುನ್ನ ಎಚ್ಚರವಾಗಿರುವಂತೆ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]