Tag: net

  • ನೀಟ್‌, ನೆಟ್‌ ಪರೀಕ್ಷೆಯಲ್ಲಿ ಅಕ್ರಮ – ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ

    ನೀಟ್‌, ನೆಟ್‌ ಪರೀಕ್ಷೆಯಲ್ಲಿ ಅಕ್ರಮ – ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ

    ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ಹಾಗೂ ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ವಿವಾದದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ.

    ನೀಟ್‌-ಯುಜಿ ಪರೀಕ್ಷಾ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ವಿರುದ್ಧ ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಪರೀಕ್ಷಾ ಅಕ್ರಮ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳೂ ಕಿಡಿಕಾರಿವೆ. ಇದನ್ನೂ ಓದಿ: ಭಾನುವಾರ ನಡೆಯಬೇಕಿದ್ದ ನೀಟ್-ಪಿ.ಜಿ ಪರೀಕ್ಷೆ ಮುಂದೂಡಿಕೆ

    ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗ್ (Subodh Kumar Singh) ಅವರನ್ನು ವಜಾಗೊಳಿಸಿದ್ದು, ಅವರ ಸ್ಥಾನಕ್ಕೆ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

    ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ನಿಯಮಿತ ಪದಾಧಿಕಾರಿಯ ನೇಮಕದವರೆಗೆ ಅಥವಾ ಮುಂದಿನ ಆದೇಶದವರೆಗೆ NTA ಯ ಮಹಾನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಖರೋಲಾ ಅವರಿಗೆ ನೀಡಲಾಗಿದೆ. ಇದನ್ನೂ ಓದಿ: ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ಏಜೆನ್ಸಿಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಶಿಫಾರಸು ನೀಡುವ ಸಮಿತಿಯನ್ನು ಸರ್ಕಾರವು ರಚಿಸಿದ ಕೆಲವೇ ಗಂಟೆಗಳ ನಂತರ ಈ ಕ್ರಮವು ಬಂದಿದೆ.

  • ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ನವದೆಹಲಿ: ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ (NEET, NET Row) ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಬೆಳವಣಿಗೆಗಳನ್ನು ನಿಗ್ರಹಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024 ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದೆ‌. ಈ ಮಸೂದೆಯನ್ನು ಕಳೆದ ಫೆಬ್ರವರಿಯಲ್ಲಿ ಸಂಸತ್ ಅಂಗೀಕರಿಸಿತ್ತು, ಜೂ.21 ರಿಂದ ಈ ಹೊಸ ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ‌. ಇದನ್ನೂ ಓದಿ: CSIR-UGC-NET ಪರೀಕ್ಷೆ ಮಂದೂಡಿಕೆ

    ಹೊಸ ಕಾನೂನು ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ತಡೆಯಲು ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಸ್ತಾಪಿಸುತ್ತದೆ. ಸಂಘಟಿತವಾಗಿ ನಿರಂತರವಾಗಿ ಅಪರಾಧಗಳಲ್ಲಿ ತೊಡಗಿರುವವರಿಗೆ ಐದರಿಂದ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲಿದೆ. ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು, ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಪರೀಕ್ಷಾ ಅಕ್ರಮ ಅಪರಾಧವನ್ನು ಮಾಡಿದರೆ ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಅಥವಾ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. 1 ಕೋಟಿಗಿಂತ ಕಡಿಮೆಯಿಲ್ಲದ ದಂಡ ವಿಧಿಸಲಾಗುತ್ತದೆ ಎಂದು ಕಾನೂನು ಹೇಳುತ್ತದೆ.

    ಸಂಘಟಿತ ಪೇಪರ್ ಸೋರಿಕೆ ಅಪರಾಧದಲ್ಲಿ ಪರೀಕ್ಷಾ ಕೇಂದ್ರಗಳು ಭಾಗಿಯಾಗಿರುವುದು ಸಾಬೀತಾದರೆ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದೆ. ಅಲ್ಲದೇ ಹೊಸ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ. ಪ್ರಶ್ನೆ ಪತ್ರಿಕೆಗಳು ಅಥವಾ ಉತ್ತರ ಕೀಗಳನ್ನು ಸೋರಿಕೆ ಮಾಡುವುದು, ಅನಧಿಕೃತ ಸಂವಹನದ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡುವುದು, ಕಂಪ್ಯೂಟರ್ ನೆಟ್‌ವರ್ಕ್‌ಗಳ ದುರ್ಬಳಕೆ, ನಕಲಿ ಪರೀಕ್ಷೆಗಳನ್ನು ನಡೆಸುವುದು ಅಥವಾ ನಕಲಿ ದಾಖಲೆಗಳನ್ನು ನೀಡುವುದು, ಅರ್ಹತೆಗಾಗಿ ದಾಖಲೆಗಳನ್ನು ತಿದ್ದುವುದನ್ನು ಅಕ್ರಮದ ವ್ಯಾಪ್ತಿಯಲ್ಲಿ ಸೇರಿಸಿದೆ. ಇದನ್ನೂ ಓದಿ: ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ – ಸಿಬಿಐನಿಂದ ಎಫ್‍ಐಆರ್

    ಕಾನೂನಿನಡಿ ಬರುವ ಅಪರಾಧಗಳು ಜಾಮೀನು ರಹಿತವಾಗಿದ್ದು, ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯಿಂದ ಅಪರಾಧವನ್ನು ತನಿಖೆ ನಡೆಸಲಾಗುವುದು. ಹೆಚ್ಚುವರಿಯಾಗಿ, ಯಾವುದೇ ತನಿಖೆಯನ್ನು ಕೇಂದ್ರ ಏಜೆನ್ಸಿಗಳಿಗೆ ವರ್ಗಾಯಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಈ ಕಾನೂನು ವ್ಯಾಪ್ತಿಯಲ್ಲಿ ಒಳಗೊಂಡಿದೆ.

  • CSIR-UGC-NET ಪರೀಕ್ಷೆ ಮಂದೂಡಿಕೆ

    CSIR-UGC-NET ಪರೀಕ್ಷೆ ಮಂದೂಡಿಕೆ

    ನವದೆಹಲಿ: ನೀಟ್, ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಬೆನ್ನಲ್ಲೇ CSIR-UGC-NET ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮುಂದೂಡಿದೆ.

    ಜೂನ್ 25 ಮತ್ತು ಜೂನ್ 27 ರಂದು ಪರೀಕ್ಷೆಗಳು ನಡೆಯಬೇಕಿತ್ತು. ಲಾಜಿಸ್ಟಿಕ್ ಸಮಸ್ಯೆಗಳಿಂದ ಪರೀಕ್ಷೆ (Exam) ಮುಂದೂಡಲಾಗುತ್ತಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು ಎಂದು ಎನ್‌ಟಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

     

    ಯುಜಿಸಿ ನಿಗದಿಪಡಿಸಿದ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF), ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು ಮತ್ತು ಪಿಎಚ್‌ಡಿ ಪ್ರವೇಶಗಳಿಗೆ ಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ. ಇದನ್ನೂ ಓದಿ: 31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    CSIR-UGC-NET ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೆ ಈ ವರ್ಷ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

     

  • ನನ್ನ ಗರ್ಲ್‍ಫ್ರೆಂಡ್‍ಗೆ ನ್ಯಾಯ ಕೊಡಿಸಿ – 6ನೇ ಮಹಡಿಯಿಂದ ಜಿಗಿದ ವ್ಯಕ್ತಿ

    ನನ್ನ ಗರ್ಲ್‍ಫ್ರೆಂಡ್‍ಗೆ ನ್ಯಾಯ ಕೊಡಿಸಿ – 6ನೇ ಮಹಡಿಯಿಂದ ಜಿಗಿದ ವ್ಯಕ್ತಿ

    ಮುಂಬೈ: ತನ್ನ ಗರ್ಲ್‍ಫ್ರೆಂಡ್‍ಗೆ ನ್ಯಾಯ ಕೊಡಿಸಲಾಗದೇ 43 ವರ್ಷದ ವ್ಯಕ್ತಿಯೋರ್ವ ದಕ್ಷಿಣ ಮುಂಬೈನಲ್ಲಿರುವ (South Mumbai) ಮಹಾರಾಷ್ಟ್ರ ಸರ್ಕಾರದ (Maharashtra Government) ಪ್ರಧಾನ ಕಚೇರಿಯಾದ ಮಂತ್ರಾಲಯದ (Mantralaya) 6 ನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ.

    ಮೇಲಿಂದ ಜಿಗಿದಾಗ ವ್ಯಕ್ತಿಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ, ನೆಟ್ ಇದ್ದಿದ್ದರಿಂದ ವ್ಯಕ್ತಿ ಬದುಕುಳಿದಿದ್ದಾನೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ರಕ್ಷಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಪೊಲೀಸರಿಗೆ ನೀಡಿದ್ದ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ

    ಗಾಯಗೊಂಡ ವ್ಯಕ್ತಿಯನ್ನು ಬೀಡ್ ಜಿಲ್ಲೆಯ ನಿವಾಸಿ ಬಾಪು ನಾರಾಯಣ ಮೊಕಾಶಿ ಎಂದು ಗುರುತಿಸಲಾಗಿದೆ. ತನ್ನ ಗೆಳತಿ ಮೇಲೆ ಅತ್ಯಾಚಾರವಾಗಿದ್ದು, ಆಕೆ 2018ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂದಿನಿಂದ ತನ್ನ ಗೆಳತಿಗೆ ಸಾವಿಗೆ ನ್ಯಾಯ ದೊರಕಿಸಿಕೊಡಲು ನಿರಂತರವಾಗಿ ಹೋರಾಡುತ್ತಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆಯನ್ನು ಪಡೆಯಲು ವಿಫಲನಾಗಿದ್ದಾನೆ ಮತ್ತು ಪ್ರಕರಣದ ಬಗ್ಗೆ ಪೊಲೀಸರು ಸೂಕ್ತವಾಗಿ ತನಿಖೆ ನಡೆಸುತ್ತಿಲ್ಲ ಎಂದು ನಾರಾಯಣ ಮೊಕಾಶಿ ಆರೋಪಿಸಿದ್ದಾನೆ.

    ಇದೇ ವಿಚಾರವಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಲು ಗುರುವಾರ ಮಧ್ಯಾಹ್ನ 3 ಗಂಟೆಗೆ ಮಂತ್ರಾಲಯಕ್ಕೆ ಆಗಮಿಸಿದ್ದರೂ, ಸಂಪುಟ ಸಭೆ ಹಿನ್ನೆಲೆ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ವ್ಯಕ್ತಿ 3ನೇ ಮಹಡಿಯಿಂದ ಜಿಗಿದಿದ್ದಾನೆ. ಅದೃಷ್ಟವಶಾತ್ ಕಟ್ಟದ ಮೇಲಿಂದ ವ್ಯಕ್ತಿ ಜಿಗಿದರು, ನೆಟ್‍ನಲ್ಲಿ ಸಿಲುಕಿಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಆತನ ಎಡ ಹಣೆಯ ಮೇಲೆ ಗಾಯಗಳಾಗಿದ್ದು, ಆತನನ್ನು ರಕ್ಷಿಸಿ ಚಿಕಿತ್ಸೆಗಾಗಿ ಜಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಅಮೆರಿಕ ಹೌಸ್ ಸ್ಪೀಕರ್ ಆಗಿ ಐತಿಹಾಸಿಕ ಅವಧಿ ಕೊನೆಗೊಳಿಸಿದ ನ್ಯಾನ್ಸಿ ಪೆಲೋಸಿ

    Live Tv
    [brid partner=56869869 player=32851 video=960834 autoplay=true]

  • ಚಹಾ ಮಾರಾಟ ಮಾಡ್ತಿದ್ದವ ಒಂದೇ ಪ್ರಯತ್ನಕ್ಕೆ NEET ಪಾಸ್ – ದೆಹಲಿಯಲ್ಲಿ AIIMS ಪ್ರವೇಶಕ್ಕೆ ಸಿದ್ಧ

    ಚಹಾ ಮಾರಾಟ ಮಾಡ್ತಿದ್ದವ ಒಂದೇ ಪ್ರಯತ್ನಕ್ಕೆ NEET ಪಾಸ್ – ದೆಹಲಿಯಲ್ಲಿ AIIMS ಪ್ರವೇಶಕ್ಕೆ ಸಿದ್ಧ

    ಡಿಸ್ಪುರ: ಅಸ್ಸಾಂನಲ್ಲಿ ಚಹಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ NEET ಮೊದಲ ಪ್ರಯತ್ನದಲ್ಲೇ ಪಾಸ್ ಆಗಿದ್ದು, ದೆಹಲಿಯ ಏಮ್ಸ್ ನಲ್ಲಿ ಪ್ರವೇಶ ಪಡೆಯಲು ಸಿದ್ಧನಾಗಿದ್ದಾನೆ.

    ಎನ್‍ಇಇಟಿ ಪಾಸ್ ಆದ ವಿದ್ಯಾರ್ಥಿ 24 ವರ್ಷದ ರಾಹುಲ್ ದಾಸ್. ಈತ ತನ್ನ ತಾಯಿ ನಡೆಸುತ್ತಿದ್ದ ಅಂಗಡಿಯಲ್ಲಿ ಗ್ರಾಹಕರಿಗೆ ಚಹ ಕೊಡುತ್ತಿದ್ದನು. ರಾಹುಲ್ ದಾಸ್ ಹಲವು ಸವಾಲುಗಳನ್ನು ಎದುರಿಸಿದ್ದು, ಕೆಲಸ ಮತ್ತು ಓದು ಎರಡನ್ನೂ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾನೆ. ಪ್ರಸ್ತುತ ರಾಹುಲ್ ಚಹಾ ಮಾರಾಟ ಮಾಡುತ್ತಿದ್ದು, ಓದಿಕೊಂಡು ಎನ್‍ಇಇಟಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾನೆ. ಕೊನೆಗೂ ರಾಹುಲ್ ಶ್ರಮಕ್ಕೆ ಅಂತಿಮವಾಗಿ ಫಲ ಸಿಕ್ಕಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ವಿವಾಹಿತನಿಗೆ 10 ವರ್ಷ ಜೈಲು, 25 ಸಾವಿರ ದಂಡ

    ಛಲ ಬಿಡಲಿಲ್ಲ!
    ರಾಹುಲ್ ಅವರ ಜೀವನ ಸುಲಭವಾಗಿರಲಿಲ್ಲ. ರಾಹುಲ್ ಅವರ ತಾಯಿ 11 ವರ್ಷಗಳ ಹಿಂದೆಯೇ ತನ್ನ ಪತಿಯಿಂದ ದೂರವಾಗಿ ಒಬ್ಬಂಟಿಯಾಗಿ ಇಬ್ಬರು ಮಕ್ಕಳನ್ನು ಸಾಕಿದರು. ರಾಹುಲ್ 12ನೇ ತರಗತಿ ನಂತರ ಮುಂದೆ ಓದಲು ಆಗಲಿಲ್ಲ. ಆದರೆ ತನ್ನ ಛಲವನ್ನು ಮಾತ್ರ ಆತ ಬಿಟ್ಟಿರಲಿಲ್ಲ.

    ರಾಹುಲ್‍ಗೆ ವೈದ್ಯನಾಗುವ ಕನಸು ಬೆಟ್ಟದಷ್ಟು ಇತ್ತು. ಆದರೆ ಅಸ್ಸಾಂ ಪಟಾಚಾರ್ಕುಚಿ ಚೌಕ್ ಪ್ರದೇಶದಲ್ಲಿನ ತನ್ನ ತಾಯಿಯ ಅಂಗಡಿಯಲ್ಲಿ ಗ್ರಾಹಕರಿಗೆ ಚಾಹ ಕೊಟ್ಟು ಜೀವನ ಸಾಗಿಸುತ್ತಿದ್ದನು. ಆದರೆ ಸಮಯ ಸಿಕ್ಕಾಗೆಲ್ಲ ಓದಿಕೊಳ್ಳುತ್ತಿದ್ದ. ಕೊನೆಗೂ ರಾಹುಲ್ ಪ್ರಯತ್ನಕ್ಕೆ ಫಲ ಸಿಕ್ಕಿದೆ.

    ಈ ಕುರಿತು ಮಾತನಾಡಿದ ರಾಹುಲ್, ನನ್ನ ತಾಯಿ ನಮಗಾಗಿ ಕಷ್ಟಪಡುವುದನ್ನು ನಾನು ನೋಡಿದ್ದೇನೆ. ನಾವು ಅಂಗಡಿಯಲ್ಲಿ ಬೇರೆ ಸಹಾಯಕರನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಬಂದ ತಕ್ಷಣ ನಾನು ಅವಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುವುದನ್ನು ರೂಢಿಸಿಕೊಂಡಿದ್ದೆ. ನಾನು ಚಹಾವನ್ನು ತಯಾರಿಸಿ ಮಾರುತ್ತಿದೆ. ಸಮಯ ಸಿಕ್ಕಾಗೆಲ್ಲ ಅಧ್ಯಯನ ಮಾಡುತ್ತಿದೆ ಎಂದು ವಿವರಿಸಿದರು.

    Assam tea seller clears NEET in first attempt, set to take admission in  AIIMS-Delhi

    2015 ರಲ್ಲಿ ಅವರು ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಹಣದ ಕೊರತೆಯಿಂದ ತಮ್ಮ ಅಧ್ಯಯನವನ್ನು ನಿಲ್ಲಿಸಿಬೇಕಾಯಿತು. ಆದರೂ ಉನ್ನತ ಶಿಕ್ಷಣಕ್ಕಾಗಿ ರಾಹುಲ್ ಎರಡು ವರ್ಷಗಳ ನಂತರ ಪ್ಲಾಸ್ಟಿಕ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಮಾಡಲು ಸೆಂಟ್ರಲ್ ಇನ್‍ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ (CIPET) ಗೆ ಸೇರಿದ್ದು, ಮೂರು ವರ್ಷಗಳ ನಂತರ ಡಿಸ್ಟಿಂಕ್ಷನ್‍ನಲ್ಲಿ ಉತ್ತೀರ್ಣನಾದೆ. ಕೋವಿಡ್-19 ಮಧ್ಯೆಯೂ 2020ರ ಅಕ್ಟೋಬರ್‍ನಲ್ಲಿ ಗುವಾಹಟಿಯ ಬಹು-ರಾಷ್ಟ್ರೀಯ ಕಂಪನಿಯಲ್ಲಿ ‘ಎಂಜಿನಿಯರ್’ ಆಗಿ ಕೆಲಸವನ್ನು ಪ್ರಾರಂಭಿಸಿದೆ ಎಂದು ತಿಳಿಸಿದರು.

    From next year, NEET compulsory for admissions into AIIMS and JIPMER too-  Edexlive

    ನಾನು ಏನೇ ಮಾಡಿದರೂ ನನಗೆ ಕೆಲಸದಲ್ಲಿ ತೃಪ್ತಿ ಇರಲಿಲ್ಲ. ನಾನು ಯಾವಾಗಲೂ ವೈದ್ಯನಾಗಲು ಬಯಸುತ್ತಿದೆ. ನನ್ನ ಸೋದರ ಸಂಬಂಧಿಯೊಬ್ಬರು ದಂತ ಶಸ್ತ್ರಚಿಕಿತ್ಸಕರಾಗಿದ್ದಾರೆ. ಅವರು ನನಗೆ ಸ್ಫೂರ್ತಿಯಾಗಿದ್ದರು. ನನ್ನ ಓದಿಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಖರೀದಿಸಲು ನನ್ನ ಬಳಿ ಹಣವಿರಲಿಲ್ಲ. ಅದಕ್ಕೆ ನಾನು ನನ್ನ ಕೆಲಸವನ್ನು ಬಿಟ್ಟು ಆನ್‍ಲೈನ್‍ನಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಎನ್‍ಇಇಟಿ ಪರೀಕ್ಷೆ ಬರೆಯಲು ಸಿದ್ಧತೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕನ್ನಡ ಮಾತಾಡಲ್ಲವೆಂದ ಬ್ಯಾಂಕ್ ಸಿಬ್ಬಂದಿ – ಮುತ್ತಿಗೆ ಹಾಕಿದ ರಕ್ಷಣಾ ವೇದಿಕೆ ಸದಸ್ಯರು

    ರಾಹುಲ್ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಏಕೆಂದರೆ ಅವರು ಬಜಾಲಿ ಜಿಲ್ಲೆಯಿಂದ ನವದೆಹಲಿಯ ಏಮ್ಸ್‍ನಲ್ಲಿ ಸೀಟು ಪಡೆದ ಮೊದಲಿಗರಾಗಿದ್ದಾರೆ ಎಂದು ಡೆಪ್ಯೂಟಿ ಕಮಿಷನರ್ ಸಂತೋಷ ವ್ಯಕ್ತಪಡಿಸಿದರು. ರಾಹುಲ್ ಅವರ ಎಲ್ಲ ಶಿಕ್ಷಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಘೋಷಿಸಿದ್ದಾರೆ ಎಂದು ದೇವಚೌಧರಿ ಹೇಳಿದರು.

  • ಬೇಟೆಗೆಂದು ಹಾಕಿದ್ದ ಉರುಳಿಗೆ ಸಿಲುಕಿ ನರಳಿದ ಹುಲಿ, ಕರಡಿ

    ಬೇಟೆಗೆಂದು ಹಾಕಿದ್ದ ಉರುಳಿಗೆ ಸಿಲುಕಿ ನರಳಿದ ಹುಲಿ, ಕರಡಿ

    ಮೈಸೂರು: ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ನರಳಾಡುತ್ತಿದ್ದ ಕಾಡುಪ್ರಾಣಿಗಳ ಜೀವವನ್ನು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಉಳಿಸಿದ್ದಾರೆ.

    ಅರಣ್ಯ ಪ್ರದೇಶದಲ್ಲಿ ದುಷ್ಕರ್ಮಿಗಳು ಕಾಡು ಪ್ರಾಣಿಗಳ ಬೇಟೆಗೆಂದು ಹಾಕಿದ್ದ ಉರುಳಿಗೆ ಸಿಲುಕಿ ನರಳುತ್ತಿದ್ದ ಹುಲಿ ಹಾಗೂ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಜಿಲ್ಲೆ ಹುಣಸೂರು ತಾಲೂಕಿನ ಶೆಟ್ಟಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಬೇಟೆಗೆ ಹಾಕಿದ್ದ ಉರುಳಿಗೆ 2.5 ವರ್ಷದ ಗಂಡು ಹುಲಿ ಸಿಲುಕಿ ಒದ್ದಾಡುತ್ತಿತ್ತು. ಕುತ್ತಿಗೆಗೆ ಉರುಳು ಸಿಲುಕಿದ ಪರಿಣಾಮ ಘರ್ಜಿಸುತ್ತಿದ್ದ ಹುಲಿ ಪ್ರಾಣ ಉಳಿಸಿಕೊಳ್ಳಲು ನರಳಾಡುತ್ತಿತ್ತು. ಈ ವೇಳೆ ಹುಲಿಯನ್ನು ಗಮನಿಸಿದ ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

    ತಕ್ಷಣ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಉರುಳಿನಿಂದ ರಕ್ಷಣೆ ಮಾಡಿ, ಪ್ರಾಥಮಿಕ ಚಿಕಿತ್ಸೆ ನೀಡಲು ಮೈಸೂರು ಮೃಗಾಲಯಕ್ಕೆ ಹುಲಿಯನ್ನು ರವಾನಿಸಿದ್ದಾರೆ. ಸದ್ಯ ಮೈಸೂರಿನ ಹೊರವಲಯದ ಕೂರ್ಗಳ್ಳಿ ಪ್ರಾಣಿ ಪುರ್ನವಸತಿ ಕೇಂದ್ರದಲ್ಲಿ ಹುಲಿಗೆ ಆರೈಕೆಯನ್ನು ಮಾಡಲಾಗುತ್ತಿದೆ.

    ಒಂದೆಡೆ ಹುಲಿಯಾದರೇ ಇನ್ನೊಂದೆಡೆ ಉರುಳಿಗೆ ಸಿಲುಕಿ ನರಳುತ್ತಿದ್ದ ಸುಮಾರು ಆರು ವರ್ಷದ ಗಂಡು ಕರಡಿಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ನುಗು ಜಲಾಶಯದ ಬಳಿಯ ಹೊಸ ಬಿರುವಾಳು ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ವೈದ್ಯ ನಾಗರಾಜು ಹಾಗೂ ಅರಣ್ಯ ಸಿಬ್ಬಂದಿ ಅಕ್ರಂಪಾಷರಿಂದ ಕರಡಿ ರಕ್ಷಣೆ ಮಾಡಿದ್ದಾರೆ. ಗಾಯಗೊಂಡಿದ್ದ ಕರಡಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮತ್ತೆ ಯಡಿಯಾಳ ಅರಣ್ಯಕ್ಕೆ ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರೀಕ್ಷೆ ಬರೀಬೇಕಂದ್ರೆ ತಾಳಿ, ಕಾಲುಂಗುರ ತೆಗೀರಿ- ನೆಟ್ ಎಕ್ಸಾಂ ಬರೆಯೋಕೆ ಹೋದವರಿಗೆ ಶಾಕ್

    ಪರೀಕ್ಷೆ ಬರೀಬೇಕಂದ್ರೆ ತಾಳಿ, ಕಾಲುಂಗುರ ತೆಗೀರಿ- ನೆಟ್ ಎಕ್ಸಾಂ ಬರೆಯೋಕೆ ಹೋದವರಿಗೆ ಶಾಕ್

    ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‍ಇಟಿ)ಯನ್ನು ತೆಗೆದುಕೊಂಡ ಮಹಿಳಾ ಅಭ್ಯರ್ಥಿಗಳಿಗೆ ಪರಿವೀಕ್ಷಕರು ತಾಳಿ ಮತ್ತು ಕಾಲುಂಗುರ ತೆಗೆಸಿ ಪರೀಕ್ಷೆ ಬರೆಸಿ ಕಿರಿಕಿರಿ ಮಾಡಿದ್ದಾರೆ.

    ಇಂದು ನೆಟ್ ಪರೀಕ್ಷೆ ಬೆಂಗಳೂರಿನ ಜೆಪಿನಗರದ ಬ್ರಿಗೇಡ್ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ನಿಗದಿಯಾಗಿತ್ತು. ಪರೀಕ್ಷೆಗೆ ತೆರಳಿದ ಮಹಿಳಾ ಅಭ್ಯರ್ಥಿಗಳಿಗೆ ತಾಳಿ ಮತ್ತು ಕಾಲುಂಗುರ ತೆಗೆದು ಕೊಠಡಿಯೊಳಗೆ ಬರಬೇಕು ಎಂದು ಪರೀಕ್ಷಾ ಪರಿವೀಕ್ಷಕರು ಕಿರಿಕಿರಿ ಉಂಟು ಮಾಡಿದ್ದಾರೆ.

    ಪರಿವೀಕ್ಷಕರು ಹೇಳಿದ ಮಾತಿನಿಂದ ಕೆಲ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯದೆ ವಾಪಸ್ ಹೋಗಿದ್ದಾರೆ. ಇನ್ನು ಕೆಲವರು ಶಾಲಾ ಆಡಳಿತ ಮಂಡಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರು ಅವರು ತಾಳಿ ತೆಗೆಯದೆ ಇದ್ದರೆ ಪರೀಕ್ಷೆ ಬರೆಯಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಕೊನೆಗೆ ಪತಿಯ ಮುಂದೆಯೇ ಪತ್ನಿಯರ ತಾಳಿ ಕಾಲುಂಗುರ ತೆಗೆಸಿದ್ದಾರೆ.

    ಇದು ನಮ್ಮ ನಂಬಿಕೆ ಮತ್ತು ಧರ್ಮಕ್ಕೆ ವಿರುದ್ಧವಾದುದ್ದು. ಮೊಬೈಲ್, ಪರ್ಸ್ ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ ಎನ್ನುವ ನಿಯಮವಿದೆ. ಆದರೆ ತಾಳಿ ಮತ್ತು ಕಾಲುಂಗುರ ತೆಗೆಯುವಂತೆ ಪರೀಕ್ಷಾ ನಿಯಮದಲ್ಲೂ ಇಲ್ಲ. ಅಷ್ಟೇ ಅಲ್ಲದೇ ಮುಸ್ಲಿಂ ಯುವತಿಯರ ಬುರ್ಖಾ ತೆಗೆಸಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ. ಎಲೆಕ್ಟ್ರಿಕ್ ವಸ್ತುಗಳಿಗೆ ಪ್ರವೇಶವಿಲ್ಲ ಎಂದು ಬೋರ್ಡ್ ಹಾಕಿದ್ದರೂ ಈ ರೀತಿ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ಅಭ್ಯರ್ಥಿಗಳು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಸೆಕ್ಯೂರಿಟಿ ಆಫೀಸರ್ ಸ್ಪಷ್ಟನೆ: ಸೆಕ್ಯುರಿಟಿ ಆಫೀಸರ್ ಗಳ ದೌರ್ಜನ್ಯ ವರದಿಯಾಗುತ್ತಿದ್ದಂತೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ಇದು ಸೆಕ್ಯುರಿಟಿ ಗಾರ್ಡ್ ಹಂತದಲ್ಲಿ ಆಗಿರುವ ತಪ್ಪು. ಕಚೇರಿಯ ಒಳಗಿಂದ ಯಾವುದೇ ಮೆಟಲ್ ವಸ್ತುಗಳನ್ನ ಬಿಡಬಾರದು ಅನ್ನೋ ಮಾಹಿತಿ ನೀಡಲಾಗಿತ್ತು. ಇದನ್ನ ಗಾರ್ಡ್ ಸರಿಯಾಗಿ ಅರ್ಥ ಮಾಡಿಕೊಳ್ಳದೆ ತಾಳಿ, ಕಾಲುಂಗುರ ಬಿಚ್ಚಿಸಿದ್ದಾರೆ. ಇದರ ಬಗ್ಗೆ ತಿಳಿಯುತ್ತಿದ್ದಂತೆ ಸರಿ ಪಡಿಸಿದ್ದೇವೆ. ತದನಂತರ ಯಾರಿಗೂ ತಾಳಿ, ಕಾಲುಂಗುರ ತೆಗೆಸೋ ಕೆಲಸ ಮಾಡಿಲ್ಲ. ನಮಗೂ ಮಾಂಗಲ್ಯ ಪ್ರಾಮುಖ್ಯತೆ ಗೊತ್ತು. ತಪ್ಪನ್ನ ಸರಿ ಪಡಿಸಿ ಪರೀಕ್ಷಾ ಕೇಂದ್ರದೊಳಕ್ಕೆ ಎಲ್ಲರನ್ನ ಕಳಿಸಿಕೊಟ್ಟಿದ್ದೇವೆ ಅನ್ನೋ ಉಡಾಫೆ ಸ್ಪಷ್ಟನೆಯನ್ನು ಸೆಕ್ಯುರಿಟಿ ಆಫೀಸರ್ ಮಂಜುನಾಥ್ ಹೇಳಿದ್ದಾರೆ.

  • ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಮಂಡ್ಯ: ಹಣ್ಣಿನ ತೋಟಗಳ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ, ಗಂಜಾಂ ಬಳಿ ನಡೆದಿದೆ.

    ಟಿಪ್ಪು ಸುಲ್ತಾನ್ ಸಮಾಧಿ ಸ್ಥಳ ಗುಂಬಸ್‍ಗೆ ಕೂಗಳತೆ ದೂರದಲ್ಲಿರುವ ತೋಟದಲ್ಲಿ ಅಂದಾನಯ್ಯ ಎಂಬವರು ಸೀಬೆ ಮತ್ತು ಪನ್ನೇರಳೆ ಬೆಳೆ ಬೆಳೆದಿದ್ದಾರೆ. ಬೆಳೆಗೆ ಪ್ರಾಣಿ ಪಕ್ಷಿಗಳಿಂದ ತೊಂದರೆ ಆಗದಂತೆ ಹಣ್ಣಿನ ತೋಟದ ಸುತ್ತ ಬಲೆ ಕಟ್ಟಿದ್ದಾರೆ. ಇದೀಗ ತೋಟದ ಸುತ್ತ ಹರಡಿರುವ ಬಲೆಗೆ ಪಕ್ಷಿಗಳು ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿವೆ.

    ಕೋಗಿಲೆ, ಬಿಳಿಚುಕ್ಕೆ ಗೂಬೆ, ಕಿಂಗ್ ಫಿಷರ್, ಹಸಿರು ಗಿಳಿ, ಮರಕುಟಿಕ, ಸನ್ ಬರ್ಡ್, ಬುಲ್ ಬುಲ್ ಇನ್ನಿತರ ಜಾತಿಯ ಪಕ್ಷಿಗಳ ದೇಹಗಳು ಬಲೆಗೆ ಸಿಲುಕಿ ನೇತಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಸುಮಾರು 2 ಎಕರೆ ವಿಸ್ತೀರ್ಣದ ತೋಟದಲ್ಲಿ ಆರೇಳು ತಿಂಗಳುಗಳಿಂದಲೂ ಪಕ್ಷಿಗಳು ಬಲೆಗೆ ಸಿಲುಕಿರುವ ಕುರುಹುಗಳಿವೆ. ಪಕ್ಷಿಗಳ ಮೂಳೆ, ರೆಕ್ಕೆ, ಪುಕ್ಕಗಳ ಅವಶೇಷಗಳು ಅಲ್ಲಲ್ಲಿ ಬಿದ್ದಿವೆ.

    ಆಹಾರ ಅರಸಿಕೊಂಡು ಬಂದ ಪಕ್ಷಿಗಳು ಗಟ್ಟಿಯಾದ ಬಲೆಗೆ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೆ ಪ್ರಾಣ ಕಳೆದುಕೊಂಡಿವೆ. ಪನ್ನೇರಳೆ ಮರಕ್ಕೆ ಕೋತಿಗಳ ಹಾವಳಿ ನಿಯಂತ್ರಿಸಲು ಬಲೆ ಹಾಕಲಾಗಿತ್ತು. ಬಲೆಗೆ ಪಕ್ಷಿಗಳು ಸಿಲುಕಿ ಮೃತ ಪಟ್ಟಿವೆ. ಇದು ಉದ್ದೇಶಪೂರ್ವಕವಲ್ಲ ಅಂತಿದ್ದಾರೆ ತೋಟದ ಮಾಲೀಕ ಅಂದಾನಯ್ಯ.