Tag: Netravati River

  • ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    – ಬುರುಡೆ ಷಡ್ಯಂತ್ರದ ಹಿಂದಿನ ರಹಸ್ಯ ಬಯಲಾಯ್ತಾ..?
    – 2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪಿ ಚಿನ್ನಯ್ಯ ಜೊತೆ ಮಹೇಶ್‌ಶೆಟ್ಟಿ ತಿಮರೋಡಿ (Mahesh Shetty thimarody) ಭೇಟಿಯಾದ ವಿಡಿಯೋ ಬಹಿರಂಗಗೊಂಡಿದೆ.

    ತಿಮರೋಡಿ ಮನೆಯಲ್ಲಿ ವರ್ಷದ ಹಿಂದೆ ಭೇಟಿಯಾಗಿದ್ದ ವಿಡಿಯೋ ಇದಾಗಿದೆ. ತಿಮರೋಡಿ ಭೇಟಿ ವೇಳೆ ಹೆಣಗಳ ಹೂತ ಬಗ್ಗೆ ಚಿನ್ನಯ್ಯ (Chinnaiah) ಹೇಳಿದ್ದಾನೆ. ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಂಪೌಂಡರ್‌ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು

    ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ಹಣ ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ. 2023ರ ಆಗಸ್ಟ್‌ನಲ್ಲಿ ಇಷ್ಟೆಲ್ಲ ಮಾತುಕತೆ ನಡೆದಿತ್ತು ಎಂಬ ಸತ್ಯವನ್ನು ವಿಡಿಯೋ ಬಯಲು ಮಾಡಿದೆ.

    2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
    ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಬಳಿ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲಾನ್ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.

    ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟೀಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್‌ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

  • ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೇಬರ ಶೋಧ ತೀವ್ರಗೊಂಡಿದೆ.

    ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ (Netravati River) ಪಕ್ಕದ ದಟ್ಟ ಕಾಡಿನ ಒಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.  ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು

    ಅರಣ್ಯ (Forest) ಪ್ರವೇಶದ ಆರಂಭದಲ್ಲೇ ಇರುವ ಎರಡನೇ ಜಾಗವಿದ್ದು ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ ನಡೆಯಿತು. ಆರಂಭದಲ್ಲಿ ಉದ್ದಕ್ಕೆ ಆರು ಅಡಿ, ಅಗಲಕ್ಕೆ ಐದು ಅಡಿ ಜಾಗ ಗುರುತಿಸಿ ಅಗೆಯಲಾಯಿತು.

    ಅರಣ್ಯದ ಒಳಗಡೆ ಉತ್ಕನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಕಾರ್ಮಿಕರಿಂದಲೇ ಶೋಧ ಕಾರ್ಯ ನಡೆಸಲಾಯಿತು. ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್.ಪಿ ಜಿತೇಂದ್ರ ಕುಮಾರ್ ದಯಾಮ ಖುದ್ದು ಸ್ಥಳದಲ್ಲಿದ್ದಾರೆ.

     

    ಊಟದ ವಿರಾಮದ ನಂತರ  ದೂರುದಾರ  ವ್ಯಕ್ತಿ ತೋರಿಸಿದ ಮೂರನೇ ಜಾಗದಲ್ಲಿ ಅಗೆಯುವ ಕೆಲಸ ಆರಂಭವಾಗಿದೆ.

  • ಮಂಗಳೂರಿಗೆ ನೀರುಣಿಸುವ ನೇತ್ರಾವತಿಗೆ ಬಾಗಿನ ಅರ್ಪಣೆ

    ಮಂಗಳೂರಿಗೆ ನೀರುಣಿಸುವ ನೇತ್ರಾವತಿಗೆ ಬಾಗಿನ ಅರ್ಪಣೆ

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ತುಂಬೆ ಕಿಂಡಿ ಆಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ ಗಂಗಾಪೂಜೆಯನ್ನು ನೆರವೇರಿಸಲಾಯಿತು.

    ಬಳಿಕ ಮಾತನಾಡಿದ ಮನೋಜ್ ಕುಮಾರ್, ಮಂಗಳೂರಿಗೆ ಅನೇಕ ವರ್ಷಗಳಿಂದ ನೀರುಣಿಸುತ್ತಿರುವ ನೇತ್ರಾವತಿ ನದಿ ನಮಗೆ ತಾಯಿ ಸಮಾನ. ಜನರಿಗೆ ಕೃಷಿಗೆ, ಬದುಕಿಗೆ ಬೇಕಾದ ನೀರು ನಿರಂತರವಾಗಿ ಹರಿಸುತ್ತಿರುವ ನೇತ್ರಾವತಿ ನದಿಯಲ್ಲಿ ಸದ್ಯ ಆರು ಮೀಟರ್ ನೀರಿದೆ. ಹೀಗಾಗಿ ಈ ಬಾರಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ತೀರಾ ಕಡಿಮೆ. ದೇವರ ದಯೆಯಿಂದ ಈ ಬಾರಿಯೂ ಜನರಿಗೆ ನೀರು ಬೇಕಾದಷ್ಟು ಸಿಗಲಿ. ಎಡಿಬಿ 780 ಕೋಟಿ ರೂ. ವೆಚ್ಚದಲ್ಲಿ ಜಲಸಿರಿಯ ಕಾಮಗಾರಿ ನಡೆಯುತ್ತಿದ್ದು ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಸಿಗಲಿದೆ. ನದಿ ಸಮೃದ್ಧವಾಗಿ ಹರಿಯಲಿ, ಮಂಗಳೂರಿನ ಜನರ ಬದುಕು ಹಸನಾಗಲಿ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್ ಮಾತನಾಡಿ, ಪ್ರತೀ ವರ್ಷ ವಾಡಿಕೆಯಂತೆ ಗಂಗಾಪೂಜೆ ನೆರವೇರಿಸಿದ್ದೇವೆ. 2019ರ ಬಳಿಕ ನಮಗೆ ಅಷ್ಟಾಗಿ ನೀರಿನ ಸಮಸ್ಯೆ ಎದುರಾಗಿಲ್ಲ. ಸೆಖೆ, ಒಣಹವೆ ಹೆಚ್ಚಾದಂತೆ ನೀರು ಆವಿಗೊಳ್ಳುತ್ತದೆ. ಹೀಗಾಗಿ ಈ ಬಾರಿ ಯಾವುದೇ ಸಮಸ್ಯೆ ಬಾರದಿರಲಿ ಎಂದು ಒಮ್ಮತದಿಂದ ಪೂಜೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮಾತನಾಡಿ, ಜನರಿಗೆ ನೀರು ಪೂರೈಕೆ ಮಾಡುವಲ್ಲಿ ರಾಜ್ಯದಲ್ಲೇ ಮಂಗಳೂರು ಮಹಾನಗರ ಪಾಲಿಕೆ ಪ್ರಥಮ ಸ್ಥಾನದಲ್ಲಿದೆ. ಬೇರೆಲ್ಲಾ ಪಾಲಿಕೆಗಳು ಮೂರು ದಿನಕ್ಕೊಮ್ಮೆ ನೀರು ಕೊಡುತ್ತಿವೆ. ಆದರೆ ಇಲ್ಲಿ ಅಂತಹ ಸ್ಥಿತಿಯಿಲ್ಲ. ನೀರಿನ ಪೂರೈಕೆಗಾಗಿ ಪಾಲಿಕೆಯಿಂದ ಅನೇಕ ಹೊಸ ಕಾಮಗಾರಿಗಳು ನಡೆಯುತ್ತಿವೆ. ಇವೆಲ್ಲ ಪೂರ್ಣಗೊಂಡಲ್ಲಿ ಜನರಿಗೆ ಯಾವುದೇ ಸಮಸ್ಯೆ ಬಾರದು. ಈ ಬಾರಿಯೂ ನೇತ್ರಾವತಿ ನದಿಗೆ ಪೂಜೆ ಮಾಡಿದ್ದು ಜನರಿಗೆ ನೀರಿನ ಸಮಸ್ಯೆ ಎದುರಾಗದಿರಲಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

  • ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

    ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

    – ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ತ್ಯಾಜ್ಯ

    ಮಂಗಳೂರು: ಧರ್ಮಸ್ಥಳದ (Dharmasthala) ಸ್ನಾನಘಟ್ಟವನ್ನು ಅಪವಿತ್ರಗೊಳಿಸಲು ಕೆಲ ಕಿಡಿಗೇಡಿಗಳು ಪ್ರಯತ್ನ ನಡೆಸಿದ್ದಾರೆ.

    ನೇತ್ರಾವತಿ ನದಿಯನ್ನು (Netravati River) ಸೇರುವ ಚಾರ್ಮಾಡಿಯ (Charmadi) ಮೃತ್ಯುಂಜಯ ನದಿಗೆ (Mrityunjaya River) ಕಿಡಿಗೇಡಿಗಳು ಗೋಮಾಂಸದ (Beef) ತ್ಯಾಜ್ಯವನ್ನು ಸುರಿದಿದ್ದಾರೆ. ನದಿಯಲ್ಲಿ ದನದ ಚರ್ಮ, ಕೊಂಬು, ಇತ್ಯಾದಿ ತ್ಯಾಜ್ಯ ಹೊಂದಿರುವ 11 ಗೋಣಿಗಳು ಪತ್ತೆಯಾಗಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರಿನಲ್ಲಿ ಕೇಸ್‌, ತರೀಕೆರೆಯಲ್ಲಿ ವಿಚಾರಣೆ!

    ನೇತ್ರಾವತಿ ನದಿ ಸೇರುವ ಮೃತ್ಯುಂಜಯ ನದಿ ನೀರಿನಲ್ಲಿಯೇ ಧರ್ಮಸ್ಥಳಕ್ಕೆ ಬರುವ ಭಕ್ತಾದಿಗಳು ಸ್ನಾನ ಮಾಡುತ್ತಾರೆ. ಇಂತಹ ನೀರಲ್ಲಿ ಈ ಕೃತ್ಯ ಎಸಗಿರುವುದು ಸಾಕಷ್ಟು ಅನುಮಾನ, ಆಕ್ರೋಶಕ್ಕೆ ಕಾರಣವಾಗಿದೆ.

    ಧಾರ್ಮಿಕ ಕ್ಷೇತ್ರವನ್ನು ಅಪವಿತ್ರ ಮಾಡಬೇಕು ಎನ್ನುವುದು ದುಷ್ಟ ಮನಸ್ಥಿತಿಗಳ ಹುನ್ನಾರ. ಇದು ಮತಾಂಧತೆಯನ್ನು ತೋರಿಸುತ್ತದೆ ಎಂದು ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಇದ್ಯೋ?.ಇಲ್ವೋ ಎಂದು ಪ್ರಶ್ನೆ ಮಾಡಿದ್ದಾರೆ.

     

  • ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

    ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

    ಮಂಗಳೂರು: ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಬಂಟ್ವಾಳದ (Bantwal) ನಾವೂರಿನಲ್ಲಿ ನಡೆದಿದೆ.

    ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಮಕ್ಕಳೊಂದಿಗೆ ಪೋಷಕರು ನೇತ್ರಾವತಿ ನದಿ (Netravati River) ತೀರಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

    ಈಜು ಬಾರದ ಕಾರಣ ಕಣ್ಣ ಮುಂದೆ ಮಕ್ಕಳು ನೀರು ಪಾಲಾಗುತ್ತಿದ್ದರೂ ಪೋಷಕರಿಗೆ ರಕ್ಷಿಸಲು ಸಾಧ್ಯವಾಗಲಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಗುರುಪುರ, ನೇತ್ರಾವತಿಯಲ್ಲಿ ಸಂಚರಿಸಲಿದೆ ಬಾರ್ಜ್ – ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

    ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್‌ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.

    ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್‌ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್‌ಪೋರ್ಟ್‌ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

    ಮುಖ್ಯಾಂಶಗಳು:
    ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್‌ಯಾರ್ಡ್ಸ್ ಲಿಮಿಟೆಡ್‌ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್‌ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.

    ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು (Tourism) ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.

    ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್‌ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಳುಗುವ ಭೀತಿಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ

    ಮುಳುಗುವ ಭೀತಿಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ

    – ಸ್ನಾನಘಟ್ಟದ ಬಳಿ ಭಕ್ತರಿಗೆ ಸಂಪೂರ್ಣ ನಿಷೇಧ

    ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.

    ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮೆಚ್ಚೆಚ್ಚರಿಕೆ ವಹಿಸಲಾಗಿದ್ದು, ಸ್ನಾನ ಘಟ್ಟದ ಬಳಿ ಯಾರನ್ನೂ ಬಿಡಲಾಗುತ್ತಿಲ್ಲ.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ.

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಹಾಗೂ ಜಲಾಶಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಕೊಡಗು, ಧಾರವಾಡ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಧ್ಯದಲ್ಲೇ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

  • ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿ ಸಾವು

    ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿ ಸಾವು

    – ಮಂಗ್ಳೂರಿನ ಉಳ್ಳಾಲ ಉಳಿಯ ಬಳಿ ದುರಂತ

    ಮಂಗಳೂರು: ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಉಳಿಯಲ್ಲಿ ನಡೆದಿದೆ.

    ಮಂಜೇಶ್ವರ ಮಿಯಪದವು ನಿವಾಸಿ ರೆನಿಟಾ (18) ಮೃತ ಯುವತಿ. ಈ ದುರ್ಘಟನೆ ಕಲಬುರಗಿ ಜಿಲ್ಲೆಯ ನಿವಾಸಿ ಕಾವ್ಯ (20) ನೀರಿಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಉಳಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ತೊಕ್ಕೊಟ್ಟು ಚರ್ಚ್ ನ ವಾರ್ಷಿಕೋತ್ಸವಕ್ಕೆಂದು ಮಂಗಳೂರಿನ ಉಳ್ಳಾಲ ಉಳಿಯದಲ್ಲಿರುವ ಸ್ಥಳೀಯ ನಿವಾಸಿ ಜಾರ್ಜ್ ಎಂಬವರ ಮನೆಗೆ ಯುವತಿಯರ ತಂಡವೊಂದು ಬಂದಿದ್ದತ್ತು. ಭಾನುವಾರ ಜಾರ್ಜ್ ಅವರ ದೋಣಿಯಲ್ಲಿ ಉಲ್ಲಾಳದ ಉಳಿಯ ದ್ವೀಪಕ್ಕೆಂದು ಸಾಗುತ್ತಿದ್ದರು. ಈ ವೇಳೆ ಆಯ ತಪ್ಪಿ ದೋಣಿ ಪಲ್ಟಿಯಾಗಿದ್ದು ದೋಣಿಯಲ್ಲಿದ್ದ 6 ಮಂದಿ ಯುವತಿಯರು ನದಿ ನೀರಿಗೆ ಬಿದ್ದಿದ್ದರು. ತಕ್ಷಣ ದೋಣಿಯ ಅಂಬಿಗ ಎಲ್ಲರನ್ನೂ ಬಚಾವ್ ಮಾಡುವ ಪ್ರಯತ್ನ ಮಾಡಿದ್ದರೂ ರೆನಿಟಾ ಸಾವನ್ನಪ್ಪಿದ್ದಾರೆ.

    ಯುವತಿ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನ ಸಮೀಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಅಂಬಿಗನ ಸಮಯ ಪ್ರಜ್ಞೆಯಿಂದ ನಾಲ್ವರು ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ನದಿ ಪ್ರವಾಹದಲ್ಲಿ ಯುವಕರ ಹುಚ್ಚು ಸಾಹಸ

    ನದಿ ಪ್ರವಾಹದಲ್ಲಿ ಯುವಕರ ಹುಚ್ಚು ಸಾಹಸ

    ಮಂಗಳೂರು: ರಾಜ್ಯದ ಬಹುತೇಕ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನೇತ್ರಾವತಿ ನದಿ ಸಹ ತುಂಬಿ ಹರಿಯುತ್ತಿದ್ದು, ಕೆಲ ಯುವಕರು ಸೇತುವೆ ಮೇಲಿಂದ ಜಿಗಿಯುವ ಮೂಲಕ ತಮ್ಮ ಹುಚ್ಚಾಟವನ್ನು ಪ್ರದರ್ಶಿಸುತ್ತಿದ್ದಾರೆ.

    ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಎದುರೇ ಸೇತುವೆ ಮೇಲಿಂದ ನದಿಗೆ ಜಿಗಿದು ಯುವಕರು ಈಜಾಡುತ್ತಿದ್ದಾರೆ. ಯುವಕರ ಹುಚ್ಚು ಸಾಹಸ ನೋಡಲು ಸ್ಥಳದಲ್ಲಿ ಜನ ಜಾತ್ರೆಯ ರೀತಿಯಲ್ಲಿ ಸೇರಿದ್ದಾರೆ.

    ಕೆಲವು ದಿನಗಳ ಹಿಂದೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗದ್ದಗಿ ಗ್ರಾಮದ ಯುವಕರು ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಈಜುವ ಸ್ಪರ್ಧೆ ನಡೆಸಿದ್ದರು. ಗಂಗಮ್ಮನ ಕಟ್ಟೆಯಿಂದ ಸಾಯಿ ಬಾಬಾ ಮಂದಿರದವರೆಗೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೃಷ್ಣ ನದಿ ಬಲ ಮತ್ತು ಎಡದಂಡೆಯ ಗ್ರಾಮದ 8-10 ಯುವಕರು ಈಜಿದ್ದರು. 5-10 ಸಾವಿರ ರೂ. ಹಾಗೂ ಕುರಿಮರಿಗಾಗಿ 3 ಕಿ.ಮೀ. ಈಜಲು ಬೆಟ್ಟಿಂಗ್ ಕಟ್ಟಿಕೊಂಡಿದ್ದರು. ಪ್ರವಾಹದಲ್ಲಿ ಈಜಿ ದಂಡ ಸೇರಲು ಹರಸಾಹಸವೇ ಪಟ್ಟಿದ್ದರು.

  • ಸಾವಿರಾರು ಜನ್ರಿಗೆ ದಾರಿಯಾಗಿದ್ದ ನಂದಾದೀಪ ಆರೋಯ್ತು- ಹೆಚ್‍ಡಿಡಿ ಸಂತಾಪ

    ಸಾವಿರಾರು ಜನ್ರಿಗೆ ದಾರಿಯಾಗಿದ್ದ ನಂದಾದೀಪ ಆರೋಯ್ತು- ಹೆಚ್‍ಡಿಡಿ ಸಂತಾಪ

    ಬೆಂಗಳೂರು: ಸಾವಿರಾರು ಜನರಿಗೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ ಆರಿಹೋದ ಸುದ್ದಿಯನ್ನು ನಮಗೆಲ್ಲರಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಉದ್ಯಮಿ ಸಿದ್ಧಾರ್ಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಸಿದ್ಧಾರ್ಥ್ ಅವರದ್ದು ತುಂಬಾ ಸರಳ ವ್ಯಕ್ತಿತ್ವ. ನಿಜಕ್ಕೂ ಅವರ ನಿಧನದಿಂದ ದೇಶಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕಗ್ಗತ್ತಲಾವರಿಸಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸುಮಾರು 35 ವರ್ಷಗಳಿಂದ ನಾನು ಸಿದ್ದಾರ್ಥ್ ಅವರನ್ನು ಬಲ್ಲೆ. ಈ ದಿನ ಆ ಸಜ್ಜನ ವ್ಯಕ್ತಿ ಇಲ್ಲವೆಂದರೆ ನನಗೆ ನಂಬಲಸಾಧ್ಯ. ಅವರ ಈ ದಾರುಣ ಸಾವಿನ ಕುರಿತು ಸರ್ಕಾರ ಸೂಕ್ತ ತನಿಖೆ ನಡೆಸಲಿ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗೂ ನಾಡಿನ ಅಸಂಖ್ಯಾತ ಕಾರ್ಮಿಕ ಬಂಧುಗಳಿಗೆ, ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಹೇಳಿದ್ದಾರೆ.

    ಇಂದು ಬೆಳಗ್ಗೆ ಸಿದ್ಧಾರ್ಥ್ ಮೃತದೇಹ ಮಂಗಳೂರು- ಉಳ್ಳಾಲ ನಡುವೆ ಇರುವ ನೇತ್ರಾವತಿ ನದಿ ಸಮೀಪದ ಹೊಯಿಗೆ ಬಜಾರ್ ಎಂಬ ಪ್ರದೇಶದಲ್ಲಿ ದೊರಕಿದೆ. ಬೆಳಗ್ಗೆ 6.30ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಹೋದಾಗ ನದಿಯಲ್ಲಿ ತೇಲಾಡುತ್ತಿದ್ದ ಶವವನ್ನು ಕಂಡು ಅನುಮಾನದಿಂದ ದೋಣಿ ಬದಿಯಲ್ಲಿ ಹಿಡಿದುಕೊಂಡು ದಡ ತಲುಪಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.