Tag: Network Problem

  • ಭೂಕುಸಿತ ಸ್ಥಳದಲ್ಲೇ ಅನ್‍ಲೈನ್ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಂದ ನೆಟ್‍ವರ್ಕ್ ಹುಡುಕಾಟ

    ಭೂಕುಸಿತ ಸ್ಥಳದಲ್ಲೇ ಅನ್‍ಲೈನ್ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಂದ ನೆಟ್‍ವರ್ಕ್ ಹುಡುಕಾಟ

    – ಭಯದಲ್ಲಿ ಪೋಷಕರು

    ಮಡಿಕೇರಿ: 2019ರಲ್ಲಿ ಭೂಕುಸಿರತವಾದ ಸ್ಥಳದಲ್ಲಿ ವಿದ್ಯಾರ್ಥಿಗಳು ನೆಟ್‍ವರ್ಕ್ ಹುಡುಕಾಟ ನಡೆಸುತ್ತಿರೋದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಭೂಮಿ ಶಿಥಿಲವಾಗಿದ್ದು, ಮಕ್ಕಳು ನೆಟ್‍ವರ್ಕ್ ಮರದ ಮೇಲೆ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಗ್ರಾಮೀಣಾ ಭಾಗದಲ್ಲಿ ನೆಟ್‍ವರ್ಕ್ ಮತ್ತು ವಿದ್ಯುತ್ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಅನ್‍ಲೈನ್ ಕಲಿಕೆಗೆ ತೊಡಕು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಕಷ್ಟವಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರಿಗೂ ನೆಟ್‍ವರ್ಕ್ ಸಮಸ್ಯೆ ಉಂಟಾಗಿದೆ. ಗ್ರಾಮೀಣ ಪ್ರದೇಶವಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ನೆಟ್‍ವರ್ಕ್ ಗಾಗಿ ಮೂರು ನಾಲ್ಕು ಕಿಲೋ ಮೀಟರ್ ನಡೆದುಕೊಂಡು ಬಂದು ನೆಟ್‍ವರ್ಕ್ ಸರ್ಚ್ ಮಾಡಿ ಅನ್‍ಲೈನ್ ಕ್ಲಾಸ್ ಗೆ ಹಾಜರಾಗುವ ಪರಿಸ್ಥಿತಿ ಇದೆ. ಇದನ್ನೂ ಓದಿ: ನೆಟ್‍ವರ್ಕ್ ಗಾಗಿ ಅಟ್ಟಣಿಗೆ ಕ್ಲಾಸ್ ರೂಂ ನಿರ್ಮಿಸಿದ ಪಬ್ಲಿಕ್ ಹೀರೋ ಶಿಕ್ಷಕ ಸತೀಶ್ 

    ಮಳೆಗಾಲ ಅರಂಭವಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಬೇರೆ ಕಾಡುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಬೆಟ್ಟ ಗುಡ್ಡದ ಮೇಲೆ ನೆಟ್‍ವರ್ಕ್ ಗಾಗಿ ಮರ ಬಂಡೆ ಬೆಟ್ಟದ ತುದಿಯಲ್ಲಿ ಹೋಗಿ ಅನ್‍ಲೈನ್ ಶಿಕ್ಷಣಕ್ಕೆ ಮುಂದಾಗಿದ್ದಾರೆ. ಈ ಗ್ರಾಮದ ಸಮೀಪ ಇರುವ ತೋರಾ ಗ್ರಾಮದಲ್ಲಿ 2019ರಲ್ಲಿ ಭೂಕುಸಿತ ಉಂಟಾಗಿ ಸಾವು ನೋವುಗಳು ಸಂಭವಿಸಿತ್ತು. ಇದೀಗ ಮಕ್ಕಳು ಬೆಟ್ಟದ ಮೇಲೆ ನೆಟ್‍ವರ್ಕ್ ಗಾಗಿ ಅಲೆದಾಟ ನಡೆಸುತ್ತಿದ್ದು. ಪೋಷಕರಲ್ಲಿ ಅತಂಕ ಮನೆ ಮಾಡುತ್ತಿದೆ. ಹೀಗಾಗಿ ಗ್ರಾಮಕ್ಕೆ ನೆಟ್‍ವರ್ಕ್ ಸಮಸ್ಯೆ ಬಗ್ಗೆ ಹರಿಸಿಕೊಂಡುವಂತೆ ಗ್ರಾಮಸ್ಥರು ಜಿಲ್ಲಾಡಳಿತವನ್ನು ಅಗ್ರಹಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಕ್ಲಾಸ್‍ಗಾಗಿ ಮಳೆಯನ್ನೂ ಲೆಕ್ಕಿಸದೆ ಗುಡ್ಡ ಹತ್ತಿ ಕುಳಿತ ವಿದ್ಯಾರ್ಥಿಗಳು

  • ಆನ್‍ಲೈನ್ ಶಿಕ್ಷಣ- ನೆಟ್‍ವರ್ಕ್ ಅರಸಿ ಇಂದಿಗೂ ವಿದ್ಯಾರ್ಥಿಗಳ ಅಲೆದಾಟ

    ಆನ್‍ಲೈನ್ ಶಿಕ್ಷಣ- ನೆಟ್‍ವರ್ಕ್ ಅರಸಿ ಇಂದಿಗೂ ವಿದ್ಯಾರ್ಥಿಗಳ ಅಲೆದಾಟ

    ಮಡಿಕೇರಿ: ಕೊರೊನಾ ಮಹಾಮಾರಿಯಿಂದ ಲಾಕ್‍ಡೌನ್ ಆದ ಪರಿಣಾಮ ಶಾಲಾ ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಆದರೆ ವಿದ್ಯಾರ್ಥಿಗಳ ಕಲಿಕೆ ಹಿಂದೆ ಉಳಿಯದಂತೆ ಸರ್ಕಾರವೇನೋ ಆನ್ ಲೈನ್ ತರಗತಿಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ನೆಟ್‍ವರ್ಕ್ ಸಮಸ್ಯೆ ಹೇಳತೀರದಾಗಿದ್ದು, ವಿದ್ಯಾರ್ಥಿಗಳು ನೆಟ್‍ವರ್ಕ್ ಅರಸಿ ಕಾಡು ಮೇಡು ಅಲೆಯುವಂತಾಗಿದೆ.

    ಮಲೆನಾಡು ಹಾಗೂ ಸಂಪೂರ್ಣ ಬೆಟ್ಟಗುಡ್ಡಗಳಿಂದ ಕೂಡಿರುವ ಕೊಡಗು ಜಿಲ್ಲೆಯಲ್ಲಿ ನೆಟ್‍ವರ್ಕ್ ಸಮಸ್ಯೆ ವಿದ್ಯಾರ್ಥಿಗಳ ಆನ್‍ಲೈನ್ ತರಗತಿಗಳನ್ನು ನರಕ ಸದೃಶ್ಯವಾಗಿಸಿದೆ. ಜಿಲ್ಲೆಯ ನೂರಾರು ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಆನ್‍ಲೈನ್ ತರಗತಿ ಪಡೆಯಲು ನೆಟ್‍ವರ್ಕ್ ಹುಡುಕಿ ಮನೆಯಿಂದ ಎರಡು ಮೂರು ಕಿಲೋ ಮೀಟರ್ ದೂರ ಹೋಗಬೇಕಾಗಿದೆ. ದೂರದ ಎಲ್ಲೋ ಒಂದು ಬಸ್ ನಿಲ್ದಾಣದಲ್ಲಿ ನೆಟ್‍ವರ್ಕ್ ದೊರೆತರೆ ಅಲ್ಲಿಗೆ ಹೋಗಿ ಕುಳಿತು ಆನ್‍ಲೈನ್ ತರಗತಿ ವೀಕ್ಷಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗುತ್ತಿವೆ.

    ಸೋಮವಾರಪೇಟೆ ತಾಲ್ಲೂಕಿನ ಕೂತಿ ಎನ್ನೋ ಗ್ರಾಮದಲ್ಲಿ ನೆಟ್‍ವರ್ಕ್ ಸಮಸ್ಯೆ ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ. ಈ ಗ್ರಾಮದ ಸುತ್ತಮುತ್ತ ಇರುವ ಕೆರೆಕೊಪ್ಪ, ನಗರಳ್ಳಿ, ಕಾರೆಕೊಪ್ಪ ಮತ್ತು ಶಾಂತಳ್ಳಿ ಗ್ರಾಮಗಳಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ನೂರಾರು ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಎಷ್ಟೋ ವಿದ್ಯಾರ್ಥಿಗಳು ಯಾವುದೋ ತೋಟದ ಮಧ್ಯದಲ್ಲಿ, ಕಾಡಿನ ಮಧ್ಯದಲ್ಲಿ ನೆಟ್‍ವರ್ಕ್ ಸಿಗುತ್ತಿದ್ದರೆ ಅಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಆದರೆ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಮಳೆಯಲ್ಲೇ ನೆನೆದುಕೊಂಡು ಬಸ್ ನಿಲ್ದಾಣಗಳಿಗೆ ಹೋಗಿ ಕುಳಿತು ಪಾಠ ಕೇಳಬೇಕಾಗಿದೆ.

    ಇನ್ನು ಎಷ್ಟೋ ಗ್ರಾಮಗಳಲ್ಲಿ ತೋಟ, ಕಾಡಿನ ಮಧ್ಯೆ ನೆಟ್‍ವರ್ಕ್ ಸಿಗುತ್ತಿದ್ದರಿಂದ ಅಲ್ಲಿ ಕುಳಿತು ಆನ್‍ಲೈನ್ ಪಾಠ ಕೇಳುತ್ತಿದ್ದ ಹತ್ತಾರು ವಿದ್ಯಾರ್ಥಿಗಳು ಮಳೆಯಿಂದಾಗಿ ಆನ್ ಲೈನ್ ತರಗತಿಯಿಂದಲೂ ವಂಚಿತರಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನೆಟ್ ವರ್ಕ್ ಸಮಸ್ಯೆ ಬಗೆಹರಿಸಿ ಎನ್ನೋದು ವಿದ್ಯಾರ್ಥಿಗಳ ಒತ್ತಾಯವಾಗಿದೆ.

  • ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿದವನಿಗೆ ಗುಂಡೇಟು!

    ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿದವನಿಗೆ ಗುಂಡೇಟು!

    ಕಾರವಾರ: ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿ ಕುಳಿತಿದ್ದ ಯುವಕ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಘಟನೆ ಸಿದ್ದಾಪುರ ತಾಲೂಕಿನ ಕವಲಕೊಪ್ಪ ಗ್ರಾಮದ ಗೊಂಟನಾಳದಲ್ಲಿ ನಡೆದಿದೆ.

    ಕುಂಬಾರಕುಳಿ ಮೂಲದ ಹಾಲಿ ಗೊಂಟನಾಳದ ನಿವಾಸಿ ಪ್ರದೀಪ್ ನಾರಾಯಣ್ ಗೌಡ (19) ಗಾಯಗೊಂಡ ಯುವಕ. ನಾರಾಯಣ್ ಗೌಡ ಮೊಬೈಲ್ ನೆಟ್‍ವರ್ಕ್ ಸಂಪರ್ಕ ಅರಸಿ ಗುಡ್ಡ ಏರಿ ಕುಳಿತು ಮೊಬೈಲ್ ನೋಡುತ್ತಾ ಕುಳಿತಿದ್ದರು. ಇದೇ ವೇಳೆ ಚಟವುಳ್ಳ ಕವಲಕೊಪ್ಪ ಗೊಂಟನಾಳದ ರಾಮಾ ಕನ್ನಾ ನಾಯ್ಕ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ. ಪ್ರದೀಪ್ ಅವರನ್ನು ಪ್ರಾಣಿ ಎಂದು ರಾಮಾ ಕನ್ನಾ ಗುಂಡು ಹಾರಿಸಿದ್ದಾನೆ. ಇದನ್ನೂ  ಓದಿ: ಇನ್ಮುಂದೆ 1 ಸೆಕೆಂಡ್‍ಗೆ 1 ಸಾವಿರ ಎಚ್‍ಡಿ ಸಿನಿಮಾ ಡೌನ್‍ಲೋಡ್ ಮಾಡಬಹುದು

    ಆರೋಪಿ

    ಯುವಕ ಪ್ರದೀಪ್ ಅವರ ಬಲ ಮೊಣಕಾಲು ಹಾಗೂ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ  ಓದಿ: ವಾಟ್ಸಪ್ ಸ್ಟೇಟಸ್ ಮತ್ತೆ 30 ಸೆಕೆಂಡ್‍ಗೆ ಏರಿಕೆ