Tag: New Building

  • ವಿಧಾನಸಭೆಯ ಮೇಲೆ ಹೊಸದಾಗಿ ನಿರ್ಮಿಸಿದ್ದ 70 ಟನ್ ತೂಕದ ಉಕ್ಕಿನ ಗುಮ್ಮಟ ಕುಸಿತ

    ವಿಧಾನಸಭೆಯ ಮೇಲೆ ಹೊಸದಾಗಿ ನಿರ್ಮಿಸಿದ್ದ 70 ಟನ್ ತೂಕದ ಉಕ್ಕಿನ ಗುಮ್ಮಟ ಕುಸಿತ

    ಶಿಲ್ಲಾಂಗ್: ಹೊಸದಾಗಿ ನಿರ್ಮಿಸಲಾಗಿದ್ದ ಮೇಘಾಲಯ ವಿಧಾನಸಭೆಯ ಕಟ್ಟಡದ ಒಂದು ಭಾಗ ಭಾನುವಾರ ಕುಸಿದಿದೆ. ಸದ್ಯ ಯಾವುದೇ ಪ್ರಾಣಾಪಾಯಗಳಾಗಿಲ್ಲ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

    ಸುಮಾರು 177.7 ಕೋಟಿ ರೂ. ವೆಚ್ಚದಲ್ಲಿ ಕಟ್ಟಲಾದ ಸುಮಾರು 70 ಟನ್ ತೂಕದ ಗುಮ್ಮಟ ಮಧ್ಯರಾತ್ರಿ ಸುಮಾರು 12:20 ರ ವೇಳೆಗೆ ಕುಸಿದಿದೆ.

    ಮೇಘಾಲಯದ ವಿಧಾನಸಭೆಯ ನೂತನ ಕಟ್ಟಡವನ್ನು ಉತ್ತರ ಪ್ರದೇಶ ಮೂಲದ ಕಂಪನಿ ನಿರ್ಮಿಸಿದ್ದು, ಕುಸಿತ ವಿನ್ಯಾಸದ ದೋಷದಿಂದ ಸಂಭವಿಸಿರಬಹುದು ಎಂದು ಎಂಜಿನಿಯರ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಅಮೆರಿಕದ ಒತ್ತಡಕ್ಕೆ ಭಾರತ ಮಣಿಯುವುದಿಲ್ಲ- ಇಂಧನ ಬೆಲೆ ಕಡಿತಕ್ಕೆ ಇಮ್ರಾನ್ ಖಾನ್ ಪ್ರಶಂಸೆ

    ಮುಂಜಾನೆ ಸ್ಥಳಕ್ಕೆ ಧಾವಿಸಿದ ಎಂಜಿನಿಯರ್‌ಗಳು ಹೊಸ ಗುಮ್ಮಟವನ್ನು ನಿರ್ಮಿಸಲು ಕನಿಷ್ಟ 8 ತಿಂಗಳು ಬೇಕು ಎಂದು ತಿಳಿಸಿದ್ದಾರೆ. ಇದೀಗ ಕುಸಿತವಾಗಿರುವ ಅವಶೇಷಗಳನ್ನು ತೆರವುಗೊಳಿಸಲು ಇನ್ನೂ 2 ವಾರ ಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ

    ಹೊಸ ಕಟ್ಟಡದ ಕಾಮಗಾರಿಯನ್ನು 2019ರ ಜೂನ್‌ನಲ್ಲಿ ಪ್ರಾರಂಭಿಸಲಾಗಿತ್ತು. ಇದೇ ವರ್ಷ ಆಗಸ್ಟ್ ತಿಂಗಳ ಒಳಗಾಗಿ ಕಾಮಗಾರಿ ಕೆಲಸ ಪೂರ್ಣಗೊಳ್ಳಬೇಕಿತ್ತು.

  • ಹಾಸನದಲ್ಲಿ ಸರ್ಕಾರದ ಹಣ ಪೋಲು – 150 ವರ್ಷದ ಹಿಂದಿನ ಕಟ್ಟಡದಲ್ಲಿದೆ ನ್ಯಾಯಾಲಯ

    ಹಾಸನದಲ್ಲಿ ಸರ್ಕಾರದ ಹಣ ಪೋಲು – 150 ವರ್ಷದ ಹಿಂದಿನ ಕಟ್ಟಡದಲ್ಲಿದೆ ನ್ಯಾಯಾಲಯ

    ಹಾಸನ: ನಗರದಲ್ಲಿ ಬೃಹತ್ ಹಾಗು ಸುಸಜ್ಜಿತ ನ್ಯಾಯಾಲಯದ ಕಟ್ಟಡ ನಿರ್ಮಾಣವಾಗಿದೆ. ಆದರೆ ಈ ಕಟ್ಟಡಕ್ಕೆ ಇನ್ನೂ ಉದ್ಘಾಟನಾ ಭಾಗ್ಯ ಸಿಗದ ಕಾರಣ 150 ವರ್ಷದ ಹಳೆಯ ಕಟ್ಟಡದಲ್ಲಿ ಈಗಲೂ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ.

    ಸರ್ಕಾರ ಹಣ ಪೋಲು ಮಾಡುವುದು ಎಂದರೆ ಇದೇ ಇರಬೇಕು. ಯಾಕೆಂದರೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಮಾಡಿ ವರ್ಷಗಳೇ ಕಳೆದರೂ ಸಹ ಇನ್ನೂ ಇದಕ್ಕೆ ಉದ್ಘಾಟನೆಯ ಭಾಗ್ಯ ಸಿಕ್ಕಿಲ್ಲ. ಇದು ಜಿಲ್ಲೆಯ ವಕೀಲರ ಆಕ್ರೋಶಕ್ಕೆ ಕಾರಣವಾಗಿದೆ.

    ಮತ್ತೊಂದೆಡೆ ಪುರಾತನ ಕಾಲದ ಅಂದಾಜು 150 ವರ್ಷ ಹಳೆಯ ಬ್ರಿಟಿಷರ ಕಾಲದ ಕಟ್ಟಡದಲ್ಲಿ ಈಗಲೂ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ. ಸ್ವತಃ ಲೋಕೋಪಯೋಗಿ ಇಲಾಖೆಯೆ ಈ ಕಟ್ಟಡ ಅಪಾಯದಲ್ಲಿದೆ ಎನ್ನುವ ಬೋರ್ಡ್ ಹಾಕಿದ್ದರೂ ಕೂಡ ಅಲ್ಲಿಯೇ ಕಾರ್ಯನಿರ್ವಹಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

    ಒಂದೆಡೆ ಸುಸಜ್ಜಿತವಾದ ನ್ಯಾಯಾಲಯದ ಕಟ್ಟಡವನ್ನು ಕಟ್ಟಿರುವ ಲೋಕೋಪಯೋಗಿ ಇಲಾಖೆ ಅದನ್ನು ನ್ಯಾಯಾಂಗ ಇಲಾಖೆಗೆ ಕೊಟ್ಟಿಲ್ಲ. ಮತ್ತೊಂದು ಕಡೆ ಅದೇ ಲೋಕೋಪಯೋಗಿ ಇಲಾಖೆ ಈ ಕಟ್ಟಡ ಅಪಾಯದಲ್ಲಿದೆ ಇಲ್ಲಿ ಇರಬೇಡಿ ಎಂದು ಎಚ್ಚರಿಕೆಯ ಫಲಕ ಹಾಕಿದೆ. ಇದು ಹೀಗೆ ಆದರೆ ನಾವು ಪ್ರತಿಭಟನೆಯ ಹಾದಿ ಹಿಡಿಬೇಕಾಗುತ್ತದೆ ಎಂದು ವಕೀಲರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.