Tag: New Cinema

  • Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಇಂದು ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮಹೂರ್ತ ಸದ್ದಿಲ್ಲದೇ ನಡೆದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಡಿ-57 ‘ ಎಂದು ಹೆಸರಿಟ್ಟು ಮಹೂರ್ತ ಮಾಡಲಾಗಿದೆ.

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

    ಸುದೀಪ್ – ದರ್ಶನ್ ಇಬ್ಬರಿಗೂ ಆಪ್ತರಾಗಿರೋ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಸಾರಥ್ಯದಲ್ಲಿ ದಿಗ್ಗಜರು 2 ಸಿನಿಮಾ ಬರುತ್ತಾ? ಇಬ್ಬರನ್ನೂ ಜೊತೆಯಾಗಿಸಿ ಸಿನಿಮಾ ಮಾಡ್ತಾರಾ? ಎಂಬ ಕೌತುಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

    ಜ್ಯೂ.ಅಂಬರೀಶ್ – ಜ್ಯೂ.ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದರ್ಶನ್- ಸುದೀಪ್ (Sudeep) ಮತ್ತೆ ಒಂದೇ ವೇದಿಕೆಯಲ್ಲಿ ಜೊತೆಯಾಗಿರೋದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ಈ ಹಿಂದೆ ಅಂಬರೀಶ್ 60ನೇ ವರ್ಷದ ಬರ್ತ್‌ಡೇ ಕಾರ್ಯಕ್ರಮದಲ್ಲಿ ಕುಚಿಕು ಕುಚಿಕು ಡ್ಯಾನ್ಸ್ ಮಾಡಿ ಕಿಚ್ಚ-ದಚ್ಚು ಗಮನ ಸೆಳೆದಿದ್ದರು.

     

    2012ರಲ್ಲಿ ದರ್ಶನ್ ನಟನೆಯ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಸಂಪೂರ್ಣ ಸಹಕರಿಸಿದ್ದ ಕಿಚ್ಚ. ದರ್ಶನ್ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದರು. ಮುಂದೆ ಒಂದೊಳ್ಳೆ ಘಳಿಗೆ ಬಂದರೆ ಒಟ್ಟಿಗೆ ಆಕ್ಟ್ ಮಾಡೋದಾಗಿ ಇಬ್ಬರು ಹೇಳಿದ್ರು. ಅಂಬಿ ಇದ್ದಿದ್ರೆ ಇಷ್ಟೊತ್ತಿಗಾಗ್ಲೇ ಸುದೀಪ್-‌ ದರ್ಶನ್ ಒಂದಾಗುತ್ತಿದ್ದರು. ಇದೀಗ ಇಬ್ಬರನ್ನೂ ಒಂದಾಗಿಸೋ ಪ್ರಯತ್ನಗಳು ಜಾರಿಯಲ್ಲಿವೆ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಬ್ಜಗಿಂತಲೂ ‘ಕಿಚ್ಚ’ನ ಸಿನಿಮಾ ದೊಡ್ಡಮಟ್ಟದಲ್ಲಿ ಇರುತ್ತದೆ : ನಿರ್ದೇಶಕ ಆರ್.ಚಂದ್ರು

    ಕಬ್ಜಗಿಂತಲೂ ‘ಕಿಚ್ಚ’ನ ಸಿನಿಮಾ ದೊಡ್ಡಮಟ್ಟದಲ್ಲಿ ಇರುತ್ತದೆ : ನಿರ್ದೇಶಕ ಆರ್.ಚಂದ್ರು

    ಕಿಚ್ಚ ಸುದೀಪ್ (Sudeep) ಹುಟ್ಟು ಹಬ್ಬದ ದಿನದಂದು ಅಚ್ಚರಿಯ ಸುದ್ದಿ ಕೊಟ್ಟು ಕಿಚ್ಚನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣರಾಗಿದ್ದಾರೆ ಖ್ಯಾತ ನಿರ್ದೇಶಕ ಆರ್.ಚಂದ್ರು (R. Chandru). ‘ಕಬ್ಜ 2’ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದ ಚಂದ್ರು, ಏಕಾಏಕಿ ಕಿಚ್ಚನ ಚಿತ್ರಕ್ಕೆ ಕೈ ಹಾಕಿದ್ದಾರೆ. ಜೊತೆಗೆ ಹೆಸರಾಂತ ಕಥೆಗಾರ, ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ (Vijendra Prasad) ಅವರನ್ನು ತಮ್ಮ ತಂಡದೊಂದಿಗೆ ಸೇರಿಸಿಕೊಂಡಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ಈಗಿನಿಂದಲೇ ನಿರೀಕ್ಷೆ ಹೆಚ್ಚಾಗಿದೆ.

    ಚಂದ್ರು ಅವರಿಗೆ ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್ ಇದೆ. ‘ಕಬ್ಜ’ ಸಿನಿಮಾದ ನಂತರ ಬೇಡಿಕೆಯ ನಿರ್ದೇಶಕರಾಗಿದ್ದಾರೆ. ಇದನ್ನೂ ದಾಟಿಕೊಳ್ಳುವ ಮತ್ತೊಂದು ಪ್ರಾಜೆಕ್ಟ್ ಇದಾಗಿದೆ. ಹಾಗಾಗಿಯೇ ಕಿಚ್ಚ ಮತ್ತು ಚಂದ್ರು ಕಾಂಬಿನೇಷನ್ ಸಿನಿಮಾ ಗ್ಲೋಬಲ್ ಮಟ್ಟದಲ್ಲಿ ಸದ್ದು ಮಾಡಲಿದೆಯಂತೆ. ಕನ್ನಡ ಸಿನಿಮಾವೊಂದನ್ನು ಜಾಗತಿಕ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಪ್ಲ್ಯಾನ್ ನಿರ್ದೇಶಕರದ್ದು.

    ತನ್ನ ಜೊತೆಗಿರುವವರನ್ನು ಸದಾ ಬೆಳೆಸುತ್ತಾ ಬಂದಿದ್ದಾರೆ ಚಂದ್ರು, ಹೊಸ ಹೊಸ ನಿರ್ದೇಶಕರಿಗೆ ಅವಕಾಶವನ್ನೂ ನೀಡಿದ್ದಾರೆ. ಈಗ ತಮ್ಮ ಕನಸನ್ನು ಮತ್ತಷ್ಟು ವಿಸ್ತಾರ ಮಾಡಿಕೊಂಡಿದ್ದು, ವರ್ಷಕ್ಕೆ ಮೂರ್ನಾಲ್ಕು ಚಿತ್ರ ಮಾಡುವುದಕ್ಕಾಗಿಯೇ ‘ಆರ್.ಸಿ ಸ್ಟುಡಿಯೋಸ್’  (R.C. Studios)ಬ್ಯಾನರ್ ಅನ್ನು ಶುರು ಮಾಡಿದ್ದಾರೆ. ಈ ಸ್ಟುಡಿಯೋದ ಮೊದಲ ಚಿತ್ರವಾಗಿ ಕಿಚ್ಚನ ಸಿನಿಮಾ ಘೋಷಣೆಯಾಗಿದೆ. ಇದೇ ತಿಂಗಳಲ್ಲೇ ಮತ್ತೆ ಎರಡು ಚಿತ್ರಗಳನ್ನು ಘೋಷಿಸುವುದಾಗಿ ಅವರು ಹೇಳಿದ್ದಾರೆ.

    ಹಾಗಂತ ಕಬ್ಜ 2 ಕೆಲಸವನ್ನು ಅವರು ನಿಲ್ಲಿಸಿಲ್ಲವಂತೆ. ತನ್ನ ಪಾಡಿಗೆ ತಾನು ಸ್ಕ್ರಿಪ್ಟ್ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ಮೂವರು ಹೆಸರಾಂತ ಸ್ಟಾರ್ ನಟರು ನಟಿಸಬೇಕಿರುವುದರಿಂದ ಮೂವರ ಡೇಟ್ ಒಟ್ಟಿಗೆ ಸಿಕ್ಕ ನಂತರ ಆ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರಂತೆ. ಹಾಗಾಗಿ ಕಬ್ಜ 2 ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಭರವಸೆ ನೀಡುತ್ತಾರೆ ಚಂದ್ರು.

    ಕಬ್ಜ ಸಿನಿಮಾದಲ್ಲಿ ಸುದೀಪ್ ಮಹತ್ವದ ಪಾತ್ರವೊಂದನ್ನು ಮಾಡಿದ್ದರು. ಚಂದ್ರು ಮತ್ತು ಸುದೀಪ್ ಕಾಂಬಿನೇಷನ್ ಸಖತ್ ವರ್ಕ್ ಆಗಿತ್ತು. ಚಂದ್ರು ಕೆಲಸದ ಬಗ್ಗೆ ಆವತ್ತೆ ಸುದೀಪ್ ಮನಸಾರೆ ಹೊಗಳಿದ್ದರು. ಇದೀಗ ಚಂದ್ರು ಮತ್ತು ಸುದೀಪ್ ಅವರು ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಿರೀಕ್ಷೆ ಇಮ್ಮಡಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗನಿಗಾಗಿ ಕಥೆ ಬರೆದಿದ್ದೇನೆ, ಕಾಲ್ ಶೀಟ್ ಕೊಡ್ತಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

    ಮಗನಿಗಾಗಿ ಕಥೆ ಬರೆದಿದ್ದೇನೆ, ಕಾಲ್ ಶೀಟ್ ಕೊಡ್ತಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

    ಇಂದು ನಿಖಿಲ್ ಕುಮಾರ್ ಸ್ವಾಮಿ ಅವರ ಹೊಸ ಸಿನಿಮಾದ ಮುಹೂರ್ತ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯುತ್ತಿದೆ. ಲೈಕಾ ಸಂಸ್ಥೆಯು (Lyca Production) ನಿಖಿಲ್ ಚಿತ್ರಕ್ಕಾಗಿ ಹಣ ಹೂಡುತ್ತಿದೆ. ಅದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದರಿಂದ ಮುಹೂರ್ತ ಕಾರ್ಯಕ್ರಮವನ್ನು ಅದ್ಧೂರಿಯಾಗಿಯೇ ಮಾಡುತ್ತಿದೆ ಚಿತ್ರತಂಡ. ಈ ಸಂದರ್ಭದಲ್ಲಿ ನಿಖಿಲ್ ತಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಪಾಲ್ಗೊಂಡಿದ್ದರು.

    ನಿಖಿಲ್ (Nikhil Kumar Swamy) ಚಿತ್ರದ ಮುಹೂರ್ತಕ್ಕೆ  (Muhurta) ಆಗಮಿಸಿದ್ದ ಕುಮಾರಸ್ವಾಮಿ ಅವರು ಮಗನನ್ನು ಉದ್ದೇಶಿಸಿ, ‘ನಾನು ನಿಖಿಲ್ ಗಾಗಿ ಕಥೆಯೊಂದನ್ನು ಬರೆದಿದ್ದೇನೆ. ಅದು ಕೂಡ ಭಾರೀ ಬಜೆಟ್ ಸಿನಿಮಾ. ಆ ಚಿತ್ರಕ್ಕಾಗಿ ಅವರು ಕಾಲ್ ಶೀಟ್ ಕೊಡುತ್ತಿಲ್ಲ’ ಎಂದು ಮಗನ ಬಗ್ಗೆ ಹೆಮ್ಮೆಯಿಂದಲೇ ಮಾತನಾಡಿದರು. ಇದನ್ನೂ ಓದಿ:ಡಾಲಿ ಹುಟ್ಟುಹಬ್ಬಕ್ಕೆ ಖಡಕ್ ರೊಟ್ಟಿ, ಪುಂಡೆಪಲ್ಯೆ ಮೆನು

    ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, ‘ಚಿತ್ರರಂಗಕ್ಕೂ ನನಗೂ ಅವಿನಾಭವ ಸಂಬಂಧ ಇದೆ. ನನ್ನ ಕಾಲೇಜು ಶಿಕ್ಷಣ ಮುಗಿಸಿದ ಕೂಡಲೇ ತೊಡಗಿಕೊಂಡೆ. ಚಿತ್ರದ ಡಿಸ್ಡ್ರಿಬ್ಯೂಟರ್ ಆಗಿದ್ದೆ. ಆಗಿನ ಕಾಲದಲ್ಲಿ ಒಂದು ಸಿನಿಮಾಗೆ ನಾಲ್ಕೈದು ಲಕ್ಷಕ್ಕೆ ಹಂಚಿಕೆ ಮಾಡ್ತಿದ್ದೆ. ದುಡ್ಡು ಹೆಚ್ಚಾದ್ರೆ ಕುಮಾರಣ್ಣ ಕೊಡಿ ಅಂತಿದ್ರು. ನಾನು ಆಗಿನಿಂದಲೂ ಕನ್ನಡ ಚಿತ್ರರಂಗದ ಒಳಿತಿಗಾಗಿ ಕೆಲಸ ಮಾಡ್ತಿದ್ದೇನೆ. ಚಿತ್ರರಂಗಕ್ಕೆ ಬರಲು ಡಾ. ರಾಜ್ ಕುಮಾರ್ ಅವರೇ ನನಗೆ ದೊಡ್ಡ ಆಕರ್ಷಣೆ’ ಎಂದರು.

    ‘ಆವತ್ತಿನ ಸಿನಿಮಾಗಳು ಕೌಟುಂಬಿಕ, ಮಾನವೀಯ ಮೌಲ್ಯಗಳನ್ನ ಬೆಸೆಯುತ್ತಿದ್ದವು. ‌ಈಗ ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತೀವಿ, ಹಣ ಮಾಡ್ತೀವಿ ಅಂತಾರೆ. ಆದರೆ ಸಾಮಾಜಿಕ ಸಂದೇಶ ಇರೋದಿಲ್ಲ. ಆವತ್ತಿನ ದೊಡ್ಡ ದೊಡ್ಡ ನಟರು ಹಣ ಸಂಪಾದಿಸುತ್ತಿರಲಿಲ್ಲ. ಜನ ಸಂಪಾದಿಸಿದ್ರು. ಸಂದೇಶ ಕೊಡುವಂತಹ ಸಿನಿಮಾ ಮಾಡ್ತಿದ್ರು’ ಎನ್ನುವುದು ಕುಮಾರಸ್ವಾಮಿ ಅವರ ಮಾತಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದೇ ವರ್ಷ ಸುದೀಪ್ ನಟನೆಯ ‘KICHCHA-46’ ಸಿನಿಮಾ ರಿಲೀಸ್

    ಇದೇ ವರ್ಷ ಸುದೀಪ್ ನಟನೆಯ ‘KICHCHA-46’ ಸಿನಿಮಾ ರಿಲೀಸ್

    ಸುದೀಪ್ (Sudeep) ತಮಿಳುನಾಡಿನಲ್ಲಿ ಕನ್ನಡದ ಕಹಳೆ ಊದಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಹೀರೋ ಆಗಿದ್ದರೂ ಕನ್ನಡ ನಾಡಿನ ಋಣ ತೀರಿಸಲು ಏನು ಮಾಡಬೇಕೊ ಎಲ್ಲವನ್ನೂ ಮುಗಿಸಿದ್ದಾರೆ. `ಕೆ-46′ (K-46) ಚಿತ್ರದಲ್ಲಿ ಈ ಕಾಯಕ ಮಾಡಿ ಕನ್ನಡಿಗರಿಂದ ಶಹಬ್ಬಾಶ್‌ ಗಿರಿ ಪಡೆದಿದ್ದಾರೆ.

    ಇದು ಕಿಚ್ಚನ ಹೊಸ ಸಿನಿಮಾ (New Cinema). ಟೈಟಲ್ ಇನ್ನೂ ಇಟ್ಟಿಲ್ಲ. ಇದರ ಶೂಟಿಂಗ್‌ಗಾಗಿ ಚೆನ್ನೈನ (Chennai) ಮಹಾಬಲಿಪುರಂನಲ್ಲಿ ಹಾಕಿದ ಸೆಟ್‌ನಲ್ಲಿ ಕಾರ್ಯ ನಿರತರಾಗಿದ್ದಾರೆ. ಇಲ್ಲಿಂದಲೇ ಅದೊಂದು ಮಹಾ ಗುಟ್ಟು ಹೊರ ಬಿದ್ದಿದೆ. ಇದರ ನಿರ್ಮಾಪಕ ಎಸ್ ಥಾನು (S Thanu), ನಿರ್ದೇಶಕ ವಿಜಯ್ (Vijay). ಇಬ್ಬರದೂ ತಮಿಳು ಮೂಲ. ಆದರೆ ಶೂಟಿಂಗ್ ಸೆಟ್‌ನಲ್ಲಿ ಬಹುತೇಕರು ಕನ್ನಡಿಗರೇ. ಅದಕ್ಕೆ ಕಾರಣ ಸುದೀಪ್. ತಮಿಳು ಭಾಷೆಯಲ್ಲೇ ಶೂಟಿಂಗ್ ಮಾಡೋಣ ಎಂದಿದ್ದ ನಿರ್ಮಾಪಕರ ಮಾತನ್ನು ಸುದೀಪ್ ನಿರಾಕರಿಸಿದ್ದು ಮೂಲ ಹೂರಣ. ಇದನ್ನೂ ಓದಿ:‘ಸಂಜೆ ಮೇಲೆ ಸುಮ್ನೆ ಹಂಗೆ’ ಅಂತಿದ್ದಾರೆ ನೀನಾಸಂ ಸತೀಶ್: ಮ್ಯಾಟ್ನಿ ಹಾಡು ವೈರಲ್

    ‘ಮೊದಲು ಕನ್ನಡ ಭಾಷೆಯಲ್ಲೇ ಶೂಟಿಂಗ್ ಮಾಡೋಣ. ನಂತರ ಅದನ್ನು ತಮಿಳಿಗೆ ಡಬ್ ಮಾಡೋಣ’ ಹೀಗಂತ ಸುದೀಪ್ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ತಾಕೀತು ಮಾಡಿದ್ದಾರಂತೆ. ಅದೇ ರೀತಿ ಕೆಲಸ ನಡೆಯುತ್ತಿದೆ. ಕೆಲವು ಹೀರೋಗಳು ತಮಿಳು ಸಿನಿಮಾ ಸಿಕ್ಕಿದ ಮಾತ್ರಕ್ಕೆ ಹುಟ್ಟಿದ ನೆಲ ಮರೆಯುತ್ತಾರೆ. ಆದರೆ ಸುದೀಪ್ ಹಾಗೆ ಮಾಡಿಲ್ಲ. ಮಾಡುವುದೂ ಇಲ್ಲ. ಅದರ ಪರಿಣಾಮ ಕಣ್ಣ ಮುಂದಿದೆ. ಕನ್ನಡ ನಾಡಿನ ಜನರು ಕೇಕೆ ಹಾಕುವಂತೆ ಮಾಡಿದೆ.

    ಈ ಸಿನಿಮಾಗಾಗಿ ಸುದೀಪ್ ಒಂದೇ ಹಂತದ ಶೂಟಿಂಗ್ ಮಾಡಲು ತಯಾರಿ ಮಾಡಿಕೊಂಡಿದ್ದಾರಂತೆ. ಅಂದುಕೊಂಡಂತೆ ಶೂಟಿಂಗ್ ಮಾಡಿ, ಇದೇ ವರ್ಷವೇ ಸಿನಿಮಾವನ್ನು ತೆರೆಗೆ ತರಲು ಸಿದ್ದತೆ ಕೂಡ ಮಾಡಿಕೊಂಡಿದ್ದಾರಂತೆ. ಸುದೀಪ್ ಸಿನಿಮಾಗಾಗಿ ಕಾದ ಅಭಿಮಾನಿಗಳಿಗೆ ನಿಜಕ್ಕೂ ಇದೊಂದು ಗುಡ್ ನ್ಯೂಸ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ನಟನೆಯ ಮತ್ತೊಂದು ಸಿನಿಮಾ ಘೋಷಣೆ : ಕುತೂಹಲ ಮೂಡಿಸುತ್ತಿದೆ ಪೋಸ್ಟರ್

    ಕಮಲ್ ನಟನೆಯ ಮತ್ತೊಂದು ಸಿನಿಮಾ ಘೋಷಣೆ : ಕುತೂಹಲ ಮೂಡಿಸುತ್ತಿದೆ ಪೋಸ್ಟರ್

    ದ್ಯ ಕೈಯಲ್ಲಿರುವ ಸಿನಿಮಾ ಮುಗಿಸಿಕೊಂಡು ಕಮಲ್ ಹಾಸನ್ (Kamal Haasan) ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿ ಅವರು ತೆರೆ ಮರೆಯಲ್ಲಿ ಸಿದ್ದತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ರಾಜಕಾರಣಕ್ಕೆ ಬರುವಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಏಕೆಂದರೆ ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಕಮಲ್.

    ಈಗ ಅವರು ಶಂಕರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಇಂಡಿಯನ್ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಾದ ನಂತರ ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಚಿತ್ರದಲ್ಲಿ ನಟಿಸಬೇಕಿದೆ. ಈ ಸಿನಿಮಾಗಳ ಮಧ್ಯೆಯೇ ಮತ್ತೊಂದು ಸಿನಿಮಾ (New Cinema) ಘೋಷಿಸಿದ್ದಾರೆ ಕಮಲ್ ಹಾಸನ್. ಆ ಸಿನಿಮಾದ ಪೋಸ್ಟರ್ (Poster) ಅನ್ನು ಕೂಡ ರಿಲೀಸ್ ಮಾಡಿದ್ದಾರೆ. ಇದು ಅವರ 233ನೇ (KH 233) ಸಿನಿಮಾವಾಗಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಈ ಹೊಸ ಚಿತ್ರವನ್ನು ಎಚ್.ವಿನೋದ್ (H. Vinod) ನಿರ್ದೇಶನ ಮಾಡಲಿದ್ದು, ಸ್ವತಃ ಕಮಲ್ ಹಾಸನ್ ಇದಕ್ಕೆ ಹಣ ಹೂಡುತ್ತಿದ್ದಾರೆ. ಅವರದ್ದೇ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗಲಿದೆ. ಪೋಸ್ಟರ್ ನಲ್ಲಿ ಕಮಲ್ ಜನನಾಯಕನ ರೀತಿಯಲ್ಲಿ ಪೋಸ್ ನೀಡಿದ್ದಾರೆ. ಹೀಗಾಗಿ ಈ ಚಿತ್ರದಲ್ಲಿ ರಾಜಕೀಯ ಕಥೆಯನ್ನು ಹೇಳುತ್ತಾರಾ ಎನ್ನುವ ಅನುಮಾನ ಕೂಡ ಮೂಡಿದೆ.

    ಒಂದಷ್ಟು ಸೋಲಿನ ಬಳಿಕ ಕಮಲ್ ನಟನೆಯ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿತು. ಮತ್ತೆ ಕಮಲ್ ಗೆ ಅದು ಮರುಜೀವ ನೀಡಿತು. ಈ ಸಿನಿಮಾ ಸಾಕಷ್ಟು ದುಡ್ಡು ಮಾಡುತ್ತಿದ್ದಂತೆಯೇ ಕಮಲ್ ಮತ್ತೆ ಬ್ಯುಸಿಯಾಗಿದ್ದಾರೆ. ಹಲವು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಶ್ ಹೊಸ ಸಿನಿಮಾದ ಶೂಟಿಂಗ್ ಆರಂಭ ಆಯಿತಾ?

    ಯಶ್ ಹೊಸ ಸಿನಿಮಾದ ಶೂಟಿಂಗ್ ಆರಂಭ ಆಯಿತಾ?

    ಕೆಜಿಎಫ್ 2 (KGF 2) ಸಿನಿಮಾದ ನಂತರ ಯಶ್ (Yash) ಹೊಸ ಸಿನಿಮಾದ ನಡೆ ಸಾಕಷ್ಟು ನಿಗೂಢವಾಗಿದೆ. ದಿನಕ್ಕೊಂದು ನಿರ್ದೇಶಕರ ಹೆಸರು ಕೇಳಿ ಬರು‍ತ್ತಿವೆ. ಇದೀಗ ಮತ್ತೊಂದು ಸುದ್ದಿ ಹೊರ ಬಂದಿದ್ದು, ಆಗಲೇ ಸಿನಿಮಾದ ಶೂಟಿಂಗ್ ಅನ್ನು ಚಿತ್ರತಂಡ ಶುರು ಮಾಡಿದೆಯಂತೆ. ಶ್ರೀಲಂಕಾದಲ್ಲೇ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

    ಮೊನ್ನೆಯಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ (Geethu Mohan Das) ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿತ್ತು. ಲಯರ್ಸ್ ಡೈರಿ ಸಿನಿಮಾಗಾಗಿ ಎರಡು ರಾಷ್ಟ್ರಪ್ರಶಸ್ತಿಯನ್ನು ಪಡೆದಿರುವ ಗೀತು ಅವರ ಸ್ಕ್ರಿಪ್ಟ್ ಬಗ್ಗೆ ಯಶ್ ಒಲವು ತೋರಿದ್ದಾರೆ ಎಂದು ವರದಿಯಾಗಿದೆ. ಸತತ ಒಂದು ವರ್ಷಗಳಿಂದ ಗೀತು ಮತ್ತು ಯಶ್ ಸ್ಕ್ರಿಪ್ಟ್ ಬಗ್ಗೆ ಚರ್ಚೆ ಮಾಡುತ್ತಲೇ ಇದ್ದಾರೆ ಎಂದು ಅವರ ಆಪ್ತರು ಹಂಚಿಕೊಂಡಿದ್ದಾರೆ.

    ಕಳೆದೊಂದು ವಾರದಿಂದ ಯಶ್ ಶ್ರೀಲಂಕಾದಲ್ಲಿ (Sri Lanka) ಬೀಡು ಬಿಟ್ಟಿದ್ದಾರೆ. ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋ ನೋಡಿದವರು ಯಶ್ ಶ್ರೀಲಂಕಾ ಪ್ರವಾಸದಲ್ಲಿ ಇದ್ದಾರೆ ಅಂದುಕೊಂಡಿದ್ದರು. ಬೇಸಿಗೆ ರಜೆಯನ್ನು ಕಳೆಯಲು ಅವರು ಅಲ್ಲಿಗೆ ಹೋಗಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಶ್ರೀಲಂಕಾ ಸರಕಾರ ಬೇರೆಯದ್ದೇ ಮಾಹಿತಿಯನ್ನು ಕೊಟ್ಟಿದೆ.

    ಈ ಕುರಿತು ಬೋರ್ಡ್ ಆಫ್ ಇನ್ವೆಸ್ಟ್‌ಮೆಂಟ್‌ ಇನ್ ಶ್ರೀಲಂಕಾದ ಮುಖ್ಯಾಧಿಕಾರಿ ದಿನೇಶ್ ವೇರಕ್ಕೋಡಿ (Dinesh Verakkodi) ಅವರು ಮಾಹಿತಿ ಹಂಚಿಕೊಂಡಿದ್ದು, ‘ಭಾರತದ ಜನಪ್ರಿಯ ವ್ಯಕ್ತಿಯಾಗಿರುವ, ಯಶ್ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ನಟ ನವೀನ್ ಕುಮಾರ್ ಅವರನ್ನು ಭೇಟಿ ಮಾಡಿದೆ. ಮೂರು ಫಿಲ್ಮ್ ಫೇರ್ ಪ್ರಶಸ್ತಿ ವಿಜೇತರು ಆಗಿರುವ ಅವರು ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಕೇಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

    ಹಲವು ದಿನಗಳಿಂದ ಯಶ್ ಮತ್ತು ತಂಡ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದೆ. ಅಲ್ಲಿನ ಸಿನಿಮಾ ಉದ್ಯಮಿಗಳನ್ನು ಮತ್ತು ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ. ಅಲ್ಲದೇ, ಚಿತ್ರೀಕರಣ ಸ್ಥಳವನ್ನೂ ಅವರು ಹುಡುಕುತ್ತಿದ್ದಾರೆ ಎಂದು ಹೇಳಲಾಗತ್ತೆ. ನಂತರದ ಬೆಳವಣಿಗೆಯಲ್ಲಿ ಚಿತ್ರೀಕರಣ ಕೂಡ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ.

  • ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ವಿಕ್ರಾಂತ್ ರೋಣ (Vikrant Rona) ಸಿನಿಮಾದ ನಂತರ ಈವರೆಗೂ ಹೊಸ ಸಿನಿಮಾದ (New Cinema) ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಕಿಚ್ಚ ಸುದೀಪ್ (Sudeep). ವಿಕ್ರಾಂತ್ ರೋಣ ಚಿತ್ರ ರಿಲೀಸ್ ಆಗಿ ಹಲವು ತಿಂಗಳು ಕಳೆದರೂ, ಹೊಸ ಚಿತ್ರದ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಲೇ ಇದ್ದಾರೆ. ಈ ನಡುವೆ ಮೂರ್ನಾಲ್ಕು ನಿರ್ದೇಶಕರ ಹೆಸರೂ ಕೇಳಿ ಬಂದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಸುದೀಪ್ ನಟನೆಯ ಹೊಸ ಸಿನಿಮಾದ ಘೋಷಣೆ ಏಪ್ರಿಲ್ ನಲ್ಲಿ ನಡೆಯಲಿದೆ. ಅದು ಹಲವು ಭಾಷೆಗಳಲ್ಲಿ ಮೂಡಿ ಬರುವ ಚಿತ್ರವಾಗಲಿದೆ.

    ಕನ್ನಡದ ನಿರ್ದೇಶಕರಾದ ನಂದಕಿಶೋರ್ (Nandakishor), ಅನೂಪ್ ಭಂಡಾರಿ (Anoop Bhandari) ಸೇರಿದಂತೆ ಕೆಲ ನಿರ್ದೇಶಕರು ಈಗಾಗಲೇ ಸುದೀಪ್ ಗಾಗಿ ಕಥೆ ಬರೆದುಕೊಂಡು ಕೂತಿದ್ದಾರೆ. ಜೊತೆಗೆ  ಕಬಾಲಿ ಅಂತಹ ಭಾರೀ ಬಜೆಟ್ ಸಿನಿಮಾ ಮಾಡಿರುವ ಕಲೈಪುಲಿ ಎಸ್ ಥಾನು ಕೂಡ ಸುದೀಪ್ ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ಈ ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾವೇ ಏಪ್ರಿಲ್ ನಲ್ಲಿ ಘೋಷಣೆ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ವಿಜಯ್ (Vijay) ನಿರ್ದೇಶನದಲ್ಲಿ ಮೂಡಿ ಬರಲಿರುವ ಆ ಸಿನಿಮಾ ಕನ್ನಡ ಹಾಗೂ ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸವನ್ನೂ ಶುರು ಮಾಡಿದ್ದಾರಂತೆ ನಿರ್ದೇಶಕರು. ಈ ಸಿನಿಮಾದ ಮಾಹಿತಿಯನ್ನೂ ನಿರ್ಮಾಣ ತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗಲಿದ್ದು, ನೂರು ಕೋಟಿ ಬಜೆಟ್ ಚಿತ್ರ ಇದಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ವಿಜಯ್ ನಿರ್ದೇಶನದ ಸಿನಿಮಾ ನಂತರ ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲಾ ರಂಗ ಬಾಷಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಆ ನಂತರ ನಂದಕಿಶೋರ್ ಅವರಿಗೆ ಕಿಚ್ಚ ಡೇಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.

  • ರಜನಿಯ 170ನೇ ಚಿತ್ರ ಘೋಷಿಸಿದ ಲೈಕಾ ಪ್ರೊಡಕ್ಷನ್ : ನಿರ್ದೇಶಕ ಯಾರು ಗೊತ್ತಾ?

    ರಜನಿಯ 170ನೇ ಚಿತ್ರ ಘೋಷಿಸಿದ ಲೈಕಾ ಪ್ರೊಡಕ್ಷನ್ : ನಿರ್ದೇಶಕ ಯಾರು ಗೊತ್ತಾ?

    ಮಿಳಿನ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (Lyca Production) ರಜನಿಕಾಂತ್ (Rajinikanth) ನಟನೆಯ 170ನೇ ಸಿನಿಮಾವನ್ನು (New Cinema) ಘೋಷಣೆ ಮಾಡಿದೆ. ಲೈಕಾ ಸಂಸ್ಥೆಯ ಮುಖ್ಯಸ್ಥ ಸುಭಾಸ್ಕರನ್ ಹುಟ್ಟು ಹಬ್ಬದ ದಿನದಂದು ಈ ಮಹತ್ವದ ಸುದ್ದಿಯನ್ನು ಪ್ರಕಟಿಸಿದ್ದು, ಜೈ ಭೀಮ್ (Jai Bheem) ಚಿತ್ರ ಖ್ಯಾತಿಯ ಟಿ.ಜಿ ಜ್ಞಾನವೇಲ್ (Gnanavel) ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಿಕೊಂಡಿದೆ.

    ಸದ್ಯ ರಜನಿಕಾಂತ್ 169ನೇ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಜೈಲರ್ ಹೆಸರಿನಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಹಲವು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಕನ್ನಡದಿಂದ ಶಿವರಾಜ್ ಕುಮಾರ್, ಮಲಯಾಳಂನಿಂದ ಮೋಹನ್ ಲಾಲ್ ಸೇರಿದಂತೆ ಹಲವು ಹೆಸರಾಂತ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಮಂಗಳೂರು ಸೇರಿದಂತೆ ದೇಶದ ನಾನಾ ಕಡೆ ಚಿತ್ರೀಕರಣವಾಗಿದೆ. ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ 170ನೇ ಸಿನಿಮಾದಲ್ಲಿ ತೊಡಗಲಿದ್ದಾರೆ ರಜನಿ.

    ಜೈ ಭೀಮ್ ಸಿನಿಮಾದ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜ್ಞಾನವೇಲು, ಮತ್ತೊಂದು ಹೊಸ ಕಥೆಯೊಂದಿಗೆ ಲೈಕಾ ಪ್ರೊಡಕ್ಷನ್ ಜೊತೆ ಕೈ ಜೋಡಿಸಿದ್ದಾರೆ. ರಜನಿಕಾಂತ್ ಗಾಗಿಯೇ ಅವರು ಹೊಸ ಬಗೆಯ ಪಾತ್ರವನ್ನು ಬರೆದುಕೊಂಡಿದ್ದು, ಈ ಮೂಲಕ ಮತ್ತೊಂದು ಸಮಾಜಮುಖಿ ಸಿನಿಮಾವನ್ನು ನೀಡಲಿದ್ದಾರಂತೆ. ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

     

    ಲೈಕಾ ಪ್ರೊಡಕ್ಷನ್ ಈ ಮೊದಲು ರಜನಿಕಾಂತ್ ನಟನೆಯ ದರ್ಬಾರ್ ಮತ್ತು ಕಾಲ ಚಿತ್ರವನ್ನು ನಿರ್ಮಾಣ ಮಾಡಿದೆ. ಇದೇ ಮೊದಲ ಬಾರಿಗೆ ಜ್ಞಾನವೇಲ್ ಚಿತ್ರಕ್ಕೆ ಹಣ ಹೂಡುತ್ತಿದೆ. ಹೆಸರಾಂತ ಸಂಸ್ಥೆಯ ಜೊತೆಗೆ ಹೆಸರಾಂತ ನಟ ಮತ್ತು ಪ್ರತಿಭಾವಂತ ನಿರ್ದೇಶಕ ಒಟ್ಟಾಗಿರುವುದರಿಂದ ರಜನಿಯ 170ನೇ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಮೂಡಿದೆ.

  • ಹೋರಾಡುತ್ತಾ ಸತ್ತರೆ ನನಗೇನೂ ಬೇಸರವಿಲ್ಲ : ನಟ ಯಶ್

    ಹೋರಾಡುತ್ತಾ ಸತ್ತರೆ ನನಗೇನೂ ಬೇಸರವಿಲ್ಲ : ನಟ ಯಶ್

    ಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಜನರಿಗೆ ಯಶ್ ಖಡಕ್ಕೆ ಉತ್ತರವನ್ನೇ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಕೆಲವರು ನನ್ನ ವಿರುದ್ಧ ತಮಗೆ ತೋಚಿದಂತೆ ಮಾತನಾಡುತ್ತಿದ್ದಾರೆ. ಆ ಕುರಿತು ನನಗೇನೂ ಬೇಸರವಿಲ್ಲ. ಗೆಲುವನ್ನು ನಿಭಾಯಿಸುವುದಕ್ಕಿಂತ, ಹೊಸ ಹೊಸ ಗೆಲುವನ್ನು ಕಾಣುವುದು ನನಗಿಷ್ಟ. ಹೋರಾಡುತ್ತ ಮೃತಪಟ್ಟರೆ ನನಗೇನೂ ಬೇಸರವಿಲ್ಲ, ನಾನು ಹೋರಾಟದಲ್ಲೇ ಇದ್ದೀನಲ್ಲ ಅದು ಮುಖ್ಯವಾಗಬೇಕು’ ಎಂದಿದ್ದಾರೆ.

    ಕೆಜಿಎಫ್ 2 ಸಿನಿಮಾದ ನಂತರ ಅವರ ಮುಂದೆ ಹಲವಾರು ಪ್ರಶ್ನೆಗಳು ಎದುರಾದವಂತೆ. ಆ ಕುರಿತು ಅವರು ಮಾತನಾಡಿದ್ದಾರೆ. ಕೆಜಿಎಫ್ ಗೆಲುವಿನ ನಂತರ ಯಾಕೆ ನೀವು ಮತ್ತೆ ಸಿನಿಮಾ ಮಾಡುತ್ತಿಲ್ಲ. ಆ ಗೆಲುವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಿತ್ತು ಅಲ್ಲವಾ? ಕೆಜಿಎಫ್ 3 ಮಾಡದೇ ನಿಮಗೆ ವಿಧಿಯಿಲ್ಲ ಈ ರೀತಿಯ ಮಾತುಗಳನ್ನು ಆಡಿದ್ದಾರಂತೆ. ಆದರೆ, ಈ ಎಲ್ಲ ಪ್ರಶ್ನೆಗಳಿಗೂ ಮುಂದಿನ ದಿನಗಳಲ್ಲಿ ಉತ್ತರ ಸಿಗುವಂತೆ ಮಾಡುವೆ ಎಂದು ಯಶ್ ಹೇಳಿಕೊಂಡಿದ್ದಾರೆ.

    ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದರ ಕುರಿತು ಹಲವು ತಿಂಗಳಿಂದ ಚರ್ಚೆ ಮಾಡಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ರೀತಿಯ ಕ್ಲ್ಯಾರಿಟಿ ನೀಡಿಲ್ಲ. ಇತ್ತೀಚೆಗೆ ಬರುತ್ತಿರುವ ಸುದ್ದಿಗಳ ಪ್ರಕಾರ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರಂತೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ನಾಲ್ಕು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆಯಂತೆ. ಇದನ್ನೂ ಓದಿ:ಅಬ್ಬಬ್ಬಾ ಎನಿಸುವಷ್ಟಿದೆ ಸಮಂತಾ ಧರಿಸಿದ್ದ ಈ ಸೀರೆಯ ಬೆಲೆ?

    ಮೊನ್ನೆಯಷ್ಟೇ ತಮ್ಮ ಹೊಸ ಸಿನಿಮಾದ ಅಪ್ ಡೇಟ್ ಅನ್ನು ಅತೀ ಶೀಘ್ರದಲ್ಲೇ ನೀಡುವುದಾಗಿ ಯಶ್ ತಿಳಿಸಿದ್ದಾರೆ. ಹುಟ್ಟು ಹಬ್ಬದಂದು ಕೆಲವು ಮಾಹಿತಿಗಳನ್ನು ನೀಡಿರುವ ಅವರು, ದೊಡ್ಡ ಮಟ್ಟದಲ್ಲಿ ಪ್ಲ್ಯಾನ್ ಮಾಡಲಾಗುತ್ತಿದೆ. ನಿಮಗೆ ದೊಡ್ಡ ಸುದ್ದಿಯನ್ನೇ ನೀಡುತ್ತೇನೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆ ದೊಡ್ಡ ಸುದ್ದಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದು ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.

    ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಪೈನಲ್ ಆಗಬೇಕಿದ್ದು,ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. ಇದನ್ನೂ ಓದಿ: ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಮಾಡಬೇಕು: ಧನಂಜಯ್

    ಕೆ.ಎಂ ರಘು. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಈ ಬಾರಿಯ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ ಮೊದಲ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಶೇರ್ ಮಾಡಿಕೊಳ್ಳಲಿದೆ ಚಿತ್ರತಂಡ.

    ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ‘ಜಸ್ಟ್ ಪಾಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಮೊದಲಾದವರ ತಾರಾಬಳಗ ಸಿನಿಮಾದಲ್ಲಿದೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]