Tag: New Cinema

  • ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

    ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

    ನ್ನಡ ಸಿನಿಮಾ ರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  ಸುದೀಪ್ ಆರಂಭ ಫಲಕ ತೋರಿದರೆ,  ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು. ಈ ಸಮಾರಂಭಕ್ಕೆ ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

    ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.

    ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

    ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು. ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಬಾಲ್ಯದಲ್ಲೇ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದ ಟೈಟಲ್ ರಿವಿಲ್ ಮಾಡಿದ್ದರು ಪುನೀತ್ ರಾಜ್ ಕುಮಾರ್? ವೈರಲ್ ಆಯಿತು ಅಪ್ಪು ಫೋಟೋ

    ಬಾಲ್ಯದಲ್ಲೇ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದ ಟೈಟಲ್ ರಿವಿಲ್ ಮಾಡಿದ್ದರು ಪುನೀತ್ ರಾಜ್ ಕುಮಾರ್? ವೈರಲ್ ಆಯಿತು ಅಪ್ಪು ಫೋಟೋ

    ಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂದು ನಡೆದ ಸಿನಿಮಾ ಮುಹೂರ್ತ ಸಮಾರಂಭಕ್ಕೆ ನಿರ್ಮಾಪಕರಿಗೆ, ಹಿತೈಷಿಗಳಿಗೆ ಮತ್ತು ಸ್ವತಃ ತಾವು ಕೂಡ ತಮ್ಮ ಚಿತ್ರದ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಬಂದಿದ್ದರು ಉಪೇಂದ್ರ. ಸಿನಿಮಾದ ಟೈಟಲ್ ಅದೊಂದು ಧಾರ್ಮಿಕ ಚಿಹ್ನೆಯಂತೆಯೂ ಭಾಸವಾಗುವುದರಿಂದ ವಿಪರೀತ ಕುತೂಹಲ ಕೂಡ ಮುಡಿಸಿತ್ತು. ಈಗ ಆ ಟೈಟಲ್ ಬಗ್ಗೆ ಮತ್ತೊಂದು ಸುದ್ದಿ ಸರಿದಾಡುತ್ತಿದೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ತಮ್ಮ ಸಿನಿಮಾದ ಟೈಟಲ್ ಬಗ್ಗೆ ಉಪೇಂದ್ರ ಅವರು ನಿರ್ದಿಷ್ಟ ಅರ್ಥವನ್ನು ಹೇಳದೇ ಇದ್ದರೂ, ಸಿನಿಮಾ ನೋಡುಗರು ಮಾತ್ರ ಅದನ್ನು ಬೇರೆ ಬೇರೆ ರೀತಿಯಲ್ಲಿ ಕರೆಯುತ್ತಿದ್ದಾರೆ. ಒಬ್ಬರು ಯು ಮತ್ತು ಐ ಅಂದರೆ, ಇನ್ನೂ ಕೆಲವರು ದೇವರ ನಾಮ ಎಂದೂ ಹೇಳುತ್ತಾರೆ. ಇನ್ನೂ ಕೆಲವರು ಕುದುರೆ ಲಾಳ ಎಂದೂ ಬಣ್ಣಿಸುತ್ತಿದ್ದಾರೆ. ಈ ಟೈಟಲ್ ಅನ್ನು ಪುನೀತ್ ರಾಜ್ ಕುಮಾರ್ ಬಾಲ್ಯದಲ್ಲಿರುವಾಗಲೇ ರಿವಿಲ್ ಮಾಡಿದ್ದರು ಎನ್ನುವುದು ಅಪ್ಪು ಬಾಲ್ಯದ ಫೋಟೋ ನೆನಪಿಸುತ್ತಿದೆ ಮತ್ತು ಅದು ವೈರಲ್ ಆಗುತ್ತಿದೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಎರಡ್ಮೂರು ವರ್ಷ ಇರುವಾಗ ಪುನೀತ್ ರಾಜ್ ಕುಮಾರ್ ಅವರು ತಮ್ಮ ಹಣೆಯ ಮೇಲೆ ನಾಮವನ್ನು ಹಾಕಿಕೊಂಡಿದ್ದಾರೆ. ಆ ಫೋಟೋಗೂ ಮತ್ತು ಇವತ್ತು ಉಪೇಂದ್ರ ಕಾಣಿಸಿಕೊಂಡ ರೀತಿಗೂ ಹೋಲಿಕೆ ಆಗುವುದರಿಂದ ನಿಮಗಿಂತ ಮೊದಲೇ ಅಪ್ಪು ನಿಮ್ಮ ಸಿನಿಮಾದ ಟೈಟಲ್ ರಿವಿಲ್ ಮಾಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಇದೇ ಫೋಟೋವನ್ನು ನಿರ್ಮಾಪಕ ಕೆ.ಪಿ ಶ್ರೀಕಾಂತ್ ಕೂಡ ಟ್ವಿಟರ್ ನಲ್ಲಿ ಶೇರ್ ಮಾಡಿದ್ದು, ಅಪ್ಪು ನಮ್ಮೊಂದಿಗೆ ನೀವು ಯಾವಾಗಲೂ ಇರುತ್ತೀರಿ ಎಂದು ಬರೆದುಕೊಂಡಿದ್ದಾರೆ.

  • ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ಅತಿಥಿಗಳಾಗಿ ಹಿರಿಯ ನಟರಾದ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಆಗಮಿಸಿದ್ದರು. ಸಿನಿಮಾ ಮತ್ತು ಉಪೇಂದ್ರ ಕುರಿತಾಗಿ ಅತಿಥಿಗಳು ಮನದುಂಬಿ ಹಾರೈಸಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಶಿವರಾಜ್ ಕುಮಾರ್ ಮಾತನಾಡಿ, “ನಾನು ಉಪ್ಪಿಯನ್ನು ಸಾಕಷ್ಟು ದಿನದಿಂದ ನೋಡಿದ್ದೀನಿ. ಉಪೇಂದ್ರ ಮತ್ತು ನಾನು ಒಂದು ರೀತಿಯಲ್ಲಿ ಬಾಯ್ ಫ್ರೆಂಡ್ ತರಹ. ಉಪೇಂದ್ರ ನಿರ್ದೇಶನದ ನಾನು ನಟಿಸಿರುವ ಓಂ ಸಿನಿಮಾ ನನ್ನ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್. ಏಳು ವರ್ಷದ ನಂತರ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಾಗಾಗಿ ಸಿನಿಮಾ ವಿಭಿನ್ನವಾಗಿಯೇ ಇರಲಿದೆ’ ಎಂದರು. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    “ನಾನು ಇವತ್ತು ವೇದಿಕೆಯ ಮೇಲೆ  ಉಪ್ಪಿ ಅಭಿಮಾನಿಯಾಗಿ ಕೂತಿದ್ದೇನೆ. ಉಪೇಂದ್ರ ಅವರು ಸಿನಿಮಾ ನಿರ್ದೇಶನ ಮಾಡುತ್ತಿರುವುದು ಖುಷಿಯಾಗಿದೆ. ಅದರಲ್ಲೂ ಕುದುರೆ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ಮೆಲೆ ಕುದುರೆ ಓಟು ಶುರು. ಆದಷ್ಟು ಬೇಗ ಸಿನಿಮಾ ಮುಗಿಸಿ, ನಾನಂತೂ ನೋಡಲು ಕಾಯುತ್ತಿದ್ದೇನೆ’ ಎಂದು ಕಿಚ್ಚ ಸುದೀಪ್. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ‘ಉಪೇಂದ್ರ ಅವರು ಕಾಮಾನ್ ಮ್ಯಾನ್ ಪರವಾಗಿ ಸಿನಿಮಾ ಮಾಡುತ್ತಲೇ ಅವರನ್ನು ಎಚ್ಚರಿಸುತ್ತಾರೆ. ಈ ಪೋಸ್ಟರ್ ನಲ್ಲಿ ಎವಲ್ಯೂಷನ್ ಥಿಯೇರಿ ಇದೆ. ಅಲ್ಲಿಂದಲೇ ಕತೆ ಶುರುವಾಗುತ್ತೆ ಅನಿಸತ್ತೆ. ಒಳ್ಳೆಯ ಸಿನಿಮಾ ಬರಲಿದೆ’ ಎಂದು ಡಾಲಿ ಧನಂಜಯ್. ಇದನ್ನೂ ಓದಿ : ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    ಉಪೇಂದ್ರ ಅವರು ಸಿನಿಮಾಗಳನ್ನು ನೋಡುತ್ತಲೇ ಬಂದವನು ನಾನು. ಬ್ಲಾಕ್ ಟಿಕೆಟ್ ತಗೊಂಡು ಸಿನಿಮಾ ನೋಡುತ್ತಿದ್ದೆ ಎಂದು ಉಪ್ಪಿ ಮೇಲಿನ ಅಭಿಮಾನವನ್ನು ಹೇಳಿಕೊಂಡರು ವಸಿಷ್ಠ ಸಿಂಹ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಮನೋಹರ್ ನಾಯ್ಡು, ಲಹರಿ ವೇಲು, ಕೆ.ಪಿ. ಶ್ರೀಕಾಂತ್ ಸೇರಿದಂತೆ ಹಲವರು ಹಾಜರಿದ್ದರು.

  • ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು ಮತ್ತು ಸಹ ನಿರ್ಮಾಪಕರಾದ ನವೀನ್ ಮನೋಹರನ್ ಸೇರಿದಂತೆ ಸಿನಿಮಾದ ತಂಡದ ಬಹುತೇಕರು ತಮ್ಮ ಸಿನಿಮಾದ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಆಗಮಿಸಿದ್ದರು.

    ಬೆಳಗ್ಗೆ ಎಂಟು ಗಂಟೆಗೆ ಸ್ಪೆಷಲ್ ಗೆಟಪ್ ನಲ್ಲಿ ಉಪೇಂದ್ರ ಮತ್ತು ಟೀಮ್ ಎಂಟ್ರಿ ಕೊಟ್ಟು ಕುತೂಹಲಕ್ಕೆ ಕಾರಣವಾದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಮುಂದೆ ಉಪ್ಪಿ ಅಭಿಮಾನಿಗಳು ಸೇರಿಕೊಂಡು, ಅವರು ಕೂಡ ತಮ್ಮ ನೆಚ್ಚಿನ ನಟನ ಸಿನಿಮಾ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಉಪೇಂದ್ರ ಅವರಿಗೆ ಜೈಕಾರ ಹಾಕುತ್ತಿದ್ದರು. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಈ ಚಿತ್ರಕ್ಕೆ ವಿಚಿತ್ರ ರೀತಿಯಲ್ಲಿ ಟೈಟಲ್ ಇಟ್ಟಿದ್ದಾರೆ ಉಪೇಂದ್ರ. ಅದನ್ನು ಧಾರ್ಮಿಕ ಚಿಹ್ನೆ (ನಾಮ) ಎಂದಾದರೂ, ಕರೆಯಬಹುದು ‘ಯು’ ಮತ್ತು ‘ಐ’ ಎಂದಾದರು ಅಂದುಕೊಳ್ಳಬಹುದು. ನೀನು ಮತ್ತು ನಾನು ಅಂತಾದರೂ ಊಹಿಸಿಕೊಳ್ಳಬಹುದು. ಈ ಚಿತ್ರಕ್ಕೆ ಏನೆಂದು ಕರೆಯಬಹುದು ಎನ್ನುವುದಕ್ಕೆ ಪ್ರೇಕ್ಷಕರಿಗೆ ಬಿಟ್ಟು ತಮ್ಮ ಪಾಡಿಗೆ ತಾವು ಇಂದು ಚಿತ್ರಕ್ಕೆ ಮುಹೂರ್ತ ಮಾಡಿದ್ದಾರೆ ನಿರ್ದೇಶಕರು.  ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಈ ಸಮಾರಂಭಕ್ಕೆ ಹಿರಿಯ ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಅತಿಥಿಗಳಾಗಿ ಆಗಮಿಸಿದ್ದರು. ನೆಚ್ಚಿನ ನಟ ಉಪೇಂದ್ರ ಅವರ ಬಗ್ಗೆ ಅತಿಥಿಗಳೆಲ್ಲ ಮಾತನಾಡಿದರು.

  • ಧಾಕಡ್ ಸೋಲಿನ ಬೆನ್ನಲ್ಲೆ ‘ಎಮರ್ಜೆನ್ಸಿ’ ಘೋಷಿಸಿದ ಕಂಗನಾ ರಣಾವತ್ : ಇಂದಿರಾ ಗಾಂಧಿ ನೆನಪಿನ ಚಿತ್ರವಾ?

    ಧಾಕಡ್ ಸೋಲಿನ ಬೆನ್ನಲ್ಲೆ ‘ಎಮರ್ಜೆನ್ಸಿ’ ಘೋಷಿಸಿದ ಕಂಗನಾ ರಣಾವತ್ : ಇಂದಿರಾ ಗಾಂಧಿ ನೆನಪಿನ ಚಿತ್ರವಾ?

    ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ ಅವರನ್ನು ಧಾಕಡ್ ಸೋಲು ನಿದ್ದೆಗೆಡಿಸಿದೆ. ಅವರ ವೃತ್ತಿ ಜೀವನದಲ್ಲೇ ಇಂಥದ್ದೊಂದು ಸೋಲು ನೋಡಿರಲಿಲ್ಲ ಎಂದು ಬಣ್ಣಿಸಲಾಗುತ್ತಿದೆ. ಹಾಕಿದ ಬಂಡವಾಳವಲ್ಲ, ಕಂಗನಾ ರಣಾವತ್ ಅವರಿಗೆ ಖರೀದಿಸಿದ್ದ ಕಾಸ್ಟ್ಯೂಮ್ ಹಣವೂ ವಾಪಸ್ಸು ಬಂದಿಲ್ಲವೆಂದು ಬಾಲಿವುಡ್ ಬಾಕ್ಸ್ ಆಫೀಸ್ ಅಣಕವಾಡುತ್ತಿದೆ.

    ಧಾಕಡ್ ಸೋಲನ್ನು ಒಪ್ಪಿಕೊಂಡಂತಿರುವ ಕಂಗನಾ, ಅದರಿಂದ ಆಚೆ ಬರುವುದಕ್ಕೆ ತಮ್ಮದೇ ನಿರ್ದೇಶನದ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘೋಷಣೆ ಆಗಿರುವ ‘ಎಮರ್ಜೆನ್ಸಿ’ ಸಿನಿಮಾಗೆ ಅವರು ಚಾಲನೆ ನೀಡಿದ್ದಾರೆ. ಜೊತೆಗೆ ಈ ಸಿನಿಮಾದ ಬಗ್ಗೆ ಸಾಕಷ್ಟು ಎಚ್ಚರಿಕೆ ತಗೆದುಕೊಂಡು ಆಕ್ಷನ್ ಕಟ್ ಹೇಳಲು ಹೊರಟಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಧಾಕಡ್ ಸೋಲಿಗೆ ನಾನಾ ಕಾರಣಗಳನ್ನು ಕೊಡಬಹುದು. ಆದರೆ, ಎಮರ್ಜೆನ್ಸಿ ಏನಾದರೂ ಕೈ ಹಿಡಿಯದೇ ಹೋದರೆ, ಎಲ್ಲ ಜವಾಬ್ದಾರಿಯನ್ನೂ ಒಬ್ಬರೇ ಹೊರಬೇಕು. ಹಾಗಾಗಿ ಶೂಟಿಂಗ್ ಮುನ್ನವೇ ಎಲ್ಲ ರೀತಿಯ ತಯಾರಿ ಮಾಡಿಕೊಂಡೇ ಅಖಾಡಕ್ಕೆ ಇಳಿಯಲಿದ್ದಾರಂತೆ. ಸ್ಕ್ರಿಪ್ಟ್, ತಾರಾಗಣ ಆಯ್ಕೆ, ಗೆಲುವಿಗೆ ಬೇಕಾದ ಸಿದ್ಧ ಸೂತ್ರಗಳನ್ನು ಮುಂದಿಟ್ಟುಕೊಂಡೇ ಈ ಬಾರಿ ಸಿನಿಮಾ ಮಾಡುತ್ತಾರಂತೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಅಂದಹಾಗೆ ಎಮರ್ಜೆನ್ಸಿ ಹೊಸ ಬಗೆಯ ಸಿನಿಮಾವಂತೆ. ಈ ಸಿನಿಮಾದ ಟೈಟಲ್ ಕೇಳಿದಾಕ್ಷಣ ಇದು ಇಂದಿರಾ ಗಾಂಧಿ ಅವರ ಕುರಿತಾದ ಚಿತ್ರವಾ ಎನ್ನುವ ಅನುಮಾನ ಮೂಡುವುದು ಸಹಜ. ಇದು ಅವರ ಕುರಿತಾದ ಚಿತ್ರವಲ್ಲ ಎಂದು ಈಗಾಗಲೇ ಕಂಗನಾ ಹೇಳಿದ್ದಾರೆ. ಆದರೆ, ಎಮರ್ಜೆನ್ಸಿ ವೇಳೆಯ ಮೂಡ್ ಅನ್ನು ಈ ಚಿತ್ರ ಕಟ್ಟಿಕೊಡಲಿದೆಯಂತೆ.

  • 35 ಕೋಟಿ ಬಜೆಟ್ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ : ಕ್ರಾಂತಿಕಾರಿ ಪಾತ್ರದಲ್ಲಿ ಯಂಗ್ ರೆಬಲ್

    35 ಕೋಟಿ ಬಜೆಟ್ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ : ಕ್ರಾಂತಿಕಾರಿ ಪಾತ್ರದಲ್ಲಿ ಯಂಗ್ ರೆಬಲ್

    ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಅಭಿಷೇಕ್ ಅಂಬರೀಶ್ ಅವರ ಎರಡು ಚಿತ್ರಗಳ ಫಸ್ಟ್ ಲುಕ್ ರಿಲೀಸ್ ಆಗಿವೆ. ಒಂದು ಸಿನಿಮಾಗೆ ಪೈಲ್ವಾನ್ ಚಿತ್ರ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡುತ್ತಿದ್ದರೆ, ಮತ್ತೊಂದು ಸಿನಿಮಾಗೆ ಅಯೋಗ್ಯ ಖ್ಯಾತಿಯ ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗ ಮಹೇಶ್ ಕುಮಾರ್ ಸಿನಿಮಾನೇ ಹೆಚ್ಚು ಸದ್ದು ಮಾಡುತ್ತಿದೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಸಿನಿಮಾ ಇದಾಗಿದ್ದು,  ಈ ಚಿತ್ರದಲ್ಲಿ ಅಭಿಷೇಕ್ ಕ್ರಾಂತಿಕಾರಿಯೊಬ್ಬನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾದಲ್ಲಿ ಯುದ್ಧ ಸನ್ನಿವೇಶ ಕೂಡ ಇದೆಯಂತೆ. ಹಾಗಾಗಿ ಅಂದಾಜು 35 ಕೋಟಿ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದೆ ಎನ್ನುವ ಸುದ್ದಿಯಿದೆ. ನಿನ್ನೆ ಫಸ್ಟ್ ಲುಕ್ ರಿಲೀಸ್ ಆಗಿದ್ದರೂ, ಈ ಸಿನಿಮಾಗೆ ಅಕ್ಟೋಬರ್ 3 ರಂದು ಅಧಿಕೃತ ಚಾಲನೆ ಸಿಗಲಿದೆ. ಅಂದು ಅಭಿಷೇಕ್ ಹುಟ್ಟು ಹಬ್ಬ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಈ ಚಿತ್ರಕ್ಕಾಗಿ 135 ದಿನಗಳ ಶೂಟಿಂಗ್ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ ಮಹೇಶ್. ಒಂದು ಕಾಲ ಘಟ್ಟದಲ್ಲಿ ನಡೆಯುವ ಹೋರಾಟಗಾರನೊಬ್ಬನ ಕಥೆ ಇದಾಗಿದ್ದರಿಂದ, ಅದ್ಧೂರಿ ಬಜೆಟ್ ಮತ್ತು ಹೆಸರಾಂತ ತಾರಾಗಣ ಈ ಚಿತ್ರದಲ್ಲಿ ಇರಲಿದೆಯಂತೆ. ಮದಗಜ ಸಿನಿಮಾದ ನಂತರ ಮಹೇಶ್ ಕುಮಾರ್ ಈ ಸಿನಿಮಾ ಕೈಗೆತ್ತಿಕೊಂಡಿದ್ದರಿಂದ, ಮದಗಜ ಸಿನಿಮಾದಷ್ಟೇ ಅದ್ಧೂರಿತನ ಇರಲಿದೆಯಂತೆ.

  • ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ತ್ತೆ ನಿರ್ದೇಶಕನ ಕ್ಯಾಪ್ ಧರಿಸಿ ಅಭಿಮಾನಿಗಳ ಮುಂದೆ ನಿಂತಿದ್ದಾರೆ ಉಪೇಂದ್ರ. ಈ ಬಾರಿಯೂ ಅವರು ಪ್ರೇಕ್ಷಕನ ಮೆದುಳಿಗೆ ಕೈ ಹಾಕಿದ್ದು, ಈಗಾಗಲೇ ರಿಲೀಸ್ ಆದ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಿನಿಮಾದ ಟೈಟಲ್ ಇಂಥದ್ದೇ ಅಂತ ಹೇಳುವುದು ಕಷ್ಟ. ಅಲ್ಲದೇ, ನಾನಾ ರೀತಿಯ ಅರ್ಥಗಳು ಹುಟ್ಟುವಂತೆ ಫಸ್ಟ್ ಲುಕ್ ಇತ್ತು. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಇದೀಗ ಅದೇ ಸಿನಿಮಾದ ಮುಹೂರ್ತ ಬೆಂಗಳೂರಿನ ಬನ್ನಿ ಮಹಾಂಕಾಳಿ ದೇವಸ್ಥಾನವೊಂದರಲ್ಲಿ ಜೂ.3 ರಂದು ನಡೆಯಲಿದೆ. ಅಂದು ಹಲವು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರಂತೆ ಉಪ್ಪಿ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲೇ ತಯಾರಾಗುತ್ತಿರುವುದರಿಂದ ಭಾರೀ ಬಜೆಟ್ ನಲ್ಲೇ ನಿರ್ಮಾಣವಾಗಲಿದೆಯಂತೆ. ಎಲ್ಲ ಭಾಷೆಯ ನೋಡುಗರಿಗೂ ಕನೆಕ್ಟ್ ಆಗುವಂತಹ ಕಥೆಯನ್ನೇ ಈ ಚಿತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದಾರಂತೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಮುಹೂರ್ತದ ದಿನದಂದು ಸರ್ಪ್ರೈಸ್ ಕೊಡುವುದಕ್ಕಾಗಿ ಉಪ್ಪಿಯ ಲುಕ್ ಟೆಸ್ಟ್ ಕೂಡ ನಡೆದಿದ್ದು, ಸದ್ಯ ಉಪೇಂದ್ರ ಅವರು ಹೈದರಾಬಾದ್ ನಲ್ಲಿ ಬೀಡುಬಿಟ್ಟಿದ್ದಾರೆ. ಲುಕ್ ಟೆಸ್ಟ್ ಮತ್ತು ಫೋಟೋ ಶೂಟ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ಸಿನಿಮಾದಲ್ಲೂ ಉಪ್ಪಿಯದ್ದು ವಿಭಿನ್ನ ರೀತಿಯ ಗೆಟಪ್ ಇರಲಿದೆಯಂತೆ. ಹಾಗಾಗಿ ಹಲವು ಬಗೆಯಲ್ಲಿ ಲುಕ್ ಟೆಸ್ಟ್ ನಡೆದಿದೆಯಂತೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಲಹರಿ ಫಿಲ್ಮ್ಸ್‍ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ನಲ್ಲೂ ಈ ಸಿನಿಮಾ ತಯಾರಾಗಲಿದೆಯಂತೆ. ಉಪೇಂದ್ರ ಅವರ ಹೊರತಾಗಿ, ಸಿನಿಮಾದಲ್ಲಿ ಯಾರೆಲ್ಲ ತಾರೆಯರು ಇರಲಿದ್ದಾರೆ ಎನ್ನುವುದು ಜೂ.3 ರನಂತರ ಗೊತ್ತಾಗಲಿದೆ. ಅಷ್ಟೂ ಭಾಷೆಗೂ ಸಲ್ಲುವಂತಹ ಕಲಾವಿದರ ಆಯ್ಕೆ ಕೂಡ ಆಗಿದೆಯಂತೆ. ಸಿನಿಮಾ ಮುಹೂರ್ತದ ದಿನದಂದು ಹಲವು ವಿಚಾರಗಳನ್ನು ಉಪ್ಪಿ ಹಂಚಿಕೊಳ್ಳಲಿದ್ದಾರೆ.

  • ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಅಭಿಷೇಕ್ ಅಂಬರೀಶ್ ನಟನೆಯ ಎರಡು ಸಿನಿಮಾಗಳ ಫಸ್ಟ್ ಲುಕ್ ರಿಲೀಸ್ ಆಗಿವೆ. ಒಂದು ಸಿನಿಮಾವನ್ನು ಪೈಲ್ವಾನ್ ಸಿನಿಮಾ ಖ್ಯಾತಿಯ ಕೃಷ್ಣ ನಿರ್ದೇಶನ ಮಾಡುತ್ತಿದ್ದರೆ, ಮತ್ತೊಂದು ಸಿನಿಮಾವನ್ನು ಅಯೋಗ್ಯ ಚಿತ್ರ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ : ಕರಣ್ ಜೋಹಾರ್ ಬರ್ತಡೇ ಪಾರ್ಟಿಗೆ ‘ಬಾಡಿಗಾರ್ಡ್ಸ್ ‘ ನಿರ್ಬಂಧ

    ಕೃಷ್ಣ ನಿರ್ದೇಶನ ಮಾಡುತ್ತಿರುವ ಸಿನಿಮಾಗೆ ಕಾಳಿ ಎಂದು ಹೆಸರಿಡಲಾಗಿದೆ. ಆದರೆ, ಮಹೇಶ್ ಕುಮಾರ್ ತಮ್ಮ ಚಿತ್ರಕ್ಕೆ ಇನ್ನೂ ಟೈಟಲ್ ಇಟ್ಟಿಲ್ಲ. ಹಾಗಾಗಿ ಇಂದು ಬಿಡುಗಡೆಯಾದ ಫಸ್ಟ್ ಲುಕ್ ನಲ್ಲಿ ಎಎ 04 ಎಂದಷ್ಟೇ ನಮೂದಿಸಿದ್ದಾರೆ. ಅಂದರೆ, ಅಭಿಷೇಕ್ ಅವರ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾ ಕೂಡ ವಿಭಿನ್ನ ಕಥೆಯನ್ನು ಒಳಗೊಂಡಿದೆ ಎಂದಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

    ಇಂದು ಬಿಡುಗಡೆ ಆಗಿರುವ ‘ಎಎ 04’ ಸಿನಿಮಾದ ಫಸ್ಟ್ ಲುಕ್ ರಕ್ತಸಿಕ್ತ ಮುಖವನ್ನು ಒಳಗೊಂಡಿದೆ. ಕೇವಲ ಅರ್ಧ ಮುಖ ಮಾತ್ರ ಕಾಣುತ್ತಿದೆ. ಕ್ರೌರ್ಯವೇ ಮುಖದಲ್ಲಿ ಎದ್ದು ಕಾಣುತ್ತಿದೆ. ಹಾಗಾಗಿ ಇದೊಂದು ರಕ್ತಕ್ರಾಂತಿಯ ಚಿತ್ರವಾ ಎನ್ನುವ ಕುತೂಹಲ ಕೂಡ ಮೂಡಿದೆ. ಸದ್ಯಕ್ಕೆ ಈ ಸಿನಿಮಾ ಟೇಕಾಫ್ ಆಗದೇ ಇದ್ದರೂ, ವಿಭಿನ್ನ ರೀತಿಯಲ್ಲಿ ಲಾಂಚ್ ಮಾಡಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರಂತೆ. ಇದನ್ನೂ ಓದಿ : ಐಪಿಎಲ್ ಫಿನಾಲೆಯಲ್ಲಿ ಅಮೀರ್ ಖಾನ್ ಸಿನಿಮಾ ‘ಲಾಲ್ ಸಿಂಗ್ ಛಡ್ಡಾ’ ಟ್ರೈಲರ್ ರಿಲೀಸ್

    ಮಹೇಶ್ ಕುಮಾರ್ ಈ ಹಿಂದೆ ನೀನಾಸಂ ಸತೀಶ್ ಗಾಗಿ ಒಂದು ಸಿನಿಮಾ, ಶ್ರೀಮುರುಳಿಗಾಗಿ ಒಂದು ಸಿನಿಮಾ ಮಾಡಿದ್ದಾರೆ. ಇದು ಅವರ ಮೂರನೇ ಸಿನಿಮಾ. ಮೂರನೇ ಚಿತ್ರಕ್ಕೆ ಅಭಿಷೇಕ್ ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಮುಹೂರ್ತ ಆಗಲಿದೆಯಂತೆ. ಅಲ್ಲಿಂದಲೇ ತಮ್ಮ ಸಿನಿಮಾದ ಕೆಲಸವನ್ನು ಅಧಿಕೃತವಾಗಿ ಶುರು ಮಾಡಲಿದ್ದಾರಂತೆ ನಿರ್ದೇಶಕರು.

  • ಕನ್ನಡಕ್ಕೆ ಬರ್ತಾ ಇದ್ದೀನಿ ಅಂದ ಜ್ಯೂನಿಯರ್ ಎನ್.ಟಿ.ಆರ್

    ಕನ್ನಡಕ್ಕೆ ಬರ್ತಾ ಇದ್ದೀನಿ ಅಂದ ಜ್ಯೂನಿಯರ್ ಎನ್.ಟಿ.ಆರ್

    ರ್.ಆರ್.ಆರ್ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೂ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿರುವ ಜ್ಯೂನಿಯರ್ ಎನ್.ಟಿ.ಆರ್ ಇದೀಗ ಬ್ಯಾಕ್ ಟು ಬ್ಯಾಕ್ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಾಗಂತ ನೇರವಾಗಿ ಈ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗದೇ ಇದ್ದರೂ, ಮೂಲ ಸಿನಿಮಾಗಳ ಜೊತೆಗೆ ಕನ್ನಡದಲ್ಲೂ ಅವುಗಳು ಡಬ್ ಆಗಿ ಬಿಡುಗಡೆ ಆಗಲಿವೆ. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಯಶಸ್ವಿಯಾದ ನಂತರ ಬಹುತೇಕ ಬಹುಕೋಟಿ ಬಜೆಟ್ ಚಿತ್ರಗಳು ಕನ್ನಡ ಭಾಷೆಗೂ ಡಬ್ ಮಾಡಿ ಬಿಡುಗಡೆ ಮಾಡುತ್ತಿದ್ದಾರೆ. ಹೀಗಾಗಿ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಎರಡು ಚಿತ್ರಗಳು ಇದೀಗ ಕನ್ನಡಕ್ಕೆ ಡಬ್ ಆಗಲಿವೆ. ಮೊನ್ನೆಯಷ್ಟೇ ಎರಡೂ ಸಿನಿಮಾಗಳ ಫಸ್ಟ್ ಲುಕ್ ಮತ್ತು ಟೀಸರ್ ಅನ್ನು ಬಿಡುಗಡೆ ಮಾಡಿವೆ ಆಯಾ ಚಿತ್ರತಂಡ. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಒಂದು ಚಿತ್ರವನ್ನು ಕೋರಟಾಲ ಶಿವ ನಿರ್ದೇಶನ ಮಾಡುತ್ತಿದ್ದರೆ, ಮತ್ತೊಂದು ಸಿನಿಮಾವನ್ನು ಕನ್ನಡದವರೇ ಆದ ಪ್ರಶಾಂತ್ ನೀಲ್ ಡೈರೆಕ್ಷನ್ ಮಾಡುತ್ತಿದ್ದಾರೆ. ಎರಡೂ ಚಿತ್ರಗಳ ಫಸ್ಟ್ ಲುಕ್ ಜ್ಯೂನಿಯರ್ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗಿವೆ. ಅದರಲ್ಲೂ ಕೋರಟಾಲ ಶಿವ ನಿರ್ದೇಶನದ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಸ್ವತಃ ಜೂ.ಎನ್.ಟಿ.ಆರ್ ಅವರೇ ಕನ್ನಡದಲ್ಲಿ ಡೈಲಾಗ್ ಹೊಡೆದಿದ್ದಾರೆ. ಅವರಿಗೆ ಅಲ್ಪಸ್ವಲ್ಪ ಕನ್ನಡವೂ ಬರುವುದರಿಂದ, ಚೆನ್ನಾಗಿಯೇ ಕನ್ನಡದಲ್ಲಿ ಡಬ್ ಮಾಡಿದ್ದಾರೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಕೆಲವು ಬಾರಿ ಧೈರ್ಯಕ್ಕೆ ಕೂಡ ಗೊತ್ತಿರಲ್ಲ, ಅವಶ್ಯಕತೆ ಮೀರಿ ತಾನಿರಕೂಡದು ಅಂತ. ಆಗ ಭಯಕ್ಕೆ ಗೊತ್ತಾಗ್ಬೇಕು ತಾನು ಬರಬೇಕಾದ ಸಮಯ ಬಂದಿದೆ ಅಂತ. ಬರ್ತಾ ಇದ್ದೀನಿ.. ಎನ್ನುವ ಖಡಕ್ ಡೈಲಾಗ್ ಅನ್ನು ಜ್ಯೂನಿಯರ್ ಹೊಡೆದಿದ್ದಾರೆ. ಇದು ಇವರ 30ನೇ ಸಿನಿಮಾವಾದರೆ, 31ನೇ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ.

  • ಕೆಜಿಎಫ್ 2 ಚಿತ್ರದ 50ನೇ ದಿನಕ್ಕೆ ಯಶ್ ನಟನೆಯ ಹೊಸ ಸಿನಿಮಾ ಅನೌನ್ಸ್?

    ಕೆಜಿಎಫ್ 2 ಚಿತ್ರದ 50ನೇ ದಿನಕ್ಕೆ ಯಶ್ ನಟನೆಯ ಹೊಸ ಸಿನಿಮಾ ಅನೌನ್ಸ್?

    ಕೆಜಿಎಫ್ 2 ಸಿನಿಮಾ ಯಶಸ್ಸಿನ ನಂತರ ಎಲ್ಲರ ಚಿತ್ರ ಯಶ್ ಅವರ ಮುಂದಿನ ಸಿನಿಮಾದ ಬಗ್ಗೆ ನೆಟ್ಟಿದೆ. ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಎರಡು ಚಿತ್ರಗಳನ್ನು ಘೋಷಿಸಿ ಆಗಿದೆ. ಈಗಾಗಲೇ ಅವರು ಸಲಾರ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಮುಗಿದ ನಂತರ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎನ್ನುವುದು ಮೊನ್ನೆಯಷ್ಟೇ ನಿಕ್ಕಿ ಆಗಿದೆ. ಆದರೆ, ಯಶ್ ನಡೆ ಮಾತ್ರ ಭಾರೀ ಕುತೂಹಲ ಮೂಡಿಸಿದೆ. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಕೆಜಿಎಫ್ 2 ಸಿನಿಮಾದ ನಿರ್ಮಾಪಕರು ನಾಲ್ಕು ಸಿನಿಮಾಗಳನ್ನು ಘೋಷಿಸಿದ್ದರೆ, ಪ್ರಶಾಂತ್ ನೀಲ್ ಎರಡು ಚಿತ್ರಗಳನ್ನೂ ಈಗಾಗಲೇ ಅನೌನ್ಸ್ ಮಾಡಿದ್ದಾರೆ. ಅಲ್ಲದೇ, ಮತ್ತೊಂದು ಚಿತ್ರವನ್ನು ಶ್ರೀಮುರುಳಿ ಚಿತ್ರ ಮಾಡುವುದಾಗಿ ಹೇಳಿದ್ದಾರೆ. ಆದರೆ, ಯಶ್ ಮಾತ್ರ ತಮ್ಮ ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಗುಟ್ಟನ್ನು ಮಾತ್ರ ಇನ್ನೂ ಬಿಟ್ಟುಕೊಟ್ಟಿಲ್ಲ. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ ನಿರ್ದೇಶಕ ನರ್ತನ್ ಜತೆ ಯಶ್ ಸಿನಿಮಾ ಮಾಡಬೇಕಿತ್ತು. ಆದರೆ, ಅದು ತಡವಾಗುತ್ತಲೇ ಬರುತ್ತಿದೆ. ಬಹುಶಃ ಯಶ್ ಅವರ ಮುಂದಿನ ಸಿನಿಮಾ ಇದೇ ಎನ್ನಲಾಗುತ್ತಿದೆ. ಈಗಾಗಲೇ ನರ್ತನ್ ಮತ್ತು ಟೀಮ್ ಹಲವು ಬದಲಾವಣೆಗಳ ಜತೆ ಕಥೆಯನ್ನು ರೆಡಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಯಶ್ ಕೂಡ ಕಥೆ ಹೆಣೆಯುವಲ್ಲಿ ತಮ್ಮ ಸಲಹೆಗಳನ್ನು ನೀಡಿದ್ದಾರೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಈ ಎಲ್ಲವುಗಳ ನಡುವೆ ಕೆಜಿಎಫ್ 2 ರಿಲೀಸ್ ಆಗಿ 50 ದಿನ ಪೂರೈಸುವ ಸಂದರ್ಭದಲ್ಲಿ ಯಶ್ ತಮ್ಮ ಮುಂದಿನ ಚಿತ್ರವನ್ನು ಅನೌನ್ಸ್ ಮಾಡಲಿದ್ದಾರೆ ಎನ್ನುವುದು ಈಗಿರುವ ಲೆಟೆಸ್ಟ್ ಮಾಹಿತಿ. ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕೆವಿಎನ್ ಪ್ರೊಡಕ್ಷನ್ ಚಿತ್ರವನ್ನು ನಿರ್ಮಾಣ ಮಾಡಲಿದೆ ಎನ್ನುವುದು ಸಿಕ್ಕಿರುವ ಮಾಹಿತಿ. ಆದರೆ, ಈ ಕುರಿತು ಈವರೆಗೂ ಯಾರಿಗೂ ಅಧಿಕೃತವಾಗಿ ಹೇಳಿಕೊಂಡಿಲ್ಲ.