Tag: New Parliament House

  • Women’s Reservation Bill: ಹಲವು ವರ್ಷಗಳಿಂದ ಚರ್ಚೆ ನಡೆದಿದೆ, ನಾವು ಇತಿಹಾಸ ನಿರ್ಮಿಸಿದ್ದೇವೆ: ಮೋದಿ

    Women’s Reservation Bill: ಹಲವು ವರ್ಷಗಳಿಂದ ಚರ್ಚೆ ನಡೆದಿದೆ, ನಾವು ಇತಿಹಾಸ ನಿರ್ಮಿಸಿದ್ದೇವೆ: ಮೋದಿ

    ನವದೆಹಲಿ: ಹೊಸ ಸಂಸತ್ ಭವನದ (New Parliament House) ಲೋಕಸಭೆಯಲ್ಲಿ (Lok Sabha) ಮೊದಲ ದಿನದ ವಿಶೇಷ ಅಧಿವೇಶನ (Special Session) ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದರು.

    ಮಂಗಳವಾರ ಹೊಸ ಸಂಸತ್ ಭವನದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಪ್ರಕಟಿಸಿದರು. ಅಲ್ಲದೇ ಮಸೂದೆಯನ್ನು ಅಂಗೀಕರಿಸಲು ಮತ್ತು ನಾರಿಶಕ್ತಿ ಪ್ರಾತಿನಿಧ್ಯವನ್ನು ಖಾತ್ರಿಪಡಿಸಿಕೊಳ್ಳಲು ಸಹಾಯ ಮಾಡುವಂತೆ ಎಲ್ಲಾ ಸದಸ್ಯರನ್ನು ಒತ್ತಾಯಿಸಿದರು. ಇದನ್ನೂ ಓದಿ: 5 ದಿನ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ

    ನಾರಿಶಕ್ತಿ ವಂದನ್ ಅಧಿನಿಯಮ್ ಹೆಚ್ಚು ಮಹಿಳೆಯರು ಸಂಸತ್ತು, ಅಸೆಂಬ್ಲಿಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ ಎಂದು ಮೋದಿ ತಿಳಿಸಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಿಂದಿನ ಸರ್ಕಾರಗಳು ಈ ಮಸೂದೆಯನ್ನು ಅಂಗೀಕರಿಸಲು ವಿಫಲವಾಗಿದೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    ಈ ಹಿಂದೆಯೂ ಸಂಸತ್ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದೆ. ವರ್ಷಗಳಿಂದ ಮಹಿಳಾ ಮೀಸಲಾತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ಇತಿಹಾಸವನ್ನು ಸ್ಕ್ರಿಪ್ಟ್‌ ಮಾಡಿದ್ದೇವೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಅಸಂಬದ್ಧ, ಪ್ರೇರಿತ- ಕೆನಡಾ ಆರೋಪ ತಿರಸ್ಕರಿಸಿದ ಭಾರತ

    ವಾಜಪೇಯಿ (Atal Bihari Vajpayee) ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಯಿತು. ಆದರೆ ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರದ ಕಾರಣ ಈ ಕನಸು ಅಪೂರ್ಣವಾಯಿತು. ಇದನ್ನು ಮುಂದಕ್ಕೆ ಕೊಂಡೊಯ್ಯಲು ದೇವರು ನನಗೆ ಅವಕಾಶ ನೀಡಿದ್ದಾನೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಕುರಿತು ಹೊಸ ಮಸೂದೆಯನ್ನು ತರುತ್ತಿರುವುದಕ್ಕೆ ನಮಗೆ ಸಂತಸವಾಗುತ್ತಿದೆ ಎಂದರು. ಇದನ್ನೂ ಓದಿ: ಹಳೆ ಸಂಸತ್‌ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್‌ – ಸುಂದರ ನೆನಪುಗಳೊಂದಿಗೆ ವಿದಾಯ

    ನಾಳೆ ಸಂಸತ್ತಿನಲ್ಲಿ ಚರ್ಚೆ:
    ಕೇಂದ್ರ ಸಚಿವ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠಾವಳೆ ಈ ಕುರಿತು ಮಾತನಾಡಿ, ನಾಳೆ ಈ ಮಸೂದೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ ಎಂದರು. ಸುಮಾರು 27 ವರ್ಷಗಳ ಕಾಯುವಿಕೆಯ ನಂತರ ಮಹತ್ವದ ಬೆಳವಣಿಗೆಯನ್ನು ಗುರುತಿಸುವ ಮೂಲಕ ದೀರ್ಘಾವಧಿಯಿಂದ ಬಾಕಿ ಉಳಿದಿರುವ ಮಸೂದೆ ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ಬೆಂಗಳೂರು: ಮೇ 28 ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ (New Parliament House) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಭಾಗಿಯಾಗಲು ನಿರ್ಧರಿಸಿದ್ದಾರೆ. ಈ ಮೂಲಕ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ವಿಪಕ್ಷಗಳ ನಿರ್ಧಾರಕ್ಕೆ ಅವರು ಡೋಂಟ್‍ಕೇರ್ ಎಂದಿದ್ದಾರೆ.

    ಗುರುವಾರ ಜೆಡಿಎಸ್ (JDS) ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್‌ ಶಾಗೆ ಸ್ಟಾಲಿನ್‌ ಪತ್ರ

    ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ.

    ಇದೇ ತಿಂಗಳ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ (Narendra Modi) ಹೊಸ ಸಂಸತ್ ಭವನ ಉದ್ಘಾಟನೆಗೊಳ್ಳಲಿದೆ. ಮೋದಿ ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸಿರುವ 19 ವಿಪಕ್ಷಗಳು ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಸಂಸತ್ ಕಟ್ಟಡವನ್ನು ಲೋಕಾರ್ಪಣೆ ಮಾಡಬೇಕೆಂದು ಆಗ್ರಹಿಸಿವೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

  • ಹೊಸ ಸಂಸತ್ ಭವನಕ್ಕೆ ಶಂಕು ಸ್ಥಾಪನೆ- ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

    ಹೊಸ ಸಂಸತ್ ಭವನಕ್ಕೆ ಶಂಕು ಸ್ಥಾಪನೆ- ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

    – ವ್ಯಂಗ್ಯ ಕಾರ್ಟೂನ್ ಹಂಚಿಕೊಂಡ ಸ್ವಾಮಿ

    ನವದೆಹಲಿ: ಹೊಸ ಸಂಸತ್ ಭವನಕ್ಕೆ ಶಂಕು ಸ್ಥಾಪನೆಗೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಪೆಟ್ರೋಲ್ ಬೆಲೆ ಏರಿಕೆ ಮತ್ತು ಸಂಸತ್ ಭವನ ಉದ್ಘಾಟನೆಯ ಸಂಬಂಧದ ಕಾರ್ಟೂನ್ ಹಂಚಿಕೊಂಡಿರುವ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಸರ್ಕಾರದ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ.

    ಕಾರ್ಟೂನ್ ನಲ್ಲಿ ಏನಿದೆ?: ಸಾರ್ವಜನಿಕರೊಬ್ಬರು ಪೆಟ್ರೋಲ್ ಬೆಲೆಯಲ್ಲಿ ಏಕೆ ಏರಿಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ಪ್ರಧಾನಿ ಮೋದಿ ನಿಂತ ನೀತಿ ಆಯೋಗ, ಟ್ಯಾಕ್ಸ್ ಇಲ್ಲದೇ ದೇಶ ಹೇಗೆ ನಡೆಸುವುದು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದು ಕಾರ್ಟೂನ್ ನಲ್ಲಿ ಸರ್ಕಾರಕ್ಕೆ ಹಣದ ಕೊರತೆ ಇದ್ರೆ ಹೊಸ ಸಂಸತ್ ಭವನ ಮಾಡ್ತಿರೋದು ಯಾಕೆ ಎಂದು ವ್ಯಕ್ತಿ ಪ್ರಶ್ನೆ ಮಾಡಿದ್ದಾನೆ.

    ಎರಡು ದಿನಗಳ ಹಿಂದೆಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾದ್ದರು. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90 ರೂ.ಗೆ ಮಾರಾಟ ಮಾಡುವುದು ಭಾರತ ಸರ್ಕಾರ ಜನರ ಮೇಲೆ ಮಾಡುತ್ತಿರುವ ಶೋಷಣೆ. ಪೆಟ್ರೋಲ್ ರಿಫೈನರಿಗಳಲ್ಲಿ ಪ್ರತಿ ಲೀಟರ್ ಬೆಲೆ 30 ರೂ. ಆಗುತ್ತದೆ. ತೆರಿಗೆ ಮತ್ತು ಪೆಟ್ರೋಲ್ ಪಂಪ್‍ಗಳ ಕಮಿಷನ್‍ನಿಂದಾಗಿ ಉಳಿದ 60 ರೂ. ಹೆಚ್ಚಳವಾಗುತ್ತದೆ. ನನ್ನ ದೃಷ್ಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು ಗರಿಷ್ಟ 40 ರೂ.ಗೆ ಮಾರಾಟ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?