Tag: New Traffic rules

  • ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್

    ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್

    ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಅನ್ವಯ ಭಾರೀ ದಂಡ ವಿಧಿಸುತ್ತಿದ್ದ ಸರ್ಕಾರ ನಡೆಗೆ ಸಾಕಷ್ಟು ಜನರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ಗುಜರಾತ್ ಸರ್ಕಾರ ದಂಡದ ಮೊತ್ತವನ್ನು ಕಡಿಮೆ ಮಾಡಿತ್ತು. ಸದ್ಯ ಕರ್ನಾಟಕದಲ್ಲೂ ದಂಡದ ಪ್ರಮಾಣ ಕಡಿಮೆ ಮಾಡಲು ಸಿಎಂ ಬಿಎಸ್‍ವೈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದರು. ಇದನ್ನು ಓದಿ: ದುಬಾರಿ ಟ್ರಾಫಿಕ್ ದಂಡಕ್ಕೆ ಗುಜರಾತ್ ಸರ್ಕಾರದಿಂದ ಬ್ರೇಕ್

    ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು. ಇದನ್ನು ಓದಿ: ಸಿದ್ಧಪಡಿಸಿಕೊಂಡ ನೆಟ್ಟಿಗರು- ವೈರಲಾಯ್ತು ವಿಡಿಯೋ

    ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ.  ಇದನ್ನು ಓದಿ: ಟ್ರಾಫಿಕ್ ರೂಲ್ಸ್ ಉಲ್ಲಂಘನೆ- ಬೈಕಿಗೆ 23, 24 ಸಾವಿರ ರೂ, ಆಟೋಗೆ 32 ಸಾವಿರ ರೂ. ದಂಡ

  • ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!

    ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!

    ಬೆಂಗಳೂರು: ಹೊಸ ಟ್ರಾಫಿಟ್ ದಂಡ ಜಾರಿಯಿಂದಾಗಿ ವಾಹನ ಸವಾರರು ಶಾಕ್‍ಗೆ ಒಳಗಾಗಿದ್ದಾರೆ. ಸವಾರರು ಬೈಕ್‍ಗಳನ್ನು ಮನೆಯಿಂದ ಹೊರಗೆ ತರುವುದಕ್ಕೂ ಹಿಂದೇಟು ಹಾಕುವಂತಾಗಿದೆ. ಈ ಬೆನ್ನಲ್ಲೇ ಸಂಚಾರ ನಿಯಮವೊಂದು ಸವಾರರು ಬೆಚ್ಚಿ ಬೀಳುವಂತೆ ಮಾಡಿದೆ.

    ಸವಾರರು ಸ್ಲಿಪ್ಪರ್, ಹವಾಯಿ ಚಪ್ಪಲ್ ಹಾಕಿಕೊಂಡು ಗೇರ್ ಹೊಂದಿರುವ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡಕ್ಕೆ ಗುರಿಯಾಗಬೇಕಾಗುತ್ತದೆ. ದಂಡದ ಮೊತ್ತವು 1,000 ರೂ. ಆಗಿದ್ದು, ಈ ತಪ್ಪು ಮರುಕಳಿಸಿದರೆ ದಂಡದ ಜೊತೆಗೆ 15 ದಿನಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿ 86,500 ರೂ. ದಂಡ ತೆತ್ತ ಲಾರಿ ಚಾಲಕ

    ಸ್ಲಿಪ್ಪರ್, ಹವಾಯಿ ಚಪ್ಪಲಿ ಹಾಕಿದರೆ ದ್ವಿಚಕ್ರ ವಾಹನದ ಗೇರ್ ಬದಲಾಯಿಸಲು, ವಾಹನ ನಿಯಂತ್ರಣಕ್ಕೆ, ಪಾರ್ಕ್ ಮಾಡಲು, ಪಾರ್ಕಿಂಗ್‍ನಿಂದ ವಾಹನ ತೆಗೆಯಲು ಸಮಸ್ಯೆ ಆಗಲಿದೆ. ಜೊತೆಗೆ ಅಪಘಾತದವಾದಾಗ ಕಾಲಿಗೆ ಗಾಯವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಸವಾರರು ಶೂ ಧರಿಸಿದರೆ ಉತ್ತಮ ಎಂಬುದು ನಿಯಮದ ಉದ್ದೇಶವಾಗಿದೆ. 1988ರ ಮೋಟಾರು ವಾಹನ ಕಾಯ್ದೆಯಲ್ಲೇ ಇದನ್ನು ಉಲ್ಲೇಖಿಸಲಾಗಿದೆ. ಇಲ್ಲಿಯವರೆಗೆ ಈ ನಿಯಮವನ್ನು ಗಂಭೀರವಾಗಿ ಟ್ರಾಫಿಕ್ ಪೊಲೀಸರು ಗಮನಿಸುತ್ತಿರಲಿಲ್ಲ. ಆದರೆ ಈಗ ದೇಶದ ವಿವಿಧ ಕಡೆಗಳಲ್ಲಿ ಈ ನಿಯಮವನ್ನು ಪಾಲಿಸಲು ಮುಂದಾಗಿದ್ದು ಹಲವು ನಗರಗಳಲ್ಲಿ ಸವಾರರು ಈ ಪ್ರಕರಣದ ಅಡಿ ದಂಡ ಪಾವತಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಾಹನ ಚಾಲಕನಿಗೂ ಬಿತ್ತು 1 ಸಾವಿರ ರೂ. ದಂಡ

    ಹೊಸ ಟ್ರಾಫಿಟ್ ದಂಡ ಜಾರಿಯಾದ ಬಳಿಕ ಟ್ರಾಫಿಕ್ ಪೊಲೀಸರು ಕೂಡ ಫುಲ್ ಆ್ಯಕ್ಟೀವ್ ಆಗಿದ್ದು, ಲೈಸನ್ಸ್, ಹೆಲ್ಮೆಟ್, ಲೈಸನ್ಸ್ ಸೇರಿ ಎಲ್ಲ ರೀತಿಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹೀಗಾಗಿ ದಂಡದ ಮೊತ್ತವು ಭಾರೀ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ.