Tag: New Year 2021

  • ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಶುಭಾಶಯ ಅಂದ್ರು ದಚ್ಚು

    ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಶುಭಾಶಯ ಅಂದ್ರು ದಚ್ಚು

    ಬೆಂಗಳೂರು: ನಾಡಿನಾದ್ಯಂತ ಜನ ಹೊಸ ವರ್ಷವನ್ನು ಆಚರಿಸುತ್ತಿದ್ದು, ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಕೂಡ ತಮ್ಮ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಂತೆಯೇ ಇದೀಗ ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ದಾಸ, ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕರೋನ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್ ಹಾಗೂ ರೂಪಾಂತರಿ ಕೊರೊನಾದಿಂದಾಗಿ ಈ ಬಾರಿ ನಾಡಿನಾದ್ಯಂತ ಅತ್ಯಂತ ಸರಳವಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಬೆಂಗಳೂರಿನಲ್ಲಿ ಹೊಸ ವರ್ಷದ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಲಾಗಿತ್ತು. ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು. ಈ ಹಿನ್ನಲೆಯಲ್ಲಿ ಈ ಬಾರಿಯ ನ್ಯೂ ಇಯರ್ ಆಚರಣೆ ಬಹಳ ಸರಳವಾಗಿಯೇ ನಡೆಯಿತು.

  • ಸಿಡ್ನಿಯಲ್ಲಿ ಹೊಸ ವರ್ಷದ ಸಂಭ್ರಮ – ನ್ಯೂಜಿಲೆಂಡ್‍ನಲ್ಲಿ ಯಾವುದೇ ನಿಬಂಧನೆಗಳಿಲ್ಲದೇ ಸೆಲೆಬ್ರೇಷನ್

    ಸಿಡ್ನಿಯಲ್ಲಿ ಹೊಸ ವರ್ಷದ ಸಂಭ್ರಮ – ನ್ಯೂಜಿಲೆಂಡ್‍ನಲ್ಲಿ ಯಾವುದೇ ನಿಬಂಧನೆಗಳಿಲ್ಲದೇ ಸೆಲೆಬ್ರೇಷನ್

    ನವದೆಹಲಿ: ನ್ಯೂಜಿಲೆಂಡ್ ಮತ್ತು ಆಸ್ಟೇಲಿಯಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಆರಂಭಗೊಂಡಿದ್ದು, ಬಣ್ಣ ಬಣ್ಣದ ಪಟಾಕಿ, ಲೈಟ್ ಗಳಿಂದ 2021ನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಭಾರತದಲ್ಲಿ ಹೊಸ ವರ್ಷದ ಆಗಮನಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ.

    ಆಕಾಲೆಂಡ್ ಜನತೆ ಯಾವುದೇ ನಿಬಂಧನೆ, ಷರತ್ತುಗಳಿಲ್ಲದೇ ಹೊಸ ವರ್ಷ ಆಚರಿಸಿದ್ದಾರೆ. ಸಿಡ್ನಿಯ ಹಾರ್ಬರ್ ಬ್ರಿಡ್ಜ್ ಅತ್ಯಂತ ವೈಭೋಗದಿಂದ ಅಲಂಕರಿಸಲಾಗಿತ್ತು. ಆಸ್ಟ್ರೇಲಿಯಾದಲ್ಲಿ ಡಿಸೆಂಬರ್ 31ರ ಮಧ್ಯಾಹ್ನದಿಂದಲೇ ಹೊಸ ವರ್ಷಕ್ಕೆ ಸಿದ್ಧತೆ ನಡೆಸಿಕೊಂಡಿತ್ತು. ಗಲ್ಲಿ ಗಲ್ಲಿಗಳಲ್ಲಿ ಮ್ಯೂಸಿಕಲ್ ಇವೆಂಟ್ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಮಧ್ಯಾಹ್ನದಿಂದಲೇ ಆರಂಭಗೊಂಡಿವೆ. ಆದ್ರೆ ಕೊರೊನಾದಿಂದಾಗಿ ಜನರು ಒಟ್ಟಾಗಿ ಸೇರುವುದನ್ನ ನಿಷೇಧಿಸಲಾಗಿತ್ತು. ಎಲ್ಲ ಕಾರ್ಯಕ್ರಮಗಳ ನೇರಪ್ರಸಾರ ಮಾಡಲಾಗುತ್ತಿದೆ. ಬ್ರಿಡ್ಜ್ ಬಳಿ ಸೇರಿದ ಕೆಲ ಜನ ಕುಣಿದು ಕುಪ್ಪಳಿಸಿ 2020ಕ್ಕೆ ವಿದಾಯ ಹೇಳಿದರು.

    ಭಾರತದಲ್ಲಿ ಸಂಜೆ 4.30 ಆದಾಗ ನ್ಯೂಜಿಲೆಂಡ್ ನಲ್ಲಿ ರಾತ್ರಿ 12ರ ಗಂಟೆ ಬಾರಿಸಿತ್ತು. ಆಕಾಲೆಂಡ್ ನಲ್ಲಿ ಹೊಸ ವರ್ಷದ ಆಚರಣೆಗಾಗಿ ದೊಡ್ಡ ಇವೆಂಟ್ ಆಯೋಜಿಸಲಾಗಿತ್ತು. ಇಲ್ಲಿಯ ಸ್ಕೈ ಟವರ್ ಬಳಿ ಐದು ನಿಮಿಷ ಝಗಮಗಿಸುವ, ಬಣ್ಣದ ಚಿತ್ತಾರಗಳಿಂದ ಹೊಸ ವರ್ಷವನ್ನ ಸ್ವಾಗತಿಸಿಕೊಳ್ಳಲಾಯ್ತು.

    ದುಬೈನ ಬುರ್ಜ್ ಖಲೀಫಾದಲ್ಲಿ ಲೈಟ್, ಲೇಸರ್ ಶೋ ಮಾಡಲಾಯ್ತು. ಕೊರೊನಾ ಹಿನ್ನೆಲೆ ಸರ್ಕಾರ ಕಠಿಣ ನಿಯಮಗಳನ್ನ ಹೇರಿದೆ. ಇನ್ನುಳಿದಂತೆ ಸಿಂಗಪುರ, ಪ್ಯಾರೀಸ್ , ಲಂಡನ್, ಮಾಸ್ಕೋ, ಬರ್ಲಿನ್, ಪಟಾಯ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ.

  • ಬೆಂಗಳೂರಲ್ಲಿ ಮದ್ಯದಂಗಡಿಗಳಿಗೆ ಮುಗಿಬಿದ್ದ ಪಾರ್ಟಿಪ್ರಿಯರು!

    ಬೆಂಗಳೂರಲ್ಲಿ ಮದ್ಯದಂಗಡಿಗಳಿಗೆ ಮುಗಿಬಿದ್ದ ಪಾರ್ಟಿಪ್ರಿಯರು!

    ಬೆಂಗಳೂರು: ಕೊರೊನಾ ವೈರಸ್ ಈ ಬಾರಿಯ ಹೊಸ ವರ್ಷಾಚರಣೆರಗೆ ಬ್ರೇಕ್ ಹಾಕಿದೆ. ಬಾರ್, ಪಬ್ ಗಳನ್ನು ಬಂದ್ ಮಾಡುವಂತೆ ಆದೇಶ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಜನ ಮದ್ಯ ಖರೀದಿಸಲು ಅಂಗಡಿಗಳ ಮುಂದೆ ಮುಗಿಬಿದ್ದಿದ್ದಾರೆ.

    ಹೌದು. ಚಿಕ್ಕ ಪೇಟೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ಹಾಗೂ ಸರಿಯಾಗಿ ಮಾಸ್ಕ್ ಹಾಕದೇ ಜನ ಓಡಾಟ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಫೀಲ್ಡ್ ಗೆ ಇಳಿದಿದ್ದಾರೆ. ಪಾರ್ಟಿ ಮಾಡಲು ಜನ ಮದ್ಯ ಖರೀದಿಸುವಲ್ಲಿ ನಿರತರಾಗಿದ್ದಾರೆ. ಕೊರೊನಾ ನಿಯಮಕ್ಕೆ ಬ್ರೇಕ್ ಹಾಕಿ ಜನ ಮದ್ಯ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಮದ್ಯದಂಗಡಿಗಳ ಮುಂದೆ ಗ್ರಾಹಕರ ಸಂಖ್ಯೆ ಹೆಚ್ಚಳವಾಗಿದೆ. ನಿಷೇಧಾಜ್ಞೆ ಬೆನ್ನಲ್ಲೇ ಸಾಕಷ್ಟು ಮದ್ಯ ಖರೀದಿಸುವಲ್ಲಿ ಬ್ಯುಸಿಯಾಗಿದ್ದಾರೆ.

    ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಯಾಗಿದ್ದು, ನಾಳೆ ಬೆಳಗ್ಗೆವರೆಗೆ ಮುಂದುವರಿಯಲಿದೆ. ಈ ಹಿಂದೆ ಇಂದು ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೇರಲು ನಿರ್ಧರಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ರೂಪಾಂತರ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಬೆಂಗಳೂರಿನಲ್ಲಿ ಹೊಸ ಮಾದರಿಯ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ದೃಷ್ಟಿಯಿಂದ ಇಂದು ಮಧ್ಯಾಹ್ನದಿಂದಲೇ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

  • ಉತ್ತರ ಕನ್ನಡ ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ – ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್

    ಉತ್ತರ ಕನ್ನಡ ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ – ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್

    ಕಾರವಾರ: ಪರಿವರ್ತನೆಗೊಂಡ ಕೊರೊನಾದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ ಹೊಸ ವರ್ಷಕ್ಕೆ ಬ್ರೇಕ್ ಬಿದ್ದಿದೆ. ಐದು ತಾಲೂಕಿನಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿ ಮಾಡಿ ಆದೇಶ ಹೊರಡಿಸಿದೆ.

    ಒಂದೆಡೆ ಬ್ರಿಟನ್ ಸೋಂಕು ಕರ್ನಾಟಕವನ್ನು ಪ್ರವೇಶಿಸಿದೆ. ಮತ್ತೊಂದೆಡೆ ಹೊಸ ವರ್ಷದ ಆಗಮನಕ್ಕೆ ಜನ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸವರ್ಷಕ್ಕಾಗಿ ಹೋಮ್ ಸ್ಟೇ, ರೆಸಾರ್ಟ್ ಗಳು ಫುಲ್ ಆಗಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಇತ್ತ ಜಿಲ್ಲಾಡಳಿತ ಕೂಡ ಹೊಸವರ್ಷಾಚರಣೆಗೆ ಹೆಚ್ಚಿನ ನಿಬಂಧನೆ ಇಲ್ಲದೇ ಕೇಂದ್ರ ಮತ್ತು ರಾಜ್ಯದ ಮಾರ್ಗಸೂಚಿಗಳನ್ನು ಮಾತ್ರ ಪಾಲಿಸುವಂತೆ ಸೂಚಿಸಿದ್ದವು. ಹೀಗಾಗಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮ ಕಳೆಗಟ್ಟಿದ್ದು ರೆಸಾರ್ಟ್ ಮಾಲೀಕರು, ಹೋಮ್ ಸ್ಟೇಗಳಲ್ಲಿ ಸಿದ್ಧತೆ ಸಹ ಮಾಡಿಕೊಂಡಿದ್ದರು.

    ಪ್ರವಾಸಿಗರು ಕೋವಿಡ್ ನಿಯಮಗಳನ್ನ ಪಾಲಿಸುತ್ತಿಲ್ಲ. ಜೊತೆಗೆ ಜಿಲ್ಲೆಯಲ್ಲಿ ಬ್ರಿಟನ್ ನಿಂದ ಒಟ್ಟು 15 ಜನ ಮರಳಿದ್ದು ಇವರ ಕೋವಿಡ್ ಪರಿಕ್ಷೆಯಲ್ಲಿ ನೆಗಟಿವ್ ಬಂದಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ರವರು ಪ್ರವಾಸಿಗರು ಹೆಚ್ಚಾಗಿ ಬರುವ ಐದು ತಾಲೂಕುಗಳಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

    144 ಸೆಕ್ಷನ್ ಜಾರಿ: ಕರಾವಳಿ ಪ್ರವಾಸಿ ತಾಲೂಕುಗಳಾದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ದಿನಾಂಕ 31/12/2020ರ ಸಂಜೆ 4 ರಿಂದ 1/01/2021 ರ ವರೆಗ ಬೆಳಗ್ಗೆ ಆರು ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಆದರೆ ಮಲೆನಾಡು ಭಾಗವಾದ ಶಿರಸಿ, ಮುಂಡಗೋಡು, ಯಲ್ಲಾಪುರ, ದಾಂಡೇಲಿ, ಜೋಯಿಡಾ ಭಾಗಕ್ಕೆ ವಿನಾಯ್ತಿ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಜನ ಸೇರುವ ಸಾಧ್ಯತೆಗಳಿದ್ದು 700 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಪ್ರವಾಸಿಗರು ಹೆಚ್ಚು ಬರುವುದರಿಂದ ಜಿಲ್ಲೆಯಲ್ಲಿ ಅಪಘಾತ ಸಂಖ್ಯೆ ಸಹ ಹೆಚ್ಚಾಗಿದ್ದು, 20 ,108 ವಾಹನ ವ್ಯವಸ್ಥೆ ಸಹ ಮಾಡಲಾಗಿದೆ. ಬೀಚ್ ಗಳಲ್ಲಿ ಕರಾವಳಿ ಕಾವಲು ಪಡೆ, ಕೋಸ್ಟ್ ಗಾರ್ಡ, ಲೈಫ್ ಗಾರ್ಡ ತಂಡವನ್ನು ಸಜ್ಜುಗೊಳಿಸಲಾಗಿದೆ.

    ಯಾವುದೇ ಪ್ರದೇಶಗಳಲ್ಲಿ ಐದು ಜನರಿಗಿಂತ ಹೆಚ್ಚು ಜನ ಒಟ್ಟಿಗೆ ಸೇರಲು ನಿರ್ಭಂಧ ಮಾಡಲಾಗಿದ್ದು ಸಭೆ, ಸಮಾರಂಭ, ಡಿ.ಜೆ ಎಲ್ಲದಕ್ಕೂ ನಿಷೇಧ ಹೇರಲಾಗಿದೆ. ನಿಯಮ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

    ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಲು ಪ್ರವಾಸಿಗರು ಜಿಲ್ಲೆಯ ಕರಾವಳಿ ಭಾಗಕ್ಕೆ ಬಂದಿಳಿದಿದ್ದಾರೆ. ಆದರೆ ಕೊರೊನಾ ನಿಯಮವನ್ನು ಪಾಲನೆ ಮಾಡದೇ ಬೇಕಾ ಬಿಟ್ಟಿ ಪ್ರವಾಸಿಗರು ವರ್ತಿಸುತ್ತಿರುವುದರಿಂದ ಕರಾವಳಿ ಭಾಗದಲ್ಲಿ ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿದೆ. ಒಟ್ಟಿನಲ್ಲಿ ಕರಾವಳಿ ಭಾಗದಲ್ಲಿ ಕಳೆಗಟ್ಟಿದ್ದ ಹೊಸ ವರ್ಷದ ಸಂಭ್ರಮಕ್ಕೆ ನಿಷೇದಾಜ್ಞೆಯ ಬ್ರೇಕ್ ಬಿದ್ದಿದೆ.

  • ನಾಲ್ಕು ಸ್ಟೆಪ್‍ಗಳಲ್ಲಿ ಮಾಡಿ ಹೊಸ ವರ್ಷಕ್ಕೆ ಮಗ್ ಕೇಕ್

    ನಾಲ್ಕು ಸ್ಟೆಪ್‍ಗಳಲ್ಲಿ ಮಾಡಿ ಹೊಸ ವರ್ಷಕ್ಕೆ ಮಗ್ ಕೇಕ್

    ಬಾರಿ ಹೊಸ ವರ್ಷಾಚರಣೆಗೆ ಕೊರೊನಾ ಅಡ್ಡಗಾಲು ಹಾಕಿದೆ. ಕೊರೊನಾ ಜೊತೆ ಹೊಸ ತಳಿಯ ಆತಂಕ ಸಹ ಹೆಚ್ಚಾಗಿದೆ. ಮನೆಯಲ್ಲಿಯೇ ಇದ್ದು ಕುಟುಂಬಸ್ಥರ ಜೊತೆ ನೀವೇ ಕೇಕ್ ತಯಾರಿಸಿ 2021ನ್ನು ಸ್ವಾಗತಿಸಿಕೊಳ್ಳಿ. ಬೇಕರಿಯಿಂದ ಬಣ್ಣ ಬಣ್ಣದ ಕೆಮಿಕಲ್, ಕ್ರೀಮ್ ಲೇಪಿತ ಕೇಕ್ ತರುವ ಬದಲು ಆರೋಗ್ಯಕರವಾಗಿ ಹೊಸ ವರ್ಷ ಬರಮಾಡಿಕೊಳ್ಳಿ. ನಿಮಗಾಗಿ ಸರಳವಾಗಿ ಮಗ್ ಕೇಕ್ ಮಾಡುವ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು
    * ಮೈದಾ – 1/2 ಕಪ್
    * ಮೊಟ್ಟೆ -1
    * ಸಕ್ಕರೆ – 3-4 ಸ್ಪೂನ್
    * ಹಾಲು – ಸ್ವಲ್ಪ
    * ವೆನಿಲಾ ಎಸೆನ್ಸ್- ಸ್ವಲ್ಪ
    * ಬೇಕಿಂಗ್ ಪೌಡರ್ – ಚಿಟಿಕೆ
    * ಸ್ಪ್ರಿಂಕಲ್ಸ್ – ಸ್ವಲ್ಪ
    * ಬೆಣ್ಣೆ – 2 ಸ್ಪೂನ್

    ಮಾಡುವ ವಿಧಾನ
    * 2 ಕಾಫಿ ಮಗ್‍ಗೆ ಮೊದಲು ಬೆಣ್ಣೆ ಹಚ್ಚಿ.
    * ಬಳಿಕ ಅದಕ್ಕೆ ಸ್ಪ್ರಿಂಕಲ್ಸ್ ಬಿಟ್ಟು ಉಳಿದೆಲ್ಲಾ ಸಾಮಗ್ರಿಗಳನ್ನು ಸೇರಿಸಿ ಮಿಕ್ಸ್ ಮಾಡಿ.
    * ಈಗ ಮೈಕ್ರೋವೇವ್‍ನಲ್ಲಿಟ್ಟು 1 ನಿಮಿಷಗಳ ಕಾಲ ಬೇಯಿಸಿ.
    * ಕೇಕ್ ಆದ್ಮೇಲೆ ಓವನ್‍ನಿಂದ ತೆಗೆದು ಕೇಕ್ ಮೇಲೆ ಫ್ರೆಶ್ ಕ್ರಿಮ್, ಸ್ಪ್ರಿಂಕಲ್ಸ್ ಹಾಕಿ ಸರ್ವ್ ಮಾಡಿ.

  • ಡಿ.30 ರಿಂದ ಜ.2ರವರೆಗೆ ನಂದಿ ಬೆಟ್ಟ ಬಂದ್

    ಡಿ.30 ರಿಂದ ಜ.2ರವರೆಗೆ ನಂದಿ ಬೆಟ್ಟ ಬಂದ್

    ಚಿಕ್ಕಬಳ್ಳಾಪುರ: ಕೊರೊನಾ ಆತಂಕದ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮವನ್ನ 3 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

    ಡಿಸೆಂಬರ್ 30ರ ಬೆಳಗ್ಗೆ 06 ಗಂಟೆಯಿಂದ 2021 ಜನವರಿ 02ರ ಬೆಳಗ್ಗೆ 06 ಗಂಟೆಯವರೆಗೆ ನಂದಿಗಿರಿ ಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಹಾಗೂ ಕೊರೊನಾ ವೈರಸ್ ಹರಡದಂತೆ ಜನ ಗುಂಪುಗೂಡುವುದನ್ನ ನಿರ್ಬಂಧಿಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಕ್ರಮಕೈಗೊಂಡಿದೆ. ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟದಲ್ಲಿ ಪ್ರವಾಸಿಗರ ದಟ್ಟಣೆ, ಮೋಜು ಮಸ್ತಿ ಮಾಡುವುದರಿಂದ ಕೊರೊನಾ ವೈರಸ್ ಹರಡುವ ಆತಂಕವಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಪ್ರತಿ ವರ್ಷ ವರ್ಷದ ಕೊನೆ ದಿನ ಡಿಸೆಂಬರ್ 31ರ ಸಂಜೆ 5 ಗಂಟೆಯ ನಂತರ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಿ ಜನವರಿ 01 ರ ಬೆಳಗ್ಗೆ 08 ಗಂಟೆ ನಂತರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ನಂದಿಬೆಟ್ಟವನ್ನ ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ಆದೇಶ ಮಾಡಲಾಗಿದೆ.