Tag: Newborn

  • 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

    – ಘೋರ ಘಟನೆಗೆ ಜಾರ್ಖಂಡ್ ಸಿಎಂ ತನಿಖೆಗೆ ಆದೇಶ

    ರಾಂಚಿ: 4 ದಿನಗಳ ನವಜಾತ ಶಿಶುವನ್ನು (Newborn Baby) ಪೊಲೀಸ್ ಅಧಿಕಾರಿಯೊಬ್ಬ (Police) ತುಳಿದು ಕೊಂದಿರುವ ಕ್ರೂರ ಘಟನೆ ಜಾರ್ಖಂಡ್‌ನ (Jharkhand) ಗಿರಿದಿಹ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಘಟನೆಗೆ ಆಘಾತ ವ್ಯಕ್ತಪಡಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ತನಿಖೆಗೆ ಆದೇಶ ನೀಡಿದ್ದಾರೆ.

    ಜಿಲ್ಲೆಯ ಕೊಸೊಗೊಂಡೋಡಿಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಲಗಿದ್ದ ಶಿಶುವಿನ ಮೇಲೆ ಪೊಲೀಸ್ ಅಧಿಕಾರಿ ಕಾಲನ್ನು ಇಟ್ಟು ಕೊಂದಿದ್ದಾನೆ ಎನ್ನಲಾಗಿದೆ. ಮಗುವಿನ ಅಜ್ಜ ಬೇರೊಂದು ಪ್ರಕರಣದಲ್ಲಿ ಆರೋಪಿಯಾಗಿದ್ದು, ಈ ಹಿನ್ನೆಲೆ ಆತನನ್ನು ಬಂಧಿಸಲು ಪೊಲೀಸರ ತಂಡ ಅವರ ಮನೆಗೆ ತೆರಳಿದ್ದಾಗ ಮಗುವಿನ ಮೇಲೆ ಕಾಲಿಟ್ಟು ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

     

    ಸ್ಥಳೀಯರ ಪ್ರಕಾರ ದಿಯೋರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಗಮ್ ಪಾಠಕ್ ನೇತೃತ್ವದ ತಂಡ ಮಗುವಿನ ಅಜ್ಜ ಭೂಷಣ್ ಪಾಂಡೆ ವಿರುದ್ಧ ಪ್ರಕರಣವೊಂದರಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. ಬಳಿಕ ಅವರ ಮನೆಗೆ ಅಧಿಕಾರಿಗಳ ತಂಡ ತೆರಳಿದ್ದು, ಪೊಲೀಸರನ್ನು ನೋಡಿದ ಭೂಷಣ್ ಕುಟುಂಬ ಶಿಶುವನ್ನು ಮನೆಯಲ್ಲೇ ಬಿಟ್ಟು ಓಡಿಹೋಗಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

    ಪೊಲೀಸರು ಮನೆಯ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಅವರು ಹುಡುಕಾಟ ನಡೆಸುತ್ತಿದ್ದ ವೇಳೆ ಮಗು ಒಂದೇ ಮನೆಯಲ್ಲಿ ಮಲಗಿತ್ತು. ನಾವು ವಾಪಸ್ ಮನೆಗೆ ಬಂದು ನೋಡಿದಾಗ ಮಗು ಶವವಾಗಿ ಹೋಗಿತ್ತು ಎಂದು ಮಗುವಿನ ತಾಯಿ ತಿಳಿಸಿದ್ದಾರೆ.

     

    CRIME

    ಮೃತ ಶಿಶುವಿನ ತಾಯಿ, ಅಜ್ಜ ಭೂಷಣ್ ಪಾಂಡೆ ಸೇರಿದಂತೆ ಮನೆಯ ಇತರ ಸದಸ್ಯರು ಮಗುವನ್ನು ಪೊಲೀಸರೇ ತುಳಿದು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ರಾಣಾ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

    ಘಟನೆಯ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಆರೋಗ್ಯ ಸಚಿವ ಬನ್ನಾ ಗುಪ್ತಾ, ಇಂತಹ ಘೋರ ಘಟನೆಗಳನ್ನು ಟೀಕಿಸಲಾಗುತ್ತದೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ದೇಶವು ಸಂವಿಧಾನದ ಪ್ರಕಾರ ನಡೆಯುತ್ತದೆ. ಆದ್ದರಿಂದ ಪೊಲೀಸ್ ಅಧಿಕಾರಿಗಳ ತಪ್ಪು ಕಂಡುಬಂದಲ್ಲಿ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

  • ಉತ್ತರ ಕರ್ನಾಟಕದಲ್ಲಿ ತಾಯಿ, ನವಜಾತ ಶಿಶುಗಳ ಮರಣ ಮೃದಂಗ

    ಉತ್ತರ ಕರ್ನಾಟಕದಲ್ಲಿ ತಾಯಿ, ನವಜಾತ ಶಿಶುಗಳ ಮರಣ ಮೃದಂಗ

    -ಕೇರಳ, ಮಹಾರಾಷ್ಟ್ರ, ತಮಿಳುನಾಡನ್ನು ಹಿಂದಿಕ್ಕಿದ ಉತ್ತರ ಕರ್ನಾಟಕ
    -7 ತಿಂಗಳಲ್ಲಿ 200ರ ಗಡಿ ದಾಟಿದ ನವಜಾತ ಶಿಶುಗಳ ಸಾವು

    ಹುಬ್ಬಳ್ಳಿ: ಆರೋಗ್ಯಕರ ಸಮಾಜ ಸೃಷ್ಟಿ ಮಾಡುವ ನಿಟ್ಟಿನಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಆರೋಗ್ಯಕ್ಕಾಗಿ ನಮ್ಮ ರಾಜ್ಯ ಸರ್ಕಾರ ನೂರಾರು ಕೋಟಿ ಅನುದಾನವನ್ನು ಖರ್ಚು ಮಾಡುತ್ತಿದೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ನಿಯಂತ್ರಿಸಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸಹ ಪ್ರಯೋಜನವಾಗುತ್ತಿಲ್ಲ. ಅದರಲ್ಲೂ ಉತ್ತರ ಕರ್ನಾಟಕ (Uttarkarnataka) ಭಾಗದಲ್ಲಿ ತಾಯಿ ಮತ್ತು ಮಗುವಿನ ಮರಣ ದೇಶದಲ್ಲಿ ಹೆಚ್ಚಾಗುತ್ತಿರುವುದು ದುರಾದೃಷ್ಟಕರ ಸಂಗತಿ. ಈ ಭಾಗದ ಸಂಜೀವಿನಿ ಎಂದು ಕರೆಯಲ್ಪಡುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಕಿಮ್ಸ್) (KIMS) ದಾಖಲಾದ ಅಂಕಿ ಅಂಶಗಳು ಬಾಣಂತಿ ಮತ್ತು ಶಿಶುಗಳಿಗೆ ಸುರಕ್ಷತೆಯಿಲ್ಲ ಎಂಬುವುದನ್ನು ಸಾಬೀತು ಪಡಿಸಿದೆ.

    ಕಿಮ್ಸ್ ಅಂಕಿ ಅಂಶಗಳ ಪ್ರಕಾರ ಈ ವರ್ಷದ ಏಪ್ರಿಲ್‍ನಿಂದ ಇಲ್ಲಿಯವರೆಗೆ 206 ಶಿಶುಗಳು ಹಾಗೂ 41 ಮೃತಪಟ್ಟಿದ್ದಾರೆ. ಈ ಪೈಕಿ ಧಾರವಾಡ (Dharwad) ಜಿಲ್ಲೆ ಒಂದರಲ್ಲಿಯೇ 17 ತಾಯಂದಿರು ಹಾಗೂ 122 ಶಿಶುಗಳು ಸಾವನ್ನಪ್ಪಿರುವುದು ನಿಜಕ್ಕೂ ಶೋಚನಿಯ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಯ ಅಂದರೆ ಗದಗ, ಹಾವೇರಿ, ಕೊಪ್ಪಳ, ಕಾರವಾರ, ಬಾಗಲಕೋಟೆ, ಬೆಳಗಾವಿ (Belgavi) ಜಿಲ್ಲೆಯಿಂದ ರೇಫರ್ ಆದ ಕೇಸ್‍ಗಳು ಸಹ ಈ ಅಂಕಿ ಅಂಶಗಳಲ್ಲಿ ಸೇರಿದೆ. ಈ ಸಾವಿನ ಪ್ರಮಾಣ ನಮ್ಮ ರಾಜ್ಯದ ಅಕ್ಕ-ಪಕ್ಕದ ಕೇರಳ (Kerala), ಮಹಾರಾಷ್ಟ್ರ (Maharashtra), ತಮಿಳುನಾಡನ್ನು (Tamilnadu) ಸಹ ಹಿಂದೆ ಹಾಕಿದ್ದು, ವೈದ್ಯಕೀಯ ಲೋಕದಲ್ಲಿ ಕಳವಳ ಶುರುವಾಗಿದೆ. ಇದನ್ನೂ ಓದಿ: ಭಾರತವನ್ನ ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನ ಮದ್ವೆ ಆಗ್ತೀನಿ – ಪಾಕ್ ನಟಿ ಬಂಪರ್ ಆಫರ್

    ಈ ಪ್ರಮಾಣದ ಸಾವಿಗೆ ಗ್ರಾಮೀಣ ಭಾಗದ ಗರ್ಭಿಣಿ ಮಹಿಳೆಯರ ಮತ್ತು ಕುಟುಂಬಸ್ಥರ ನಿರ್ಲಕ್ಷ್ಯ, ಅನಕ್ಷರಸ್ಥೆ ಮತ್ತು ಮೂಢನಂಬಿಕೆ ಮೂಲಕಾರಣ. ಇದರ ಜೊತೆಗೆ ಅಪೌಷ್ಟಿಕತೆ ಆಹಾರ ಪದ್ಧತಿ ಹಿನ್ನೆಲೆ, ಬಿಪಿ, ಮೂರ್ಚೆರೋಗ, ಡೆಂಗ್ಯೂ ಜ್ವರ, ರಕ್ತದ ಕಣಗಳು ಕಡಿಮೆಯಾಗಿ ಇತ್ತೀಚೆಗೆ ಗರ್ಭಿಣಿಯರಲ್ಲಿ ಹೆಚ್ಚು ಕಾಣಿಸುತ್ತಿದ್ದು, ಇದರಿಂದ ಶಿಶು ಮತ್ತು ತಾಯಿಯರ ಸಾವಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಇದಲ್ಲದೇ ಶಿಶುವಿಗೆ ತಾಯಿಯ ಎದೆಯ ಹಾಲು ಅಮೃತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಎದೆ ಹಾಲು ಬಿಟ್ಟು ಬೇರೆ ಆಹಾರ ನೀಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ಇದು ಸಹ ಸಾವಿನ ಪ್ರಮಾಣ ಜಾಸ್ತಿಯಾಗಲು ಪ್ರಮುಖ ಕಾರಣ. ಇದರ ಜೊತೆಗೆ ಹೆರಿಗೆ ಸಮಯದಲ್ಲಿ ಗಂಭೀರ ಸ್ವರೂಪದ ಸಮಯದಲ್ಲಿ ಬೇರೆ, ಬೇರೆ ಜಿಲ್ಲೆಗಳ ವೈದ್ಯರು ಚಿಕಿತ್ಸೆ ನೀಡಲು ಹೆದರಿ, ಅಂತಹ ಕೇಸ್‍ಗಳನ್ನು ಕಿಮ್ಸ್‌ಗೆ ರೇಫರ್ ಮಾಡುತ್ತಿದ್ದಾರೆ. ಇದರಿಂದಾಗಿ ಮಾರ್ಗಮಧ್ಯದಲ್ಲಿ ಎಷ್ಟೋ ಜನ ಮೃತಪಟ್ಟಿರುವ ಘಟನೆ ಸಹ ನಡೆದಿವೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ – 2.50 ಕೋಟಿ ರೂ. ಸಂಗ್ರಹ

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು

    ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು

    ಮುಂಬೈ: ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದ ಕಾರಣ ಅವಧಿಪೂರ್ವ ಜನಿಸಿದ ನವಜಾತ ಅವಳಿ ಶಿಶುಗಳು ತಾಯಿಯ ಮಡಿಲಿನಲ್ಲಿಯೇ ಸಾವನ್ನಪ್ಪಿರುವ ಹೃದಯವಿದ್ರಾಯಕ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯನ್ನು ತಾತ್ಕಾಲಿಕ ಸ್ಟ್ರೆಚರ್‍ನಲ್ಲಿ ಸಮೀಪದ ಆಸ್ಪತ್ರೆಗೆ ಸಾಗಿಸುತ್ತಿರುವುದನ್ನು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೆರಿಗೆ ನಂತರ ಭಾರೀ ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಕುಟುಂಬಸ್ಥರು ಸುಮಾರು 3 ಕಿ.ಮೀವರೆಗೆ ಕಲ್ಲು, ಮಣ್ಣು ಹಾಗೂ ಇಳಿಜಾರು ಪ್ರದೇಶಗಳಲ್ಲಿ ಹೊತ್ತು ಸಾಗಿಸಿದರು. ಇದನ್ನೂ ಓದಿ: ಭಾರತದ ಅತಿ ಉದ್ದದ ಸರಕು ರೈಲು ‘ಸೂಪರ್ ವಾಸುಕಿ’ – ಇದರ ವಿಶೇಷತೆ ಏನು ಗೊತ್ತಾ?

    ಪಾಲ್ಘರ್ ಜಿಲ್ಲೆಯ ಮೊಖಾಡಾ ತಹಸಿಲ್ ನಿವಾಸಿಯಾಗಿರುವ ವಂದನಾ ಬುಧರ್ ತಮ್ಮ ಮನೆಯಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಏಳು ತಿಂಗಳ ಗರ್ಭಾವಸ್ಥೆಯಲ್ಲಿಯೇ ಅಕಾಲಿಕವಾಗಿ ಜನಿಸಿದ ಅವಳಿ ಶಿಶುಗಳು ದುರ್ಬಲವಾಗಿದ್ದವು. ಅಲ್ಲದೇ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೇ ಇರುವುದರಿಂದ ಅವಳಿ ಶಿಶುಗಳು ತಾಯಿಯ ಕಣ್ಣೇದುರೆ ಎದುರೇ ಪ್ರಾಣಬಿಟ್ಟಿದೆ. ಇದನ್ನೂ ಓದಿ: ಬಿಜೆಪಿ ಜೊತೆಗೆ ಯಾವುದೇ ರಾಜಿ ಇಲ್ಲ – ದೆಹಲಿ ಭೇಟಿಗೂ ಮುನ್ನವೇ ಸ್ಟಾಲಿನ್ ಸ್ಪಷ್ಟನೆ

    ಈ ನಡುವೆ ಭಾರೀ ರಕ್ತಸ್ರಾವವಾಗುತ್ತಿದ್ದರಿಂದ ಮಹಿಳೆಯ ಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದಂತೆ, ಕುಟುಂಬಸ್ಥರು ಹಗ್ಗ, ಬೆಡ್‍ಶೀಟ್ ಮತ್ತು ಮರದ ತುಂಡನ್ನು ಬಳಸಿ ತಾತ್ಕಾಲಿಕ ಸ್ಟ್ರೆಚರ್ ಸಿದ್ಧಪಡಿಸಿ ಮಹಿಳೆಯನ್ನು ಹೊತ್ತುಕೊಂಡು ಆಸ್ಪತ್ರೆಯ ದಾರಿಯತ್ತ ಹೊರಟಿದ್ದರು. ಈಗಾಗಲೇ ಮಗುವನ್ನು ಕಳೆದುಕೊಂಡಿದ್ದು, ತಾಯಿಯನ್ನಾದರೂ ಉಳಿಸಬೇಕು ಎಂದು ನಿರ್ಧರಿಸಿ ಇಳಿಜಾರು ಪ್ರದೇಶಗಳಲ್ಲಿ ನಿಧಾನವಾಗಿ ಸಾಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೀಗ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಘಟನೆ ಸಂಬಮಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಚಿತ್ರಾ ಕಿಶೋರ್ ಅವರು, ರಾಜ್ಯದ ಹಲವೆಡೆ ರಸ್ತೆಗಳು ಇಲ್ಲದೇ ಇರುವುದರಿಂದ ಇಂತಹ ಹಲವಾರ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಣಕ್ಕಾಗಿ ಹೆಣ್ಣುಮಗು ಮಾರಾಟ ಮಾಡಿದ ತಾಯಿ – ಐವರ ಬಂಧನ

    ಹಣಕ್ಕಾಗಿ ಹೆಣ್ಣುಮಗು ಮಾರಾಟ ಮಾಡಿದ ತಾಯಿ – ಐವರ ಬಂಧನ

    ಕಾರವಾರ: ನವಜಾತ ಹೆಣ್ಣು ಶಿಶುವನ್ನು ಅಕ್ರಮವಾಗಿ ಅನ್ಯ ಕೋಮಿನ ದಂಪತಿಗೆ ಮಾರಾಟ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    6 ದಿನಗಳ ಹಿಂದೆ ಜನಿಸಿದ ನವಜಾತ ಶಿಶುವಿನ ಲಾಲನೆ ಪಾಲನೆ ಮಾಡಲು ನನ್ನ ಕೈಯಿಂದ ಸಾಧ್ಯವಿಲ್ಲ ಎಂದು ತಾಯಿಯೇ 25 ಸಾವಿರ ರೂ.ಗೆ ಮಾರಾಟ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಹಳಿಯಾಳ ತಾಲೂಕಿನ ತಟ್ಟಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗೌಳಿವಾಡಾ ಗ್ರಾಮದಲ್ಲಿ ನಡೆದಿದೆ.

    ಘಟನೆ ಏನು?
    ಗೌಳಿವಾಡಾ ಗ್ರಾಮದ ಸಾವಿತ್ರಿ ದೊಂಡು ಡೊಯಿಪಡೆ(26) ಗಂಡನನ್ನು ತೊರೆದು ತಾಯಿಯ ಮನೆಯಲ್ಲಿ ವಾಸವಾಗಿದ್ದಳು. ಬಳಿಕ ಅನೈತಿಕ ಸಂಬಂಧದಿಂದ ಮಹಿಳೆ ಗರ್ಭಿಣಿಯಾಗಿದ್ದು ಏಪ್ರಿಲ್ 20ರಂದು ತಾಲೂಕು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ.

    ಏಪ್ರಿಲ್ 22 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಗ್ರಾಮಕ್ಕೆ ಮರಳುತ್ತಿರುವ ಸಂದರ್ಭದಲ್ಲಿ 25 ಸಾವಿರ ರೂ.ಗೆ ಪಕ್ಕದ ಯಲ್ಲಾಪುರ ತಾಲೂಕಿನ ಕಿರುವತ್ತಿ ಗ್ರಾಮದ ರಾಹತ ಪಟೇಲ್ ಹಾಗೂ ಅಬ್ದುಲ್ ರಹಿಮಾನ್ ಪಟೇಲ್ ಎಂಬ ದಂಪತಿಗೆ ಮಾರಾಟ ಮಾಡಿ ಸ್ವಗ್ರಾಮಕ್ಕೆ ತೆರಳಿದ್ದಾಳೆ. ಮಗುವಿನ ಕುರಿತು ಮೇಲ್ವಿಚಾರಣೆ ಮಾಡಲು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ನವಜಾತ ಶಿಶುವಿನ ಮನೆಗೆ ತೆರಳಿದಾಗ ವಿಷಯ ಹೊರಬಿದ್ದಿದೆ. ಇದನ್ನೂ ಓದಿ: ರಾಗಿ ಖರೀದಿ ಕೇಂದ್ರದಲ್ಲಿ ಗೋಲ್‌ಮಾಲ್ – ಕೇಂದ್ರಕ್ಕೆ ಬೀಗ ಜಡಿದ ರೈತರು

    ವಿಷಯ ತಿಳಿದ ತಕ್ಷಣ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಘಟನಾ ಸ್ಥಳಕ್ಕೆ ಸಿಡಿಪಿಒ ಡಾ. ಲಕ್ಷ್ಮೀದೇವಿ, ಪಿಎಸ್‌ಐ ಶಿವಾನಂದ್ ನಾವದಗಿ, ಪಿಡಿಒ ಮಹಾಂತೇಶ್ ಹುರಕಡ್ಡಿ, ವಲಯ ಮೇಲ್ವಿಚಾರಕಿ ರಾಜೇಶ್ವರಿ ಕಟ್ಟಿಮನಿ, ಮಹಿಳಾ ಪೇದೆ ರಮ್ಯಾ ವಿಚಾರಣೆ ನಡೆಸಿದಾಗ ಮಗು ಮಾರಾಟವಾದ ವಿಷಯ ತಿಳಿದುಬಂದಿದೆ. ಇದನ್ನೂ ಓದಿ: ರಾಜಕಾರಣಿಗಳಿಗೆ ದಿವ್ಯಾ ಜಾಲ – ಘಟಾನುಘಟಿಗಳೊಂದಿಗಿನ ಫೋಟೋಸ್ ವೈರಲ್

    POLICE JEEP

    ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿ, ಯಲ್ಲಾಪುರಕ್ಕೆ ತೆರಳಿ ನವಜಾತ ಶಿಶುವನ್ನು ರಕ್ಷಿಸಿದ್ದಾರೆ. ಮಗುವನ್ನು ಅಕ್ರಮ ಹಾಗೂ ಅನೈತಿಕವಾಗಿ ಸಾಗಾಣಿಕೆ ಮಾಡಲು ಸಹಕರಿಸಿದ ಮಹಿಳೆಯ ಅಣ್ಣ ಭಯ್ಯಾಜಾನು ಪಟಕಾರೆ, ಅಗಸಲಕಟ್ಟಾ ಗ್ರಾಮದ ಆಶಾ ಕಾರ್ಯಕರ್ತೆ ರೋಜಿ ಲೂಯಿಸ್ ದಬಾಲಿ, ಮಮ್ತಾಜ್ ಸರ್ದಾರ್ ಹಳಬ, ಶಿಶುವನ್ನು ಪಡೆದ ರಾಹತ ಪಟೇಲ್ ಹಾಗೂ ಅಬ್ದುಲ್ ರಹಿಮಾನ್ ಪಟೇಲ್ ದಂಪತಿ ವಿರುದ್ಧಸೂಕ್ತ ಕ್ರಮ ಕೈಗೊಳ್ಳುವಂತೆ ಡಾ. ಲಕ್ಷ್ಮೀದೇವಿ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ನರ್ಸ್ ತೋಳಿನಿಂದ ಜಾರಿ ಬಿದ್ದು ನವಜಾತ ಶಿಶು ಸಾವು

    ನರ್ಸ್ ತೋಳಿನಿಂದ ಜಾರಿ ಬಿದ್ದು ನವಜಾತ ಶಿಶು ಸಾವು

    ಲಕ್ನೋ: ನರ್ಸ್ ತೋಳುನಿಂದ ಜಾರಿ ಬಿದ್ದು ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಲಕ್ನೋದ ಚಿನ್ಹಾಟ್‍ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

    ಹೆರಿಗೆಯಾದ ಬಳಿಕ ನರ್ಸ್ ಮಗುವನ್ನು ಟವೆಲ್‍ನಲ್ಲಿ ಸುತ್ತಿದೇ ಮೇಲಕ್ಕೆತ್ತಿದ್ದು, ಮಗು ಜಾರಿ ನೆಲಕ್ಕೆ ಬಿದ್ದಿದೆ. ಇದನ್ನು ಕಂಡು ಮಗುವಿನ ತಾಯಿ ಕಿರುಚಾಡಲು ಆರಂಭಿಸಿದ್ದು, ಈ ಶಬ್ಧ ಕೇಳಿ ಮನೆಯವರು ಲೇಬರ್ ರೂಮ್‍ಗೆ ಹೋಗಲು ಪ್ರಯತ್ನಿಸಿದರು. ಈ ವೇಳೆ ಆಸ್ಪತ್ರೆ ಅಧಿಕಾರಿಗಳು ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೂ ಮಗು ಆರೋಗ್ಯವಾಗಿ ಜನಿಸಿದೆಯೇ ಎಂಬುವುದನ್ನು ತಿಳಿದುಕೊಳ್ಳಲು ಕುಟುಂಬಸ್ಥರು ಕೊಠಡಿಗೆ ನುಗ್ಗಿದ್ದಾರೆ. ಈ ವೇಳೆ ಕೆಳಗೆ ಬಿದ್ದಿದ್ದ ಮಗುವನ್ನು ನರ್ಸ್ ಒಂದು ಕೈಯಲ್ಲಿ ಹಿಡಿದುಕೊಂಡಿರುವುದನ್ನು ನೋಡಿದ್ದಾರೆ.  ಇದನ್ನೂ ಓದಿ: ರಥೋತ್ಸವದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ದುರ್ಮರಣ

    ಮಗು ಸತ್ತಿದ್ದರೂ, ಮಗು ಬದುಕಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಸುಳ್ಳನ್ನು ಹೇಳಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ಚಿನ್ಹತ್ ಪೊ ಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ  ಪೊಲೀಸರು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ವೇಳೆ ಮಗುವಿನ ತಲೆಯ ಮೇಲೆ ಗಾಯದ ಗುರುತಿರುವುದು ಬಹಿರಂಗಗೊಂಡಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – ಮೌಲ್ವಿ ವಾಸೀಂ ಪಠಾಣ್ ಇಂದು ಕೋರ್ಟ್‍ಗೆ

  • ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ಆಕ್ಸಿಜನ್ ಇಲ್ಲದಿದ್ರೂ ಚಿಕಿತ್ಸೆಗೆ ಕರೆದೊಯ್ದ ಚಾಲಕ: ಉಸಿರಾಟದ ಕೊರತೆಯಿಂದ ನವಜಾತ ಶಿಶು ಸಾವು

    ದಾವಣಗೆರೆ: ರಾಜ್ಯ ಸರ್ಕಾರ ತುರ್ತು ಚಿಕಿತ್ಸಾ ಸಹಾಯಕ್ಕಾಗಿ 108 ಅಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಆದರೆ ಆಂಬುಲೆನ್ಸ್ ನಲ್ಲಿ ಪ್ರಥಮ ಚಿಕಿತ್ಸೆಗೆ ಬೇಕಾದ ಸೂಕ್ತ ಸೌಲಭ್ಯವಿಲ್ಲದೆ ನವಜಾತ ಶಿಶುವೊಂದನ್ನು ಬಲಿ ಪಡೆದುಕೊಂಡಿದೆ.

    ಹೌದು… ಅಂಬುಲೆನ್ಸ್ ನಲ್ಲಿ ಆಕ್ಸಿಜನ್ ಇಲ್ಲದ ಕಾರಣ ಉಸಿರಾಟದ ಕೊರತೆಯಾಗಿ ನವಜಾತ ಶಿಶುವೊಂದು ಮೃತಪಟ್ಟಿರುವ ಘಟನೆ ಚೆನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶೃಂಗಾಯಬಾಬು ತಾಂಡದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಮೊದಲ ಮಗುವೇ ಮೃತಪಟ್ಟಿರುವುದು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    HOSPITAL

    ಏನಿದು ಘಟನೆ?
    ಶುಕ್ರವಾರ ರಾತ್ರಿ 2 ಗಂಟೆ ವೇಳೆ ಸ್ವಾತಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಬಸವಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಬೆಳಗ್ಗೆ 7 ಗಂಟೆ ವೇಳೆಗೆ ಹೆರಿಗೆ ಮಾಡಿಸಲಾಗಿದೆ. ಮಗುವಿಗೆ ಉಸಿರಾಟ ತೊಂದರೆಯಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾಳಿಗೆ ಕರೆದೊಯ್ಯಲು ಪೋಷಕರು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯಬೇಕಿದ್ದ ಆಂಬ್ಯುಲೆನ್ಸ್‌ನಲ್ಲಿ ಆಕ್ಸಿಜನ್ ಇಲ್ಲದಿದ್ದರೂ ಚಾಲಕ ಮಾರ್ಗಮಧ್ಯೆ ಬೇರೊಂದು ಆಂಬುಲೆನ್ಸ್ ಬರುತ್ತದೆ ಎಂದು ಹೇಳಿ ಕರೆದೊಯ್ದಿದ್ದಾನೆ. ಹೊನ್ನಾಳಿಗೆ ತಲುಪುವವರೆಗೂ ಆಕ್ಸಿಜನ್ ಸಿಗದ ಕಾರಣ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ಇದನ್ನೂ ಓದಿ: ಕೆನಡಾ ತುಂಬಾ ಸೇಫ್ ಎನ್ನುತ್ತಿದ್ದ ಭಾರತದ ವಿದ್ಯಾರ್ಥಿ ಗುಂಡೇಟಿಗೆ ಬಲಿ

    108 ambulance karnataka A copy
    ಸಾಂದರ್ಭಿಕ ಚಿತ್ರ

    ಇದರಿಂದಾಗಿ ಪೋಷಕರು ಹಾಗೂ ಮಗುವಿನ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡಿದ್ದು, ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಇಲ್ಲಿ ಸರಿಯಾದ ಸಮಯಕ್ಕೆ 108 ಅಂಬುಲೆನ್ಸ್ ಬರುತ್ತಿಲ್ಲ. ಇದ್ದ ಅಂಬುಲೆನ್ಸ್ ನಲ್ಲಿ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲ ಎಂದು ದೂರುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸದ್ಯ ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಕೊರೊನಾದಿಂದ ರಕ್ಷಣೆ – ಶಿಶುಗಳಿಗಾಗಿ ಸ್ಪೆಷಲ್ ಫೇಸ್ ಶೀಲ್ಡ್

    ಕೊರೊನಾದಿಂದ ರಕ್ಷಣೆ – ಶಿಶುಗಳಿಗಾಗಿ ಸ್ಪೆಷಲ್ ಫೇಸ್ ಶೀಲ್ಡ್

    ಬ್ಯಾಂಕಾಕ್: ಥೈಲ್ಯಾಂಡ್‍ನಲ್ಲಿ ಕೊರೊನಾ ವೈರಸ್‍ನಿಂದ ನವಜಾತ ಶಿಶುಗಳನ್ನು ರಕ್ಷಿಸಲು ಹೊಸ ಪ್ಲಾನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಹುಟ್ಟಿದ ಶಿಶುಗಳಿಗೆ ಸ್ಪೆಷಲ್ ಫೇಸ್ ಶೀಲ್ಡ್ ಹಾಕುವ ಮೂಲಕ ಮಕ್ಕಳಿಗೆ ವೈರಸ್ ಹರಡುವುದನ್ನು ತಡೆಗಟ್ಟಲು ಆಸ್ಪತ್ರೆ ಸಿಬ್ಬಂದಿ ಮುಂದಾಗಿದ್ದಾರೆ.

    ಬ್ಯಾಂಕಾಕ್‍ನ ಪ್ರರಮ್ 9 ಆಸ್ಪತ್ರೆಯಲ್ಲಿ ಈ ಕ್ರಮವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಆಸ್ಪತ್ರೆಯ ಹೆರಿಗೆ ವಾರ್ಡಿನಲ್ಲಿರುವ ಶಿಶುಗಳ ಮುಖಕ್ಕೆ ಶೀಲ್ಡ್ ಹಾಕಿ ಕೊರೊನಾ ಸೋಂಕು ತಗುಲದಂತೆ ನಿಗಾವಹಿಸಲಾಗಿದೆ.

    ಈವರೆಗೆ ಥೈಲ್ಯಾಂಡ್‍ನಲ್ಲಿ 2,473 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದೆ. ಅವರಲ್ಲಿ 33 ಮಂದಿ ಸಾವನ್ನಪ್ಪಿದ್ದು, 1,013 ಮಂದಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

    ಶುಕ್ರವಾರ ಒಂದೇ ದಿನ ಥೈಲ್ಯಾಂಡ್‍ನಲ್ಲಿ 50 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಈ 50 ಸೋಂಕಿತರಲ್ಲಿ 27 ಮಂದಿ ಹಳೆಯ ಸೋಂಕಿತ ರೋಗಿಗಳ ಸಂಪರ್ಕದಲ್ಲಿ ಇದ್ದವರಾಗಿದ್ದು, 8 ಮಂದಿಗೆ ಸೋಂಕು ಹೇಗೆ ತಗುಲಿತು ಎಂಬ ಮಾಹಿತಿ ಇರದ ಹಿನ್ನೆಲೆ ತನಿಖೆ ನಡೆಸಲಾಗುತ್ತಿದೆ.

    ವಿಶ್ವಾದ್ಯಂತ ಬರೋಬ್ಬರಿ 17,00,951 ಮಂದಿಗೆ ಕೊರೊನಾ ತಗುಲಿದ್ದು, ಈವರೆಗೆ 1,02,789 ಮಂದಿ ಸಾವನ್ನಪ್ಪಿದ್ದಾರೆ, ಅಲ್ಲದೆ 3,76,796 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

  • ಅಪ್ರಾಪ್ತೆಯನ್ನ ಅತ್ಯಾಚಾರಗೈದ ಚಿಕ್ಕಪ್ಪ – ಸಿಟ್ಟಿಗೆ ಶಿಶುವನ್ನು ಕಿಟಕಿಯಿಂದ ಎಸೆದು ಕೊಂದ ಸಂತ್ರಸ್ತೆ

    ಅಪ್ರಾಪ್ತೆಯನ್ನ ಅತ್ಯಾಚಾರಗೈದ ಚಿಕ್ಕಪ್ಪ – ಸಿಟ್ಟಿಗೆ ಶಿಶುವನ್ನು ಕಿಟಕಿಯಿಂದ ಎಸೆದು ಕೊಂದ ಸಂತ್ರಸ್ತೆ

    ಶಿಮ್ಲಾ: ಅಪ್ರಾಪ್ತೆಯನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರಗೈದು ಗರ್ಭವತಿ ಮಾಡಿದ ನಾಚಿಕೆಗೇಡಿ ಪ್ರಕರಣವೊಂದು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದಿದ್ದು, ಇದೇ ಸಿಟ್ಟಿನಿಂದ ಆಗತಾನೆ ಜನಿಸಿದ್ದ ಶಿಶುವನ್ನು ಬಾಲಕಿ ಆಸ್ಪತ್ರೆ ಶೌಚಾಲಯದ ಕಿಟಕಿಯಿಂದ ಎಸೆದು ಕೊಲೆ ಮಾಡಿದ್ದಾಳೆ.

    ಬುಧವಾರದಂದು ರೋಹ್ರು ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಶೌಚಾಲಯದ ಪಕ್ಕದಲ್ಲಿದ್ದ ಕಿಟಕಿ ಕೆಳಗೆ ನವಜಾತ ಶಿಶುವಿನ ಶವ ಕಂಡಿದೆ. ಅದನ್ನು ನೋಡಿದ ಬಳಿಕ ಸಿಬ್ಬಂದಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದಾರೆ. ಆಸ್ಪತ್ರೆಯ ದಾಖಲೆ ಪುಸ್ತಕದಲ್ಲಿ ಘಟನೆ ನಡೆದ ದಿನ ಯಾವುದೇ ಗರ್ಭವತಿ ಆಸ್ಪತ್ರೆಗೆ ಬಂದಿರಲಿಲ್ಲ.

    ಶವ ಹೇಗೆ ಆಸ್ಪತ್ರೆ ಆವರಣದಲ್ಲಿ ಬಂತು ಎಂದು ತಲೆಕೆಡಿಸಿಕೊಂಡ ಆಸ್ಪತ್ರೆ ಅಧಿಕಾರಿಗಳು ಈ ಪ್ರಕರಣ ಪತ್ತೆ ಮಾಡಲು ಸದ್ಯದಲ್ಲಿ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಯರ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ದಿನಗಳ ಹಿಂದೆ ದಾಖಲಾಗಿದ್ದ ಅಪ್ರಾಪ್ತೆಯೇ ಈ ಕೃತ್ಯವೆಸೆಗಿದ್ದಾಳೆ ಎಂದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

    ಪ್ರಕರಣ ದಾಖಲಿಸಿಕೊಂಡು, ಅಪ್ರಾಪ್ತೆಯನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಅಪ್ರಾಪ್ತೆ ತಪ್ಪೊಪ್ಪಿಕೊಂಡಿದ್ದಾಳೆ. ತನ್ನ ಮೇಲೆ ಚಿಕ್ಕಪ್ಪ ಅತ್ಯಾಚಾರ ಮಾಡಿದ್ದಕ್ಕೆ ತಾನು ಗರ್ಭ ಧರಿಸಿದ್ದೆ. ಆದ್ದರಿಂದ ಸೋಮವಾರ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಆಗ ಆಸ್ಪತ್ರೆ ಶೌಚಾಲಯಕ್ಕೆ ತೆರಳಿದ್ದಾಗ ಹೆರಿಗೆ ಆಯ್ತು. ಚಿಕ್ಕಪ್ಪನ ಮೇಲಿದ್ದ ಸಿಟ್ಟಿಗೆ ಶೌಚಾಲಯದ ಕಿಟಕಿಯಿಂದ ನವಜಾತ ಶಿಶುವನ್ನು ಎಸೆದೆ ಎಂದು ಹೇಳಿದ್ದಾಳೆ. ಕಿಟಕಿಯಿಂದ ಎಸೆದ ಪರಿಣಾಮ ಶಿಶುವು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಮಾತನಾಡಿ, ಕುಟುಂಬದ ಮರ್ಯಾದೆ ಹೋಗುತ್ತೆ ಎನ್ನುವ ಕಾರಣಕ್ಕೆ ಈ ಕೃತ್ಯದ ಬಗ್ಗೆ ಕುಟುಂಬಸ್ಥರು ಎಲ್ಲೂ ಬಾಯಿಬಿಟ್ಟಿರಲಿಲ್ಲ. ಆಸ್ಪತ್ರೆ ಸಿಬ್ಬಂದಿ ಘಟನೆ ಬಗ್ಗೆ ತಿಳಿಸಿದ ನಂತರ ಪೊಲೀಸರು ಬಾಲಕಿ ಹಾಗೂ ಅತ್ಯಾಚಾರ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • ನಾಯಿಗಳಿಂದ ನವಜಾತ ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳು!

    ನಾಯಿಗಳಿಂದ ನವಜಾತ ಶಿಶುವನ್ನು ರಕ್ಷಿಸಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳು!

    ನವದೆಹಲಿ: ಸಂಚಾರ ಪೊಲೀಸ್ ಅಧಿಕಾರಿಗಳು ರಸ್ತೆಯ ಬಳಿ ಇದ್ದ ಪೊದೆಯಲ್ಲಿ ಬಿದ್ದಿದ್ದ ನವಜಾತ ಶಿಶುವಿನ ಸುತ್ತ ಸುತ್ತುವರಿದ್ದಿದ್ದ ನಾಯಿಗಳಿಂದ ಮಗುವನ್ನು ರಕ್ಷಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.

    ಅನಿಲ್, ಅಮರ್ ಸಿಂಗ್ ಮತ್ತು ಪರ್ವೀನ್ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿಗಳಾಗಿದ್ದು, ಇವರು ಆರ್.ಕೆ ಖನ್ನಾ ಟೆನಿಸ್ ಕ್ರೀಡಾಂಗಣದ ಸಮೀಪ ಸಂಚಾರವನ್ನು ನಿಯಂತ್ರಿಸುತ್ತಿದ್ದರು. ಈ ಮೂವರು ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಮಗುವನ್ನು ರಕ್ಷಿಸಿದ್ದಾರೆ.

    ಘಟನೆ ವಿವರ:
    ಮೂವರು ಅವಿಭಾಜ್ಯ ಪೊಲೀಸ್ ಅಧಿಕಾರಿಗಳಾಗಿ ಆಫ್ರಿಕಾ ಅವಿನ್ಯೂ ರಸ್ತೆಯ ಬಳಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಅಲ್ಲೇ ರಸ್ತೆಯ ಬಳಿ ಇದ್ದ ಪೊದೆಯಲ್ಲಿ ನವಜಾತ ಶಿಶುವಿನ ಅಳು ಕೇಳಿಸುತ್ತಿದೆ. ಮಗುವಿನ ಅಳು ಆಲಿಸಿದ ಪೊಲೀಸರು ಸ್ಥಳಕ್ಕೆ ಬಂದಾಗ ಕಂದಮ್ಮನ ಸುತ್ತ ನಾಯಿಗಳು ಸುತ್ತುವರಿದಿದ್ದವು. ಅದನ್ನು ಕಂಡು ಗಾಬರಿಗೊಂಡ ಪೊಲೀಸರು ನಾಯಿಗಳಿಂದ ಮಗುವನ್ನು ರಕ್ಷಿಸಿದ್ದಾರೆ.

    ಘಟನೆಯ ಬಳಿಕ ಸಂಚಾರ ಅಧಿಕಾರಿಗಳು ತಕ್ಷಣವೇ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿದರು. ಬಳಿಕ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆತಂದರು. ಸದ್ಯಕ್ಕೆ ಮಗು ಆರೋಗ್ಯವಾಗಿದೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಘಟನೆಗೆ ಸಂಬಂಧಪಟ್ಟಂತೆ ಐಪಿಸಿ ಸೆಕ್ಷನ್ 317 ರ ಅಡಿಯಲ್ಲಿ ಸಫ್ದರ್ಜಂಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಮಾನದ ಟಾಯ್ಲೆಟ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ

    ವಿಮಾನದ ಟಾಯ್ಲೆಟ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ

    ನವದೆಹಲಿ: ದೆಹಲಿಯಿಂದ ಗುವಾಹತಿ ಮೂಲಕ ಇಂಫಾಲ್ ಗೆ ಪ್ರಯಾಣ ಬೆಳೆಸಿದ್ದ ಏರ್ ಏಷ್ಯಾ ವಿಮಾನದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.

    ಬುಧವಾರ ಈ ಘಟನೆ ನಡೆದಿದೆ. ವಿಮಾನ ಹಾರಾಟ ವೇಳೆಯೇ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಲಾಗಿದ್ದು, ಈ ವೇಳೆ ಮಗುವಿನ ಬಾಯಿಗೆ ಶೌಚಾಲಯದ ಪೇಪರ್ ಇಟ್ಟು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

    ಮಗುವಿಗೆ ಜನ್ಮ ನೀಡಿರುವ ಹುಡುಗಿ ಅಪ್ರಾಪ್ತೆಯಾಗಿರುವ ಸಾಧ್ಯತೆ ಇದ್ದು, ಇಂಫಾಲ್ ನಿಂದ ಆಗಮಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳಿಕ ವಿಮಾನ ಮಂಡಳಿ ವಿಮಾನದಲ್ಲಿದ್ದ ಎಲ್ಲ ಮಹಿಳಾ ಪ್ರಯಾಣಿಕರನ್ನು ಪ್ರಶ್ನಿಸಿದ್ದು, ಆರೋಪಿ ಅಪ್ರಾಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. “ಈ ವಿಷಯವನ್ನು ಡಿಜಿಸಿಎ ವರದಿ ಮಾಡಿದೆ ಮತ್ತು ವಿಮಾನಯಾನ ಸಿಬ್ಬಂದಿ ಹಾಗು ಇತರರು ದೆಹಲಿ ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ. ನಾವು ತನಿಖೆಯಲ್ಲಿ ಸಹಾಯ ಮಾಡುತ್ತೇವೆ. ಜೊತೆಗೆ ಎಲ್ಲ ಸಂಬಂಧಪಟ್ಟ ಏಜೆನ್ಸಿಗಳಿಗೆ ಸಹಕಾರ ನೀಡುತ್ತೇವೆ” ಎಂದು ಏರ್ ಏಷ್ಯಾ ವಿಮಾನ ಮಂಡಳಿ ತಿಳಿಸಿದೆ.