Tag: news channel

  • ಸುದ್ದಿವಾಹಿನಿಯ ನೇರ ಪ್ರಸಾರದ ಕಾರ್ಯಕ್ರಮದಲ್ಲೆ ಬಡಿದಾಡಿಕೊಂಡ ಅತಿಥಿಗಳು

    ಸುದ್ದಿವಾಹಿನಿಯ ನೇರ ಪ್ರಸಾರದ ಕಾರ್ಯಕ್ರಮದಲ್ಲೆ ಬಡಿದಾಡಿಕೊಂಡ ಅತಿಥಿಗಳು

    ನವದೆಹಲಿ: ನೊಯ್ಡಾದ ಖಾಸಗಿ ಸುದ್ದಿವಾಹಿನಿಯ ನೇರ ಪ್ರಸಾರದ ಚರ್ಚಾ ಕಾರ್ಯಕ್ರಮದಲ್ಲೇ ಮೌಲಾನಾ ಹಾಗೂ ಮಹಿಳಾ ವಕೀಲೆ ಬಡಿದಾಡಿಕೊಂಡಿದ್ದಾರೆ.

    ಮಂಗಳವಾರ ಸಂಜೆ ತ್ರಿವಳಿ ತಲಾಖ್‍ಗೆ ಸಂಬಂಧಿಸಿದಂತೆ ಸ್ಥಳೀಯ ಖಾಸಗಿ ಸುದ್ದಿವಾಹಿನಿಯಲ್ಲಿ ನೇರ ಪ್ರಸಾರ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೌಲಾನ ಇಜಾಜ್ ಅರ್ಷದ್ ಕಜ್ಮಿ ಹಾಗೂ ಸುಪ್ರಿಂಕೋರ್ಟ್ ನ ಮಹಿಳಾ ವಕೀಲೆಯಾದ ಫರ್ಹಾ ಫೈಯಾಜ್ ನಡುವೆ ಮಾತುಕತೆ ತಾರಕ್ಕೇರಿದೆ. ನೇರಪ್ರಸಾರದ ಕಾರ್ಯಕ್ರಮವನ್ನು ಲೆಕ್ಕಿಸದೆ ಇವರಿಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಇದೇ ವೇಳೆ ಕೋಪಗೊಂಡ ಮೌಲನಾ ಮಹಿಳೆಯ ಮೇಲೆ ಕೈ ಮಾಡಿದ್ದಾರೆ.

    ಘಟನೆ ಸಂಬಂಧ ಎಚ್ಚೆತ್ತ ಸುದ್ದಿವಾಹಿನಿಯು ಮೌಲಾನನ್ನು ತಡೆದು, ಮಹಿಳಾ ವಕೀಲೆಯನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಮೌಲಾನ ಇಜಾಜ್ ಅರ್ಷದ್ ಕಜ್ಮಿ ವಿರುದ್ಧ ಸುದ್ದಿವಾಹಿನಿಯು ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಮೌಲಾನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಗಲಾಟೆ?
    ತ್ರಿವಳಿ ತಲಾಖ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಪ್ರೀಂ ಕೋರ್ಟ್‍ನ ಮಹಿಳಾ ವಕೀಲೆ ಫರ್ಹಾ ಫಯಾಜ್‍ರವರು ತ್ರಿವಳಿ ತಲಾಕ್ ಕುರಿತು ಕುರಾನ್ ನಲ್ಲಿ ಉಲ್ಲೇಖವಿಲ್ಲ, ಮುಸ್ಲಿಂ ಸಮುದಾಯ ಮಹಿಳೆಯ ಮೂಲಭೂತ ಹಕ್ಕಿಗೆ ಧಕ್ಕೆಮಾಡುತ್ತಿದ್ದು, ಮದುವೆಯ ಸಮಯದಲ್ಲಿ ಲಿಂಗ ತಾರತಮ್ಯ ನಡೆಸುತ್ತದೆ. ಇದರಿಂದಾಗಿ ಮಹಿಳೆಯರು ಬಲಿಪಶುಗಳಾಗಿದ್ದಾರೆ. ತಲಾಖ್ ನಿಂದಾಗಿ ಮಹಿಳೆಗೆ ಸರಿಯಾದ ಪರಿಹಾರಗಳು ಸಹ ಸಿಗುವುದಿಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಮೌಲಾನಾ ಕಜ್ಮಿ ಮಹಿಳಾ ವಕೀಲೆ ಮೇಲೆ ಹಲ್ಲೆ ನಡೆಸಿದ್ದಾನೆ.

  • ನ್ಯೂಸ್ ಚಾನೆಲ್ ಉದ್ಘಾಟನಾ ದಿನವೇ ಸೆಕ್ಸ್ ಆಡಿಯೋ ಸ್ಫೋಟ – ಸಚಿವ ರಾಜೀನಾಮೆ

    ನ್ಯೂಸ್ ಚಾನೆಲ್ ಉದ್ಘಾಟನಾ ದಿನವೇ ಸೆಕ್ಸ್ ಆಡಿಯೋ ಸ್ಫೋಟ – ಸಚಿವ ರಾಜೀನಾಮೆ

    ತಿರುವನಂತಪುರಂ: ಇಂದು ಉದ್ಘಾಟನೆಗೊಂಡ ಮಲಯಾಳಂ ನ್ಯೂಸ್ ಚಾನೆಲೊಂದು ಬ್ರೇಕ್ ಮಾಡಿದ ಸೆಕ್ಸ್ ಆಡಿಯೋ ಕ್ಲಿಪ್ ನ್ಯೂಸ್‍ನಿಂದಾಗಿ ಕೇರಳದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ.

    ಕೇರಳದ ನ್ಯೂಸ್ ಚಾನೆಲ್‍ಗಳ ಸಾಲಿಗೆ ಸೇರ್ಪಡೆಯಾಗಲು ಮಂಗಳಂ ಟಿವಿ ಇಂದು ಉದ್ಘಾಟನಾ ಕಾರ್ಯಕ್ರಮ ನಿಗದಿ ಮಾಡಿತ್ತು. ಇಂದು ಬೆಳಗ್ಗೆ ಚಾನೆಲ್ ಅಧಿಕೃತ ಪ್ರಸಾರ ಆರಂಭವಾಗುತ್ತಿದ್ದಂತೆಯೇ ಮಂಗಳಂ ಟಿವಿ ಚಾನೆಲ್, ಸಾರಿಗೆ ಸಚಿವ ಎ.ಕೆ.ಶಶೀಂದ್ರನ್ ಅವರು ಸಹಾಯ ಯಾಚಿಸಿ ತನ್ನ ಬಳಿ ಬಂದಿದ್ದ ಮಹಿಳೆಯ ಜೊತೆ ಫೋನ್‍ನಲ್ಲಿ ಅಶ್ಲೀಲವಾಗಿ ಕಾಮೋತ್ತೇಜಿತನಾಗಿ ಮಾತನಾಡುತ್ತಿದ್ದ ಆಡಿಯೋವನ್ನು ಬಿಡುಗಡೆ ಮಾಡಿತು. ಅಲ್ಲದೆ ಇಂದು ಸ್ಫೋಟಕ ಸುದ್ದಿಯೊಂದಿಗೆ ಚಾನೆಲ್ ಪ್ರಸಾರ ಕಾರ್ಯ ಶುರು ಮಾಡಲಿದೆ ಎಂದು ಮಂಗಳಂ ದಿನ ಪತ್ರಿಕೆಯಲ್ಲಿ ವರದಿಯನ್ನೂ ಪ್ರಕಟಿಸಿತ್ತು.

    ಈ ಆಡಿಯೋ ಕ್ಲಿಪ್ ಮಂಗಳಂ ಟಿವಿ ಚಾನೆಲ್ ನಲ್ಲಿ ಬರುತ್ತಿದ್ದಂತೆಯೇ ಕೇರಳ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆದವು. ಕೇರಳ ಸಿಎಂ ಪಿಣರಾಯಿ ವಿಜಯನ್ ಇದೊಂದು ಗಂಭೀರ ವಿಚಾರ. ಎಲ್ಲಾ ಮಾಹಿತಿ ಪಡೆದ ಬಳಿಕ ಕ್ರಮಕೈಗೊಳ್ಳುತ್ತೇನೆ ಎಂದೂ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

    ಆದರೆ ಮಧ್ಯಾಹ್ನ 3 ಗಂಟೆಗೆ ಸ್ವತಃ ಎ.ಕೆ.ಶಶೀಂದ್ರನ್ ಅವರೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು. ಆದರೆ ಈ ಆಡಿಯೋದಲ್ಲಿರುವುದು ತನ್ನ ಧ್ವನಿ ಹೌದೋ ಅಲ್ಲವೋ ಎಂಬ ಬಗ್ಗೆ ಶಶೀಂದ್ರನ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಸಹಾಯ ಯಾಚಿಸಿ ಬಂದವರಿಗೆ ಉತ್ತಮ ರೀತಿಯಲ್ಲೇ ಪ್ರತಿಕ್ರಿಯಿಸಿದ್ದೇನೆ. ಈ ಪ್ರಕರಣದ ಬಗ್ಗೆ ಸರ್ಕಾರ ಯಾವ ತನಿಖಾ ಸಂಸ್ಥೆಯಿಂದ ಬೇಕಾದರೂ ತನಿಖೆ ನಡೆಸಲಿ ಎಂದು ಅವರು ಹೇಳಿದರು.

    ಆಡಿಯೋದಲ್ಲೇನಿದೆ?: ಮಂಗಳಂ ಟಿವಿ ಚಾನೆಲ್‍ನಲ್ಲಿ ಪ್ರಸಾರವಾದ ಆಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಯ ಜೊತೆಗೆ ಲೈಂಗಿಕಾಸಕ್ತಿಯಿಂದ ಮಾತನಾಡುತ್ತಿದ್ದಾರೆ. ಯಾರ ಜೊತೆಗೆ ಆ ವ್ಯಕ್ತಿ ಮಾತನಾಡುತ್ತಾರೆ ಎಂದು ಆಡಿಯೋದಲ್ಲಿ ಗೊತ್ತಾಗುತ್ತಿಲ್ಲ. ಆದರೆ ಈ ವ್ಯಕ್ತಿ ಮಾತ್ರ ನಾನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ ಎಂದು ಮಾತು ಆರಂಭಿಸಿ ಮುಂದೆ ಹಂತ ಹಂತವಾಗಿ ಸೆಕ್ಸ್ ವಿಚಾರಗಳನ್ನು ಪ್ರಸ್ತಾಪಿಸುತ್ತಾ ಹೋಗುತ್ತಾರೆ. ಈ ಆಡಿಯೋ ಯಾರೂ ಕೇಳಿಸಿಕೊಳ್ಳಲಾಗದಷ್ಟು ಅಸಹ್ಯಕರವಾಗಿದೆ ಎನ್ನಲಾಗಿದೆ.

    ಸಚಿವರ ವರ್ತನೆಗೆ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಪ್ರತಿಕ್ರಿಯಿಸಿ ಈ ರೀತಿಯ ಘಟನೆ ನಡೆಯಬಾರದಿತ್ತು. ರಾಜ್ಯದಲ್ಲಿ ಎಲ್‍ಡಿಎಫ್ ಸರ್ಕಾರ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ಕೇರಳದಲ್ಲಿ ಎಲ್‍ಡಿಎಫ್ ಸರ್ಕಾರಕ್ಕೆ ಬಂದ ನಂತರ ಸಚಿವರು ರಾಜೀನಾಮೆ ನೀಡುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ 2016ರ ಅಕ್ಟೋಬರ್ ನಲ್ಲಿ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    ಪ್ರತಿ ವಾರ ಮಂಗಳ, ಬಾಲಮಂಗಳನ್ನು ಹೊರ ತರುವ ಮಂಗಳ ಪಬ್ಲಿಕೇಶನ್ಸ್ ನವರು ಈ ವಾಹಿನಿಯನ್ನು ಆರಂಭಿಸಿದ್ದಾರೆ.

    https://www.youtube.com/watch?v=_FDOSa_p8-o&feature=youtu.be