Tag: newyork

  • ಅಮೆರಿಕದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮಾವಾಸ್ಯೆ ಆಚರಣೆ

    ಅಮೆರಿಕದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮಾವಾಸ್ಯೆ ಆಚರಣೆ

    ವಾಷಿಂಗ್ಟನ್: ಅಮೆರಿಕದ (America) ನ್ಯೂಯಾರ್ಕ್ (New York) ನ್ಯೂಜೆರ್ಸಿ (New Jersey) ನಗರದಲ್ಲಿರುವ ಶ್ರೀ ಆದಿಚುಂಚನಗಿರಿ (Adichunchanagiri) ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಸೋಮವಾರ ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮಾಡುವ ಮೂಲಕ ಭಕ್ತಿ ಭಾವದಿಂದ ಶ್ರಾವಣ ಅಮಾವಾಸ್ಯೆ ಆಚರಿಸಲಾಯಿತು.

    ಹಲವಾರು ಭಕ್ತರು ಕುಟುಂಬ ಸಮೇತ ಪೂಜೆಯಲ್ಲಿ ಭಾಗವಹಿಸಿ ಧನ್ಯರಾದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ (Nirmalanandanatha Swamiji) ದಿವ್ಯ ಸಾನಿಧ್ಯದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಇದನ್ನೂ ಓದಿ: Paralympics | ಮನೀಶಾ ಕಂಚಿನ ಮಿಂಚು – ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ!

    ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಪೂಜ್ಯ ಪ್ರಸನ್ನನಾಥ ಸ್ವಾಮೀಜಿಯವರು, ಮೈಸೂರು ಶಾಖೆಯ ಪೂಜ್ಯ ಸೋಮೇಶ್ವರನಾಥ ಸ್ವಾಮಿಜಿಯವರ ಉಪಸ್ಥಿತಿಯಲ್ಲಿ ಅಮಾವಾಸ್ಯೆ ಪೂಜೆಯನ್ನು ನೆರವೇರಿಸಲಾಯಿತು. ಇದನ್ನೂ ಓದಿ: ಬೈಕ್‌ನಲ್ಲಿ ಬಂದು ಪುಣೆ ಮಾಜಿ ಕಾರ್ಪೋರೇಟರ್ ಕೊಂದ್ರು – 10 ಆರೋಪಿಗಳ ಮೇಲೆ ಎಫ್‌ಐಆರ್

  • ನ್ಯೂಯಾರ್ಕ್‍ನಲ್ಲಿ ಶಾಸ್ತ್ರೀಯ ನೃತ್ಯ ಪ್ರದರ್ಶನ- ಜನಮನ ಸೆಳೆದ ಬೆಂಗಳೂರಿನ ಗುರು ರಶ್ಮಿ ನೃತ್ಯ ತಂಡ

    ನ್ಯೂಯಾರ್ಕ್‍ನಲ್ಲಿ ಶಾಸ್ತ್ರೀಯ ನೃತ್ಯ ಪ್ರದರ್ಶನ- ಜನಮನ ಸೆಳೆದ ಬೆಂಗಳೂರಿನ ಗುರು ರಶ್ಮಿ ನೃತ್ಯ ತಂಡ

    ಬೆಂಗಳೂರು: ನ್ಯೂಯಾರ್ಕ್ (NewYork) ನ ಪೌರಾಣಿಕ ಕಾರ್ನೆಗೀ ಹಾಲ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಡ್ಯಾನ್ಸ್ ಫೆಸ್ಟಿವಲ್ ನಲ್ಲಿ ಬೆಂಗಳೂರಿನ ರಶ್ಮಿ ಶಶಿ ಅವರ 30 ವಿಧ್ಯಾರ್ಥಿಗಳ ನೃತ್ಯ ಕಲಾರಸಿಕರ ಮನ ಸೆಳೆಯಿತು. ಡ್ಯಾನ್ಸ್ ಫೆಸ್ಟಿವಲ್ ನಲ್ಲಿ 10 ಆಯ್ದ ನೃತ್ಯ ಶಾಲೆಗಳು ಪಾಲ್ಗೊಂಡಿದ್ದು, ಬೆಂಗಳೂರು ಮೂಲದ ಗುರು ರಶ್ಮಿಯವರ ತಂಡ ಭಾರತೀಯ ಶಾಸ್ತ್ರೀಯ ನೃತ್ಯವನ್ನ ( Indian Classical Dance) ಪ್ರದರ್ಶಿಸಿತು.

    ಅಮೆರಿಕಾದ ಪ್ರಸಿದ್ಧ ಫೆಸ್ಟಿವಲ್ ನಲ್ಲಿ ಒಂದಾಗಿರುವ ನ್ಯೂಯಾರ್ಕ್ ಕಾರ್ನೆಗೀ ಡ್ಯಾನ್ಸ್ ಫೆಸ್ಟಿವಲ್ ಗೆ ಪ್ರಪಂಚದಾದ್ಯಂತ ಅತ್ಯುತ್ತಮ ಕಲಾವಿದರನ್ನ ಆಯೋಜಿಸಲಾಗಿತ್ತು. ಫೆಸ್ಟಿವಲ್ ಗೆ ಉತ್ತರ ಅಮೆರಿಕಾದ್ಯಂತ ಕೇವಲ ಹತ್ತು ಪ್ರತಿಷ್ಠಿತ ನೃತ್ಯ ಶಾಲೆಗಳನ್ನು ಆಯ್ಕೆಯಾಗಿದ್ದವು. ಈ ಪೌರಾಣಿಕ ವಿಶ್ವ ವೇದಿಕೆಯಲ್ಲಿ ಗುರು ರಶ್ಮಿ ಅವರ ವಿಧ್ಯಾರ್ಥಿಗಳ ತಂಡ ಭಾರತದ ಪರಂಪರೆಯ ಸಾಸ್ತ್ರೀಯ ನೃತ್ಯವನ್ನ ಪ್ರದರ್ಶಿಸುವುದರೊಂದಿಗೆ ದೇಶದ ಗೌರವ ಹೆಚ್ಚಿಸಿದರು.

    ಟೆಕ್ಸಾಸ್ ಲ್ಯಾಂಡ್‍ನಲ್ಲಿರುವ ಸ್ಟುಡಿಯೋ ಮುದ್ರಾ ಸ್ಕೂಲ್ ಆಫ್ ಡ್ಯಾನ್ಸ್‍ನ ಕಲಾತ್ಮಕ ನಿರ್ದೇಶಕರಾಗಿರುವ ಗುರು ರಶ್ಮಿ ಶಶಿಯವರು ಬೆಂಗಳೂರಿನವರು. ಭರತನಾಟ್ಯ, ಜಾನಪದ ಮತ್ತು ಭಾರತದ ಇತರ ಸಮಕಾಲೀನ ನೃತ್ಯಗಳ ಕಲಾಕ್ಷೇತ್ರ ಶೈಲಿಯನ್ನು ಕಲಿಸುವಲ್ಲಿ ಗುರು ರಶ್ಮಿ ಪರಿಣತಿ ಹೊಂದಿದ್ದಾರೆ. ಇದನ್ನೂ ಓದಿ: ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    ಈ ಹಿಂದೆ ಗುರು ರಶ್ಮಿ ಮತ್ತು ಅವರ ವಿದ್ಯಾರ್ಥಿಗಳ ತಂಡ ಯುಎಸ್‍ಎಯಲ್ಲಿ ಅಕ್ಕ ಮತ್ತು ನಾವಿಕದಂತಹ ಪ್ರಮುಖ ಕನ್ನಡ ಸಮಾವೇಶಗಳಲ್ಲಿ ಪ್ರದರ್ಶನ ನೀಡಿದೆ. 2002 ರಲ್ಲಿ ಸೌತ್ ಫ್ಲೋರಿಡಾದಲ್ಲಿ ಸಿರಿ ನೃತ್ಯ ಸ್ಕೂಲ್ ಆಫ್ ಡ್ಯಾನ್ಸ್ ಮತ್ತು 2011 ರಲ್ಲಿ ಹೂಸ್ಟನ್ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಸ್ಟುಡಿಯೋ ಮುದ್ರಾ ಸ್ಕೂಲ್ ಆಫ್ ಡ್ಯಾನ್ಸ್ ಅನ್ನು ಪ್ರಾರಂಭಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್‍ನಲ್ಲಿ ಯುವ ಪೀಳಿಗೆಗೆ ಭಾರತೀಯ ಶಾಸ್ತ್ರೀಯ ನೃತ್ಯವನ್ನು ಪ್ರಚಾರ ಮಾಡುವ ಕಾರ್ಯದಲ್ಲಿ ತೊಡಗಿದ್ದರು.

    ಯುಎಸ್‍ಎ ಮತ್ತು ಭಾರತದಾದ್ಯಂತ ಹಲವಾರು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಿದ್ದಾರೆ. ದಶಾವತಾರ, ರಾಮಾಯಣ, ಮಾಯಾ – ಸಮಕಾಲೀನ ನೃತ್ಯ ನಾಟಕ, ಪುಣ್ಯಕೋಟಿ, ರಘುವೀರ ಮತ್ತು ನಾರಿ ಪ್ರದರ್ಶನಗಳು ಗುರುತಿಸಲ್ಪಟ್ಟಿವೆ. ಪ್ರಮುಖ ಕಾರ್ಯಕ್ರಮಗಳಲ್ಲಿ ಅವರ ಅಭಿನಯಕ್ಕಾಗಿ ಹಲವು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಭೂಪ

    ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಭೂಪ

    ವಾಷಿಂಗ್ಟನ್: ತನಗೆ ಚಿಕನ್ ಬಿರಿಯಾನಿ (Chicken) ಕೊಡಲಿಲ್ಲವೆಂದು ನ್ಯೂಯಾರ್ಕ್‌ನಲ್ಲಿರುವ ಬಾಂಗ್ಲಾದೇಶಿ ರೆಸ್ಟೋರೆಂಟ್‌ಗೆ (Restorent) ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿರುವ ಘಟನೆ ನ್ಯೂಯಾರ್ಕ್ (NewYork) ನಗರದಲ್ಲಿ ನಡೆದಿದೆ.

    ಇಲ್ಲಿನ ಜಾಕ್ಸನ್ ಹೈಟ್ಸ್‌ನಲ್ಲಿರುವ ಇಟ್ಟಾಡಿ ಗಾರ್ಡನ್ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ 49 ವರ್ಷದ ಚೋಫೆಲ್ ನಾರ್ಬು ನನ್ನು ನ್ಯೂಯಾರ್ಕ್ ಪೊಲೀಸರು (NewYork Police) ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕ್ರಿಮಿನಲ್ (Criminal Case) ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಕೇರಳ ಶೈಲಿಯ ರುಚಿಕರ ಸಿಗಡಿ ರೋಸ್ಟ್ ಮಾಡಿ ನೋಡಿ

     

    View this post on Instagram

     

    A post shared by FDNY (@fdny)

    ಬಂಧನದ ಬಳಿಕ ಆರೋಪಿ, ನಾನು ತುಂಬಾ ಕುಡಿದಿದ್ದೆ ಕುಡಿದಿದ್ದರಿಂದ ನನಗೆ ಹುಚ್ಚು ಹಿಡಿದಂತಾಗಿತ್ತು. ಹಾಗಾಗಿ ಚಿಕನ್ ಬಿರಿಯಾನಿ ಖರೀದಿಸಲು ಹೋದೆ. ಆದರೆ ನನಗೆ ಬಿರಿಯಾನಿ ಕೊಡಲಿಲ್ಲ. ಆದ್ದರಿಂದ ಗ್ಯಾಸ್ ಕ್ಯಾನ್ ಖರೀದಿಸಿ, ರೆಸ್ಟೋರೆಂಟ್ ಸುಡಲು ಮುಂದಾದೆ ಎಂದು ಹೇಳಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಮೆರಿಕಾದಲ್ಲಿ ಕಾಂತಾರ ನೋಡಿ ಭಾವುಕರಾದ ನಟ ಜಗ್ಗೇಶ್

    ಘಟನೆ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸರೆಯಾಗಿದೆ. ಅಲ್ಲದೇ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚುವ ವೇಳೆ ಆರೋಪಿಗೂ ಬೆಂಕಿ ತಗುಲಿದೆ. ಈ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

    ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

    ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

    ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ ತುರ್ತು ಲ್ಯಾಂಡಿಗ್ ಮಾಡಿದೆ.

    ಘಟನೆಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ ವಿಮಾನದಲ್ಲಿದ್ದ ವ್ಯಕ್ತಿಯೊಬ್ಬರು, ಅವರ ಸಲಹೆಗಾರರು ಮತ್ತು ರಹಸ್ಯ ಸೇವೆಯೊಂದಿಗೆ ಸುರಕ್ಷಿತವಾಗಿ ವಿಮಾನವು ತುರ್ತು ಲ್ಯಾಂಡಿಗ್ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ನ್ಯೂ ಓರ್ಲಿಯನ್ಸ್‌ನಲ್ಲಿ ತಮ್ಮ ಫ್ಲೋರಿಡಾ ಎಸ್ಟೇಟ್ ಮಾರ್-ಎ-ಲಾಗೊಗೆ ಹಿಂತಿರುಗುತ್ತಿದ್ದಾಗ ಶನಿವಾರ ರಾತ್ರಿ 11 ಗಂಟೆಗಿಂತ ಸ್ವಲ್ಪ ಮುಂಚೆ ತಾಂತ್ರಿಕ ವೈಫಲ್ಯ ಸಂಭವಿಸಿದೆ. ಘಟನೆಯ ಬಗ್ಗೆ ತಿಳಿದಿರುವ ವ್ಯಕ್ತಿಯ ಪ್ರಕಾರ, ನ್ಯೂ ಓರ್ಲಿಯನ್ಸ್ ಲೇಕ್‍ಫ್ರಂಟ್ ವಿಮಾನ ನಿಲ್ದಾಣವನ್ನು ತೊರೆದ ನಂತರ ಸುಮಾರು 120 ಕಿಲೋಮೀಟರ್ ದೂರದಲ್ಲಿ ಈ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Punjab Election Results 2022: ರಾಷ್ಟ್ರೀಯ ಕಚೇರಿ ಎದುರು ಬ್ಯಾನರ್, ಜಿಲೇಬಿ ರೆಡಿ – ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡ AAP

    ತುರ್ತು ಲ್ಯಾಂಡಿಂಗ್ ಅನ್ನು ದೃಢಪಡಿಸಿದ ನಂತರ ಟ್ರಂಪ್ ವಕ್ತಾರರು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ತುರ್ತು ಲ್ಯಾಂಡಿಂಗ್ ನಂತರ, ಟ್ರಂಪ್ ಅವರ ತಂಡವು ಮತ್ತೊಂದು ಖಾಸಗಿ ವಿಮಾನವನ್ನು ತೆಗೆದುಕೊಂಡು ಅಂತಿಮವಾಗಿ ಮರುದಿನ ಬೆಳಿಗ್ಗೆ ಮಾರ್-ಎ-ಲಾಗೊಗೆ ತೆರಳಿದ್ದಾರೆ.

  • ಚಲಿಸುತ್ತಿದ್ದ ರೈಲಿಗೆ ನೂಕಿ ಮಹಿಳೆಯ ಹತ್ಯೆ – ನಾನು ದೇವರು ಎಂದ ಆರೋಪಿ

    ಚಲಿಸುತ್ತಿದ್ದ ರೈಲಿಗೆ ನೂಕಿ ಮಹಿಳೆಯ ಹತ್ಯೆ – ನಾನು ದೇವರು ಎಂದ ಆರೋಪಿ

    ವಾಷಿಂಗ್ಟನ್: ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಮಹಿಳೆಯೊಬ್ಬರನ್ನು ನೂಕಿದ್ದ ಕಾರಣ ಆಕೆ ಸಾವನ್ನಪ್ಪಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ನಾನು ದೇವರು. ನಾನು ಇದನ್ನು ಮಾಡಬಹುದು ಎಂಬ ಹೇಳಿಕೆ ನೀಡಿದ್ದು, ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ.

    ಶನಿವಾರ ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ ಸುರಂಗಮಾರ್ಗ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಎದುರು 40 ವರ್ಷದ ಏಷ್ಯನ್ ಮಹಿಳೆಯನ್ನು ಸೈಮನ್ ಮಾರ್ಷಲ್ ಎಂಬ ವ್ಯಕ್ತಿ ತಳ್ಳಿದ್ದ. ಇದರಿಂದ ಮಹಿಳೆ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಳು. ಇದನ್ನೂ ಓದಿ: ಮೆಟ್ರೋ ರೈಲ್ವೆ ಹಳಿಗೆ ತಳ್ಳಿದ ವ್ಯಕ್ತಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

    ಕೊಲೆಯ ಸ್ಥಳದಿಂದ ವ್ಯಕ್ತಿ ಪಲಾಯನಗೈದಿದ್ದು, ನಂತರ ಒಂದು ಗಂಟೆಯ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ವರದಿಗಳ ಪ್ರಕಾರ ಆರೋಪಿ, ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಆತ ದರೋಡೆ ಪ್ರಕರಣದಲ್ಲಿ 2 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ. ನಂತರ 2021ರ ಆಗಸ್ಟ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ – ಇಬ್ಬರು ಭಾರತೀಯರು ಸಾವು

    ಪೊಲೀಸರು ಆರೋಪಿಯನ್ನು ಪ್ರಶ್ನಿಸಿದಾಗ ಆತ ನಾನು ದೇವರು. ನಾನು ಇದನ್ನು ಮಾಡಬಲ್ಲೆ ಎಂದು ಉತ್ತರಿಸಿದ್ದಾನೆ.

  • ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ ಪ್ರಿಯಾಂಕಾ ಚೋಪ್ರಾ

    ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ ಪ್ರಿಯಾಂಕಾ ಚೋಪ್ರಾ

    ವಾಷಿಂಗ್ಟನ್: ಬಾಲಿವುಡ್‍ ನಟಿ ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್‍ನಲ್ಲಿ ರೆಸ್ಟೋರೆಂಟ್ ಒಂದನ್ನು ಆರಂಭಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by SONA (@sonanewyork)

    ಈ ಹೋಟೆಲ್‍ಗೆ ಸೋನಾ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಇದು ಕೇವಲ ರೆಸ್ಟೋರೆಂಟ್ ಮಾತ್ರವಲ್ಲ, ನನ್ನ ಕನಸು ಕೂಡ. ನಾನು ಸೋನಾದಲ್ಲಿದ್ದೇನೆ ಎಂಬುದನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ. 3 ವರ್ಷದ ಪ್ಲ್ಯಾನಿಂಗ್‍ನಿಂದ ಈ ರೆಸ್ಟೋರೆಂಟ್ ಸಿದ್ಧಗೊಂಡಿದೆ. ಕಿಚನ್‍ಗೆ ತೆರಳಿ ತಂಡವನ್ನು ಮೀಟ್ ಮಾಡೋಕೆ ನಾನು ಉತ್ಸುಕಳಾಗಿದ್ದೇನೆ. ಸೋನಾ ಒಂದು ಅದ್ಭುತ ಅನುಭವ. ನನಗಾಗಿ ವಿಶೇಷ ಡೈನಿಂಗ್ ಹಾಲ್ ಮಾಡಿಕೊಂಡಿದ್ದೇನೆ. ಇಲ್ಲಿ ಅದ್ಭುತ ಆಹಾರ ಸಿಗಲಿದೆ ಸೋನಾದ ಅನುಭವ ಭಿನ್ನವಾಗಿರಲಿದೆ ಎಂದು ಬರೆದುಕೊಂಡು ಹೋಟೆಲ್ ಎದುರು ನಿಂತು ಫೋಟೋವನ್ನು ಕ್ಲಿಕ್ಕಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಅಮೆರಿಕದ ಗಾಯಕ ನಿಕ್ ಜೋನಸ್ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಕೂಡ ಅಮೆರಿಕದಲ್ಲೇ ಸೆಟ್ಲ್ ಆಗಿದ್ದಾರೆ. ಭಾರತಕ್ಕಿಂತಲೂ ಅವರು ಅಲ್ಲಿಯೇ ಹೆಚ್ಚು ಸಮಯ ಕಳೆಯುತ್ತಾರೆ. ಬಾಲಿವುಡ್‍ಗಿಂತಲೂ ಹೆಚ್ಚಾಗಿ ಹಾಲಿವುಡ್ ಮಂದಿಯ ಜೊತೆ ಅವರ ಒಡನಾಟ ಬೆಳೆದಿದೆ. ಹಾಗೆಯೇ ಅಮೆರಿಕದ ಜನರ ಜೊತೆಗೆ ಅವರು ಬೆರೆತುಹೋಗಿದ್ದಾರೆ. ಈಗ ಅವರು ಹೋಟೆಲ್ ಕೂಡ ಆರಂಭಿಸಿದ್ದಾರೆ. ನಟ ಸೋನು ಸೂದ್ ಸೇರಿ ಸಾಕಷ್ಟು ಸ್ಟಾರ್‍ಗಳು ಹೋಟೆಲ್ ಉದ್ಯಮ ಹೊಂದಿದ್ದಾರೆ. ಈ ಸಾಲಿಗೆ ಈಗ ಪ್ರಿಯಾಂಕಾ ಕೂಡ ಸೇರ್ಪಡೆಯಾಗಿದ್ದಾರೆ.

  • ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಂದು ಮೋದಿ ಮನ್ ಕೀ ಬಾತ್

    ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಂದು ಮೋದಿ ಮನ್ ಕೀ ಬಾತ್

    ನವದೆಹಲಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ. 75ನೇ ಸಭೆಯಲ್ಲಿ ಮಾತನಾಡಲಿರುವ ಅವರು ಭಾರತ 2021-22 ರ ಅವಧಿ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರವಾಗಿ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

    ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವರ್ಚುವಲ್ ಸಭೆಯಲ್ಲಿ ಪೂರ್ವ ರೆಕಾರ್ಡ್ ಮಾಡಿರುವ ಪ್ರಧಾನಿ ಮೋದಿ ಭಾಷಣವನ್ನು ಪ್ರಸಾರವಾಗಲಿದೆ. ಇಂದಿನ ಸಭೆಯಲ್ಲಿ ಮೊದಲ ಸ್ಪೀಕರ್ ಆಗಿ ಮೋದಿ ಮಾತನಾಡಲಿದ್ದಾರೆ.

    ಪ್ರಧಾನಿ ಮೋದಿ ಭಾಷಣದಲ್ಲಿ ಭಯೋತ್ಪಾದನೆ ವಿರುದ್ಧ ಜಾಗತಿಕ ಕ್ರಮಕ್ಕೆ ಆಗ್ರಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಸುಸ್ಥಿರ ಅಭಿವೃದ್ಧಿ ಮತ್ತು ಹವಮಾನ ಬದಲಾವಣೆ ಬಗ್ಗೆ ಮೋದಿ ಪ್ರಸ್ತಾಪಿಸಲಿದ್ದಾರೆ. ವಿಶ್ವದ ಸಂಸ್ಥೆಯ ಶಾಂತಿ ಪಾಲನಾ ಕಾರ್ಯಾಚರಣೆಯಲ್ಲಿ ಭಾರತ ತೊಡಗಿಸಿಕೊಳ್ಳಲು ನಿಟ್ಟಿನಲ್ಲಿ ಪ್ರಯತ್ನಿಸಲಿದ್ದಾರೆ.

    ಇದರ ಜೊತೆಗೆ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತ ತನ್ನ ಭಾಷಣದಲ್ಲಿ ಗೌರವ, ಚರ್ಚೆ, ಸಹಕಾರ, ಶಾಂತಿ ಮತ್ತು ಅಭಿವೃದ್ಧಿ ವಿಚಾರಗಳ ಬಗ್ಗೆ ಮೋದಿ ಪ್ರಸ್ತಾವಣೆ ಮಂಡಿಸಲಿದ್ದಾರೆ. ಮತ್ತು ವಿಶ್ವ ಸಂಸ್ಥೆಯ ಅನುಮೋದನೆ ಸಮಿತಿ ಮತ್ತು ಘಟಕಗಳಲ್ಲಿ ವ್ಯಕ್ತಿಗಳ ಬದಲಿಸುವ ಪ್ರಕ್ರಿಯೆಯಲ್ಲಿ ಹೆಚ್ಚು ಪಾರದರ್ಶಕತೆಗಾಗಿ ಪ್ರಧಾನಿ ಮೋದಿ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ.

  • ಕೊರೊನಾ ವೈರಸ್ ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಸಾವು

    ಕೊರೊನಾ ವೈರಸ್ ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಸಾವು

    ನ್ಯೂಯಾರ್ಕ್: ಇಲ್ಲಿನ ಸ್ಟೇಟೆನ್ ಐಲ್ಯಾಂಡ್‍ನಲ್ಲಿ 7 ವರ್ಷದ ಜರ್ಮನ್ ಶೆಫರ್ಡ್ ಕೋವಿಡ್ 19ಗೆ ಬಲಿಯಾಗಿದೆ. ಈ ಮೂಲಕ ಕೋವಿಡ್ 19 ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಮೃತಪಟ್ಟಿದೆ.

    ಸಾವನ್ನಪ್ಪಿದ ಶ್ವಾನ ಬಡ್ಡಿ ಕಳೆದ ಏಪ್ರಿಲ್ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಅದೇ ಸಮಯದಲ್ಲಿ ಮಾಲೀಕ ರಾಬರ್ಟ್ ಮಹೋನಿ ಕೂಡ ಕೋವಿಡ್ 19 ನಿಂದ ಗುಣಮುಖರಾಗುತ್ತಿದ್ದರು ಎಂದು ನ್ಯಾಷನಲ್ ಜಿಯೋಗ್ರಫಿ ತಿಳಿಸಿದೆ.

    ರಾಬರ್ಟ್ ಅವರು ಹಲವಾರು ವಾರ ಕೊರೊನಾ ವೈರಸ್‍ಗೆ ತುತ್ತಾದ ನಂತರ ಶ್ವಾನ ಬಡ್ಡಿಯಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಹೀಗಾಗಿ ಮೇ ತಿಂಗಳಲ್ಲಿ ಪಶುವೈದ್ಯರು ಪರೀಕ್ಷಿಸಿದ್ದು, ಈ ವೇಳೆ ಬಡ್ಡಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆ ನಂತರ ಬಡ್ಡಿಯ ಆರೋಗ್ಯ ನಿಧಾನವಾಗಿ ಕುಸಿಯುತ್ತಾ ಬಂತು. ಕ್ರಮೇಣ ಹೆಪ್ಪುಗಟ್ಟಿದ ರೀತಿಯಲ್ಲಿ ವಾಂತಿ, ಮೂತ್ರದಲ್ಲೂ ರಕ್ತ ಹಾಗೆಯೇ ನಡೆದಾಡಲು ಕಷ್ಟಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹೋನಿ ಮತ್ತು ಅವರ ಪತ್ನಿ ಆಲಿಸನ್ ಜುಲೈ 11 ರಂದು ಶ್ವಾನಕ್ಕೆ ದಯಾಮರಣ ನೀಡಿದ್ದಾರೆ.

    ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನೆಕ್ರೋಪ್ಸಿ ಪರೀಕ್ಷೆಗಾಗಿ ನಾಯಿಯ ಮೃತದೇಹವನ್ನು ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಆದರೆ ಈ ಬಗ್ಗೆ ಪಶುವೈದ್ಯರ ಜೊತೆ ಮಾತನಾಡಿದಾಗ ಅವರು, ಈಗಾಗಲೇ ನಾಯಿಯನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಅಮೆರಿಕದಲ್ಲಿ 12 ಶ್ವಾನಗಳು ಹಾಗೂ 19 ಬೆಕ್ಕುಗಳಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ನ್ಯಾಷನಲ್ ಜಿಯೋಗ್ರಫಿ ಮಾಹಿತಿ ನೀಡಿದೆ. ಇದನ್ನೂ ಓದಿ: ವಿಶ್ವದಲ್ಲೇ ಮೊದಲ ಪ್ರಕರಣ – ಝೂನಲ್ಲಿದ್ದ ಹುಲಿಗೂ ಕೊರೊನಾ

  • ನ್ಯೂಯಾರ್ಕ್ ಮ್ಯೂಸಿಯಂಗೆ ಟ್ರಸ್ಟಿಯಾದ ನೀತಾ ಅಂಬಾನಿ

    ನ್ಯೂಯಾರ್ಕ್ ಮ್ಯೂಸಿಯಂಗೆ ಟ್ರಸ್ಟಿಯಾದ ನೀತಾ ಅಂಬಾನಿ

    ನ್ಯೂಯಾರ್ಕ್: ಶಿಕ್ಷಣ ತಜ್ಞೆ ಹಾಗೂ ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರನ್ನು ಅಮೆರಿಕದ ಬಹುದೊಡ್ಡ ಕಲಾಕೇಂದ್ರವಾಗಿರುವ ನ್ಯೂಯಾರ್ಕ್ ಮೆಟ್ರೊಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್​ಗೆ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ.

    ಮಂಗಳವಾರ ನೀತಾ ಅಂಬಾನಿ ಅವರನ್ನು ಗೌರವಾನ್ವಿತ ಟ್ರಸ್ಟಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮ್ಯೂಸಿಯಂನ ಅಧ್ಯಕ್ಷ ಡೇನಿಯನ್ ಬ್ರಾಡ್ಸ್ಕಿ ಘೋಷಿಸಿದ್ದಾರೆ. ನೀತಾ ಅಂಬಾನಿ ಅವರು ಈ ಸ್ಥಾನಕ್ಕೆ ಆಯ್ಕೆ ಆದ ಮೊದಲ ಭಾರತೀಯ ಮಹಿಳೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ.

    ಮೆಟ್ರೊಪಾಲಿಟನ್ ಕಲಾ ವಸ್ತು ಸಂಗ್ರಹಾಲಯದ ಮೇಲೆ ನೀತಾ ಅಂಬಾನಿ ತೋರುತ್ತಿರುವ ಬದ್ಧತೆ, ಭಾರತದ ಕಲೆ, ಸಂಸ್ಕೃತಿಯನ್ನು ಬೆಳೆಸುವ ಬಗ್ಗೆ ಅವರಿಗಿರುವ ಕಾಳಜಿ ನಿಜಕ್ಕೂ ಅದ್ಭುತವಾದದ್ದು. ಅವರ ಬೆಂಬಲ ಕಾಳಜಿಯಿಂದ ಮ್ಯೂಸಿಯಂನಲ್ಲಿ ದೇಶದ ವಿವಿಧ ಮೂಲೆಮೂಲೆಗಳ ಕಲೆ, ಸಂಸ್ಕೃತಿಗಳನ್ನು ಅಧ್ಯಯನ ಮಾಡಿ, ಪ್ರದರ್ಶಿಸಲು ಸಹಾಯಕವಾಗಿದೆ. ಜೊತೆಗೆ ಅವರು ಭಾರತದಲ್ಲಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ನಿಜಕ್ಕೂ ಮೆಚ್ಚುವಂತಹದ್ದು. ಅವರನ್ನು ಮ್ಯೂಸಿಯಂಗೆ ಟ್ರಸ್ಟಿಯಾಗಿ ಆಯ್ಕೆ ಮಾಡಿರುವುದು ನಿಜಕ್ಕೂ ಖುಷಿಯ ವಿಷಯವಾಗಿದೆ ಎಂದು ಡೇನಿಯಲ್ ಬ್ರಾಡ್ಸ್ಕಿ ನೀತಾ ಅವರನ್ನು ಹೊಗಳಿದ್ದಾರೆ.

    ಈ ಮ್ಯೂಸಿಯಂ 149 ವರ್ಷಗಳ ಇತಿಹಾಸ ಹೊಂದಿದೆ. ಅಮೆರಿಕದ ನಾಗರಿಕರು, ಉದ್ಯಮಿಗಳು ಸೇರಿ ಇಲ್ಲಿನ ಜನರಿಗೆ ಕಲೆ ಮತ್ತು ಕಲಾ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಮ್ಯೂಸಿಯಂ ಸ್ಥಾಪನೆ ಮಾಡಲಾಗಿದೆ. ಇಲ್ಲಿ ಪ್ರಪಂಚದ ಹಲವು ಪ್ರದೇಶಗಳ 5 ಸಾವಿರಕ್ಕೂ ಹೆಚ್ಚು ವರ್ಷಗಳ ಪುರಾತನ ಕಲೆಗಳನ್ನು ಬಿಂಬಿಸುವ ಸಾವಿರಾರು ಕಲಾ ವಸ್ತುಗಳು ಇವೆ. ಈ ಮ್ಯೂಸಿಯಂ ಈಗ ಅಪರೂಪದ, ಪ್ರಾಚೀನ ಹಾಗೂ ಸುಂದರ ವಸ್ತುಗಳ ಖಜಾನೆಯಾಗಿದೆ.

    ಈ ಹಿಂದೆ ನೀತಾ ಅಂಬಾನಿ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಸದಸ್ಯೆಯಾಗಿ ಆಯ್ಕೆ ಆಗಿದ್ದರು. ಈ ಮೂಲಕ ಈ ಸ್ಥಾನಕ್ಕೆ ಏರಿದ ಮೊದಲ ಭಾರತದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

  • ಕಾಶ್ಮೀರ ವಿಚಾರದಲ್ಲಿ ಪಾಕ್ ಸೋಲನ್ನು ಒಪ್ಪಿಕೊಂಡ ಇಮ್ರಾನ್ ಖಾನ್

    ಕಾಶ್ಮೀರ ವಿಚಾರದಲ್ಲಿ ಪಾಕ್ ಸೋಲನ್ನು ಒಪ್ಪಿಕೊಂಡ ಇಮ್ರಾನ್ ಖಾನ್

    ನ್ಯೂಯಾರ್ಕ್: ಕಾಶ್ಮೀರ ವಿಚಾರಕ್ಕೆ ಭಾರತದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಪಾಕಿಸ್ತಾನ ವಿಫಲವಾಗಿದೆ ಎನ್ನುವುದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ.

    ಸದ್ಯ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನ್ಯೂಯಾರ್ಕ್‍ನಲ್ಲಿ ಇದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಇಮ್ರಾನ್ ಖಾನ್ ಅಂತರಾಷ್ಟ್ರೀಯ ಸಮುದಾಯಗಳ ವರ್ತನೆ ಬೇಸರವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ಕಾಶ್ಮೀರ ವಿಚಾರಕ್ಕೆ ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಪಾಕ್ ವಿಫಲವಾಗಿದೆ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:ವೇದಿಕೆಯಲ್ಲೇ ಇಮ್ರಾನ್ ಖಾನ್ ಮರ್ಯಾದೆ ತೆಗೆದ ಟ್ರಂಪ್ – ವಿಡಿಯೋ ನೋಡಿ

    ಭಾರತದ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದು ಮಾಡಿದ್ದಕ್ಕೆ ಪಾಕಿಸ್ತಾನ ರೊಚ್ಚಿಗೆದ್ದಿದೆ. ಈ ವಿಚಾರವನ್ನು ಇಟ್ಟುಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಕಳೆಯಬೇಕು ಎಂದು ಪಾಕಿಸ್ತಾನ ನಿರಂತರವಾಗಿ ಹೊಂಚು ಹಾಕುತ್ತಲೇ ಇದೆ. ಆದರೆ ಪಾಕಿನ ಯಾವ ಕುತಂತ್ರವು ಯಶಸ್ವಿಯಾಗಿಲ್ಲ. ಕಾಶ್ಮೀರ ವಿಚಾರಕ್ಕೆ ಭಾರತವನ್ನು ದೋಷಿ ಮಾಡಲು ಪ್ರಯತ್ನ ಮಾಡಲು ಹೋಗಿ ಪ್ರತಿ ಬಾರಿ ಪಾಕಿಸ್ತಾನವೇ ಮುಖಭಂಗ ಅನುಭವಿಸುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ.

    ಇದರಿಂದ ಬೇಸತ್ತಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರಕ್ಕೆ ಅಂತರಾಷ್ಟ್ರೀಯ ಸಮುದಾಯಗಳ ವರ್ತನೆ ಬೇಸರ ತಂದಿದೆ. ಈ ಸಂಬಂಧ ಯಾರೂ ಕೂಡ ಮೋದಿ ಮೇಲೆ ಯಾವುದೇ ಒತ್ತಡ ಹೇರುತ್ತಿಲ್ಲ. ಆದರೆ ನಾವು ಕಾಶ್ಮೀರದ ವಿಚಾರಕ್ಕೆ ಒತ್ತಡ ಹೇರುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

    ಪಾಕಿಸ್ತಾನ ಕಾಶ್ಮೀರದ ಬಗ್ಗೆ ತೋರಿಸುತ್ತಿರುವ ಕಾಳಜಿಯನ್ನು ಏಕೆ ಕಡೆಗಣಿಸಲಾಗುತ್ತಿದೆ ಎಂದು ಹೇಳುವಾಗ ಇಮ್ರಾನ್ ಖಾನ್ ಭಾರತದ ಆರ್ಥಿಕ ಸ್ಥಿತಿ ಮತ್ತು ಜಾಗತಿಕ ಪ್ರಾಮುಖ್ಯತೆಯನ್ನು ಒಪ್ಪಿಕೊಂಡಿದ್ದಾರೆ. ಭಾರತದಲ್ಲಿ 120 ಕೋಟಿ ಜನಸಂಖ್ಯೆ ನೋಡಿ ನಮ್ಮ ವಾದವನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

    ವಿಶ್ವ ಸಮದಾಯಗಳೇ ಕಾಶ್ಮೀರದ ಕುರಿತು ಭಾರತದ ನಿರ್ಧಾರವನ್ನು ಒಪ್ಪಿಕೊಂಡಿದೆ. ಆದರೆ ಪಾಕಿಸ್ತಾನ ಮಾತ್ರ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ಹತಾಶೆಯನ್ನು ಹೊರಹಾಕುತ್ತಿದೆ. ಶುಕ್ರವಾರ ನಡೆಯುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕೂಡ ಇಮ್ರಾನ್ ಖಾನ್ ಭಾಷಣ ಮಾಡುವಾಗ ಭಾರತದ ಸರ್ಕಾರದ ನಿರ್ಧಾರದ ವಿರುದ್ಧ ಪ್ರಸ್ತಾಪಿಸಲಿದ್ದಾರೆ ಎಂದು ಪಾಕ್ ಹೇಳಿದೆ.

    ಸೋಮವಾರದಂದು ನಡೆದ ಡೊನಾಲ್ಡ್ ಟ್ರಂಪ್ ಹಾಗೂ ಇಮ್ರಾನ್ ಖಾನ್ ಜಂಟಿ ಸುದ್ದಿಗೋಷ್ಠಿಯಲ್ಲೂ ಕೂಡ ಪಾಕ್ ಭಾರೀ ಮುಖಭಂಗ ಅನುಭವಿಸಿತ್ತು. ವೇದಿಕೆ ಮೇಲೆಯೇ ಟ್ರಂಪ್ ಇಮ್ರಾನ್ ಖಾನ್ ಮರ್ಯಾದೆ ತೆಗೆದಿದ್ದರು. ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನಿ ವರದಿಗಾರರೊಬ್ಬರು, ಕಾಶ್ಮೀರದ ವಿಚಾರದಲ್ಲಿ ಭಾರತ ತೆಗದುಕೊಂಡ ನಿರ್ಧಾರದ ಬಗ್ಗೆ ನೀವೇಕೆ ಮಾತನಾಡುತ್ತಿಲ್ಲ ಎಂದು ಟ್ರಂಪ್‍ಗೆ ಪ್ರಶ್ನೆ ಹಾಕಿದ್ದರು.

    ಇದಕ್ಕೆ ಉತ್ತರಿಸಿದ ಟ್ರಂಪ್, ಇವರು ನಿಮ್ಮ ತಂಡದವರಾ? ಇಂಥವರನ್ನು ಎಲ್ಲಿಂದ ಹುಡುಕಿ ತರುತ್ತೀರಾ? ಇವರೆಲ್ಲಾ ಅದ್ಭುತ ವ್ಯಕ್ತಿಗಳು ಎಂದು ಇಮ್ರಾನ್ ಖಾನ್ ಅವರಿಗೆ ಹೇಳಿ ಕಾಲೆಳೆದಿದ್ದರು. ಹಾಗೆಯೇ ಮಾತು ಮುಂದುವರಿಸಿ, ನೀವು ಕೇಳಿದ್ದು ಪ್ರಶ್ನೆಯಲ್ಲ. ಅದು ನಿಮ್ಮ ಅಭಿಪ್ರಾಯ ಎಂದು ಖಡಕ್ ತಿರುಗೇಟು ನೀಡಿದ್ದರು. ಈ ವಿಡಿಯೋ ವಿಶ್ವಾದ್ಯಂತ ಸಖತ್ ವೈರಲ್ ಆಗಿತ್ತು. ಈ ಸುದ್ದಿಗೋಷ್ಠಿಯ ನೇರ ಪ್ರಸಾರ ನೀಡುತ್ತಿದ್ದ ಪಾಕ್ ಮಾಧ್ಯಮಗಳು ಟ್ರಂಪ್ ಇಮ್ರಾನ್ ಖಾನ್ ಮರ್ಯಾದೆ ತೆಗೆದ ತಕ್ಷಣ ಪ್ರಸಾರವನ್ನು ನಿಲ್ಲಿಸಿತ್ತು. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅತೀ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿ ಪಾಕ್ ಮತ್ತೆ ನನ್ನ ಮರ್ಯಾದೆ ತಾನೇ ಕಳೆದುಕೊಂಡಿದೆ.