Tag: NH Sivashankarreddy

  • ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

    ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

    – ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲು ಮಾಡುತ್ತೇನೆ
    – ನೀವು ಸಾಚಾ ಆಗಿದ್ರೆ ನ್ಯಾಯಾಲಯಕ್ಕೆ ಹೋಗಿದ್ದು ಯಾಕೆ?

    ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್‍ನ ಬ್ರಹ್ಮಾಂಡ ಭ್ರಷ್ಟಾಚಾರವನ್ನ ಬಯಲಿಗೆ ಎಳೆಯುತ್ತೇನೆ ಎಂದು ಪರೋಕ್ಷವಾಗಿ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜರಬಂಡಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್‍ನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಮಹಾಭಾರತದಂತಹ ಪುಸ್ತಕ ಬರೆಯಬಹದು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್ ರಿಂಗ್ ಮಾಸ್ಟರ್ ಆಗಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದೇಗೌಡ ಕೇವಲ ಆಕ್ಟರ್ ಅಷ್ಟೇ. ಶ್ರೀನಿವಾಸಗೌಡರಿಗೂ ಡೈರೆಕ್ಷನ್ ಮಾಡೋಕೆ ಗೊತ್ತಿಲ್ಲ. ಡೈರೆಕ್ಟರ್ ಪ್ರೊಡ್ಯೂಸರ್ ಎಲ್ಲ ರಮೇಶ್ ಕುಮಾರ್ ಎಂದು ಆರೋಪಿಸಿದರು. ಇದನ್ನೂ ಓದಿ:  ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ

    ಯಾರೇ ಬಂದ್ರೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ(ಕೋಚಿಮುಲ್) ವಿಭಜನೆ ಮಾಡೇ ಮಾಡ್ತೇನೆ. ರಮೇಶ್ ಕುಮಾರ್, ಗೌರಿಬಿದನೂರು ಶಾಸಕ ಹಾಗೂ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅಂತಹ 100 ಜನ ಬಂದರೂ ನಾನು ಬಿಡಲ್ಲ, ಮಾಡೇ ಮಾಡ್ತೇನೆ. ಇದು ನನ್ನ ಘೋಷಣೆ ಎಂದು ಪ್ರಕಟಿಸಿದರು.

    ಡಿಸಿಸಿ ಬ್ಯಾಂಕ್ ಮೂಲಕ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ರಮೇಶ್ ಕುಮಾರ್ ಯತ್ನಿಸುತ್ತಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಎಂಎಲ್‍ಎಗಳು ಅವರ ಮಾತು ಕೇಳಬೇಕು ಅನ್ನೋದು ಅವರ ಆಸೆ. ಶ್ರೀನಿವಾಸಗೌಡರ ತಲೆ ಕೆಡಿಸಿ ದಳದಿಂದ ಕಾಂಗ್ರೆಸ್ ಗೆ ಕರೆತರುತ್ತಿದ್ದಾರೆ. ಈ ಮೊದಲು ಕಾಂಗ್ರೆಸ್ ನಲ್ಲಿದ್ದವರು ರಮೇಶ್ ಕುಮಾರ್ ಅವರಿಂದಲೇ ದಳಕ್ಕೆ ಹೋಗಿದ್ದವರು. ಈಗ ಮತ್ತೆ ಕಾಂಗ್ರೆಸ್ ಗೆ ಬಂದು ಮಕ್ಮಲ್ ಟೋಪಿ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

    ಡಿಸಿಸಿ ಬ್ಯಾಂಕ್ ನಿಂದ ಕೆಜಿಎಫ್, ಶ್ರೀನಿವಾಸಪುರದಲ್ಲಿ 400-500 ಕೋಟಿ ರೂ. ಸಾಲ ಕೊಡ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆ ಅವರು ಏನು ಮಾಡಿದ್ರು? ಸಹಕಾರ ಕ್ಷೇತ್ರ ಸರ್ವರಿಗೂ ಸಮಪಾಲು ಸಮಬಾಳು. ಎಲ್ಲರಿಗೂ ಕೊಡಲು ಇರೋದು. ಆದರೆ ಡಿಸಿಸಿ ಬ್ಯಾಂಕನ್ನು ರಾಜಕೀಯ ಬೆರೆಸಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ನ್ನ ರಾಜಕೀಯ ವಾಗಿ ದುರ್ಬಳಕೆ ಮಾಡಿಕೊಳ್ಳೋದ್ರಲ್ಲಿ ಮೊದಲ ಬ್ಯಾಂಕ್ ಆಗಿದೆ ಎಂದು ಟೀಕಿಸಿದರು.

    ಪಾರದರ್ಶಕ ತನಿಖೆ ಆಗಬೇಕು

    ನಾನು ಡಿಸಿಸಿ ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಅಗ್ರಹಿಸಿದ್ದೇನೆ. ಆದರೆ ನ್ಯಾಯಾಲಯಕ್ಕೆ ಹೋಗಿ ತನಿಖೆ ಬೇಡ ಅಂತ ತಡೆಯಾಜ್ಞೆ ತಂದಿದ್ದಾರೆ. ಸತ್ಯ ಹರಿಶ್ಚಂದ್ರ ಆಗಿದ್ರೆ ಯಾಕೆ ತಡೆಯಾಜ್ಞೆ ತಂದ್ರು? ಇದರಲ್ಲಿ ಗೊತ್ತಾಗುದಿಲ್ವೇ ಕಳ್ಳ ಯಾರು ಅಂತ? ನೀವು ಸಾಚಾ ಆಗಿದ್ರೆ ನ್ಯಾಯಾಲಯಕ್ಕೆ ಯಾಕೆ ಹೋಗ್ತಿದ್ರೀ ಎಂದು ಪ್ರಶ್ನೆಗಳನ್ನು ಕೇಳಿದರು. ಇದನ್ನೂ ಓದಿ: ಉತ್ತರಾಖಂಡ್ ಪ್ರವಾಹಪೀಡಿತ ಭಾಗದಲ್ಲಿ 10 ಕನ್ನಡಿಗರಿಗೆ ಸಂಕಷ್ಟ

    ಸತ್ಯ ಆಚೆ ಬಂದರೆ ಜೈಲಿಗೆ ಹೋಗ್ತೀರಿ ಎಂದು ನಿಮಗೆ ಗೊತ್ತಿದೆ. ಅದಕ್ಕೆ ತಡೆಯಾಜ್ಞೆ ತಂದಿದ್ದೀರಿ. ಆದರೆ ನಾನು ಬಿಡೋದಿಲ್ಲ ತಿಳ್ಳೊಳ್ಳಿ, ಸುಧಾಕರ್ ಬಿಡೋದಿಲ್ಲ. ನಿಮ್ಮ ಅನಿಷ್ಟ ಭ್ರಷ್ಟಾಚಾರದ ಕೂಪವನ್ನು ಹೊರೆಗೆ ಎಳೆಯೋವರೆಗೂ ನಾನು ಬಿಡೋದಿಲ್ಲ. ನಾನು ವಿರಮಿಸೋದಿಲ್ಲ ಎಂದು ಸವಾಲು ಹಾಕಿದ್ದಾರೆ.

    ರಮೇಶ್ ಕುಮಾರ್ ಭ್ರಷ್ಟಾಚಾರಕ್ಕೆ ಸಹಕಾರ ಇಲಾಖೆಯ ಅಧಿಕಾರಿಗಳು ಸಹ ಸಾಥ್ ನೀಡಿದ್ದು, ತನಿಖೆಯಾಗಲಿ ಎಂದು ನಾನು ಸಿಎಂ ಬೊಮ್ಮಾಯಿ ಹಾಗೂ ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಬಳಿ ಒತ್ತಾಯಿಸಿದ್ದೇನೆ ಎಂದರು.