Tag: NHAI

  • 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

    ಎನ್‍ಹೆಚ್‍ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಹಳೆಯ ಕಾಲದ ಹ್ಯಾಂಡ್ ಗ್ರೆನೇಡ್ ಪತ್ತೆ

    Nitin Gadkari

    ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಹಣ ಬಿಡುಗಡೆ ಮಾಡಿ – ದೆಹಲಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು

    ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್‍ಹೆಚ್‍ಎಐ ಗೆ ಕೇಂದ್ರ ಸಚಿವರು ಸೂಚಿದ್ದಾರೆ.

  • ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಶ್ವ ವಿಖ್ಯಾತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಆದರೆ ರಸ್ತೆಯ ಅಗಲೀಕರಣಕ್ಕೆ ಲಕ್ಷಾಂತರ ಮರಗಳನ್ನು ಕಡಿಯುವ ಸಾಧ್ಯತೆಗಳಿರುವುದರಿಂದ ಹುಲಿ, ಆನೆ ಸೇರಿದಂತೆ ವನ್ಯಜೀವಿಗಳ ಆವಾಸ ಸ್ಥಾನವಾಗಿರುವ ಬಂಡೀಪುರಕ್ಕೆ ಕಂಟಕ ಎದುರಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    ಗುಂಡ್ಲುಪೇಟೆಯಿಂದ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಬಂಡೀಪುರದ ಅರಣ್ಯದ ನಡುವೆ ಹಾದು ಹೋಗುವ ಹೆದ್ದಾರಿ ಸಂಖ್ಯೆ 181 ರಲ್ಲಿ ಮೇಲು ಕಾಮನಹಳ್ಳಿಯಿಂದ ಕೆಕ್ಕನಹಳ್ಳದವರೆಗಿನ 13.2 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡುವ ಪ್ರಸ್ತಾಪವನ್ನು ಅರಣ್ಯ ಇಲಾಖೆಗೆ ಸಲ್ಲಿಸಿದೆ. ಇದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುಮಾರು 24 ಎಕರೆಗಳಷ್ಟು ಜಾಗವನ್ನು ನೀಡಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ಅನುಮತಿ ಕೋರಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ 

    ಈಗಾಗಲೇ 2 ಹೆದ್ದಾರಿಗಳು ಬಂಡೀಪುರ ಹುಲಿ ಸಂರಕ್ಷಣಾಧಾಮದ ಮೂಲಕ ಹಾದು ಹಾದುಹೋಗುತ್ತಿವೆ. ಈ ಹೆದ್ದಾರಿಗಳಿಂದ ಈಗಾಗಲೇ ವನ್ಯಜೀವಿಗಳ ಸ್ವಚ್ಛಂದ ಓಡಾಟದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ವಾಹನಗಳ ಓಡಾಟದಿಂದ ಶಬ್ದ ಮಾಲಿನ್ಯ, ಘನ ತ್ಯಾಜ್ಯ ಇತ್ಯಾದಿಗಳಿಂದಾಗುವ ಮಾಲಿನ್ಯ, ವನ್ಯಜೀವಿಗಳ ವರ್ತನೆಗಳ ಮೇಲೆ ಪ್ರಭಾವ ಮತ್ತು ಇತರ ಹಲವಾರು ತೊಂದರೆಗಳನ್ನು ವನ್ಯಜೀವಿಗಳು ಈ ಹೆದ್ದಾರಿಗಳಿಂದ ಎದುರಿಸುತ್ತಿವೆ. ಇದನ್ನೂ ಓದಿ: ಸೆಕ್ಸ್ ವೇಳೆ ಕಾಂಡೋಮ್ ಬದಲು ಗಮ್ ಹಚ್ಚಿ ಪ್ರಾಣವೇ ಕಳ್ಕೊಂಡ! 

    ಅರಣ್ಯದಲ್ಲಿ ಹುಲಿಯೂ ಸೇರಿದಂತೆ ಆನೆ, ಚಿರತೆ, ಜಿಂಕೆ, ಕಡವೆ ಹಾಗೂ ಇನ್ನಿತರೇ ಪ್ರಾಣಿಗಳು ಅತೀ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಮೃತಪಟ್ಟಿವೆ. ಲೆಕ್ಕವಿರದಷ್ಟು ಉಭಯ ಚರಜೀವಿಗಳು, ಸರೀಸೃಪಗಳು, ಹಕ್ಕಿಗಳು ತಮ್ಮ ಜೀವ ಕಳೆದುಕೊಂಡಿವೆ. ಈಗ ರಸ್ತೆ ಅಗಲೀಕರಣ ಮಾಡಲು ಲಕ್ಷಾಂತರ ಮರಗಳನ್ನು ಕಡಿಯಬೇಕಾಗುತ್ತದೆ. ವನ್ಯ ಪ್ರಾಣಿಗಳ ಆವಾಸಸ್ಥನಕ್ಕೆ ಧಕ್ಕೆಯಾಗಲಿದೆ ಎಂದು ವನ್ಯಜೀವಿ ತಜ್ಞರು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

    ಅರಣ್ಯ ಪರಿಸರಕ್ಕೆ ಮಾರಕವಾಗಿರುವ ಹೆದ್ದಾರಿ ಅಗಲೀಕರಣಕ್ಕೆ ಅವಕಾಶ ನೀಡಬಾರದು. ಅವಕಾಶ ನೀಡಿದಲ್ಲಿ ಸೂಕ್ಷ್ಮ ಪರಿಸರ ವಲಯದ ನೀತಿ ನಿಯಮಗಳ ಉಲ್ಲಂಘನೆಯಾಗಲಿದೆ ಎಂಬುದು ಪರಿಸರವಾದಿಗಳ ಅಭಿಮತವಾಗಿದೆ.

  • ಕುಸಿದ ನಿರ್ಮಾಣ ಹಂತದ ಫ್ಲೈ ಓವರ್

    ಕುಸಿದ ನಿರ್ಮಾಣ ಹಂತದ ಫ್ಲೈ ಓವರ್

    -ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

    ಗುರುಗ್ರಾಮ: ಹರ್ಯಾಣದ ಗುರುಗ್ರಾಮನಲ್ಲಿ ನಿರ್ಮಾಣ ಹಂತದ ಫ್ಲೈಓವರ್ ನ ಒಂದು ಭಾಗ ಶನಿವಾರ ಕುಸಿದಿದೆ. ಗುರುಗ್ರಾಮದ ವಿಪುಲ್ ಗ್ರೀನ್ಸ್ ಬಳಿ ಫ್ಲೈ ಓವರ್ ಕುಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

    ಬಾದಶಾಪುರ ಎಲಿವೆಟಡ್ ಹೈವೇ ಈ ನಿರ್ಮಾಣ ಕಾರ್ಯದ ಒಂದು ಭಾಗ ಕುಸಿದಿದೆ. ಒಟ್ಟು 6 ಕಿಲೋ ಮೀಟರ್ ಉದ್ದದ ಫ್ಲೈಓವರ್ ನ ಒಂದು ಬ್ಲಾಕ್ ಶನಿವಾರ ರಾತ್ರಿ ಸುಮಾರು 9.30ಕ್ಕೆ ಕುಸಿದಿದೆ. ಎನ್‍ಹೆಚ್‍ಎಐ ಈ ಕಾಮಗಾರಿಯನ್ನು ನಡೆಸುತ್ತಿತ್ತು.

    ಈ ಕುರಿತು ಪ್ರತಿಕ್ರಿಯಿಸಿರುವ ಆಪ್, ಸೊಹನಾ ರಸ್ತೆಯ ಬಳಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಕುಸಿದಿದೆ. ನಮ್ಮೆಲ್ಲರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಸರ್ಕಾರ ಮತ್ತು ನಿರ್ಮಾಣ ಕಂಪನಿಯೇ ಇದರ ಹೊಣೆಯನ್ನು ಹೊರಬೇಕು ಎಂದು ಹೇಳಿದೆ. ಇತ್ತ ಡಿಸಿಎಂ ದುಷ್ಯಂತ್ ಚೌಟೆಲಾ, ಘಟನೆಯಲ್ಲಿ ಗಾಯಗೊಂಡ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎನ್‍ಹೆಚ್‍ಇಐ ಮತ್ತು ಎಸ್‍ಡಿಎಂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.