Tag: NIA

  • ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

    ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ ಮತೀನ್‌ ಬಾಂಬ್‌ ಸ್ಫೋಟದ ಸೂತ್ರಧಾರ!

    ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe Bomb Blast) ನಡೆದ ಬರೋಬ್ಬರಿ 42 ದಿನಗಳ ಬಳಿಕ ಬಾಂಬರ್ ಮುಸಾವೀರ್ ಹುಸೇನ್ (Mussavir Hussain Shazeb) ಮತ್ತು ಸೂತ್ರಧಾರ ಅಬ್ದುಲ್ ಮತೀನ್ ತಾಹಾನನ್ನು (Abdul Matheen Taha) ರಾಷ್ಟ್ರೀಯ ತನಿಖಾ ದಳ (NIA) ಹೆಡೆಮುರಿ ಕಟ್ಟಿದೆ.

    ಖಚಿತ ಸುಳಿವಿನ ಆಧಾರದ ಮೇಲೆ ಪೂರ್ವ ಮಿಡ್ನಾಪುರದ ಕಾಂತಿ ಪಟ್ಟಣದಲ್ಲಿ ನಸುಕಿನ ಜಾವ ಮನೆಯೊಂದರ ಮೇಲೆ ಎನ್‌ಐಎ ದಾಳಿ ನಡೆಸಿದೆ. ಗಾಢ ನಿದ್ದೆಯಲ್ಲಿದ್ದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ.

    ಅಸ್ಸಾಂನಲ್ಲಿ ಕೆಲ ದಿನ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇತ್ತೀಚಿಗೆ ಬಂಗಾಳಕ್ಕೆ ಶಿಫ್ಟ್ ಆಗಿದ್ದರು. ಮಾರ್ಚ್ 1ರಂದು ಸ್ಫೋಟ ನಡೆದ ದಿನವೇ ಬೆಂಗಳೂರಿನಿಂದ ಬಳ್ಳಾರಿ ಮಾರ್ಗವಾಗಿ ಬಾಂಬರ್ ಮುಸಾವೀರ್  ಪರಾರಿಯಾಗಿದ್ದ. ಆದರೆ ಮುಸಾವೀರ್ ಸಂಪೂರ್ಣ ಚಲನವಲನ ಹಲವು ಸಿಸಿಟಿವಿಗಳಲ್ಲಿ ಸೆರೆಯಾಗಿತ್ತು. ಮುಸಾವೀರ್ ಧರಿಸಿದ್ದ ಟೋಪಿ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಗುರುತಿಸಿದ್ದರು.

     

    ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದ್ದ ಸೂತ್ರಧಾರ ಮತೀನ್ ವಿಘ್ನೇಶ್ ಹೆಸರಿನಲ್ಲಿ ದೇಶದ ಒಳಗಡೆಯೇ ತಲೆಮರೆಸಿಕೊಂಡಿದ್ದ. ಮುಸಾವಿರ್ ಪದೇ ಪದೇ ಸಿಮ್ ಬದಲಿಸುತ್ತಾ, ಸ್ಥಳ ಬದಲಿಸುತ್ತಾ ತನಿಖೆಯ ಹಾದಿ ತಪ್ಪಿಸಲು ನೋಡಿದ್ದ. ಇಬ್ಬರು ಜೊತೆಗೂಡಿ ನಕಲಿ ದಾಖಲೆ ನೀಡಿ ಕಡಿಮೆ ದರ್ಜೆಯ ಹೋಟೆಲ್‌ನಲ್ಲಿ ತಂಗಿದ್ದರು. ಕೊನೆಗೆ ಕಾಂತಿ ಪಟ್ಟಣದ ಹೊರವಲಯದಲ್ಲಿ ಬಾಡಿಗೆಗೆ ಮನೆ ಪಡೆದಿದ್ದರು.

    ಆರೋಪಿಗಳು ಬೇರೆ ಹೆಸರಲ್ಲಿ ಕೋಲ್ಕತ್ತಾದಲ್ಲಿ ಮಾರ್ಚ್ 13, 14ರಂದು ಹೋಟೆಲ್ ರೂಮ್ ಬುಕ್ ಮಾಡಿದ್ದರು. ಯುಶಾ ಶಾಹನವಾಜ್, ಅನ್ಮೋಲ್ ಕುಲಕರ್ಣಿ ಹೆಸರಲ್ಲಿ ಬುಕ್ ಮಾಡಿದ್ದ ಆರೋಪಿಗಳು ಎರಡು ದಿನ ಹೋಟೆಲ್‌ನಲ್ಲಿ ತಂಗಿದ್ದರು. ಇದನ್ನೂ ಓದಿ : 370 ವಿಧಿಯನ್ನು ರದ್ದುಪಡಿಸಿದ್ದಕ್ಕೆ ಅಂಬೇಡ್ಕರ್ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು: ಮೋದಿ

     

    ಇಂದು ಪೂರ್ವ ಮಿಡ್ನಾಪುರ ಕೋರ್ಟ್ ಮುಂದೆ ಪಾತಕಿಗಳನ್ನು ಹಾಜರುಪಡಿಸಿದ ಬಳಿಕ ಬೆಂಗಳೂರಿಗೆ ಎನ್‌ಐಎ ಕರೆತರಲಿದೆ. ಅಂದ ಹಾಗೇ ಇದೇ ಏ.6 ರಂದು ಪೂರ್ವ ಮಿಡ್ನಾಪುರದಲ್ಲಿ ಎನ್‌ಐಎ ಮಿಡ್‌ನೈಟ್ ಆಪರೇಷನ್‌ಗೆ ಮುಂದಾಗಿತ್ತು. 2 ವರ್ಷದ ಹಿಂದಿನ ಸ್ಪೋಟ ಪ್ರಕರಣದ ಆರೋಪಿಗಳನ್ನು ಬಂಧಿಸಲು ಮುಂದಾದಾಗ ಸ್ಥಳೀಯರು ತಿರುಗಿಬಿದ್ದಿದ್ದರು.

    ವಿವಿಧ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕರ್ನಾಟಕ, ಪಶ್ಚಿಮ ಬಂಗಾಳ, ತಮಿಳುನಾಡು, ಯುಪಿ, ದೆಹಲಿ, ಎಪಿ ಮತ್ತು ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಗಳ ಸಹಕಾರದಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ : ಕೇವಲ 2 ವೋಟಿಗಾಗಿ ಕಾಡು ಹಾದಿಯಲ್ಲಿ 107 ಕಿಮೀ ಸಾಗಿದ ಅಧಿಕಾರಿಗಳು

     

    ಯಾರು ಮುಸಾವೀರ್?
    ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಐಸಿಸ್‌ ತೀರ್ಥಹಳ್ಳಿ ಮಾಡ್ಯೂಲ್‌ನ ಪ್ರಮುಖ ವ್ಯಕ್ತಿ. ರಾಮೇಶ್ವರಂ ಕೆಫೆಯಲ್ಲಿ ಇಡ್ಲಿ ತಿಂದು ಬಾಂಬಿಟ್ಟು ಮುಸಾವೀರ್ ಹುಸೇನ್ ಪರಾರಿಯಾಗಿದ್ದ.

    ಯಾರು ಅಬ್ದುಲ್ ಮತೀನ್?
    ಕೆಫೆ ಸ್ಫೋಟ ಕೇಸ್‌ನ ಮಾಸ್ಟರ್‌ಮೈಂಡ್ ಆಗಿರುವ ಈತ ಅಲ್ ಹಿಂದ್ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿಯಾಗಿದ್ದ ಈತ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿದ್ದ ಈತ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿದ್ದ. ಡಾರ್ಕ್‌ ವೆಬ್‌ ಬಳಕೆಯಲ್ಲಿ ಪರಿಣಿತನಾಗಿರುವ ಈತ 2020 ರಿಂದ ನಾಪತ್ತೆಯಾಗಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಕಿಂಗ್‌ಪಿನ್ ಆಗಿದ್ದು ಈಗ ಜೈಲಿನಲ್ಲಿ ಇರುವ ಶಾಕೀರ್‌ಗೆ ಬಾಂಬ್‌ ತಯಾರಿಸಲು ತರಬೇತಿ ನೀಡಿದ್ದ.

  • ಕೋಡ್‌ವರ್ಡ್‌ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌!

    ಕೋಡ್‌ವರ್ಡ್‌ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌!

    ಬೆಂಗಳೂರು: ಕೋಡ್‌ವರ್ಡ್‌ (Code Word) ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ (Rameshwaram Cafe Bomb Blast) ಆರೋಪಿಗಳ ಬಂಧನ ಮಾಡಲಾಗಿದೆ.

    ಹೌದು.ಬೆಂಗಳೂರಿನಲ್ಲಿ ಕೃತ್ಯ ಎಸಗಿದ್ದ ಮುಸಾವೀರ್ ಹುಸೇನ್ (Mussavir Hussain) ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ. ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಮುಸಾವೀರ್ ಹುಸೇನ್ ಮತ್ತು ಕೃತ್ಯಕ್ಕೆ ಸಹಕಾರ ನೀಡಿದ್ದ ಅಬ್ದುಲ್ ಮತೀನ್‌ನನ್ನು (Abdul Matin) ಅರೆಸ್ಟ್‌ ಮಾಡಿದ್ದಾರೆ.

    ಮಾಝ್‌ ಮುನೀರ್‌
    ಮಾಝ್‌ ಮುನೀರ್‌

    ಸೆರೆಯಾಗಿದ್ದು ಹೇಗೆ?
    ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಮಾಝ್‌ ಮುನೀರ್‌ನನ್ನು (Maaz Muneer) ಎನ್‌ಐಎ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಮುನೀರ್ ಸೆಲ್ ಮೇಲೆ ದಾಳಿ ಮಾಡಿದಾಗ ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್‌ ಪರಿಶೀಲಿಸಿದಾಗ ಹಲವು ಕೋಡ್‌ ವರ್ಡ್‌ ಸಿಕ್ಕಿದ್ದವು. ಈ ಕೋಡ್‌ ವರ್ಡ್‌ ಡಿಕೋಡ್‌ ಮಾಡಿದಾಗ ಆರೋಪಿಗಳ ಮಾಹಿತಿ ಸಿಗತೊಡಗಿತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

    ಈ ಖಚಿತ ಮಾಹಿತಿಯನ್ನು ಆಧಾರಿಸಿ ತನಿಖೆಗೆ ಇಳಿದಾಗ ಆರೋಪಿಗಳು ಪಶ್ಚಿಮ ಬಂಗಾಳದಲ್ಲೇ ತಲೆ ಮರೆಸಿಕೊಂಡಿದ್ದ ವಿಚಾರ ತಿಳಿದು ಬಂದಿತ್ತು. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ ಎನ್‌ಐಎ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಅಚ್ಚರಿಯ ವಿಷಯ ಏನೆಂದರೆ ಮುನೀರ್‌ ಜೈಲಿನಲ್ಲಿ ಕುಳಿತೇ ಕೋಡ್‌ ವರ್ಡ್‌ ಬರೆದಿದ್ದ.

     

    ಮಾಝ್‌ ಮುನೀರ್‌ ಮೊದಲ ಆರೋಪಿ:
    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ  ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್‌ ಮುನೀರ್‌ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರುವ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

    ಮಾಝ್‌ ಮುನೀರ್‌ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದಾಗ ಬಂಧನ ಮಾಡಲಾಗಿದೆ.

    ಮುಸ್ಸಾವಿರ್ ಹುಸೇನ್‌ ಶಜೀಬ್ ಮೊಹಮ್ಮದ್‌ ಜುನೈದ್ ಸಯ್ಯದ್‌ ಹೆಸರಿನಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ಹೊಂದಿದ್ದಾನೆ. ಅಬ್ದುಲ್‌ 5.5 ಅಡಿ ಹೊಂದಿದ್ದು ಮುಂದುಗಡೆ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್‌ ಧರಿಸುತ್ತಾನೆ. 30 ವರ್ಷದ ಈತ ವಿಘ್ನೇಶ್‌‌, ಸುಮಿತ್‌ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ ಎಂದು ಈ ಹಿಂದೆ ಎನ್‌ಐಎ ತಿಳಿಸಿತ್ತು.

  • ಟಿಎಂಸಿ ನಾಯಕನ ಮನೆಯಲ್ಲಿ ಸ್ಫೋಟ ಪ್ರಕರಣ – ತನಿಖೆಗೆ ತೆರಳಿದ್ದ ಎನ್‍ಐಎ ಅಧಿಕಾರಿಗಳ ಕಾರಿನ ಮೇಲೆ ದಾಳಿ

    ಟಿಎಂಸಿ ನಾಯಕನ ಮನೆಯಲ್ಲಿ ಸ್ಫೋಟ ಪ್ರಕರಣ – ತನಿಖೆಗೆ ತೆರಳಿದ್ದ ಎನ್‍ಐಎ ಅಧಿಕಾರಿಗಳ ಕಾರಿನ ಮೇಲೆ ದಾಳಿ

    ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಮುಖಂಡರೊಬ್ಬರ ಮನೆಯಲ್ಲಿ 2022ರಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ (2022 Blast Case ) ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ತೆರಳಿದ್ದ ಎನ್‍ಐಎ ಅಧಿಕಾರಿಗಳ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳನ್ನು ಎಸೆದ ಘಟನೆ ಪಶ್ಚಿಮ ಬಂಗಾಳದ (West Bengal) ಪೂರ್ವ ಮಿಡ್ನಾಪುರದ ಭೂಪತಿನಗರದಲ್ಲಿ ನಡೆದಿದೆ.

    ಮುಂಜಾನೆ 5:30ರ ವೇಳೆಗೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂತಿರುಗುತ್ತಿದ್ದ ವೇಳೆ, ಕಿಡಿಗೇಡಿಗಳು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗ್ಲಾಸ್‍ಗೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗಳಾಗಿರುವ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಉದ್ರಿಕ್ತ ಗುಂಪನ್ನು ನಿಯಂತ್ರಸಲು ಸಿಆರ್‍ಪಿಎಫ್ ಸಿಬ್ಬಂದಿ ಲಾಠಿಚಾರ್ಜ್ ನಡೆಸಿದ್ದಾರೆ.

    ಡಿಸೆಂಬರ್ 3, 2022ರಂದು, ಭೂಪತಿನಗರದ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. ಕಳೆದ ತಿಂಗಳು ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‍ಐಎ, ತೃಣಮೂಲ ಕಾಂಗ್ರೆಸ್‍ನ 8 ನಾಯಕರ ವಿಚಾರಣೆ ನಡೆಸಿತ್ತು. ಎನ್‍ಐಎ ಕ್ರಮವನ್ನು ಬಿಜೆಪಿ ಪಿತೂರಿ ಎಂದು ಟಿಎಂಸಿ ಆರೋಪಿಸಿತ್ತು.

    ಮಾರ್ಚ್ 28ರಂದು ನ್ಯೂ ಟೌನ್‍ನಲ್ಲಿರುವ ಎನ್‍ಐಎ ಕಚೇರಿಗೆ ಭೇಟಿ ನೀಡುವಂತೆ ಸೂಚಿಸಿದ ಹಿಂದಿನ ಸಮನ್ಸ್‍ಗಳನ್ನು ತಪ್ಪಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆ ಎಂಟು ಮಂದಿಯನ್ನು ಹಾಜರಾಗುವಂತೆ ಕೇಳಿಕೊಂಡಿತ್ತು. ಈ ಕ್ರಮದ ಹಿಂದೆ ಪ್ರತಿಪಕ್ಷ ಬಿಜೆಪಿ ಕೈವಾಡವಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ.

  • ಹಿಂದೂಗಳು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಇನ್ನೊಂದು ಸಿಮ್ ಖರೀದಿ ಮಾಡಿದ್ದಾರೆ: ಬಿವೈ ರಾಘವೇಂದ್ರ

    ಹಿಂದೂಗಳು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಇನ್ನೊಂದು ಸಿಮ್ ಖರೀದಿ ಮಾಡಿದ್ದಾರೆ: ಬಿವೈ ರಾಘವೇಂದ್ರ

    ಶಿವಮೊಗ್ಗ: ನಮ್ಮ ಹಿಂದೂ ಹುಡುಗರು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಅವರ ಹೆಸರಿನಲ್ಲಿ ಇನ್ನೊಂದು ಸಿಮ್ (Sim) ಖರೀದಿ ಮಾಡಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ (BY Raghavendra) ತಿಳಿಸಿದ್ದಾರೆ.

    ಬಿಜೆಪಿ ಸಂಸ್ಥಾಪನಾ ದಿನ ಹಿನ್ನೆಲೆ ಶಿವಮೊಗ್ಗ ನಗರದ ಹಲವು ಬಿಜೆಪಿ ಬೂತ್‌ಗಳಿಗೆ ಭೇಟಿ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಎನ್‌ಐಎ (NIA) ತೀರ್ಥಹಳ್ಳಿಯ (Thirthahalli) ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆಗೆ ಒಳಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ತೀರ್ಥಹಳ್ಳಿ ಬಿಜೆಪಿ  (BJP) ಕಾರ್ಯಕರ್ತನನ್ನು ಎನ್‌ಐಎ ತಂಡ ತನಿಖೆ ವಿಚಾರಣೆಗೆ ಕರೆದೊಯ್ದು 24 ಗಂಟೆಯಲ್ಲಿ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಕರ್ತ ವಾಪಸ್ ಬಂದ ನಂತರ ಆತಂಕದ ವಿಚಾರ ಗೊತ್ತಾಯಿತು. ಹಿಂದೂ ಹುಡುಗರು ಕೊಡುವ ದಾಖಲಾತಿಯನ್ನು ಪೋರ್ಜರಿ ಮಾಡಿ ಸಿಮ್ ಖರೀದಿಸಿ ಇಂತಹ ದುಷ್ಕೃತ್ಯ ಮಾಡುವ ಮನಸ್ಥಿತಿ ಇರುವ ವ್ಯಕ್ತಿಗಳಿಗೆ ಸಿಮ್ ಕೊಡುತ್ತಿದ್ದರು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಕರಾವಳಿಯಲ್ಲಿ ನಕ್ಸಲರ ಚಲನವಲನ – ಕಡಬದ ಮನೆಗೆ ಬಂದು ಊಟ ಮಾಡಿದ ಶಂಕಿತರು

    ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಹ ಕುವೆಂಪು ಅವರ ಜನ್ಮ ಸ್ಥಳದಲ್ಲಿ ಇಂತಹ ಘಟನೆ ನಡೆಯುತ್ತಿರೋದು ಆತಂಕದ ವಿಚಾರ. ಕೇಂದ್ರ ಸರ್ಕಾರದಿಂದ ಗಟ್ಟಿಯಾದ ನಿಲುವು ತನಿಖೆ ಆಗುತ್ತಿದೆ. ಈ ಆತಂಕದಿಂದ ಮುಕ್ತ ಆಗಬೇಕು ಎಂದರೆ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದರು. ಇದನ್ನೂ ಓದಿ: ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

    ಇಂದು ಬಿಜೆಪಿಯ ಸಂಸ್ಥಾಪನಾ ದಿನ. ಎಲ್ಲಾ ಬೂತ್‌ನಲ್ಲೂ ಸಂಸ್ಥಾಪನಾ ದಿನ ಆಚರಣೆ ಮಾಡುತ್ತಿದ್ದೇವೆ. 1,700ಕ್ಕಿಂತ ಹೆಚ್ಚಿನ ಬೂತ್‌ಗಳಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಬೂತ್‌ನಲ್ಲೇ ಇರಬೇಕು. ಕಾರ್ಯಕ್ರಮ ಮಾಡಬೇಕು. ನಾನು ಸಹ 8-10 ಬೂತ್‌ಗಳಿಗೆ ಪ್ರವಾಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸೇತುವೆ ಮೇಲೆ ಉಕ್ಕಿ ಹರಿಯುತ್ತಿರುವ ಘಟಪ್ರಭಾ – ಮೂರು ದಿನ ಸಂಚಾರ ನಿಷೇಧ

    ಈಶ್ವರಪ್ಪ (KS Eshwarappa) ಕೆವಿಯೆಟ್ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೋದಿ ಬೇಕು. ಮೋದಿಗಿಂತ ಇನ್ನೊಂದು ಹಿಂದುತ್ವದ ಮುಖ ಬೇರೊಂದಿಲ್ಲ. ಮೋದಿ ಪಕ್ಷದ ಅಧಿಕೃತ ಅಭ್ಯರ್ಥಿ ನಾನಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೋದಿ ಪೋಟೋ ಹಾಕಿಕೊಂಡು ಅವರೊಂದು ಪ್ರಯತ್ನ ಮಾಡುತ್ತಿದ್ದಾರೆ. ಜನ ಪ್ರಜ್ಞಾವಂತರಿದ್ದಾರೆ. ಇದರಲ್ಲಿ ಸ್ವಾರ್ಥ ಇದೆಯಾ? ನಿಜವಾದ ಹಿಂದುತ್ವಕ್ಕಾಗಿ ಬಿಜೆಪಿ ಪಕ್ಷ. ಹಿಂದುತ್ವ ಕಟ್ಟಿ ಬೆಳೆಸುವ ಕಾರ್ಯ ನಡೆದಿದೆ. ಮನಸ್ಸಿಗೆ ನೋವಾಗಿ ಸ್ವಂತಕೋಸ್ಕರ ಹಿಂದುತ್ವ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ಜನ ಕೊಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

  • ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

    ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಟ್ವಿಸ್ಟ್‌ – ಈಗಾಗಲೇ A1 ಆರೋಪಿ ಅರೆಸ್ಟ್‌!

    ಬೆಂಗಳೂರು: ರಾಮೇಶ್ವರಂ ಕೆಫೆ ಪ್ರಕರಣಕ್ಕೆ (Rameshwaram Cafe Blast) ಸ್ಫೋಟಕ ಟ್ಬಿಸ್ಟ್ ಸಿಕ್ಕಿದ್ದು, ಕೇಸ್‌ನಲ್ಲಿ ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಆಶ್ಚರ್ಯವಾದರೂ ಇದು ನಿಜವಾದ ಸಂಗತಿ.

    ಶಿವಮೊಗ್ಗದಲ್ಲಿ ಟ್ರಯಲ್‌ ಬಾಂಬ್‌ ಸ್ಫೋಟ (Shivamogga Trial Blast) ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಝ್‌ ಮುನೀರ್‌ನನ್ನೇ (Maaz Muneer) ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮೊದಲೇ ಕೆಲವೊಂದು ಕಡೆ ಸ್ಫೋಟಕ್ಕೆ ಪ್ಲ್ಯಾನ್‌ ಮಾಡಿದ ಹಿನ್ನೆಲೆಯಲ್ಲಿ ಆತನನ್ನೇ ಎ1 ಆರೋಪಿಯನ್ನಾಗಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್‌ ಮುನೀರ್‌ನನ್ನು ಎನ್‌ಐಎ  ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.  ಇದನ್ನೂ ಓದಿ: ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

    ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರೋ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

    ಏನಿದು ಶಿವಮೊಗ್ಗ ಸ್ಫೋಟ ಕೇಸ್‌?
    ಬಂಧನಕ್ಕೆ ಒಳಗಾಗಿರುವ ಸೈಯದ್ ಯಾಸಿನ್‌, ಮಾಜ್‌ ಮುನೀರ್‌, ಶಾರೀಕ್‌ ಅಹ್ಮದ್‌ ಶಿಮೊಗ್ಗದ ಅಕ್ಷರ ಕಾಲೇಜಿನಲ್ಲಿ ಒಟ್ಟಿಗೆ ದ್ವಿತೀಯ ಪಿಯುಸಿ ಅಭ್ಯಾಸ ಮಾಡಿದ್ದರು. ಬಳಿಕ ಯಾಸಿನ್ ಶಿವಮೊಗ್ಗದಲ್ಲಿ ಎಂಜಿನಿಯರಿಂಗ್‌ ಓದಿದ್ದರೆ ಮುನೀರ್‌ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದ. ತೀರ್ಥಹಳ್ಳಿ ಮೂಲದ ಶಾರೀಕ್‌ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌ನಲ್ಲಿ ಆರೋಪಿಗಳ ಶಾಲಾ, ಕಾಲೇಜು ಸ್ನೇಹಿತರ ವಿಚಾರಣೆ ನಡೆಸಲಾಗ್ತಿದೆ: ಎನ್‌ಐಎ

    ಸೈಯದ್ ಯಾಸಿನ್‌ ನಿವಾಸದಿಂದ 3-4 ದೂರದಲ್ಲಿರುವ ಪುರಲೆ ಸಮೀಪದ ತುಂಗಾ ನದಿ ತೀರದ್ದಲ್ಲಿ ಇವರೆಲ್ಲ ಟ್ರಯಲ್‌ ಬಾಂಬ್‌ ಸ್ಫೋಟ ಮಾಡುತ್ತಿದ್ದರು. ಈ ಮೂವರು ಶಿವಮೊಗ್ಗವನ್ನು ಕೇಂದ್ರ ಸ್ಥಳವನ್ನಾಗಿಸಿಕೊಂಡು ಮಂಗಳೂರು ಸೇರಿದಂತೆ ವಿವಿಧೆಡೆ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಮೂವರೂ ಬಾಂಬ್‌ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದರು.

    ಈ ಆರೋಪಿಗಳು ಅರೆಸ್ಟ್‌ ಆಗಿದ್ದು ಹೇಗೆ?
    2022ರ ಆಗಸ್ಟ್ 15ರಂದು ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಶಿವಮೊಗ್ಗದಲ್ಲಿರುವ ಅಮೀರ್ ಅಹಮದ್ ವೃತ್ತದಲ್ಲಿ ಘರ್ಷಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ಬಟ್ಟೆ ಅಂಗಡಿ ನೌಕರ ಪ್ರೇಮ್‌ಸಿಂಗ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬೀಯುಲ್ಲಾ ಎಂಬಾತನ ಬಂಧನವಾಗುತ್ತದೆ. ಆತನ ವಿಚಾರಣೆ ಮತ್ತು ಮೊಬೈಲ್‌ ದಾಖಲೆ ಪರಿಶೀಲನೆಯ ವೇಳೆ ಆತ ಹಲವರ ಜೊತೆ ಸಂವಹನ ನಡೆಸಿದ ವಿಚಾರ ತಿಳಿದು ಬರುತ್ತದೆ. ಈ ಆಧಾರದಲ್ಲಿ ತನಿಖೆ ನಡೆಸಿದಾಗ ಟ್ರಯಲ್‌ ಬಾಂಬ್‌ ಸ್ಫೋಟದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

    ಈ ಪ್ರಕರಣದ ಆರೋಪಿಯಾಗಿದ್ದ ಶಾರೀಕ್‌ ನಾಪತ್ತೆಯಾಗಿದ್ದ. ಆದರೆ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಲು ರಿಕ್ಷಾದಲ್ಲಿ ತೆರಳುತ್ತಿದ್ದಾಗ ಬಾಂಬ್‌ ಸ್ಫೋಟಗೊಂಡ ಪರಿಣಾಮ ಶಾರೀಕ್‌ ಸಿಕ್ಕಿಬಿದ್ದಿದ್ದ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

     

    ಐಸಿಸ್‌ ಮಾಧ್ಯಮದ ಸದಸ್ಯರು:
    ಯಾಸಿನ್‌ ಮತ್ತು ಮಾಜ್‌ ಮುನೀರ್‌ ಪಿಯುಸಿ ಸ್ನೇಹಿತರು. ಇವರ ಜೊತೆ ಶಾರೀಕ್‌ ಐಸಿಸ್‌ ಚಟುವಟಿಕೆಯ ಬಗ್ಗೆ ಮಾಹಿತಿ ಕಳುಹಿಸುತ್ತಿದ್ದ. ಆರೋಪಿಗಳ ಮೊಬೈಲ್‌ನಲ್ಲಿ ಬಾಂಬ್‌ ತಯಾರಿಸುವ ಪಿಡಿಎಫ್‌ ಫೈಲ್‌, ಐಸಿಸ್‌ ಉಗ್ರರು ತಲೆ ಕಡಿಯುವ ಮತ್ತು ಜೀವಂತವಾಗಿ ಸುಡುವ ವೀಡಿಯೋಗಳು ಲಭ್ಯವಾಗಿದ್ದವು. ಇವರು ಐಸಿಸ್‌ ಜೊತೆ ನೇರವಾಗಿ ಸಂವಹನ ನಡೆಸಿಲ್ಲ. ಆದರೆ ಐಸಿಸ್‌ ಟೆಲಿಗ್ರಾಮ್‌ ಚಾನೆಲ್‌ನ ಸದಸ್ಯರಾಗಿದ್ದರು. ಇಸ್ಲಾಂ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಹೀಗಾಗಿ ನಮ್ಮನ್ನು ವಿರೋಧಿಸುವ ಖಾಫೀರ್‌ ಮೇಲೆ ಜಿಹಾದ್‌ ಮಾಡಬೇಕು ಎಂಬ ಮನಸ್ಥಿತಿಯನ್ನು ಇವರು ಹೊಂದಿದ್ದರು. ಭಾರತವನ್ನು ಇಸ್ಲಾಮಿಕ್‌ ರಾಷ್ಟ್ರವನ್ನಾಗಿ ಮಾಡುವ ಕನಸು ಕಂಡಿದ್ದರು. ಸೆರೆ ಸಿಕ್ಕ ಒಂದು ಪೆನ್‌ಡ್ರೈವ್‌ನಲ್ಲಿ ಮತಾಂಧತೆಯನ್ನು ಪ್ರಚೋದಿಸುವ ವೀಡಿಯೋ, ಪಠ್ಯಗಳು ಲಭ್ಯವಾಗಿತ್ತು.

    ಬಾಂಬ್‌ ತಯಾರಿ:
    ಯಾಸಿನ್‌ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವೀಧರನಾಗಿದ್ದರೆ ಮಾಜ್‌ ಮುನೀರ್‌ ಮೆಕ್ಯಾನಿಕ್‌ ಓದಿದ್ದ. ಹೀಗಾಗಿ ಇವರು ಬಾಂಬ್‌ ತಯಾರಿಸಲು ಮುಂದಾಗುತ್ತಾರೆ. ಯಾಸಿನ್‌ ರಿಲೆ ಸರ್ಕ್ಯೂಟ್‌, ಟೈಮರ್‌ ಆನ್‌ಲೈನ್‌ನಲ್ಲಿ ಖರೀದಿಸಿದ್ದ. ಅಲ್ಯೂಮಿನಿಯಂ ಪೌಡರ್‌ ಸರ್ಚ್‌ ಮಾಡಿದ್ದ ಆದರೆ ಸಿಕ್ಕಿರಲಿಲ್ಲ. ಬ್ಯಾಟರಿ, ಸ್ವಿಚ್‌ ಜೊತೆ ಸ್ಥಳೀಯವಾಗಿ ಸಿಗುವ ಸ್ಫೋಟಕವನ್ನು ಖರೀದಿ ಮಾಡಿ ಆಗಸ್ಟ್‌ 15ರ ಬಳಿಕ ಗುರುಪುರ–ಪುರಲೆ ಸಮೀಪದ ಅಡಿಕೆ ತೋಟಗಳಿಂದ ಆವೃತವಾದ ತುಂಗಾ ನದಿಯ ದಂಡೆಯಲ್ಲಿ ಪರೀಕ್ಷೆ ಮಾಡುತ್ತಾರೆ. ದೊಡ್ಡ ಪ್ರಮಾಣದಲ್ಲಿ ಸ್ಫೋಟ ನಡೆದಿರಲಿಲ್ಲ. ಆದರೆ ಈ ಸ್ಫೋಟದ ವಿಡಿಯೋವನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿತ್ತು. ಈ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಂಬ್‌ ಸ್ಫೋಟಿಸಲು ತಯಾರಿ ನಡೆಸುತ್ತಿದ್ದರು. ಭಾರತದ ರಾಷ್ಟ್ರ ಧ್ವಜವನ್ನು ಇವರು ಸುಟ್ಟಿದ್ದರು ಅದರ ವೀಡಿಯೋವನ್ನು ಇವರು ಚಿತ್ರೀಕರಿಸಿದ್ದರು.

  • ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌ನಲ್ಲಿ ಆರೋಪಿಗಳ ಶಾಲಾ, ಕಾಲೇಜು ಸ್ನೇಹಿತರ ವಿಚಾರಣೆ ನಡೆಸಲಾಗ್ತಿದೆ: ಎನ್‌ಐಎ

    ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌ನಲ್ಲಿ ಆರೋಪಿಗಳ ಶಾಲಾ, ಕಾಲೇಜು ಸ್ನೇಹಿತರ ವಿಚಾರಣೆ ನಡೆಸಲಾಗ್ತಿದೆ: ಎನ್‌ಐಎ

    ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ (Rameshwaram Cafe Blast) ಬ್ಲಾಸ್ಟ್‌ ಪ್ರಕರಣದಲ್ಲಿ ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್‌ಐಎ (NIA) ತಿಳಿಸಿದೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್ಐನಿಂದ, ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

    ಪ್ರಕಟಣೆಯಲ್ಲೇನಿದೆ?
    ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

    ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಕ್ಕಾಗಿ ಎನ್‌ಐಎ, ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಶಾಲಾ-ಕಾಲೇಜು ಸ್ನೇಹಿತರು, ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ವಿದ್ಯುತ್ ಪ್ರಸರಣ ಘಟಕದಲ್ಲಿ ಬೆಂಕಿ – ನೋಡನೋಡುತ್ತಲೇ ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿ

    ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆಯಾಗಲಿದೆ. ವಿಟ್ನೆಸ್ ಗುರುತು ರಿವೀಲ್ ಮಾಡುವುದರಿಂದ ವೈಯಕ್ತಿಕವಾಗಿ ಅವರಿಗೂ ಅಪಾಯ ಎದುರಾಗಬಹುದು. ಜೊತೆಗೆ ಪ್ರಕರಣದ ತನಿಖೆಗೂ ಅಡ್ಡಿಯಾಗಬಹುದು.

  • ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

    ರಾಮೇಶ್ವರಂ ಕೆಫೆ ಸ್ಫೋಟ – ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯನ್ನಾಗಿ ಪರಿಗಣಿಸಿದ ಎನ್‌ಐಎ

    ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA)  ವಿಚಾರಣೆ ನಡೆಸಿದೆ.

    ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

     

    ಸಾಕ್ಷಿಯನ್ನಾಗಿ ಪರಿಗಣನೆ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ  ಸಾಯಿ ಪ್ರಸಾದ್‌  ಅವರನ್ನು ಎನ್‌ಐಎ ಸಾಕ್ಷಿಯನ್ನಾಗಿ ಪರಿಗಣಿಸಿದೆ.

    ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ ಸಾಯಿ ಪ್ರಸಾದ್‌ ಮೊಬೈಲ್‌ ಮಾರಾಟ ಮಾಡಿದ್ದರು. ಮುಜಾಮಿಲ್ ಷರೀಫ್ ಪ್ರಕರಣದ ಮತ್ತೊಬ್ಬ ಆರೋಪಿ ಮುಸಾವೀರ್‌ಗೆ ಮೊಬೈಲ್ ಸಿಮ್ ಕೊಟ್ಟಿದ್ದ. ಮುಸಾವೀರ್ ಬಳಸಿದ್ದು ಇದೇ ಮೊಬೈಲ್ ಎಂಬ ಅನುಮಾನದ ಮೇಲೆ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಮಾರಾಟ ಮಾಡುತ್ತಿದ್ದ ಸಾಯಿ ಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದೆ.

    ಮುಜಾಮಿಲ್‌ ಮೊಬೈಲ್‌ ಖರೀದಿ ಮಾಡಿದ ಹಿನ್ನೆಲೆಯಲ್ಲಿ ಎನ್‌ಐಎ ಸಾಯಿ ಪ್ರಸಾದ್‌ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿ ಕೆಲವೊಂದು ಮಾಹಿತಿಯನ್ನು ಪಡೆದು ಕಳುಹಿಸಿದೆ ಎಂಬ ವಿಚಾರ ಈಗ ತಿಳಿದುಬಂದಿದೆ.

  • ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

    ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

    ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe Bomb Blast) ಆರೋಪಿಗಳ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (NIA)ಬಿಡುಗಡೆ ಮಾಡಿ ಮಾಹಿತಿ ನೀಡಿದ ವ್ಯಕ್ತಿಗಳಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

    ಬಾಂಬ್‌ ಇರಿಸಿದ ವ್ಯಕ್ತಿ ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್‌ ಶಜೀಬ್ (Mussavir Hussain Shazib) ಮೂರು ಫೋಟೋ ಬಿಡುಗಡೆ ಮಾಡಿದೆ. 30 ವರ್ಷ ವಯಸ್ಸಿನ ಈತ ಜಿಮ್‌ ಬಾಡಿ ಹೊಂದಿದ್ದು ಅಂದಾಜು 6.2 ಅಡಿ ಹೊಂದಿದ್ದಾನೆ. ಮೊಹಮ್ಮದ್‌ ಜುನೈದ್ ಸಯ್ಯದ್‌ ಹೆಸರಿನಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ಹೊಂದಿದ್ದಾನೆ ಎಂದು ತಿಳಿಸಿದೆ.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

    ಮತ್ತೊಬ್ಬ ಸಂಚುಕೋರ ಅಬ್ದುಲ್‌ ಮತೀನ್‌ ಅಹ್ಮದ್‌ (Abdul Matheen Ahmed) 5.5 ಅಡಿ ಹೊಂದಿದ್ದು ಮುಂದುಗಡೆ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್‌ ಧರಿಸುತ್ತಾನೆ. 30 ವರ್ಷದ ಈತ ವಿಘ್ನೇಶ್‌‌, ಸುಮಿತ್‌ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ.

    ಇವರಿಬ್ಬರು ಪುರುಷರ/ ಹುಡುಗರ ಹಾಸ್ಟೆಲ್‌, ಪಿಜಿಯಲ್ಲಿ ನೆಲೆಸುತ್ತಾರೆ. ಕಡಿಮೆ ಬಜೆಟ್‌ ಹೋಟೆಲ್‌, ಲಾಡ್ಜ್‌ನಲ್ಲಿ ತಂಗುತ್ತಾರೆ ಎಂದು ತಿಳಿಸಿದೆ. ಇವರಿಬ್ಬರ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗಳ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

     

  • ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ – ರಾಮೇಶ್ವರಂ ಕೆಫೆ ಸ್ಫೋಟ, ಓರ್ವ ಅರೆಸ್ಟ್‌

    ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ – ರಾಮೇಶ್ವರಂ ಕೆಫೆ ಸ್ಫೋಟ, ಓರ್ವ ಅರೆಸ್ಟ್‌

    ಬೆಂಗಳೂರು: ಮಲೆನಾಡಿನ ಶಿವಮೊಗ್ಗ ಆಯ್ತು, ಈಗ ಕಾಫಿನಾಡಿನಲ್ಲೂ ಉಗ್ರರ ಜಾಲ ಇರುವುದು ಪತ್ತೆಯಾಗಿದ್ದು ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಚಿಕ್ಕಮಗಳೂರು (Chikkamgaluru) ಕಳಸದಲ್ಲಿ (Kalasa) ಆರೋಪಿಯೊಬ್ಬನನ್ನು ಬಂಧಿಸಿದೆ.

    ಮುಝಮ್ಮಿಲ್ ಶರೀಫ್‌(30) ಬಂಧಿತ ಆರೋಪಿ. ಬುಧವಾರ ಮುಝಮ್ಮಿಲ್ ಶರೀಫ್‌ (Muzammil Shareef) ಮನೆ ಮೇಲೆ ಎನ್‌ಐಎ ದಾಳಿ ನಡೆಸಿ ವಶಕ್ಕೆ ಪಡೆದಿತ್ತು. ಇಂದು ಬೆಂಗಳೂರಿಗೆ ಕರೆ ತಂದು ವಿಚಾರಣೆ ನಡೆಸಿದ ಬಳಿಕ ಆತನನ್ನು ಬಂಧಿಸಲಾಗಿದೆ.

    ಬಾಂಬ್‌ ಸ್ಫೋಟ ನಡೆದ ದಿನ ಆತ ಬೆಂಗಳೂರಿನಲ್ಲೇ ಇದ್ದು ಸ್ಫೋಟದ ಸಂಚುಕೋರ ಮುಸ್ಸಾವಿರ್ ಶಜೀಬ್ ಹುಸೇನ್‌ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂಬ ಆರೋಪ ಬಂದಿದೆ.

    ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ಭೇದಿಸಿದ ನಂತರ ದಾಳಿಯ ಸಂಚುಕೋರ ಮುಝಮ್ಮಿಲ್ ಶರೀಫ್‌ನನ್ನು ಬಂಧಿಸಿದೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    ಆರಂಭದಲ್ಲಿ ಸ್ಫೋಟ ನಡೆಸಿದ ಪ್ರಮುಖ ಸಂಚುಕೋರ ಮುಸ್ಸಾವಿರ್ ಶಜೀಬ್ ಹುಸೇನ್‌ ಮತ್ತು ಅಬ್ದುಲ್ ಮಥೀನ್‌ನನ್ನು ತನಿಖೆಯಿಂದ ಪತ್ತೆ ಹಚ್ಚಲಾಗಿತ್ತು. ಎನ್‌ಐಎಗೆ ಬೇಕಾಗಿರುವ ಈ ಆರೋಪಿಗಳು ಈಗ ಪರಾರಿಯಾಗಿದ್ದಾರೆ.

    ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.  ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎನ್‌ಐಎ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

    ಭಟ್ಕಳದಲ್ಲೂ ವಿಚಾರಣೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಇಕ್ಬಾಲ್ ಭಟ್ಕಳನ ಪುತ್ರ ಅಬ್ದುಲ್ ರಾಬಿದ್‍ಗೆ ರಾಷ್ಟ್ರೀಯ ತನಿಖಾ ದಳ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ.

    ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಬಸ್ ಮೂಲಕ ಭಟ್ಕಳಕ್ಕೆ ಬಂದಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎನ್‌ಐಎ ತಂಡ ತನಿಖೆ ಚುರುಕುಗೊಳಿಸಿದೆ.

  • ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

    ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

    ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಮೂರು ರಾಜ್ಯಗಳಲ್ಲಿ ನಡೆಸಿದ ದಾಳಿಯ ಬಳಿಕ ಓರ್ವ ಆರೋಪಿಯನ್ನು ಬಂಧಿಸಿದೆ.

    ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ಭೇದಿಸಿದ ನಂತರ ದಾಳಿಯ ಸಂಚುಕೋರ ಮುಝಮ್ಮಿಲ್ ಶರೀಫ್‌ನನ್ನು ಬಂಧಿಸಿದೆ.

    ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್‌ ಮತ್ತು ಸಂಚುಕೋರ ಅಬ್ದುಲ್ ಮಥೀನ್‌ನನ್ನು ತನಿಖೆಯಿಂದ ಪತ್ತೆ ಹಚ್ಚಲಾಗಿತ್ತು. ಎನ್‌ಐಎಗೆ ಬೇಕಾಗಿರುವ ಈ ಆರೋಪಿಗಳು ಈಗ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!


    ಬಾಂಬರ್‌ ಮುಸ್ಸಾವಿರ್ ಶಜೀಬ್ ಹುಸೇನ್‌ಗೆ ಮುಝಮ್ಮಿಲ್ ಶರೀಫ್‌ ಲಾಜಿಸ್ಟಿಕ್‌ ಸಹಕಾರ  ನೀಡಿದ್ದ ಎಂದು ಎನ್‌ಐಎ ಹೇಳಿದೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

    ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಎನ್‌ಐಎ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.