Tag: NIA

  • ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್- ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

    ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್- ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಶಾರಿಕ್ (Shariq) ಪ್ಲಾನ್ ಮಾಡಿದ್ದು, ಉಗ್ರನ ಚೈನ್ ಲಿಂಕ್ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ ಗುಮಾನಿ ಬಂದಿದೆ. ಈತನೊಂದಿಗೆ ಮತ್ತಷ್ಟು ಯುವಕರು ಇರುವ ಸಾಧ್ಯತೆ ಇದ್ದು, ಎಲ್ಲಾ ಆಯಾಮಗಳ ತನಿಖೆ ಆರಂಭಗೊಂಡಿದೆ.

    ಬಾಂಬ್ ಸ್ಫೋಟಿಸಿದ ಉಗ್ರ ಶಾರಿಕ್ ಪೊಲೀಸ್ ವಶದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ನಡುವೆ ಬಾಂಬ್ ಸ್ಫೋಟದ ಕೃತ್ಯ ಶಾರಿಕ್ ಒಬ್ಬನ ಪ್ಲ್ಯಾನ್ ಆಗಿರಲು ಸಾಧ್ಯವೇ ಇಲ್ಲ. ಈ ಸ್ಫೋಟದ ಹಿಂದೆ ದೊಡ್ಡ ಒಂದು ಜಾಲ ಇದೆ ಎಂಬ ಗುಮಾನಿ ಪೊಲೀಸರಿಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪೊಲೀಸರು ಕೃತ್ಯದ ಬೆನ್ನು ಬಿದ್ದಿದ್ದಾರೆ.

    ಬಾಂಬ್ ತಯಾರಿಸಿ ಅಟ್ಟಹಾಸ ಮೆರೆಯುವುದು ಅಷ್ಟು ಸುಲಭದ ಕೆಲಸ ಅಲ್ಲ. ಇದರ ಹಿಂದೆ ಒಂದು ವ್ಯವಸ್ಥಿತವಾದ ಷಡ್ಯಂತ್ರ ಇದ್ದೇ ಇರುತ್ತದೆ. ದೊಡ್ಡ ಗುಂಪೊಂದು ಇದರ ಹಿಂದೆ ಕೆಲಸ ಮಾಡ್ತಿರುತ್ತದೆ. ದುಷ್ಕೃತ್ಯಕ್ಕೆ ಆರ್ಥಿಕ ಬಲವನ್ನ ತುಂಬಲಾಗಿರುತ್ತದೆ. ಬಾಂಬ್ ತಯಾರಿ, ಅದರ ಪ್ರಯೋಗ, ಎಲ್ಲಿ ಸ್ಫೋಟ ಮಾಡಬೇಕು ಎಂಬ ಬಗ್ಗೆ ವರ್ಷಗಳಿಗಿಂತ ಹೆಚ್ಚು ತಯಾರಿ ಬೇಕಾಗುತ್ತದೆ ಎಲ್ಲಾ ಆಯಾಮಗಳಲ್ಲಿ ರಾಷ್ಟ್ರೀಯ ತನಿಖಾದಳ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಮುಂದೆ ಆಗಬಹುದಾದ ಸಂಭಾವ್ಯ ಅವಘಡಗಳನ್ನು ತಪ್ಪಿಸಲು ರಾಜ್ಯ ಹಾಗೂ ಕೇಂದ್ರ ಪೊಲೀಸ್ ಇಲಾಖೆ ರಾತ್ರಿ ಹಗಲು ಕೆಲಸ ಮಾಡುತ್ತಿದೆ.

    ಫಾದರ್ ಮುಲ್ಲರ್ಸ್ ಆಸ್ಪತ್ರೆ (Father Muller Hospital) ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲು ರಾಷ್ಟ್ರೀಯ ತನಿಖಾ ದಳ ಹೊಂಚು ಹಾಕಿ ಕುಳಿತಿದೆ. ಒಮ್ಮೆ ಡಿಸ್ಚಾರ್ಜ್ ಆದ್ರೆ ಹಲವಾರು ಆತಂಕಕಾರಿ ವಿಚಾರಗಳು ಉಗ್ರನ ಬಾಯಿಯಿಂದ ಹೊರ ಬೀಳಲಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    ಮಂಗಳೂರು: ಮಂಗಳೂರಿನಲ್ಲಿ (Mangaluru) ಆಟೋರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣವನ್ನು ಕೇಂದ್ರ ಸರ್ಕಾರದ (Government Of India) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ತನಿಖೆ ನಡೆಸಲಿದೆ. ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ಎನ್‌ಐಎ ನೆರವಾಗಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (NalinKumar Kateel) ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಟೀಲ್ ಅವರು, ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಯಿಂದ 7 ಬಂಡಾಯ ಶಾಸಕರು ಅಮಾನತು

    ಟ್ವೀಟ್‌ನಲ್ಲಿ ಏನಿದೆ?
    ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ. ಇದನ್ನೂ ಓದಿ: ಬೇರೆಲ್ಲೋ ಸ್ಫೋಟವಾಗಬೇಕಿದ್ದ ಕುಕ್ಕರ್ ಬಾಂಬ್ ಹಂಪ್ಸ್ ಕಾರಣದಿಂದ ಆಟೋದಲ್ಲೇ ಬ್ಲಾಸ್ಟ್!

    ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ.

    ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು. ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ಮಾಡುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಜಾರಿಯಾಗಲು ಬಿಡುವುದಿಲ್ಲ.

    ಕೇಂದ್ರ ಸರ್ಕಾರದ (Government Of India) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ಮಂಗಳೂರಿನ ಬಾಂಬ್ ಸ್ಫೋಟದ (Mangaluru Bomb Blast) ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ. ಬಾಂಬ್ ಸ್ಫೋಟದ ಹಿಂದೆ ಅಂತರರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು ಎನ್‌ಐಎ ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – NIAಯಿಂದ ಮತ್ತೊಬ್ಬ ಆರೋಪಿ ಬಂಧನ

    ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – NIAಯಿಂದ ಮತ್ತೊಬ್ಬ ಆರೋಪಿ ಬಂಧನ

    ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 150 ವರ್ಷಗಳ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ

    SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ ಕರೆತಂದಿದೆ.

    ರಾಜ್ಯ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್‌ ಕುಮಾರ್‌ ನೆಟ್ಟಾರು ಹತ್ಯೆಯಾಗಿತ್ತು. ಹತ್ಯೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ಕೇಸ್‌ನ್ನು ಎನ್‌ಐಎ ತನಿಖೆಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ

    Live Tv
    [brid partner=56869869 player=32851 video=960834 autoplay=true]

  • NIA ದಾಳಿ – ನನ್ನ ಕಿರಿಯ ಮಗನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ: ಇಸ್ಮಾಯಿಲ್ ನಾಲಬಂದ್

    NIA ದಾಳಿ – ನನ್ನ ಕಿರಿಯ ಮಗನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ: ಇಸ್ಮಾಯಿಲ್ ನಾಲಬಂದ್

    ಹುಬ್ಬಳ್ಳಿ: ರಾಜ್ಯಾದ್ಯಂತ ಹಲವಡೆ ರಾಷ್ಟ್ರೀಯ ತನಿಖಾ ದಳ (NIA) ದಾಳಿ ಹಿನ್ನೆಲೆ, ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯ (Hubballi) ಎಸ್‍ಡಿಪಿಐ (SDPI) ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ, ಕಚೇರಿ ಮೇಲೆಯೂ NIA ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಹಳೇ ಹುಬ್ಬಳ್ಳಿಯ ನೂರಾನಿ ಪ್ಲಾಟ್‍ನಲ್ಲಿರುವ ಎಸ್‍ಡಿಪಿಐ ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ NIA ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕಸಬಾಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕಚೇರಿಯ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಮತ್ತು ಕಚೇರಿಯನ್ನು ಸಂಪೂರ್ಣ ಪರಿಶೀಲನೆ ನಡೆಸಿ ಅಧಿಕಾರಿಗಳು ಅಗತ್ಯ ದಾಖಲಾತಿಗಳೊಂದಿಗೆ ವಾಪಸಾಗಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

    ಅಧಿಕಾರಿಗಳ ನಿರ್ಗಮನದ ಬಳಿಕ ಮಾತನಾಡಿದ ಇಸ್ಮಾಯಿಲ್, ಕಳೆದ ಆರು ವರ್ಷದಿಂದ ಎಸ್‍ಡಿಪಿಐನಲ್ಲಿ ಕೆಲಸ ಮಾಡುತ್ತಿದ್ದೆ ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಐದು ಗಂಟೆಗೆ NIA ಅಧಿಕಾರಿಗಳು ಬಂದು ವಿಚಾರಣೆ ಮಾಡಬೇಕೆಂದರು. ನಾವು ಸಹಕಾರ ನೀಡಿದ್ದೇವೆ. ಅವರು ಸೌಜನ್ಯ ಪೂರ್ವಕವಾಗಿ ನಮ್ಮನ್ನು ನಡೆಸಿಕೊಂಡಿದ್ದಾರೆ. ಆದರೆ ಅವರು ನನ್ನ ಕಿರಿಯ ಮಗನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಆತ ಊರಿನಲ್ಲಿ ಇಲ್ಲ ಹೀಗಾಗಿ ನ.7 ರಂದು ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗನ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ರೇಣುಕಾಚಾರ್ಯ ಅನುಮಾನ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ

    ಮಂಗಳೂರು: ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಎನ್‍ಐಎ (NIA) ತಂಡದಿಂದ ದಾಳಿ ಮುಂದುವರಿದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

    ಇಂದು ಬೆಳ್ಳಂಬೆಳ್ಳಗ್ಗೆ ನಿಷೇಧಿತ ಪಿಎಫ್‍ಐ (PFI) ಮುಖಂಡರ ಮನೆಗಳ ಮೇಲೆ ಎನ್‍ಐಎ (NIA) ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ 6 ಕಡೆಗಳಲ್ಲಿ ದಾಳಿ ನಡೆಸಿ ಪಿಎಫ್‍ಐ ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಬಾಣಂತಿ, ನವಜಾತ ಶಿಶುಗಳ ಮರಣ ಪ್ರಕರಣ – ಸಚಿವ ಸುಧಾಕರ್ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ

    ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಡಿಪಿಐ (SDPI) ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬೆಳಗಿನ ಜಾವ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಎನ್‍ಐಎಯಿಂದ ಬಂಧಿತ ಆರೋಪಿಗಳಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಕಲ್ ಟೆಸ್ಟ್ ಮಾಡಿಸಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿಸಿ ಆರೋಪಿಗಳನ್ನು ಬೆಂಗಳೂರು ಕಡೆಗೆ ಎನ್‍ಐಎ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇಂದು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ, ಡಿಸಿಪಿ ಎದುರು ಹಾಜರುಪಡಿಸುವ ಸಾಧ್ಯತೆಯಿದೆ.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ (Putturu) ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರಣ್ ನೇಗಿ ನಿಧನ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ಕೇಸ್ – ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಘೋಷಣೆ

    ಪ್ರವೀಣ್ ನೆಟ್ಟಾರು ಕೇಸ್ – ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಘೋಷಣೆ

    ಮಂಗಳೂರು: ಬಿಜೆಪಿ ಕಾರ್ಯಕರ್ತ (BJP Worker) ಬೆಳ್ಳಾರೆಯ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

    ಈ ಕುರಿತು ಎನ್‌ಐಎ (NIA) ಅಧಿಕೃತ ಪ್ರಕಟಣೆ ಹೊರಡಿಸಿದೆ. ಆರೋಪಿಗಳಾದ ಮೊಹಮ್ಮದ್ ಮುಸ್ತಫಾಗೆ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಗೆ ತಲಾ 2 ರೂ. ಬಹುಮಾನ ಘೋಷಿಸಿದೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಏನಿದು ಘಟನೆ?
    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    ಪ್ರವೀಣ್ ನೆಟ್ಟಾರು ಹತ್ಯೆಯಿಂದ (Murder) ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿತ್ತು. ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು (Government Of Karnataka) ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ಇದನ್ನೂ ಓದಿ: ಉದ್ಯೋಗಾಕಾಂಕ್ಷಿ ಮೇಲೆ DYSP ದರ್ಪ – ಕೆನ್ನೆಗೆ ಬಾರಿಸಿದ ಪೊಲೀಸ್ ಅಧಿಕಾರಿ

    ಬಳಿಕ ರಾಜ್ಯ ಸರ್ಕಾರ ಎನ್‌ಐಎ ಹೆಗಲಿಗೆ ತನಿಖೆ ಜವಾಬ್ದಾರಿಯನ್ನು ವಹಿಸಿತ್ತು. ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದ ಎನ್‌ಐಎ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿತ್ತು. ಕೇರಳದ 7 ಕಡೆ ಆಶ್ರಯ, ಹಂತಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಮಂದಿಯನ್ನು ಎನ್‌ಐಎ ಬಂಧಿಸಿದೆ. ಇದೀಗ ಕೊಲೆ ಮಾಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

    IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

    ಸೂರಜ್‌ಕುಂಡ್: ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಗ್ರವೇ ಸದನದಲ್ಲಿ ಹೊಸ ಕರಡನ್ನು ಮಂಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಚಿಂತನ ಶಿಬಿರದಲ್ಲಿ ಮಾತನಾಡಿದ ಅವರು, ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸ್ವೀಕರಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎರಡೂ ಶಾಸನಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸದನದಲ್ಲಿ ಹೊಸದಾಗಿ ಕರಡು ಮಂಡಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

    ಐಪಿಸಿ, ಸಿಆರ್‌ಪಿಸಿ ಸುಧಾರಣೆಗಳಿಗಾಗಿ ಸಾಕಷ್ಟು ಸಮಯ ವಿನಿಯೋಗಿಸಿದ್ದು, ಆಳವಾಗಿ ಅಧ್ಯಯನ ಮಾಡಲಾಗುತ್ತಿದೆ. ಭಾರತದಲ್ಲಿ ಕ್ರಿಮಿನಲ್ ಕಾನೂನು (Law) ಸುಧಾರಣೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರು 2020ರ ಮೇನಲ್ಲಿ ಐವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿಯ ಕಾನೂನು ವಿಶ್ವವಿದ್ಯಾಲಯದ (Delhi Law University) ಕುಲಪತಿ ಪ್ರೊ. ರಣಬೀರ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು

    ಸಮಿತಿ ರಚಿಸಿದಾಗ ವೈವಿಧ್ಯತೆ ಮತ್ತು ಪಾರದರ್ಶಕತೆ ಕೊರತೆಯ ಹಿನ್ನೆಲೆಯಲ್ಲಿ ವಕೀಲರು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ಸಮಿತಿಯು ಎಲ್ಲಾ ರೀತಿಯ ಅಭಿಪ್ರಾಯ ಮತ್ತು ಸಲಹೆಗಳನ್ನು ಗೌರವಿಸುವುದಾಗಿ ಹೇಳಿತ್ತು. ಪಾರದರ್ಶಕತೆಯ ದೃಷ್ಟಿಯಿಂದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಹೇಳಿತ್ತು. ಹಾಗಾಗಿ ಸೂಕ್ತ ಸಲಹೆಗಳನ್ನು ಸ್ವೀಕರಿಸಿದ್ದು, ಶೀಘ್ರದಲ್ಲೇ ಕರಡು ಮಂಡಿಸುವುದಾಗಿ ಅವರು ಘೋಷಿಸಿದ್ದಾರೆ.

    ಪ್ರತಿ ರಾಜ್ಯದಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಆರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಯಮತ್ತೂರು ಸಿಲಿಂಡರ್ ಸ್ಫೋಟ ಕೇಸ್ – ತನಿಖೆ ವಹಿಸಿಕೊಂಡ NIA

    ಕೊಯಮತ್ತೂರು ಸಿಲಿಂಡರ್ ಸ್ಫೋಟ ಕೇಸ್ – ತನಿಖೆ ವಹಿಸಿಕೊಂಡ NIA

    ಚೆನ್ನೈ: ಅಕ್ಟೋಬರ್ 23 ರಂದು ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ (Coimbatore) ನಡೆದ ಕಾರಿನ ಸಿಲಿಂಡರ್ ಸ್ಫೋಟ ಪ್ರಕರಣ (Cylinder Blast Case) ಬಳಿಕ ಭಯೋತ್ಪಾದನಾ (Terrorism) ತಿರುವು ಪಡೆದುಕೊಂಡಿತ್ತು. ಘಟನೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿ ಜಮೇಜಾ ಮುಬಿನ್ ಮನೆಯಲ್ಲಿಯೂ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೈಗೆತ್ತಿಕೊಂಡಿದೆ.

    ಭಾನುವಾರ ಮುಂಜಾನೆ ಸುಮಾರು 4:30ರ ವೇಳೆಗೆ ಕೊಟ್ಟೈ ಈಶ್ವರನ್ ದೇವಸ್ಥಾನದ ಬಳಿ ಮಾರುತಿ 800 ಕಾರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಜಮೇಜಾ ಮುಬಿನ್ (27) ಸಾವನ್ನಪ್ಪಿದ್ದ.

    ಬಳಿಕ ತನಿಖೆಯನ್ನು ಆರಂಭಿಸಿದ ಪೊಲೀಸರು ಸುಟ್ಟು ಹೋದ ಕಾರಿನಲ್ಲಿ ಹಾಗೂ ಜಮೇಜಾ ಮುಬಿನ್‌ನ ಮನೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಿದ್ದರು. ಇದಕ್ಕೂ ಮುನ್ನ ಆತ 1019ರಲ್ಲಿ ಶ್ರೀಲಂಕಾದ ಈಸ್ಟರ್ ಸಂಡೇ ಸ್ಫೋಟದ ಮಾಸ್ಟರ್ ಮೈಂಡ್ ಜಹ್ರಾನ್ ಹಾಶಿಮ್‌ಗೆ ಸಂಬಂಧಿಸಿದ ಜಾಲದೊಂದಿಗೆ ಸಂಬಂಧ ಹೊಂದಿದ್ದ ಆರೋಪದಡಿ ಆತನನ್ನು ಅಧಿಕಾರಿಗಳು ವಿಚಾರಣೆಯನ್ನೂ ಮಾಡಿದ್ದರು. ಆದರೆ ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಯೋಗಿ, ಮೋದಿ ವಿರುದ್ಧ ದ್ವೇಷದ ಭಾಷಣ – ಅಜಂ ಖಾನ್‍ಗೆ 3 ವರ್ಷ ಜೈಲು

    ಇದಾದ ಬಳಿಕ ಜಮೇಜಾ ಮುಬಿನ್‌ನ ಮನೆಯಿಂದ ಕೆಲವರು ಭಾರವಾದ ವಸ್ತುಗಳನ್ನು ಹೊರಗಡೆ ತೆಗೆದುಕೊಂಡು ಹೋಗಿದ್ದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದರು. ಈ ಎಲ್ಲಾ ಭಯೋತ್ಪಾದನಾ ಸುಳಿವುಗಳ ಬೆನ್ನಲ್ಲೇ ಇದು ಆತ್ಮಹತ್ಯಾ ದಾಳಿ ಎಂದು ಕೇಳಿ ಬಂದಿದ್ದು, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಒತ್ತಡ ಕೇಳಿಬಂದಿತ್ತು. ತಮಿಳುನಾಡು ಸರ್ಕಾರ ಈ ಪ್ರಕರಣವನ್ನು ಬುಧವಾರ ಎನ್‌ಐಎಗೆ ವಹಿಸಿತ್ತು.

    ಇದೀಗ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದ್ದು, ಭಯೋತ್ಪಾದನಾ ಸಂಚಿನ ಕೋನದಲ್ಲಿ ತನಿಖೆ ನಡೆಸಲಿದೆ. ಇದನ್ನೂ ಓದಿ: ಕರ್ನಾಟಕ ವಿವಿಯಲ್ಲಿದ್ದ ಉಗಾಂಡ ದೇಶದ ವಿದ್ಯಾರ್ಥಿ ನಾಪತ್ತೆ

    Live Tv
    [brid partner=56869869 player=32851 video=960834 autoplay=true]

  • ಸಿಲಿಂಡರ್ ಸ್ಫೋಟ ಪ್ರಕರಣ ಆತ್ಮಹತ್ಯಾ ದಾಳಿಯೆಂದು ಪರಿಗಣಿಸಿ NIA ತನಿಖೆಗೆ ವಹಿಸಿ – ಅಣ್ಣಾಮಲೈ

    ಸಿಲಿಂಡರ್ ಸ್ಫೋಟ ಪ್ರಕರಣ ಆತ್ಮಹತ್ಯಾ ದಾಳಿಯೆಂದು ಪರಿಗಣಿಸಿ NIA ತನಿಖೆಗೆ ವಹಿಸಿ – ಅಣ್ಣಾಮಲೈ

    ಚೆನ್ನೈ: ಕೊಯಮತ್ತೂರಿನಲ್ಲಿ (Coimbatore) ಕಾರಿನಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ. ಈ ಪ್ರಕರಣವನ್ನು ಪೊಲೀಸರು ಆತ್ಮಹತ್ಯಾ ದಾಳಿ (Suicide Attack) ಎಂದು ಒಪ್ಪಿಕೊಳ್ಳಬೇಕು. ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ತಮಿಳುನಾಡು ಭಾರತೀಯ ಜನತಾ ಪಾರ್ಟಿ (BJP) ಮುಖ್ಯಸ್ಥ ಅಣ್ಣಾಮಲೈ (Annamalai) ಒತ್ತಾಯಿಸಿದ್ದಾರೆ.

    ಸಿಲಿಂಡರ್ ಸ್ಫೋಟದಲ್ಲಿ (Cylinder Blast) ಸಾವನ್ನಪ್ಪಿದ ಜಮೇಶಾ ಮುಬಿನ್ ಅಕ್ಟೋಬರ್ 21 ರಂದು ಐಸಿಸ್‌ನಂತೆಯೇ ವಾಟ್ಸಪ್ ಸ್ಟೇಟಸ್ ಅನ್ನು ಪೋಸ್ಟ್ ಮಾಡಿದ್ದ. ಘಟನೆಯ ಬಳಿಕ ಆತನ ಮನೆಯಲ್ಲಿ ಸ್ಫೋಟಕ ವಸ್ತುಗಳೂ ಪತ್ತೆಯಾಗಿದ್ದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆದರೆ ಏಕೆ ಬಂಧಿಸಿದ್ದಾರೆ ಎಂಬ ಮಾಹಿತಿಯನ್ನು ನೀಡಿಲ್ಲ. ಈ ಸ್ಫೋಟದ ಬಗ್ಗೆ ತಮಿಳುನಾಡು ಬಿಜೆಪಿ ಪರವಾಗಿ ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇವೆ. ಈ ಘಟನೆಯನ್ನು ಪೊಲೀಸರು ಆತ್ಮಹತ್ಯಾ ದಾಳಿ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಮೌಢ್ಯಕ್ಕೆ ಸೆಡ್ಡು – ಗ್ರಹಣ ವೇಳೆ ಬಾಳೆಹಣ್ಣು, ಚುರುಮುರಿ ಸೇವಿಸಿದ ಜನ

    ವರದಿಗಳ ಪ್ರಕಾರ ಜಮೇಶಾ ಮುಬಿನ್‌ನ ಮನೆಯಿಂದ ಕೆಲವರು ಭಾರವಾದ ಚೀಲವನ್ನು ಹೊತ್ತುಕೊಂಡು ಹೊರಗಡೆ ಹೋಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಐವರನ್ನು ಬಂಧಿಸಿದ್ದಾರೆ.

    ಭಾನುವಾರ ಕೊಯಮತ್ತೂರಿನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸುವುದಕ್ಕೂ ಮೊದಲು ಜಮೇಶಾ ಮುಬಿನ್ ಕಾರನ್ನು ಚಲಾಯಿಸುತ್ತಿದ್ದ. ಆತ ಚೆಕ್ ಪಾಯಿಂಟ್ ಅನ್ನು ಕೂಡಾ ತಪ್ಪಿಸಲು ಪ್ರಯತ್ನಿಸಿದ್ದಾನೆ ಎಂಬುದು ತಿಳಿದುಬಂದಿದೆ. ಆತನ ಗುರಿ ಏನಾಗಿತ್ತು ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 80 ವರ್ಷ ಆದ್ಮೇಲೆ ಖರ್ಗೆ ಅವರನ್ನ ಡ್ರೈವರ್ ಸೀಟಲ್ಲಿ ಕೂರಿಸಿದ್ದಾರೆ: ಅಶೋಕ್ ಲೇವಡಿ

    Live Tv
    [brid partner=56869869 player=32851 video=960834 autoplay=true]

  • ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ನವದೆಹಲಿ: ಭಾರತ (India) ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು (Terrorists), ಗ್ಯಾಂಗ್‌ಸ್ಟರ್‌ಗಳು (Gangsters), ಮಾದಕವಸ್ತು ಕಳ್ಳಸಾಗಣೆದಾರರ (Smugglers) ಸಂಪರ್ಕವನ್ನು ಕೆಡವಲು ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಎನ್‌ಐಎ ಉತ್ತರ ಭಾರತದ ಹಲವು ಭಾಗಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಬಂಧನ ವರದಿಯಾಗಿಲ್ಲ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ

    ಈ ಹಿಂದೆ ಅಕ್ಟೋಬರ್ 14 ರಂದು, ಡ್ರೋನ್ ಡೆಲಿವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತ್ತು.

    ಕಳೆದ 9 ತಿಂಗಳುಗಳಲ್ಲಿ, ನೆರೆಯ ಪಾಕಿಸ್ತಾನದಿಂದ 191 ಡ್ರೋನ್‌ಗಳು ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವುದನ್ನು ಭದ್ರತಾ ಪಡೆಗಳು ಗಮನಿಸಿವೆ. ಸೋಮವಾರ ಮುಂಜಾನೆಯೂ ಭಾರತ – ಪಾಕಿಸ್ತಾನ ಗಡಿಯಲ್ಲಿ ಪಂಜಾಬ್ ಅಮೃತಸರ ಸೆಕ್ಟರ್‌ನಲ್ಲಿ ಭಾರತವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಸುಮಾರು 12 ಕೆಜಿ ಸರಕನ್ನು ಒಯ್ಯುತ್ತಿದ್ದ ಡ್ರೋನ್ ಅನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಇದನ್ನೂ ಓದಿ: ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    Live Tv
    [brid partner=56869869 player=32851 video=960834 autoplay=true]