Tag: NIA

  • ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

    ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

    ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಬಂಧಿಸಿದೆ.

    ಬಂಧಿತರನ್ನು ತಮಿಳುನಾಡು ಮೂಲದ ಅಹಮ್ಮದ್ ಅಬ್ದುಲ್ ಖದೀರ್ (40) ಮತ್ತು ಬೆಂಗಳೂರಿನ ಇರ್ಫಾನ್ ನಾಸೀರ್ (33) ಎಂದು ಗುರುತಿಸಲಾಗಿದೆ. ಈ ಇಬ್ಬರು ಬೆಂಗಳೂರು ಮತ್ತು ಚೆನ್ನೈನಲ್ಲಿ ಐಸಿಸ್ ಉಗ್ರ ಸಂಘಟನೆಗಾಗಿ ದೇಣಿಗೆ ಮೂಲಕ ಹಣ ಸಂಗ್ರಹಿಸುತ್ತಿದ್ದರು ಮತ್ತು ಯುವಕರನ್ನು ಉಗ್ರ ಸಂಘಟನೆಗೆ ಸೇರಿಕೊಳ್ಳುವಂತೆ ಪ್ರೇರೆಪಿಸುತ್ತಿದ್ದರು ಎಂದು ಎನ್‍ಐಎ ಹೇಳಿದೆ.

    ತಮಿಳುನಾಡಿನ ಚೆನ್ನೈ ಮೂಲದ ಅಹಮ್ಮದ್ ಅಬ್ದುಲ್ ಖದೀರ್ ಚೆನ್ನೈನಲ್ಲಿ ಬ್ಯಾಂಕ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನ ಫ್ರೇಜರ್ ಟೌನ್ ನಿವಾಸಿ ಇರ್ಫಾನ್ ನಾಸೀರ್ ಅಕ್ಕಿ ವ್ಯಾಪಾರಿಯಾಗಿದ್ದ. ಈ ಇಬ್ಬರನ್ನು ಬೆಂಗಳೂರಿನ ಗುರಪ್ಪನ ಪಾಳ್ಯ ಮತ್ತು ಫ್ರೇಜರ್ ಟೌನಿನಲ್ಲಿ ಪ್ರತ್ಯೇಕವಾಗಿ ಬಂಧಿಸಲಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬಳಸುತ್ತಿದ್ದ ಎಲೆಕ್ಟ್ರಿಕ್ ಸಾಧನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‍ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಈ ಇಬ್ಬರು ಸೇರಿಕೊಂಡು ಹಣವನ್ನು ಸಗ್ರಹಿಸಿವುದಲ್ಲದೇ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ ಪ್ರಚೋದನೆ ಮಾಡಿ ಅವರು ಸಿರಿಯಾಗೆ ಹೋಗಲು ಸಹಾಯ ಕೂಡ ಮಾಡುತ್ತಿದ್ದರು. ಇಂದು ಈ ಇಬ್ಬರನ್ನು ಅರೆಸ್ಟ್ ಮಾಡಿರುವ ಎನ್‍ಐಎ ಅಧಿಕಾರಿಗಳು ಬೆಂಗಳೂರಿನ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನ ವಿಚಾರಣೆ ನಡೆಸಲು ಕಸ್ಟಡಿಗೆ ತೆಗೆದುಕೊಂಡಿದೆ.

  • ಸದ್ಯಕ್ಕೆ ಬೆಂಗಳೂರಿಗಿಲ್ಲ ಎನ್‍ಐಎ ಪ್ರಾದೇಶಿಕ ಕಚೇರಿ

    ಸದ್ಯಕ್ಕೆ ಬೆಂಗಳೂರಿಗಿಲ್ಲ ಎನ್‍ಐಎ ಪ್ರಾದೇಶಿಕ ಕಚೇರಿ

    ನವದೆಹಲಿ: ಸದ್ಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗುವುದಿಲ್ಲ.

    ಹೊಸದಾಗಿ ಮೂರು ಎನ್‍ಐಎ ಕಚೇರಿ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಮಣಿಪುರದ ರಾಜಧಾನಿ ಇಂಫಾಲ, ತಮಿಳುನಾಡಿನ ರಾಜಧಾನಿ ಚೆನ್ನೈ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಪ್ರಾದೇಶಿಕ ಕಚೇರಿ ಸ್ಥಾಪನೆಯಾಗಲಿದೆ.

    ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎನ್‍ಐಎ ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದರು. ಬೆಂಗಳೂರು, ಸುತ್ತಮುತ್ತ ಉಗ್ರಗಾಮಿ ಕೃತ್ಯ ಹೆಚ್ಚುತ್ತಿರುವ ಹಿನ್ನಲೆ ಎನ್‍ಐಎ ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು.

    ಬೆಂಗಳೂರಿನಲ್ಲಿ ಈಗ ಎನ್‍ಐಎ ಉಪ ಶಾಖೆ ಮಾತ್ರ ಇದೆ. ಹೈದರಾಬಾದ್‍ನಲ್ಲಿರುವ ಎನ್‍ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಈಗ ಬೆಂಗಳೂರಿನ ಎನ್‍ಐಎ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ತೇಜಸ್ವಿ ಸೂರ್ಯರಿಂದ ಕನ್ನಡಿಗರಿಗೆ ಅಪಮಾನ: ಡಿಕೆಶಿ

    ಪ್ರಸ್ತುತ ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತ್ತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‍ಪುರ, ಚಂಡೀಗಢದಲ್ಲಿ ಎನ್‍ಐಎ ಪ್ರಾದೇಶಿಕ ಕಚೇರಿಗಳಿವೆ.

  • ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ- ಬೆಂಗಳೂರಿನಲ್ಲಿ 32 ಕಡೆ ಎನ್‍ಐಎ ದಾಳಿ

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ- ಬೆಂಗಳೂರಿನಲ್ಲಿ 32 ಕಡೆ ಎನ್‍ಐಎ ದಾಳಿ

    – ಮಹತ್ವದ ಮಾಹಿತಿ ಕಲೆ ಹಾಕಿದ ಎನ್‍ಐಎ

    ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಲಿಕಾನ್ ಸಿಟಿಯ 32 ಕಡೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಏಕಕಾಲಕ್ಕೆ ದಾಳಿ ನಡೆಸಿದೆ.

    ಎರಡು ದಿನಗಳ ಹಿಂದಷ್ಟೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಪ್ರಕರಣ ಕೈಗೆ ಎತ್ತಿಕೊಂಡಿದೆ. ಇದೀಗ ನಗರದ ಸುಮಾರು 32 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ. ಎನ್‍ಐಎ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಐಜಿ, ಡಿಐಜಿ, ಎಸ್‍ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.

    ಇಂದು ಬೆಳಗ್ಗೆಯಿಂದ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದ್ದು, ದಾಳಿ ವೇಳೆ ಎನ್‍ಐಎ ಮಹತ್ವದ ಮಾಹಿತಿ ಕಲೆ ಹಾಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಈಗಾಗಲೇ ಹಲವು ಆರೋಪಿಗಳನ್ನು ಸಿಸಿಬಿ ಬಂಧಿಸಿದ್ದು, ಇದೀಗ ಭಯೋತ್ಪಾದಕರ ಜೊತೆ ನಂಟಿರುವ ಕುರಿತು ಎನ್‍ಐಎ ತನಿಖೆ ನಡೆಸುತ್ತಿದೆ.

    ನಡೆದಿದ್ದೇನು?
    ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ಆಗಸ್ಟ್ ೧೧ರಂದು ರಾತ್ರಿ 8ಕ್ಕೆ ಕಾವಲ್ ಭೈರಸಂದ್ರದಲ್ಲಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿತ್ತು. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದರು. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದರು. ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನ ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಇತ್ತ ಗಲಭೆಗೂ ಮುನ್ನ ಶಾಸಕರು ಮನೆ ಖಾಲಿ ಮಾಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಘಟನೆ ಸಂಬಂಧಿಸದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

  • ಕೇರಳ, ಪಶ್ಚಿಮ ಬಂಗಾಳದಲ್ಲಿ 11 ಕಡೆ ದಾಳಿ – 9 ಉಗ್ರರ ಬಂಧನ

    ಕೇರಳ, ಪಶ್ಚಿಮ ಬಂಗಾಳದಲ್ಲಿ 11 ಕಡೆ ದಾಳಿ – 9 ಉಗ್ರರ ಬಂಧನ

    – ತಪ್ಪಿತು ಉಗ್ರರ ದಾಳಿ

    ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳು ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ 11 ಕಡೆ ದಾಳಿ ಮಾಡಿ 9 ಜನ ಉಗ್ರರನ್ನು ಇಂದು ಬಂಧಿಸಿದ್ದಾರೆ.

    ಅಲ್-ಖೈದಾ ಉಗ್ರ ಸಂಘಟನೆಗೆ ಸೇರಿದ 9 ಮಂದಿ ಉಗ್ರರನ್ನು ಎನ್‍ಐಎ ಅರೆಸ್ಟ್ ಮಾಡಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕೇರಳದ ಎರ್ನಾಕುಲಂನಿಂದ ಒಂಬತ್ತು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಆರು ಮಂದಿಯನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದ್ದು, ಉಳಿದ ಮೂವರನ್ನು ಕೇರಳದಿಂದ ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ಲಭಿಸಿದೆ.

    ಬಂಧಿತ ಭಯೋತ್ಪಾದಕರನ್ನು ಕೇರಳದ ಎರ್ನಾಕುಲಂ ಮೂಲದವರಾದ ಮುರ್ಷಿದ್ ಹಸನ್, ಇಯಾಕುಬ್ ಬಿಸ್ವಾಸ್, ಮೊಸರಾಫ್ ಹುಸೈನ್ ಮತ್ತು ಪಶ್ಚಿಮಾ ಬಂಗಾಳದ ಮುರ್ಷಿದಾಬಾದ್ ಮೂಲಕದ ನಜ್ಮಸ್ ಸಕೀಬ್, ಅಬು ಸುಫಿಯಾನ್, ಮೈನುಲ್ ಮೊಂಡಾಲ್, ಲ್ಯುಯೆನ್ ಅಹ್ಮದ್, ಅಲ್ ಮಾಮುನ್ ಕಮಲ್ ಮತ್ತು ಅತಿತೂರ್ ರೆಹಮಾನ್ ಎಂದು ಗುರುತಿಸಲಾಗಿದೆ.

    ಈ ವಿಚಾರವಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎನ್‍ಐಎ, ಪ್ರಾಥಮಿಕ ತನಿಖೆಯ ಪ್ರಕಾರ, ಈ ವ್ಯಕ್ತಿಗಳನ್ನು ಪಾಕಿಸ್ತಾನ ಮೂಲದ ಅಲ್-ಖೈದಾ ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕರು ಎಂದು ತಿಳಿದು ಬಂದಿದೆ. ಇವರನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರೇರೇಪಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಎನ್‍ಐಎ ತಿಳಿಸಿದೆ.

    ಈ ಭಯೋತ್ಪಾದಕರ ಸಂಘ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು, ಹಣವನ್ನು ಸಂಗ್ರಹಿಸುವ ಕೆಲಸಕ್ಕೆ ಮುಂದಾಗಿತ್ತು. ಇದರಲ್ಲಿ ಕೆಲ ಉಗ್ರರು ಹಣ ಬಂದ ನಂತರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲು ದೆಹಲಿಗೆ ಪ್ರಯಾಣಿಸಲು ಯೋಜನೆ ರೂಪಿಸಿದ್ದರು. ಸದ್ಯ ಖಚಿತ ಮಾಹಿತಿ ಮೇರೆಗೆ ದೇಶದ ವಿವಿಧ ಭಾಗಗಳಲ್ಲಿ ಇವರನ್ನು ಬಂಧಿಸಿದ್ದು, ದೇಶದಲ್ಲಿ ನಡೆಯಬೇಕಿದ್ದ ಹಲವಾರು ಭಯೋತ್ಪಾದಕ ದಾಳಿಗಳು ನಿಂತು ಹೋಗಿವೆ ಎಂದು ಎನ್‍ಐಎ ಹೇಳಿದೆ.

    ಬಂಧಿತರಿಂದ ಡಿಜಿಟಲ್ ಸಾಧನಗಳು, ದಾಖಲೆಗಳು, ಜಿಹಾದಿ ಸಾಹಿತ್ಯ, ತೀಕ್ಷ್ಣವಾದ ಶಸ್ತ್ರಾಸ್ತ್ರಗಳು, ದೇಶೀಯ ನಿರ್ಮಿತ ಬಂದೂಕುಗಳು, ಸ್ಥಳೀಯವಾಗಿ ತಯಾರಿಸಿದ ದೇಹದ ರಕ್ಷಾಕವಚ, ಮನೆಯಲ್ಲಿ ತಯಾರಿಸಿದ ಸ್ಫೋಟಕ ಸಾಧನಗಳು, ತಯಾರಿಸಲು ಬಳಸುವ ಪುಸ್ತಕಗಳು ಸೇರಿದಂತೆ ಹೆಚ್ಚಿನ ಪ್ರಮಾಣದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‍ಐಎ ಮಾಹಿತಿ ನೀಡಿದೆ.

  • ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಕಾರವಾರ: ಉಗ್ರ ಸಂಘಟನೆಗೆಗಳ ಸಂಘಟನೆಗಾಗಿ ಶಿರಸಿ ತಾಲೂಕಿನ ಬನವಾಸಿಯ ಮೌಲ್ವಿ ಹೆಸರಿನಲ್ಲಿ ಸಿಮ್ ಬಳಕೆಯಾಗಿದೆ. ಈ ಕುರಿತು ಶಿರಸಿ ತಾಲೂಕಿನ ಬನವಾಸಿ ಮೂಲದ ಮೌಲ್ವಿ ಅಬ್ದುಲ್ ಮತೀನ್‍ನನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ತನಿಖೆ ನಡೆಸಿ ಬಿಡುಗಡೆಗೊಳಿಸಿದ್ದಾರೆ.

    ಅಬ್ದುಲ್ ಮತೀನ್ ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಅಧ್ಯಯನ ಮಾಡುತ್ತಿದ್ದ, ಈ ವೇಳೆಯಲ್ಲಿ ಈತನೊಂದಿಗೆ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳು ಸಹ ಮದರಸಾದಲ್ಲಿ ಓದುತ್ತಿದ್ದು, ಈ ವೇಳೆ ಶಿರಸಿಯ ಅಬ್ದುಲ್ ಮತೀನ್ ತನ್ನ ಸಹಪಾಠಿಗಳಾದ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳಿಗೆ ತನ್ನದೇ ಹೆಸರಿನ ದಾಖಲೆಗಳಲ್ಲಿ ಸಿಮ್ ಕೊಡಿಸಿದ್ದ.

    ಈತ ವಿದ್ಯಾಭ್ಯಾಸ ಮುಗಿಸಿ ಮಂಗಳೂರಿನ ಮದರಸಾ ಒಂದರಲ್ಲಿ ಸಹಾಯಕ ಮೌಲ್ವಿಯಾಗಿ ಕಾರ್ಯ ನಿರ್ವಹಿಸುತಿದ್ದ. ಆದರೇ ಈತ ತನ್ನ ಸ್ನೇಹಿತರಿಗೆ ತನ್ನ ಹೆಸರಿನಲ್ಲಿ ಸಿಮ್ ಕೊಡಿಸಿದ್ದು, ಈ ಸಿಮ್‍ಗಳು ಪಶ್ಚಿಮ ಬಂಗಾಳ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಬಳಕೆಯಾಗುತ್ತಿವೆ. ಈತನ ಹೆಸರಿನಲ್ಲಿರುವ ಸಿಮ್ ನಿಷೇಧಿತ ಜೆ.ಎಮ್.ಬಿ ಸಂಘಟನೆಯ ಸಂಘಟನೆಗೂ ಬಳಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿ.ಸಿ.ಬಿ, ಇಡಿ, ಎನ್.ಐ.ಎ ಕೂಡ ಈತನನ್ನು ಕರೆಯಿಸಿ ಹೆಚ್ಚಿನ ತನಿಖೆ ಕೈಗೊಂಡಿದೆ.

    ಶಿರಸಿಯ ಬನವಾಸಿ ಮೌಲ್ವಿ ಹೆಸರಿನಲ್ಲಿ ಒಂಬತ್ತಕ್ಕೂ ಹೆಚ್ಚು ಸಿಮ್ ಬಳಕೆಯಾಗುತ್ತಿವೆ. ಇತನ ಹೆಸರಿನಲ್ಲಿ ಬಳಕೆಯಾಗುತ್ತಿರುವ ಸಿಮ್‍ಗಳು ಪಶ್ಚಿಮ ಬಂಗಾಳ, ಜಮ್ಮು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಕ್ರಿಯವಾಗಿವೆ. ತನಿಖೆ ವೇಳೆ ತಾನು ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಕಲಿಯುತಿದ್ದಾಗ ತನ್ನ ಸ್ನೇಹಿತರಿಗೆ ತನ್ನ ದಾಖಲೆ ಮೂಲಕ ಅಬ್ದುಲ್ ಮತೀನ್ ಸಿಮ್ ಖರೀದಿಸಿ ನೀಡಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಯಾರು ಯಾರಿಗೆ ಸಿಮ್ ನೀಡಿದ್ದೇನೆ ಎಂಬುವ ಮಾಹಿತಿಯನ್ನು ಕೇಂದ್ರ ತನಿಖಾ ಸಂಸ್ಥೆಗೆ ಮಾಹಿತಿ ನೀಡಿದ್ದಾನೆ.

    ಕಳೆದ ಆರು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ-ಅಂಕೋಲ ಗಡಿಯಲ್ಲಿ ನಿಷೇಧಿತ ಸೆಟಲೈಟ್ ಫೋನ್‍ಗಳು ಸಕ್ರಿಯವಾಗಿದ್ದು, ಐದಕ್ಕೂ ಹೆಚ್ಚು ಬಾರಿ ಬಳಸಲಾಗಿದೆ. ಈ ಕುರಿತು ಸಹ ಜಿಲ್ಲಾ ಪೊಲೀಸರು, ಸಿಸಿಬಿ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಕಾರವಾರ, ಯಲ್ಲಾಪುರ ಭಾಗದ ಕಾಡುಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಆದರೇ ಇದರ ಬಗ್ಗೆ ಹೆಚ್ಚಿನ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಬರಿಗೈಯಲ್ಲಿ ಹಿಂತಿರುಗುವಂತಾಗಿತ್ತು.

  • ಪುಲ್ವಾಮಾ ದಾಳಿ – ಭಯೋತ್ಪಾದಕಿ ಮಗಳಿಗೆ ಸಾಥ್ ಕೊಟ್ಟಿದ್ದ ತಂದೆ, ಬಯಲಾಯ್ತು ಸ್ಫೋಟಕ ಸತ್ಯ

    ಪುಲ್ವಾಮಾ ದಾಳಿ – ಭಯೋತ್ಪಾದಕಿ ಮಗಳಿಗೆ ಸಾಥ್ ಕೊಟ್ಟಿದ್ದ ತಂದೆ, ಬಯಲಾಯ್ತು ಸ್ಫೋಟಕ ಸತ್ಯ

    – ಮಾಸ್ಟರ್ ಮೈಂಡ್ ಜೊತೆ ನಿರಂತರ ಸಂಪರ್ಕ
    – ಎನ್‍ಐಎ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖ

    ಶ್ರೀನಗರ: ಪುಲ್ವಾಮಾ ಭಯೋತ್ಪಾದನಾ ಪ್ರಕರಣದಲ್ಲಿ ಬಂಧಿತಳಾಗಿದ್ದ ಏಕೈಕ ಮಹಿಳಾ ಭಯೋತ್ಪಾದಕಿ ಕೃತ್ಯದ ಮಾಸ್ಟರ್ ಮೈಂಡ್ ಜೊತೆ ನಿಕಟ ಸಂಪರ್ಕದಲ್ಲಿದ್ದ ವಿಚಾರ ರಾಷ್ಟ್ರೀಯ ತನಿಖಾ ದಳದ(ಎನ್‍ಐಎ) ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖವಾಗಿದೆ.

    ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಪುಲ್ವಾಮಾದಲ್ಲಿ ಎನ್‍ಐಎ 23 ವರ್ಷದ ಇನ್ಶಾ ಜಾನ್ ಮತ್ತು ಆಕೆಯ ತಂದೆಯನ್ನು ಬಂಧಿಸಿತ್ತು. ಈಗ ಈ ಕೃತ್ಯದಲ್ಲಿ ಆಕೆ ಹೇಗೆ ನೆರವಾಗಿದ್ದಳು ಎಂಬುದನ್ನು ವಿವರಿಸಲಾಗಿದೆ.

    ಜೈಶ್-ಎ-ಮೊಹಮ್ಮದ್ ಉಗ್ರಸಂಘಟನೆಗೆ ಸೇರಿದ್ದ ಇನ್ಶಾ ಜಾನ್ ಕಳೆದ ಮಾರ್ಚ್‍ನಲ್ಲಿ ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಕೊಲ್ಲಲ್ಪಟ್ಟ ಪಾಕಿಸ್ತಾನದ ಬಾಂಬ್ ತಯಾರಕ ಮತ್ತು ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮೊಹಮ್ಮದ್ ಉಮರ್ ಫಾರೂಕ್ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದಳು. ಇನ್ಶಾ ಫೋನ್ ಮತ್ತು ಇತರ ಸಾಮಾಜಿಕ ಮಾಧ್ಯಮದಲ್ಲಿ ಆತನೊಂದಿಗೆ ಸಂಪರ್ಕದಲ್ಲಿದ್ದಳು ಎಂದು ಎನ್‍ಐಎ ತಿಳಿಸಿದೆ.

    ಮಂಗಳವಾರ ಎನ್‍ಐಎ ಅಧಿಕಾರಿಗಳು ಪುಲ್ವಾಮಾ ದಾಳಿಯ ಬಗ್ಗೆ 13,500 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಇದಾದ ಒಂದು ದಿನದ ನಂತರ ಮಾತನಾಡಿರುವ ಹಿರಿಯ ಎನ್‍ಐಎ ಅಧಿಕಾರಿಯೊಬ್ಬರು, ಇನ್ಶಾ ಜಾನ್ ಮತ್ತು ಮೊಹಮ್ಮದ್ ಉಮರ್ ಫಾರೂಕ್ ನಡೆಸಿರುವ ಸಂಭಾಷಣೆ ಮತ್ತು ಸಂದೇಶಗಳು ನಮಗೆ ಸಿಕ್ಕಿವೆ. ಮಗಳು ಉಗ್ರರ ಜೊತೆ ಸಂಪರ್ಕದಲ್ಲಿದ್ದ ವಿಚಾರ ಇನ್ಶಾ ಜಾನ್‍ಳ ತಂದೆ ತಾರಿಕ್ ಪಿರ್ ಕೂಡ ಗೊತ್ತಿತ್ತು ಎಂದು ಹೇಳಿದ್ದಾರೆ.

    ಪುಲ್ವಾಮಾ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಉಮರ್ ಫಾರೂಕ್ ಮತ್ತು ಅತನ ಇಬ್ಬರು ಸಹಚರರ ಸಂಚಾರ ಮಾಡಲು ತಾರಿಕ್ ಪಿರ್ ಸಹಾಯ ಮಾಡಿದ್ದ. ಜೊತೆಗೆ ತಂದೆ-ಮಗಳು ಜೋಡಿ ಪುಲ್ವಾಮಾ ದಾಳಿಯಲ್ಲಿ ಪ್ರಮುಖ ಉಗ್ರರಾದ ಉಮರ್ ಫಾರೂಕ್, ಸಮೀರ್ ದಾರ್ ಮತ್ತು ಆದಿಲ್ ಅಹ್ಮದ್ ದಾರ್ ಗೆ ಆಹಾರ, ಆಶ್ರಯ ಮತ್ತು ಇತರ ಲಾಜಿಸ್ಟಿಕ್ಸ್ ಅನ್ನು 15ಕ್ಕೂ ಹೆಚ್ಚು ಬಾರಿ ಒದಗಿಸಿದ್ದಾರೆ. 2018 ಮತ್ತು 2019ರ ನಡುವೆ ಹಲವಾರು ಬಾರಿ ಉಗ್ರರಿಗೆ ಅವರ ಮನೆಯಲ್ಲೇ ಆಶ್ರಯ ನೀಡಿದ್ದಾರೆ.

    ಫೆಬ್ರವರಿ 14, 2019ರಂದು ವರ್ಷ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಆತ್ಮಾಹುತಿ ಕಾರ್ ಬಾಂಬ್ ದಾಳಿ ಮಾಡಿದ್ದರು. ಇದರಲ್ಲಿ 40 ಜನ ಭಾರತೀಯ ಯೋಧರು ಹುತಾತ್ಮರಾಗಿದ್ದರು ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಒಟ್ಟು 19 ಉಗ್ರರ ವಿರುದ್ಧ 13,500 ಪುಟಗಳ ಚಾರ್ಜ್‍ಶಿಟ್ ಸಲ್ಲಿಕೆ ಮಾಡಲಾಗಿದೆ.

    ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಝರ್, ಪ್ರಕರಣದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದ್ದು, ಇವನ ಇಬ್ಬರು ಸಹೋದರರಾದ ರೌಫ್ ಅಝರ್ ಹಾಗೂ ಮೌಲಾನಾ ಮೊಹಮ್ಮದ್ ಅಮ್ಮರ್ ಸಹ ದಾಳಿಯಲ್ಲಿ ಭಾಗಿಯಾಗಿದ್ದರು. ಇದನ್ನು ಓದಿ: ಪುಲ್ವಾಮಾ ಕೇಸ್ – ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

    ಎನ್‍ಐಎ ಎಸ್‍ಪಿ ರಾಕೇಶ್ ಬಲ್ವಾಲ್ ಅವರು ಜಮ್ಮು ಕಾಶ್ಮೀರದ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದು, ಒಟ್ಟು 19 ಆರೋಪಿಗಳ ಪೈಕಿ 7 ಜನ ಎನ್‍ಐಎ ಕಸ್ಟಡಿಯಲ್ಲಿದ್ದಾರೆ. ಉಳಿದ 7 ಜನ ಸಾವನ್ನಪ್ಪಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ವಿವಿಧ ಗುಂಡಿನ ಚಕಮಕಿ ವೇಳೆ 7 ಉಗ್ರರು ಸಾವನ್ನಪ್ಪಿದ್ದಾರೆ. ಐವರು ಪರಾರಿಯಾಗಿದ್ದಾರೆ. ಇದರಲ್ಲಿ ಮೂವರು ಪಾಕಿಸ್ತಾನದಲ್ಲಿದ್ದಾರೆ. ಇನ್ನಿಬ್ಬರು ಭಾರತದಲ್ಲೇ ತಲೆಮರೆಸಿಕೊಂಡಿದ್ದಾರೆ.

  • ಪುಲ್ವಾಮಾ ದಾಳಿ- ಒಂದು ಮೊಬೈಲ್‍ನಿಂದ ಇಡೀ ಕೃತ್ಯದ ಮಾಹಿತಿ ಬಹಿರಂಗ

    ಪುಲ್ವಾಮಾ ದಾಳಿ- ಒಂದು ಮೊಬೈಲ್‍ನಿಂದ ಇಡೀ ಕೃತ್ಯದ ಮಾಹಿತಿ ಬಹಿರಂಗ

    – 13,500 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿದ ಎನ್‍ಐಎ
    – ಪುಲ್ವಾಮಾ ಬಳಿಕ ಮತ್ತೊಂದು ದಾಳಿಗೆ ಸಂಚು ರೂಪಿಸಿದ ಜೈಷ್ ಸಂಘಟನೆ
    – ಕೋಡ್ ವರ್ಡ್ ಬದಲು, ವಾಟ್ಸಪ್ ಮೂಲಕ ಚಾಟ್

    ನವದೆಹಲಿ: ದೇಶದಲ್ಲಿ ಬಾರೀ ಸಂಚಲನ ಸೃಷ್ಟಿಸಿದ ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಮಂಗಳವಾರ 13,500 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 19 ಉಗ್ರರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಈ ಘಟನೆಯಲ್ಲಿ 40 ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದರು.

    ಫೆಬ್ರವರಿ 14, 2019ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಘಟನೆಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 19 ಉಗ್ರರ ವಿರುದ್ಧ 13,500 ಪುಟಗಳ ಚಾರ್ಜ್‍ಶಿಟ್ ಸಲ್ಲಿಕೆ ಮಾಡಲಾಗಿದೆ. ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಝರ್, ಪ್ರಕರಣದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದ್ದು, ಇವನ ಇಬ್ಬರು ಸಹೋದರರಾದ ರೌಫ್ ಅಝರ್ ಹಾಗೂ ಮೌಲಾನಾ ಮೊಹಮ್ಮದ್ ಅಮ್ಮರ್ ಸಹ ದಾಳಿಯಲ್ಲಿ ಭಾಗಿಯಾಗಿದ್ದರು.

    ಎನ್‍ಐಎ ಎಸ್‍ಪಿ ರಾಕೇಶ್ ಬಲ್ವಾಲ್ ಅವರು ಜಮ್ಮು ಕಾಶ್ಮೀರದ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದು, ಒಟ್ಟು 19 ಆರೋಪಿಗಳ ಪೈಕಿ 7 ಜನ ಎನ್‍ಐಎ ಕಸ್ಟಡಿಯಲ್ಲಿದ್ದಾರೆ. ಉಳಿದ 7 ಜನ ಸಾವನ್ನಪ್ಪಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ವಿವಿಧ ಗುಂಡಿನ ಚಕಮಕಿ ವೇಳೆ 7 ಉಗ್ರರು ಸಾವನ್ನಪ್ಪಿದ್ದಾರೆ. ಐವರು ಪರಾರಿಯಾಗಿದ್ದಾರೆ. ಇದರಲ್ಲಿ ಮೂವರು ಪಾಕಿಸ್ತಾನದಲ್ಲಿದ್ದಾರೆ. ಇನ್ನಿಬ್ಬರು ಭಾರತದಲ್ಲೇ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

    ಎನ್‍ಐಎ ಮೊಹಮ್ಮದ್ ಉಮರ್ ಫಾರೂಖ್‍ನಿಂದ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಮಸೂದ್ ಅಝರ್ ಅಳಿಯ ಹಾಗೂ ಐಸಿ-814 ವಿಮಾನ ಹೈಜಾಕ್ ಮಾಡಿದ್ದ ಆರೋಪಿ ಇಬ್ರಾಹಿಂ ಅಝರ್ ಮಗ ಮೊಹಮ್ಮದ್ ಉಮರ್ ಫಾರೂಖ್ ಸಹ ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ. ಉಮರ್ ಫಾರೂಖ್ ಹಾಗೂ ಐಇಡಿ ಎಕ್ಸ್‍ಪರ್ಟ್ ಎಂದೇ ಬಿಂಬಿತನಾಗಿದ್ದ ಕಮ್ರಾನ್‍ನನ್ನು ಕಳೆದ ವರ್ಷ ಮಾರ್ಚ್ 29ರಂದು ಎನ್‍ಕೌಂಟರ್ ಮಾಡಲಾಗಿದೆ.

    ಮೊಬೈಲ್‍ನಿಂದಾಗಿ ಸಾಕ್ಷ್ಯಾಧಾರ ಲಭ್ಯ
    ಎನ್‍ಕೌಂಟರ್ ನಡೆದ ಸ್ಥಳದಿಂದ ಜಮ್ಮು ಕಾಶ್ಮೀರ ಪೊಲೀಸರು ಮೊಬೈಲ್ ವಶಪಡಿಸಿಕೊಂಡ ಬಳಿಕ ಜೈಷ್ ಸಂಘಟನೆಯ ಪಿತೂರಿ ಬೆಳಕಿಗೆ ಬಂದಿದೆ. ಈ ಮೂಲಕ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿತು. ಹೀಗಾಗಿ ಹಲವು ಸಾಕ್ಷ್ಯಗಳು ಸಿಕ್ಕವು. ಆರೋಪಿಗಳನ್ನು ಸಹ ಬೇಗ ಗುರುತಿಸಲು ಸಾಧ್ಯವಾಯಿತು.

    ಫೋನ್ ಸಿಗುತ್ತಿದ್ದಂತೆ ಪ್ರಕರಣಕ್ಕೆ ವೇಗ ನೀಡಿದ ಎನ್‍ಐಎ, ಸಿಕ್ಕಿದ್ದ ಫೋನ್‍ನ್ನು ಫೊರೆನ್ಸಿಕ್ಸ್ ತಂಡಕ್ಕೆ ಕಳುಹಿಸಿತ್ತು. ಇದರಿಂದಾಗಿ ಹಲವರ ಫೋಟೋಗಳು, ವಾಟ್ಸಪ್ ಚಾಟ್ ಹಾಗೂ ವಿಡಿಯೋಗಳು ಸಿಕ್ಕಿದ್ದವು. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ಜೆಷ್ ಎ ಮೊಹಮ್ಮದ್ ಸಂಘಟನೆ ಪ್ರಮುಖ ಪಾತ್ರ ವಹಿಸಿರುವುದು ಬಹಿರಂಗವಾಗಿತ್ತು.

    ಪುಲ್ವಾಮಾ ದಾಳಿ ವೇಳೆ ಉಮರ್ ಫಾರುಕ್ ಸೆಲ್ಫಿ ಹಾಗೂ ಸಾಂಬಾದಲ್ಲಿ ಒಳನುಸುಳುವ ಹಂತದ ವರೆಗಿನ ಹಲವು ಚಿತ್ರಗಳನ್ನು ಕ್ಲಿಕ್ಕಿಸಿದ್ದ. ಅಲ್ಲದೆ ಐಇಡಿ ಸ್ಫೋಟಗೊಂಡು ಯೋಧರು ಸಾವನ್ನಪ್ಪಿದ ಸಂಪೂರ್ಣ ಚಿತ್ರಗಳನ್ನು ಉಮರ್ ಪಾಕಿಸ್ತಾನಿ ವಾಟ್ಸಪ್ ನಂಬರ್‍ಗೆ ಕಳುಹಿಸಿದ್ದ.

    ಒಂದು ಸೆಲ್ಫಿಯಲ್ಲಿ ನಗುತ್ತಿರುವ ಮುಖಗಳ ಮೇಲೆ ಬೂದು ಬಣ್ಣದ ಐಇಡಿಗೆ ಬಳಿಸಿದ ಪುಡಿ ಇದೆ. ಈ ಕುರಿತು ಎನ್‍ಐಎ ಮಾಹಿತಿ ನೀಡಿದ್ದು, ಈ ಚಿತ್ರವನ್ನು ಫೆಬ್ರವರಿ 5, 2019ರಲ್ಲಿ ತೆಗೆದುಕೊಂಡಿದ್ದಾರೆ. ಎಡಕ್ಕಿರುವವನು ಉಮರ್ ಫಾರೂಕ್, ನಡುವೆ ಸಮೀರ್ ದಾರ್ ಹಾಗೂ ಆದಿಲ್ ಅಹ್ಮದ್ ದಾರ್(ಆತ್ಮಾಹುತಿ ಬಾಂಬರ್) ಇವರೆಲ್ಲ ಸೇರಿ ಐಇಡಿ ತಯಾರಿಸಿದ್ದಾರೆ. ಫೆಬ್ರವರಿ 6ರಂದು ಬೆಳಗ್ಗೆ ಇವರೆಲ್ಲ ಸೇರಿ ನೀಲಿ ಮಾರುತಿ ಕಾರ್‍ನಲ್ಲಿ ಸುಮಾರು 200 ಕೆ.ಜಿ. ಐಇಡಿಯನ್ನು ಫಿಟ್ ಮಾಡಿದ್ದಾರೆ.

    ಫೆಬ್ರವರಿ 6ರಂದೇ ಸಿಆರ್ ಪಿಎಫ್ ಹಿಂಬಾಲಕ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಆದರೆ ಹೆಚ್ಚು ಹಿಮಪಾತದಿಂದಾಗಿ ಹೆದ್ದಾರಿ ಮುಚ್ಚಿತ್ತು. ಹೀಗಾಗಿ ಅವರ ಯೋಜನೆ ವಿಳಂಬವಾಯಿತು. ಉಮರ್ ಫೋನ್‍ನಿಂದ ಕಾಲ್ ರೆಕಾರ್ಡ್, ವಾಟ್ಸಪ್ ಚಾಟ್ಸ್, ಆರ್‍ಡಿಎಕ್ಸ್ ಸೇರಿ ಸ್ಫೋಟಕದ ಚಿತ್ರಗಳನ್ನು ಸಂಗ್ರಹಿಸಲಾಗಿದ್ದು, ಇದನ್ನೇ ಪ್ರಮುಖ ಸಾಕ್ಷಿಯನ್ನಾಗಿ ಸಲ್ಲಿಸಲಾಗಿದೆ.

    ಉಗ್ರರು ಸಂವಹನಕ್ಕಾಗಿ ಯಾವುದೇ ಕೋಡ್ ವರ್ಡ್ ಬಳಸಿಲ್ಲ. ಬದಲಿಗೆ ವಾಟ್ಸಪ್‍ನಲ್ಲಿರುವ ಎನ್‍ಕ್ರಿಪ್ಶನ್ ವೈಶಿಷ್ಟ್ಯದಿಂದ ಸಂವಹನ ನಡೆಸಿದ್ದಾರೆ ಎಂದು ಅಧಿಕಾರಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಮೊಬೈಲ್‍ನಲ್ಲಿನ ವಿಡಿಯೋ ಫೂಟೇಜ್‍ಗಳು, ಒಳ ನುಸುಳುವ ಗುಂಪಿನ ಹೆಜ್ಜೆಗುರುತುಗಳ ಮೂಲಕ ಅಂತರಾಷ್ಟ್ರೀಯ ಗಡಿಯಿಂದ ಜಮ್ಮು ಕಾಶ್ಮೀರಕ್ಕೆ ಆರ್‍ಡಿಎಕ್ಸ್ ಸಾಗಿಸಿರುವುದನ್ನು ಪತ್ತೆಹಚ್ಚಿದ್ದಾರೆ. ಅಲ್ಲದೆ ಉಳಿದ ಐಇಡಿಯನ್ನು ಸ್ಥಳೀಯವಾಗಿ ಕಾಶ್ಮೀರ ಕಣಿವೆಯಿಂದ ಸಂಗ್ರಹಿಸಲಾಗಿದೆ. ಸ್ಫೋಟಕವು ಸುರಕ್ಷಿತವಾಗಿ ಜಮ್ಮು ಕಾಶ್ಮೀರಕ್ಕೆ ತಲುಪಿದೆ ಎಂದು ಜೈಷ್ ಕಮಾಂಡರ್‍ಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಲಾಗಿದೆ ಎಂದು ಚಾರ್ಜ್‍ಶಿಟ್‍ನಲ್ಲಿ ಎನ್‍ಐಎ ಉಲ್ಲೇಖಿಸಿದೆ.

    ಪುಲ್ವಾಮಾ ದಾಳಿ ರೀತಿಯಲ್ಲೇ ಎರಡನೇ ದಾಳಿ ನಡೆಸಲು ಸಹ ಜೈಷ್ ಸಂಘಟನೆ ಯೋಜಿಸಿತ್ತು. ಆದರೆ ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಮಸೂದ್ ನಿರ್ದೇಶನದ ಮೇರೆಗೆ ಅದನ್ನು ಸ್ಥಗಿತಗೊಳಿಸಲಾಯಿತು ಎಂದು ಎನ್‍ಐಎ ತಿಳಿಸಿದೆ.

  • ಬೆಂಗ್ಳೂರಲ್ಲಿ ಶಂಕಿತ ಉಗ್ರನ ಬಂಧನ – ಫೋನ್, ಲ್ಯಾಪ್‍ಟಾಪ್‍ಗಳು ವಶಕ್ಕೆ

    ಬೆಂಗ್ಳೂರಲ್ಲಿ ಶಂಕಿತ ಉಗ್ರನ ಬಂಧನ – ಫೋನ್, ಲ್ಯಾಪ್‍ಟಾಪ್‍ಗಳು ವಶಕ್ಕೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್‍ಐಎ ದಾಳಿ ಮಾಡಿದೆ.

    ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್‍ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.

    2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.

  • ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು?

    ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು?

    – 6 ತಿಂಗಳ ಹಿಂದೆ ಎಸ್‌ಡಿಪಿಐಗೆ ಬಂದು ಸೇರಿದ್ದ
    – ಭಯೋತ್ಪಾದಕ ಸಂಘಟನೆಗಳಿಗೆ ಸ್ಲೀಪರ್ ಸೆಲ್?

    ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ. ಬೆಂಗಳೂರು ಗಲಭೆಯ ಎ1 ಆರೋಪಿ ಆಗಿರುವ ಈತ ಭಯೋತ್ಪಾದನಾ ಸಂಘಟನೆಗಳಿಗೆ ಸ್ಲೀಪರ್‌ ಸೆಲ್‌ ಆಗಿ ಕೆಲಸ ಮಾಡುತ್ತಿದ್ದಾನಾ ಎಂಬ ಅನುಮಾನ ಮೂಡಿದೆ.

    ಪಿಎಫ್‌ಐ ಸಂಘಟನೆಯ ಕಾರ್ಯಕರ್ತರ ಜೊತೆ ಭಯೋತ್ಪಾದನಾ ಸಂಘಟನೆಗಳ ನಂಟು ಇದೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಈಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: ವಿಡಿಯೋ: ನವೀನ್ ತಲೆ ತಂದವ್ರಿಗೆ 51 ಲಕ್ಷ ಕೊಡ್ತೀನಿ- ಮುಸ್ಲಿಂ ನಾಯಕ ಘೋಷಣೆ

    ಗಲಭೆಯಲ್ಲಿ ಪಾಲ್ಗೊಂಡವರಿಗೆ ಈತ ಹಣವನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪವೂ ಇದೆ. ಹೀಗಾಗಿ ಈತನಿಗೆ ಹಣವನ್ನು ನೀಡಿದವರು ಯಾರು? ಈತನ ಖಾತೆಗೆ ಎಲ್ಲಿಂದ ಹಣ ಜಮೆ ಆಗುತ್ತಿತ್ತು? ಇಷ್ಟು ಪ್ರಮಾಣದಲ್ಲಿ ಜನರನ್ನು ಸೇರಿಸಿದ್ದು ಹೇಗೆ? ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ತನಿಖೆ ನಡೆಯುತ್ತಿದೆ.

    ಸದ್ಯ ನಡೆಯುತ್ತಿರುವ ವಿಚಾರಣೆ ವೇಳೆ ನಾನು ಧರ್ಮವನ್ನು ಪಾಲಿಸುವ ವ್ಯಕ್ತಿ ಎಂದಷ್ಟೇ ಹೇಳುತ್ತಿದ್ದಾನೆ. ಬೇರೆ ಯಾವುದೇ ಮಾಹಿತಿ ನನ್ನ ಬಳಿ ಇಲ್ಲ ಎಂಬುದಾಗಿ ಉತ್ತರಿಸುತ್ತಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಒಂದು ವೇಳೆ ಮುಜಾಮಿಲ್‌ ಪಾಷಾನ ವಾಟ್ಸಪ್‌, ಇಮೇಲ್‌, ಮೊಬೈಲ್‌ ಕರೆಗಳ ತನಿಖೆಯ ವೇಳೆ ಹೊರ ದೇಶ ಅಥವಾ ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕದ ಶಂಕೆ ವ್ಯಕ್ತವಾದರೆ ಈ ಪ್ರಕರಣಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಎಂಟ್ರಿ ಕೊಡಲಿದೆ. ಒಂದು ವೇಳೆ ಎನ್‌ಐಎ ಎಂಟ್ರಿ ನೀಡಿದರೆ ಈಗ ನಡೆಯುತ್ತಿರುವ ಮ್ಯಾಜಿಸ್ಟ್ರೇಟ್‌ ತನಿಖೆಯ ಸ್ವರೂಪವೇ ಬದಲಾಗಲಿದೆ. ಇದನ್ನೂ ಓದಿ: ಸರ್ಕಾರಿ ಸಂಬಳ ತಗೊಂಡು ಬೆಂಕಿ ಇಟ್ಟ ಕಿರಾತಕ- ಗಲಭೆಯ ಮಾಸ್ಟರ್ ಮೈಂಡ್ ಫೈರೋಜ್ ಖಾನ್

    ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಗಳು ದೇಶದಲ್ಲಿ ದಾಳಿ ನಡೆಸಲು ಮತ್ತು ಭಯೋತ್ಪಾದಕರನ್ನು ತಯಾರಿಸಲು ಇಲ್ಲಿರುವ ವ್ಯಕ್ತಿಗಳನ್ನು ಸಂಪರ್ಕಿಸುವುದು ಹೊಸದೆನಲ್ಲ. ಬಡ ಯುವಕರಲ್ಲಿ ಮತೀಯ ಭಾವನೆಗಳನ್ನು ಬೆಳೆಸಿ ತಮ್ಮ ಕೃತ್ಯದಲ್ಲಿ ಭಾಗಿಯಾಗುವಂತೆ ಪ್ರಚೋದನೆ ನೀಡುವುದನ್ನು ಉಗ್ರ ಸಂಘಟನೆಗಳು ಮಾಡಿಕೊಂಡೇ ಬಂದಿದೆ. ಈ ಯುವಕರಿಗೆ ಹಣದ ಆಮಿಷವನ್ನು ಒಡ್ಡಿ ಉಗ್ರ ಸಂಘಟನೆಗಳಿಗೆ ಸೇರುವಂತೆ ಮಾಡುವುದು ಸ್ಲೀಪರ್‌ ಸೆಲ್‌ ಸದಸ್ಯರ ಕೆಲಸ. ಈ ವ್ಯಕ್ತಿಗಳು ಸಮಾಜ ಸುಧಾರಕರಂತೆ ಬಿಂಬಿಸುತ್ತಾ ಒಳಗಡೆ ಉಗ್ರ ಕೃತ್ಯಗಳಿಗೆ ಸಾಥ್‌ ನೀಡುತ್ತಿರುತ್ತಾರೆ.

  • ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಕೊಂದ ಉಗ್ರ ಜಮ್ಮುವಿನಲ್ಲಿ ಅರೆಸ್ಟ್

    ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಕೊಂದ ಉಗ್ರ ಜಮ್ಮುವಿನಲ್ಲಿ ಅರೆಸ್ಟ್

    ಶ್ರೀನಗರ: ಆರ್‌ಎಸ್‌ಎಸ್ ಕಾರ್ಯಕರ್ತರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಮತ್ತು ಆತನ ಸಹಚರನನ್ನು ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

    ಬಂಧಿತ ಉಗ್ರನನ್ನು ರುಸ್ತಮ್ ಅಲಿ ಎಂದು ಗುರುತಿಸಲಾಗಿದೆ. ಕಳೆದ ವರ್ಷ ಏಪ್ರಿಲ್‍ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಚಂದರ್ ಕಾಂತ್ ಶರ್ಮಾ ಮತ್ತು ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎನ್‍ಐಎ ಸಲ್ಲಿಸಿದ್ದ ಚಾರ್ಜ್ ಶೀಟ್‍ನಲ್ಲಿ ಆತನ ಹೆಸರನ್ನು ಉಲ್ಲೇಖಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಂಗಳವಾರ ರಾತ್ರಿ ಉಗ್ರನನ್ನು ಕಿಶ್ತ್ವಾರ್ ಜಿಲ್ಲೆಯ ಹಂಜಲಾ ಪ್ರದೇಶದಿಂದ ಎನ್‍ಐಎ ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಪೊಲೀಸರು ಕಳೆದ ವರ್ಷ ಸೆಪ್ಟೆಂಬರ್ 23ರಂದು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಾದ ನಿಸ್ಸಾರ್ ಅಹ್ಮದ್ ಶೇಖ್, ನಿಷಾದ್ ಅಹ್ಮದ್ ಮತ್ತು ಆಜಾದ್ ಹುಸೇನ್ ನನ್ನು ಬಂಧಿಸಿದ್ದರು. ಈ ಮೂವರ ತನಿಖೆ ಮಾಡಿ ಇವರು ನೀಡಿದ ಮಾಹಿತಿ ಮೇರೆಗೆ ಈಗ ರುಸ್ತಮ್ ಅಲಿಯನ್ನು ಎನ್‍ಐಎ ಬಂಧಿಸಿದೆ.

    2018ರಲ್ಲಿ ಇದೇ ಕಿಶ್ತ್ವಾರ್ ಪ್ರದೇಶದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅನಿಲ್ ಪರಿಹಾರ್ ಅವರನ್ನು ಕೊಲೆ ಮಾಡಲಾಗಿತ್ತು. ನಂತರ 2019ರ ಏಪ್ರಿಲ್‍ನಲ್ಲಿ ಚಂದರ್ ಕಾಂತ್ ಶರ್ಮಾ ಮತ್ತು ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಗುಂಡಿಟ್ಟು ಕೊಲ್ಲಲಾಗಿತ್ತು. ಈ ವಿಚಾರವಾಗಿ ಕಿಶ್ತ್ವಾರ್ ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಎರಡು ಪ್ರಕರಣಗಳು ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರಗಾಮಿತ್ವವನ್ನು ಪುನರುಜ್ಜೀವನಗೊಳಿಸಿತ್ತು.