Tag: NIA

  • ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ISIS) ಮಾಡ್ಯೂಲ್‌ನ ಪ್ರಮುಖ ಸದಸ್ಯ ರಿಜ್ವಾನ್ ಅಬ್ದುಲ್ ಹಾಜಿ ಅಲಿಯನ್ನು ದೆಹಲಿ ಪೊಲೀಸರ ವಿಶೇಷ ಸೆಲ್ (Delhi Police Speical Cell) ಶುಕ್ರವಾರ (ಆ.9) ಮುಂಜಾನೆ ಬಂಧಿಸಿದೆ.

    ಪುಣೆ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಲಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ದೆಹಲಿಯ ದರಿಯಾಗಂಜ್ ನಿವಾಸಿಯಾಗಿರುವ ಅಲಿ, ಪುಣೆ ಐಸಿಸ್ ಮಾಡ್ಯೂಲ್‌ನ (ISIS Module) ಇತರ ಸದಸ್ಯರೊಂದಿಗೆ ದೆಹಲಿ ಮತ್ತು ಮುಂಬೈನಲ್ಲಿ (Mumbai) ವಿಧ್ವಂಸಕ ಕೃತ್ಯ ಎಸಗಲು ಹಲವಾರು ಪ್ಲ್ಯಾನ್‌ ಮಾಡಿದ್ದನು ಎಂದು ಆರೋಪಿಸಲಾಗಿದೆ.

    ಬಂಧನದ ವೇಳೆ ಅಲಿ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಪುಣೆ ಐಸಿಸ್ ಮಾಡ್ಯೂಲ್‌ನ ಹಲವಾರು ಸದಸ್ಯರನ್ನು ಈ ಹಿಂದೆ ಪುಣೆ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿತ್ತು.

    ಈ ಹಿಂದೆಯೇ 11 ಆರೋಪಿಗಳ ಬಂಧನ:
    ಮಹಾರಾಷ್ಟ್ರದ ಪುಣೆಯಲ್ಲಿ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ರಾಸಾಯನಿಕಗಳು ಮತ್ತು ಐಸಿಸ್‌ಗೆ ಸಂಬಂಧಿಸಿದ ಪುಸ್ತಕಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2023 ರಲ್ಲಿ ಎನ್‌ಐಎ ಒಟ್ಟು 11 ಆರೋಪಿಗಳನ್ನು ಬಂಧಿಸಿದೆ. ಈ ವರ್ಷದ ಮಾರ್ಚ್‌ನಲ್ಲಿ ಭಯೋತ್ಪಾದನಾ ನಿಗ್ರಹ ಸಂಸ್ಥೆ ಸಲ್ಲಿಸಿದ ಪೂರಕ ಆರೋಪ ಪಟ್ಟಿಯಲ್ಲಿ ಇತರ ಮೂವರು ಆರೋಪಿಗಳೊಂದಿಗೆ ರಿಜ್ವಾನ್ ಅಲಿಯನ್ನು ಹೆಸರಿಸಲಾಗಿತ್ತು.

    ಎಲ್ಲಾ ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸದಸ್ಯರಾಗಿದ್ದರು. ಹಾಗೂ ಎನ್‌ಐಎ ಪ್ರಕಾರ, ಸಂಘಟನೆಯ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸುವ ದೊಡ್ಡ ಪಿತೂರಿಯ ಭಾಗವಾಗಿ ಪುಣೆ ಮತ್ತು ಸುತ್ತಮುತ್ತ ಭಯೋತ್ಪಾದನೆಯ ಯೋಜನೆಗಳಲ್ಲಿ ಭಾಗಿಯಾಗಿದ್ದರು. ಈ ವ್ಯಕ್ತಿಗಳು ಪುಣೆಯ ಕೊಂಧ್ವಾದಲ್ಲಿ ಐಇಡಿ ಫ್ಯಾಬ್ರಿಕೇಶನ್ ತರಬೇತಿಯನ್ನು ಪಡೆದಿದ್ದರು ಮತ್ತು ನಿಯಂತ್ರಿತ ಸ್ಫೋಟವನ್ನು ಸಹ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.

    ಪಶ್ಚಿಮ ಘಟ್ಟದ ​​ಪ್ರದೇಶಗಳನ್ನು ಅಡಗುತಾಣ ಮಾಡಿಕೊಂಡಿದ್ದರು. ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಹಾರಾಷ್ಟ್ರ ಮತ್ತು ಗುಜರಾತ್‌ನಾದ್ಯಂತ ನಗರಗಳಲ್ಲಿ ಸ್ಥಳಗಳನ್ನು ಪರಿಶೀಲಿಸಿದ್ದರು. ಅಲ್ಲದೇ ಭಯೋತ್ಪಾದಕ ದಾಳಿಗೆ ಶೂಟಿಂಗ್‌ ತರಬೇತಿಯನ್ನೂ ಪಡೆದಿದ್ದರು ಎಂದು ಎನ್‌ಐಎ ತಿಳಿಸಿದೆ.

  • ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಆರೋಪಿಯನ್ನು ಕರೆ ತಂದು ಮರು ಸೃಷ್ಟಿ ಹೇಗೆ ಮಾಡಲಾಯ್ತು?

    ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಆರೋಪಿಯನ್ನು ಕರೆ ತಂದು ಮರು ಸೃಷ್ಟಿ ಹೇಗೆ ಮಾಡಲಾಯ್ತು?

    ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಮುಸ್ಸಾವೀರ್ ಹುಸೇನ್ (Mussavir Hussain) ಸಮ್ಮುಖದಲ್ಲಿ ಎನ್‌ಐಎ (NIA) ಇಂದು ಸ್ಥಳ ಮಹಜರು ನಡೆಸಿತು.

    ಬಂಧನ ಮಾಡಿದ ಬಳಿಕ 5 ತಿಂಗಳ ನಂತರ ಮುಸ್ಸಾವೀರ್‌ ಹುಸೇನ್‌ನನ್ನು ರಾಮೇಶ್ವರಂ ಕೆಫೆಗೆ ಕರೆದುಕೊಂಡು ಬಂದು ಘಟನೆಯನ್ನು ಮರುಸೃಸ್ಟಿ ಮಾಡಿದ್ದಾರೆ. ಇದನ್ನೂ ಓದಿ: ಕೋಚಿಂಗ್‌ ಸೆಂಟರ್‌ಗಳು ಡೆತ್‌ ಚೇಂಬರ್‌ಗಳಾಗಿ ಮಾರ್ಪಟ್ಟಿವೆ – ಸುಪ್ರೀಂ ಚಾಟಿ

    ವೋಲ್ವೋ ಬಸ್ಸಿನಲ್ಲಿ ಬಂದ ಮುಸ್ಸಾವೀರ್‌ ರಾಮೇಶ್ವರಂ ಕೆಫೆ ಮುಂಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಇಳಿದಿದ್ದ. ಬಳಿಕ ಕಪ್ಪು ಬಣ್ಣದ ಬ್ಯಾಗ್‌ ತಲೆಗೆ ಟೊಪ್ಪಿ, ಮುಖಕ್ಕೆ ಮಾಸ್ಕ್ ಧರಿಸಿ ಹೋಟೆಲ್ ಒಳಗಡೆ ಪ್ರವೇಶಿಸಿದ್ದ.

    ಕ್ಯಾಶ್‌ ಕೌಂಟರ್‌ನಲ್ಲಿ ಇಡ್ಲಿ ಮತ್ತು ವಡೆಯನ್ನು ಖರೀದಿಸಿ ತಿಂಡಿ ತಿಂದು ಬಾಂಬ್‌ ಇಟ್ಟು ಬಟ್ಟೆ ಬದಲಿಸಿಕೊಂಡು ಬಸ್ ಮೂಲಕ ತಲೆಮರಿಸಿಕೊಂಡಿದ್ದ. ಇದನ್ನೂ ಓದಿ: Valmiki Scam | 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ – ನಾಗೇಂದ್ರ, ದದ್ದಲ್‌ ಹೆಸರಿಲ್ಲ

    ಮಾರ್ಚ್ 1 ರಂದು ಹೋಟೆಲ್‌ ಪ್ರವೇಶ ಮಾಡಿದ್ದು ಹೇಗೆ? ಪ್ರವೇಶ ಮಾಡಿದ ಬಳಿಕ ಪರಾರಿಯಾಗಿದ್ದು ಹೇಗೆ ಎನ್ನುವ ಮರು ಸೃಷ್ಟಿಯನ್ನು ಮುಸ್ಸಾವೀರ್ ಕೈಯಲ್ಲಿ ಮಾಡಿಸಲಾಯ್ತು. ಮುಂಜಾನೆ 5 ಗಂಟೆಯಿಂದ ಆರಂಭವಾದ ಎನ್‌ಐಎ ಮಹಜರು ಹಾಗೂ ಮರುಸೃಷ್ಟಿ ಕಾರ್ಯ ಸುಮಾರು ಮೂರು ಗಂಟೆಗಳ ಕಾಲ ನಡೆಯಿತು.

    ಬಾಂಬ್‌ ಇಟ್ಟ ಬಳಿಕ ಮುಸಾವೀರ್ ಹೂಡಿ ಬಳಿ ಇರುವ ಮಸೀದಿ ಹತ್ತಿರ ಬಟ್ಟೆಯನ್ನು ಬದಲಾವಣೆ ಮಾಡಿ ಬೆಂಗಳೂರಿನಿಂದ  ಪರಾರಿಯಾಗಿದ. ಹೀಗಾಗಿ ಮಸೀದಿ ಹತ್ತಿರ ಕೂಡ ಮಹಜರ್ ಪ್ರಕ್ರಿಯೆ ಹಾಗೂ ಮರುಸೃಷ್ಟಿ ಪ್ರಕ್ರಿಯೆ ಮಾಡಲಾಯಿತು.

     

  • ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರು

    ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರು

    ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (The Rameshwaram Cafe Bomb Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್‌ ಮಹಜರು ನಡೆಸುತ್ತಿದೆ.

    ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಇದನ್ನೂ ಓದಿ: ತಮಿಳುನಾಡಿಗೂ ಕಾವೇರಿ ಹರಿದರೂ ರೈತರಿಗೆ ತಪ್ಪದ ಕಂಟಕ!

     

    ಮಾರ್ಚ್‌ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ನಡೆದಿತ್ತು. ಹಲವು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ ಬಳಿಕ ಎನ್‌ಐಎ ಕೋಲ್ಕತ್ತಾದಲ್ಲಿ ಏಪ್ರಿಲ್‌ 12 ರಂದು ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಬಂಧಿಸಿತ್ತು.

    ಸ್ಥಳೀಯ ಪೊಲೀಸರ ಭದ್ರತೆಯ ನಡುವೆ ಈಗ ಎನ್‌ಐಎ ಮಹಜರು ಪ್ರಕ್ರಿಯೆ ನಡೆಸುತ್ತಿದೆ.

     

  • `ಭಾರತದ ಸಂವಿಧಾನ’ ಇಸ್ಲಾಂ ವಿರೋಧಿ ಅಂತ ಬೋಧನೆ – ಇಬ್ಬರು ಶಂಕಿತ ಉಗ್ರರು ಅರೆಸ್ಟ್

    `ಭಾರತದ ಸಂವಿಧಾನ’ ಇಸ್ಲಾಂ ವಿರೋಧಿ ಅಂತ ಬೋಧನೆ – ಇಬ್ಬರು ಶಂಕಿತ ಉಗ್ರರು ಅರೆಸ್ಟ್

    ಚೆನ್ನೈ: ಭಾರತದ ಸಂವಿಧಾನ ಹಾಗೂ ನ್ಯಾಯಾಂಗ ಇಸ್ಲಾಂಗೆ ವಿರುದ್ಧವಾಗಿದೆ ಎಂದು ಬಿಂಬಿಸಿ ರಹಸ್ಯ ತರಗತಿಗಳ ಮೂಲಕ ಯುವಕರಿಗೆ ಬೋಧಿಸುತ್ತಿದ್ದ ಇಬ್ಬರು ಶಂಕಿತ ಉಗ್ರರನ್ನು ತಮಿಳುನಾಡಿನ ತಂಜಾವೂರ್‌ನಲ್ಲಿ (Thanjavur) ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

    ಬಂಧಿತ ಆರೋಪಿಗಳನ್ನು ಅಬ್ದುಲ್ ರೆಹಮಾನ್ ಮತ್ತು ಮುಜಿಬುರ್ ರೆಹಮಾನ್ ಅಲ್ತಮ್ ಸಾಹಿಬ್ ಎಂದು ಗುರುತಿಸಲಾಗಿದೆ. ಇಬ್ಬರು ಹಿಜ್ಬ್-ಉತ್-ತಹ್ರೀರ್ ಹಾಗೂ ಅಂತರರಾಷ್ಟ್ರೀಯ ಪ್ಯಾನ್-ಇಸ್ಲಾಮಿಸ್ಟೇಟ್‌ನ ಮೂಲಭೂತವಾದಿ ಗುಂಪಿನ ಸದಸ್ಯರಾಗಿದ್ದಾರೆ. ಈ ಸಂಘಟನೆ ಇಸ್ಲಾಮಿಕ್ ಕ್ಯಾಲಿಫೇಟ್‍ನ್ನು ಮರುಸ್ಥಾಪಿಸಲು ಮತ್ತು ಹಿಜ್ಬ್-ಉತ್-ತಹ್ರಿರ್ನ ಸಂಸ್ಥಾಪಕ ತಕಿ ಅಲ್-ದಿನ್ ಅಲ್-ನಭಾನಿ ಬರೆದ ಸಂವಿಧಾನವನ್ನು ಜಾರಿಗೊಳಿಸಲು ಕೆಲಸ ಮಾಡುತ್ತಿದೆ ಎಂದು ಎನ್‍ಐಎ ತಿಳಿಸಿದೆ. ಇದನ್ನೂ ಓದಿ: ಅಂಬುಲೆನ್ಸ್, ಬೈಕ್ ಮಧ್ಯೆ ಅಪಘಾತ – ಮೂವರು ಸವಾರರು ದುರ್ಮರಣ

    ತಮಿಳುನಾಡಿನ (Tamil Nadu) ಐದು ಜಿಲ್ಲೆಗಳ 10 ಸ್ಥಳಗಳಲ್ಲಿ ವ್ಯಾಪಕ ಶೋಧದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಇಬ್ಬರನ್ನು ಬಂಧಿಸಿದೆ. ಬಂಧಿತರು ಯುವಕರಿಗೆ ಉಗ್ರಗಾಮಿ ಸಿದ್ಧಾಂತಗಳ ಬಗ್ಗೆ ರಹಸ್ಯ ತರಗತಿಗಳಲ್ಲಿ ಬೋಧನೆ ಮಾಡುತ್ತಿದ್ದರು. ತರಗತಿಯಲ್ಲಿ ಭಾರತೀಯ ಸಂವಿಧಾನ, ಕಾನೂನು ಮತ್ತು ನ್ಯಾಯಾಂಗವನ್ನು ಇಸ್ಲಾಂ ವಿರೋಧಿ ಎಂದು ಬಿಂಬಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬಂಧಿತರಿಂದ ಮೊಬೈಲ್ ಫೋನ್‍ಗಳು, ಲ್ಯಾಪ್‍ಟಾಪ್, ಸಿಮ್ ಮತ್ತು ಮೆಮೊರಿ ಕಾರ್ಡ್‍ಗಳು ಮತ್ತು ಹಿಜ್ಬ್-ಉತ್-ತಹ್ರೀರ್, ಖಿಲಾಫಾ, ಇಸ್ಲಾಮಿಕ್ ಸ್ಟೇಟ್‍ನ ಸಿದ್ಧಾಂತವನ್ನು ಒಳಗೊಂಡಿರುವ ಪುಸ್ತಕಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ತನಿಖೆ ಮುಂದುವರಿದ್ದು, ಉಗ್ರ ಸಂಘಟನೆಯ ಜಾಲದ ಬಗ್ಗೆ ಎನ್‍ಐಎ ಮಾಹಿತಿ ಕಲೆಹಾಕುತ್ತಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

  • ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಶ್ರೀನಗರ: ಕಳೆದ ಮೂರು ವಾರಗಳ ಹಿಂದೆಯಷ್ಟೇ ರಿಯಾಸಿ ಭಯೋತ್ಪಾದಕ ದಾಳಿಗೆ (Reasi Terror Attack) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಾನುವಾರ (ಇಂದು) ಜಮ್ಮು ಮತ್ತು ಕಾಶ್ಮೀರದ ರಜೌರಿ (Rajouri) ಜಿಲ್ಲೆಯ ಅನೇಕ ಕಡೆದ ದಾಳಿ ನಡೆಸಿದೆ.

    ಇದೇ ತಿಂಗಳ ಜೂನ್‌ 9ರಂದು ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಭಯೋತ್ಪಾದಕರು ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಬಸ್‌ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದರು 33 ಮಂದಿ ಗಾಯಗೊಂಡಿದ್ದರು. ಆದ್ರೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಎನ್‌ಐಎ ಜೂನ್‌ 15ರಂದು ಪ್ರಕರಣ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ಹಲವೆಡೆ ದಾಳಿ ನಡೆಸಿದೆ.

    ರಿಯಾಸಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜೂನ್ 19 ರಂದು ಬಂಧಿಸಲಾದ ಶಂಕಿತ ಉಗ್ರ ಹಕಮ್ ಖಾನ್ ಅಕಾ ಹಕಿನ್ ದಿನ್ ನೀಡಿದ ಸುಳಿವು ಆಧರಿಸಿ ರಾಜೌರಿಯಲ್ಲಿ ದಾಳಿ ನಡೆಸಲಾಗಿದೆ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – ಉಗ್ರರಿಗೆ ಸಹಕಾರ ನೀಡಿದ್ದ ಓರ್ವ ವ್ಯಕ್ತಿ ಅರೆಸ್ಟ್‌

    ಪ್ರಾಥಮಿಕ ಮಾಹಿತಿ ಪ್ರಕಾರ ಬಂಧಿತನು ಭಯೋತ್ಪಾದಕರಿಗೆ ವ್ಯವಸ್ಥಿತವಾಗಿ ಬೆಂಬಲ ನೀಡುತ್ತಿದ್ದ ಜೊತೆಗೆ ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದ. ಉಗ್ರರ ದಾಳಿಗೆ ನೆರವಾಗುವ ಸ್ಥಳಗಳ ಬಗ್ಗೆಯೂ ಮಾಹಿತಿ ನೀಡಿದ್ದ, ಅನ್ನೋದು ತಿಳಿದುಬಂದಿದೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಮೋಹಿತಾ ಶರ್ಮಾ ಹೇಳಿದ್ದಾರೆ.

    ಅಲ್ಲದೇ ವಿಚಾರಣೆ ವೇಳೆ ತನ್ನ ಮನೆಯಲ್ಲಿ ಮೂವರು ಉಗ್ರರು ತಂಗಿದ್ದರು. ಅದಕ್ಕಾಗಿ ತನಗೆ 6,000 ರೂ. ನೀಡಿದ್ದರು ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

  • NIA ದಾಳಿ- ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿದೆ ಶಿವಮೊಗ್ಗ ಸ್ಫೋಟದ ಸಂಚಿನ ಆರೋಪ

    NIA ದಾಳಿ- ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿದೆ ಶಿವಮೊಗ್ಗ ಸ್ಫೋಟದ ಸಂಚಿನ ಆರೋಪ

    ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ NIA ತಂಡದಿಂದ ದಾಳಿ ನಡೆದಿದ್ದು, ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಿನ್ನೆಲೆಯಲ್ಲಿ ಬನವಾಸಿಯ ದಾಸನ ಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ (32) ನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ.

    ಇಂದು ಬೆಳಗ್ಗೆ 5 ಮಂದಿ ಅಧಿಕಾರಿಗಳಿರುವ NIA ತಂಡ ಹಾಗೂ ರಾಜ್ಯದ ಇಂಟೆಲಿಜೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ್ದಾಗಿ ಆರೋಪ ಈತನ ಮೇಲಿದೆ. ಇದನ್ನೂ ಓದಿ: ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣ – 25,000 ಕೋಟಿ ರೂ. ಕಳೆದುಕೊಂಡ ಭಾರತೀಯರು

    ಇದಲ್ಲದೇ ಶಿವಮೊಗ್ಗದಲ್ಲಿ (Shivamogga) ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಹೊಂದಿರುವ ಅಬ್ದುಲ್ ಶುಕ್ಕೂರ್ ದುಬೈ ನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಈತನ ಮೇಲಿದೆ.

    ಕೆಲವು ದಿನದ ಹಿಂದೆ ಬಕ್ರೀದ್ ಆಚರಣೆಗಾಗಿ ಬನವಾಸಿಯ ದಾಸನ ಕೊಪ್ಪದ ನಿವಾಸಕ್ಕೆ ಆಗಮಿಸಿದ್ದ ಅಬ್ದುಲ್ ಶುಕ್ಕೂರ್ ನನ್ನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್ ನಲ್ಲಿ ನಕಲಿ ದಾಖಲೆ ನೀಡಿದ ಆರೋಪದಡಿ NIA ತನಿಖೆ ಕೈಗೊಂಡಿದೆ.

  • Breaking: ದೇಶದ ಪ್ರತಿ ಜಿಲ್ಲೆಯಲ್ಲೂ ಉಗ್ರರ ಜಾಲ ರೂಪಿಸಲು ಬಳ್ಳಾರಿಯಲ್ಲಿ ಸಂಚು – NIA ಚಾರ್ಜ್‌ಶೀಟ್‌ನಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ!

    Breaking: ದೇಶದ ಪ್ರತಿ ಜಿಲ್ಲೆಯಲ್ಲೂ ಉಗ್ರರ ಜಾಲ ರೂಪಿಸಲು ಬಳ್ಳಾರಿಯಲ್ಲಿ ಸಂಚು – NIA ಚಾರ್ಜ್‌ಶೀಟ್‌ನಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ!

    ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಗಳಲ್ಲೂ ಐಸಿಸ್‌ ಉಗ್ರರ (ISIS Terrorists) ಜಾಲ ರೂಪಿಸಬೇಕು ಎಂದು ಸಂಚು ರೂಪಿಸಿದ್ದ 7 ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಜಾರ್ಜ್‌ಶೀಟ್‌ನಲ್ಲಿ ಹಲವು ಸ್ಫೋಟಕ ರಹಸ್ಯಗಳನ್ನು ಎನ್‌ಐಎ (NIA) ಉಲ್ಲೇಖಿಸಿದ್ದು, ಇಡೀ ರಾಜ್ಯ, ದೇಶದ ಜನರನ್ನು ಬೆಚ್ಚಿಬೀಳುವಂತೆ ಮಾಡಿವೆ.

    ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಏನಿದೆ?
    ಕರ್ನಾಟಕದಲ್ಲಿ ಬಂಧಿನಕ್ಕೊಳಗಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ (NIA Charge Sheet) ಸಲ್ಲಿಸಿದೆ.

    ಉಗ್ರರ ಜಾಲವು ದೇಶದ ಪ್ರತಿ ಜಿಲ್ಲೆಯಲ್ಲೂ ಯುವಕರನ್ನು ಐಸಿಎಸ್‌ ಉಗ್ರ ಸಂಘಟನೆಗೆ ನೇಮಿಸುವ ಉದ್ದೇಶ ಹೊಂದಿತ್ತು. ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, 2025ರ ವೇಳೆ ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಅವರ ಉದ್ದೇಶವಾಗಿತ್ತು. ಅದಕ್ಕಾಗಿಯೇ ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಭಾರೀ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಚಾರ್ಜ್‌ಶೀಟ್‌ ಅನ್ನು ಎನ್‌ಐಎ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ!

    ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ 7 ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜೊತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ರೂಪಿಸಿದ್ದರು.

    ಅಷ್ಟೇ ಅಲ್ಲ ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು. 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‍ನಲ್ಲಿ ಅಗ್ನಿ ದುರಂತ – ಪುರಸಭೆ ಆಯುಕ್ತರು ನಿದ್ರಿಸುತ್ತಿದ್ದಾರೆ: ಹೈಕೋರ್ಟ್ ಚಾಟಿ

    ಅಷ್ಟೇ ಅಲ್ಲದೇ ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

  • ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

    ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ  (Jammu and Kashmir) ರಿಯಾಸಿಯಲ್ಲಿ (Reasi) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‍ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.

    ಉಗ್ರ ಸಂಘಟನೆ ದಾಳಿ ಬಗ್ಗೆ ಸಂದೇಶವನ್ನು ರವಾನಿಸಿದೆ. ಸಂದೇಶದಲ್ಲಿ ಇದು ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

    ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ. ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಂದಕಕ್ಕೆ ಬಿದ್ದ ನಂತರವೂ ಬಸ್ಸಿನ ಬಳಿ ಬಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು : ಭಯಾನಕ ಅನುಭವ ಬಿಚ್ಚಿಟ್ಟ ಯತ್ರಾರ್ಥಿ

    ಭಾನುವಾರ (ಜೂ.9) ಮಾತಾ ವೈಷ್ಣೋ ದೇವಿ (Vaishno Devi Temple) ದೇಗುಲದ ಕತ್ರಾ ಮಾರ್ಗವಾಗಿ ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್‍ನಲ್ಲಿ ಹಿಂತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಬಸ್ಸಿನ ಚಾಲಕನಿಗೆ ಬುಲೆಟ್ ತಗುಲಿ ವಾಹನ ಕಮರಿಗೆ ಉರುಳಿತ್ತು. ಘಟನೆಯಲ್ಲಿ ಬಸ್ ಕಂಡಕ್ಟರ್ ಮತ್ತು ಚಾಲಕ ಸೇರಿ 9 ಮಂದಿ ಸಾವನ್ನಪ್ಪಿದ್ದರು.

    ಭಾರತವು 2023 ರಲ್ಲಿ ದಿ ರೆಸಿಸ್ಟೆನ್ಸ್ ಫ್ರಂಟ್‍ನ್ನು ಭಯೋತ್ಪಾದಕ ಸಂಘಟನೆ ಎಂದು ಗೊತ್ತುಪಡಿಸಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ ಸಂಘಟನೆ ಸ್ಥಾಪನೆಯಾಗಿತ್ತು. ಇದಾದ ಬಳಿಕ ಹಲವಾರು ಭಯೋತ್ಪಾಕ ಕೃತ್ಯಗಳಲ್ಲಿ ಸಂಘಟನೆ ಭಾಗಿಯಾಗಿತ್ತು. ಇದನ್ನೂ ಓದಿ: ಮಣಿಪುರದಲ್ಲಿ ಸಿಎಂ ಬೆಂಗಾವಲು ಪಡೆ ಮೇಲೆ ಬಂಡುಕೋರರಿಂದ ಗುಂಡಿನ ದಾಳಿ!

  • ಮಣಿಪುರದಲ್ಲಿ ಗುಂಡಿಕ್ಕಿ ನಾಲ್ವರ ಹತ್ಯೆಗೈದಿದ್ದ ಪ್ರಕರಣ – ಆರೋಪಿಯನ್ನು ಬಂಧಿಸಿದ ಎನ್‍ಐಎ

    ಮಣಿಪುರದಲ್ಲಿ ಗುಂಡಿಕ್ಕಿ ನಾಲ್ವರ ಹತ್ಯೆಗೈದಿದ್ದ ಪ್ರಕರಣ – ಆರೋಪಿಯನ್ನು ಬಂಧಿಸಿದ ಎನ್‍ಐಎ

    ಇಂಫಾಲ್: ಮಣಿಪುರದಲ್ಲಿ (Manipur) ಈ ವರ್ಷ ಜನವರಿಯಲ್ಲಿ ನಾಲ್ವರು ನಾಗರಿಕರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (NIA) ಅಧಿಕಾರಿಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಲುನ್ಮಿನ್ಸೆ ಕಿಪ್ಜೆನ್ ಎಂದು ಗುರುತಿಸಲಾಗಿದೆ. ಜ.18 ರಂದು ಬಿಷ್ಣುಪುರದ ನಿಂಗ್‍ತೌಖೋಂಗ್ ಖಾ ಖುನೌ ಎಂಬಲ್ಲಿ ನೀರು ಸಂಸ್ಕರಣಾ ಘಟಕದ ಬಳಿ ಶಸ್ತ್ರ ಸಜ್ಜಿತ ಗುಂಪು ನಾಲ್ವರು ನಾಗರಿಕರನ್ನು ಬರ್ಬರವಾಗಿ ಹತ್ಯೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗುವಾಹಟಿಯ ಲೋಹ್ರಾ ಸೆಂಟ್ರಲ್ ಜೈಲಿನಿಂದ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಕೋರರು ಅತ್ಯಾಧುನಿಕ ಬಂದೂಕುಗಳಿಂದ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದು ನಾಗರಿಕರ ಸಾವಿಗೆ ಕಾರಣವಾಗಿತ್ತು. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಗಲಭೆ ಮತ್ತು ಹಿಂಸಾಚಾರದ ಭಾಗವಾಗಿದ್ದ ದಾಳಿಯಲ್ಲಿ ಲುನ್ಮಿನ್ಸೆ ಕಿಪ್ಜೆನ್ ಸಕ್ರಿಯವಾಗಿ ಪಾಲ್ಗೊಂಡಿದ್ದ. ಈತ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೊದಲ ಆರೋಪಿಯಾಗಿದ್ದಾನೆ ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ.

  • ಮಣಿಪುರದ ಹಿಂಸಾಚಾರ ಪರಿಸ್ಥಿತಿ ಬಳಸಿಕೊಂಡು ಭಯೋತ್ಪಾದನೆ ಹರಡಲು ಯತ್ನ – ಆರೋಪಿ ಅರೆಸ್ಟ್

    ಮಣಿಪುರದ ಹಿಂಸಾಚಾರ ಪರಿಸ್ಥಿತಿ ಬಳಸಿಕೊಂಡು ಭಯೋತ್ಪಾದನೆ ಹರಡಲು ಯತ್ನ – ಆರೋಪಿ ಅರೆಸ್ಟ್

    ಇಂಫಾಲ್: ಮಣಿಪುರದ (Manipur) ಹಿಂಸಾಚಾರ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಭಯೋತ್ಪಾದನೆಯನ್ನು ಹರಡಲು ಯತ್ನಿಸಿದ ಆರೋಪದ ಮೇಲೆ ಎನ್‍ಐಎ (NIA) ಪ್ರಮುಖ ಆರೋಪಿಯನ್ನು ಇಂಫಾಲ್ ವಿಮಾನ ನಿಲ್ದಾಣದಲ್ಲಿ (Imphal Airport) ಬಂಧಿಸಿದೆ.

    ಬಂಧಿತ ಆರೋಪಿಯನ್ನು ಕುಕಿ ನ್ಯಾಷನಲ್ ಫ್ರಂಟ್-ಮಿಲಿಟರಿ ಕೌನ್ಸಿಲ್ (ಕೆಎನ್‍ಎಫ್-ಎಂಸಿ) ಸದಸ್ಯ ಥೋಂಗ್‍ಮಿಂಥಾಂಗ್ ಹಾಕಿಪ್ ಅಲಿಯಾಸ್ ರೋಜರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅಲ್ಲದೇ ಆತನ ವಿರುದ್ಧ ಕಳೆದ ವರ್ಷ ಜುಲೈ 19 ರಂದು ಎನ್‍ಐಎ ಸುಮೋಟೋ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ- ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು 

    ಮ್ಯಾನ್ಮಾರ್ (Myanmar) ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಝೋಮಿ ದಂಗೆಕೋರರನ್ನು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಮಾಡುವ ಸಂಚು ರೂಪಿಸಿದ್ದರು. ಈ ಪ್ರದೇಶದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಬಳಸಿಕೊಂಡು ಈ ಕೃತ್ಯ ಎಸಗಲು ಮುಂದಾಗಿದ್ದರು. ಅಲ್ಲದೇ ಬಂಧಿತ ಆರೋಪಿ ಹಿಂಸಾಚಾರದ ಸಮಯದಲ್ಲಿ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯವನ್ನು ಹುಟ್ಟುಹಾಕಲು ಆರೋಪಿ ಮ್ಯಾನ್ಮಾರ್‌ನ ಕುಕಿ ನ್ಯಾಷನಲ್ ಫ್ರಂಟ್-ಬರ್ಮಾ (ಕೆಎನ್‍ಎಫ್-ಬಿ) ದಂಗೆಕೋರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಆರೋಪಿಗಳು ಕೆಎನ್‍ಎಫ್-ಬಿ ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‍ಐಎ ತನಿಖೆ ವೇಳೆ ತಿಳಿದು ಬಂದಿದೆ.

    ಆರೋಪಿ ಭದ್ರತಾ ಪಡೆಗಳ ವಿರುದ್ಧ ಹಲವಾರು ಸಶಸ್ತ್ರ ದಾಳಿಗಳಲ್ಲಿ ಭಾಗವಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ