Tag: NICE

  • ನನ್ನ ಜೀವನಲ್ಲಿ ಒಂದೇ ಒಂದು ದೊಡ್ಡ ತಪ್ಪು ಮಾಡಿದೆ: ಹೆಚ್‌ಡಿಡಿ

    ನನ್ನ ಜೀವನಲ್ಲಿ ಒಂದೇ ಒಂದು ದೊಡ್ಡ ತಪ್ಪು ಮಾಡಿದೆ: ಹೆಚ್‌ಡಿಡಿ

    ಬೆಂಗಳೂರು: ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಉತ್ತಮ ರಸ್ತೆ ಆಗುತ್ತದೆ ಎಂದು ಮಹಾತ್ವಕಾಂಕ್ಷೆಯಿಂದ ನೈಸ್‌ ರಸ್ತೆ (NICE Road) ಮಾಡಿದೆ. ಆದರೆ‌ ಮಹಾನುಭಾವರು ದೊಡ್ಡ ಪೆಟ್ಟು ಕೊಟ್ಟರು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಬೇಸರ ವ್ಯಕ್ತಪಡಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೈಸ್ ಯೋಜನೆಯಿಂದ ಬಡವರಿಗೆ ಅನ್ಯಾಯವಾಗಿದೆ. ನಮ್ಮ ಪಕ್ಷ ಇದರ ವಿರುದ್ದ ಧ್ವನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ವಿಧಾನಸಭೆಯಲ್ಲಿ ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಿ ವರದಿ ಕೊಟ್ಟಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ತಲುಪಬಹುದು ಎಂಬ ಕಾರಣಕ್ಕೆ ಯೋಜನೆಗೆ ಅನುಮತಿ ನೀಡಿದೆ. ರಾಜ್ಯ ಸರ್ಕಾರ ಕೂಡಲೇ ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.  ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಂತ್ಯವಾಗುತ್ತೆ: ಹೆಚ್‌ಡಿಡಿ ಭವಿಷ್ಯ

    ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಸದನ ಸಮಿತಿ ವರದಿ ಕೊಟ್ಟಿದೆ. ಆದರೆ ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 19 ರಲ್ಲಿ ಸಿಎಂ ಅವರಿಗೆ ಪತ್ರ ಬರೆದು ನೈಸ್ ಈ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ಆದರೆ ಸಿಎಂ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದರು.

    ಒಟ್ಟು 13,404 ಎಕರೆ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. 13 ಸಾವಿರ ಎಕರೆ ಬೆಲೆ 707,77,766,040 ಕೋಟಿ ರೂ. ಎಂದು ಸದನ ಸಮಿತಿ ವರದಿ ಕೊಟ್ಟಿದೆ. ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಈಗ ಈ ಭೂಮಿಯ ಬೆಲೆ ಇನ್ನೂ ಜಾಸ್ತಿ ಆಗುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ‘ಗಟ್ಟಿಮೇಳ’ ಧಾರಾವಾಹಿ ಅಂತ್ಯ: ಕಣ್ಣೀರಿಟ್ಟ ಫ್ಯಾನ್ಸ್

     

    ಬಡವರ ಪರ ಮಾತನಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಎಷ್ಟು ವರ್ಷ ಆಳಿದರು ಕಪ್ಪುಚುಕ್ಕೆಯಿಂದ ಹೊರಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಕ್ರಮ ತೆಗೆದುಕೊಳ್ಳದೇ ಹೋದರೆ ಕಪ್ಪುಚುಕ್ಕೆಯಿಂದ ಹೊರ ಬರುವುದಿಲ್ಲ. ಹೀಗಾಗಿ ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಆಗ್ರಹ ಮಾಡಿದರು.

    ಸೋನಿಯಾ ಗಾಂಧಿ ಅವರ ಬಳಿಯು ಇದು ಚರ್ಚೆ ಆಗಿದೆ. ಧರ್ಮಸಿಂಗ್ ಕಾಲದಲ್ಲಿ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದರು.

  • ಅಶೋಕ್ ಖೇಣಿಯನ್ನ ಜನರು ಮನೆಯಲ್ಲಿ ಕೂರಿಸಿದ್ದು ಯಾಕೆ: ಎಚ್‍ಡಿಕೆ ಮಾತಲ್ಲಿ ಕೇಳಿ

    ಅಶೋಕ್ ಖೇಣಿಯನ್ನ ಜನರು ಮನೆಯಲ್ಲಿ ಕೂರಿಸಿದ್ದು ಯಾಕೆ: ಎಚ್‍ಡಿಕೆ ಮಾತಲ್ಲಿ ಕೇಳಿ

    ಬೆಂಗಳೂರು: ಮಾಜಿ ಶಾಸಕ ಅಶೋಕ್ ಖೇಣಿ ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಬೆಂಬಲ ನೀಡಬಾರದು ಎಂದು ಜನಗಳೇ ಅವರನ್ನೇ ಮನೆಯಲ್ಲಿ ಕೂರಿಸಿದ್ದಾರೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಸಿಎಂ ವಿರೋಧ ಪಕ್ಷದ ವಿರೋಧ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡುತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ತಮ್ಮ ಪ್ರತಿ ಸ್ಪರ್ಧಿಗಳ ವಿರುದ್ಧ ಮಾತನಾಡಿದ್ದಾರೆ. ಅಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೆಡಿಎಸ್ ವಿರುದ್ಧ ಮಾತನಾಡಿದರು. ರಾಜಕಾರಣದಲ್ಲಿ ಯಾರು ಶತ್ರುಗಳಲ್ಲಿ, ಮಿತ್ರರೂ ಅಲ್ಲ. ಬದಲಾದ ಪರಿಸ್ಥಿತಿ ಮತ್ತು ಸನ್ನಿವೇಶದಲ್ಲಿ ಇಂದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಎಂದು ತಿಳಿಸಿದರು.

    ಈ ಹಿಂದೆ ನೈಸ್ ಕಂಪೆನಿಯ ಒಪ್ಪಂದವನ್ನು ರದ್ದುಗೊಳಿಸಲು ಸಂಪುಟ ಸಭೆಯನ್ನು ಕರೆದರೆ, ಬಿಜೆಪಿಯವರು 6 ಗಂಟೆಗಳ ಕಾಲ ಸಭೆಯಿಂದ ಹೊರ ನಡೆದಿದ್ದರು ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಸಚಿವ ಎಸ್.ಆರ್.ಬೊಮ್ಮಾಯಿ ಈಗ ಖೇಣಿ ನಿಮ್ಮ ಬಳಿಯಲ್ಲಿದ್ದಾರೆ. ಇವಾಗ ನೀವೇ ಮುಖ್ಯಮಂತ್ರಿಯಾಗಿದ್ದು, ನೈಸ್ ಪ್ರಸ್ತಾಪವನ್ನು ಸಂಪುಟದಲ್ಲಿಟ್ಟು ಚರ್ಚಿಸಿ. ಈಗಲೂ ನಮ್ಮ ಮುಂದೆ ಜಯಚಂದ್ರ ವರದಿ ಇದೆ. ಆದ್ರೆ ನೈಸ್ ಪ್ರಸ್ತಾಪವನ್ನು ಸಂಪುಟದಲ್ಲಿಡಲು ನಿಮ್ಮಿಂದ ಸಾಧ್ಯವಾಗಲ್ಲ. ಅಶೋಕ್ ಖೇಣಿಗೆ ಕಾಂಗ್ರೆಸ್‍ನಿಂದ ದೊಡ್ಡ ಬೆಂಬಲವಿದೆ ಎಂದು ಟೀಕಿಸಿದರು.

    ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಇನ್ನು ಕಾಲಾವಕಾಶವಿದ್ದು, ನೈಸ್ ಕಂಪೆನಿ ಪ್ರಸ್ತಾಪವನ್ನು ಸಂಪುಟದಲ್ಲಿ ಇಡುತ್ತೇವೆಯೋ ಇಲ್ಲವೋ ಎಂಬುವುದನ್ನು ಮುಂದಿನ ದಿನಗಳಲ್ಲಿ ತಿಳಿಯಲಿದೆ ಅಂತಾ ಉತ್ತರಿಸಿದರು.

  • ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‍ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ.

    ನೈಸ್ ಕಂಪೆನಿ ಜುಲೈ 1 ರಿಂದ ಶೇ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವುದರಿಂದ ಈ ಕಂಪೆನಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

    ಕ್ರಿಯಾ ಒಪ್ಪಂದ (ಫ್ರೇಮ್ ವರ್ಕ್ ಅಗ್ರಿಮೆಂಟ್) ಜಾರಿಗೊಳಿಸದೇ ಕರ್ತವ್ಯ ಲೋಪ ಎಸಗಿರುವ ಸಂಬಂಧ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ಇನ್ನೂ ಇತ್ಯರ್ಥ ಆಗಿಲ್ಲ. ಅಷ್ಟರಲ್ಲೇ ಟೋಲ್ ದರ ಹೆಚ್ಚಿಸಿರುವುದು ಅಕ್ರಮ. ಕೂಡಲೇ ಈ ತೀರ್ಮಾನ ಹಿಂದಕ್ಕೆ ಪಡೆಯಬೇಕು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ.