Tag: Nicholas Pooran

  • IPL 2023: ಜಯದ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಭಾರೀ ನಿರಾಸೆ – ಮಳೆಗೆ ಪಂದ್ಯ ರದ್ದು

    IPL 2023: ಜಯದ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಭಾರೀ ನಿರಾಸೆ – ಮಳೆಗೆ ಪಂದ್ಯ ರದ್ದು

    ಲಕ್ನೋ: ತವರಿನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡಕ್ಕೆ ಭಾರೀ ನಿರಾಸೆಯಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ.

    ಇಲ್ಲಿನ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದೆ ಅಲ್ಪ ಮೊತ್ತ ಗಳಿಸುವಷ್ಟಕ್ಕೆ ಸೀಮಿತವಾಯಿತು. ಇದನ್ನೂ ಓದಿ: ಲಕ್ನೋಗೆ ಡಬಲ್‌ ಶಾಕ್‌ – ಕೆ.ಎಲ್‌ ರಾಹುಲ್‌ IPL ಟೂರ್ನಿಯಿಂದಲೇ ಔಟ್‌?

    ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕುವ ನಿರೀಕ್ಷೆಯಲ್ಲಿತ್ತು. ಆದರೆ ಯುವ ಆಟಗಾರ ಆಯುಷ್ ಬದೋನಿ (Ayush Badoni) ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಕ್ಕಾಚಾರವನ್ನ ತಲೆಕೆಳಗಾಗಿಸಿದರು. ಕೊನೆಯ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬದೋನಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡ ಗೌರವಯುತ ಮೊತ್ತ ಗಳಿಸಲು ಕಾರಣವಾದರು. 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಲಕ್ನೋ 125 ರನ್‌ ಗಳಿಸಿತ್ತು. ಇನ್ನೂ 4 ಎಸೆತಗಳು ಬಾಕಿಯಿರುವಾಗಾಲೇ ಮಳೆ ಕಾಟ ಶುರುವಾಯಿತು. ಎಡಬಿಡದೇ ಮಳೆ ಸುರಿಯುತ್ತಿದ್ದರಿಂದ ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ರದ್ದಾಯಿತು.

    ಲಕ್ನೋ ಪರ ಆಯುಷ್‌ ಬದೋನಿ 33 ಎಸೆತಗಳಲ್ಲಿ ಸ್ಫೋಟಕ 59 ರನ್‌ (4 ಸಿಕ್ಸರ್‌, 2 ಬೌಂಡರಿ) ಸಿಡಿಸಿದರೆ, ನಿಧಾನಗತಿ ಬ್ಯಾಟಿಂಗ್‌ ಮಾಡಿದ ನಿಕೋಲಸ್‌ ಪೂರನ್‌ (Nicholas Pooran) 20 ರನ್‌ ಕೊಡುಗೆ ನೀಡಿದರು. ಇದನ್ನೂ ಓದಿ: ಪಾಂಡ್ಯ ಹೋರಾಟ ವ್ಯರ್ಥ – ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ರನ್‌ ರೋಚಕ ಜಯ

    ಚೆನ್ನೈ ಸೂಪರ್ ಕಿಂಗ್ಸ್‌ ಪರ ಮೊಯಿನ್‌ ಅಲಿ, ಮಹೀಶ್‌ ತೀಕ್ಷಣ ಹಾಗೂ ಮಹೇಶ್‌ ಪತಿರಣ ತಲಾ ಎರಡು ವಿಕೆಟ್‌ ಕಿತ್ತರೆ, ರವೀಂದ್ರ ಜಡೇಜಾ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

    9 ಪಂದ್ಯಗಳಲ್ಲಿ ಇತ್ತಂಡಗಳು ತಲಾ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದವು. ಇಂದು ಚೆನ್ನೈ ಗೆದ್ದು ಪಾಯಿಂಟ್ಸ್‌ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ನಿರೀಕ್ಷೆಯಲ್ಲಿತ್ತು. ಆದರೆ ಮಳೆಯಿಂದಾಗಿ ಇತ್ತಂಡಗಳಿಯೂ ನಿರಾಸೆಯಾಗಿದೆ.

  • IPL 2023: ಲಕ್ನೋಗೆ 10 ರನ್‌ಗಳ ಸೂಪರ್‌ ಜಯ – ರಾಜಸ್ಥಾನ್‌ಗೆ ತವರಿನಲ್ಲಿ ಸೋಲು

    IPL 2023: ಲಕ್ನೋಗೆ 10 ರನ್‌ಗಳ ಸೂಪರ್‌ ಜಯ – ರಾಜಸ್ಥಾನ್‌ಗೆ ತವರಿನಲ್ಲಿ ಸೋಲು

    ಜೈಪುರ: ಕೇಲ್‌ ಮೇಯರ್ಸ್‌ (Kyle Mayers) ಜವಾಬ್ದಾರಿಯುತ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 10 ರನ್‌ಗಳ ಜಯ ಸಾಧಿಸಿದೆ. ಆದರೆ ಸತತ ಜಯದ ಹಾದಿಯಲ್ಲಿ ಮುನ್ನುಗ್ಗುತ್ತಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡ ತವರಿನಲ್ಲಿ ಸೋತು ಮುಖಭಂಗ ಅನುಭವಿಸಿದೆ.

    ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 154 ರನ್‌ ಗಳಿಸಿತು. 155 ರನ್‌ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್‌ ರಾಯಲ್ಸ್‌ ನಿಗದಿತ 20 ಓವರ್‌ಗಳಲ್ಲಿ 144 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್‌ ರಾಯಲ್ಸ್‌ ತಂಡ ನಿಧಾನಗತಿಯ ಬ್ಯಾಟಿಂಗ್‌ ಹೊರತಾಗಿಯೂ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ (Jos Buttler) ಜೋಡಿ ಮೊದಲ ವಿಕೆಟ್‌ ಪತನಕ್ಕೆ 11.3 ಓವರ್‌ಗಳಲ್ಲಿ 87 ರನ್‌ ಗಳಿಸಿತ್ತು. ಈ ವೇಳೆ 35 ಎಸೆತಗಳಲ್ಲಿ 44 ರನ್‌ (4 ಬೌಂಡರಿ, 2 ಸಿಕ್ಸರ್‌) ಗಳಿಸಿದ್ದ ಜೈಸ್ವಾಲ್‌ ಔಟಾಗುತ್ತಿದ್ದಂತೆ, ಜೋಸ್‌ ಬಟ್ಲರ್‌ ಸಹ 40 ರನ್‌ (41 ಎಸೆತ, 4 ಬೌಂಡರಿ, 1 ಸಿಕ್ಸರ್‌) ಗಳಿಸಿ ವಿಕೆಟ್‌ ಒಪ್ಪಿಸಿದರು.

    ಈ ಬೆನ್ನಲ್ಲೇ ನಾಯಕ ಸಂಜು ಸ್ಯಾಮ್ಸನ್‌ (Sanju Samson) ಬೇಡದ ರನ್‌ ಕದಿಯಲು ಹೋಗಿ ರನೌಟ್‌ಗೆ ತುತ್ತಾದರೆ, ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಶಿಮ್ರಾನ್‌ ಹೆಟ್ಮೇಯರ್‌ ಕೇವಲ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು ಇದು ತಂಡಕ್ಕೆ ಭಾರೀ ಆಘಾತ ನೀಡಿತು. ಇನ್ನೂ ಕೊನೆಯ ಓವರ್‌ವರೆಗೂ ಹೋರಾಡಿ 21 ಎಸೆತಗಳಲ್ಲಿ 26 ರನ್‌ ಗಳಿಸಿದ್ದ ದೇವದತ್‌ ಪಡಿಕಲ್‌ ಕ್ಯಾಚ್‌ ನೀಡಿ ನಿರಾಸೆ ಮೂಡಿಸಿದರು. ಇದರಿಂದ ರಾಜಸ್ಥಾನ್‌ ತಂಡ ಸಂಪೂರ್ಣವಾಗಿ ಗೆಲುವಿನ ಭರವಸೆ ಕೈಚೆಲ್ಲಿತು. ಕೊನೆಯಲ್ಲಿ ರಿಯಾನ್‌ ಪರಾಗ್‌ 15 ರನ್‌, ಅಶ್ವಿನ್‌ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಲಕ್ನೋ ಸೂಪರ್‌ ಜೈಂಟ್ಸ್‌ ಪರ ಅವೇಶ್‌ ಖಾನ್‌ ಪ್ರಮುಖ 3 ವಿಕೆಟ್‌ಗಳನ್ನು ಕಿತ್ತರೆ, ಮಾರ್ಕಸ್‌ ಸ್ಟೋಯ್ನಿಸ್‌ 2 ವಿಕೆಟ್‌ ಪಡೆದು ಮಿಂಚಿದರು.

    ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ ಲಕ್ನೋ ಸೂಪರ್ ಜೈಂಟ್ಸ್ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಬೃಹತ್‌ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ಅಂದುಕೊಂಡ ವೇಗದಲ್ಲಿ ರನ್‌ಗಳಿಸಲು ಅವಕಾಶ ನೀಡದ ಕಾರಣ ಲಕ್ನೋ ತಂಡ ಈ ಪಂದ್ಯದಲ್ಲಿ ಸಾಧಾರಣ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು.

    ಮೊದಲ ವಿಕೆಟ್‌ ಪತನಕ್ಕೆ 82 ರನ್‌ಗಳ ಆರಂಭಿಕ ಜೊತೆಯಾಟವನ್ನು ಪಡೆದುಕೊಂಡಿತ್ತಾದರೂ ರನ್ ವೇಗ ನಿಧಾನವಾಗಿತ್ತು. ನಾಯಕ ಕೆ.ಎಲ್.ರಾಹುಲ್ ಪವರ್‌ ಪ್ಲೇನಲ್ಲೂ ಅಬ್ಬರಿಸುವಲ್ಲಿ ವಿಫಲವಾದರು. ಆರಂಭಿಕರಾಗಿ ಕಣಕ್ಕಿಳಿದ ಕೇಲ್‌ ಮೇಯರ್ಸ್‌ ಹಾಗೂ ಕೆ.ಎಲ್‌ ರಾಹುಲಗ್‌ 10.4 ಓವರ್‌ಗಳಲ್ಲಿ 82 ರನ್‌ ಗಳಿಸಿತ್ತು.121.87 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೆ.ಎಲ್‌ ರಾಹುಲ್‌ 32 ಎಸೆತಗಳಲ್ಲಿ ಕೇವಲ 39 ರನ್‌ ಗಳಿಸಿದರು. ನಿಧಾನಗತಿಯ ಬ್ಯಾಟಿಂಗ್‌ ಪ್ರದರ್ಶಿಸಿದ ಕೇಲ್‌ ಮೇಯರ್ಸ್‌ ಕೂಡ 42 ಎಸೆತಗಳಲ್ಲಿ 51 ರನ್‌ (3 ಸಿಕ್ಸರ್‌, 4 ಬೌಂಡರಿ) ಔಟಾದರು.

    ಉಳಿದಂತೆ ಆಯುಷ್ ಬದೋನಿ ಹಾಗೂ ದೀಪಕ್ ಹೂಡಾ ಕಳಪೆ ಪ್ರದರ್ಶನ ನೀಡಿದರು. ಇನ್ನು ಮಾರ್ಕಸ್ ಸ್ಟೋಯ್ನಿಸ್ 16 ಎಸೆತದಲ್ಲಿ 21 ರನ್ ಬಾರಿಸಿದರೆ ನಿಕೋಲಸ್ ಪೂರನ್ 20 ಎಸೆತಗಳಲ್ಲಿ 28 ರನ್ ಬಾರಿಸಿದರು. ಅಂತಿಮವಾಗಿ ಲಕ್ನೋ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್‌ ಗಳಿಸಿತ್ತು.

    ರಾಜಸ್ಥಾನ್‌ ಪರ ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೋಲ್ಟ್‌, ಸಂದೀಪ್‌ ಶರ್ಮಾ, ಜೇಸನ್‌ ಹೋಲ್ಡರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • IPL 2023: ಸೈಲೆಂಟಾಗಿರ್ಬೇಕ್‌ ಅಷ್ಟೇ – RCB ಫ್ಯಾನ್ಸ್‌ಗೆ ಗಂಭೀರ್‌ ವಾರ್ನಿಂಗ್‌

    IPL 2023: ಸೈಲೆಂಟಾಗಿರ್ಬೇಕ್‌ ಅಷ್ಟೇ – RCB ಫ್ಯಾನ್ಸ್‌ಗೆ ಗಂಭೀರ್‌ ವಾರ್ನಿಂಗ್‌

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ರೋಚಕ ಜಯ ಸಾಧಿಸಿತು.

    ಈ ಪಂದ್ಯದಲ್ಲಿ 240 ಎಸೆತಗಳಲ್ಲಿ ಬರೋಬ್ಬರಿ 425 ರನ್‌ ಸಿಡಿಯಿತು. ಸಿಕ್ಸರ್‌ ಬೌಂಡರಿಗಳ ಆಟದಲ್ಲಿ ಒಟ್ಟು 27 ಸಿಕ್ಸರ್‌, 29 ಬೌಂಡರಿಗಳು ದಾಖಲಾಯಿತು. ಆರ್‌ಸಿಬಿ ಪರ 15 ಸಿಕ್ಸರ್‌, 12 ಬೌಂಡರಿ ಸಿಡಿದರೆ, ಲಕ್ನೋ ಸೂಪರ್‌ ಜೈಂಟ್ಸ್‌ ಪರ 12 ಸಿಕ್ಸರ್‌, 17 ಬೌಂಡರಿ ಸಿಡಿಯಿತು. ಇದನ್ನೂ ಓದಿ: IPL 2023: ಲಕ್ನೋಗೆ ಸೂಪರ್‌ ಜಯ – KGF ವೀರಾವೇಷದ ಆಟ ವ್ಯರ್ಥ, RCBಗೆ ವಿರೋಚಿತ ಸೋಲು

    ಕೊನೆಯ ಓವರ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ 5 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ಜಯದೇವ್‌ ಉನಾದ್ಕಟ್‌ 1 ರನ್‌ ತೆಗೆದುಕೊಂಡರು. 2ನೇ ಎಸೆತದಲ್ಲಿ ಮಾರ್ಕ್‌ವುಡ್‌, ಹರ್ಷಲ್‌ ಪಟೇಲ್‌ ದಾಳಿಗೆ ಕ್ಲೀನ್‌ ಬೌಲ್ಡ್‌ ಆದರು. ಬಳಿಕ ಕ್ರೀಸ್‌ಗೆ ಬಂದ ರವಿ ಬಿಷ್ಣೋಯಿ 3ನೇ ಎಸೆತದಲ್ಲಿ 2 ರನ್‌, 4ನೇ ಎಸೆತದಲ್ಲಿ 1 ರನ್‌ ಕದ್ದರು, ಇನ್ನೆರಡು ಎಸೆತಗಳಿಗೆ 1 ರನ್‌ ಬೇಕಿದ್ದಾಗಲೇ 5ನೇ ಎಸೆತದಲ್ಲಿ ಜಯದೇವ್‌ ಉನಾದ್ಕಟ್‌ ಕ್ಯಾಚ್‌ ನೀಡಿ ವಿಕೆಟ್‌ ಒಪ್ಪಿಸಿದರು. ಇನ್ನೂಂದು 1 ಎಸೆತಕ್ಕೆ 1 ರನ್‌ ಬೇಕಿದ್ದಾಗ ಅವೇಶ್‌ಖಾನ್‌ ಕೊನೆಯ ಎಸೆತ ಎದುರಿಸುವಲ್ಲಿ ವಿಫಲರಾದರು. ಆದರೆ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ ನೇರವಾಗಿ ಬಾಲ್‌ ಕ್ಯಾಚ್‌ ಮಾಡದೇ ಕೈಚೆಲ್ಲಿದರು. ಇದೇ ಚಾನ್ಸ್‌ ಬಳಸಿಕೊಂಡ ಲಕ್ನೋ ಆಟಗಾರರು 1 ರನ್‌ ಬೈಸ್‌ ಕದ್ದು ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು.

    ಪಂದ್ಯ ಗೆಲುವು ಸಾಧಿಸಿದ ನಂತರ ಮೈದಾನಕ್ಕೆ ಬಂದ ಗೌತಮ್‌ ಗಂಭೀರ್‌ (Gautam Gambhir) ಆರ್‌ಸಿಬಿ ಆಟಗಾರರಿಗೆ ಶೇಖ್‌ ಹ್ಯಾಂಡ್‌ ಮಾಡುತ್ತಿದ್ದರು. ಲಕ್ನೋ ಗೆಲುವು ಸಾಧಿಸಿದ ನಂತರವೂ ʻಆರ್‌ಸಿಬಿ, ಆರ್‌ಸಿಬಿʼ ಎಂದು ಕೂಗುತ್ತಿದ್ದ ಅಭಿಮಾನಿಗಳ ಕಡೆ ತಿರುಗಿದ ಗಂಭೀರ್‌ ತಮ್ಮ ಬಾಯಿಮೇಲೆ ಬೆರಳಿಟ್ಟು ʻಉಶ್‌, ಸೈಲೆಂಟಾಗಿರಬೇಕುʼ ಎನ್ನುವಂತೆ ರಿಯಾಕ್ಷನ್‌ ಕೊಟ್ಟರು. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಆರ್‌ಸಿಬಿ ಫ್ಯಾನ್ಸ್‌ಗಳು ಗಂಭೀರ್‌ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿಗಳಿಂದಲೇ 50 ರನ್‌ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್‌

    ಸೋಮವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಕಲೆಹಾಕಿತು. 213 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ರೋಚಕ ಜಯ ಸಾಧಿಸಿತು.

  • ಸಿಕ್ಸರ್‌, ಬೌಂಡರಿಗಳಿಂದಲೇ 50 ರನ್‌ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್‌

    ಸಿಕ್ಸರ್‌, ಬೌಂಡರಿಗಳಿಂದಲೇ 50 ರನ್‌ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್‌

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿ ಲಕ್ನೋ ಸೂಪರ್‌ ಜೈಂಟ್ಸ್‌ (LSG)1 ರನ್‌ಗಳ ರೋಚಕ ಗೆಲುವಿಗೆ ಕಾರಣರಾದ ನಿಕೂಲಸ್‌ ಪೂರನ್‌ (Nicholas Pooran) ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ಮತ್ತು ಮಗುವಿಗೆ ಅರ್ಪಿಸಿದ್ದಾರೆ.

    ಪಂದ್ಯ ಮುಗಿದ ಬಳಿಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪೂರನ್‌, ಸ್ಟೊಯ್ನಿಸ್‌ ಮತ್ತು ಕೆಎಲ್ ರಾಹುಲ್‌ (KL Rahul) ಉತ್ತಮ ಜೊತೆಯಾಟ ನೀಡಿದರು. ಕೊನೆಯ 4 ಓವರ್‌ಗಳಲ್ಲಿ 50 ರನ್‌ ಚೇಸ್‌ ಮಾಡಬಹುದಿತ್ತು. ಆದರೆ ನಾನು ಆರಂಭದಿಂದಲೂ ಹೊಡೆಯಲು ಯತ್ನಿಸಿದೆ. ಎರಡನೇ ಎಸೆತದಲ್ಲಿ ನಾನು ಸಿಕ್ಸ್‌ (Six) ಹೊಡೆದೆ. ಕೊನೆಯವರೆಗೆ ಇದ್ದು ತಂಡವನ್ನು ಗೆಲ್ಲಿಸಬೇಕು ಎಂದು ಪ್ರಯತ್ನಿಸಿದ್ದೆ. ಆದರೆ ಇದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

    ಐಪಿಎಲ್‌ ದಾಖಲೆ:
    ಬೆಂಗಳೂರು (Bengaluru) ವಿರುದ್ಧದ ಪಂದ್ಯದಲ್ಲಿ ಪೂರನ್‌ 15 ಎಸೆತಗಳಲ್ಲಿ 50 ರನ್‌ ಹೊಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ವರ್ಷದ ಐಪಿಎಲ್‌ ಆವೃತ್ತಿಯಲ್ಲಿ ದಾಖಲಾದ ವೇಗದ ಅರ್ಧಶತಕ ಎಂಬ ಹೆಗ್ಗಳಿಕೆಗೆ ಪೂರನ್‌ ಪಾತ್ರರಾಗಿದ್ದಾರೆ. ಒಟ್ಟಾರೆ ಐಪಿಎಲ್‌ನಲ್ಲಿ ಎರಡನೇ ವೇಗದ ಅರ್ಧಶತಕ ಹೊಡೆದ ಬ್ಯಾಟ್ಸ್‌ಮನ್‌ಗಳ ಸಾಲಿಗೆ ಪೂರನ್‌ ಈಗ ಸೇರ್ಪಡೆಯಾಗಿದ್ದಾರೆ.

    ಈ ಹಿಂದೆ ಕೆಎಲ್‌ ರಾಹುಲ್‌ ಮತ್ತು ಪ್ಯಾಟ್‌ ಕಮ್ಮಿನ್ಸ್‌ 14 ಎಸೆತಗಳಲ್ಲಿ 50 ರನ್‌ ಹೊಡೆದಿದ್ದರು. ಯೂಸೂಫ್‌ ಪಠಾಣ್‌, ಸುನಿಲ್‌ ನರೈನ್‌ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

    ಆರಂಭದಿಂದಲೇ ಸ್ಫೋಟಕ ಆಟ:
    213 ರನ್‌ಗಳ ಗುರಿಯನ್ನು ಪಡೆದ ಲಕ್ನೋ 23 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತ್ತು. 10.4 ಓವರ್‌ಗಳಲ್ಲಿ 99 ರನ್‌ ಆದಾಗ ಸ್ಟೊಯ್ನಿಸ್‌ ಔಟಾದಾಗ ಪಂದ್ಯ ಆರ್‌ಸಿಬಿ ಕಡೆ ವಾಲಿತ್ತು. ಬೆಂಗಳೂರು ಕಡೆ ವಾಲಿದ ಪಂದ್ಯವನ್ನು ಬ್ಯಾಟ್‌ ಮೂಲಕ ಲಕ್ನೋ ಕಡೆಗೆ ಪೂರನ್‌ ವಾಲಿಸಿದರು. ಎರಡನೇ ಎಸೆತದಲ್ಲಿ ಸಿಕ್ಸ್‌ ಹೊಡೆದು ಅಬ್ಬರಿಸಿದ್ದ ಪೂರನ್‌ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಅಂತಿಮವಾಗಿ 62 ರನ್‌ (19 ಎಸೆತ, 4 ಬೌಂಡರಿ, 7 ಸಿಕ್ಸ್‌) ಹೊಡೆದು ಔಟಾದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ 115 ಮೀಟರ್‌ ಸಿಕ್ಸ್‌ – ಡುಪ್ಲೆಸಿಸ್‌ ಈಗ ಸಿಕ್ಸರ್‌ ವೀರ ಅಂದ್ರು ಫ್ಯಾನ್ಸ್‌

    19 ಎಸೆತಗಳ ಪೈಕಿ 3 ಎಸೆತಗಳಲ್ಲಿ (0,6,0,0,4,6,6,1,6,1,4,6,4,1,6,4,1,6,W) ಮಾತ್ರ ಪೂರನ್‌ ರನ್‌ ಹೊಡೆದಿರಲಿಲ್ಲ. ಸಿಕ್ಸ್‌ ಮತ್ತು ಬೌಂಡರಿ ಮೂಲಕವೇ ಪೂರನ್‌ 58 ರನ್‌ ಚಚ್ಚಿದ್ದರು.

    ಪೂರನ್‌ ಮತ್ತು ಆಯುಷ್ ಬದೋನಿ 6ನೇ ವಿಕೆಟಿಗೆ ಕೇವಲ 35 ಎಸೆತಗಳಲ್ಲಿ 84 ರನ್‌ ಬಾರಿಸಿದ್ದರು. ಈ ಪೈಕಿ ಪೂರನ್‌ 17 ಎಸೆತಗಳಲ್ಲಿ 56 ರನ್‌ ಹೊಡೆದಿದ್ದರು. ಪೂರನ್‌ ಕ್ರೀಸ್‌ಗೆ ಬರುವಾಗ ಲಕ್ನೋ ತಂಡದ ಗೆಲುವಿಗೆ 56 ಎಸೆತಗಳಲ್ಲಿ 114 ರನ್‌ ಬೇಕಿತ್ತು. ಪೂರನ್‌ ಔಟಾದಾಗ ಗೆಲುವಿಗೆ 18 ಎಸೆತಗಳಲ್ಲಿ 24 ರನ್‌ಗಳ ಅಗತ್ಯವಿತ್ತು.

    ಮೊದಲ 6 ಓವರ್‌ ಪವರ್‌ ಪ್ಲೇನಲ್ಲಿ ಲಕ್ನೋ ತಂಡ 3 ವಿಕೆಟ್‌ ಕಳೆದುಕೊಂಡು 38 ರನ್‌ ಗಳಿಸಿತ್ತು. ಆದರೆ 8ನೇ ಓವರ್‌ನಿಂದ 16ನೇ ಓವರ್‌ ಅಂದರೆ 9 ಓವರ್‌ಗಳಲ್ಲಿ ಬರೋಬ್ಬರಿ 125 ರನ್‌ ಚಚ್ಚಿದ ಪರಿಣಾಮ ಲಕ್ನೋ ತಂಡ 1 ರನ್‌ಗಳ ರೋಚಕ ಜಯ ಸಾಧಿಸಿದೆ.

  • IPL 2023: ಲಕ್ನೋಗೆ ಸೂಪರ್‌ ಜಯ – KGF ವೀರಾವೇಷದ ಆಟ ವ್ಯರ್ಥ, RCBಗೆ ವಿರೋಚಿತ ಸೋಲು

    IPL 2023: ಲಕ್ನೋಗೆ ಸೂಪರ್‌ ಜಯ – KGF ವೀರಾವೇಷದ ಆಟ ವ್ಯರ್ಥ, RCBಗೆ ವಿರೋಚಿತ ಸೋಲು

    ಬೆಂಗಳೂರು: ನಿಕೊಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 1 ವಿಕೆಟ್‌ ರೋಚಕ ಜಯ ಸಾಧಿಸಿತು.

    ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ KGF (ಕೊಹ್ಲಿ, ಗ್ಲೇನ್‌ ಮ್ಯಾಕ್ಸ್‌ವೆಲ್‌, ಫಾಫ್‌ ಡುಪ್ಲೆಸಿಸ್‌) ಭರ್ಜರಿ ಬ್ಯಾಟಿಂಗ್‌ ಹೊರತಾಗಿಯೂ, ನಿಕೋಲಸ್‌ ಪೂರನ್‌, ಮಾರ್ಕಸ್‌ ಸ್ಟೋಯ್ನಿಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಆರ್‌ಸಿಬಿ ತಂಡ ಮಕಾಡೆ ಮಲಗಿತು. ಈ ಮೂಲಕ ತವರಿನಲ್ಲೇ ಸೋತು ತೀವ್ರ ಮುಖಭಂಗ ಅನುಭವಿಸಿದ್ದು, ಐಪಿಎಲ್‌ನಲ್ಲಿ ಸತತ 2 ಪಂದ್ಯಗಳನ್ನು ಸೋತಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಕಲೆಹಾಕಿತು. 213 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ರೋಚಕ ಜಯ ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಲಕ್ನೋ ತಂಡ ಉತ್ತಮ ಶುಭಾರಂಭ ಪಡೆಯುವಲ್ಲಿ ವಿಫಲವಾಯಿತು. ಕೇಲ್‌ ಮೇಯರ್ಸ್‌, ಕೆ.ಎಲ್‌ ರಾಹುಲ್‌, ದೀಪಕ್‌ ಹೂಡಾ ಹಾಗೂ ಕೃನಾಲ್‌ ಪಾಂಡ್ಯ ಆರ್‌ಸಿಬಿ ಬೌಲರ್‌ಗಳ ದಾಳಿಗೆ ತುತ್ತಾಗಿ ಪೆವಿಲಿಯನ್‌ ಸೇರಿದರು. ನಾಯಕ ಕೆ.ಎಲ್‌. ರಾಹುಲ್‌ ಸತತವಾಗಿ ಬ್ಯಾಟಿಂಗ್‌ ವೈಫಲ್ಯ ಮುಂದುವರಿಸಿದರು. ಪರಿಣಾಮ ಲಕ್ನೋ ತಂಡ 6 ಓವರ್‌ಗಳಲ್ಲಿ 37 ರನ್‌ ಗಳಿಗೆ ಪ್ರಮುಖ 3 ವಿಕೆಟ್‌ಗಳನ್ನ ಕಳೆದುಕೊಂಡು, ಸೋಲಿನ ಭೀತಿ ಎದುರಿಸಿತ್ತು.

    ನಂತರ 5ನೇ ವಿಕೆಟ್‌ಗೆ ಕಣಕ್ಕಿಳಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ಮಾರ್ಕಸ್‌ ಸ್ಟೋಯ್ನಿಸ್‌ ಉತ್ತಮ ಚೇತರಿಕೆ ನೀಡಿದರು. ಕೇವಲ 30 ಎಸೆತಗಳಲ್ಲಿ ಭರ್ಜರಿ 65 ರನ್‌ (6 ಬೌಂಡರಿ, 5 ಸಿಕ್ಸರ್‌) ಸಿಡಿಸಿದರು. ಇದರಿಂದ ತಂಡ 10 ಓವರ್‌ಗಳ ಅಂತ್ಯಕ್ಕೆ 91 ರನ್‌ ಗಳಿಸಿತ್ತು. ನಂತರ ನಿಕೊಲಸ್‌ ಪೂರನ್‌ ಬ್ಯಾಟಿಂಗ್‌ ದಾಳಿಗೆ ಆರ್‌ಸಿಬಿ ತಂಡ ಸಂಪೂರ್ಣ ಮಂಕಾಯಿತು. ಆರ್‌ಸಿಬಿ ಬೌಲರ್‌ಗಳನ್ನು ಬಿಡದೇ ಬೆಂಡೆತ್ತಿದ್ದ ನಿಲಕೋಲಸ್‌ ಪೂರನ್‌ ಕೇವಲ 15 ಎಸೆತಗಳಲ್ಲಿ 50 ರನ್‌ ಚಚ್ಚಿ ಹೊಸ ದಾಖಲೆಯನ್ನೂ ಬರೆದರು. ನಿಕೋಲಸ್‌ ಪೂರನ್‌ 18 ಎಸೆತಗಳಲ್ಲಿ 62 ರನ್‌ (4 ಬೌಂಡರಿ, 7 ಸಿಕ್ಸರ್‌) ಗಳಿಸಿ ಆಡುತ್ತಿದ್ದಾಗಲೇ ಕ್ಯಾಚ್‌ ನೀಡಿ ಔಟಾದರು.

    ಇದರೊಂದಿಗೆ ಆಯುಷ್ ಬದೋನಿ 24 ಎಸೆತಗಳಲ್ಲಿ 30 ರನ್‌ ಗಳಿಸಿ ತಂಡಕ್ಕೆ ನೆರವಾದರು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಆರ್‌ಸಿಬಿ ತಂಡಕ್ಕೆ ಮತ್ತೆ ಜೀವ ಬಂದಂತಾಗಿತ್ತು. ಆದರೆ ಕೊನೆಯಲ್ಲಿ ಜಯದೇವ್‌ ಉನಾದ್ಕಟ್‌ 9 ರನ್‌ಗಳಿಸಿ ತಂಡವನ್ನು ಗೆಲುವಿನ ಹಂತಕ್ಕೆ ತಂದಿದ್ದರು, ಕೊನೆಯ 2 ಎಸೆತಗಳಲ್ಲಿ 1 ರನ್‌ ಬೇಕಿದ್ದಾಗಲೇ ಉನಾದ್ಕಟ್‌ ಕ್ಯಾಚ್‌ ನೀಡಿದ್ದರು. ಕೊನೆಯ ಓಂದು ಎಸೆತಕ್ಕೆ ಒಂದು ರನ್‌ ಬೇಕಿದ್ದಾಗ ಅವೇಶ್‌ ಖಾನ್‌ ಕೊನೆಯ ಎಸೆತ ಎದುರಿಸುವಲ್ಲಿ ವಿಫಲರಾದರು. ಆದರೆ ಬೈಸ್‌ ರನ್‌ ಕದಿಯುವ ಮೂಲಕ ಲಕ್ನೋ ತಂಡ ಜಯ ಸಾಧಿಸಿತು.

    ಆರ್‌ಸಿಬಿ ಪರ ಮ್ಯಾಜಿಕ್‌ ಬೌಲೀಂಗ್‌ ಮಾಡಿದ ಮೊಹಮ್ಮದ್‌ ಸಿರಾಜ್‌, ವೇಯ್ನ್ ಪಾರ್ನೆಲ್ ತಲಾ 3 ವಿಕೆಟ್‌ ಕಿತ್ತರೆ, ಕರಣ್‌ ಶರ್ಮಾ 1 ವಿಕೆಟ್‌, ಹರ್ಷಲ್‌ ಪಟೇಲ್‌ 2 ವಿಕೆಟ್‌ ಕಿತ್ತರು.

    ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡಕ್ಕೆ ರನ್‌ ಮಿಷಿನ್‌ ಕೊಹ್ಲಿ ಹಾಗೂ ಫಾಫ್‌ ಡುಪ್ಲೆಸಿಸ್‌ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಈ ಜೋಡಿ 11.3 ಓವರ್‌ಗಳಲ್ಲಿ 96 ರನ್‌ ಗಳಿಸಿತ್ತು. ಈ ವೇಳೆ ವಿರಾಟ್‌ 61 ರನ್‌ (44 ಎಸೆತ, 4 ಬೌಂಡರಿ, 4 ಸಿಕ್ಸರ್‌) ಗಳಿಸಿ ಔಟಾದರು.

    ನಂತರ ಜೊತೆಯಾದ ಮ್ಯಾಕ್ಸ್‌ವೆಲ್‌ ಹಾಗೂ ನಾಯಕ ಫಾಫ್‌ ಡುಪ್ಲೆಸಿಸ್‌ ಜೋಡಿ ಲಕ್ನೋ ಬೌಲರ್‌ಗಳನ್ನ ಬೆಂಡೆತ್ತಿದರು 50 ಎಸೆತಗಳಲ್ಲಿ ಈ ಜೋಡಿ ಬರೋಬ್ಬರಿ 115 ರನ್‌ ಸಿಡಿಸಿತ್ತು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಮಾಡಿದ ಫಾಫ್ ಡುಪ್ಲೆಸಿಸ್ ನಂತರ ಅಬ್ಬರಿಸಿದರು. ರವಿ ಬಿಷ್ಣೋಯಿ ಓವರ್ ನಲ್ಲಿ 115 ಮೀಟರ್ ಸಿಕ್ಸರ್ ಸಿಡಿಸಿ ಮಿಂಚಿದರು. 203 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಮ್ಯಾಕ್ಟ್‌ವೆಲ್‌ 29 ಎಸೆತಗಳಲ್ಲಿ ಸ್ಫೋಟಕ 59 ರನ್‌ (6 ಸಿಕ್ಸರ್‌, 3 ಬೌಂಡರಿ) ಚಚ್ಚಿ ಕೊನೆಯಲ್ಲಿ ಒಂದು ಎಸೆತ ಬಾಕಿಯಿರುವಂತೆ ಔಟಾದರು. 171 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಫಾಫ್‌ ಡುಪ್ಲೆಸಿಸ್‌ 46 ಎಸೆತಗಳಲ್ಲಿ 79 ರನ್‌ (5 ಸಿಕ್ಸರ್‌, 5 ಬೌಂಡರಿ) ಸಿಡಿಸಿ ಅಜೇಯರಾಗುಳಿದರು.

    ಆರಂಭಿಕರಾಗಿ ಕಣಕ್ಕಿಳಿದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ ಮತ್ತು ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸಿದರು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿದರು. ಪ್ರತಿ ಹೊಡೆತವನ್ನೂ ಎಂಜಾಯ್‌ ಮಾಡಿದ ಅಭಿಮಾನಿಗಳು ʻಕೊಹ್ಲಿ, ಕೊಹ್ಲಿʼ, ʻಆರ್‌ಸಿಬಿ, ಆರ್‌ಸಿಬಿʼ ಎಂದು ಆಟಗಾರರನ್ನ ಹುರಿದುಂಬಿಸಿದರು. ಪ್ರತಿ ಬೌಂಡರಿ, ಸಿಕ್ಸರ್‌ಗಳನ್ನು ಎಂಜಾಯ್‌ ಮಾಡುತ್ತಾ ಹುಚ್ಚೆದ್ದು ಕುಣಿದರು.

    ಲಕ್ನೋ ಸೂಪರ್‌ ಜೈಂಟ್ಸ್‌ ಪರ ಮಾರ್ಕ್‌ವುಡ್‌, ಅಮಿತ್‌ ಮಿಶ್ರಾ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ

    IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ

    ಲಕ್ನೋ: ಕೇಲ್‌ ಮೇಯರ್ಸ್‌ ಬೆಂಕಿ ಬ್ಯಾಟಿಂಗ್‌ ಹಾಗೂ ಶಿಸ್ತುಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capital) ವಿರುದ್ಧ 50 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಶುಭಾರಂಭ ಪಡೆದುಕೊಂಡಿದೆ.

    ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆ.ಎಲ್‌.ರಾಹುಲ್‌ (KL Rahul) ನಾಯಕತ್ವದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 193 ರನ್‌ ಸಿಡಿಸಿತ್ತು. 194 ರನ್‌ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 143 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಡೆಲ್ಲಿ ತಂಡ ಉತ್ತಮ ಶುಭಾರಂಭ ಪಡೆದುಕೊಂಡಿತ್ತು. ಮೊದಲ ವಿಕೆಟ್‌ ಪತನಕ್ಕೆ 4.3 ಓವರ್‌ಗಳಲ್ಲಿ 41 ರನ್‌ ಕಲೆಹಾಕಿತ್ತು. ಆ ನಂತರ ತಂಡದ ಒಂದೊಂದೇ ವಿಕೆಟ್‌ ಪತನಗೊಂಡಿತು.

    ಡೆಲ್ಲಿ ತಂಡದಲ್ಲಿ ನಾಯಕ ಡೇವಿಡ್‌ ವಾರ್ನರ್‌ (David Warner) ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲವಾದರು. ಡೇವಿಡ್‌ ವಾರ್ನರ್‌ 48 ಎಸೆತಗಳಲ್ಲಿ 56 ರನ್‌ (7 ಬೌಂಡರಿ), ರಿಲೀ ರೋಸೌವ್ 20 ಎಸೆತಗಳಲ್ಲಿ 30 ರನ್‌ ಗಳಿಸಿದ್ದು ಬಿಟ್ಟರೆ, ಯಾರೊಬ್ಬರು ಹೆಚ್ಚುವರಿ ರನ್‌ ಕೊಡುಗೆ ನೀಡಲಿಲ್ಲ. ಇದರಿಂದ ತಂಡ ಹೀನಾಯ ಸೋಲಿಗೆ ಗುರಿಯಾಯಿತು.

    ಪೃಥ್ವಿ ಶಾ 12 ರನ್‌, ಸರ್ಫರಾಜ್‌ ಖಾನ್‌ 4 ರನ್‌, ರೋಮ್ನನ್‌ ಪೋವೆಲ್‌ 1 ರನ್‌, ಅಮಮಾನ್‌ ಹಕೀಮ್‌ ಖಾನ್‌ 4 ರನ್‌ ಗಳಿಸಿದರೆ, ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಮಿಚೆಲ್‌ ಮಾರ್ಚ್‌ (Mitchell Marsh) ಶೂನ್ಯಕ್ಕೆ ಔಟಾಗಿ ಕೈಕೊಟ್ಟರು. ಕೊನೆಯಲ್ಲಿ ಅಕ್ಷರ್‌ ಪಟೇಲ್‌ 16 ರನ್‌, ಚೇತನ್‌ ಸಕಾರಿಯಾ 4 ರನ್‌ ಗಳಿಸಿ ಔಟಾದರು. ಕುಲ್‌ದೀಪ್‌ ಯಾದವ್‌ 6 ರನ್‌, ಮುಕೇಶ್‌ ಕುಮಾರ್‌ ಯಾವುದೇ ರನ್‌ ಗಳಿಸದೇ ಕ್ರೀಸ್‌ನಲ್ಲಿ ಉಳಿದರು.

    ಮಿಂಚಿದ ಮಾರ್ಕ್‌:
    16ನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲೇ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮಾರ್ಕ್‌ ವುಡ್‌ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಗೆಲುವಿಗೆ ಕಾರಣರಾದರು. ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಪರ ಮಾರ್ಕ್‌ ವುಡ್‌ (Mark Wood) 5 ವಿಕೆಟ್‌ ಕಿತ್ತರೆ, ಅವೇಶ್‌ ಖಾನ್‌, ರವಿ ಬಿಷ್ಣೋಯ್ ತಲಾ 2 ವಿಕೆಟ್‌ ಕಿತ್ತು ಮಿಂಚಿದರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಕೇಲ್ ಮೇಯರ್ಸ್ ಸ್ಫೋಟಕ ಪ್ರದರ್ಶನ ನೀಡಿ ಮಿಂಚಿದರು. ಆರಂಭದಲ್ಲಿ ಕೆ.ಎಲ್‌ ರಾಹುಲ್‌ ವಿಕೆಟ್‌ ಕಳೆದುಕೊಂಡು ಆಘಾತ ಎದುರಿಸಿತ್ತು. ಆ ನಂತರ ಕೇಲ್ ಮೇಯರ್ಸ್ ಅಬ್ಬರ ಶುರುವಾಯಿತು.

    ಆರಂಭಿಕ ಆಟಗಾರ ಕೇಲ್ ಮೇಯರ್ಸ್ (Kyle Mayers) ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳನ್ನು ಹಿಗ್ಗಾಮುಗ್ಗ ಬೆಂಡೆತ್ತಿದರು. 2ನೇ ವಿಕೆಟ್‌ಗೆ ದೀಪಕ್ ಹೂಡಾ ಅವರೊಂದಿಗೆ ಭರ್ಜರಿ 79 ರನ್‌ಗಳ ಜೊತೆಯಾಟ ಆಡಿದರು. ಈ ನಡುವೆ ದೀಪಕ್‌ ಹೂಡಾ 17 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಈ ಬೆನ್ನಲ್ಲೇ ಮೇಯರ್ಸ್‌ ಸಹ 38 ಎಸೆತಗಳಲ್ಲಿ 73 ರನ್ (7 ಸಿಕ್ಸರ್‌, 3 ಬೌಂಡರಿ) ಚಚ್ಚಿ ಔಟಾದರು.

    ಕೊನೆಯ ಹಂತದಲ್ಲಿ ನಿಕೋಲಸ್‌ ಪೂರನ್ ಕೂಡ ಅದ್ಭುತ ಪ್ರದರ್ಶನ ನೀಡಿದ್ದು 36 ರನ್‌ಗಳ ಕೊಡುಗೆ ನೀಡಿದರು. ಯುವ ಆಟಗಾರ ಆಯುಷ್ ಬದೋನಿ ಕೂಡ ಸ್ಫೋಟಕ ಬ್ಯಾಟಿಂಗ್‌ ನಡೆಸಿ, ತಂಡದ ಮೊತ್ತ 193ಕ್ಕೆ ತಂದು ನಿಲ್ಲಿಸಿದರು. ಆಯುಷ್ ಬದೋನಿ 2 ಭರ್ಜರಿ ಸಿಕ್ಸರ್‌, 1 ಬೌಂಡರಿಯೊಂದಿಗೆ 7 ಎಸೆತಗಳಲ್ಲಿ 18 ರನ್‌ಗಳಿಸಿದರು.

    ಡೆಲ್ಲಿ ಪರ ಖಲೀಲ್‌ ಅಹ್ಮದ್‌, ಚೇತನ್‌ ಸಕಾರಿಯಾ ತಲಾ 2 ವಿಕೆಟ್‌ ಪಡೆದರೆ, ಅಕ್ಷರ್‌ ಪಟೇಲ್‌, ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಟ್ರೆನಿನಾಡ್: ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಬ್ಬರ ಹಾಗೂ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಬಲದಿಂದ ಭಾರತ ತಂಡ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು 7 ವಿಕೆಟ್ ಭರ್ಜರಿ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಭಾರತಕ್ಕೆ 165 ರನ್‌ಗಳ ಗುರಿ ನೀಡಿತು. ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲೇ 3 ವಿಕೆಟ್ ನಷ್ಟಕ್ಕೆ 165 ರನ್‌ಗಳಿಸಿ ಮುನ್ನಡೆ ಸಾಧಿಸಿತು. ರೋಹಿತ್ ಶರ್ಮಾ ಬಳಗ ಈ ಗೆಲುವಿನ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.

    https://twitter.com/Abdullah__Neaz/status/1554541514750959616

    165 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಅವರು ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿ 11 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಈ ವೇಳೆ ಮತ್ತೊಬ್ಬ ಆರಂಭಿಕನಾಗಿದ್ದ ಸೂರ್ಯಕುಮಾರ್ ಯಾದವ್‌ಗೆ 2ನೇ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಸಾಥ್ ನೀಡಿದರು. ಸೂರ್ಯಕುಮಾರ್ ಮತ್ತು ಶ್ರೇಯಸ್ ಅಯ್ಯರ್ 86 ರನ್ ಜೊತೆಯಾಟ ಆಡಿದರು.

    ವಿಂಡೀಸ್ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಸೂರ್ಯಕುಮಾರ್ 8 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದರು. ಡೊಮಿನಿಕ್ ಡ್ರೇಕ್ಸ್ ಎಸೆತದಲ್ಲಿ ಔಟಾಗುವ ಮುನ್ನ ಅವರು ತಂಡವನ್ನು ಉತ್ತಮ ಸ್ಥಿತಿಗೆ ತಂದು ನಿಲ್ಲಿಸಿದ್ದರು. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ಆಸರೆಯಾದ ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ ಅಜೇಯ 33 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ದೀಪಕ್ ಹೂಡಾ ಅಜೇಯ 10 ಹಾಗೂ ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ಟೀಂ ಇಂಡಿಯಾ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಉರುಳಿಸಿದರು. ಹಾರ್ದಿಕ್ ಪಾಂಡ್ಯ, ಅರ್ಶ್ದೀಪ್ ಸಿಂಗ್ ತಲಾ ಒದೊಂದು ವಿಕೆಟ್ ಪಡೆದರು.

    ಮೇಯರ್ಸ್ ಆಸರೆ: ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ಕೈಲ್ ಮೇಯರ್ಸ್ ಅವರ ಅರ್ಧಶತಕದ ನೆರವಿನಿಂದ ಉತ್ತಮ ಮೊತ್ತ ಕಲೆಹಾಕಿತ್ತು. 50 ಎಸೆತಗಳನ್ನು ಎದುರಿಸಿದ ಮೇಯರ್ಸ್ 8 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 73 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಬ್ರೆಂಡನ್ ಕಿಂಗ್ 20 ರನ್, ನಾಯಕ ನಿಕೊಲಸ್ ಪೂರನ್ 22 ರನ್ ಸೇರಿಸಿ ತಂಡಕ್ಕೆ ಆಸರೆಯಾದರು.

    ಒಟ್ಟಿನಲ್ಲಿ ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ವೆಸ್ಟ್ ಇಂಡೀಸ್ ಬೌಲರ್‌ಗಳು ವಿಫಲವಾದ್ದರಿಂದ ಗೆಲುವು ಟೀಂ ಇಂಡಿಯಾ ಪಾಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವಿಂಡೀಸ್ ರೋಚಕ ಜಯ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ನೀಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 138 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್‌ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಅರಂಭದಿಂದಲೇ ಮಾರಕ ಬೌಲಿಂಗ್ ದಾಳಿ ಮಾಡಿದ ವಿಂಡೀಸ್ ತಂಡದ ಬೌಲರ್‌ಗಳು ಟೀಂ ಇಂಡಿಯಾದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ಕ್ರೀಸ್‌ನಲ್ಲಿ ನಿಲ್ಲದಂತೆ ಕಟ್ಟಿಹಾಕಿದರು. ಪರಿಣಾಮವಾಗಿ 138 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಭಾರತ ಪೇರಿಸಲು ಸಾಧ್ಯವಾಯಿತು. ಈ ಮೊತ್ತವನ್ನು ರಕ್ಷಣೆ ಮಾಡಲು ಭಾರತೀಯ ಬೌಲರ್‌ಗಳು ಕೂಡ ಅಂತಿಮ ಹಂತದವರೆಗೂ ಹೋರಾಡಿದರಾದರೂ ಕೊನೆಯ ಹಂತದಲ್ಲಿ ವಿಂಡೀಸ್ ಗೆದ್ದು ಬೀಗಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಮೆಕಾಯ್ ಮ್ಯಾಜಿಕ್: ಇನ್ನೂ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಆಘಾತ ನೀಡಿದ್ದು ವೆಸ್ಟ್ ಇಂಡೀಸ್ ತಂಡದ ವೇಗಿ ಒಬೆದ್ ಮೆಕಾಯ್. ಪಂದ್ಯದ ಮೊದಲ ಎಸೆತವೇ ಭಾರತ ತಂಡಕ್ಕೆ ಆಘಾತ ನೀಡಿತು. ಪಂದ್ಯದ ಮೊದಲ ಎಸೆತದಲ್ಲಿಯೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಉರುಳಿಸಿದರು. ತಮ್ಮ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದರು. ಅದಾದ ಬಳಿಕ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ವಿಕೆಟ್ ಕಬಳಿಸಿ ಟೀಂ ಇಂಡಿಯಾವನ್ನು ಅಲ್ಪ ಮೊತ್ತದಲ್ಲೇ ಕಟ್ಟಿಹಾಕಿದರು. 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ 6 ವಿಕೆಟ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

    ಬ್ರೆಂಡನ್ ಕಿಂಗ್ ಅರ್ಧ ಶತಕ: ಅದರಂತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. 52 ಎಸೆತಗಳನ್ನು ಎದುರಿಸಿದ ಬ್ರೆಂಡನ್ 68 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಬಳಿಕ ಅಂತಿಮ ಹಂತದಲ್ಲಿ ಡೆವೋನ್ ಥೋಮಸ್ ಸ್ಪೋಟಕ ಪ್ರದರ್ಶನ ನೀಡಿ ಭಾರತದಿಂದ ಗೆಲುವನ್ನು ಕಸಿದರು. ಥೋಮರ್ 19 ಎಸೆತಗಳಲ್ಲಿ ಸ್ಪೋಟಕ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು.

    ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ ನಂತರ ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10 ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್‌ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ರಿಷಭ್ ಪಂತ್ 12 ಎಸೆಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯೊಂದಿಗೆ 24 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇವರಿಬ್ಬೆ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 55 ರನ್‌ಗಳನ್ನು ಗಳಿಸಿತ್ತು. ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.

    ಬೌಲಿಂಗ್‌ನಲ್ಲಿ ಅರ್ಶ್‌ದೀಪ್‌ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಸರಣಿ ಸಮಬಲ: ಇನ್ನು ಈ ಫಲಿತಾಂಶದಿಂದಾಗಿ 5 ಟಿ20 ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2ನೇ ಓವರ್‌ನಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರೂ ಅತಿ ವೇಗವಾಗಿಯೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಐದು ಓವರ್‌ಗಳಲ್ಲಿ 48 ರನ್ ಗಳಿಸಿದ್ದ ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ತತ್ತರ – ಭಾರತಕ್ಕೆ 68 ರನ್‌ಗಳ ಭರ್ಜರಿ ಜಯ

    ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ತತ್ತರ – ಭಾರತಕ್ಕೆ 68 ರನ್‌ಗಳ ಭರ್ಜರಿ ಜಯ

    ಟ್ರಿನಿನಾಡ್: ನಾಯಕ ರೋಹಿತ್‌ ಶರ್ಮಾರ ಆಕರ್ಷಕ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು ಟಿ20 ಸರಣಿಯ ಮೊದಲ ಪಂದ್ಯದಲ್ಲೇ ವೆಸ್ಟ್‌ ಇಂಡೀಸ್‌ ವಿರುದ್ಧ 68 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಆಥಿತೇಯ ವೆಸ್ಟ್‌ಇಂಡೀಸ್‌ಗೆ ತವರಿನಲ್ಲೇ ವೈಟ್‌ವಾಶ್‌ ಮಾಡಿದ ಟೀಂ ಇಂಡಿಯಾ, ಜಯದ ಅಬ್ಬರ ಮುಂದುವರಿಸಿದೆ.

    ಇಲ್ಲಿನ ಬ್ರಯಾನ್‌ ಲಾರಾ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್‌ ತಂಡದ ನಾಯಕ ನಿಕೋಲಸ್‌ ಪೂರನ್‌ ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 190 ರನ್‌ಗಳಿಸಿ ಆಥಿತೇಯರಿಗೆ 191 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್‌ ಇಂಡೀಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ  122 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಗಿ ಭಾರತದ ಎದುರು ಮಂಡಿಯೂರಿತು.

    ಟಾಸ್‌ ಸೋತು ನಂತರ ಬ್ಯಾಟಿಂಗ್‌ ಮಾಡಿದ ವಿಂಡೀಸ್‌ ತಂಡವು ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತು. ಪವರ್‌ ಪ್ಲೇ ಮುಗಿಯುವ ಹೊತ್ತಿಗೆ ಟೀಂ ಇಂಡಿಯಾ ನಾಲ್ಕು ವಿಕೆಟ್‌ಗಳನ್ನು ಕಸಿದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಕೈಲ್ ಮೇಯರ್ಸ್ ಹಾಗೂ ಶಮರ್ ಬ್ರೂಕ್ಸ್ ಸ್ಥಿರವಾಗಿ ನಿಲ್ಲಲಿಲ್ಲ. ಕೈಲ್‌ ಮೇಯರ್ಸ್‌ 6 ಎಸೆತಗಳಲ್ಲಿ 15 ರನ್‌ ಗಳಿಸಿದರೆ, ಬ್ರೂಕ್ಸ್‌ 15 ಎಸೆತಗಳಲ್ಲಿ 20 ರನ್‌ಗಳನ್ನು ಗಳಿಸಿ ಪೆವಿಲಿಯನ್‌ ಸೇರಿದರು.

    2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಭರವಸೆಯ ಆಟಗಾರ ಜೇಸನ್ ಹೋಲ್ಡರ್ 4 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ನಿರ್ಗಮಿಸಿದರು. ಉತ್ತಮ ಬ್ಯಾಟಿಂಗ್‌ ನಿರೀಕ್ಷೆಯಲ್ಲಿದ್ದ ನಾಯಕ ನಿಕೋಲಸ್ ಪೂರನ್ 18ರನ್‌ ಗಳಿಸಿದರೆ, ರೋವ್ಮನ್ ಪೊವೆಲ್ ಹಾಗೂ ಶಿಮ್ರಾನ್ ಹೆಟ್ಮೆಯರ್ ತಲಾ 14 ರನ್‌ ಗಳಿಸಿ ಔಟಾದರು. 11 ಓವರ್‌ ಪೂರೈಸುವ ಹೊತ್ತಿಗೆ 82 ರನ್‌ಗಳನ್ನು ಗಳಿಸಿದ್ದ ವೆಸ್ಟ್‌ ಇಂಡೀಸ್‌ 5 ವಿಕೆಟ್‌ಗಳನ್ನು ಕಳೆದುಕೊಂಡು ಬಹುತೇಕ ಸೋಲಿನ ಹಾದಿಯನ್ನು ಕಂಡಿತ್ತು. ಪ್ರಮುಖ ಬ್ಯಾಟರ್‌ಗಳ ಬ್ಯಾಟಿಂಗ್‌ ವೈಫಲ್ಯದಿಂದ ವೆಸ್ಟ್‌ ಇಂಡೀಸ್‌ ಟಿ20 ಸರಣಿಯ ಮೊದಲ ಪಂದ್ಯದಲ್ಲೂ ಸೋಲಿನ ರುಚಿ ಕಂಡಿತು.

    ವಿಂಡೀಸ್‌ ಪರ ಅಲ್ಜಾರಿ ಜೋಸೆಫ್‌ 2 ವಿಕೆಟ್‌ ಪಡೆದರೆ, ಒಬೆಡ್ ಮೆಕಾಯ್‌, ಜೇಸನ್‌ ಹೋಲ್ಡರ್‌, ಅಕೀಲ್‌ ಹೊಸೈನ್‌, ಕೀಮೋ ಪೌಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಟೀಂ ಇಂಡಿಯಾ ಅಬ್ಬರ: ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್‌ ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ ಕೇವಲ 4.4 ಓವರ್‌ಗಳಲ್ಲೇ 44 ರನ್‌ ಕಲೆಹಾಕಿದರು. ಇದೇ ವೇಳೆ 24 ರನ್‌ಗಳಿಸಿದ್ದ ಸೂರ್ಯಕುಮಾರ್‌ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ನಂತರದಲ್ಲಿ ಕ್ರೀಸ್‌ಗಿಳಿದ ಶ್ರೇಯಸ್‌ ಅಯ್ಯರ್‌ ಶೂನ್ಯಕ್ಕೆ ನಿರ್ಗಮಿಸಿದರೆ, ರಿಷಭ್‌ ಪಂತ್‌ 14 ರನ್‌, ಹಾರ್ದಿಕ್‌ ಪಾಂಡ್ಯ 1 ರನ್‌ ಹಾಗೂ ರವೀಂದ್ರ ಜಡೇಜಾ 16 ರನ್‌ಗಳಿಸಿದರು. ಭರವಸೆಯ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಕೊನೆಯಲ್ಲಿ ಬಂದ ದಿನೇಶ್‌ ಕಾರ್ತಿಕ್‌ ನಾಯಕ ರೋಹಿತ್‌ ಶರ್ಮಾಗೆ ಜೊತೆಯಾದರು.

    ಹಿಟ್‌ ಮ್ಯಾನ್‌ ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರ: ನಾಯಕನ ಆಟವಾಡಿದ ರೋಹಿತ್‌ ಶರ್ಮಾ 44 ಎಸೆತಗಳಲ್ಲಿ 64 ರನ್‌ (7 ಬೌಂಡರಿ, 2 ಸಿಕ್ಸರ್‌) ಬಾರಿಸಿದರೆ, ದಿನೇಶ್‌ ಕಾರ್ತಿಕ್‌ ಕೇವಲ 19 ಎಸೆತಗಳಲ್ಲಿ 41 ರನ್‌(4 ಬೌಂಡರಿ, 2 ಸಿಕ್ಸರ್)‌ ಸಿಡಿಸಿ ವೆಸ್ಟ್‌ ಇಂಡೀಸ್‌ ಬೌಲರ್‌ಗಳ ಬೆವರಿಳಿಸಿದರು.

    ಕೊನೆಯಲ್ಲಿ ದಿನೇಶ್‌ ಕಾರ್ತಿಕ್‌ ಹಾಗೂ ರವಿಚಂದ್ರನ್‌ ಅಶ್ಚಿನ್‌ ಅವರ ಬಿರುಸಿನ ಆಟದಿಂದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 190 ರನ್‌ ಚಚ್ಚಿತ್ತು. ಇವರಿಬ್ಬರು 7ನೇ ವಿಕೆಟ್‌ಗೆ 24 ಎಸೆತಗಳಲ್ಲಿ 52 ರನ್‌ ಕಲೆಹಾಕಿದರು. ದಿನೇಶ್‌ 19 ಎಸೆತಗಳಲ್ಲಿ 41 ರನ್‌ ಬಾರಿಸಿದರೆ, ಅವರಿಗೆ ಅಶ್ವಿನ್‌ 13 ರನ್ ಗಳಿಸಿ, ಅಜೇರಾಗುಳಿದರು.

    ಟೀಂ ಇಂಡಿಯಾ ಪರ ರವಿಚಂದ್ರನ್‌ ಅಶ್ವಿನ್‌, ರವಿ ಬಿಷ್ನೋಯ್‌, ಅರ್ಶ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ರವಿಂದ್ರ ಜಡೇಜಾ, ಹಾರ್ದಿಕ್‌ ಪಾಂಡ್ಯ, ತಲಾ ಒಂದೊಂದು ವಿಕೆಟ್‌ ಪಡೆದು ಟೀಂ ಇಂಡಿಯಾ ಗೆಲುವಿಗೆ ನೆರವಾದರು.

    ರನ್‌ ಏರಿದ್ದು ಹೇಗೆ?
    42 ಎಸೆತ, 50 ರನ್‌
    69 ಎಸೆತ, 100 ರನ್‌
    105 ಎಸೆತ, 150 ಎನ್‌
    120 ಎಸೆತ, 190 ರನ್‌

    Live Tv
    [brid partner=56869869 player=32851 video=960834 autoplay=true]

  • ಐಪಿಎಲ್ ಹರಾಜಿನಲ್ಲಿ 10.75 ಕೋಟಿ ರೂ.ಗೆ ಸೇಲ್ – ವಿಂಡೀಸ್ ಆಟಗಾರಿಗೆ ಪೂರನ್ ಪಿಜ್ಜಾ ಪಾರ್ಟಿ

    ಐಪಿಎಲ್ ಹರಾಜಿನಲ್ಲಿ 10.75 ಕೋಟಿ ರೂ.ಗೆ ಸೇಲ್ – ವಿಂಡೀಸ್ ಆಟಗಾರಿಗೆ ಪೂರನ್ ಪಿಜ್ಜಾ ಪಾರ್ಟಿ

    ಕೋಲ್ಕತ್ತಾ: ಐಪಿಎಲ್ ಹರಾಜಿನಲ್ಲಿ ವೆಸ್ಟ್ ಇಂಡೀಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ನಿಕೋಲಸ್ ಪೂರನ್ 10.75 ಕೋಟಿ ರೂ.ಗೆ ಸೇಲ್ ಆದ ಖುಷಿಗೆ ವಿಂಡೀಸ್ ಆಟಗಾರರಿಗೆ 15,000 ರೂ.ನ ಪಿಜ್ಜಾ ಆರ್ಡರ್ ಮಾಡಿ ಪಾರ್ಟಿ ನೀಡಿದ್ದಾರೆ.

    ವೆಸ್ಟ್ ಇಂಡೀಸ್ ತಂಡ ಭಾರತದಲ್ಲಿ ಏಕದಿನ ಮತ್ತು ಟಿ20 ಸರಣಿಗಾಗಿ ಭಾರತ ಪ್ರವಾಸದಲ್ಲಿದೆ. ಏಕದಿನ ಸರಣಿ ಬಳಿಕ ಇದೀಗ ಕೋಲ್ಕತ್ತಾದಲ್ಲಿ ಟಿ20 ಸರಣಿಗಾಗಿ ಕಠಿಣ ಬಯೋಬಬಲ್‍ನಲ್ಲಿದೆ. ಬೆಂಗಳೂರಿನಲ್ಲಿ ನಡೆದ ಮೆಗಾ ಹರಾಜಿನಲ್ಲಿ ಪೂರನ್ 10.75 ಕೋಟಿ ರೂ. ನೀಡಿ ಸನ್ ರೈಸರ್ಸ್ ಹೈದರಾಬಾದ್ ತಂಡ ಖರೀದಿ ಮಾಡಿತ್ತು. ಇದರಿಂದ ಸಂತಸಗೊಂಡ ವಿಂಡೀಸ್ ಆಟಗಾರರು ಪೂರನ್ ಜೊತೆ ಪಾರ್ಟಿಗಾಗಿ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಪೂರನ್ ಪಿಜ್ಜಾ ಆರ್ಡರ್ ಮಾಡಿ ಪಾರ್ಟಿ ನೀಡಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

    ಟಿ20 ಸರಣಿಗಾಗಿ ವಿಂಡೀಸ್ ತಂಡದಲ್ಲಿರುವ ಪೂರನ್ ಮತ್ತು ತಂಡ ಕೋಲ್ಕತ್ತಾದ ಹೋಟೆಲ್ ಒಂದರಲ್ಲಿ ಬಯೋಬಬಲ್‍ನಲ್ಲಿದ್ದು, ಅಲ್ಲಿಗೆ ಹೊರಗಿನ ಫುಡ್ ತರುವಂತಿಲ್ಲ. ಹಾಗಾಗಿ ಹೋಟೆಲ್‍ನ ಚೆಫ್ ಜೊತೆ 15 ಪಿಜ್ಜಾ ಮಾಡಲು ತಿಳಿಸಿದ್ದಾರೆ. ಒಟ್ಟು 15,000 ರೂ. ಪಿಜ್ಜಾಗೆ ಖರ್ಚು ಮಾಡಿದ್ದಾರೆ ಎಂದು ಹೋಟೆಲ್‍ನ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಶಕೀಬ್ ಐಪಿಎಲ್‍ನಲ್ಲಿ ಮಾರಾಟವಾಗಲಿಲ್ಲ ಯಾಕೆ – ರಿವಿಲ್ ಮಾಡಿದ ಪತ್ನಿ

    ಕಠಿಣ ಬಯೋಬಬಲ್ ನಡುವೆ ಪೂರನ್ ನೀಡಿದ ಪಿಜ್ಜಾ ಪಾರ್ಟಿಯಿಂದ ವಿಂಡೀಸ್ ಆಟಗಾರರು ಸಂತಸಗೊಂಡಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಇಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಈಗಾಗಲೇ ಎರಡು ತಂಡಗಳು ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.