Tag: Nidgundi

  • ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ!

    ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ!

    – ಕುಟುಂಬಸ್ಥರ ಆರೋಪ

    ವಿಜಯಪುರ: ಪೊಲೀಸ್ (Police) ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಿಡಗುಂದಿ (Nidgundi) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

    ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೃತನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

    ಗುರುವಾರ ಸಹ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ವಿಜಯಪುರದಲ್ಲಿ ಬಂಡೆಗೆ ತಲೆ ಜಜ್ಜುವ ವಿಶಿಷ್ಟ ಆಚರಣೆ

    ವಿಜಯಪುರದಲ್ಲಿ ಬಂಡೆಗೆ ತಲೆ ಜಜ್ಜುವ ವಿಶಿಷ್ಟ ಆಚರಣೆ

    ವಿಜಯಪುರ: ಬಂಡೆಗೆ (Rock) ತಲೆ ಜಜ್ಜುವ ವಿಶಿಷ್ಟ ಆಚರಣೆಯೊಂದು ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆಯುತ್ತದೆ. ಇಲ್ಲಿ ಭಕ್ತರು ಓಡೋಡಿ ಬಂದು ಕಲ್ಲಿಗೆ ಜೋರಾಗಿ ತಲೆ ಜಜ್ಜಿ ದೇವರಿಗೆ ನಮಸ್ಕಾರ ಮಾಡತ್ತಾರೆ. ಈ ವಿಚಿತ್ರ ಜಾತ್ರೆ ವಿಜಯಪುರ ಜಿಲ್ಲೆಯ ನಿಡಗುಂದಿ (Nidgundi) ತಾಲೂಕಿನ ಗಣಿ ಗ್ರಾಮದಲ್ಲಿ ನಡೆಯುತ್ತದೆ.

    ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆ (Fair) ವೇಳೆ ಈ ರೀತಿಯ ವಿಶಿಷ್ಟ ಆಚರಣೆ ನಡೆಯುತ್ತದೆ. ಭಕ್ತರು ಒಟ್ಟು ಮೂರು ಸಲ ಬಂಡೆಗೆ ತಲೆಯನ್ನು ಜಜ್ಜಿ ನಮಸ್ಕಾರ ಮಾಡುವ ಪದ್ಧತಿ ಇಲ್ಲಿದೆ. ನೂರಾರು ಭಕ್ತರಿಂದ ನಡೆಯುವ ಈ ವಿಶಿಷ್ಟ ಆಚರಣೆ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ವಿಶೇಷ ಎಂದರೆ ಕಲ್ಲಿಗೆ ಎಷ್ಟೇ ಜೋರಾಗಿ ತಲೆ ಜಜ್ಜಿಕೊಂಡರೂ ಯಾರಿಗೂ ಇದುವರೆಗೂ ಒಂದು ಸಣ್ಣಪುಟ್ಟ ಗಾಯ ಕೂಡ ಆಗಿಲ್ಲ. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

    ಸೋಮೇಶ್ವರ ದೇವರ ಶಕ್ತಿಯಿಂದ ಯಾವುದೇ ಅಪಾಯ ಆಗುವುದಿಲ್ಲ ಎಂಬುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದ ಬಳಿಕ ಈ ವಿಶಿಷ್ಟ ಆಚರಣೆಯ ಜಾತ್ರೆ ನಡೆಯುತ್ತದೆ. ಇದನ್ನೂ ಓದಿ: ತಮಿಳುನಾಡು, ಕೇರಳ ಮೇಲ್ಮೈ ಸುಳಿಗಾಳಿ ಎಫೆಕ್ಟ್- ಬೆಂಗಳೂರು ಇನ್ನೂ 2 ದಿನ ಕೂಲ್ ಕೂಲ್