Tag: niharika

  • ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?

    ತೆಲುಗಿನ ಮತ್ತೊಬ್ಬ ನಟಿಯ ದಾಂಪತ್ಯದಲ್ಲಿ ಬಿರುಕು- ಪತಿ ಜೊತೆ ಸ್ವಾತಿ ರೆಡ್ಡಿ ಡಿವೋರ್ಸ್?

    ಣ್ಣದ ಲೋಕದಲ್ಲಿ ಲವ್, ಬ್ರೇಕಪ್, ಸೆಕ್ಸ್, ಡಿವೋರ್ಸ್ ಎಲ್ಲಾ ಕಾಮನ್ ಆಗಿದೆ. ಟಾಲಿವುಡ್‌ನ ಸ್ಟಾರ್ ನಟಿ ಸಮಂತಾ, ನಿಹಾರಿಕಾ ಡಿವೋರ್ಸ್ ಪಡೆದುಕೊಳ್ಳುವ ಮೂಲಕ ಶಾಕ್ ಕೊಟ್ಟಿದ್ದರು. ಈಗ ತೆಲುಗಿನ ನಟಿ ಸ್ವಾತಿ ರೆಡ್ಡಿ(Swathi Reddy), ದಾಂಪತ್ಯದಲ್ಲಿ ಬಿರುಕಾಗಿದೆ ಎಂಬ ಸುದ್ದಿಯಿದೆ. ಇವರು ಕೂಡ ಸಮಂತಾ(Samantha), ನಿಹಾರಿಕಾ(Niharika) ಹಾಗೆಯೇ ಡಿವೋರ್ಸ್ ಪಡೆಯುತ್ತಿದ್ದಾರೆ ಎಂದು ಟಾಲಿವುಡ್‌ನಲ್ಲಿ ಫುಲ್ ಟಾಕ್ ಆಗುತ್ತಿದೆ.

    2015ರಲ್ಲಿ ‘ಡೆಂಜರ್’ (Danger) ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಸ್ವಾತಿ ರೆಡ್ಡಿ (Swathi Reddy) ಅವರು ಸಾಲು ಸಾಲಾಗಿ ತೆಲುಗು, ತಮಿಳು, ಮಲಯಾಳಂ ಸಿನಿಮಾದಲ್ಲಿ ನಟಿಸಿದ್ರು. ಕಾರ್ತಿಕೇಯ, ತ್ರಿಪುರ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನ ನಟಿ ನೀಡಿದ್ದಾರೆ. ಡಿಮ್ಯಾಂಡ್ ಇರುವಾಗಲೇ ಉದ್ಯಮಿ ವಿಕಾಸ್ ವಾಸು (Vikas Vasu) ಜೊತೆ ಸ್ವಾತಿ ರೆಡ್ಡಿ ಮದುವೆಯಾದರು. ಪ್ರೀತಿಸಿದ ಹುಡುಗ ವಿಕಾಸ್ ಜೊತೆ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಇಬ್ಬರ ನಡುವೆ ಸಂಬಂಧ ಸರಿಯಿಲ್ಲ ಎಂದು ಹೇಳಲಾಗುತ್ತಿದೆ.

    ಸಮಂತಾ, ನಿಹಾರಿಕಾ ಡಿವೋರ್ಸ್ ಪ್ಯಾಟರ್ನ್ ಅಂತೆಯೇ ಸ್ವಾತಿ ರೆಡ್ಡಿ ಹಾಗೇ ಮಾಡ್ತಿದ್ದಾರೆ. ಸ್ಯಾಮ್ ಮತ್ತು ನಿಹಾರಿಕಾ ದಾರಿಯನ್ನೇ ಸ್ವಾತಿ ರೆಡ್ಡಿ ಕೂಡ ಹಿಡಿದ್ರಾ ಎಂಬ ಅನುಮಾನ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪತಿ ವಿಕಾಸ್ ಜೊತೆಗಿನ ಫೋಟೋವನ್ನ ನಟಿ ಡಿಲೀಟ್ ಮಾಡಿದ್ದಾರೆ. ಸಮಂತಾ- ನಿಹಾರಿಕಾ ಕೂಡ ಹೀಗೆ ಮಾಡಿದ್ದರು. ಕೆಲ ತಿಂಗಳುಗಳ ನಂತರ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ:ಸುದೀಪ್-ಕುಮಾರ್ ವಿವಾದ: ಇಂದು ರವಿಚಂದ್ರನ್ ಎಂಟ್ರಿ

    ಅವರಂತೆಯೇ ಸ್ವಾತಿ ಮಾಡಿರೋದು ಹಲವು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ. ಪತಿ ಜೊತೆಗಿನ ಫೋಟೋವನ್ನ ಸ್ವಾತಿ ಡಿಲೀಟ್ ಮಾಡಿರೋ ಬೆನ್ನಲ್ಲೇ ಡಿವೋರ್ಸ್ (Divorce) ಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತೆ ಆಗಿದೆ. ಅಷ್ಟಕ್ಕೂ ಇದು ನಿಜಾನಾ? ಎಂಬುದನ್ನ ನಟಿ ರಿಯಾಕ್ಟ್ ಮಾಡುವವರೆಗೂ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಲಬ್, ಪಬ್ಬು ಸುತ್ತಾಟ ನಿಹಾರಿಕಾಗೆ ಮುಳುವಾಯ್ತಾ?: ಮಾವನ ಗುರುತರ ಆರೋಪ

    ಕ್ಲಬ್, ಪಬ್ಬು ಸುತ್ತಾಟ ನಿಹಾರಿಕಾಗೆ ಮುಳುವಾಯ್ತಾ?: ಮಾವನ ಗುರುತರ ಆರೋಪ

    ಟಿ, ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಕೊನಿಡೆಲಾ (Niharika) -ಚೈತನ್ಯ ಡಿವೋರ್ಸ್ ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿತ್ತು. ಚಂದಾಗಿದ್ದ ಈ ಜೋಡಿ ಯಾಕೆ ದೂರವಾದರು ಎನ್ನುವ ಪ್ರಶ್ನೆಯನ್ನು ಹಲವರು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಚೈತನ್ಯ ಅವರ ತಂದೆಯು ಹೇಳಿದ್ದಾರೆ ಎನ್ನಲಾದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಚೈತನ್ಯ ತಂದೆ ಪ್ರಭಾಕರ್ ರಾವ್ (Prabhakar Rao) ಈ ಕುರಿತು ತಮ್ಮ ಆಪ್ತರ ಮುಂದೆ ಹೇಳಿಕೊಂಡಿದ್ದಾರೆ ಎನ್ನಲಾದ ಮಾತುಗಳು ಅಚ್ಚರಿ ಮೂಡಿಸಿವೆ.

    ‘ನಮ್ಮ ಕುಟುಂಬದ ಬಗ್ಗೆ ನಿಹಾರಿಕಾಗೆ ಗೌರವವೇ ಇರಲಿಲ್ಲ. ಕ್ಲಬ್ಬು, ಪಬ್ಬು ಅಂತ ಸುತ್ತಾಡೋದು ಬಿಟ್ಟರೆ, ಆಕೆಗೆ ಕುಟುಂಬದ ಬಗ್ಗೆ ಕಾಳಜಿ ಇರಲಿಲ್ಲ. ಪತಿಯೊಂದಿಗೆ ಜೀವನ ಕಳೆಯುವಂತಹ ಉತ್ಸಾಹವೂ ಆಕೆಗೆ ಇರಲಿಲ್ಲ. ಆದರೂ, ನಾವು ಸಹಿಸಿಕೊಂಡಿದ್ದೆವು. ಅತಿರೇಕವಾದಾಗ ದೂರ ಆಗುವುದಕ್ಕೆ ನಿರ್ಧಾರ ಮಾಡಿದ್ದು. ಆದರೆ, ಮೆಗಾಸ್ಟಾರ್ ಕುಟುಂಬದವರು ನಮ್ಮ ಮೇಲೆ ಗೂಬೆ ಕೂರಿಸುತ್ತಿರುವುದು ನೋವು ತಂದಿದೆ’ ಎಂದು ಆಪ್ತರ ಮುಂದೆ ಪ್ರಭಾಕರ್ ರಾವ್ ಹೇಳಿಕೊಂಡಿದ್ದಾರಂತೆ. ಈ ಸುದ್ದಿ ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಮೆಗಾಸ್ಟಾರ್ ಮನೆಯ ಮುದ್ದಿನ ಮಗಳು‌ ನಿಹಾರಿಕಾ ಅವರ ಮದುವೆಯನ್ನ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ಹಲವು ವರ್ಷಗಳ ಪ್ರೀತಿ, ಎರಡೂವರೆ ವರ್ಷದ ದಾಂಪತ್ಯಕ್ಕೆ ಬ್ರೇಕ್‌ ಬಿದ್ದಿದೆ. ನಿಹಾರಿಕಾ- ಚೈತನ್ಯ (Chaitanya) ಇಬ್ಬರು ಡಿವೋರ್ಸ್ (Divorce) ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು- ಚೈತನ್ಯ ಬೇರೆಯಾಗಬೇಕು ಎಂದು ನಿರ್ಧರಿಸಿದ್ದೇವೆ. ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ಜೊತೆಯಾಗಿರೋದ್ದಕ್ಕೆ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಹೊಸ ಜೀವನಕ್ಕೆ ಕಾಲಿಡಲು ನಮ್ಮ ಪ್ರೈವೆಸಿಯನ್ನ ಗೌರವಿಸಿ ಎಂದು ನಟಿ ಪೋಸ್ಟ್ ಮೂಲಕ ತಿಳಿಸಿದ್ದರು. ಇದನ್ನೂ ಓದಿ:ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ನಟಿ ನಿಹಾರಿಕಾ ಅವರ ಮದುವೆಯು ಪ್ರಭಾಕರ್ ರಾವ್ ಅವರ ಪುತ್ರ ಚೈತನ್ಯ ಜೊನ್ನಲಗಡ್ಡ ಅವರ ಜೊತೆ 2020ರ ಡಿಸೆಂಬರ್ 9ರಂದು ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿನ ಒಬೆರಾಯ್ ಉದಯ್ ವಿಲಾಸ್‌ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಇಡೀ ಮೆಗಾ ಸ್ಟಾರ್ ಕುಟುಂಬವು ಮದುವೆಗೆ ಹಾಜರಾಗಿತ್ತು. ವೈಭವದಿಂದ ನಡೆದಿತ್ತು. ಈ ಮದುವೆಯಲ್ಲಿ ಇಡೀ ಕುಟುಂಬವು ಹಾಡಿ ಕುಣಿದಿತ್ತು.

     

    ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ ಮತ್ತು ಚೈತನ್ಯ ಇನ್ಸ್ಟಾಗ್ರಾಂ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ನಂತರ ಅದು ನಿಜವಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

    ಣ್ಣದ ಲೋಕದಲ್ಲಿ ನಟ-ನಟಿಯರಿಗೆ ಮದುವೆ ಆಮೇಲೆ ಡಿವೋರ್ಸ್ ಎಲ್ಲವೂ ಕಾಮನ್ ಆಗಿಬಿಟ್ಟಿದೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಕೇಳಿ ಬರುತ್ತಿದೆ. ಚಿರಂಜೀವಿ ಸಹೋದರ ನಟ ನಾಗಬಾಬು (Actor Nagababu) ಅವರ ಪುತ್ರಿ ನಿಹಾರಿಕಾ ಬದುಕಿನಲ್ಲಿ ಬಿರುಕಾಗಿದೆ ಎಂಬ ಸುದ್ದಿ ಟಾಲಿವುಡ್ (Tollywood) ಗಲ್ಲಿಯಲ್ಲಿ ಸೌಂಡ್ ಮಾಡುತ್ತಿದೆ. ಇದನ್ನೂ ಓದಿ: 65 ಲಕ್ಷ ರೂಪಾಯಿಗೆ ವ್ಯಾನಿಟಿ ವ್ಯಾನ್ ಖರೀದಿಸಿದ ಕಂಗನಾ ರಣಾವತ್

    ಮೆಗಾಸ್ಟಾರ್ ಫ್ಯಾಮಿಲಿಯಲ್ಲಿ (Megastar Family) ಮತ್ತೊಂದು ಡಿವೋರ್ಸ್ (Divorce) ಸಮಾಚಾರ ಕೇಳಿ ಬರುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ (Sreeja) ಎರಡನೇ ಮದುವೆಯಲ್ಲಿ ಬಿರುಕು ಉಂಟಾಗಿ ತವರಿಗೆ ಬಂದಿದ್ದಾರೆ. ಈ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಶಾಕ್ ಎದುರಾಗಿದೆ.

    2020ರಲ್ಲಿ ನಾಗಬಾಬು ಪುತ್ರಿ ನಿಹಾರಿಕಾ (Niharika Konidela) ಮತ್ತು ಚೈತನ್ಯ (Chaitanya) ಗುರುಹಿರಿಯರ ಸಮ್ಮುಖದಲ್ಲಿ ಪ್ರೇಮ ವಿವಾಹವಾಗಿದ್ದರು. ಮೆಗಾಸ್ಟಾರ್ ಫ್ಯಾಮಿಲಿ, ಅದ್ದೂರಿಯಾಗಿ ಮಗಳ ಮದುವೆಯನ್ನ ರಾಜಸ್ಥಾನದಲ್ಲಿ ಮಾಡಿದ್ದರು. ಎರಡು ವರ್ಷಗಳಿಂದ ಖುಷಿಯಿಂದ ಜೀವನ ಸಾಗಿಸುತ್ತಿದ್ದ ಜೋಡಿಯ ನಡುವೆ ಬಿರುಕಾಗಿದೆ ಎನ್ನಲಾಗುತ್ತಿದೆ.

    ಡಿವೋರ್ಸ್ ಸುದ್ದಿಗೆ ಪೂರಕವೆಂಬಂತೆ, ಇಬ್ಬರು ಇನ್ಸ್ಟಾಗ್ರಾಂ ಖಾತೆಯಲ್ಲಿ ಒಬ್ಬರನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವರ್ಷದಿಂದ ಆಕ್ಟೀವ್ ಇಲ್ಲದೇ ಇರೋದು ಅನುಮಾನ ಮೂಡಿಸಿದೆ. ಕಳೆದ 3-4 ತಿಂಗಳಿಂದ ಇಬ್ಬರು ಒಟ್ಟಿಗೆ ಇಲ್ಲ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಮೆಗಾಸ್ಟಾರ್‌ ಕುಟುಂಬ ಪ್ರತಿಕ್ರಿಯೆ ನೀಡುವವರೆಗೂ ಕಾದುನೋಡಬೇಕಿದೆ.

  • ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು

    ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಮೃತ ಮಹಿಳೆಯನ್ನು ನಿಹಾರಿಕಾ (Niharika) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಮೃತಳ ಕುಟುಂಬಸ್ಥರಿಂದ ಗಂಡ (Niharika Husband) ನೇ ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ. ಯಾಕೆಂದರೆ ಗಂಡನ ಕಿರುಕುಳ ತಾಳಲಾರದೆ ನಿಹಾರಿಕಾ ಅಕ್ಕನ ಮನೆ ಸೇರಿದ್ದರು. ಆದರೆ ಎರಡು ದಿನಗಳ ಹಿಂದೆಯಷ್ಟೇ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಕರೆದುಕೊಂಡು ಹೋಗಿದ್ದ.

    ಶಾಲೆಯ ಕಾರ್ಯಕ್ರಮಕ್ಕೆ ತೆರಳುವ ವಿಚಾರವಾಗಿ ನಿಹಾರಿಕಾಗೆ ನಿಂದಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

    ಸದ್ಯ ಘಟನೆ ಸಂಬಂಧ ಮೃತಳ ಕುಟುಂಬಸ್ಥರು ಪುಟ್ಟೆನಹಳ್ಳಿ ಪೊಲೀಸ್ ಠಾಣೆ (Puttenahalli Police Station) ಯಲ್ಲಿ ದೂರು ದಾಖಲು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಲವ್ ಬ್ರೇಕ್ ಅಪ್ ಗೆ ಕಾರಣನಾದ ಕರಣ್ ಜೋಹಾರ್

    ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಲವ್ ಬ್ರೇಕ್ ಅಪ್ ಗೆ ಕಾರಣನಾದ ಕರಣ್ ಜೋಹಾರ್

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ (Dating) ವಿಚಾರ ಹಲವು ವರ್ಷಗಳಿಂದ ಹರಿದಾಡುತ್ತಲೇ ಇದೆ. ಒಟ್ಟೊಟ್ಟಿಗೆ ಹೋಟೆಲ್ ನಲ್ಲಿ ಕಾಣಿಸಿಕೊಳ್ಳುವುದು, ತಡರಾತ್ರಿ ಪಾರ್ಟಿ ಮಾಡುವುದು ಹಾಗೂ ನ್ಯೂ ಯಿಯರ್ ಅನ್ನು ಗೋವಾದಲ್ಲಿ ಆಚರಿಸೋದು ಹೀಗೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದೆ. ಹಾಗಾಗಿ ಇಬ್ಬರೂ ಡೇಟಿಂಗ್ ಮಾಡುವ ವಿಚಾರ ಆಗಾಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ.

    ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್ ವಿಚಾರ ಕೇವಲ ಟಾಲಿವುಡ್ ನಲ್ಲಿ ಮಾತ್ರವಲ್ಲ ಬಾಲಿವುಡ್ ವುಡ್ ನಲ್ಲೂ ಸದ್ದು ಮಾಡಿದೆ. ಹೀಗಾಗಿಯೇ ಕರಣ್ ಜೋಹಾರ್ (Karan Johar) ಕೂಡ ಈ ಇಬ್ಬರ ರಿಲೇಶನ್ ಶಿಪ್ ಬಗ್ಗೆ ಮಾತನಾಡಿದ್ದಾರೆ. ಕಾಫಿ ವಿತ್ ಕರಣ್ ಶೋನಲ್ಲಿ ಇಂಥದ್ದೊಂದು ಚರ್ಚೆ ನಡೆದಿದ್ದು, ರಶ್ಮಿಕಾ ಮತ್ತು ವಿಜಯ್ ಡೇಟಿಂಗ್ ಕುರಿತಾಗಿ ಕರಣ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಅದು ಕೂಡ ಚರ್ಚೆ ಆಗುತ್ತಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಶೋ ನಡೆಸಲು ಸಲ್ಮಾನ್ ಖಾನ್ ಗೆ 1000 ಕೋಟಿ ಸಂಭಾವನೆ: ಸತ್ಯ ಒಪ್ಪಿಕೊಂಡ ನಟ

    ಕಾಫಿ ವಿತ್ ಕರಣ್ ಶೋಗೆ ಬಾಲಿವುಡ್ ನಟಿ ನಿಹಾರಿಕಾ (Niharika) ಬಂದಿದ್ದರು. ಈ ಸಂದರ್ಭದಲ್ಲಿ ಕರಣ್ ಮಾತನಾಡ್ತಾ ತನ್ನನ್ನು ವಿಕ್ಕಿ ಕೌಶಲ್ ತಮ್ಮ ಮದುವೆಗೆ ಆಹ್ವಾನಿಸಲಿಲ್ಲ. ಅದು ಯಾಕೆ ಅಂತಾನೇ ಗೊತ್ತಾಗಲಿಲ್ಲ ಎನ್ನುತ್ತಾರೆ. ಆಗ ನಿಹಾರಿಕಾ, ನೀವೇನೂ ಬೇಸರ ಮಾಡಿಕೊಳ್ಳಬೇಡಿ. ನನ್ನ ಮದುವೆಗೆ ಕಂಡಿತಾ ಕರೆಯುತ್ತೇನೆ ಅಂತಾರೆ. ನಿಹಾರಿಕಾ ಹೀಗೆ ಆಹ್ವಾನ ನೀಡುತ್ತಿದ್ದಂತೆಯೇ ನಿಹಾರಿಕಾಳ ಮದುವೆ ಯಾರ ಜೊತೆ ಆಗಬೇಕು ಎಂದು ಚರ್ಚಿಸುತ್ತಾರೆ ಕರಣ್.

    ಮೊದಲು ಪ್ರಭಾಸ್ ಹೆಸರು ಸೂಚಿಸುವ ಕರಣ್, ನೀವು ಪ್ರಭಾಸ್ ಜೊತೆ ಮದುವೆ ಆಗಬಹುದು ಎನ್ನುತ್ತಾರೆ. ಪ್ರಭಾಸ್ ವಯಸ್ಸಲ್ಲಿ ದೊಡ್ಡವರು ಅಂತಾಳೆ. ಹಾಗಾದರೆ, ವಿಜಯ್ ದೇವರಕೊಂಡ (Vijay Devarakonda) ಜೊತೆ ಮದುವೆ ಆಗಬಹುದು. ಅವರು ಸಿಂಗಲ್ ಅನ್ನುತ್ತಾರೆ ಕರಣ್. ತಕ್ಷಣವೇ ವಿಜಯ್ ಮತ್ತು ರಶ್ಮಿಕಾ ಡೇಟಿಂಗ್ ವಿಚಾರ ಬರುತ್ತದೆ. ನನ್ನ ಪ್ರಕಾರ ಅವರಿಬ್ಬರ ಮಧ್ಯೆ ಅಂಥದ್ದೂ ಏನೂ ಇಲ್ಲ. ವಿಜಯ್ ಸಿಂಗಲ್ ಎನ್ನುವುದು ನನಗೆ ಗೊತ್ತು ಎಂದು ಹೇಳುವ ಮೂಲಕ ವಿಜಯ್ ಮತ್ತು ರಶ್ಮಿಕಾ ಲವ್ ಅನ್ನು ಬ್ರೇಕ್ ಅಪ್ ಮಾಡುತ್ತಾರೆ ಕರಣ್.

    Live Tv
    [brid partner=56869869 player=32851 video=960834 autoplay=true]

  • ಗೆಳೆಯ ಅಕ್ಷಯ್ ಜೊತೆ ರಮೇಶ್ ಪುತ್ರಿ ಮದುವೆ

    ಗೆಳೆಯ ಅಕ್ಷಯ್ ಜೊತೆ ರಮೇಶ್ ಪುತ್ರಿ ಮದುವೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ಮದುವೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ನಡೆದಿದೆ. ಗೆಳೆಯ ಅಕ್ಷಯ್ ಜೊತೆ ನಿಹಾರಿಕಾ ಸಪ್ತಪದಿ ತುಳಿದರು.

    ಕೊರೊನಾ ಹಿನ್ನೆಲೆ ಮದುವೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನಡೆದಿದೆ.

    2021ರ ಜನವರಿ 16ರಂದು ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ಎಲ್ಲ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ನನ್ನ ಮಗಳು ನಿಹಾರಿಕ ಹಾಗೂ ಅಕ್ಷಯ್ ವಿವಾಹ ಇಂದು ನಡೆಯಿತು. ನಿಮ್ಮ ಪ್ರೀತಿಯ ಆಶೀರ್ವಾದ ಈ ಹೊಸ ಜೋಡಿ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ವಿನಂತಿಸಿದ್ದಾರೆ.

  • ಮದುವೆ ವದಂತಿ ಬಗ್ಗೆ ಪ್ರಭಾಸ್ ಮೌನ ವಹಿಸಿರೋದ್ಯಾಕೆ?- ಅಂಕಲ್ ಹೀಗಂದ್ರು!

    ಮದುವೆ ವದಂತಿ ಬಗ್ಗೆ ಪ್ರಭಾಸ್ ಮೌನ ವಹಿಸಿರೋದ್ಯಾಕೆ?- ಅಂಕಲ್ ಹೀಗಂದ್ರು!

    ಮುಂಬೈ: ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಮದುವೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಈ ಮಧ್ಯೆ ಪ್ರಭಾಸ್ ಮನೆಯವರು ಸಾಕಷ್ಟು ಪ್ರಪೋಸಲ್‍ಗಳನ್ನ ಮುಂದಿಟ್ಟಿದ್ದು, ಪ್ರಭಾಸ್ ಯಾವುದಕ್ಕೂ ಇನ್ನೂ ಸಮ್ಮತಿ ನೀಡಿಲ್ಲ ಅಂತ ಅಂಕಲ್ ಕೃಷ್ಣಮ್ ರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿ ಅಳಿಯನಾಗ್ತಾರ ಪ್ರಭಾಸ್?

    ಬಾಹುಬಲಿ ಚಿತ್ರ ಬಿಡುಗಡೆಗೊಂಡ ಬಳಿಕ ಪ್ರಭಾಸ್ ಮತ್ತು ಅನುಷ್ಕಾ ಮದುವೆಯಾಗುತ್ತಾರೆ ಎಂದು ಇತ್ತೀಚಿನವೆರೆಗೆ ಸುದ್ದಿಗಳು ಹರಿದಾಡುತ್ತಿದ್ದವು. ಆದ್ರೆ ಇದೀಗ ಕೆಲ ದಿನಗಳ ಹಿಂದೆಯಷ್ಟೇ ಪ್ರಭಾಸ್ ಅವರು ಮೆಗಾಸ್ಟಾರ್ ಜಿರಂಜೀವಿ ಅಳಿಯನಾಗುತ್ತಾರೆ. ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಸುಪುತ್ರಿ ನಿಹಾರಿಕಾ ಅವರನ್ನು ಪ್ರಭಾಸ್ ವರಿಸಲಿದ್ದಾರೆ ಅನ್ನೋ ಗಾಸಿಪ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಆದ್ರೆ ಇಷ್ಟೊಂದು ಗಾಸಿಪ್ ಗಳು ಹರಿದಾಡುತ್ತಿದ್ದರೂ ಪ್ರಭಾಸ್ ಮಾತ್ರ ಮೌನ ವಹಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಈ ಬಾಲಿವುಡ್ ನಟಿ ಮೇಲೆ ಪ್ರಭಾಸ್‍ಗೆ ಕ್ರಷ್ ಅಂತೆ!

    ಈ ಮೊದಲು ಅಂದ್ರೆ ಬಾಹುಬಲಿ ಚಿತ್ರ ಬಿಡುಗಡೆಗೊಂಡಾಗ ಪ್ರಭಾಸ್- ಅನುಷ್ಕಾ ಮಧ್ಯೆ ಲವ್ ಇದೆ. ಹೀಗಾಗಿ ಮದುವೆಯಾಗುತ್ತಾರೆ ಅನ್ನೋ ಸುದ್ದಿ ಹರಿದಾಡಿದಾಗ ನಾವಿಬ್ಬರೂ ಒಳ್ಳೇ ಸ್ನೇಹಿತರು ಎಂದು ಹೇಳೋ ಮೂಲಕ ಪ್ರಭಾಸ್- ಅನುಷ್ಕಾ ಈ ಸುದ್ದಿಯನ್ನ ತಳ್ಳಿ ಹಾಕಿದ್ದರು. ಇದನ್ನೂ ಓದಿ: ಶ್ರದ್ಧಾ ಕಪೂರ್ ಮೊದಲು ಈ ನಟಿಯನ್ನು ಸಾಹೋ ಚಿತ್ರಕ್ಕೆ ಆಫರ್ ಮಾಡಿದ್ರು!

    ಇತ್ತೀಚೆಗೆ ಪ್ರಭಾಸ್ ಅವರ ಅಂಕಲ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮದುವೆಯ ಬಗ್ಗೆ ಪ್ರಭಾಸ್ ಇನ್ನೂ ಯಾರೊಂದಿಗೆ ತುಟಿ ಬಿಚ್ಚಿಲ್ಲ. ಈಗಾಗಲೇ ಕೆಲವು ಹುಡುಗಿಯರ ಫೋಟೋ ತೋರಿಸಿ ಅವನ ಆಯ್ಕೆಗೆ ಬಿಟ್ಟಿದ್ದೇವೆ. ಆದ್ರೂ ಕೂಡ ಈ ಬಗ್ಗೆ ಆತ ಯಾವುದೇ ಚಕಾರ ಎತ್ತಿಲ್ಲ ಎಂದು ಹೇಳಿದ್ದಾರೆ.

    ಇತ್ತ ಕುಟುಂಬದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೆ ಪ್ರಭಾಸ್ ದುಬೈನಲ್ಲಿ ಸಾಹೋ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್ ಬೇಕಂತಲೇ ಈ ರೀತಿ ಮೌನ ವಹಿಸಿದ್ದಾರಾ? ಅಥವಾ ಅವರ ಮನಸ್ಸಿನಲ್ಲಿ ಬೇರೆ ಯಾರೋ ಇದ್ದು, ಅದನ್ನ ಬಹಿರಂಗಪಡಿಸಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರಾ ಎಂಬ ಅನುಮಾನ ಕೂಡ ಮೂಡಿಸಿದೆ.

    https://www.youtube.com/watch?v=s1eobFGHssU