Tag: nikhil siddarth

  • ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ‘ಆರ್‌ಆರ್‌ಆರ್’ (RRR) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸ್ಟಾರ್ ನಟ ರಾಮ್ ಚರಣ್ (Ram Charan) ಇತ್ತೀಚೆಗೆ ‘ವಿ ಮೆಗಾ ಪಿಕ್ಚರ್ಸ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಮೊದಲ ಸಿನಿಮಾಗೆ ಸಾವರ್ಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ‘ದಿ ಇಂಡಿಯಾ ಹೌಸ್’ (The India House) ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ‘ದಿ ಇಂಡಿಯಾ ಹೌಸ್’ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

    ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ‍್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಇದನ್ನೂ ಓದಿ:‘ಡಾರ್ಲಿಂಗ್’ ಎನ್ನುತ್ತಾ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ನಭಾ ನಟೇಶ್

    ಈ ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ಧಾರ್ಥ್‌ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ (Saiee Manjrekar) ಬಣ್ಣ ಹಚ್ಚಲಿದ್ದಾರೆ.

    ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮೂಡಿ ಬರಲಿದೆ. ‘ಕಾರ್ತಿಕೇಯ 2’ ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ‘ದಿ ಇಂಡಿಯಾ ಹೌಸ್’ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ರೆಗ್ಯುಲರ್ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ.

  • ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

    ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

    ಕಾರ್ತಿಕೇಯ, ಕಾರ್ತಿಕೇಯ 2 (Karthikeya 2) ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಇದೀಗ ಸಿನಿಮಾದಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ಹೀರೋ ಆಗಿದ್ದಾರೆ. ಕೆಲ ವರ್ಷಗಳಿಂದ ಮುಚ್ಚಿದ ದೇವಸ್ಥಾನ (Temple) ನಿಖಿಲ್ ತೆರೆಸಿದ್ದಾರೆ.‌ ಅವರ ಕಾರ್ಯಕ್ಕೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:‘ರಾಜಾ ರಾಣಿ’ ಶೋಗೆ ಎಂಟ್ರಿ ಕೊಟ್ಟ ವಿನಯ್ ಗೌಡ ದಂಪತಿ

    ಆಂಧ್ರ ಪ್ರದೇಶದ ಭಾಪಟ್ಲ ಜಿಲ್ಲೆಯ ಚಿರಾಲದ ಬಳಿಯಿರುವ ಈ ದೇವಸ್ಥಾನ ವರ್ಷಗಳಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ದೇವಸ್ಥಾನದ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ನಿಖಿಲ್, ಭಕ್ತರಿಗಾಗಿ ದೇವಸ್ಥಾನದ ಬಾಗಿಲನ್ನ ಈಗ ಮತ್ತೆ ತೆರೆದಿದ್ದಾರೆ.

    ಈ ಬಗ್ಗೆ ಸೋಷಿಯಲ್ ವಿಡಿಯೋ ಹಂಚಿಕೊಂಡಿರುವ ನಿಖಿಲ್, ಊರಿನ ಗ್ರಾಮಸ್ಥರಿಗೆ ಶಿಕ್ಷೆಯಾಗಿ ಊರಿನ ದೇವಾಲಯವನ್ನು ಮುಚ್ಚಲಾಗಿತ್ತು. ನಾವು ಕಳೆದ ತಿಂಗಳು ದೇವಾಲಯ ತೆರೆದು ಜೀರ್ಣೋದ್ಧಾರ ಮಾಡಿದೆವು. ಈಗ ಮತ್ತೆ ಅಲ್ಲಿಗೆ ಭೇಟಿ ನೀಡಿದಾಗ ಗ್ರಾಮಸ್ಥರ ಸಂಭ್ರಮ ನೋಡಿ ಖುಷಿಯಾಯ್ತು ಎಂದಿದ್ದಾರೆ. ನಿಖಿಲ್ ನಡೆಯುತ್ತಿರುವಾಗ ಗ್ರಾಮದ ಮಹಿಳೆಯರು ಹಾದಿಗೆ ಹೂವು ಹಾಸಿ ಸ್ವಾಗತ ಕೋರುತ್ತಿರುವ ದೃಶ್ಯವಿದೆ.

    ಸದ್ಯ ಕನ್ನಡದ ನಟಿ ನಭಾ ನಟೇಶ್ (Nabha Natesh) ಜೊತೆ ‘ಸ್ವಯಂಭು’ ಸಿನಿಮಾದಲ್ಲಿ ನಿಖಿಲ್ ನಾಯಕನಾಗಿ ನಟಿಸುತ್ತಿದ್ದಾರೆ. ಇಂಡಿಯನ್ ಹೌಸ್ ಎಂಬ ಹೊಸ ಸಿನಿಮಾವನ್ನು ನಟ ಒಪ್ಪಿಕೊಂಡಿದ್ದಾರೆ.

  • ಮಗನ ಹೆಸರು ರಿವೀಲ್ ಮಾಡಿದ ‘ಕಾರ್ತಿಕೇಯ’ ನಟ ನಿಖಿಲ್

    ಮಗನ ಹೆಸರು ರಿವೀಲ್ ಮಾಡಿದ ‘ಕಾರ್ತಿಕೇಯ’ ನಟ ನಿಖಿಲ್

    ತೆಲುಗಿನ ನಟ ನಿಖಿಲ್ ಸಿದ್ಧಾರ್ಥ್ (Actor Nikhil Siddarth) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇತ್ತೀಚೆಗೆ ನಿಖಿಲ್ ಪತ್ನಿ ಪಲ್ಲವಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಮಗನ ಹೆಸರು ನಿಖಿಲ್ ರಿವೀಲ್ ಮಾಡಿದ್ದಾರೆ. ‌’ಧೀರ’ (Dheera Film) ಎಂದು ಮಗನಿಗೆ ಹೆಸರು ಇಟ್ಟಿರುವುದಾಗಿ ತಿಳಿಸಿದ್ದಾರೆ.

     

    View this post on Instagram

     

    A post shared by Nikhil Siddhartha (@actor_nikhil)

    ಸಿನಿಮಾಗಳಲ್ಲಿ ಅದೆಷ್ಟೇ ಬ್ಯುಸಿಯಾಗಿದ್ದರೂ ಮಗನಿಗೆ ಸಮಯ ಮೀಸಲಿಡುವುದಾಗಿ ನಿಖಿಲ್ ಮಾತನಾಡಿದ್ದಾರೆ. ಮಗನಿಗೆ ‘ಧೀರ ಸಿದ್ಧಾರ್ಥ್’ (Dheera Siddarth) ಎಂದು ಹೆಸರಿಟ್ಟಿದ್ದೇವೆ. ನಾನು ಪ್ರತಿದಿನ ಮಗನ ಜೊತೆ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದೇನೆ. ಮಕ್ಕಳು ಬೇಗನೆ ಬೆಳೆಯುತ್ತಾರೆ. ನಾನು ಕೂಡ ನನ್ನ ಪತ್ನಿಯ ಜವಾಬ್ದಾರಿಯನ್ನು ಹಂಚಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ನಿಖಿಲ್ ಮಾತನಾಡಿದ್ದಾರೆ.

    ನಿಖಿಲ್ ಸಿದ್ಧಾರ್ಥ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದಾರೆ. ಈ ವರ್ಷ ಫೆ.21ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದನ್ನೂ ಓದಿ:ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

    ಸದ್ಯ ನಿಖಿಲ್ ಸಿದ್ಧಾರ್ಥ್ ಅವರು ನಭಾ ನಟೇಶ್ ಜೊತೆಗಿನ ‘ಸ್ವಯಂಭು’ (Swayambu Film) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ತೆಲುಗು ಸಿನಿಮಾಗಳು ನಟನ ಕೈಯಲ್ಲಿದೆ.

  • ಸಾಯಿ ಪಲ್ಲವಿ ನಟನೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ತೆಲುಗು ನಟ

    ಸಾಯಿ ಪಲ್ಲವಿ ನಟನೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ತೆಲುಗು ನಟ

    ಸೌತ್ ಸುಂದರಿ ಸಾಯಿ ಪಲ್ಲವಿ (Sai Pallavi) ನಟನೆಗೆ ಮತ್ತು ಡ್ಯಾನ್ಸ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ನ್ಯಾಚುರಲ್ ನಟನೆಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಹೀಗಿರುವಾಗ ಸಹಜ ನಟಿ ಸಾಯಿ ಪಲ್ಲವಿ ನಟನೆ ಬಗ್ಗೆ ತೆಲುಗು ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

    ಇತ್ತೀಚೆಗೆ ಸಿನಿಮಾವೊಂದರ ಸಂದರ್ಶನದಲ್ಲಿ ನಿಖಿಲ್‌ಗೆ ಪ್ರಶ್ನೆಯೊಂದು ಎದುರಾಗಿದೆ. ಯಾವ ನಟಿಯ ನಟನೆ ನೋಡಿ ನೀವು ಕಣ್ಣೀರು ಹಾಕಿದ್ರಿ ಎಂದು ನಿರೂಪಕಿ ಕೇಳಿದ್ದಾರೆ. ಅದಕ್ಕೆ ಥಟ್ ಅಂತ ಸಾಯಿ ಪಲ್ಲವಿ ಹೆಸರನ್ನು ನಟ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:ಸೀರೆಯಲ್ಲಿ ಸಖತ್ತಾಗಿ ಕಂಡ ನಟಿ ಪ್ರಿಯಾಮಣಿ

    ‘ವಿರಾಟ ಪರ್ವಂ’ (Viraat Parvam) ಸಿನಿಮಾದಲ್ಲಿ ಸಾಯಿ ಪಲ್ಲವಿ ನಟನೆ ನೋಡಿ ನಾನು ಕಣ್ಣೀರು ಹಾಕಿದ್ದೆ ಎಂದು ರಿವೀಲ್ ಮಾಡಿದ್ದಾರೆ. ಬಳಿಕ ಆ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ನಟಿಯ ಸಾವಿನ ದೃಶ್ಯ ಕಣ್ಣೀರು ತರಿಸಿತ್ತು. ಇದರ ಬಗ್ಗೆ ಸಾಯಿ ಪಲ್ಲವಿ ಜೊತೆ ಕೂಡ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಅಂದಹಾಗೆ, ಸದ್ಯ ಸಾಯಿ ಪಲ್ಲವಿ ಅವರು ಬಾಲಿವುಡ್‌ಗೆ ಹಾರಿದ್ದಾರೆ. ಆಮೀರ್ ಖಾನ್ ಪುತ್ರನಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆ ನಾಗಚೈತನ್ಯ ಹೊಸ ಚಿತ್ರಕ್ಕೆ ನಟಿ ಹೀರೋಯಿನ್ ಆಗಿದ್ದಾರೆ.

  • ‘ಸ್ಪೈ’ ಕಥೆ ಹೇಳಲು ರೆಡಿಯಾದ ನಿಖಿಲ್ ಸಿದ್ಧಾರ್ಥ್

    ‘ಸ್ಪೈ’ ಕಥೆ ಹೇಳಲು ರೆಡಿಯಾದ ನಿಖಿಲ್ ಸಿದ್ಧಾರ್ಥ್

    ಟಾಲಿವುಡ್ (Tollywood) ನಟ ನಿಖಿಲ್ ಸಿದ್ಧಾರ್ಥ್ (Nikhil Siddarth)  ‘ಕಾರ್ತಿಕೇಯ 2’ ಚಿತ್ರದ ಸಕ್ಸಸ್ ನಂತರ ‘ಸ್ಪೈ’ ಕೆಲಸ ಶುರು ಮಾಡಿದ್ದಾರೆ. ವಿಭಿನ್ನ ಗೆಟಪ್‌ನಲ್ಲಿ ‘ಸ್ಪೈ’ ಕಥೆ ಹೇಳಲು ನಿಖಿಲ್ ಹೊರಟಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ನಿಖಿಲ್ ನಟನೆಯ ಈ ಚಿತ್ರದ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ.‌ ಇದನ್ನೂ ಓದಿ:ಬರ್ತ್‌ಡೇ ದಿನ ಹತ್ತಿರ ಬರುತ್ತಿದ್ದಂತೆ ಫ್ಯಾನ್ಸ್‌ಗೆ ಪ್ರಜ್ವಲ್ ದೇವರಾಜ್ ವಿಶೇಷ ಮನವಿ

    ನಿಖಿಲ್ ಸಿದ್ದಾರ್ಥ್ ನಟನೆಯ ಬಹುನಿರೀಕ್ಷಿತ ‘ಸ್ಪೈ’ (Spy) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದರ ಬೆನ್ನಲ್ಲೇ ‘ಸ್ಪೈ’ ಟ್ರೈಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್ ರೋಲ್‌ನಲ್ಲಿ ‘ಬಾಹುಬಲಿ’ ರಾಣಾ ದಗ್ಗುಭಾಟಿ (Rana Daggubati) ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

    ಖ್ಯಾತ ನಿರ್ದೇಶಕ, ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ‘ಸ್ಪೈ’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ಇಆ ಎಂಟರ್‌ಟೈನ್‌ಮೆಂಟ್‌ ಅಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಇದೇ 29ರಂದು ‘ಸ್ಪೈ’ ಸಿನಿಮಾ ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್‌ಗೆ ಲಗ್ಗೆ ಇಡಲಿದೆ.

    ಕಳೆದ ವರ್ಷ ‘ಕಾರ್ತಿಕೇಯ 2’ ಸಿನಿಮಾ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ನಿಖಿಲ್ ಸಿದ್ಧಾರ್ಥ್, ಅನುಪಮಾ ಪರಮೇಶ್ವರನ್ ನಟನೆಯ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಕಂಡಿತ್ತು. ಈಗ ‘ಸ್ಪೈ’ ನಿಖಿಲ್ ಸಾಥ್ ನೀಡಿದ್ದಾರೆ.