Tag: Nikhil Siddharth

  • ತೆಲುಗು ದೇಶಂ ಪಕ್ಷ ಸೇರಿದ ನಟ ನಿಖಿಲ್ ಸಿದ್ದಾರ್ಥ

    ತೆಲುಗು ದೇಶಂ ಪಕ್ಷ ಸೇರಿದ ನಟ ನಿಖಿಲ್ ಸಿದ್ದಾರ್ಥ

    ಲೋಕಸಭಾ ಚುನಾವಣೆ (Election) ಬೆನ್ನಲ್ಲೇ ಹಲವಾರು ನಟ ನಟಿಯರು ನಾನಾ ಪಕ್ಷಗಳನ್ನು ಸೇರುತ್ತಿದ್ದಾರೆ. ತೆಲುಗಿನ ಹೆಸರಾಂತ ನಟ ನಿಖಿಲ್ ಸಿದ್ದಾರ್ಥ್ (Nikhil Siddharth) ಇಂದು ಬೆಳಗ್ಗೆ ತೆಲುಗು ದೇಶಂ ಪಕ್ಷ (TDP) ಸೇರಿದ್ದಾರೆ. ನಿಖಿಲ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಯಾವ ಪಕ್ಷದಿಂದ ಎನ್ನುವುದು ಸಸ್ಪೆನ್ಸ್ ಆಗಿ ಉಳಿದಿತ್ತು.

    ಬಲ್ಲ ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ ಎನ್ನಲಾಗುತ್ತಿದೆ. ಮುಂಬರುವ ಆಂಧ್ರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರಂತೆ. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ ಸ್ಟಾರ್ ಪ್ರಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

    ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ನಿಖಿಲ್, ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರನ್ನು ಗುರಿಯಾಗಿರಿಸಿಕೊಂಡು ನಿಖಿಲ್ ಅವರನ್ನು ತಮ್ಮ ಪಕ್ಷಕ್ಕೆ ಎಳೆದುಕೊಂಡಿದೆ ಟಿಡಿಪಿ.

  • ಸ್ಪೈ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದು ದೋಸೆ ಚಪ್ಪರಿಸಿದ ನಟ ನಿಖಿಲ್

    ಸ್ಪೈ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಬಂದು ದೋಸೆ ಚಪ್ಪರಿಸಿದ ನಟ ನಿಖಿಲ್

    ಬೆಂಗಳೂರಿನ (Bangalore) ಸಿಟಿಆರ್ ಹೋಟೆಲ್ ದೋಸೆ ಇಂಡಿಯಾಗೆ ಫೇಮಸ್. ಈ ಹೋಟೆಲ್ ನಲ್ಲಿ ಬಂದ ಸೆಲೆಬ್ರಿಟಿಗಳೆಲ್ಲಾ ದೋಸೆ ರುಚಿ ಸವಿಯುತ್ತಾರೆ. ಅದರಂತೆ ನಿಖಿಲ್ ಸಿದ್ಧಾರ್ಥ್ (Nikhil Siddharth) ಸಿಟಿಆರ್ ಹೋಟೆಲ್ ನಲ್ಲಿ ದೋಸೆಯನ್ನು ಚಪ್ಪರಿಸಿ ತಿಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ನಿಖಿಲ್ ಜೊತೆ ಫೋಟೋಗೆ ಮುಗಿಬಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಾಫಿ ಕುಡಿದರು.

    ಸ್ಪೈ (Spy) ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಮ್ಮ ಸಿನಿಮಾದ ಪ್ರಚಾರದ ನಡುವೆಯೂ ದೋಸೆ ತಿಂದು ಸಂಭ‍್ರಮಿಸಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಸಿದ್ಧಾರ್ಥ್, ಕಾರ್ತಿಕೇಯ ಸಿನಿಮಾಗೆ ಕರ್ನಾಟಕದಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಪ್ರೇಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್ 29ಕ್ಕೆ ಬರ್ತಿರುವ ಸ್ಪೈ ಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆಕ್ಷನ್, ಎಂಟರ್‌ಟೈನರ್ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

    ನಟಿ ಐಶ್ವರ್ಯ ಮೆನನ್ (Aishwarya Menon) ಮಾತನಾಡಿ, ಇದೇ 29ಕ್ಕೆ ಸ್ಪೈ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರೂ ಚಿತ್ರಕ್ಕೆ ಬೆಂಬಲ ನೀಡಿ. ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದರು.

    ಸುಭಾಷ್ ಚಂದ್ರ ಬೋಸ್ (Subhash Chandra Bose) ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್  ಪ್ಯಾನ್ ಇಂಡಿಯಾ ಸ್ಪೈ 29ಕ್ಕೆ ಬಿಡುಗಡೆಯಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ನಿಖಿಲ್ ಸಿದ್ದಾರ್ಥ್ ಹುಟ್ಟುಹಬ್ಬಕ್ಕೆ 20ನೇ ಸಿನಿಮಾ ಅನೌನ್ಸ್

    ನಿಖಿಲ್ ಸಿದ್ದಾರ್ಥ್ ಹುಟ್ಟುಹಬ್ಬಕ್ಕೆ 20ನೇ ಸಿನಿಮಾ ಅನೌನ್ಸ್

    ತೆಲುಗು ಚಿತ್ರರಂಗದ ಉದಯೋನ್ಮುಖ ನಟ ನಿಖಿಲ್ ಸಿದ್ದಾರ್ಥ್ (Nikhil Siddharth) ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಿಖಿಲ್ ಜನುಮದಿನದ (Birthday) ಪ್ರಯುಕ್ತ ಅವರು ನಟಿಸುತ್ತಿರುವ 20ನೇ ಸಿನಿಮಾ (New Movie) ಘೋಷಣೆ ಮಾಡಲಾಗಿದೆ. ಭರತ್ ಕೃಷ್ಣಮಾಚಾರಿ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾಗೆ ಸ್ವಯಂಭೂ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

    ಪಿಕ್ಸೆಲ್ ಸ್ಟುಡಿಯೋ ಮೂಲಕ ಭುವನ್ ಹಾಗೂ ಶ್ರೀಕರ್ ಚಿತ್ರ ನಿರ್ಮಾಣ ಮಾಡುತ್ತಿದ್ದು, ಟ್ಯಾಗೋರೆ ಮಧು ಪ್ರಸ್ತುತಪಡಿಸುತ್ತಿದ್ದಾರೆ. ಸ್ವಯಂಭೂ (Swayambhu) ಎಂದರೆ ಸ್ವಯಂ ಹುಟ್ಟು ಎಂದರ್ಥ.  ಇನ್ನು, ಫಸ್ಟ್‌ ಲುಕ್ ಪೋಸ್ಟರ್ ನಲ್ಲಿ ನಿಖಿಲ್, ಉದ್ದವಾದ ಕೂದಲು ಬಿಟ್ಟು ಒಂದು ಕೈಯಲ್ಲಿ ಈಟಿ, ಮತ್ತೊಂದು ಕೈಯಲ್ಲಿ ಗುರಾಣಿ ಹಿಡಿದು ವೀರಯೋಧನಂತೆ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಮಂತಾರನ್ನು ಫೇವರೇಟ್ ಗರ್ಲ್ ಎಂದ ‘ಲೈಗರ್’ ಹೀರೋ

    ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಸ್ವಯಂಭೂ ಸಿನಿಮಾ ನಿಖಿಲ್ ಸಿದ್ದಾರ್ಥ್ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರವಾಗಿದೆ. ಮನೋಜ್ ಪರಮಹಂಸ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ವಾಸುದೇವ್ ಮುನೆಪ್ಪಗರಿ ಚಿತ್ರಕ್ಕೆ ಸಂಭಾಷಣೆಯನ್ನು ನೀಡಿದ್ದಾರೆ.

  • ಸುಭಾಷ್ ಚಂದ್ರಬೋಸ್ ಸಾವಿನ ರಹಸ್ಯ ಬಿಚ್ಚಿಡಲಿದೆ ‘ಸ್ಪೈ’ ಸಿನಿಮಾ

    ಸುಭಾಷ್ ಚಂದ್ರಬೋಸ್ ಸಾವಿನ ರಹಸ್ಯ ಬಿಚ್ಚಿಡಲಿದೆ ‘ಸ್ಪೈ’ ಸಿನಿಮಾ

    ಖಿಲ್ ಸಿದ್ದಾರ್ಥ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸ್ಪೈ (Spy) ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಅದರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಬಗೆಗಿನ ಕಥೆಯೂ ಒಂದು. ಈ ಚಿತ್ರದಲ್ಲಿ ನೇತಾಜಿಯ ಸಾವಿನ ರಹಸ್ಯವನ್ನು ಬಿಚ್ಚಿಡಲಾಗಿದೆಯಂತೆ. ಇನ್ನೂ ನಿಗೂಢವಾಗಿ ಉಳಿದಿರುವ ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು ಎನ್ನುವ ಕಥೆಯನ್ನು ಇದು ಒಳಗೊಂಡಿದೆಯಂತೆ.

    ನಿನ್ನೆಯಷ್ಟೇ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ.  ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ (Nikhil Siddharth) ಅಭಿನಯಿಸಿದ್ದು, ಐಶ್ವರ್ಯ ಮೆನನ್ (Aishwarya Menon) ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಇದನ್ನೂ ಓದಿ:ಹಾಟ್ ಅವತಾರ ತಾಳಿದ ದಿಶಾ ಪಟಾನಿ

    ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಟಿಸಿದ್ದು, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

    ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.

  • ಬ್ಯುಸಿನೆಸ್ ನಲ್ಲಿ ದಾಖಲೆ ಬರೆದ ‘ಸ್ಪೈ’ ಸಿನಿಮಾ

    ಬ್ಯುಸಿನೆಸ್ ನಲ್ಲಿ ದಾಖಲೆ ಬರೆದ ‘ಸ್ಪೈ’ ಸಿನಿಮಾ

    ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ (Nikhil Siddharth) ನಟಿಸ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ (Spy) ಬಿಡುಗಡೆಗೆ ಸಜ್ಜಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಪ್ರೀ ರಿಲೀಸ್ ಬ್ಯುಸಿನೆಸ್ ನಲ್ಲಿ ದಾಖಲೆ ಬರೆದಿದೆ. ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ (Gary BH) ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

    ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಸಿನಿಮಾ ಥಿಯೇಟರ್ ಹಕ್ಕು ಹೊರತುಡಪಡಿಸಿ ಉಳಿದೆಲ್ಲಾ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಅಮೇಜಾನ್ ಹಾಗೂ ಸ್ಟಾರ್ ನೆಟ್ವರ್ಕ್ ಜೊತೆಗೂಡಿ ಸ್ಪೈ ಸಿನಿಮಾದ ನಾನ್ ಥಿಯೇಟ್ರಿಕಲ್ ಹಕ್ಕನ್ನು 40 ಕೋಟಿಗೆ ಖರೀದಿ ಮಾಡಿದೆ.  ಇದನ್ನೂ ಓದಿ: ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

    ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ.

    ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಈ ಸಿನಿಮಾ ಜೊತೆಗೆ ED ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಮತ್ತೆರಡು ಹೊಸ ಪ್ರಾಜೆಕ್ಟ್ ತಯಾರಾಗಲಿದ್ದು, ಡಿಜೆ ಟಿಲ್ಲು ಖ್ಯಾತಿಯ ನಿರ್ದೇಶಕ ವಿಮಲ್ ಕೃಷ್ಣ ನಿರ್ದೇಶನಲ್ಲೊಂದು ಸಿನಿಮಾ ಬರಲಿದೆ.

  • ಕನ್ನಡದಲ್ಲೂ ನಿಖಿಲ್ ಸಿದ್ಧಾರ್ಥ್ ನಟನೆಯ ‘ಕಾರ್ತಿಕೇಯ-2’ ಸಿನಿಮಾದ ಟೀಸರ್

    ಕನ್ನಡದಲ್ಲೂ ನಿಖಿಲ್ ಸಿದ್ಧಾರ್ಥ್ ನಟನೆಯ ‘ಕಾರ್ತಿಕೇಯ-2’ ಸಿನಿಮಾದ ಟೀಸರ್

    ಟಾಲಿವುಡ್ ಚಿತ್ರರಂಗದ ಯುವ ಪ್ರತಿಭಾನ್ವಿತ ನಟ ನಿಖಿಲ್ ಸಿದ್ಧಾರ್ಥ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕಾರ್ತಿಕೇಯ-2 ಚಿತ್ರದ ಟೀಸರ್ ರಿಲೀಸ್ ಆಗಿದೆ. ಎಪಿಕ್ ಅಡ್ವೆಂಚರ್ಸ್ ಜರ್ನಿಯ ಕಥಾನಕದ ಈ ಚಿತ್ರದಲ್ಲಿ ನಿಖಿಲ್ ಕಾರ್ತಿಕೇಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು, ತಮಿಳು, ಹಿಂದಿ, ಮಲಯಾಳಂ ಜೊತೆಗೆ ಕನ್ನಡದಲ್ಲಿಯೂ ಟೀಸರ್ ಬಿಡುಗಡೆಯಾಗಿದೆ.

    ಅನುಪಮ ಪರಮೇಶ್ವರನ್, ಅನುಪಮ್ ಖೇರ್, ಶ್ರೀನಿವಾಸ್ ರೆಡ್ಡಿ, ಹರ್ಷ, ಆದಿತ್ಯ ಮೆನನ್ ಸೇರಿದಂತೆ ಹಲವರು ನಟಿಸಿದ್ದಾರೆ.  ಕಾರ್ತಿಕೇಯ 2 ಚಂದೂ ಮೊಂಡೇಟಿ ನಿರ್ದೇಶಿಸಿದ್ದು, ಪೀಪಲ್ ಮೀಡಿಯಾ ಫ್ಯಾಕ್ಟರಿ ಮತ್ತು ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್‌ ನಡಿ ಸಿನಿಮಾ ನಿರ್ಮಿಸಲಾಗಿದೆ.  ಟೀಸರ್ ಮೂಲಕ ಸಖತ್ ಸದ್ದು ಮಾಡ್ತಿರುವ ಕಾರ್ತಿಕೇಯ-2 ಸಿನಿಮಾ ಆಗಸ್ಟ್ 12ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯ ಚಿತ್ರತೆರೆಗೆ ಬರ್ತಿದೆ. ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ಕಾಲ ಭೈರವ ಸಂಗೀತವಿರುವ ಕಾರ್ತಿಕೇಯ-2 ಸಿನಿಮಾ ಇದೇ ತಿಂಗಳ 22ಕ್ಕೆ ವರ್ಲ್ಡ್ ವೈಡ್ ರಿಲೀಸ್ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಇದೇ ದಿನ ನಾಗ ಚೈತನ್ಯ ನಟನೆಯ ಥ್ಯಾಂಕೂ ಸಿನಿಮಾ ಬರ್ತಿರುವುದರಿಂದ ಚಿತ್ರತಂಡ ಸಿನಿಮಾ ಪೋಸ್ಟ್ ಪೋನ್ ಮಾಡಿದೆ. ಈ ಬಗ್ಗೆ ಕೆಲ ದಿನಗಳ ಹಿಂದಷ್ಟೇ ನಿಖಿಲ್ ಸಿದ್ಧಾರ್ಥ್ ಮಾಹಿತಿ‌ ನೀಡಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಲಾಕ್‍ಡೌನಲ್ಲಿ ಒಂದಾದ ಜೋಡಿಹಕ್ಕಿ – ಪ್ರೇಯಸಿ ಜೊತೆ ಸಪ್ತಪದಿ ತುಳಿದ ನಿಖಿಲ್ ಸಿದ್ಧಾರ್ಥ್

    ಲಾಕ್‍ಡೌನಲ್ಲಿ ಒಂದಾದ ಜೋಡಿಹಕ್ಕಿ – ಪ್ರೇಯಸಿ ಜೊತೆ ಸಪ್ತಪದಿ ತುಳಿದ ನಿಖಿಲ್ ಸಿದ್ಧಾರ್ಥ್

    ಹೈದರಾಬಾದ್: ಟಾಲಿವುಡ್ ನಟ ‘ಹ್ಯಾಪಿಡೇಸ್’ ಖ್ಯಾತಿಯ ನಿಖಿಲ್ ಸಿದ್ಧಾರ್ಥ್ ಇಂದು ತಮ್ಮ ಪ್ರೇಯಸಿ ಪಲ್ಲವಿ ವರ್ಮಾ ಜೊತೆ ವಿವಾಹವಾಗಿದ್ದಾರೆ. ಲಾಕ್‍ಡೌನ್ ನಡುವೆ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ನವಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಹೈದರಾಬಾದ್‍ನ ಶಮೀರ್‍ಪೇಟೆಯಲ್ಲಿನ ಫಾರೆಸ್ಟ್ ರಿಡ್ಜ್ ವಿಲ್ಲಾದಲ್ಲಿ ನಿಖಿಲ್ ಪಲ್ಲವಿ ವಿವಾಹ ನೆರವೇರಿತು. ಕೊರೊನಾ ವೈರಸ್ ಭೀತಿ ಹಾಗೂ ಲಾಕ್‍ಡೌನ್ ಹಿನ್ನೆಲೆ ಕೇವಲ ಸೀಮಿತ ಬಂಧು ಬಳಗ ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು. ಲಾಕ್‍ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ನಿಖಿಲ್ ಪಲ್ಲವಿ ವಿವಾಹವಾಗಿದ್ದಾರೆ. ಶುಭಕಾರ್ಯಕ್ಕೆ ಆಗಮಿಸಿದ್ದ ಬಂಧುಗಳು ಕೂಡ ಮಾಸ್ಕ್ ಧರಿಸಿ ನಿಯಮಗಳನ್ನು ಪಾಲನೆ ಮಾಡಿ ನವಜೋಡಿಗೆ ಆಶೀರ್ವದಿಸಿದ್ದಾರೆ.

    ಈ ಹಿಂದೆ ಗೋವಾದಲ್ಲಿ ಫಿಲ್ಮಿ ಸ್ಟೈಲ್‍ನಲ್ಲಿ ನಿಖಿಲ್ ಪ್ರೇಯಸಿ ಪಲ್ಲವಿ ಅವರಿಗೆ ಪ್ರಪೋಸ್ ಮಾಡಿದ್ದರು. ಪಲ್ಲವಿ ವೃತ್ತಿಯಲ್ಲಿ ವೈದ್ಯೆ ಆಗಿದ್ದು, ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಹೀಗಾಗಿ ಮನೆಯಲ್ಲಿ ತಮ್ಮ ಪ್ರೀತಿಯ ಬಗ್ಗೆ ತಿಳಿಸಿ, ಎಲ್ಲರ ಒಪ್ಪಿಗೆ ಪಡೆದು ಈ ಜೋಡಿ ಸದ್ದಿಲ್ಲದೆ ಹೈದರಾಬಾದ್‍ನಲ್ಲಿ ಫೆ. 1ರಂದು ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದರು. ಏಪ್ರಿಲ್ 16ರಂದು ನಿಖಿಲ್ ಪಲ್ಲವಿ ಮದುವೆ ನಿಶ್ಚಯವಾಗಿತ್ತು. ಆದರೆ ಲಾಕ್‍ಡೌನ್ ಹಿನ್ನೆಲೆ ಈ ಶುಭಕಾರ್ಯವನ್ನು ಮುಂದೂಡಲಾಗಿತ್ತು. ಸದ್ಯ ಇಂದು ನಿಖಿಲ್ ಪಲ್ಲವಿ ವಿವಾಹ ನೆರವೇರಿದ್ದು, ಈ ಜೋಡಿ ಹಕ್ಕಿಗಳು ಒಂದಾಗಿದ್ದಾರೆ.

    ತೆಲುಗಿನಲ್ಲಿ ತೆರೆಕಂಡ ‘ಹ್ಯಾಪಿಡೇಸ್’, ‘ಸ್ವಾಮಿ ರಾ ರಾ’, ‘ಕಾರ್ತಿಕೇಯ’, ‘ಸೂರ್ಯ ವರ್ಸಸ್ ಸೂರ್ಯ’, ‘ಶಂಕರಾಭರಣಂ’ ಸೇರಿದಂತೆ ಅವರು ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಿಖಿಲ್ ಅಭಿನಯಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಅರ್ಜುನ್ ಸುರವರಂ’ ಸಿನಿಮಾ ಕೂಡ ನಿಖಲ್‍ಗೆ ಒಳ್ಳೆ ಹೆಸರು ತಂದುಕೊಟ್ಟಿತ್ತು.

    ಕನ್ನಡದಲ್ಲಿ ತೆರಕಂಡು ಸೂಪರ್ ಹಿಟ್ ಸಿನಿಮಾ ‘ಕಿರಿಕ್ ಪಾರ್ಟಿ’ ಚಿತ್ರವನ್ನು ತೆಲುಗಿನಲ್ಲಿ ‘ಕಿರಾಕ್ ಪಾರ್ಟಿ’ ಎಂದು ರಿಮೇಕ್ ಮಾಡಲಾಗಿತ್ತು. ಕನ್ನಡದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಿಭಾಯಿಸಿದ್ದ ಪಾತ್ರವನ್ನು ತೆಲುಗಿನಲ್ಲಿ ನಿಖಿಲ್ ನಿಭಾಯಿಸಿದ್ದರು. ಈ ಚಿತ್ರ ಕೂಡ ಹಿಟ್ ಆಗಿತ್ತು.

  • ಗೋವಾದಲ್ಲಿ ಫಿಲ್ಮಿ ಸ್ಟೈಲ್ ಪ್ರಪೋಸ್ – ಏಪ್ರಿಲ್ 16ಕ್ಕೆ ಪ್ರೇಯಸಿಯೊಂದಿಗೆ ನಿಖಿಲ್ ಮದ್ವೆ

    ಗೋವಾದಲ್ಲಿ ಫಿಲ್ಮಿ ಸ್ಟೈಲ್ ಪ್ರಪೋಸ್ – ಏಪ್ರಿಲ್ 16ಕ್ಕೆ ಪ್ರೇಯಸಿಯೊಂದಿಗೆ ನಿಖಿಲ್ ಮದ್ವೆ

    ಹೈದರಾಬಾದ್: ಇತ್ತೀಚೆಗಷ್ಟೇ ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ನಿಶ್ಚಯವಾಗಿರುವ ಸುದ್ದಿ ಸಖತ್ ಸದ್ದು ಮಾಡಿತ್ತು. ಆದ್ರೆ ಈಗ ನಾವು ತಿಳಿಸುತ್ತಿರೋದು ಸ್ಯಾಂಡಲ್‍ವುಡ್ ನಟ ನಿಖಿಲ್ ಮದ್ವೆ ಬಗ್ಗೆ ಅಲ್ಲ, ಟಾಲಿವುಡ್ ನಟ ನಿಖಿಲ್ ಸಿದ್ಧಾರ್ಥ್ ಮದುವೆ ಬಗ್ಗೆ.

    ಹೌದು. ‘ಹ್ಯಾಪಿಡೇಸ್’ ಸಿನಿಮಾ ಖ್ಯಾತಿಯ ನಿಖಿಲ್ ಸಿದ್ದಾರ್ಥ್ ಸದ್ಯ ತಮ್ಮ ಪ್ರೇಯಸಿ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಗೋವಾದಲ್ಲಿ ಫಿಲ್ಮಿ ಸ್ಟೈಲ್‍ನಲ್ಲಿ ನಿಖಿಲ್ ಪ್ರೇಯಸಿ ಡಾ. ಪಲ್ಲವಿ ವರ್ಮಾ ಅವರಿಗೆ ಪ್ರಪೋಸ್ ಮಾಡಿದ್ದರು. ಪಲ್ಲವಿ ವೃತ್ತಿಯಲ್ಲಿ ವೈದ್ಯೆ ಆಗಿದ್ದು, ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಹೀಗಾಗಿ ಮನೆಯಲ್ಲಿ ತಮ್ಮ ಪ್ರೀತಿಯ ಬಗ್ಗೆ ತಿಳಿಸಿ, ಎಲ್ಲರ ಒಪ್ಪಿಗೆ ಪಡೆದು ಈ ಜೋಡಿ ಸದ್ದಿಲ್ಲದೆ ಹೈದರಾಬಾದ್‍ನಲ್ಲಿ ಫೆ. 1ರಂದು ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದಾರೆ.

    ಹೈದರಾಬಾದ್‍ನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಿಖಿಲ್-ಪಲ್ಲವಿ ನಿಶ್ಚಿತಾರ್ಥವನ್ನು ಶಾಸ್ತ್ರೋಕ್ತವಾಗಿ ಮಾಡಿಕೊಂಡಿದ್ದಾರೆ. ಅಲ್ಲದೇ ಏಪ್ರಿಲ್ 16ರಂದು ಮದುವೆ ದಿನಾಂಕ ಫಿಕ್ಸ್ ಆಗಿದ್ದು, ಅದ್ದೂರಿಯಾಗಿ ಈ ಜೋಡಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ತೆಲುಗಿನಲ್ಲಿ ತೆರೆಕಂಡ ‘ಹ್ಯಾಪಿಡೇಸ್’, ‘ಸ್ವಾಮಿ ರಾ ರಾ’, ‘ಕಾರ್ತಿಕೇಯ’, ‘ಸೂರ್ಯ ವರ್ಸಸ್ ಸೂರ್ಯ’, ‘ಶಂಕರಾಭರಣಂ’ ಸೇರಿದಂತೆ ಅವರು ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಿಖಿಲ್ ಅಭಿನಯಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಅರ್ಜುನ್ ಸುರವರಂ’ ಸಿನಿಮಾ ಕೂಡ ನಿಖಲ್‍ಗೆ ಒಳ್ಳೆ ಹೆಸರು ತಂದುಕೊಟ್ಟಿತ್ತು.

    ಕನ್ನಡದಲ್ಲಿ ತೆರಕಂಡು ಸೂಪರ್ ಹಿಟ್ ಸಿನಿಮಾ ‘ಕಿರಿಕ್ ಪಾರ್ಟಿ’ ಚಿತ್ರವನ್ನು ತೆಲುಗಿನಲ್ಲಿ ‘ಕಿರಾಕ್ ಪಾರ್ಟಿ’ ಎಂದು ರಿಮೇಕ್ ಮಾಡಲಾಗಿತ್ತು. ಕನ್ನಡದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಿಭಾಯಿಸಿದ್ದ ಪಾತ್ರವನ್ನು ತೆಲುಗಿನಲ್ಲಿ ನಿಖಿಲ್ ನಿಭಾಯಿಸಿದ್ದರು. ಈ ಚಿತ್ರ ಕೂಡ ಹಿಟ್ ಆಗಿತ್ತು.