Tag: Nikhil Yellidiyappa

  • ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

    ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

    ಮಡಿಕೇರಿ: ನೂತನ ಸಂಸದ ಪ್ರತಾಪ್ ಸಿಂಹ ಗೆಲುವನ್ನು ಸಂಭ್ರಮಿಸಲು ಬಿಜೆಪಿ ಕಾರ್ಯಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಪ್ರತಾಪ್ ಸಿಂಹ ಮೊದಲ ಭೇಟಿ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ. ಈ ವೇಳೆ ಕಾಯರ್ಕಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕುಣಿದು ಸಂಭ್ರಮಿಸಿದ್ದಾರೆ.

    ಸೋಮವಾರಪೇಟೆಯ ಕಕ್ಕೆಹೊಳೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ನೂರಾರು ಕಾರ್ಯಕರ್ತರು ಪ್ರತಾಪ್ ಸಿಂಹ ಅವರ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪ್ರತಾಪ್ ಸಿಂಹ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ದು ಸಂಸದರಿಗೆ, ಹಾಸನದ ಪರಾಚಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಸಾಥ್ ನೀಡಿದ್ದರು. ಮೆರವಣಿಗೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್ ಭಾಗಿಯಾಗಿದ್ದರು.

  • 18ರವರೆಗೆ ಮಂಡ್ಯದಲ್ಲಿ ನಿಖಿಲ್ ಎಲ್ಲಿದೀಯಪ್ಪ, ಬಳಿಕ ಆನಂದ್ ಎಲ್ಲಿದೀಯಪ್ಪ ಎಂದು ಹುಡುಕ್ತಾರೆ: ಅನಂತ್ ಕುಮಾರ್ ಹೆಗಡೆ

    18ರವರೆಗೆ ಮಂಡ್ಯದಲ್ಲಿ ನಿಖಿಲ್ ಎಲ್ಲಿದೀಯಪ್ಪ, ಬಳಿಕ ಆನಂದ್ ಎಲ್ಲಿದೀಯಪ್ಪ ಎಂದು ಹುಡುಕ್ತಾರೆ: ಅನಂತ್ ಕುಮಾರ್ ಹೆಗಡೆ

    ಕಾರವಾರ: 18ನೇ ತಾರೀಕಿನವರೆಗೆ ನಿಖಿಲ್ ಎಲ್ಲಿದೀಯಪ್ಪ ಎಂದು ಮಂಡ್ಯದಲ್ಲಿ ನಿಖಿಲ್‍ಗಾಗಿ ಹುಡುಕುತ್ತಾರೆ. ನಂತರ ಇಲ್ಲಿಗೆ ಬಂದು ಆನಂದ್ ಎಲ್ಲಿದೀಯಪ್ಪ ಎಂದು ಹುಡುಕುತ್ತಾರೆ. 18ನೇ ತಾರೀಕಿನ ನಂತರ ಕುಂಬಳಕಾಯಿ, ನಿಂಬೆಹಣ್ಣುಗಳು ಬರುತ್ತವೆ ಎಂದು ಕುಮಾರಸ್ವಾಮಿ, ರೇವಣ್ಣರವರನ್ನು ಕೇಂದ್ರ ಸಚಿವ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

    ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆನಂದ್ ಆಸ್ನೋಟಿಕರ್ ನಾನು ಕುಲದೇವರು ಎಂದು ಒಂದು ಸಾರಿ ಹೇಳುತ್ತಾರೆ. ದೇಶಪಾಂಡೆ ಕುಲದೇವರು ಎಂದು ಹೇಳುತ್ತಾರೆ. ಅವರಿಗೆ ಎಷ್ಟು ಕುಲದೇವರಿದ್ದಾರೆ ಎಂದು ಗೊತ್ತಿಲ್ಲ ಎಂದರು.

    ಪ್ರತಿ ವರ್ಷ ಕುಲದೇವರು ಬದಲಾಗುತ್ತೆ. ಇಂತವರು ಇಂದು ಬಂದು ವೋಟನ್ನು ಕೇಳುತ್ತಾರೆ. ಗೋಸುಂಬೆ ಹೇಗೆ ಬದಲಾಯಿಸುತ್ತದೆ ಹಾಗೆ ಬದಲಾಯಿಸುತ್ತಾರೆ. ಇಂದು ಒಂದು ಪಾರ್ಟಿ, ನಾಳೆ ಒಂದು ಪಾರ್ಟಿ. ಮುಂದಿನ ವರ್ಷ ಸೋತರೂ ಈ ಪಕ್ಷದಲ್ಲಿ ಇರುವುದಿಲ್ಲ ಎಂದು ಆನಂದ್ ಆಸ್ನೋಟಿಕರ್‍ಗೆ ಟಾಂಗ್ ನೀಡಿದರು.

    ಬಿಜೆಪಿ ಮುಖಂಡರ ಮನೆಗಳಿಗೆ ಐಟಿ ದಾಳಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು ಎಲ್ಲೆಲ್ಲಿ ದಾಳಿ ಮಾಡಬೇಕೋ ಅಲ್ಲಲ್ಲಿ ದಾಳಿ ಮಾಡಲು ಅಧಿಕಾರವಿದೆ. ಇದಕ್ಕೆ ನಮ್ಮ ಸ್ವಾಗತ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಹುಡುಕಲಿ. ತಪ್ಪಿದ್ದರೇ ಯಾವುದನ್ನೂ ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ ಎಂದರು.

  • ನಿಖಿಲ್ ಎಲ್ಲಿದ್ದೀಯಪ್ಪ ಎಂಬ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ಸಿಎಂ ಕುಮಾರಸ್ವಾಮಿ

    ನಿಖಿಲ್ ಎಲ್ಲಿದ್ದೀಯಪ್ಪ ಎಂಬ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ಸಿಎಂ ಕುಮಾರಸ್ವಾಮಿ

    ಮಂಡ್ಯ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಟ್ರೋಲ್ ಆಗುತ್ತಿರುವ ನಿಖಿಲ್ ಎಲ್ಲಿದ್ದೀಯಪ್ಪ ಪ್ರಶ್ನೆಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಕೊನೆಗೂ ಉತ್ತರ ನೀಡಿದ್ದಾರೆ.

    ಕೆಆರ್ ನಗರದ ನಾರಾಯಣಪುರ ಗ್ರಾಮದಲ್ಲಿರುವ ಯುವಕರ ಬಳಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಒಂದು ತಂಡ ಇದೆ. ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ರೀತಿಯ ಕೆಟ್ಟ ಅಭಿರುಚಿ ಇಟ್ಟುಕೊಂಡು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಹೇಳಿದರು.

    ಈ ವೇಳೆ ನಿಖಿಲ್ ಎಲ್ಲಿದ್ದೀಯಪ್ಪ, ನಿಖಿಲ್ ಎಲ್ಲಿದ್ದೀಯಪ್ಪ ಎಂದು ಬಹಳ ಚರ್ಚೆ ಆಗುತ್ತಿದೆ ಈ ಬಗ್ಗೆ ಸ್ವಲ್ಪ ಮಾತನಾಡಿ ಎಂದು ಯುವಕರು ಸಿಎಂ ಬಳಿ ಕೇಳಿಕೊಂಡರು. ಈ ವೇಳೆ ಸಿಎಂ, ಯುವಕರು ಈ ಟ್ರೋಲ್‍ಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಆ ಟ್ರೋಲ್ ಮಾಡುವರು ಯಾರೋ? ನಿಖಿಲ್ ಎಲ್ಲಿದ್ದೀಯಪ್ಪ ಎಂದರೆ ಅವನು ನಮ್ಮ ಹೃದಯದಲ್ಲಿ ಇದ್ದಾನೆ ಎನ್ನಬೇಕು ಎಂದು ಹೇಳಿದರು.

    ‘ಜಾಗ್ವಾರ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಕೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.

  • ನಿಖಿಲ್ ಎಲ್ಲಿದ್ದೀಯಪ್ಪ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ: ತಾರಾ

    ನಿಖಿಲ್ ಎಲ್ಲಿದ್ದೀಯಪ್ಪ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ: ತಾರಾ

    ಬೆಳಗಾವಿ: ‘ನಿಖಿಲ್ ಎಲ್ಲಿದ್ದೀಯಪ್ಪ’ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ ಎಂದು ಬಿಜೆಪಿ ಮಾಜಿ ಎಂಎಲ್‍ಸಿ ನಟಿ ತಾರಾ ಹೇಳಿದ್ದಾರೆ.

    ನನಗೆ ಪಾತ್ರ ಚೆನ್ನಾಗಿ ಇದೆ ಅನಿಸಿದರೆ ಹಾಗೂ ಕಥಾಹಂದರ ಇಷ್ಟ ಆದರೆ ಖಂಡಿತವಾಗಿ ನಾನು ಅಭಿನಯಿಸುತ್ತೇನೆ. ಚಿತ್ರದ ನಿರ್ದೇಶಕರು ಕಥೆ ಹಂದರ ಹೇಗೆ ಕಟ್ಟಿದ್ದಾರೆ ಎಂಬುದು ಮುಖ್ಯ. ಒಳ್ಳೆಯ ನಿರ್ದೇಶಕ, ಕಥೆ ಮತ್ತು ಸಂಭಾವನೆ ಸಿಕ್ಕರೆ ಚಿತ್ರ ಮಾಡುತ್ತೇನೆ. ಪಾತ್ರ ಹೇಗಿದೆ ಎಂಬುದನ್ನು ನೋಡುತ್ತೇನೆ ಎಂದರು.

    ಇತ್ತೀಚೆಗೆ ನಿಖಿಲ್ ಎಲ್ಲಿದ್ದೀಯಪ್ಪ ಟೈಟಲ್ ನಲ್ಲಿ ಸಿನಿಮಾ ಮಾಡಲು ಹಲವರು ಪ್ಲಾನ್ ಮಾಡಿದ್ದಾರೆ. ಒಟ್ಟು 7 ರಿಂದ 8 ಚಿತ್ರತಂಡಗಳು ಟೈಟಲ್ ಕೊಡುವಂತೆ ಫಿಲಂ ಚೇಂಬರ್ ಗೆ ಮನವಿ ಮಾಡಿದೆ. ಆದರೆ ಇದೆಲ್ಲ ರಾಜಕೀಯಕ್ಕೆ ಸಂಬಂಧಿಸುವುದರಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ನೀಡಲು ನಿರಾಕರಿಸಿದೆ.

    ಸಿನಿಮಾ ನಟರ ಕುರಿತು ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ತಾರಾ ಅವರು, ಸಿಎಂ ಮಗ ಸೋಲುವ ಭಯದಲ್ಲಿ ಈ ರೀತಿ ಮಾತಾಡುತ್ತಿದ್ದಾರೆ. ಯಾರೇ ಆಗಲಿ ವೈಯಕ್ತಿಕ ತೇಜೋವಧೆ ಮಾಡಬಾರದು ಎಂದು ನಟಿ ತಾರಾ ಹೇಳಿದರು.

    ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಹೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.

  • ‘ನಿಖಿಲ್ ಎಲ್ಲಿದ್ದೀಯಪ್ಪ’ ಸಿನಿಮಾ ಟೈಟಲ್‍ಗೆ ಫುಲ್ ಡಿಮ್ಯಾಂಡ್

    ‘ನಿಖಿಲ್ ಎಲ್ಲಿದ್ದೀಯಪ್ಪ’ ಸಿನಿಮಾ ಟೈಟಲ್‍ಗೆ ಫುಲ್ ಡಿಮ್ಯಾಂಡ್

    ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್‍ಗೆ ಈಗ ಫುಲ್ ಡಿಮ್ಯಾಂಡ್ ಆಗಿದೆ. ನಿಖಿಲ್ ಎಲ್ಲಿದ್ದೀಯಪ್ಪ ಸಿನಿಮಾ ಟೈಟಲ್‍ಗೆ ಈಗ ಭರ್ಜರಿ ಬೇಡಿಕೆಯಾಗಿದೆ.

    ನಿಖಿಲ್ ಎಲ್ಲಿದ್ದೀಯಪ್ಪ ಶೀರ್ಷಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಾಕಷ್ಟು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಮಂಡ್ಯದ ಚುನಾವಣಾ ಕಣವೇ ಸಿನಿಮಾ ಕಥೆಯಾಗಿದ್ದು, “ಮಂಡ್ಯದ ಹೆಣ್ಣು”, “ಜೋಡೆತ್ತು”, “ಕಳ್ಳೆತ್ತು” ಟೈಟಲ್ ನೋಂದಣಿಗೂ ಫುಲ್ ಡಿಮ್ಯಾಂಡ್ ಶುರುವಾಗಿದೆ.

    ನಿಖಿಲ್ ಎಲ್ಲಿದ್ದೀಯಪ್ಪ ಟೈಟಲ್ ನಲ್ಲಿ ಸಿನಿಮಾ ಮಾಡಲು ಹಲವರು ಪ್ಲಾನ್ ಮಾಡಿದ್ದಾರೆ. ಒಟ್ಟು 7 ರಿಂದ 8 ಚಿತ್ರತಂಡಗಳು ಟೈಟಲ್ ಕೊಡುವಂತೆ ಫಿಲಂ ಚೇಂಬರ್ ಗೆ ಮನವಿ ಮಾಡಿದೆ. ಆದರೆ ಇದೆಲ್ಲ ರಾಜಕೀಯಕ್ಕೆ ಸಂಬಂಧಿಸುವುದರಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ನೀಡಲು ನಿರಾಕರಿಸಿದೆ.

    ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಹೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.