ನವದೆಹಲಿ: ಆತ್ಮಹತ್ಯೆಗೆ ಶರಣಾದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ (Techie Atul Subhash) ಅವರ ಮಗ ತಾಯಿಯೊಂದಿಗೆ ಇರುತ್ತಾನೆ ಎಂದು ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿದೆ.
ಡಿಸೆಂಬರ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಮಗ ನಾಲ್ಕು ವರ್ಷದ ಬಾಲಕನ ಪಾಲನೆಯ ಜವಾಬ್ದಾರಿಯನ್ನು ಆತನ ಪತ್ನಿ ನಿಕಿತಾ ಸಿಂಘಾನಿಯಾ ವಹಿಸಿಕೊಳ್ಳಲಿ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ನನ್ನ ಮೊಮ್ಮಗ ಬದುಕಿದ್ದಾನಾ? – ಮಾಧ್ಯಮದ ಮುಂದೆ ಕಣ್ಣೀರಿಟ್ಟ ಅತುಲ್ ತಂದೆ
ಪುತ್ರನನ್ನು ತಮ್ಮ ಸುಪರ್ದಿಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಎಸ್.ಸಿ. ಶರ್ಮಾ ಅವರು ವೀಡಿಯೊ ಲಿಂಕ್ ಮೂಲಕ ಮಗುವಿನೊಂದಿಗೆ ಮಾತನಾಡಿದ ಬಳಿಕ ತೀರ್ಪು ನೀಡಿದ್ದಾರೆ.
ವಿಚಾರಣೆ ಆರಂಭವಾಗುತ್ತಿದ್ದಂತೆ, ಅರ್ಜಿದಾರರು ಹೆಚ್ಚು ವಿವರವಾದ ಅಫಿಡವಿಟ್ ಸಲ್ಲಿಸಲು ಒಂದು ವಾರದ ಸಮಯಾವಕಾಶ ಕೋರಿದರು. ಆದರೆ ನ್ಯಾಯಮೂರ್ತಿ ನಾಗರತ್ನ ಅವರು, ಅಂತಹ ಯಾವುದೇ ವಿನಂತಿ ನೀಡಲ್ಲ ಎಂದು ವಜಾಗೊಳಿಸಿದರು. ಇದು ಹೇಬಿಯಸ್ ಕಾರ್ಪಸ್ (ಅರ್ಜಿ). ನಾವು ಮಗುವನ್ನು ನೋಡಲು ಬಯಸುತ್ತೇವೆ. ಮಗುವನ್ನು ಹಾಜರುಪಡಿಸಿ. ಸ್ವಲ್ಪ ಸಮಯದ ನಂತರ ನ್ಯಾಯಾಲಯವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಟೆಕ್ಕಿ ಅತುಲ್ ಆತ್ಮಹತ್ಯೆ ಕೇಸ್ – ತಲೆಮರೆಸಿಕೊಂಡಿದ್ದ ಪತ್ನಿ ಬಂಧನ
ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ (Atul Subhash Suicide Case) ತನಿಖೆಗೆ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನ ನೇಮಕ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಮೊದಲು ಸಬ್ ಇನ್ಸ್ಪೆಕ್ಟರ್ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು, ಇದೀಗ ಪ್ರಕರಣ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿರುವ ಹಿನ್ನಲೆ, ಮಾರತಹಳ್ಳಿ ಠಾಣೆ ಇನ್ಸ್ಪೆಕ್ಟರ್ಗೆ ಅಧಿಕಾರಿ ತನಿಖೆ ಹೊಣೆ ನೀಡಲಾಗಿದೆ. ಈ ನಡುವೆ ಹೊಸ ಹೊಸ ವಿಚಾರಗಳು ಬೆಳಿಕೆ ಬಂದಿವೆ.
ಡಿಸೆಂಬರ್ 9ರಂದು ರಾತ್ರಿ 1 ಗಂಟೆ 31 ನಿಮಿಷದ ವೇಳೆಗೆ ʻನಿಮ್ಮ ಕೈಯಲ್ಲಿ ದೊಡ್ಡ ಅಧಿಕಾರ ಇದೆ, ಮನಸ್ಸು ಮಾಡಿದ್ರೆ ದೇಶದಲ್ಲಿ ಬದಲಾವಣೆ ತರ್ಬೋದು, ಅಸಮರ್ಥ ಮತ್ತು ಪಕ್ಷಪಾತಿ ನ್ಯಾಯಾಧೀಶರನ್ನು ವಜಾಗೊಳಿಸಬೇಕುʼ ಎಂದು ಉಲ್ಲೇಖಿಸಿ ಮೇಲ್ ಕಳುಹಿಸಿದ್ದಾನೆ. ಅಲ್ಲದೇ ತನ್ನ ಮೇಲೆ ಸುಳ್ಳು ಕೇಸ್, ಸೆಕ್ಷನ್ಗಳನ್ನ ಹಾಕಿದ್ದಾರೆಂದು ಎಂದು ಮೇಲ್ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ರೀತಿಯ ಇ-ಮೇಲ್ವೊಂದನ್ನು ಸುಪ್ರೀಂ ಕೋರ್ಟ್ ಜಡ್ಜ್ಗೂ ಕಳುಹಿಸಿದ್ದಾರೆ ಅತುಲ್ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ
ಪ್ರಕರಣದ ಪ್ರಮುಖ ಅಂಶಗಳು:
* ನಿಖಿತಾ ಮತ್ತು ಸುಭಾಷ್ ಅತುಲ್ 26 ಏಪ್ರಿಲ್ 2019 ರಲ್ಲಿ ಮ್ಯಾಟ್ರಿಮೋನಿ ಮೂಲಕ ಮದುವೆ
* 2020 ರಲ್ಲಿ ಒಂದು ಗಂಡು ಮಗುವಿಗೆ ಜನ್ಮ
* 17 ಮಾರ್ಚ್ 2021 ರಿಂದ ಇಬ್ಬರ ನಡುವೆ ಕೌಟುಂಬಿಕ ಕಲಹ ಪ್ರಾರಂಭ ಆಯ್ತು.. ನಿಖಿತಾ ದೂರಿನ ಪ್ರಕಾರ ಅತುಲ್ ಮತ್ತು ತಾಯಿಯಿಂದ ಹಲ್ಲೆ.
* 24 ಏಪ್ರಿಲ್ 2022 ರಲ್ಲಿ ಉತ್ತರ ಪ್ರದೇಶದ ಜೌನಪುರದಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಾಗಿತ್ತು.
* ಈ ಪ್ರಕರಣದಲ್ಲಿ, ಅತುಲ್, ತಂದೆ – ತಾಯಿ, ಬಾಮೈದಾ ಎಲ್ಲರ ವಿರುದ್ಧ ದೂರು ದಾಖಲಾಗಿತ್ತು.
* ವರದಕ್ಷಿಣೆ ಕಿರುಕುಳ, ಅಸಹಜ ಲೈಂಗಿಕ ಕ್ರಿಯೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿತ್ತು.
* ಅತುಲ್ ತಂದೆ 10 ಲಕ್ಷ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆ ಎಂದು ಆರೋಪವಿತ್ತು.
* ಆಗಸ್ಟ್ 16, 2019 ರಂದು ನಿಖಿತಾ ಬಳಿ 10 ಲಕ್ಷ ಹಣಕ್ಕಾಗಿ ಬೇಡಿಕೆ
* ಹಣ ನೀಡದೇ ಇದ್ದಾಗ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ಆರೋಪ
* ಅತುಲ್ ಕುಡಿದು ನಿರಂತರವಾಗಿ ಹಲ್ಲೆ ನಡೆಸಿದ್ದ ಆರೋಪ
* ಅತುಲ್ ಕುಟುಂಬದ ಮಾನಸಿಕ ಕಿರುಕುಳಕ್ಕೆ ನಿಖಿತಾ ತಂದೆ ಆಗಸ್ಟ್ 17, 2019 ರಂದು ಸಾವನ್ನಪ್ಪಿದ ಆರೋಪ
ಬೆಂಗಳೂರು: ಮಾರತಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ (Atul Subhash Suicide Case) ಸಂಬಂಧಿಸಿದಂತೆ ಪತ್ನಿ ನಿಕಿತಾ ಸಿಂಘಾನಿಯಾ (Nikita Singhania) ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ (Marathahalli Police Station) ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ಏನಿದೆ?
ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ
ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಕೋಟಿ ಹಣ ನೀಡದಿದ್ದರೆ ನೀನು ಬದುಕಬೇಡ. ಆತ್ಮಹತ್ಯೆ ಮಾಡಿಕೋ ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ನೊಂದು ನನ್ನ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಕಾಸ್ ಕುಮಾರ್ ದೂರು ನೀಡಿದ್ದಾರೆ.
ಮಾರತಹಳ್ಳಿ ಠಾಣೆ ಪಿಎಸ್ಐ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು ಶೀಘ್ರವೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಏನಿದು ಪ್ರಕರಣ?
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.
ಸುಭಾಷ್ ಹೇಳಿದ್ದೇನು?
ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.
ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್ಗಿಂತಲೂ ಬೆಂಗಳೂರಿನ ಕೋರ್ಟ್ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.
ಉತ್ತರಪ್ರದೇಶದ ಜೌನ್ಪುರದಲ್ಲಿ ಅತುತ್ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.