Tag: ninasam manju

  • ನೂರನೇ ದಿನದತ್ತ ಕನ್ನೇರಿ ಗೆಲುವಿನ ಹೆಜ್ಜೆ

    ನೂರನೇ ದಿನದತ್ತ ಕನ್ನೇರಿ ಗೆಲುವಿನ ಹೆಜ್ಜೆ

    ವತ್ತು ಸಿನಿಮಾ ಮಾಡುವುದು ಎಷ್ಟು ಕಷ್ಟವೋ? ಅದೇ ರೀತಿ ಜನರಿಗೆ ತಲುಪಿಸಿ ಅವರಿಂದ ಮೆಚ್ಚುಗೆ ಪಡೆಯುವುದು ಬಹುದೊಡ್ಡ ಕಷ್ಟ. ಈಗಂತೂ ಒಂದು ವಾರ ಹೆಚ್ಚೆಂದರೆ ಎರಡು ವಾರ ಸಿನಿಮಾಗಳು ಥಿಯೇಟರ್‌ನಲ್ಲಿ ನಿಲ್ಲುವುದು ಅಸಾಧ್ಯ. ಆದರೆ ಕನ್ನೇರಿ ಸಿನಿಮಾ ಭರ್ತಿ 75 ದಿನ ಪೂರೈಸಿ ನೂರನೇ ದಿನದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

    ಕಾಡಿನಲ್ಲಿಯೇ ನೆಮ್ಮದಿ ಕಂಡುಕೊಂಡು, ಕಾಡನ್ನೇ ಅದ್ಭುತ ಪ್ರಪಂಚ ಎಂದುಕೊಂಡಿದ್ದ ಬುಡಕಟ್ಟು ಮಂದಿಯನ್ನು ಒಕ್ಕಲೆಬ್ಬಿಸಿದ್ದ ಮಹಿಳಾ ಪ್ರಧಾನ ಕನ್ನೇರಿ ಸಿನಿಮಾವನ್ನು ನಿರ್ದೇಶಕ ನೀನಾಸಂ ಮಂಜು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಒಕ್ಕಲೆಬ್ಬಿಸಿದ ಬಳಿಕ ಅಲ್ಲಿನ ಜನರ ಸ್ಥಿತಿಗತಿ, ಮುಖ್ಯವಾಗಿ ಹೆಣ್ಣುಮಕ್ಕಳ ಸ್ಥಿತಿ ಏನಾಯಿತು ಎಂಬೆಲ್ಲಾ ವಿಚಾರಗಳನ್ನು ಕಣ್ಣಿಗೆ ಕಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಈ ಕಥೆ ಪ್ರೇಕ್ಷಕನ ಹೃದಯ ತಟ್ಟಿದೆ. ಇದನ್ನೂ ಓದಿ: ಮೊಬೈಲ್ ಬಿಡಿ ಮೈದಾನಕ್ಕೆ ಬನ್ನಿ: ಮಕ್ಕಳಿಗೆ ಮೇಘನಾ ರಾಜ್ ಸಲಹೆ

    ಹೇಳಿಕೇಳಿ ನಿರ್ದೇಶಕ ನೀನಾಸಂ ಮಂಜು ರಂಗಭೂಮಿಯಲ್ಲಿ ಪಳಗಿದ ಪ್ರತಿಭೆ. ಹೀಗಾಗಿ ಅವರ ಕಥೆಗಳಲ್ಲಿ ಗಟ್ಟಿತನ ಇರುತ್ತದೆ ಎನ್ನುವುದಕ್ಕೆ ಕನ್ನೇರಿ ಸಿನಿಮಾವೇ ತಾಜ ಉದಾಹರಣೆ. ಈ ಸಿನಿಮಾ ಅಂತಲ್ಲ ಕಳೆದ ಬಾರಿ ಜನಮನ್ನಣೆ ಪಡೆದ ಮೂಕ್ಕಹಕ್ಕಿ ಸಿನಿಮಾವೂ ಗಟ್ಟಿತನ ಕಂಟೆಂಟಿನ ಸಿನಿಮಾ. ಪ್ರತಿ ಬಾರಿಯೂ ಸದಾಭಿರುಚಿ ಸಿನಿಮಾಗಳನ್ನು ಮಂಜು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಈ ಬಾರಿ ಕನ್ನೇರಿ ಚಿತ್ರದ ಮೂಲಕ ನೀನಾಸಂ ಮಂಜು ಮತ್ತೊಮ್ಮೆ ಭರಪೂರ ಮನರಂಜನೆ ನೀಡಿದ್ದಾರೆ. ಇದನ್ನೂ ಓದಿ: ಅಂತಿಂಥ ಹೆಣ್ಣು ಇವಳಲ್ಲಾ ಎಂದು ಪತ್ನಿಯನ್ನು ಹೊಗಳಿದ ನವರಸ ನಾಯಕ ಜಗ್ಗೇಶ್

    ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅನಿತ ಭಟ್, ಕರಿ ಸುಬ್ಬು, ಅರುಣ್ ಸಾಗರ್, ಎಂ.ಕೆ. ಮಠ ಒಳಗೊಂಡ ಅನುಭವಿ ಕಲಾವಿದರ ಅಭಿನಯವಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಪಿ.ಪಿ. ಹೆಬ್ಬಾರ್ ಮತ್ತು ಚಂದ್ರಶೇಖರ್ ನಿರ್ಮಾಪಕರು. ಕೊಟಿಗಾನಹಳ್ಳಿ ರಾಮಯ್ಯ ಕಥೆ ಮತ್ತು ಸಾಹಿತ್ಯ, ಸುಜಿತ್ ಎಸ್ ನಾಯಕ್ ಸಂಕಲನ, ಗಣೇಶ್ ಹೆಗ್ಡೆ ಕ್ಯಾಮೆರಾ ನಿರ್ದೇಶನ ಚಿತ್ರಕ್ಕಿದೆ.

  • ‘ಕನ್ನೇರಿ’ಯಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದಾರೆ ರಾಜ್ಯ ಪ್ರಶಸ್ತಿ ವಿಜೇತ ಎಂ.ಕೆ.ಮಠ

    ‘ಕನ್ನೇರಿ’ಯಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದ್ದಾರೆ ರಾಜ್ಯ ಪ್ರಶಸ್ತಿ ವಿಜೇತ ಎಂ.ಕೆ.ಮಠ

    ನ್ನೇರಿ’ಸ್ಯಾಂಡಲ್‍ವುಡ್‌ನಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ಚಿತ್ರ. ಮಾರ್ಚ್ 4ರಂದು ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಈ ಚಿತ್ರ ಈಗಾಗಲೇ ಪ್ರೇಕ್ಷಕರನ್ನು ಸಾಕಷ್ಟು ವಿಚಾರಗಳಿಂದ ತನ್ನತ್ತ ಸೆಳೆದುಕೊಂಡಿದೆ.

    ಹಾಡು, ಟ್ರೇಲರ್, ಮನಸ್ಸಿಗೆ ನಾಟಿವೆ. ಏನೋ ವಿಶೇಷತೆ ಇದೆ ಅನ್ನೋದನ್ನು ಸಾರಿ ಹೇಳಿವೆ. ಬಿಡುಗಡೆಯಾಗಿರುವ ಟೀಸರ್ ಕೂಡ ಅಷ್ಟೇ ಕುತೂಹಲ ಹುಟ್ಟು ಹಾಕಿದೆ. ಹೀಗೆ ಸಿನಿರಸಿಕರ ಮನಸೆಳೆದ ಈ ಚಿತ್ರದಲ್ಲಿ ಸ್ಯಾಂಡಲ್‍ವುಡ್ ಅಂಗಳದ ಹೆಮ್ಮೆಯ ಹಿರಿಯ ನಟ ಎಂ.ಕೆ ಮಠ ಕೂಡ ಬಣ್ಣಹಚ್ಚಿದ್ದಾರೆ.  ಇದನ್ನೂ ಓದಿ: ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

    ತಮ್ಮ ಅಮೋಘ ಅಭಿನಯದ ಮೂಲಕ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವ ಎಂ.ಕೆ.ಮಠ ಕನ್ನೇರಿ ಚಿತ್ರದಲ್ಲಿ ಬಹು ಮುಖ್ಯ ಪಾತ್ರವೊಂದಕ್ಕೆ ಜೀವತುಂಬಿದ್ದಾರೆ. ಈಗಾಗಲೇ ಗೊತ್ತಿರುವ ಹಾಗೆ ಕನ್ನೇರಿ ನೆಲೆ ಕಳೆದುಕೊಂಡು ನಿರ್ವಸತಿಗರಾದ ಕಾಡಿನ ಜನರ ಸುತ್ತ ನೈಜ ಘಟನೆಗಳನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಹೆಣೆದ ಚಿತ್ರ. ಇಂತಹ ಚಿತ್ರದಲ್ಲಿ ಎಂ.ಕೆ ಮಠ ಅವ್ರು ಕಾಡಿನ ಜನರ ಹಾಡಿಯ ನಾಯಕನಾಗಿ ಬಣ್ಣಹಚ್ಚಿದ್ದಾರೆ. ಕೇವಲ ಬಣ್ಣಹಚ್ಚಿಲ್ಲ ಅದನ್ನು ಜೀವಿಸಿದ್ದಾರೆ. ಚಿತ್ರದ ಸ್ಯಾಂಪಲ್‍ಗಳಲ್ಲೂ ಅದನ್ನು ಕಾಣಬಹುದಾಗಿದೆ. ತಮ್ಮ ಪಾತ್ರದ ಬಗ್ಗೆ ಹಾಗೂ ನೀನಾಸಂ ಮಂಜು ಆಯ್ದುಕೊಂಡ ಕಥೆ ಬಗ್ಗೆ ಬಹಳ ಸಂತಸ ವ್ಯಕ್ತಪಡಿಸಿರುವ ಇವ್ರು ಈ ಸಿನಿಮಾ ಖಂಡಿತ ಪ್ರೇಕ್ಷಕರ ಮನಮುಟ್ಟಲಿದೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೂ ಇಷ್ಟವಾಯ್ತು ‘ಕನ್ನೇರಿ’ ಚಿತ್ರದ ‘ಈ ಗಾಳಿ ತಂಗಾಳಿ’ ಹಾಡು!

    ನೀನಾಸಂ ಮಂಜು ಆಕ್ಷನ್ ಕಟ್ ಹೇಳಿರುವ ಚಿತ್ರಕ್ಕೆ ಕೊಟಿಗಾನಹಳ್ಳಿ ರಾಮಯ್ಯ ಕಥೆ ಬರೆದಿದ್ದಾರೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ.ಪಿ ಹೆಬ್ಬಾರ್ ಮತ್ತು ಚಂದ್ರಶೇಖರ್ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. ಕದ್ರಿ ಮಣಿಕಾಂತ್ ಅದ್ಭುತ ಸಂಗೀತ ಸಂಯೋಜನೆ, ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಸುಜಿತ್ ಎಸ್ ನಾಯಕ್ ಸಂಕಲನ ಚಿತ್ರಕ್ಕಿದೆ. ಇದನ್ನೂ ಓದಿ: ‘ಕನ್ನೇರಿ’ ಒಡಲೊಳಗಿದೆ ಬೇರೆಯದ್ದೇ ಲೋಕ – ಟ್ರೇಲರ್ ನೋಡಿ ಮೆಚ್ಚಿದ ಪ್ರೇಕ್ಷಕ ಮಹಾಶಯರು

    ನೈಜ ಘಟನೆಯೊಂದಿಗೆ ಮಹಿಳಾ ಪ್ರಧಾನ ಚಿತ್ರವಾಗಿರುವ ಕನ್ನೇರಿಯಲ್ಲಿ ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಅರುಣ್ ಸಾಗರ್, ಕರಿ ಸುಬ್ಬು, ಸರ್ದಾರ್ ಸತ್ಯ,ಅನಿತ ಭಟ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಚಿತ್ರಕ್ಕೆ ನಟ ವಸಿಷ್ಠ ಸಿಂಹ ಸಾಥ್

    ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಚಿತ್ರಕ್ಕೆ ನಟ ವಸಿಷ್ಠ ಸಿಂಹ ಸಾಥ್

    ನೀನಾಸಂ ಮಂಜು ಆಕ್ಷನ್ ಕಟ್ ಹೇಳಿರುವ ‘ಕನ್ನೇರಿ’ ಸಿನಿಮಾ ಬಿಡುಗಡೆಗೆ ಸಿದ್ದವಾಗುತ್ತಿದೆ. ಬಿಡುಗಡೆಯಾಗುತ್ತಿರುವ ಚಿತ್ರದ ಸ್ಯಾಂಪಲ್ ಗಳು ಸಿನಿಮಾ ಮೇಲಿನ ನಿರೀಕ್ಷೆ, ಕುತೂಹಲವನ್ನೂ ಹೆಚ್ಚು ಮಾಡುತ್ತಿದೆ. ಮಹಿಳಾ ಪ್ರಧಾನ ಹಾಗೂ ನೈಜ ಘಟನೆಯಾಧಾರಿತ ಚಿತ್ರವನ್ನು ನೀನಾಸಂ ಮಂಜು ಕಮರ್ಶಿಯಲ್ ಎಳೆಯಲ್ಲಿ ಕಟ್ಟಿಕೊಟ್ಟು ತೆರೆಗೆ ತರಲು ಸಜ್ಜಾಗಿದ್ದಾರೆ. ಬಿಡುಗಡೆಗೂ ಮುನ್ನವೇ ಒಂದೊಳ್ಳೆ ಪಾಸಿಟಿವ್ ಬಝ್ ಕ್ರಿಯೇಟ್ ಮಾಡಿರುವ ಈ ಚಿತ್ರಕ್ಕೆ ಚಿತ್ರರಂಗದ ಹಲವರು ಸಾಥ್ ನೀಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಕನ್ನೇರಿ ಸಿನಿಮಾದ ಹಾಡಿನ ಬಿಡುಗಡೆ ಸಮಾರಂಭ.

    ಹೌದು, ಚಿತ್ರದ ಬಹು ನಿರೀಕ್ಷಿತ ಹಾಡು ‘ಕಾಣದ ಊರಿಗೆ ಕೂಲಿಗೆ ಹೊರಟೋಳೆ’ ಹಾಡಿನ ಬಿಡುಗಡೆ ಸಲುವಾಗಿ ಚಿತ್ರತಂಡ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆಗೆ ಸ್ಯಾಂಡಲ್‍ವುಡ್ ಖ್ಯಾತ ನಟ ವಸಿಷ್ಠ ಸಿಂಹ ಭಾಗಿಯಾಗಿ ಹಾಡನ್ನು ಬಿಡುಗಡೆ ಮಾಡಿ ಪ್ರೋತ್ಸಾಹ ನೀಡಿದ್ದಾರೆ. ಇವರೊಂದಿಗೆ ಕಲಾವಿದರಾದ ಚಕ್ರವರ್ತಿ ಚಂದ್ರಚೂಡ್, ನಿರ್ಮಲ, ಸರ್ದಾರ್ ಸತ್ಯ ಕೂಡ ಭಾಗಿಯಾಗಿ ಒಂದೊಳ್ಳೆ ಸಬ್ಜೆಕ್ಟ್ ಇರುವ ಚಿತ್ರಕ್ಕೆ ತಮ್ಮ ಸಾಥ್ ನೀಡಿದ್ದಾರೆ. ಬಿಡುಗಡೆಗೂ ಮೊದಲೇ ಚಿತ್ರರಂಗದ ಪ್ರೋತ್ಸಾಹ ಹಾಗೂ ಸಿನಿಪ್ರಿಯರು ತೋರುತ್ತಿರುವ ಪ್ರೀತಿ ಕನ್ನೇರಿ ಚಿತ್ರತಂಡಕ್ಕೆ ಅತೀವ ಸಂತಸವನ್ನುಂಟು ಮಾಡಿದೆ. ಅಂದಹಾಗೆ ಕಾಣದ ಊರಿಗೆ ಕೂಲಿಗೆ ಹೊರಟೋಳೆ ಹಾಡಿಗೆ ಕೊಟಿಗಾನಹಳ್ಳಿ ರಾಮಯ್ಯ ಚೆಂದದ ಸಾಹಿತ್ಯ ರಚಿಸಿದ್ದು ಇಂದು ನಾಗರಾಜ್ ಮತ್ತು ಸರಿಗಮಪ ಖ್ಯಾತಿಯ ಕೀರ್ತನ್ ಹೊಳ್ಳ ಹಾಡಿಗೆ ದನಿಯಾಗಿದ್ದಾರೆ. ಇದನ್ನೂ ಓದಿ : ಬೈ ಟು ಲವ್ ಹೀರೋ ಧನ್ವೀರ್ ಮೇಲೆ ದೂರು ದಾಖಲಿಸಿದ ಅಭಿಮಾನಿ

    kanneri

    ನೀನಾಸಂ ಮಂಜು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಕೊಟಿಗಾನಹಳ್ಳಿ ರಾಮಯ್ಯ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಕೊಡಗಿನಲ್ಲಿ ನಡೆದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಹಾಗೂ ಕ್ಷೀರ ಸಾಗರ ಅವರ ಜೇನು: ಆಕಾಶದ ಅರಮನೆ ಕಾದಂಬರಿ ಸ್ಪೂರ್ತಿಯೊಂದಿಗೆ ಹೆಣೆಯಲಾದ ಈ ಚಿತ್ರದಲ್ಲಿ ನಿರ್ವಸತಿಗರ ನೋವಿನ ಕಥೆಯಿದೆ, ನೆಲೆ ಹುಡುಕ ಹೊರಟ ಹೆಣ್ಣು ಮಗಳೊಬ್ಬಳ ವ್ಯಥೆ ಇದೆ. ಇದೆಲ್ಲವನ್ನು ಸಿನಿಮ್ಯಾಟಿಕ್ ಆಗಿ ಕಮರ್ಶಿಯಲ್ ಎಳೆಯಲ್ಲಿ ತೆರೆ ಮೇಲೆ ತಂದಿದ್ದಾರೆ ನಿರ್ದೇಶಕ ನೀನಾಸಂ ಮಂಜು. ಅರ್ಚನಾ ಮಧುಸೂದನ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅನಿತ ಭಟ್, ಕರಿ ಸುಬ್ಬು, ಅರುಣ್ ಸಾಗರ್, ಎಂ.ಕೆ. ಮಠ್ ಒಳಗೊಂಡ ಅನುಭವಿ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    kanneri

    ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪಿ.ಪಿ. ಹೆಬ್ಬಾರ್ ಮತ್ತು ಚಂದ್ರಶೇಖರ್ ನಿರ್ಮಾಪಕರು. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ, ಸುಜಿತ್ ಎಸ್ ನಾಯಕ್ ಸಂಕಲನ, ಗಣೇಶ್ ಹೆಗ್ಡೆ ಕ್ಯಾಮೆರಾ ಕೈಚಳಕ ಕನ್ನೇರಿ ಚಿತ್ರಕ್ಕಿದೆ. ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿರುವ ಈ ಚಿತ್ರ ಹಾಡುಗಳ ಮೂಲಕ ಎಲ್ಲರನ್ನು ಸೆಳೆಯುತ್ತಿದ್ದು, ಪ್ರೇಕ್ಷಕರನ್ನು ಸಿನಿಮಾ ಮೂಲಕ ಸೆಳೆಯಲು ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಕಾಲಿಡಲಿದೆ. ಇದನ್ನೂ ಓದಿ : ಕಲಾ ತಪಸ್ವಿ ರಾಜೇಶ್‌ ವಿಧಿವಶ

  • ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

    ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

    ನ್ನೇರಿ..ನೀನಾಸಂ ಮಂಜು ನಿರ್ದೇಶನದ ಬಹಳ ನಿರೀಕ್ಷೆ ಮೂಡಿಸಿರುವ ಚಿತ್ರ. ನೆಲೆಗಾಗಿ ನಿರ್ವಸತಿಗರ ಪಡಿಪಾಟಲು, ನಗರದಲ್ಲಿ ಬದುಕನ್ನರಸುತ್ತಿರುವ ಹೆಣ್ಣು ಜೀವಗಳ ಕಷ್ಟ ಕೋಟಲೆಗಳು ಇದನ್ನೆಲ್ಲ ಒಟ್ಟುಗೂಡಿಸಿ ಕಮರ್ಶಿಯಲ್ ಎಳೆಯಲ್ಲಿ ಅಷ್ಟೇ ಮನಸ್ಸಿಗೂ ನಾಟುವಂತೆ ಹೆಣೆದ ಕಥೆ ಕನ್ನೇರಿ. ನೈಜ ಘಟನೆಯನ್ನು ಆಧಾರವಾಗಿಟ್ಟುಕೊಂಡು ಪವರ್ ಫುಲ್ ಸಂದೇಶವನ್ನಿಟ್ಟುಕೊಂಡು ನಿರ್ಮಾಣವಾಗಿರುವ ಈ ಚಿತ್ರ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೂ ಕಾಲಿಡಲಿದೆ. ಸದ್ಯ ಬಿಡುಗಡೆಯಾಗುತ್ತಿರುವ ಚಿತ್ರದ ಒಂದೊಂದೇ ಸ್ಯಾಂಪಲ್ ಗಳು ಚಿತ್ರ ಪ್ರೇಮಿಗಳ ಚಿತ್ತವನ್ನು ಸೆಳೆಯುತ್ತಿದ್ದು ಇದೀಗ ಮತ್ತೊಂದು ಬಹು ನಿರೀಕ್ಷಿತ ಹಾಡೊಂದನ್ನು ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ ಕನ್ನೇರಿ ಚಿತ್ರತಂಡ.


    ಈಗಾಗಲೇ ಬಿಡುಗಡೆಯಾಗಿರುವ ‘ಬೆಟ್ಟ ಕಣಿವೆಗಳ ಹೊಟ್ಟೇಲಿ ಗೂಡು ಕಟ್ಟಿ, ‘ನೆಲೆ ಇರದ ಕಾಲು ಹುಡುಕುತಿದೆ ಬಾಳು’ ಎರಡು ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ, ಕೇಳುಗರ ಮನದಲ್ಲಿ ಅಚ್ಚುತ್ತಿವೆ. ಈಗ ಚಿತ್ರತಂಡ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡಿನ ವೀಡಿಯೋ ಬಿಡುಗಡೆ ಮಾಡಿದೆ. ಹೆಣ್ಣು ಮಗಳೊಬ್ಬಳು ತಾನು ಹುಟ್ಟಿ ಬೆಳೆದ ಮನೆ, ಊರನ್ನು ಬಿಟ್ಟು ಬೇರೆಡೆಗೆ ದುಡಿಯಲು ಹೊರಟಾಗ ಅನುಭವಿಸುವ ನೋವು, ಮರುಕವನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದ್ದು, ಎಂತವರಿಗಾದರೂ ಹಾಡು ನೋಡುತ್ತಿದ್ರೆ ಕರುಳು ಹಿಂಡಿ ಬರುತ್ತದೆ. ಅಂದ್ಹಾಗೆ ಈ ಹಾಡಿಗೆ ಕೊಟಿಗಾನಹಳ್ಳಿ ರಾಮಯ್ಯ ಸಾಹಿತ್ಯ ಬರೆದಿದ್ದು, ಕೀರ್ತನ್ ಹೊಳ್ಳ, ಇಂದು ನಾಗರಾಜ್ ಭಾವ ತುಂಬಿ ಹಾಡಿದ್ದಾರೆ. ಸದ್ಯ ಬಿಡುಗಡೆಯಾದ ಈ ಹಾಡು ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.


    ಕನ್ನೇರಿ ನೈಜಘಟನೆಯನ್ನು ಆಧಾರಿಸಿದ ಚಿತ್ರ, ಹಾಗೆಯೇ ಇದೊಂದು ಮಹಿಳಾ ಪ್ರಧಾನ ಚಿತ್ರ ಕೂಡ. ಈ ಚಿತ್ರಕ್ಕೆ ನಿರ್ದೇಶಕ ನೀನಾಸಂ ಮಂಜು ಸ್ಪೂರ್ತಿಯಾಗಿ ಪಡೆದಿದ್ದು ಕೊಡಗಿನ ದಿಡ್ಡಳ್ಳಿ ಹೋರಾಟ ಹಾಗೂ ಲೇಖಕ ಕ್ಷೀರಸಾಗರ ಅವರ ಜೇನು ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು. ಇವುಗಳನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಕೊಟಿಗಾನಹಳ್ಳಿ ರಾಮಯ್ಯ ಸಿನಿಮ್ಯಾಟಿಕ್ ಆಗಿ ಕಥೆ ಹೆಣೆಯುವ ಜವಾಬ್ದಾರಿಯನ್ನು ನಿಭಾಯಿಸಿದ್ದು, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತುಕೊಂಡಿದ್ದಾರೆ.

    ಹಲವಾರು ಅಂತರಾಷ್ಟ್ರೀಯ ವೇದಿಕೆಗಳಿಗೆ ಆಯ್ಕೆಯಾಗಿ ಗಮನ ಸೆಳೆದಿರುವ ಕನ್ನೇರಿ ಚಿತ್ರ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಸ್ಟ್ರಾಂಗ್ ಕಂಟೆಂಟ್ ಹೊತ್ತು ಬರುತ್ತಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ, ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಸುಜಿತ್ ಎಸ್ ನಾಯಕ್ ಸಂಕಲನವಿದೆ. ಚಿತ್ರದಲ್ಲಿ ಅರ್ಚನಾ ಮಧುಸೂಧನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ್, ಕರಿಸುಬ್ಬು ಒಳಗೊಂಡ ಕಲಾವಿದರ ತಾರಾಗಣವಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ ಪಿ ಹೆಬ್ಬಾರ್ ಮತ್ತು ಚಂದ್ರಶೇಖತ್ ಬಂಡವಾಳ ಹೂಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

  • ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ

    ಕನ್ನೇರಿ ಚಿತ್ರದ ಮನಮುಟ್ಟುವ ಹಾಡು ಬಿಡುಗಡೆ ಮಾಡಿದ ಖ್ಯಾತ ನಟಿ ಶ್ರುತಿ

    ನ್ನೇರಿ.. ನಿರ್ದೇಶಕ ನೀನಾಸಂ ಮಂಜು ಕನಸಿನ ಸಿನಿಮಾ. ಮೂಕಹಕ್ಕಿ ಮೂಲಕ ಮನ ಮುಟ್ಟುವ ಕಥೆ ಹೇಳಿ ಪ್ರೇಕ್ಷಕರ ಮನದಲ್ಲಿ ಭರವಸೆ ಹುಟ್ಟಿಸಿರುವ ನಿರ್ದೇಶಕ. ಈಗ ಕನ್ನೇರಿ ಎಂಬ ನೈಜ ಘಟನೆ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ಹೊತ್ತು ತರಲು ಸಜ್ಜಾಗಿದ್ದಾರೆ. ಫಸ್ಟ್ ಲುಕ್ ಮೂಲಕ ಕನ್ನೇರಿ ಪ್ರಚಾರ ಕಾರ್ಯಕ್ಕೆ ಈಗಾಗಲೇ ಮುನ್ನುಡಿ ಬರೆದಿರುವ ನಿರ್ದೇಶಕರು ಈಗ ಚಿತ್ರದ ಚೆಂದದ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ.

    kanneri-

    ಕೋಟಿಗಾನಹಳ್ಳಿ ರಾಮಯ್ಯ ಅವರ ಲೇಖನಿಯಲ್ಲಿ ಅರಳಿರುವ ಬೆಟ್ಟ ಕಣಿವೆಗಳ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ. ಚಿತ್ರದ ಕಥೆಗೆ ಪೂರಕವಾದ ಈ ಹಾಡನ್ನು ಖ್ಯಾತ ನಟಿ ಶ್ರುತಿ ಮೆಚ್ಚಿ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಡಿನ ಜನರ ಚೆಂದದ ಬದುಕು ಆ ಬದುಕಲಿದ್ದ ಖುಷಿ, ಯಾರದ್ದೋ ಸಂಚಿನಿಂದ ಅಸ್ತಿತ್ವ ಕಳೆದುಕೊಂಡ ನೋವು ಎಲ್ಲವೂ ಬೆರೆತ ಈ ಹಾಡು ಮನಮುಟ್ಟುವಂತೆ ಮೂಡಿ ಬಂದಿದ್ದು, ಆ ಸಾಲುಗಳಿಗೆ ಅಷ್ಟೇ ಚೆಂದದ ದನಿಯಾಗಿದ್ದಾರೆ ಗಾಯಕ ಸಚಿನ್ ಅರಬಳ್ಳಿ. ಮಣಿಕಾಂತ್ ಕದ್ರಿ ಸಂಗೀತವೂ ಅಷ್ಟೇ ಸೊಗಸಾಗಿ ಮೂಡಿ ಬಂದಿದೆ. ಇದನ್ನೂ ಓದಿ: ಆರೋಗ್ಯಕರವಾದ ಮಸಾಲಾ ಟೀ ಒಮ್ಮೆ ಮಾಡಿ ನೋಡಿ

    ಕನ್ನೇರಿ ಚಿತ್ರಕ್ಕೆ ನೈಜ ಘಟನೆಯೇ ಜೀವಾಳ. ಕೊಡಗಿನಲ್ಲಿ ನಡೆದ ದಿಡ್ಡಳ್ಳಿ ಹೋರಾಟದ ಕಥೆಯೇ ಚಿತ್ರಕ್ಕೆ ಸ್ಪೂರ್ತಿ. ದಿಡ್ಡಳ್ಳಿ ಹೋರಾಟದ ಜಾಡು ಹಿಡಿದು ಹೊರಟ ನಿರ್ದೇಶಕ ನೀನಾಸಂ ಮಂಜು ಅವರಿಗೆ ಅವರ ಬವಣೆ, ಅಭದ್ರತೆ, ಬದುಕು ಕಟ್ಟಿಕೊಳ್ಳುವ ಹಂಬಲ, ಅಲ್ಲಿನ ಹೆಣ್ಣು ಮಕ್ಕಳ ತೊಳಲಾಟ ಎಲ್ಲವೂ ಕಾಡಿದೆ. ಆ ಕಾಡುವ ಕಥನವನ್ನೇ ಸಿನಿಮಾವಾಗಿಸಿ ಹೊಸದೇನನ್ನೋ ಚಿತ್ರ ಪ್ರೇಮಿಗಳಿಗೆ ಉಣಬಡಿಸಲು ಸಕಲ ಸಜ್ಜಾಗಿ ನಿಂತಿದ್ದಾರೆ. ಇಂತಹದೊಂದು ಕಥೆಗೆ ಇನ್ನಷ್ಟು ಸ್ಪೂರ್ತಿ ತುಂಬಿದ್ದು ಕ್ಷೀರಸಾಗರ ಅವರ `ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆ. ಈ ಎಲ್ಲದಕ್ಕೂ ಕಥೆಯ ರೂಪ ಕೊಟ್ಟವರು ಕೋಟಿಗಾನಹಳ್ಳಿ ರಾಮಯ್ಯ. ಇದನ್ನೂ ಓದಿ: ಒಂದೇ ವಿಮಾನದಲ್ಲಿ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ – ಇದರ ಹಿಂದಿನ ರಹಸ್ಯವೇನು?

    ಕನ್ನೇರಿ ಚಿತ್ರಕ್ಕೆ ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ಜೀವ ತುಂಬಿದ್ದು, ಅನಿತಾ ಭಟ್, ಎಂ.ಕೆ.ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಪಿ.ಪಿ ಹೆಬ್ಬಾರ್ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗ್ಡೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿರೋ ಸಿನಿಮಾಗೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ಎಸ್ ನಾಯಕ್ ಸಂಕಲನವಿದೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು