Tag: Nirav Modi

  • ದೇಶ ಬಿಟ್ಟು ಪರಾರಿಯಾಗಿದ್ದ ನೀರವ್ ಮೋದಿ ಕೊನೆಗೂ ಅರೆಸ್ಟ್

    ದೇಶ ಬಿಟ್ಟು ಪರಾರಿಯಾಗಿದ್ದ ನೀರವ್ ಮೋದಿ ಕೊನೆಗೂ ಅರೆಸ್ಟ್

    ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿ ಇಂಗ್ಲೆಂಡಿನಲ್ಲಿ ತಲೆಮರೆಸಿಕೊಂಡಿದ್ದ ವಜ್ರ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲಾಗಿದೆ.

    ಲಂಡನ್ ನಲ್ಲಿ ನೆಲೆಸಿದ್ದ ಬಗ್ಗೆ ಮಾಧ್ಯಮ ವರದಿ ಪ್ರಕಟವಾದ ಬಳಿಕ ಭಾರತ ಸರ್ಕಾರ ಇಂಗ್ಲೆಂಡ್ ಸರ್ಕಾರದ ಜೊತೆ ನೀರವ್ ಬಂಧನಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿತ್ತು. ಇದಾದ ಬಳಿಕ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ಕೋರ್ಟ್ ನೀರವ್ ಮೋದಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ನೀರವ್ ಮೋದಿ ಬಂಧನವಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

    ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿರವ ನೀರವ್ ಮೋದಿ ಬಗ್ಗೆ ಟೆಲಿಗ್ರಾಫ್ ಮಾರ್ಚ್ 9 ರಂದು ವರದಿ ಮಾಡಿತ್ತು. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದರು. 13 ಸಾವಿರ ಕೋಟಿ ರೂ. ವಂಚನೆಗೈದ ಆರೋಪಿ ನೀರವ್ ಮೋದಿಗೆ ಇನ್ನು ಎಷ್ಟು ದಿನ ಲಂಡನ್ ನಲ್ಲಿ ಇರಲಿದ್ದೀರಿ ಎನ್ನುವ ಪ್ರಶ್ನೆಗೆ ಅವರಿಂದ ಯಾವುದೇ ಉತ್ತರ ಸಿಕ್ಕಿರಲಿಲ್ಲ.

    48 ವರ್ಷದ ನೀರವ್ ಮೋದಿ ಲಂಡನ್ ನಗರದಲ್ಲಿ ಹೋದ ಎಲ್ಲ ಕಡೆ ಪತ್ರಕರ್ತರು ಅವರನ್ನು ಹಿಂಬಾಲಿಸಿದ್ದರು. ಆದರೆ ಯಾವುದೇ ಪ್ರಶ್ನೆಗೆ ಉತ್ತರಿಸಲಿಲ್ಲ. ಕೊನೆಗೆ ನೀರವ್ ಮೋದಿ ಟ್ಯಾಕ್ಸಿ ಮಾಡಿ ಹೊರಟು ಹೋಗಿರುವ ದೃಶ್ಯ ಸೆರೆಯಾಗಿತ್ತು.

    ನೀರವ್ ಮೋದಿ ಪಶ್ಚಿಮ ಲಂಡನ್ ನಲ್ಲಿರುವ ಸೊಹೊ ಪ್ರದೇಶದಲ್ಲಿ ಹೊಸ ವಜ್ರದ ವ್ಯಾಪಾರ ಆರಂಭಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿತ್ತು. ಪ್ರಶ್ನೆ ಕೇಳುವಾಗ ನೀರವ್ ಮೋದಿ ಕಪ್ಪು ಬಣ್ಣದ ಆಸ್ಟ್ರೀಚ್ ಕಂಪನಿಯ ಜಾಕೆಟ್ ಧರಿಸಿದ್ದರು. ಸಾಧಾರಣವಾಗಿ ಆಸ್ಟ್ರೀಚ್ ಕಂಪನಿಯ ಈ ಜಾಕೆಟ್ ಬೆಲೆ 10 ಸಾವಿರ ಡಾಲರ್(6.99 ಲಕ್ಷ ರೂ.)ನಿಂದ ಆರಂಭವಾಗುತ್ತದೆ.

    ಜೀವಕ್ಕೆ ಅಪಾಯವಿದೆ:
    ಭಾರತಕ್ಕೆ ಬಂದರೆ ನನ್ನ ಕಕ್ಷಿದಾರರ ಜೀವಕ್ಕೆ ಅಪಾಯವಿದೆ ಎಂದು ವಜ್ರ ವ್ಯಾಪಾರಿ ನೀರವ್ ಮೋದಿ ವಕೀಲರು ಈ ಹಿಂದೆ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದರು. ಒಂದು ವೇಳೆ ನಾನು ಭಾರತಕ್ಕೆ ಬಂದರೆ ಜೀವಕ್ಕೆ ಅಪಾಯವಿದೆ. ಕೊಲೆ ಬೆದರಿಕೆ ಕೇಳಿಬಂದಿದೆ. ಇದರಿಂದಾಗಿ ನಾನು ಭಾರತಕ್ಕೆ ಬರುವುದಿಲ್ಲ ಅಂತಾ ನೀರವ್ ಮೋದಿ ತಿಳಿಸಿದ್ದಾರೆ ಎಂದು ವಕೀಲ ಇಡಿ ಅಧಿಕಾರಿಗಳಿಗೆ ತಿಳಿಸಿದ್ದರು.

    ಇಡಿ ಅಧಿಕಾರಿಗಳು ನೀರವ್ ಕಂಪನಿ, ಆಸ್ತಿಯನ್ನು ವಶಕ್ಕೆ ಪಡೆದಿದ್ದರಿಂದ ಸಿಬ್ಬಂದಿಗೆ ವೇತನ ನೀಡಿಲ್ಲ. ಅಷ್ಟೇ ಅಲ್ಲದೇ ನೀರವ್ ಬಾಡಿಗೆ ಪಡೆದಿದ್ದ ಜಾಗದ ಮಾಲೀಕರಿಗೆ ಹಣ ಪಾವತಿಸಿಲ್ಲ, ವಜ್ರಾಭರಣಕ್ಕಾಗಿ ಮುಂಗಡ ಹಣ ನೀಡಿದ್ದವರು ತಮ್ಮ ಹಣವನ್ನು ಮರಳಿಸುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಪ್ರಾಣ ಬೆದರಿಕೆ ಇರುವ ಕಾರಣ ನೀರವ್ ಮೋದಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ವಕೀಲರು ಹೇಳಿಕೆ ನೀಡಿದ್ದರು.

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪ ನೀರವ್ ಮೋದಿ ಮೇಲಿದೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.

  • ನೀರವ್ ಬಂಧನಕ್ಕೆ ದಾಖಲೆ ಕೇಳಿದ್ರೂ ನೀಡಿಲ್ಲ- ಚೋರ್ ಮೋದಿ ರಕ್ಷಣೆಗೆ ನಿಂತ್ರಾ ಚೌಕಿದಾರ್..?

    ನೀರವ್ ಬಂಧನಕ್ಕೆ ದಾಖಲೆ ಕೇಳಿದ್ರೂ ನೀಡಿಲ್ಲ- ಚೋರ್ ಮೋದಿ ರಕ್ಷಣೆಗೆ ನಿಂತ್ರಾ ಚೌಕಿದಾರ್..?

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 13 ಸಾವಿರ ಕೋಟಿ ರೂಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಇಂಗ್ಲೆಂಡ್, ಭಾರತದ ಬಳಿ ದಾಖಲೆಗಳನ್ನು ಕೇಳಿತ್ತು. ಆದ್ರೆ ಕೇಂದ್ರ ಸರ್ಕಾರ ಈ ಸಂಬಂಧ ಇದೂವರೆಗೂ ಸ್ಪಂದಿಸಿಲ್ಲ ಎಂದು ಮೂಲಗಳಿಂದ ಮಾಹಿತಿ ದೊರಕಿದೆ.

    ನೀರವ್ ಮೋದಿಗೆ ಸಂಬಂಧಿಸಿದಂತೆ ಬ್ರಿಟಿಷ್ ಪ್ರಾಧಿಕಾರ ಮಾಹಿತಿಗಾಗಿ ಹಲವು ಪ್ರಶ್ನೆಗಳನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಆದ್ರೆ ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅಲ್ಲದೆ ನೀರವ್ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಇಂಗ್ಲೆಂಡ್‍ನ ಕಾನೂನು ತಜ್ಞರ ತಂಡ ಭಾರತಕ್ಕೆ ಆಗಮಿಸಬೇಕೆ ಎಂದು ಕೇಳಿತ್ತು. ಇದಕ್ಕೂ ಭಾರತ ಸರಿಯಾಗಿ ಸ್ಪಂದಿಸಿಲ್ಲ  ಎಂದು ಎನ್ ಡಿ ಟಿವಿ ವರದಿ ಮಾಡಿದೆ.

    ಈ ಹಿಂದೆ ಬಂದ ಮಾಹಿತಿ ಪ್ರಕಾರ, ನೀರವ್ ಮೋದಿ ಪಶ್ಚಿಮ ಲಂಡನ್‍ನಲ್ಲಿರುವ ಸೊಹೊ ಪ್ರದೇಶದಲ್ಲಿ ಹೊಸ ವಜ್ರದ ವ್ಯಾಪಾರ ಆರಂಭಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವಂಚಕ ನೀರವ್ ಮೋದಿಯನ್ನು ಬಂಧಿಸಲು ಭಾರತ ಸರ್ಕಾರ ಇಂಗ್ಲೆಂಡ್‍ಗೆ ಮನವಿ ಸಲ್ಲಿಸಿತ್ತು. ಈ ಕುರಿತು ಈಗ ಇಂಗ್ಲೆಂಡ್ ಆರೋಪಿ ನೀರವ್ ಮೋದಿ ವಿರುದ್ಧ ಇರುವ ದಾಖಲೆಗಳನ್ನು ನೀಡಿ, ನಂತರ ಅದನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಭಾರತಕ್ಕೆ ತಿಳಿಸಿತ್ತು. ಇದನ್ನೂ ಓದಿ:ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

    ವಿದೇಶದಲ್ಲಿ ಅಪರಾಧಿಗಳನ್ನು ಹಿಡಿಯಲು ಕಾನೂನು ನೆರವು ಬೇಗನೆ ಸಿಗುವುದಿಲ್ಲ, ಕೊಂಚ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಕಾನೂನು ನೆರವು ಒಪ್ಪಂದದ ಪ್ರಕಾರ ಭಾರತದ ಗೃಹ ಸಚಿವಾಲಯ ನೇರವಾಗಿ ಲಂಡನ್‍ನ ಭಾರತೀಯ ಹೈಕಮಿಷನ್‍ಗೆ ಸಮನ್ಸ್ ಅಥವಾ ವಾರೆಂಟ್‍ಗಳನ್ನು ರವಾನಿಸಬಹುದು. ಬಳಿಕ ಅದನ್ನು ಲಂಡನ್‍ನ ಭಾರತೀಯ ಹೈಕಮಿಷನ್ ಅಲ್ಲಿನ ಕೇಂದ್ರ ಪ್ರಾಧಿಕಾರಕ್ಕೆ ವರ್ಗಾಯಿಸುತ್ತದೆ. ಈ ಪ್ರಕರಣದಲ್ಲಿ, ನೀರವ್ ಮೋದಿ ವಂಚನೆ ಮಾಡಿರುವ ಬಗ್ಗೆ ದಾಖಲೆ ನೀಡಿದರೆ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬ್ರಿಟನ್‍ನ ಕೇಂದ್ರೀಯ ಅಧಿಕಾರವು ತಿಳಿಸಿದೆ.

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪರಾರಿಯಾಗಿದ್ದಾರೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

    ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

    ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿರುವ ವಜ್ರ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿದ್ದಾರೆ.

    ಲಂಡನ್ ನಗರದಲ್ಲಿ ಓಡಾಡುತ್ತಿರುವ ನೀರವ್ ಮೋದಿ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿದೆ. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದಾರೆ. 13 ಸಾವಿರ ಕೋಟಿ ರೂ. ವಂಚನೆಗೈದ ಆರೋಪಿ ನೀರವ್ ಮೋದಿಗೆ ಇನ್ನು ಎಷ್ಟು ದಿನ ಲಂಡನ್ ನಲ್ಲಿ ಇರಲಿದ್ದೀರಿ ಎನ್ನುವ ಪ್ರಶ್ನೆಗೆ ಅವರಿಂದ ಯಾವುದೇ ಉತ್ತರ ಬರಲಿಲ್ಲ.

    48 ವರ್ಷದ ನೀರವ್ ಮೋದಿ ಲಂಡನ್ ನಗರದಲ್ಲಿ ಹೋದ ಎಲ್ಲ ಕಡೆ ಪತ್ರಕರ್ತರು ಅವರನ್ನು ಹಿಂಬಾಲಿಸಿದ್ದಾರೆ. ಆದರೆ ಯಾವುದೇ ಪ್ರಶ್ನೆಗೆ ಉತ್ತರಿಸಲಿಲ್ಲ. ಕೊನೆಗೆ ನೀರವ್ ಮೋದಿ ಟ್ಯಾಕ್ಸಿ ಮಾಡಿ ಹೊರಟು ಹೋಗಿರುವ ದೃಶ್ಯ ಸೆರೆಯಾಗಿದೆ.

    ನೀರವ್ ಮೋದಿ ಪಶ್ಚಿಮ ಲಂಡನ್ ನಲ್ಲಿರುವ ಸೊಹೊ ಪ್ರದೇಶದಲ್ಲಿ ಹೊಸ ವಜ್ರದ ವ್ಯಾಪಾರ ಆರಂಭಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಪ್ರಶ್ನೆ ಕೇಳುವಾಗ ನೀರವ್ ಮೋದಿ ಕಪ್ಪು ಬಣ್ಣದ ಆಸ್ಟ್ರೀಚ್ ಕಂಪನಿಯ ಜಾಕೆಟ್ ಧರಿಸಿದ್ದಾರೆ. ಸಾಧಾರಣವಾಗಿ ಆಸ್ಟ್ರೀಚ್ ಕಂಪನಿಯ ಈ ಜಾಕೆಟ್ ಬೆಲೆ 10 ಸಾವಿರ ಡಾಲರ್(6.99 ಲಕ್ಷ ರೂ.)ನಿಂದ ಆರಂಭವಾಗುತ್ತದೆ.

    ಜೀವಕ್ಕೆ ಅಪಾಯವಿದೆ:
    ಭಾರತಕ್ಕೆ ಬಂದರೆ ನನ್ನ ಕಕ್ಷಿದಾರರ ಜೀವಕ್ಕೆ ಅಪಾಯವಿದೆ ಎಂದು ವಜ್ರ ವ್ಯಾಪಾರಿ ನೀರವ್ ಮೋದಿ ವಕೀಲರು ಈ ಹಿಂದೆ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದರು. ಒಂದು ವೇಳೆ ನಾನು ಭಾರತಕ್ಕೆ ಬಂದರೆ ಜೀವಕ್ಕೆ ಅಪಾಯವಿದೆ. ಕೊಲೆ ಬೆದರಿಕೆ ಕೇಳಿಬಂದಿದೆ. ಇದರಿಂದಾಗಿ ನಾನು ಭಾರತಕ್ಕೆ ಬರುವುದಿಲ್ಲ ಅಂತಾ ನೀರವ್ ಮೋದಿ ತಿಳಿಸಿದ್ದಾರೆ ಎಂದು ವಕೀಲ ಇಡಿ ಅಧಿಕಾರಿಗಳಿಗೆ ತಿಳಿಸಿದ್ದರು.

    ಇಡಿ ಅಧಿಕಾರಿಗಳು ನೀರವ್ ಕಂಪನಿ, ಆಸ್ತಿಯನ್ನು ವಶಕ್ಕೆ ಪಡೆದಿದ್ದರಿಂದ ಸಿಬ್ಬಂದಿಗೆ ವೇತನ ನೀಡಿಲ್ಲ. ಅಷ್ಟೇ ಅಲ್ಲದೇ ನೀರವ್ ಬಾಡಿಗೆ ಪಡೆದಿದ್ದ ಜಾಗದ ಮಾಲೀಕರಿಗೆ ಹಣ ಪಾವತಿಸಿಲ್ಲ, ವಜ್ರಾಭರಣಕ್ಕಾಗಿ ಮುಂಗಡ ಹಣ ನೀಡಿದ್ದವರು ತಮ್ಮ ಹಣವನ್ನು ಮರಳಿಸುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಪ್ರಾಣ ಬೆದರಿಕೆ ಇರುವ ಕಾರಣ ನೀರವ್ ಮೋದಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ವಕೀಲರು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಒಂದೇ ಸೆಕೆಂಡಿನಲ್ಲಿ ನೀರವ್ ಮೋದಿಯ 100 ಕೋಟಿ ರೂ. ಮೌಲ್ಯದ ಮನೆ ಧ್ವಂಸ ವಿಡಿಯೋ ನೋಡಿ

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪರಾರಿಯಾಗಿದ್ದಾರೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಪ್ರಕರಣ ಸಂಬಂಧ ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ಮುಟ್ಟುಗೋಲು ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ

    ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ

    ನವದೆಹಲಿ: ಮಹಾರಾಷ್ಟ್ರದ ಅಲಿಬಾಗ್ ಕಡಲ ತೀರಕ್ಕೆ ಮುಖ ಮಾಡಿದಂತೆ ನೀರವ್ ಮೋದಿ ಒಡೆತನದಲ್ಲಿ ನಿರ್ಮಿಸಲಾಗಿದ್ದ ಸುಮಾರು 100 ಕೋಟಿ ಮೌಲ್ಯದ ಐಶಾರಾಮಿ ಬಂಗಲೆಯನ್ನು ಸ್ಫೋಟಕ ಬಳಸಿ ಧ್ವಂಸ ಮಾಡಲಾಗಿದೆ.

    ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಳೆದ 6 ದಿನಗಳಿಂದ ಬಂಗಲೆ ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದ ಮನೆಯ ಅಡಿಯಲ್ಲಿ ಸ್ಫೋಟಕಗಳನ್ನು ಇರಿಸಿ ಧ್ವಂಸಗೊಳಿಸಲಾಗಿದೆ. ಯಂತ್ರಗಳನ್ನು ಬಳಸಿ ಬಂಗಲೆಯನ್ನ ಧ್ವಂಸ ಮಾಡಲು ಪ್ರತ್ನಿಸಿದ್ದರೂ, ವಿಫಲವಾದ ಕಾರಣದಿಂದ ಸ್ಫೋಟಕಗಳ ಬಳಕೆಗೆ ಅನುಮತಿ ಪಡೆಯಲಾಗಿತ್ತು. ಸುಮಾರು 33,000 ಅಡಿಯಲ್ಲಿ ‘ರೂಪಾನ್ಯ’ ಎಂಬ ಹೆಸರಿನೊಂದಿಗೆ ಮನೆಯ ನಿರ್ಮಾಣ ಮಾಡಲಾಗಿತ್ತು. ಆದರೆ ಈ ವೇಳೆ ಕರವಾಳಿ ಪ್ರದೇಶದ ಪರಿಸರದ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ನಡೆಸಲಾಗಿತ್ತು.

    ಈ ಬಗ್ಗೆ ಶಂಬುರಾಜೆ ಯುವ ಕ್ರಾಂತಿ ಎಂಬ ಎನ್‍ಜಿಒ 2009ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪರಿಸರ ವಲಯದ ನಿಯಮಗಳನ್ನು ಮೀರಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಕೂಡಲೇ ಅಂತಹ 58 ಬಂಗಲೆಗಳನ್ನು ತೆರವುಗೊಳಿಸುವಂತೆ ಬಾಂಬೆ ಹೈ ಕೋರ್ಟ್ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಕೋರ್ಟ್ ಆದೇಶದಂತೆ ನಿಯಮ ಮೀರಿ ನಿರ್ಮಾಣ ಮಾಡಲಾಗಿದ್ದ ಆ ಪ್ರದೇಶದ ಒಟ್ಟು 58 ಮನೆ, ರೆಸಾರ್ಟ್ ಗಳನ್ನು ತೆರವುಗೊಳಿಸುವ ಕಾರ್ಯಮಾಡಲಾಗುತ್ತಿದೆ. ಇದರಲ್ಲಿ ನೀರವ್ ಮೋದಿಯ ಬಂಗಲೆಯೂ ಸೇರಿದೆ.

    ಅಂದಹಾಗೇ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಮನೆಯಲ್ಲಿ ಆಧುನಿಕ ಸೌಲಭ್ಯಗಳನ್ನು ಎಲ್ಲವನ್ನ ಕಲ್ಪಿಸಲಾಗಿತ್ತು. ಅಲ್ಲದೇ ಬಂಗಲೆಯ ಸನಿಹದಲ್ಲೇ ಬೃಹತ್ ಐಶಾರಾಮಿ ಈಜುಕೊಳ ಸೇರಿದಂತೆ, ಮನೆಯ ಸುತ್ತ ಉಕ್ಕಿನ ಕಾಂಪೌಂಡ್ ನಿರ್ಮಾಣ ಮಾಡಿ ಬಹೃತ್ ಗೇಟ್‍ಗಳನ್ನು ಅಳವಡಿಸಲಾಗುತ್ತು.

    https://twitter.com/SanjayBragta/status/1103931152132300800

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾನು ಭಾರತಕ್ಕೆ ಬರಲ್ಲ – ವಂಚಕ ನೀರವ್ ಮೋದಿ

    ನಾನು ಭಾರತಕ್ಕೆ ಬರಲ್ಲ – ವಂಚಕ ನೀರವ್ ಮೋದಿ

    ನವದೆಹಲಿ: ಭಾರತಕ್ಕೆ ಬಂದರೆ ನನ್ನ ಕಕ್ಷಿದಾರರ ಜೀವಕ್ಕೆ ಅಪಾಯವಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ ವಕೀಲರು ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದಾರೆ.

    ಒಂದು ವೇಳೆ ನಾನು ಭಾರತಕ್ಕೆ ಬಂದರೆ ಜೀವಕ್ಕೆ ಅಪಾಯವಿದೆ. ಕೊಲೆ ಬೆದರಿಕೆ ಕೇಳಿಬಂದಿದೆ. ಇದರಿಂದಾಗಿ ನಾನು ಭಾರತಕ್ಕೆ ಬರುವುದಿಲ್ಲ ಅಂತಾ ನೀರವ್ ಮೋದಿ ತಿಳಿಸಿದ್ದಾರೆ ಎಂದು ವಕೀಲ ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ: ನೀರವ್ ಮೋದಿಯ ಹಾಂಗ್​ಕಾಂಗ್​ನ 255 ಕೋಟಿ ರೂ. ಆಸ್ತಿ ಇಡಿ ವಶಕ್ಕೆ

    ಇಡಿ ಅಧಿಕಾರಿಗಳು ನೀರವ್ ಕಂಪನಿ, ಆಸ್ತಿಯನ್ನು ವಶಕ್ಕೆ ಪಡೆದಿದ್ದರಿಂದ ಸಿಬ್ಬಂದಿಗೆ ವೇತನ ನೀಡಿಲ್ಲ. ಅಷ್ಟೇ ಅಲ್ಲದೇ ನೀರವ್ ಬಾಡಿಗೆ ಪಡೆದಿದ್ದ ಜಾಗದ ಮಾಲೀಕರಿಗೆ ಹಣ ಪಾವತಿಸಿಲ್ಲ, ವಜ್ರಾಭರಣಕ್ಕಾಗಿ ಮುಂಗಡ ಹಣ ನೀಡಿದ್ದವರು ತಮ್ಮ ಹಣವನ್ನು ಮರಳಿಸುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಪ್ರಾಣ ಬೆದರಿಕೆ ಇರುವ ಕಾರಣ ನೀರವ್ ಮೋದಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ವಕೀಲರು ಹೇಳಿದ್ದಾರೆ. ಇದನ್ನು ಓದಿ: ನೀರವ್ ಮೋದಿಗೆ ಇಡಿ ಶಾಕ್- 637 ಕೋಟಿ ರೂ. ಆಸ್ತಿ ಮುಟ್ಟುಗೋಲು

    ಏನಿದು ಪ್ರಕರಣ?:
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಪರಾರಿಯಾಗಿದ್ದಾರೆ. ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಮನವಿ ಮಾಡಿಕೊಂಡಿತ್ತು. ಈಗಾಗಲೇ ಮುಂಬೈ ಸೇರಿದಂತೆ ವಿದೇಶದಲ್ಲಿರುವ ನೀರವ್ ಮೋದಿ ಆಸ್ತಿಯನ್ನು ಜಾರಿ ನಿರ್ದೇಶನಾಲಯಕ್ಕೆ ವಶಕ್ಕೆ ಪಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನೀರವ್ ಮೋದಿಯ ಹಾಂಗ್​ಕಾಂಗ್​ನ 255 ಕೋಟಿ ರೂ. ಆಸ್ತಿ ಇಡಿ ವಶಕ್ಕೆ

    ನೀರವ್ ಮೋದಿಯ ಹಾಂಗ್​ಕಾಂಗ್​ನ 255 ಕೋಟಿ ರೂ. ಆಸ್ತಿ ಇಡಿ ವಶಕ್ಕೆ

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಮಾಡಿ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿಗೆ ಸೇರಿದ ಹಾಂಗ್​ಕಾಂಗ್​ನಲ್ಲಿರುವ ಸುಮಾರು 255 ಕೋಟಿ ರೂಪಾಯಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಇಡಿ ನೀರವ್ ಮೋದಿಯ ಆಸ್ತಿಯನ್ನು ವಶಪಡಿಸಿಕೊಂಡಿದ್ದು, ಗುರುವಾರವೂ ಸಹ ಹಾಂಗ್​ಕಾಂಗ್​ನಲ್ಲಿರುವ ಸುಮಾರು 255 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಮಾಹಿತಿಗಳ ಪ್ರಕಾರ ಇಲ್ಲಿಯವರೆಗೂ ಇಡಿ ಅಂದಾಜು 4,744 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

    ದೇಶದಲ್ಲೇ ಸಂಚಲನ ಮೂಡಿಸಿದ್ದ ಪಿಎನ್‍ಬಿ ವಂಚನೆ ಬೆಳಕಿಗೆ ಬರುತ್ತಲೇ ವಜ್ರೋದ್ಯಮಿ ನೀರವ್ ಮೋದಿ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಇಡಿ ಇಂಟರ್ಪೋಲ್ ಮೂಲಕ ರೆಡ್‍ಕಾರ್ನರ್ ನೋಟಿಸ್ ಸಹ ಜಾರಿಗೊಳಿಸಿದೆ. ಅಕ್ಟೋಬರ್ ತಿಂಗಳೊಂದರಲ್ಲೇ ಭಾರತದ ಸೇರಿದಂತೆ 5 ದೇಶಗಳಲ್ಲಿ ಸುಮಾರು 637 ಕೋಟಿ ರುಪಾಯಿಯನ್ನು ಜಪ್ತಿಮಾಡಲಾಗಿದೆ.

    ಏನಿದು ಪ್ರಕರಣ?
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದು, ಯಾವುದೇ ದೇಶದಲ್ಲಿ ಅಡಗಿದ್ದರೂ ಬಂಧನಕ್ಕೆ ಆದೇಶ ಸಿಕ್ಕಿದೆ.

    ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಮನವಿ ಮಾಡಿಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೀರವ್ ಮೋದಿಗೆ ಇಡಿ ಶಾಕ್- 637 ಕೋಟಿ ರೂ. ಆಸ್ತಿ ಮುಟ್ಟುಗೋಲು

    ನೀರವ್ ಮೋದಿಗೆ ಇಡಿ ಶಾಕ್- 637 ಕೋಟಿ ರೂ. ಆಸ್ತಿ ಮುಟ್ಟುಗೋಲು

    ನವದೆಹಲಿ: ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಒಡೆತನದ ನ್ಯೂಯಾರ್ಕ್, ಲಂಡನ್ ಸೇರಿದಂತೆ ವಿವಿಧ ಕಡೆಯಲ್ಲಿದ್ದ ಒಟ್ಟು 637 ಕೋಟಿ.ರೂ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ಪಡೆದುಕೊಂಡಿದೆ.

    ಲೇವಾದೇವಿ ಕಾಯ್ದೆ ಅನ್ವಯ ನ್ಯೂಯಾರ್ಕ್, ಲಂಡನ್‍ಗಳಲ್ಲಿರುವ ಆಸ್ತಿ, ಮುಂಬೈನ ಫ್ಲ್ಯಾಟ್, ಸಿಂಗಾಪುರ ಹಾಗೂ ವಿವಿಧ ದೇಶಗಳ ಬ್ಯಾಂಕ್‍ಗಳಲ್ಲಿ ಇರುವ ಹಣ, ಸಿಂಗಾಪುರದಿಂದ ಮುಂಬೈಗೆ ಬಂದಿದ್ದ ವಜ್ರವನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ.

    ಎಲ್ಲಲ್ಲಿ ಎಷ್ಟು ಆಸ್ತಿ?
    ನ್ಯೂಯಾರ್ಕ್‍ನ ಸೆಂಟ್ರಲ್ ಪಾರ್ಕ್ ಬಳಿಯ 216 ಕೋಟಿ ರೂ. ಮೌಲ್ಯದ ಎರಡು ಅಪಾರ್ಟಮೆಂಟ್, ಪೂರ್ವಿ ಮೋದಿ ಹೆಸರಿನಲ್ಲಿರುವ ಲಂಡನ್‍ನ ಮರ್ಲೆಬೋನ್ ನಲ್ಲಿರುವ 57 ಕೋಟಿ ರೂ. ಬೆಲೆಬಾಳುವ ಅಪಾರ್ಟಮೆಂಟ್, ಹಾಂಕಾಂಗ್‍ನಿಂದ ಭಾರತಕ್ಕೆ ಬಂದಿದ್ದ 22.69 ಕೋಟಿ ರೂ. ಮೊತ್ತದ ವಜ್ರದ ಆಭರಣಗಳು, ಸಿಂಗಾಪುರ ಬ್ಯಾಂಕ್ ಖಾತೆಯಲ್ಲಿ ಬ್ರಿಟಿಷ್ ವರ್ಜಿನ್ ಐಲ್ಯಾಂಡ್ ಮೂಲದ ಕಂಪನಿಯೊಂದರ ಹೆಸರಿನಲ್ಲಿದ್ದ 44 ಕೋಟಿ ರೂ., ಮುಂಬೈನಲ್ಲಿರುವ 19.5 ಕೋಟಿ ಮೌಲ್ಯದ ಫ್ಲ್ಯಾಟ್ ಅನ್ನು ವಶಕ್ಕೆ ಪಡೆದುಕೊಂಡಿದೆ.

    ಈ ಆಸ್ತಿಯಲ್ಲಿ ಕೆಲವೊಂದು ನೀರವ್ ಮೋದಿ ಸಹೋದರಿ ಪೂರ್ವಿ ಮೋದಿ ಹಾಗೂ ಆಕೆಯ ಪತಿ ಮಾಯಂಕ್ ಮೆಹ್ತಾ ಅವರಿಗೆ ಸೇರಿದೆ. ನೀರವ್ ಮೋದಿ ಬಂಧನಕ್ಕಾಗಿ ತನಿಖಾಧಿಕಾರಿಗಳು ಪ್ರಯತ್ನ ಮುಂದುವರಿಸಿದ್ದಾರೆ. ಜೊತೆಗೆ ವಿವಿಧ ದೇಶಗಳ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ಅದರ ಪರಿಣಾಮ ಈಗ ನೀರವ್ ಮೋದಿ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಜೊತೆಗೆ ವಿದೇಶದಲ್ಲಿದ್ದ ಆಭರಣಗಳನ್ನು ಭಾರತಕ್ಕೆ ತರಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

    ಏನಿದು ಪ್ರಕರಣ?
    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದು, ಯಾವುದೇ ದೇಶದಲ್ಲಿ ಅಡಗಿದ್ದರೂ ಬಂಧನಕ್ಕೆ ಆದೇಶ ಸಿಕ್ಕಿದೆ.

    ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಮನವಿ ಮಾಡಿಕೊಂಡಿತ್ತು.

    ಏನಿದು ರೆಡ್ ಕಾರ್ನರ್ ನೋಟಿಸ್?
    ಸ್ವದೇಶದಲ್ಲಿ ಯಾವುದೇ ಒಬ್ಬ ವ್ಯಕ್ತ ಅಪರಾಧಿ ಹಿನ್ನೆಲೆಯಲ್ಲಿ ದೇಶವನ್ನು ತೊರೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರೆ, ಅಂತಹ ವ್ಯಕ್ತಿಯನ್ನು ಹುಡುಕಿ ಬಂಧಿಸಿ ಅವನನ್ನು ಮರಳಿ ಆ ದೇಶಕ್ಕೆ ಹಸ್ತಾಂತರಿಸುವಂತೆ ಇಂಟರ್ ಪೋಲ್ ಹೊರಡಿಸುವ ನೋಟಿಸಿಗೆ ರೆಡ್ ಕಾರ್ನರ್ ನೋಟಿಸ್ ಎಂದು ಕರೆಯಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!

    ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ!

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದು, ಯಾವುದೇ ದೇಶದಲ್ಲಿ ಅಡಗಿದ್ದರೂ ಬಂಧನಕ್ಕೆ ಆದೇಶ ಸಿಕ್ಕಿದೆ.

    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ನೀರವ್ ಮೋದಿ ದೂರು ದಾಖಲಾಗುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ನೀರವ್ ಮೋದಿ ಹಾಗೂ ಅವರ ಅಂಕಲ್ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್ ಗೆ ಮನವಿ ಮಾಡಿಕೊಂಡಿತ್ತು.

    ಈ ಸಂಬಂಧ ಸಿಬಿಐ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ನೀರವ್ ಮೋದಿ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ನೀಡಿದ್ದು ಯಾವುದೇ ದೇಶದಲ್ಲಿದ್ದರೂ ಬಂಧಿಸುವ ಸಾಧ್ಯತೆ ಇದೆ.

    ಸಿಬಿಐ ನೀರವ್ ಸೇರಿ ಇನ್ನಿತರೆ ಆರೋಪಿಗಳ ಭಾರತೀಯ ಪಾಸ್‍ಪೋರ್ಟ್‍ಗಳನ್ನು ರದ್ದುಪಡಿಸಿ, ಅವರ ಚಲನವಲನಗಳ ಮೇಲೆ ನಿರಂತರ ನಿಗಾ ವಹಿಸಿತ್ತು. ಅಲ್ಲದೇ ನೀರವ್ ಮೋದಿ ವಾಸದ ಖಚಿತಪಡಿಸುವ ಬಗ್ಗೆ ಲಂಡನ್‍ಗೂ ಮಾಹಿತಿ ರವಾನಿಸಿ ಕ್ರಮ ಕೈಗೊಂಡಿತ್ತು. ಆದರೆ ನೀರವ್ ಮೋದಿ ಪಾಸ್ ಪೋರ್ಟ್ ರದ್ದಾದ ಬಳಿಕವೂ ಬೇರೆ ದೇಶದ ಪಾಸ್‍ಪೋರ್ಟ್ ಬಳಸಿ ಬೇರೆ ಬೇರೆ ದೇಶಗಳಿಗೆ ಪ್ರಯಾಣಿಸಿದ್ದ ಮಾಹಿತಿಯನ್ನು ಇಂಟರ್‍ಪೋಲ್ ಅಧಿಕಾರಿಗಳಿಗೆ ಒದಗಿಸಲಾಗಿದೆ.

    ಏನಿದು ರೆಡ್ ಕಾರ್ನರ್ ನೋಟಿಸ್?
    ಸ್ವದೇಶದಲ್ಲಿ ಯಾವುದೇ ಒಬ್ಬ ವ್ಯಕ್ತ ಅಪರಾಧಿ ಹಿನ್ನೆಲೆಯಲ್ಲಿ ದೇಶವನ್ನು ತೊರೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದರೆ, ಅಂತಹ ವ್ಯಕ್ತಿಯನ್ನು ಹುಡುಕಿ ಬಂಧಿಸಿ ಅವನನ್ನು ಮರಳಿ ಆ ದೇಶಕ್ಕೆ ಹಸ್ತಾಂತರಿಸುವಂತೆ ಇಂಟರ್ ಪೋಲ್ ಹೊರಡಿಸುವ ನೋಟಿಸಿಗೆ ರೆಡ್ ಕಾರ್ನರ್ ನೋಟಿಸ್ ಎಂದು ಕರೆಯಲಾಗುತ್ತದೆ.

  • ನೀರವ್ ಮೋದಿಗೆ ಬೈ ಬೈ ಹೇಳಿದ ಪ್ರಿಯಾಂಕಾ ಚೋಪ್ರಾ

    ನೀರವ್ ಮೋದಿಗೆ ಬೈ ಬೈ ಹೇಳಿದ ಪ್ರಿಯಾಂಕಾ ಚೋಪ್ರಾ

    -ನೀರವ್ ಮೋದಿಯ ಆಭರಣಗಳ ಪ್ರಚಾರ ರಾಯಭಾರಿ ಸ್ಥಾನಕ್ಕೆ ಪ್ರಿಯಾಂಕಾ ಗುಡ್ ಬೈ

    ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸುಮಾರು 11,300 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಭರಣ ಉದ್ಯಮಿ ನೀರವ್ ಮೋದಿ ವಿರುದ್ದ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಒಂದು ಕಾಲದಲ್ಲಿ ನೀರವ್ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದ, ನೀರವ್ ಜೊತೆ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ, ಅವರ ಆಭರಣ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಕೋಟಿ ಕೋಟಿ ಸಂಭಾವನೆಗಳನ್ನು, ದುಬಾರಿ ಉಡುಗೊರೆಗಳನ್ನು ಪಡೆಯುತ್ತಿದ್ದ ಬಾಲಿವುಡ್ ನ ತಾರೆಯರು ನಿಧಾನವಾಗಿ ತಮಗೂ ನೀರವ್ ಮೋದಿಗೂ ಸಂಬಂಧವಿಲ್ಲವೆಂಬಂತೆ ಅಂತರವನ್ನು ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

    2009ರಿಂದಲೂ ಉದ್ಯಮಿ ನೀರವ್ ಮೋದಿಯವರ ಜ್ಯುವೆಲ್ಲರಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಕೋಟಿ-ಕೋಟಿ ಸಂಭಾವನೆ ಜೊತೆಗೆ ದುಬಾರಿ ಉಡುಗೊರೆಗಳನ್ನು ಪಡೆದಿದ್ದ, ನೀರವ್ ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ, ಇವೆಂಟ್‍ಗಳಲ್ಲಿ ಕಾಣಿಸಿಕೊಂಡು ಕಾರ್ಯಕ್ರಮಕ್ಕೆ ರಂಗು ನೀಡುತ್ತಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ತಮಗೂ ನೀರವ್ ಮೋದಿಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿದ್ದಾರೆ.

    ನೀರವ್ ಮೇಲಿನ ವಂಚನೆ ಆರೋಪಗಳು ಗಂಭೀರವಾಗುತ್ತಿದ್ದಂತೆ, ಪ್ರಿಯಾಂಕಾ ಚೋಪ್ರಾ ಮತ್ತು ನೀರವ್ ಮೋದಿ ನಡುವೆ ಉತ್ತಮ ಸಂಬಂಧವಿತ್ತು, ಪ್ರಿಯಾಂಕಾ ಕೂಡ ನೀರವ್ ಅವರಿಂದ ಸಾಕಷ್ಟು ಆರ್ಥಿಕ ಲಾಭಗಳನ್ನು ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಎಲ್ಲಿಯೂ ತುಟಿಪಿಟಕ್ ಎನ್ನದ ಪ್ರಿಯಾಂಕಾ, ಈ ವಿಷಯದಿಂದ ಸಾಕಷ್ಟು ಅಂತರವನ್ನು ಕಾಯ್ದುಕೊಂಡಿದ್ದರು. ಆದರೆ ಯಾವಾಗ ಈ ಪ್ರಕರಣದಲ್ಲಿ ಒಂದರ ಹಿಂದೊಂದು ಬಾಲಿವುಡ್ ಮಂದಿಯ ಹೆಸರುಗಳು ಹೊರಬರಲು ಆರಂಭಿಸಿದವೋ, ಎಚ್ಚೆತ್ತುಕೊಂಡ ಪ್ರಿಯಾಂಕಾ, ನೀರವ್ ಮೋದಿ ವಿರುದ್ಧ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಗುತ್ತಿಗೆಯನ್ನು ರದ್ದುಪಡಿಸಿದ್ದಾರೆ.

    ಈ ವಿಷಯವನ್ನು ಖಚಿತಪಡಿಸಿರುವ ಪ್ರಿಯಾಂಕ ಚೋಪ್ರಾ ವಕ್ತಾರರು, ಇನ್ನು ಮುಂದೆ ನೀರವ್ ಮೋದಿ ಕಂಪೆನಿಯ ಉತ್ಪನಗಳಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ಳುವುದಿಲ್ಲ. ನೀರವ್‍ಗೂ ಅವರಿಗೂ ಯಾವುದೇ ಸಂಬಂಧಗಳು ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಕಳೆದ ವರ್ಷವಷ್ಟೇ, ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನೀರವ್ ಮೋದಿಯವರ ಕಂಪೆನಿಯ ಜ್ಯುವೆಲ್ಲರಿ ಜಾಹೀರಾತುಗಳಲ್ಲಿ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಂಡಿದ್ದರು. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಸಿದ್ಧಾರ್ಥ್ ಮಲ್ಹೋತ್ರಾ, ಬ್ರಾಂಡ್ ಜೊತೆಗೆ ತಮ್ಮ ಗುತ್ತಿಗೆ ಮುಗಿದಿರುವುದರಿಂದ ತಾವು ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

  • ನೀರವ್ ಮೋದಿಗೆ ಸೇರಿದ 10,000ಕ್ಕೂ ಹೆಚ್ಚು ವಾಚ್‍ಗಳನ್ನ ಜಪ್ತಿ ಮಾಡಿದ ಇಡಿ

    ನೀರವ್ ಮೋದಿಗೆ ಸೇರಿದ 10,000ಕ್ಕೂ ಹೆಚ್ಚು ವಾಚ್‍ಗಳನ್ನ ಜಪ್ತಿ ಮಾಡಿದ ಇಡಿ

    ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ತೀವ್ರಗೊಳಿಸಿದ್ದು, ಶುಕ್ರವಾರದಂದು ನೀರವ್ ಮೋದಿ ಪತ್ನಿಗೆ ವಿಚಾರಣೆಗಾಗಿ ನೋಟಿಸ್ ನೀಡಿದೆ.

    11,300 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಭರಣ ವಿನ್ಯಾಸಕ ನೀರವ್ ಮೋದಿಗೆ ಸೇರಿದ 44 ಕೋಟಿ ರೂ. ಠೇವಣಿ ಹಾಗೂ ಶೇರ್‍ಗಳನ್ನ ಇಡಿ ಜಪ್ತಿ ಮಾಡಿದೆ. ಇಡಿ ಜಪ್ತಿ ಮಾಡಿರುವ ಬ್ಯಾಂಕ್ ಖಾತೆಯಲ್ಲಿ 30 ಕೋಟಿ ರೂ. ಹಣವಿದ್ದು, ಶೇರ್‍ಗಳ ಮೊತ್ತ 13.86 ಕೋಟಿ ರೂ.ನದ್ದಾಗಿದೆ. ಜೊತೆಗೆ ನೀರವ್ ಮೋದಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ 60 ಪ್ಲಾಸ್ಟಿಕ್ ಕಂಟೇನರ್‍ಗಳಲ್ಲಿದ್ದ 10 ಸಾವಿರಕ್ಕೂ ಹೆಚ್ಚು ಇಂಪೋರ್ಟೆಡ್ ವಾಚ್‍ಗಳನ್ನ ಜಪ್ತಿ ಮಾಡಲಾಗಿದೆ.

    ನೀರವ್ ಮೋದಿ ಡಿಸೈನರ್ ಆಭರಣಗಳ ವ್ಯವಾಹರ ಮಾಡ್ತಿದ್ದರಿಂದ ಡಿಸೈನರ್ ವಾಚ್‍ಗಳ ಸಂಗ್ರಹಕ್ಕಾಗಿ ಈ ವಾಚ್‍ಗಳನ್ನ ಆಮದು ಮಾಡಿಕೊಂಡಿರಬಹುದು ಎನ್ನಲಾಗಿದೆ. ಅಲ್ಲದೆ ಈ ವಾಚ್‍ಗಳನ್ನ ಉಡುಗೊರೆ ನೀಡುವ ಉದ್ದೇಶದಿಂದ ಆಮದು ಮಾಡಿಕೊಂಡಿರುವ ಸಾಧ್ಯತೆಯೂ ಇರುವುದರಿಂದ, ವಾಚ್‍ಗಳ ಆಮದು ಉದ್ದೇಶವೇನೆಂಬುದು ಮುಂದೆ ಸ್ಪಷ್ಟವಾಗಬೇಕಿದೆ.

    ಕಳೆದ ವಾರ ಇಡಿ ನೀರವ್ ಮೋದಿಗೆ ಸಂಬಂಧಿಸಿದ 176 ಸ್ಟೀಲ್ ಅಲ್ಮೆರಾ ಹಾಗೂ 158 ಬಾಕ್ಸ್ ಗಳನ್ನ ಜಪ್ತಿ ಮಾಡಿದೆ. ಗುರುವಾರದಂದು ಇಡಿ ನೀರವ್ ಮೋದಿ ಹಾಗೂ ಗ್ರೂಪ್‍ಗೆ ಸೇರಿದ 100 ಕೋಟಿ ರೂ. ಮೌಲ್ಯದ ಠೇವಣಿ, ಶೇರ್‍ಗಳು ಹಾಗೂ ಐಷಾರಾಮಿ ಕಾರ್‍ಗಳನ್ನ ಜಪ್ತಿ ಮಾಡಿತ್ತು.

    ನೀರವ್ ಮೋದಿಯ 7.80 ಕೋಟಿ ರೂ. ಮೌಲ್ಯದ ಹಾಗೂ ನೀರವ್ ಮೋದಿ ಸಂಬಂಧಿ, ಗೀತಾಂಜಲಿ ಗ್ರೂಪ್‍ನ ಮೆಹುಲ್ ಚೋಕ್ಸಿಗೆ ಸೇರಿದ 86.72 ಕೋಟಿ ರೂ. ಮೌಲ್ಯದ ಮ್ಯೂಚುವಲ್ ಫಂಡ್ಸ್ ಹಾಗೂ ಶೇರ್‍ಗಳನ್ನ ಇಡಿ ಜಪ್ತಿ ಮಾಡಿದೆ.

    ಮುಂಬೈ ಶಾಖೆಯಲ್ಲಿ 11,300 ಕೋಟಿ ರೂ. ಅಕ್ರಮ ವಹಿವಾಟು ನಡೆದಿರುವುದು ತನಿಖೆ ವೇಳೆ ಪತ್ತೆಯಾಗಿದೆ. ತಮಗೆ ಬೇಕಾದ ಗ್ರಾಹಕರ ಜೊತೆ ವ್ಯವಹಾರ ನಡೆಸಿ ಈ ಅಕ್ರಮ ಎಸಗಲಾಗಿದೆ ಎಂದು ಪಿಎನ್‍ಬಿ ಮುಂಬೈ ಶೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ್ದ ಲೆಕ್ಕಪತ್ರದಲ್ಲಿ ತಿಳಿಸಿದೆ.

    ಪಿಎನ್‍ಬಿ ಗ್ರಾಹಕರಿಗೆ ಬೃಹತ್ ಪ್ರಮಾಣದಲ್ಲಿ ಸಾಲ ನೀಡುವ ದೇಶದ ಎರಡನೇ ಅತೀ ದೊಡ್ಡ ರಾಷ್ಟ್ರೀಕೃತ ಬ್ಯಾಂಕ್ ಆಗಿದೆ. ಅಷ್ಟೇ ಅಲ್ಲದೇ ತನ್ನ ಆಸ್ತಿಯಿಂದಾಗಿ ದೇಶದ ನಾಲ್ಕನೇ ಅತೀ ದೊಡ್ಡ ಬ್ಯಾಂಕ್ ಎನಿಸಿಕೊಂಡಿದೆ.

    ಪಿಎನ್‍ಬಿ 2016-17ರ ಅವಧಿಯಲ್ಲಿ ವಸೂಲಾಗದ 9,205 ಕೋಟಿ ರೂ. ಸಾಲದ ಮೊತ್ತವನ್ನು ವಜಾ ಮಾಡಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಳಿಕ ಅತಿ ಹೆಚ್ಚು ಸಾಲದ ಮೊತ್ತವನ್ನು ವಜಾಗೊಳಿಸಿದ ಎರಡನೇ ಬ್ಯಾಂಕ್ ಪಿಎನ್‍ಬಿ ಆಗಿದೆ. ಎಸ್‍ಬಿಐ ವಸೂಲಾಗದ 20,339 ಕೋಟಿ ರೂ. ಸಾಲದ ಮೊತ್ತವನ್ನು ವಜಾಗೊಳಿಸಿತ್ತು.