Tag: nirbhaya case

  • ಕಾನೂನು ಕಸರತ್ತಿಗೆ ಒಂದೇ ವಾರ ಟೈಮ್ – ನಿರ್ಭಯಾ ಅತ್ಯಾಚಾರಿಗಳಿಗೆ ಹೈಕೋರ್ಟ್ ಡೆಡ್‍ಲೈನ್

    ಕಾನೂನು ಕಸರತ್ತಿಗೆ ಒಂದೇ ವಾರ ಟೈಮ್ – ನಿರ್ಭಯಾ ಅತ್ಯಾಚಾರಿಗಳಿಗೆ ಹೈಕೋರ್ಟ್ ಡೆಡ್‍ಲೈನ್

    ನವದೆಹಲಿ: ಗಲ್ಲು ಶಿಕ್ಷೆಯಿಂದ ಪಾರಾಗಲು ದಿನಕ್ಕೊಂದು ನೆಪವೊಡ್ಡಿ ಕಾನೂನು ಕಸರತ್ತು ಮಾಡುತ್ತಿರುವ ನಿರ್ಭಯಾ ಅತ್ಯಾಚಾರಿಗಳಿಗೆ ದೆಹಲಿ ಹೈಕೋರ್ಟ್ 1 ವಾರ ಕಾಲಾವಕಾಶ ನೀಡಿದೆ. ಆ ಬಳಿಕ ಅತ್ಯಾಚಾರಿಗಳನ್ನು ಗಲ್ಲಿಗೇರಿಸೋದು ಖಚಿತವೆಂದು ಹೈಕೋರ್ಟ್ ತಿಳಿಸಿದೆ.

    ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆಗೆ ಅನಿರ್ಧಿಷ್ಟಾವಧಿ ತಡೆ ನೀಡಿ ಕೆಳ ಹಂತದ ನ್ಯಾಯಾಲಯ ಕೆಲವು ದಿನಗಳ ಹಿಂದೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ತಿಹಾರ್ ಜೈಲು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಒಂದು ವಾರದ ಒಳಗೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಗಿಸುವಂತೆ ಸೂಚಿಸಿದೆ. ಆ ಬಳಿಕ ಅಪರಾಧಿಗಳು ಏನೇ ಕಸರತ್ತು ಮಾಡಿದರು ಪ್ರಯೋಜನಕ್ಕಿಲ್ಲ, ಗಲ್ಲು ಶಿಕ್ಷೆಯ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ವಿಚಾರಣಾ ನ್ಯಾಯಾಲಯ ಹೇಳಿದೆ.

    ವಿಚಾರಣೆ ವೇಳೆ ನ್ಯಾ. ಸುರೇಶ್ ಕೇತ್, ಒಬ್ಬ ಅಪರಾಧಿಯ ಕ್ಷಮಾದಾನ ಅರ್ಜಿ ಬಾಕಿ ಉಳಿದಿದ್ದರೆ, ಇತರೆ ಅಪರಾಧಿಗಳನ್ನು ನೇಣಿಗೇರಿಸಬಹುದು ಎಂದು ದೆಹಲಿ ಜೈಲು ನಿಯಮಗಳು ಹೇಳುವುದಿಲ್ಲ. ಸುಪ್ರೀಂ ಕೋರ್ಟಿನಲ್ಲಿ ಅಪರಾಧಿಗಳ ಹಣೆ ಬರಹ ಒಂದೇ ತೀರ್ಪಿನಿಂದ ನಿರ್ಧಾರವಾಗಿದೆ. ಎಲ್ಲಾ ಅಪರಾಧಿಗಳ ಗಲ್ಲು ಒಟ್ಟಾಗಿ ಜಾರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ತೀರ್ಪಿನ ನಂತರ ನಿರ್ಭಯಾ ತಾಯಿ ಆಶಾ ದೇವಿ ಪ್ರತಿಕ್ರಿಯಿಸಿ, ಪ್ರಕ್ರಿಯೆಗೆ ಹೈಕೋರ್ಟ್ ಗಡುವು ನೀಡಿರುವುದಕ್ಕೆ ಖುಷಿಯಾಗಿದೆ. ಅಪರಾಧಿಗಳು ಗಲ್ಲು ಶಿಕ್ಷೆಯ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದರು. ಇದೀಗ ಇದನ್ನು ಒಂದು ವಾರದ ಒಳಗೆ ಮುಗಿಸಬೇಕಾಗಿದೆ. ಇದು ಸಂತಸದ ವಿಚಾರ ಎಂದರು.

    ಈ ಹಿಂದೆ ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು. ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ರಾಷ್ಟ್ರಪತಿಗಳ ತೀರ್ಮಾನ ಪ್ರಕಟವಾಗದ ಹಿನ್ನೆಲೆಯಲ್ಲಿ ಪಟಿಯಾಲ ಕೋರ್ಟ್ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು.

    ಇನ್ನೊಂದೆಡೆ ಮತ್ತೋರ್ವ ದೋಷಿ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹೀಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದನು. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಹೀಗಾಗಿ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದನು.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಕಳೆದ ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ. ಆದರೆ ಅಪರಾಧಿಗಳು ಏನೇ ಮಾಡಿದರೂ ಗಲ್ಲು ಶಿಕ್ಷೆಯನ್ನು ಮಾತ್ರ ತಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

  • ನಿರ್ಭಯಾ ಪ್ರಕರಣ- ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

    ನಿರ್ಭಯಾ ಪ್ರಕರಣ- ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಬಳಿಕ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

    ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯ ಪಟಿಯಾಲ ಹೌಸ್ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದವು. ಪಟಿಯಾಲ ಕೋರ್ಟ್ ನಿರ್ಭಯಾ ಪ್ರಕರಣದ ದೋಷಿಗಳ ಡೆತ್ ವಾರೆಂಟ್ ಗೆ ತಡೆಯನ್ನು ನೀಡಿದೆ. ಈ ವೇಳೆ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೋಷಿಗಳು ಕಾನೂನಿನ ದುರಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

    ದೋಷಿಗಳು ತಮ್ಮ ಶಿಕ್ಷೆಯನ್ನು ಕಾನೂನಿನ ಮೂಲಕ ವಿಳಂಬಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಗಲ್ಲು ಶಿಕ್ಷೆಯನ್ನು ಮುಂದೂಡಲು ತಮ್ಮದೇ ವ್ಯೂಹ ರಚಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ದೋಷಿ ಪವನ್ ಗುಪ್ತಾ ಕ್ಷಮಾದಾನ ಅರ್ಜಿ ಸಲ್ಲಿಸಲು ಪ್ಲಾನ್ ಮಾಡಿಕೊಂಡಿದ್ದಾನೆ. ದೋಷಿಗಳು ನ್ಯಾಯ ವ್ಯವಸ್ಥೆಯೊಂದಿಗೆ ಆಟ ಆಡುವ ಮೂಲಕ ದೇಶದ ಜನತೆಯ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಕಾನೂನ ಪ್ರಕಾರವೇ ಪ್ರಕಟವಾದ ಶಿಕ್ಷೆಯನ್ನು ಮುಂದೂಡಲು ವ್ಯವಸ್ಥಿತವಾದ ಜಾಲ ರಚಿಸಲಾಗಿದೆ ಎಂದು ತುಷಾರ್ ಮೆಹ್ತಾ ತಮ್ಮ ವಾದ ಮಂಡಿಸಿದರು.

    ದೋಷಿಗಳಾದ ಆಕ್ಷಯ್ ಸಿಂಗ್ (31), ವಿನಯ್ ಶರ್ಮಾ (26) ಮತ್ತು ಪವನ್ (25) ಪರವಾಗಿ ವಕೀಲ ಎ.ಪಿ.ಸಿಂಗ್ ವಾದ ಮಂಡಿಸಿದರು. ತಮ್ಮ ವಾದದಲ್ಲಿ ಕೇಂದ್ರ ಸರ್ಕಾರ ಅರ್ಜಿ ಮೂಲಕ ಸಲ್ಲಿಸಿರುವ ಮನವಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮತ್ತೋರ್ವ ದೋಷಿ ಮುಖೇಶ್ ಪರವಾಗಿ ವಕೀಲ ರೆಬೆಕಾ ಜಾನ್ ವಾದ ಮಂಡಿಸಿದರು. ಎಲ್ಲರ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

  • ನಿರ್ಭಯಾ ಪ್ರಕರಣದ ದೋಷಿ ವಿನಯ್ ಕ್ಷಮಾದಾನ ಅರ್ಜಿ ತಿರಸ್ಕೃತ 

    ನಿರ್ಭಯಾ ಪ್ರಕರಣದ ದೋಷಿ ವಿನಯ್ ಕ್ಷಮಾದಾನ ಅರ್ಜಿ ತಿರಸ್ಕೃತ 

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತ ವಾಗಿದೆ. ಪ್ರಕರಣದ ಮತ್ತೋರ್ವ ದೋಷಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿ ಸಹ ತಿರಸ್ಕೃತಗೊಂಡಿತ್ತು.

    ಪ್ರಕರಣದ ನಾಲ್ವರು ಅಪರಾಧಿಗಳು ಇಂದು ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆಗೆ ಒಳಗಾಗಬೇಕಿತ್ತು. ಆದರೆ ಪಟಿಯಾಲ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಗಲ್ಲುಶಿಕ್ಷೆ ಮುಂದೂಡಿಕೆಯಾಗಿದೆ. ಶುಕ್ರವಾರ ಈ ಆದೇಶಕ್ಕೆ ತಡೆ ನೀಡಲಾಗಿದೆ. ನ್ಯಾಯಾಲಯ ಹೊಸ ದಿನಾಂಕವನ್ನು ನಿಗದಿ ಮಾಡಿಲ್ಲ.

    ಫೆ. 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಅಪರಾಧಿಗಳಿಗೆ ಗಲ್ಲಿಗೆ ಏರಿಸಲು ಕೋರ್ಟ್ ಆದೇಶ ನೀಡಿತ್ತು. ಆದರೆ ಅಪರಾಧಿಗಳು ಗಲ್ಲುಶಿಕ್ಷೆ ಜಾರಿ ಮುಂದೂಡಲು ನಾನಾ ಪ್ರಯತ್ನವನ್ನು ಮುಂದುವರಿಸಿದ್ದರು. ಬುಧವಾರ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿ ಅವರಿಗೆ ಎರಡನೇ ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ರಾಷ್ಟ್ರಪತಿಗಳ ತೀರ್ಮಾನ ಪ್ರಕಟವಾಗದ ಹಿನ್ನೆಲೆಯಲ್ಲಿ ಪಟಿಯಾಲ ಕೋರ್ಟ್ ತಡೆಯಾಜ್ಞೆ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು.

    ಇನ್ನೊಂದೆಡೆ ಮತ್ತೋರ್ವ ದೋಷಿ ಪವನ್, ನಾನು ಅಪ್ರಾಪ್ತನಾಗಿದ್ದಾಗ ಈ ಘಟನೆ ನಡೆದಿತ್ತು. ಹಾಗಾಗಿ ನನ್ನನ್ನು ಮರಣದಂಡನೆಗೆ ಒಳಪಡಿಸಬಾರದು ಎಂದು ಸುಪ್ರಿಂ ಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿದ್ದಾನೆ. ಈ ಹಿಂದೆಯೇ ತ್ರಿಸದಸ್ಯ ಪೀಠ ಪವನ್ ಅರ್ಜಿಯನ್ನು ತಿರಸ್ಕೃತ ಮಾಡಿತ್ತು. ಈಗ ಸುಪ್ರೀಂಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದಾನೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಬುಧವಾರ ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿತ್ತು. ಮುಖೇಶ್ ನಂತೆಯೇ ಉಳಿದ ಅಪರಾಧಿಗಳು ಅರ್ಜಿ ಸಲ್ಲಿಸುವ ಮೂಲಕ ಗಲ್ಲು ಏರುವುದಕ್ಕೆ ವಿಳಂಬ ಮಾಡುವ ತಂತ್ರ ಮಾಡುತ್ತಿದ್ದಾರೆ.

  • ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿ ವಜಾ

    ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿ ವಜಾ

    ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿಯನ್ನು ಸುಪ್ರೀಂಕೋರ್ಟಿನ ತ್ರಿ ಸದಸ್ಯ ಪೀಠ ವಜಾಗೊಳಿಸಿದೆ. ಫೆಬ್ರವರಿ 1ರಂದು ಪ್ರಕರಣ ನಾಲ್ವರು ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಇಂದು ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿದೆ. ಎಲ್ಲ ಕಾನೂನು ಹೋರಾಟದ ಅವಕಾಶಗಳು ಅಂತ್ಯಗೊಂಡಿದ್ದು, ಫೆಬ್ರವರಿ 1ರಂದು ಗಲ್ಲು ಶಿಕ್ಷೆಗೆ ಒಳಗಾಗೋದು ಖಚಿತವಾಗಿದೆ.

    ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪನ್ನು ನ್ಯಾಯಾಂಗ ಸಮೀಕ್ಷೆಗೆ ಒಳಪಡಿಸಬೇಕೆಂದು ಮುಖೇಶ್ ಪರ ವಕೀಲರಾದ ಅಂಜನಾ ಪ್ರಕಾಶ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳ ಮುಂದೆ ಎಲ್ಲ ದಾಖಲಾತಿಗಳನ್ನು ಇರಿಸಿಲ್ಲ. ಕ್ಷಮಾದಾನದ ಅರ್ಜಿಯನ್ನು ಅವಸರದಲ್ಲಿ ವಜಾಗೊಳಿಸಲಾಗಿದೆ. ಈ ಮೂಲಕ ನ್ಯಾಯವನ್ನೇ ಕೊನೆಗೊಳಿಸಲಾಗುತ್ತಿದೆ ಎಂದು ಅಂಜನಾ ಪ್ರಕಾಶ್ ತಮ್ಮ ವಾದದಲ್ಲಿ ಹೇಳಿದ್ದರು.

    ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ರಾಷ್ಟ್ರಪತಿಗಳ ಮುಂದೆ ಎಲ್ಲ ದಾಖಲೆಗಳನ್ನು ಇರಿಸಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ರಾಷ್ಟ್ರಪತಿಗಳು ಸೂಕ್ತವಾದ ತೀರ್ಮಾನ ತೆಗೆದುಕೊಂಡಿಲ್ಲ ಹೇಗೆ ಹೇಳುತ್ತೀರಿ ಎಂದು ಪ್ರಶ್ನೆ ಮಾಡಿತ್ತು.

    ಸಾಲಿಸಿಟರ್ ಜನರ್ ತುಷಾರ್ ಮೆಹ್ತಾ, ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ಜೊತೆಗೆ ಎಲ್ಲ ದಾಖಲೆಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿತ್ತು. ಯಾವ ದಾಖಲೆಗಳನ್ನು ನೋಡಬೇಕು ಎಂಬುವುದು ರಾಷ್ಟ್ರಪತಿಗಳ ವಿಶೇಷಾಧಿಕಾರ. ತಮ್ಮ ವಿಶೇಷಾಧಿಕಾರವನ್ನು ಬಳಸಿ ಕ್ಷಮಾದಾನದ ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ವಾದ ಮಂಡಿಸಿದ್ದರು.

  • ನಿಮ್ಮ ಕೊನೆಯ ಆಸೆ ಏನು? ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಗೆ ಶುರುವಾಯ್ತು ದಿನಗಣನೆ

    ನಿಮ್ಮ ಕೊನೆಯ ಆಸೆ ಏನು? ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಗೆ ಶುರುವಾಯ್ತು ದಿನಗಣನೆ

    ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳ ಗಲ್ಲು ಶಿಕ್ಷೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1 ರಂದು ಬೆಳಗ್ಗೆ ಆರು ಗಂಟೆಗೆ ಗಲ್ಲು ಶಿಕ್ಷೆ ವಿಧಿಸಲಿದ್ದು ಈ ನಿಟ್ಟಿನಲ್ಲಿ ಸಿದ್ಧತೆಗಳು ಆರಂಭವಾಗಿದೆ.

    ನಾಲ್ವರು ದೋಷಿಗಳಿಗೆ ತಮ್ಮ ಕೊನೆಯ ಆಸೆ ತಿಳಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ಲಿಖಿತ ರೂಪದಲ್ಲಿ ಪತ್ರವೊಂದನ್ನ ನೀಡಿದ್ದಾರೆ. ಕಳೆದ ವಾರ ಈ ಮಾಹಿತಿ ಕೇಳಿರುವ ಹೆಚ್ಚುವರಿ ಇನ್ಸ್‍ಪೆಕ್ಟರ್ ಜನರಲ್ ರಾಜ್‍ಕುಮಾರ್, ಈಡೇರಿಸಬಹುದಾದ ಆಸೆಗಳನ್ನು ಪಟ್ಟಿ ಮಾಡುವಂತೆ ಸೂಚಿಸಿದ್ದಾರೆ.

    ಈ ಮಾಹಿತಿ ಧೃಡಪಡಿಸಿರುವ ಎಐಜಿ ರಾಜಕುಮಾರ್, ಗಲ್ಲಿಗೇರಿಸುವ ಮೊದಲು ನಾಲ್ಕು ಜನರನ್ನು ತಮ್ಮ ಕೊನೆಯ ಆಶಯವನ್ನು ಪಟ್ಟಿ ಮಾಡಲು ಲಿಖಿತವಾಗಿ ಕೇಳಿಕೊಂಡಿದೆ. ಅವರಲ್ಲಿ ಯಾರೂ ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ, ನಾಲ್ವರು ದೋಷಿಗಳ ಕೊನೆಯ ಆಸೆ ಏನೆಂದು ಒಮ್ಮೆ ನಮಗೆ ತಿಳಿಸಿದರೆ, ಆಸೆ ಈಡೇರಲು ಸಾಧ್ಯವಾದರೆ ತಿಹಾರ್ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪ್ರತಿ ಆಸೆ ಪೂರ್ಣಗೊಳ್ಳಲು ಸಾಧ್ಯವಿಲ್ಲ. ಅವರು ಲಿಖಿತವಾಗಿ ನಮಗೆ ಪಟ್ಟಿ ನೀಡಿದಲ್ಲಿ ಜೈಲು ಆಡಳಿತವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

    ನಾಲ್ಕು ಅಪರಾಧಿಗಳು ತಾವು ಕೊನೆಯ ಬಾರಿಗೆ ಯಾರನ್ನಾದರೂ ಭೇಟಿಯಾಗಲು ಬಯಸಿದರೆ ಅವರು ಹೆಸರಗಳು ಮತ್ತು ಅಪರಾಧಿಗಳು ಹೊಂದಿರುವ ಯಾವುದೇ ಆಸ್ತಿ ಅಥವಾ ವಸ್ತುಗಳನ್ನು ಅವರು ಬಯಸುವ ಯಾರಿಗಾದರೂ ವರ್ಗಾಯಿಸಲು ಕೇಳಿಕೊಳ್ಳಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದರು.

    ಫೆಬ್ರವರಿ 1 ರಂದು ಬೆಳಗ್ಗೆ 6 ಗಂಟೆಗೆ ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31), ಮುಖೇಶ್ ಕುಮಾರ್ ಸಿಂಗ್ (32) ಮತ್ತು ಪವನ್ (26) ಅವರನ್ನು ಗಲ್ಲಿಗೇರಿಸಿಸಲು ದೆಹಲಿ ನ್ಯಾಯಾಲಯವು ಜನವರಿ 17 ರಂದು ಹೊಸ ಡೆತ್ ವಾರಂಟ್ ಹೊರಡಿಸಿದೆ.

  • ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ದೋಷಿಗಳಲ್ಲಿ ಒಬ್ಬನಾದ ಮುಕೇಶ್ ಗಲ್ಲುಶಿಕ್ಷೆಯಿಂದ ಪಾರಾಗಲು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದಾದ ಬಳಿಕ ಮುಕೇಶ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಇನ್ನು ಮೂವರು ಕ್ಷಮಾದಾನದ ಅರ್ಜಿ ಸಲ್ಲಿಸಿಲ್ಲ.

    ಮುಕೇಶ್ ಸಿಂಗ್ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಜನವರಿ 22ರಂದು ಗಲ್ಲಿಗೇರಿಸುವ ಬಗ್ಗೆ ಗೊಂದಲವಿದೆ ಎಂದಿತ್ತು. ಜೈಲಿನ ನಿಯಮಗಳನ್ನು ಉಲ್ಲೇಖಿಸಿದ್ದ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿತ್ತು.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ. ಆದರೆ ಈಗ ರಾಷ್ಟ್ರಪತಿಗಳು ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

  • 7 ವರ್ಷದಿಂದ ಜೈಲು – 1 ಲಕ್ಷಕ್ಕೂ ಅಧಿಕ ಹಣ ಸಂಪಾದಿಸಿದ ನಿರ್ಭಯಾ ದೋಷಿಗಳು

    7 ವರ್ಷದಿಂದ ಜೈಲು – 1 ಲಕ್ಷಕ್ಕೂ ಅಧಿಕ ಹಣ ಸಂಪಾದಿಸಿದ ನಿರ್ಭಯಾ ದೋಷಿಗಳು

    – 23 ಬಾರಿ ಜೈಲಿನ ನಿಯಮ ಉಲ್ಲಂಘನೆ

    ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಕಳೆದ 7 ವರ್ಷದಿಂದ ಜೈಲಿನಲ್ಲಿದ್ದು, ಅಲ್ಲಿ ಬರೋಬ್ಬರಿ 1,37,000 ರೂ. ಹಣವನ್ನು ಸಂಪಾದಿಸಿದ್ದಾರೆ.

    ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಅಕ್ಷಯ್ ಠಾಕುರ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ ಕಳೆದ 7 ವರ್ಷದ ಜೈಲು ವಾಸದಲ್ಲಿ 1,37,000 ರೂ. ಹಣವನ್ನು ಸಂಪಾದಿಸಿದ್ದಾರೆ. ಈ 7 ವರ್ಷದಲ್ಲಿ ಮುಕೇಶ್ ಜೈಲಿನಲ್ಲಿ ಯಾವುದೇ ಕೆಲಸ ಮಾಡಲು ನಿರಾಕರಿಸಿದ ಕಾರಣಕ್ಕೆ ಅತ ಯಾವುದೇ ಹಣವನ್ನು ಸಂಪಾದಿಸಿಲ್ಲ. ಆದರೆ ಅಕ್ಷಯ್ 69 ಸಾವಿರ ರೂ., ವಿನಯ್ 39 ಸಾವಿರ ರೂ. ಹಾಗೂ ಪವನ್ 29 ಸಾವಿರ ರೂ. ಹಣವನ್ನು ಜೈಲಿನಲ್ಲಿ ಕೆಲಸ ಮಾಡಿ ಸಂಪಾದಿಸಿದ್ದಾರೆ. ಇದನ್ನೂ ಓದಿ: ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ಅಷ್ಟೇ ಅಲ್ಲದೆ ಈ ನಾಲ್ವರು ದೋಷಿಗಳು ಸುಮಾರು 23 ಬಾರಿ ಜೈಲಿನ ನಿಯಮವನ್ನು ಉಲ್ಲಂಘಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿದಕ್ಕೆ ವಿನಯ್ 11 ಬಾರಿ, ಅಕ್ಷಯ್ 1 ಬಾರಿ, ಮುಕೇಶ್ 3 ಬಾರಿ ಹಾಗೂ ಪವನ್‍ಗೆ 8 ಬಾರಿ ಶಿಕ್ಷೆ ಕೂಡ ನೀಡಲಾಗಿದೆ.

  • ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳ ಗಲ್ಲು ಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು.

    ಈ ನಡುವೆ ಅಪರಾಧಿ ಮುಕೇಶ್ ಗಲ್ಲು ಶಿಕ್ಷೆಯಿಂದ ಪಾರು ಮಾಡುವಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜನವರಿ 22ರಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.

    ಜೈಲಿನ ನಿಯಮಗಳನ್ನು ಉಲ್ಲೇಖಿಸಿರುವ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿದೆ.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ.

  • ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನಿರ್ಭಯಾ ದೋಷಿಗಳಿಗೆ ಗಲ್ಲು ಫಿಕ್ಸ್ – ಕ್ಯೂರೇಟಿವ್ ಅರ್ಜಿ ವಜಾ

    ನವದೆಹಲಿ: 2012ರ ದೆಹಲಿ ಗ್ಯಾಂಗ್ ರೇಪ್ ನಿರ್ಭಯಾ ಪ್ರಕರಣದ ಇಬ್ಬರು ದೋಷಿಗಳು ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ದೋಷಿಗಳಾದ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟಿಗೆ ಕ್ಯೂರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಈ ಅರ್ಜಿಯನ್ನು ವಜಾಗೊಳಿಸಿದೆ.

    ಈ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಪ್ರತಿಕ್ರಿಯಿಸಿ, ಇದು ನನಗೆ ಮಹತ್ವದ ದಿನವಾಗಿದೆ. ನಾನು ನನ್ನ ಮಗಳಿಗೆ ನ್ಯಾಯ ಕೊಡಿಸಲು ಸತತ 7 ವರ್ಷದಿಂದ ಹೋರಾಡುತ್ತಿದ್ದೇನೆ. ಜ. 22ರಂದು ದೋಷಿಗಳಿಗೆ ಗಲ್ಲಿಗೆ ಹಾಕುತ್ತಾರೆ. ಆ ದಿನ ನನ್ನ ಜೀವನದ ಹೆಚ್ಚು ಮಹತ್ವರ ದಿನ ಎಂದು ಹೇಳಿಕೊಂಡಿದ್ದಾರೆ.

    ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದೋಷಿಗಳಿಗೆ ಈಗಾಗಲೇ ಗಲ್ಲು ಶಿಕ್ಷೆ ಖಾಯಂ ಆಗಿದೆ. ಜನವರಿ 22ಕ್ಕೆ ನೇಣುಗಂಬ ಏರಲಿದ್ದಾರೆ. ಈ ಹಿಂದೆ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಮರಣದಂಡನೆಯಿಂದ ಪಾರಾಗಲು ಕೊನೆಯ ಪ್ರಯತ್ನವಾಗಿ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಕ್ಯೂರೇಟಿವ್ ಅರ್ಜಿ ಸಲ್ಲಿಸಿ ಡೆತ್ ವಾರಂಟ್ ಜಾರಿಯಾಗದಂತೆ ಮನವಿ ಮಾಡಿಕೊಂಡಿದ್ದರು.

  • ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ದೆಹಲಿ ಚುನಾವಣಾ ಕಣಕ್ಕೆ ನಿರ್ಭಯ ಸಂತ್ರಸ್ತೆಯ ತಾಯಿ?

    ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷಗಳ ಕಾನೂನು ಹೋರಾಟದ ಬಳಿಕ ಸಂತ್ರಸ್ತೆಗೆ ನ್ಯಾಯ ದೊರಕಿದೆ. ಜನವರಿ 22 ಬೆಳಗ್ಗೆ 7 ಗಂಟೆಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಡೆತ್ ವಾರಂಟ್ ಜಾರಿ ಮಾಡಿದೆ. ನಿರಂತರ ಕಾನೂನು ಹೋರಾಟ ಮಾಡಿದ ಸಂತ್ರಸ್ತೆಯ ತಾಯಿ ಆಶಾದೇವಿ ಅವರ ಧೈರ್ಯವನ್ನು ಇಡೀ ದೇಶವೇ ಮೆಚ್ಚಿ ಅಭಿನಂದಿಸಿದ್ದು ಈ ಜನಪ್ರಿಯತೆಯನ್ನು ಬಳಸಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ.

    ಆಶಾದೇವಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುದ್ದಿ ಕೇಳಿ ಬಂದಿದೆ. ಕೆಲವು ಪಕ್ಷಗಳು ಈ ನಿಟ್ಟಿನಲ್ಲಿ ಚರ್ಚೆ ಮಾಡಿದ್ದು, ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗುತ್ತಿದೆ.

    ದೆಹಲಿಯಲ್ಲಿ ಫೆಬ್ರವರಿ 8 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು, 11 ರಂದು ಫಲಿತಾಂಶ ಹೊರಬರಲಿದೆ. ಇದಕ್ಕೂ ಮೊದಲು ಅಂದರೆ ಜನವರಿ 22 ರಂದು ನಿರ್ಭಯ ದೋಷಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ. ಈ ವೇಳೆ ಇಡೀ ದೇಶ ಸಂಭ್ರಮವನ್ನು ವ್ಯಕ್ತಪಡಿಸಲಿದೆ.

    ಪ್ರಕರಣದಿಂದ ಇಡೀ ದೇಶಕ್ಕೆ ಪರಿಚಯವಾಗಿರುವ ನಿರ್ಭಯ ತಾಯಿ ಆಶಾದೇವಿಯನ್ನು ಚುನಾವಣಾ ಕಣಕ್ಕೆ ಇಳಿಸಿದರೆ ಆ ಕ್ಷೇತ್ರದಲ್ಲಿ ಗೆಲುವು ಖಚಿತ ಮತ್ತು ಪಕ್ಷದ ಕೆಲವು ಕ್ಷೇತ್ರಗಳ ಮೇಲೂ ಇದು ಪರಿಣಾಮ ಬರಲಿದೆ ಎನ್ನುವುದು ರಾಜಕೀಯ ಪಕ್ಷಗಳ ಲೆಕ್ಕಾಚಾರ. ಹೀಗಾಗಿ ಆಶಾದೇವಿ ಮಾತುಕತೆ ನಡೆಸಿದ್ದು, ಯಾವುದು ಅಂತಿಮವಾಗದ ಹಿನ್ನೆಲೆ ಯಾವುದೇ ಪಕ್ಷ ಬಹಿರಂಗವಾಗಿ ಈ ಬಗ್ಗೆ ಮಾತನಾಡಿಲ್ಲ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಆಶಾದೇವಿ, ಮಗಳನ್ನ ಅತ್ಯಾಚಾರ ಮಾಡಿದ ದೋಷಿಗಳು ನೇಣು ಕುಣಿಕೆಯಲ್ಲಿ ನೇತಾಡುವುದನ್ನು ಮೊದಲು ನೋಡಬೇಕು. ಬಳಿಕ ಚುನಾವಣೆ ಸ್ವರ್ಧಿಸುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಅವರು ಚುನಾವಣೆ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿಲ್ಲ.

    ದೆಹಲಿಯಲ್ಲಿ ನೇರ ಫೈಟ್ ನೀಡುತ್ತಿರುವ ಬಿಜೆಪಿ ಮತ್ತು ಆಮ್ ಅದ್ಮಿ ಆಶಾದೇವಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಅವರ ಪರ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದು ಏಳು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿದ ಅವರ ಧೈರ್ಯವನ್ನು ಹಾಡಿ ಹೊಗಳುತ್ತಿದ್ದಾರೆ. ಕೆಲವು ಗುಪ್ತ ಸಭೆಗಳು ಕೂಡಾ ನಡೆದಿದ್ದು ಗೆಲ್ಲುವ ಕುದುರೆ ಸೆಳೆಯಲು ಎರಡು ಪಾರ್ಟಿಗಳು ನಿರಂತರ ಪ್ರಯತ್ನ ಮಾಡುತ್ತಿವೆ.