Tag: nirbhaya case

  • ನಿರ್ಭಯಾ ಪ್ರಕರಣ ದೋಷಿಗಳಿಗೆ ಗಲ್ಲು – ಇದು ಅತ್ಯಾಚಾರಿಗಳಿಗೆ ಎಚ್ಚರಿಕೆಯ ಘಂಟೆ ಎಂದ ಸಿಎಂ

    ನಿರ್ಭಯಾ ಪ್ರಕರಣ ದೋಷಿಗಳಿಗೆ ಗಲ್ಲು – ಇದು ಅತ್ಯಾಚಾರಿಗಳಿಗೆ ಎಚ್ಚರಿಕೆಯ ಘಂಟೆ ಎಂದ ಸಿಎಂ

    ಹುಬ್ಬಳ್ಳಿ: ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಿದ್ದು ಸ್ವಾಗರ್ತಾಹವಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನವಾಗಿರುವುದು ಸ್ವಾಗತಾರ್ಹ. ಈ ರೀತಿಯ ಪ್ರಕರಣಗಳಲ್ಲಿ ಪಾಲ್ಗೊಳ್ಳುವ ಆರೋಪಿಗಳಿಗೆ ಇದು ಎಚ್ಚರಿಕೆ ಘಂಟೆಯಾಗಿದೆ ಎಂದು ಹೇಳಿದರು.

    8 ವರ್ಷದ ಹಿಂದೆ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ತೀರ್ಪು ಪ್ರಶ್ನಿಸಿ ದೋಷಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೊಬ್ಡೆ, ವಿಚಾರಣೆಯ ಪೀಠದಿಂದ ದಿಢೀರ್ ಹಿಂದೆ ಸರಿದ ಕಾರಣ ಇಂದು ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರ ಪೀಠದಲ್ಲಿ ನಡೆಯಿತು.

    ಏನಿದು ಪ್ರಕರಣ?
    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

    ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. 2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು.

  • ಕೇವಲ ಅಪರಾಧಿಗಳಲ್ಲ ನಮ್ಮ ಹಕ್ಕುಗಳ ಬಗ್ಗೆಯೂ ಯೋಚಿಸಿ : ಕಣ್ಣೀರಿಟ್ಟ ನಿರ್ಭಯಾ ತಾಯಿ

    ಕೇವಲ ಅಪರಾಧಿಗಳಲ್ಲ ನಮ್ಮ ಹಕ್ಕುಗಳ ಬಗ್ಗೆಯೂ ಯೋಚಿಸಿ : ಕಣ್ಣೀರಿಟ್ಟ ನಿರ್ಭಯಾ ತಾಯಿ

    ನವದೆಹಲಿ: ಕೇವಲ ಅಪರಾಧಿಗಳ ಹಕ್ಕುಗಳ ಬಗ್ಗೆ ಯೋಚನೆ ಮಾಡುತ್ತಿದ್ದಿರಿ, ಸ್ವಲ್ಪ ಹಕ್ಕುಗಳ ಬಗ್ಗೆಯೂ ಒಮ್ಮೆ ಯೋಚಿಸಿ ಎಂದು ನಿರ್ಭಯಾ ತಾಯಿ ಆಶಾದೇವಿ ಕೋರ್ಟ್ ಹಾಲ್‍ನಲ್ಲೇ ಕಣ್ಣೀರಿಟ್ಟು ಅಸಮಧಾನ ಹೊರ ಹಾಕಿದ್ದಾರೆ.

    ನಿರ್ಭಯಾ ಅತ್ಯಾಚಾರ ಪ್ರಕರಣ ದೋಷಿಗಳಿಗೆ ಡೆತ್ ವಾರೆಂಟ್ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನಾಯಾಧೀಶರ ಮುಂದೆ ಅರ್ಜಿದಾರೇ ಆಶಾದೇವಿ ಆಹವಾಲು ತೋಡಿಕೊಂಡಿದ್ದಾರೆ.

    ಆಶಾದೇವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪಟಿಯಾಲ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನ್ಯಾ.ಸತೀಶ್ ಕುಮಾರ್ ಅರೋರಾ ವಿಚಾರಣೆ ನಡೆಸಿದರು. ಈ ವೇಳೆ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್, ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಕ್ಷಮದಾನಕ್ಕೆ ಅರ್ಜಿ ಸಲ್ಲಿಸಲಿದ್ದು ಇನ್ನಿಬ್ಬರು ನಿರಾಕರಿಸಿದ್ದಾರೆ ಎಂದು ಮಾಹಿತಿ ನೀಡಿದರು. ವಾದ ಆಲಿಸಿದ ಪೀಠ ದೋಷಿಗಳಿಗೆ ಹೊಸ ನೋಟಿಸ್ ನೀಡುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿ ಜನವರಿ ಏಳಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.

    ಸುಪ್ರೀಂಕೋರ್ಟ್ ಪ್ರಕರಣ ನಾಲ್ವರು ಆರೋಪಿಗಳಿಗೆ ಗಲ್ಲು ಖಾಯಂ ಮಾಡಿದೆ. ಪುನರ್ ಪರಿಶೀಲನಾ ಅರ್ಜಿಗಳು ರದ್ದಾಗಿದ್ದು ಅವರಿಗೆ ಶೀಘ್ರ ಡೆತ್ ವಾರೆಂಟ್ ಜಾರಿ ಮಾಡುವಂತೆ ಆಶಾದೇವಿ ಪರ ವಕೀಲರು ಮನವಿ ಮಾಡಿಕೊಂಡರು. ಈ ವೇಳೆ ಮಧ್ಯ ಪ್ರವೇಶಿಸಿದ ಆಶಾದೇವಿ ಕೇವಲ ಅಪರಾಧಿಗಳ ಹಕ್ಕು ಬಗ್ಗೆ ಮಾತನಾಡುತ್ತಿದ್ದಿರಿ. ನಮ್ಮ ಹಕ್ಕುಗಳು ಏನಾಗಬೇಕು ಅಂತಾ ಕಣ್ಣೀರಿಟ್ಟರು ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಸತೀಶ್ ಕುಮಾರ್ ಅರೋರಾ ನಾವು ಇಲ್ಲಿ ನ್ಯಾಯವನ್ನೇ ಎತ್ತಿ ಹಿಡಿಯಲು ಇದ್ದೇವೆ ಎಂದು ಪ್ರತಿಕ್ರಿಯಿಸಿದರು.

    ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳು ಜೊತೆ 3:15 ಕ್ಕೆ ವಿಡಿಯೋ ಕಾನ್ಪರೆನ್ಸ್ ಮಾಡಿದ ನ್ಯಾಯಾಧೀಶರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಜನವರಿ ಏಳರಂದು ನಡೆಯಲಿರುವ ವಿಚಾರಣೆ ವೇಳೆ ಡೆತ್ ವಾರೆಂಟ್ ನೋಟಿಸ್ ಜಾರಿ ಆಗುವ ಸಾಧ್ಯತೆ ಇದೆ.

  • ಕೊನೆಗೂ ಸಿಕ್ಕಿದ್ರು ನಿರ್ಭಯ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ

    ಕೊನೆಗೂ ಸಿಕ್ಕಿದ್ರು ನಿರ್ಭಯ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ

    ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಹಂತಕರನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಪೂರ್ವತಯಾರಿ ನಡೆಯುತ್ತಿದ್ದು, ಕಾಮುಕರನ್ನು ಗಲ್ಲಿಗೇರಿಸುವ ವ್ಯಕ್ತಿಗಾಗಿ ಜೈಲಿನ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಕಾಮುಕರ ಹುಟ್ಟಡಗಿಸಲು ಉತ್ತರ ಪ್ರದೇಶದ ಮೀರತ್ ಜೈಲಿನಿಂದ ಹ್ಯಾಂಗ್‍ಮ್ಯಾನ್ ಬರಲಿದ್ದಾರೆ.

    ಈಗಾಗಲೇ ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲು ಅಗತ್ಯವಾಗಿರುವ ನೇಣು ಕುಣಿಕೆಯನ್ನು ತಯಾರಿಸುವಂತೆ ಬಿಹಾರದ ಬಕ್ಸರ್ ಜೈಲು ಅಧಿಕಾರಿಗಳಿಗೆ ತಿಹಾರ್ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿ ಯಾವುದೇ ಹ್ಯಾಂಗ್‍ಮ್ಯಾನ್ ಇರದ ಹಿನ್ನೆಲೆ ಸೋಮವಾರ ಈ ಕೆಲಸಕ್ಕಾಗಿ ಸಿಬ್ಬಂದಿ ಬೇಕು ಎಂದು ಅಧಿಕಾರಿಗಳು ದೇಶದ ಹಲವು ಜೈಲುಗಳ ಮೊರೆಹೋಗಿದ್ದರು.

    ಈ ವೇಳೆ ಮೀರತ್ ಜೈಲಿನಲ್ಲಿ ಇಬ್ಬರು ಹ್ಯಾಂಗ್‍ಮೆನ್ ಇರುವ ಬಗ್ಗೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ತಿಳಿದಿದ್ದು, ಬುಧವಾರ ಮೀರತ್ ಜೈಲಿಗೆ ಪತ್ರ ಬರೆದು ಓರ್ವ ಹ್ಯಾಂಗ್‍ಮ್ಯಾನ್‍ನನ್ನು ತಿಹಾರ್ ಜೈಲಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಲಾಗಿತ್ತು. ಆದರೆ ಯಾರನ್ನು? ಯಾವಾಗ ಗಲ್ಲಿಗೇರಿಸಲಾಗುತ್ತಿದೆ ಎಂಬ ಬಗ್ಗೆ ಪತ್ರದಲ್ಲಿ ತಿಳಿಸಿರಲಿಲ್ಲ. ಅದರ ಬದಲಿಗೆ ಕೆಲವು ಅಪರಾಧಿಗಳಿಗೆ ಗಲ್ಲಿಗೇರಿಸಬೇಕಿದೆ, ಎಲ್ಲಾ ಕಾನೂನು ಪ್ರಕಿಯೆ ಮುಗಿದಿದೆ ಎಂದು ಉಲ್ಲೇಖಿಸಲಾಗಿತ್ತು.

    ಈ ಮನವಿ ಮೇರೆಗೆ ಮೀರತ್ ಜೈಲಿನ ಹ್ಯಾಂಗ್‍ಮ್ಯಾನ್ ಪವನ್ ಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗುತ್ತಿದೆ. ಇವರು ನಿರ್ಭಯ ಪ್ರಕರಣದ ಅಪರಾಧಿಗಳನ್ನು ಸದ್ಯದಲ್ಲೇ ಗಲ್ಲಿಗೇರಿಸಲಿದ್ದಾರೆ.

    ತಿಹಾರ್ ಜೈಲಿನ ಅಧಿಕಾರಿಗಳು ಹ್ಯಾಂಗ್‍ಮ್ಯಾನ್‍ಗಾಗಿ ಹುಡುಕಾಟ ನಡೆದಿಸುತ್ತಿದ್ದ ವೇಳೆ ತಮಿಳುನಾಡಿನ ರಾಮನಾಥಪುರಂನ ಹೆಡ್ ಕಾನ್‍ಸ್ಟೇಬಲ್ ಎಸ್. ಸುಭಾಷ್ ಶ್ರೀನಿವಾಸನ್(42) ಸ್ವಯಂಪ್ರೇರಿತರಾಗಿ ಈ ಕಾರ್ಯವನ್ನು ನಡೆಸಲು ಮುಂದೆ ಬಂದಿದ್ದರು.

    ಈ ಬಗ್ಗೆ ತಿಹಾರ್ ಜೈಲಿಗೆ ಪತ್ರ ಬರೆದಿದ್ದ ಸುಭಾಷ್ ಅವರು, ನೀವು ನನಗೆ ಈ ಕಾರ್ಯ ನಿರ್ವಹಿಸಲು ಯಾವುದೇ ಸಂಬಳವನ್ನು ನೀಡಬೇಡಿ, ನೀವು ನನಗೆ ಈ ಅಪರಾಧಿಗಳನ್ನು ಗಲ್ಲಿಗೇರಿಸಲು ಅವಕಾಶ ಕೊಡಿ ಅಷ್ಟೇ ಸಾಕು ಎಂದು ತಿಳಿಸಿದ್ದರು.

    ಈ ಹಿಂದೆ 2015ರಲ್ಲಿ ಪವನ್ ಕುಮಾರ್ ಅವರು ಭಾರೀ ಸುದ್ದಿಯಾಗಿದ್ದರು. ಗಲ್ಲಿಗೇರಿಸುವ ಕೆಲಸಕ್ಕೆ ಅವರಿಗೆ ಸರಿಯಾಗಿ ಸಂಬಳ ನೀಡುತ್ತಿರಲಿಲ್ಲ. ಹೀಗಾಗಿ ಹಣಕ್ಕಾಗಿ ಅವರು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆದು ಬೇಸತ್ತು ಹೋಗಿದ್ದರು. ತಿಂಗಳ ಸಂಬಳ ಮಾತ್ರವಲ್ಲ ಅಪರಾಧಿಗಳನ್ನು ಗಲ್ಲಿಗೇರಿಸಿದರೆ 3 ಸಾವಿರ ರೂ. ನನಗೆ ನೀಡಬೇಕು. ಆದರೆ ಯಾವ ಹಣವು ನನಗೆ ಸಿಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು.

    ಪವನ್ ಕುಮಾರ್ ಅವರು ಭಾರತದಲ್ಲಿರುವ ಕೆಲವೇ ಕೆಲವು ಅಧಿಕೃತ ನೊಂದಾಯಿತ ವೃತ್ತಿಪರ ಹ್ಯಾಂಗ್‍ಮ್ಯಾನ್‍ಗಳಲ್ಲಿ ಒಬ್ಬರು. ಈ ಹಿಂದೆ ಅವರು ಮೀರತ್ ಜೈಲಿನಲ್ಲಿ ನಿಥಾರಿ ಸಿರಿಯಲ್ ಕಿಲ್ಲರ್ ಸುರೇಂದ್ರ ಕೋಲಿಯನ್ನು ಗಲ್ಲಿಗೇರಿಸಿದ್ದರು.

  • ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ನವದೆಹಲಿ: 2012ರ `ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಆದ್ದರಿಂದ ಶೀಘ್ರದಲ್ಲೇ ದೋಷಿಗಳನ್ನು ಗಲ್ಲಿಗೇರಿಸಲಾಗುವುದು ಎನ್ನಲಾಗಿದೆ.

    ಈ ಸಂಬಂಧ ದೆಹಲಿ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು, ಇದನ್ನು ಗೃಹ ಸಚಿವಾಲಯ ಪರಿಶೀಲಿಸಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ರವಾನಿಸಲಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ರಾಷ್ಟ್ರಪತಿಗಳು ತೆಗೆದುಕೊಳ್ಳಲಿದ್ದಾರೆ. ಆದರೆ ಅವರು ಕೂಡ ದೆಹಲಿ ಸರ್ಕಾರದಂತೆ ಕ್ಷಮಾದಾನ ಅರ್ಜಿ ತಿರಸ್ಕರಿಸುವ ಸಾಧ್ಯತೆ ಹೆಚ್ಚಾಗಿದ್ದು, ಶೀಘ್ರದಲ್ಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 10ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಪೊಲೀಸ್ ಮಗನ ಜೊತೆ ಸಿಆರ್​ಪಿಎಫ್​ ಯೋಧನಿಂದ ಕೃತ್ಯ

    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಖಡಕ್ ಪ್ರಶ್ನೆಗೆ ತಲೆ ತಗ್ಗಿಸಿ ನಿಂತ ಐಸಿಸ್ ರೇಪಿಸ್ಟ್

    ಆದರೆ ಆತನ ಕ್ಷಮದಾನ ಅರ್ಜಿಯನ್ನು ಬುಧವಾರ ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. ಒಂದು ವೇಳೆ ಗೃಹ ಸಚಿವಾಲಯ ದೋಷಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರೆ ನಿರ್ಭಯಾ ಪ್ರಕರಣದ ನಾಲ್ವರು ಅತ್ಯಚಾರಿಗಳನ್ನು ಗಲ್ಲಿಗೇರಿಸುವುದು ಖಚಿತ.

    2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು. ಇದನ್ನೂ ಓದಿ: ಕೊಲೆಗೈದು ಮಹಿಳೆ ಶವದ ಮೇಲೆ ರೇಪ್ – ವಿಡಿಯೋ ಸೆರೆಹಿಡಿದ ವಿಕೃತಕಾಮಿ ಅರೆಸ್ಟ್

    ನಿರ್ಭಯಾ ಪ್ರಕರಣದ ರೀತಿಯೇ ನವೆಂಬರ್ 27ರಂದು ಹೈದರಾಬಾದಿನಲ್ಲಿಯೂ ಪಶುವೈದ್ಯೆಯ ಅತ್ಯಾಚಾರ ಪ್ರಕರಣ ನಡೆದಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಹೆತ್ತವರು ಕೂಡ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿ, ತಮ್ಮ ಮಕ್ಕಳ ದುಷ್ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ಹೈದರಾಬಾದ್ ಅತ್ಯಾಚಾರ, ಕೊಲೆ ಪ್ರಕರಣದ ಬಳಿಕ ದೇಶದಲ್ಲಿ ಪ್ರತಿನಿತ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅಪ್ರಾಪ್ತೆಯರು, ಮಹಿಳೆಯರು ಮಾತ್ರವಲ್ಲದೆ ವೃದ್ಧೆಯರ ಮೇಲೂ ಕಾಮುಕರು ಕ್ರೌರ್ಯ ಮೆರೆದ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ದೇಶದೆಲ್ಲೆಡೆ ಆತ್ಯಾಚಾರಿಗಳನ್ನು ಗಲ್ಲಿಗೇರಿಸಿ ಆಗ ಹೆಣ್ಣನ್ನು ಕಾಮ ದೃಷ್ಠಿಯಿಂದ ನೋಡುವ ದುರುಳರು ಹೆದರುತ್ತಾರೆ ಎಂದು ಜನರು ಆಗ್ರಹಿಸುತ್ತಿದ್ದಾರೆ.

  • ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ

    ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ

    ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕಟಗೊಂಡ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿ ವಜಾಗೊಂಡಿದ್ದು ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿ ಸುಪ್ರೀಂ ಕೋರ್ಟ್ ಇಂದು ಆದೇಶ ಪ್ರಕಟಿಸಿದೆ.

    ಈ ಹಿಂದೆ ನೀಡಿದ ಆದೇಶವನ್ನು ಪುನರ್ ಪರಿಶೀಲನೆ ನಡೆಸುವ ಅಗತ್ಯವೇ ಇಲ್ಲ ಎಂದು ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

    ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದು ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಪರಾಧಿಗಳಾದ ಮುಕೇಶ್(29), ಪವನ್ ಗುಪ್ತಾ(22), ವಿನಯ್ ಶರ್ಮಾ(23) ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್(31) ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿರಲಿಲ್ಲ.

    2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. 2014ರಲ್ಲಿ ದೆಹಲಿ ಹೈಕೋರ್ಟ್ ಕೇಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. 2017ರ ಮೇ 5ರಂದು ಸನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಶೋಕ್ ಭೂಷಣ್ ಹಾಗೂ ಆರ್ ಭಾನುಮತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅಪರಾಧಿಗಳಿಗೆ ಗಲ್ಲು ಕಾಯಂಗೊಳಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು.

    ಮುಂದೇನು?
    ಅಪರಾಧಿಗಳಿಗೆ ಮುಂದೆ ಬದುಕುವ ಎಲ್ಲ ಬಾಗಿಲಿಗಳು ಮುಗಿದಿದ್ದು ಕೊನೆಯದಾಗಿ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಗಲ್ಲು ಶಿಕ್ಷೆಯ ಬದಲಿಗೆ ಜೀವವಾಧಿ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಬಹುದು. ಈ ವೇಳೆ ಅರ್ಜಿಯನ್ನು ಪುರಸ್ಕರಿಸಿ ಕ್ಷಮಾದಾನ ನೀಡಿದರೆ ಅಪರಾಧಿಗಳು ಗಲ್ಲು ಕುಣಿಕೆಯಿಂದ ಪಾರಾಗಬಹುದು.

    ಏನಿದು ಪ್ರಕರಣ?
    2012ರ ಡಿಸೆಂಬರ್ 16ರಂದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಸಿನಿಮಾ ನೋಡಿ ಬರುತ್ತಿದ್ದಾಗ ಡ್ರಾಪ್ ನೆಪದಲ್ಲಿ ಕಾಮುಕರು ಬಸ್ ನಲ್ಲಿ ಹತ್ತಿಸಿದ್ದರು. ಬಳಿಕ ಬಸ್‍ನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ, ಗುಪ್ತಾಂಗಕ್ಕೆ ರಾಡ್‍ನಿಂದ ಚುಚ್ಚಿದ್ದರು. ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಬಸ್‍ನಿಂದ ಕೆಳಗೆ ಎಸೆದಿದ್ದರು. ಆಕೆಯ ಜೊತೆಗಿದ್ದ ಸ್ನೇಹಿತನನ್ನೂ ಬಸ್‍ನಿಂದ ಕೆಳಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ದೆಹಲಿಯ ಆಸ್ಪತ್ರೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆ ನಿರ್ಭಯಾಳನ್ನು ಸಿಂಗಾಪುರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಿಸೆಂಬರ್ 29 ರಂದು ನಿರ್ಭಯಾ ಸಾವನ್ನಪ್ಪಿದ್ದಳು.

    ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿನಯ್ ಶರ್ಮಾ 2016ರ ಆಗಸ್ಟ್ ನಲ್ಲಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಇನ್ನೊಬ್ಬ ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದ.

    ಈ ಪ್ರಕರಣದ ಬಳಿಕ ಕೇಂದ್ರ ಸರ್ಕಾರ ಬಾಲಾಪರಾಧ ಕಾಯ್ದೆಗೆ ತಿದ್ದುಪಡಿ ತಂದಿದ್ದು ಹದಿನಾರರಿಂದ ಹದಿನೆಂಟು ವರ್ಷದ ಮಧ್ಯೆ ಇರುವವರು ಕ್ರೂರ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ ಅವರನ್ನು ವಯಸ್ಕರು ಎಂದೇ ಪರಿಗಣಿಸಲಾಗುತ್ತದೆ.

  • ನಿರ್ಭಯಾ ತಾಯಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಾಂಗ್ಲಿಯಾನ

    ನಿರ್ಭಯಾ ತಾಯಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಾಂಗ್ಲಿಯಾನ

    ಬೆಂಗಳೂರು: ನಿರ್ಭಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವ ಭರದಲ್ಲಿ ತಾಯಿ ದೇಹವನ್ನ ಉದಾಹರಣೆ ನೀಡಿ ನಿವೃತ್ತ ಪೊಲೀಸ್ ಅಧಿಕಾರಿ ಸಾಂಗ್ಲಿಯಾನರ ಹೇಳಿಕೆ ಇದೀಗ ವಿವಾದ ಎಬ್ಬಿಸಿದೆ.

    ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ನಿರ್ಭಯ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಂಗ್ಲಿಯಾನ, ನಿರ್ಭಯಾ ತಾಯಿಯ ಫಿಸಿಕ್ ನೋಡಿದ್ರೇ ನಿರ್ಭಯ ಸೌಂದರ್ಯ ಹೇಗಿರಬಹುದು ಅನ್ನೋದು ನನ್ನ ಕಣ್ಣ ಮುಂದೆ ಬಂತು ಅನ್ನೊ ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ವೇದಿಕೆ ಮೇಲೆ ಈ ಪದ ಬಳಕೆ ಮಾಡಿದಾಗಲೇ ಕಾರ್ಯಕ್ರಮದಲ್ಲಿ ವಿರೋದ ವ್ಯಕ್ತವಾಗಿದೆ. ನಿರ್ಭಯಾ ಪ್ರಶಸ್ತಿ ಸ್ವೀಕರಿಸಲು ಬಂದ ಹಲವು ಮಹಿಳೆಯರು ಪ್ರಶಸ್ತಿಯನ್ನ ಸ್ವೀಕರಿಸದೇ ಹೊರ ನಡೆದಿದ್ರು. ನಿರ್ಭಯಾ ಪ್ರಕರಣ ಇಡೀ ಭಾರತ ಮಾತ್ರವಲ್ಲ ವಿಶ್ವದಲ್ಲೇ ಹೆಣ್ಣಿನ ರಕ್ಷಣೆಯ ಬಗ್ಗೆ ಪ್ರಶ್ನೆ ಎತ್ತಿತ್ತು. ವೇದಿಕೆ ಮೇಲೆ ನಿರ್ಭಯಾ ತಾಯಿ ಇದ್ದಾಗಲೇ ಸಾಂಗ್ಲಿಯಾನ ಈ ರೀತಿ ಮಾತನಾಡಿದ್ದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

    ನಿರ್ಭಯಾ ಪ್ರಕರಣ ನಡೆದು ಹಲವು ವರ್ಷಗಳಾಗಿದ್ರೂ, ಅದೇ ಹೆಸರಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಇಲಾಖೆಯ ಡಿಐಜಿ ರೂಪ ಸೇರಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರು ಸಹ ಭಾಗವಹಿಸಿದ್ರು. ಇತ್ತ ಸಾಂಗ್ಲಿಯಾನಾರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಯುಟಿಸಿ ಮತ್ತು ಇಂಡಿಯನ್ ಎಕನಾಮಿಕ್ ಟ್ರೇಡ್ ಆರ್ಗನೈಸೇಶನ್ ಅನ್ನೊ ಎನ್ ಜಿಒ ಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆದಿತ್ತು.

  • ಬೆಂಗ್ಳೂರಲ್ಲಿ ನಿರ್ಭಯಾ ಕೇಸ್‍ಗಿಂತ ಭೀಕರ ಪ್ರಕರಣ ಬೆಳಕಿಗೆ- 5 ವರ್ಷದ ಮಗುವಿನ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ, ಮಗು ಸಾವು

    ಬೆಂಗ್ಳೂರಲ್ಲಿ ನಿರ್ಭಯಾ ಕೇಸ್‍ಗಿಂತ ಭೀಕರ ಪ್ರಕರಣ ಬೆಳಕಿಗೆ- 5 ವರ್ಷದ ಮಗುವಿನ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ, ಮಗು ಸಾವು

    ಬೆಂಗಳೂರು: ನಗರದಲ್ಲಿ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಹ ಪೈಶಾಚಿಕ ಕೃತ್ಯವೊಂದು ನಡೆದಿದೆ. ದೆಹಲಿ ನಿರ್ಭಯಾ ಕೇಸ್ ಗಿಂತ ಭೀಕರ ಪ್ರಕರಣ ಬಯಲಾಗಿದೆ. ಐದು ವರ್ಷದ ಮಗುವಿನ ಮೇಲೆ ಕಾಮುಕ ಮನೆ ಮಾಲಿಕ ಅತ್ಯಾಚಾರವೆಸಗಿದ್ದು, ಮಗು ಈಗ ಸಾವನ್ನಪ್ಪಿದೆ.

    ಆಗಸ್ಟ್ 17 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆ ಮಾಲೀಕ ಮಲ್ಲಿಕಾರ್ಜುನ ಈ ನೀಚ ಕೃತ್ಯವೆಸಗಿದ ಆರೋಪಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ತಿಂಡಿ ಕೊಡಿಸುವ ನೆಪದಲ್ಲಿ ಮಗುವನ್ನ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಘಟನೆಯಿಂದ ಶಾಕ್‍ಗೆ ಒಳಗಾಗಿದ್ದ ಮಗುವನ್ನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

    ಮೃತ ಮಗುವಿನ ತಾಯಿ ಭಾಗಮ್ಯ ಆರೋಪಿ ಮಲ್ಲಿಕಾರ್ಜುನ ಹಾಗೂ ಚಂದನ ಎಂಬವರ ಬಳಿ ಮಗುವನ್ನು ಬಿಟ್ಟಿದ್ದರು. ಚಂದನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪಿ ಮಲ್ಲಿಕಾರ್ಜುನ ನಿತ್ಯ ಮಗುವಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಚಂದನ ವೃತ್ತಿಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದು, ಈಕೆಯ ಜೊತೆಗಿದ್ದ ಮಲ್ಲಿಕಾರ್ಜುನ್ ಪಿಂಪ್ ಕೆಲಸ ಮಾಡ್ತಿದ್ದ. ಮಗು ಬೇಡವಾಗಿದ್ದ ಹಿನ್ನೆಲೆ ಯಾರಾದ್ರೂ ಸಾಕಿಕೊಳ್ಳಲಿ ಅಂತಾ ಭಾಗ್ಯಮ್ಮ ಮಗುವನ್ನ ಮಲ್ಲಿಕಾರ್ಜುನ್‍ಗೆ ನೀಡಿದ್ದರು. ಆದ್ರೆ ಮಲ್ಲಿಕಾರ್ಜುನ್ ಮಗುವಿಗೆ ಕಳೆದ ಎರಡು ತಿಂಗಳಿಂದ ಸರಿಯಾಗಿ ಊಟ ನೀಡ್ತಿರಲಿಲ್ಲ. ಹೀಗಾಗಿ ಮಗು ಅಲ್ಸರ್‍ನಿಂದ ಸಹ ಬಳಲುತ್ತಿತ್ತು. ಮೊದಲೇ ಅಲ್ಸರ್‍ನಿಂದ ಬಳುತ್ತಿದ್ದ ಮಗು ಮೇಲೆ ಅತ್ಯಾಚಾರ ನಡೆದು ಆಕೆಯ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.

    ಗುಪ್ತಾಂಗಕ್ಕೆ ರಾಡ್ ಹಾಕಿದ್ದ ಪಾಪಿ: ಮಲ್ಲಿಕಾರ್ಜುನ ಮಗುವಿನ ಮೇಲೆ ಮೃಗದಂತೆ ವರ್ತಿಸಿದ್ದಾನೆ. ಮಗುವಿನ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ಹಾಕಿದ್ದಾನೆ. ಮಗುವಿನ ದೇಹವನ್ನು ಸಿಗರೇಟ್ ನಿಂದ ಸುಟ್ಟಿದ್ದಾನೆ. ಮಗು ದಿನಾ ಅಳುತ್ತಿದ್ರಿಂದ ಮಗುವಿನ ತಾಯಿ ಹತ್ತಿರದ ಮೂರ್ನಾಲ್ಕು ಖಾಸಗಿ ಆಸ್ಪತ್ರೆಗೆ ತೋರಿಸಿದ್ದರು. ಗುಪ್ತಾಂಗಕ್ಕೆ ರಾಡ್ ಹಾಕಿದ್ರಿಂದ ಮಗು ತೀವ್ರ ನೋವು ಅನುಭವಿಸಿತ್ತು. ತಲಘಟ್ಟಪುರ ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಮಗುವಿನ ಮೇಲೆ ರೇಪ್ ಆಗಿರೋದನ್ನ ಕನ್ಫರ್ಮ್ ಮಾಡಿದ್ದಾರೆ.

    ಘಟನೆ ಬಳಿಕ ಮಗುವನ್ನ ಮೊದಲು ಆರ್‍ಆರ್ ನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ತಾಯಿ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರರಕ್ತ ಸ್ರಾವ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿ ಮಗುವನ್ನ ಹುಳಿ ಮಾವು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಮುಗ್ಧ ಕಂದಮ್ಮ ಈಗ ಸಾವನ್ನಪ್ಪಿದೆ.

    ಈ ಬಗ್ಗೆ ಮಾತನಾಡಿದ ಡಿಸಿಪಿ ಶರಣಪ್ಪ, ಆಗಸ್ಟ್ 17ರಂದು ಭಾಗ್ಯಮ್ಮ ದೂರು ನೀಡಿದ್ದರು. ಪರಿಚಯಸ್ಥ ಮಲ್ಲಿಕಾರ್ಜುನ್‍ಗೆ ಮಗುವನ್ನ ನೀಡಿದ್ದರು. ಚಂದನ ಜೊತೆ ಸೇರಿಕೊಂಡು ಮಲ್ಲಿಕಾರ್ಜುನ ಮಗುವಿನ ಮೇಲೆ ಹಲ್ಲೆ ಮಾಡುತ್ತಿದ್ದ. ಅಲ್ಲದೇ ಮಲ್ಲಿಕಾರ್ಜುನ ಮಗುವನ್ನು ಅಸಭ್ಯವಾಗಿ ಮುಟ್ಟುತ್ತಿದ್ದ ಅಂತ ದೂರು ನೀಡಿದ್ದರು. ಈಗಾಗಲೇ ಇಬ್ಬರು ಆರೋಪಿಗಳನ್ನ ಬಂಧಿಸಿದ್ದೇವೆ. ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ರಾತ್ರಿ ಮೃತಪಟ್ಟಿದೆ ಅಂತ ಹೇಳಿದ್ರು

    ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಚಂದನ ಮತ್ತು ಮಲ್ಲಿಕಾರ್ಜುನ್‍ನನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಮಗು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.