Tag: nirmala seetharaman

  • ಸರ್ಕಾರ ಮಾಡಲಾಗದ ಯೋಜನೆಗಳನ್ನು ವೀರೇಂದ್ರ ಹೆಗ್ಗಡೆಯವರು ಜಾರಿಗೆ ತಂದಿದ್ದಾರೆ: ನಿರ್ಮಲಾ ಸೀತಾರಾಮನ್

    ಸರ್ಕಾರ ಮಾಡಲಾಗದ ಯೋಜನೆಗಳನ್ನು ವೀರೇಂದ್ರ ಹೆಗ್ಗಡೆಯವರು ಜಾರಿಗೆ ತಂದಿದ್ದಾರೆ: ನಿರ್ಮಲಾ ಸೀತಾರಾಮನ್

    ಮಂಗಳೂರು: ಸರ್ಕಾರಗಳು ಮಾಡಲಾಗದ ಯೋಜನೆಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗೆಡೆಯವರು ಜಾರಿಗೆ ತಂದಿದ್ದಾರೆಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರಂಭಿಸಲಾಗಿರುವ ಆರೋಗ್ಯ ವಿಮೆ ಪ್ರಗತಿ ರಕ್ಷಾ ಕವಚ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಚಿಕ್ಕವಳಿದ್ದಾಗ ಧರ್ಮಸ್ಥಳಕ್ಕೆ ಹೆತ್ತವರ ಜೊತೆ ಬಂದಿದ್ದೆ. ಆದರೆ ಇಂದು ರಕ್ಷಣಾ ಸಚಿವೆಯಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ನನ್ನ ಸೌಭಾಗ್ಯ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯದಿಂದ ಕೂಡಿದೆ ಎಂದು ಹೇಳಿದರು.

    ಸಾಲವನ್ನು ತೀರಿಸಲಾಗದೇ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆಯು ಜನರ ಸಾಲದ ಭಯವನ್ನು ಹೋಗಲಾಡಿಸಿದೆ. ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ಸರ್ಕಾರ ಮಾಡಲಾಗದ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೂ ಮುನ್ನ ಸಚಿವೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಮತ್ತು ಭಾರತೀಯ ಜೀವ ವಿಮಾ ನಿಗಮಗಳು ಜಂಟಿಯಾಗಿ ಎಸ್‌ಕೆಡಿಆರ್‌ಡಿಪಿ ಸದಸ್ಯರಿಗಾಗಿ ರೂಪಿಸಿರುವ `ಪ್ರಗತಿ ರಕ್ಷಾ ಕವಚ್’ ವಿಮಾ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.

    ಏನಿದು ಪ್ರಗತಿ ರಕ್ಷಾ ಕವಚ್ ಯೋಜನೆ?
    ಎಸ್‌ಕೆಡಿಆರ್‌ಡಿಪಿ ಸದಸ್ಯರು ಅಕಾಲಿಕವಾಗಿ ಮೃತಪಟ್ಟ ಸಂದರ್ಭಗಳಲ್ಲಿ ಅವರು ಪಡೆದ ಸಾಲದ ಬಾಕಿಯನ್ನು ತಪ್ಪಿಸಲು ಹಾಗೂ ಮೃತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಈ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆಯವರು ವಹಿಸಿಕೊಂಡಿದ್ದರು. ಸಮಾರಂಭಕ್ಕೆ ಹೇಮಾವತಿ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್.ಅಂಗಾರ, ಸಂಜೀವ ಮಠಂದೂರು, ಭಾರತೀಯ ಜೀವ ವಿಮಾ ನಿಗಮದ ಅಧ್ಯಕ್ಷ ವಿ.ಕೆ.ಶರ್ಮ, ನಿರ್ದೇಶಕ ಕದಿರೇಶನ್, ಸುಶೀಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾ.ರಾ.ಮಹೇಶ್ ಮೊದ್ಲು ಕೇಂದ್ರ ಸಚಿವರ ಕ್ಷಮೆ ಕೇಳಬೇಕು: ಬಿಎಸ್‍ವೈ

    ಸಾ.ರಾ.ಮಹೇಶ್ ಮೊದ್ಲು ಕೇಂದ್ರ ಸಚಿವರ ಕ್ಷಮೆ ಕೇಳಬೇಕು: ಬಿಎಸ್‍ವೈ

    ಬೆಂಗಳೂರು: ಕೊಡಗು ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕೂಡಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ರವರ ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

    ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ರವರು ಕೊಡಗು ಜಿಲ್ಲೆಗೆ ಬಂದು ಪೂರ್ವ ನಿಗದಿ ಸಭೆಯಲ್ಲಿ ಭಾಗವಹಿಸಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿಯೂ ತಿಳಿಸಿದ್ದಾರೆ. ಇಷ್ಟಾದರೂ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಕೇಂದ್ರ ಸಚಿವರ ವಿರುದ್ಧ ಮಾತನಾಡಿರುವುದು ಸರಿಯಲ್ಲವೆಂದು  ಕಿಡಿಕಾರಿದರು. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ವಿರುದ್ಧ ಸಾರಾ ಮಹೇಶ್ ಗರಂ

    ಸಚಿವರು ಈ ಮೂಲಕ ದೇಶದ ಎಲ್ಲಾ ರಾಜ್ಯಸಭಾ ಸದಸ್ಯರಿಗೆ ಅವಮಾನ ಮಾಡಿದ್ದಾರೆ. ಮೊದಲು ಅವರು ಹೇಗೆ ಸಚಿವರಾಗಿದ್ದರೆ ಅನ್ನೋದನ್ನು ಮನವರಿಕೆ ಮಾಡಿಕೊಳ್ಳಬೇಕು. ಅಲ್ಲದೇ ಸಚಿವನಾಗಿದ್ದೇನೆ ಅನ್ನುವ ಹುಮ್ಮಸ್ಸಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದೇವೆ ಎಂಬುದನ್ನು ಮೊದಲು ತಿಳಿದುಕೊಂಡು, ಕೂಡಲೇ ಕೇಂದ್ರ ಸಚಿವರಿಗೆ ಕ್ಷಮಾಪಣೆ ಕೋರುವಂತೆ ಸಾ.ರಾ.ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾ ವಿಚಾರ ಮಾತನಾಡಿದ ಅವರು, ಋಣಮುಕ್ತ ಪ್ರಮಾಣ ಪತ್ರಗಳನ್ನು ಸರ್ಕಾರ ಕೊಡುವುದಿಲ್ಲ. ಅವುಗಳನ್ನು ಬ್ಯಾಂಕುಗಳೇ ನೀಡಬೇಕು. ನನ್ನ ಅನುಭವದಲ್ಲಿ ಸರ್ಕಾರ ಋಣಮುಕ್ತ ಪತ್ರ ನೀಡಿದ ಮಾಹಿತಿ ಇಲ್ಲ. ಸಾಲಮನ್ನಾ ಹೇಗೆ ಕಾರ್ಯರೂಪಕ್ಕೆ ಬರುತ್ತದೆ ಎನ್ನುವುದನ್ನು ನೋಡುತ್ತಿದ್ದೇನೆ. ರೈತರ ಸಾಲಮನ್ನಾ ಹೇಗೆ ರೈತರಿಗೆ ತಲುಪುತ್ತಿದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ತಿಳಿಸಿದರು.

    ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವನ್ನು ಈವರೆಗೂ ಯಾವುದೇ ಬ್ಯಾಂಕುಗಳು ಸ್ಪಷ್ಟಪಡಿಸಿಲ್ಲ. ಸರ್ಕಾರ ಹೇಳಿರುವ ಹಾಗೆ ತಾನು ನಾಲ್ಕು ಕಂತುಗಳಲ್ಲಿ ಹಣ ಜಮಾ ಮಾಡುವ ಬಗ್ಗೆಯೂ ಸರಿಯಾದ ಮಾಹಿತಿ ಇಲ್ಲ. ರಾಷ್ಟ್ರೀಯ ಬ್ಯಾಂಕುಗಳ ಸಾಲಮನ್ನಾ ಸ್ವಾಗತ ಮಾಡುತ್ತೇನೆ. ಆದರೆ ಸರ್ಕಾರ ಇದನ್ನು ಯಾವ ರೀತಿ ಕಾರ್ಯರೂಪಕ್ಕೆ ತರುತ್ತದೆ ಎಂಬುದನ್ನು ಗಮನಿಸುತ್ತೇನೆಂದು ಹೇಳಿದ್ರು.

    ಇದೇ ವೇಳೆ ಸುದ್ದಿಗಾರರು ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಪ್ರಸ್ತಾಪಿಸಿದಾಗ, ಸಿದ್ದರಾಮಯ್ಯನವರ ಯಾವುದೇ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲವೆಂದು ನಿರಾಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳೆಯರು, ಮಕ್ಕಳು ಧರಿಸುವ ಬಟ್ಟೆಗಳು ಅತ್ಯಾಚಾರಕ್ಕೆ ಕಾರಣವಲ್ಲ- ನಿರ್ಮಲಾ ಸೀತಾರಾಮನ್

    ಮಹಿಳೆಯರು, ಮಕ್ಕಳು ಧರಿಸುವ ಬಟ್ಟೆಗಳು ಅತ್ಯಾಚಾರಕ್ಕೆ ಕಾರಣವಲ್ಲ- ನಿರ್ಮಲಾ ಸೀತಾರಾಮನ್

    ನವದೆಹಲಿ: ಮಹಿಳೆಯರು ಮತ್ತು ಮಕ್ಕಳು ಧರಿಸುವ ಬಟ್ಟೆಗಳೇ ಅತ್ಯಾಚಾರಕ್ಕೆ ಕಾರಣವಲ್ಲ ಎಂಬುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಸೋಮವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಸಚಿವೆ, ಇತ್ತೀಚೆಗೆ ಧರಿಸುವ ಬಟ್ಟೆಗಳಿಂದ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿವೆ ವಾದವನ್ನು ಖಂಡಿಸಿದ್ದಾರೆ. ಹೆಚ್ಚಿನ ಎಲ್ಲಾ ಪ್ರಕರಣಗಳು ಮನೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾತ್ರ ನಡೆಯುತ್ತವೆ. ಅಲ್ಲದೇ ಬಂಧುಗಳು, ಸ್ನೇಹಿತರು ಹಾಗೂ ನೆರೆಮನೆಯವರೇ ಆರೋಪಿಗಳಾಗುತ್ತಾರೆ ಅಂತ ಹೇಳಿದ್ರು.

    ಒಂದು ವೇಳೆ ಧರಿಸುವ ಬಟ್ಟೆಗಳಿಂದಲೇ ಪ್ರೇರೇಪಿತರಾಗಿ ಅತ್ಯಾಚಾರ ಪ್ರಕರಣಗಳು ನಡೆಯುವುದು ಎಂದಾದರೆ, ವೃದ್ಧೆಯರು ಮತ್ತು ಸಣ್ಣ-ಪುಟ್ಟ ಮಕ್ಕಳ ಮೇಲೆ ಯಾಕೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತವೆ ಎಂಬುದಾಗಿ ಪ್ರಶ್ನಿಸಿದ್ದಾರೆ.

    ಅಪ್ತಾಪ್ತರ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಕಾನೂನು ಮತ್ತು ಇಲಾಖೆಗಳು ಎಚ್ಚೆತ್ತುಕೊಳ್ಳಬೇಕು. ಅಲ್ಲದೇ ಈ ಮಧ್ಯೆ ಹೆತ್ತವರು ಕೂಡ ತಮ್ಮ ಮಕ್ಕಳ ಮೇಲೆ ಗಮನವಿಟ್ಟಿರಬೇಕು. ಒಟ್ಟಿನಲ್ಲಿ ಹೆಣ್ಣು ಮಕ್ಕಳನ್ನು ಗಂಡು ಮಕ್ಕಳು ನೋಡುವ ದೃಷ್ಟಿಕೋನ ಬದಲಾಗಬೇಕಾಗಿದೆ ಅಂತ ಅವರು ಅಭಿಪ್ರಾಯಿಸಿದ್ದಾರೆ.

    ಜಮ್ಮು ಕಾಶ್ಮೀರದ ಕಟುವಾದಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಈ ಘಟನೆಯ ಬಳಿಕ ಕೇಂದ್ರ ಸರ್ಕಾರ ಅಪ್ರಾಪ್ತರ ಮೇಲೆ ಅತ್ಯಾಚಾರ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯನ್ನು ಜಾರಿಗೆ ತಂದಿದೆ. ಈ ಸಂಬಂಧ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆ ಹೊರಡಿಸಿ ತಿದ್ದುಪಡಿ ಮಾಡಲಾಗಿದೆ.